Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವಿಜಯಪುರ ನಗರ ಯುವ ಮೋರ್ಚಾ ಆಯೋಜಿಸಿದ ಸಸಿ ನೆಡುವ ಕಾರ್ಯಕ್ರಮ ವಿಜಯಪುರ ನಗರ ಕರಾಡದೊಡ್ಡಿ ಹತ್ತಿರ ಇರುವ ಹನುಮಗಿರಿ ದೇವಸ್ಥಾನದಲ್ಲಿ ನಡೆಯಿತು.ಈ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿದ ಮಾಜಿ ಕೇಂದ್ರ ಸಚಿವ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರಾದ ರಾಜು ಮಗೀಮಠ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಜಿಲ್ಲೆಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಾ ಗುನ್ನಾಳಕರ, ಜಿಲ್ಲೆಯ ಕಾರ್ಯದರ್ಶಿಗಳಾದ ರಮೇಶ ಬಿದನೂರ, ಚಿನ್ನು ಚಿನಗುಂಡಿ, ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಮಂಜುನಾಥ ಮೀಸಿ, ವಿಜಯ ಜೋಶಿ, ರಾಮಚಂದ್ರ ಚೌಹಾಣ, ಯುವ ಮೋರ್ಚಾ ಅಧ್ಯಕ್ಷರಾದ ಆನಂದ ಮುಚ್ಚಂಡಿ, ವಿವೇಕ ತಾವರಗೇರಿ, ಮಂಥನ ಗಾಯಕವಾಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಭಾರತಿ ಭೂಯಾರ, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಶ್ರೀ ಅಫಜಲ್ಲಪೂರ ಹಾಗೂ ಕಾರ್ಯಕಾರಿಣಿ ಕಲ್ಪನಾ ಶಾಬಾದಿ, ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಅಥಣಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶುಕ್ರವಾರ 100 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಮಕ್ಕಳು ತಾವು ಶಿಕ್ಷಣದಲ್ಲಿ ಬೆಳೆಯುವಂತೆ ತಾವು ನೆಟ್ಟ ಸಸಿಗಳನ್ನೂ ಪೋಷಿಸಿ ದೊಡ್ಡ ಮರಗಳನ್ನಾಗಿ ಬೆಳೆಸಬೇಕು. ಒಂದು ಮರ ನೂರು ಜೀವಗಳಿಗೆ ಆಸರೆಯಾಗುತ್ತದೆ ಎಂದು ಕಿವಿಮಾತು ಹೇಳಿದರು.ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ನಾವು ಇಂದು ಕೇವಲ ಗಿಡಗಳನ್ನು ನೆಡುತ್ತಿಲ್ಲ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಬೀಜ ಬಿತ್ತುತ್ತಿದ್ದೇವೆ ಎಂದರು.ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ ಮೈಗೂರ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯನ್ನು ಕೇವಲ ಜೂನ್ 5ರ ಒಂದು ದಿನದ ಆಚರಣೆಗೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು ಒಂದೊಂದು ಗಿಡ ನೆಡುವ ಸಂಕಲ್ಪ ಮಾಡಬೇಕೆಂದರು.ಶಾಲೆಯ ಮುಖ್ಯಸ್ಥ ಸಂತೋಷ…
ಚಡಚಣದ ನಿಶಾಂತ ಭಾರತ್ ಗ್ಯಾಸ್ ವಿತರಕರ ವಿರುದ್ಧ ಗ್ರಾಹಕರಿಂದ ದೂರು | ಸ್ಪಂದಿಸಿದ ಆಹಾರ ಇಲಾಖೆ ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ನಿಶಾಂತ್ ಭಾರತ್ ಗ್ಯಾಸ್ ವಿತರಕರ ವಿರುದ್ಧ ಗ್ರಾಹಕರಿಂದ ಪ್ರತಿ ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗೆ ₹29.50 ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಈ ಬಗ್ಗೆ ಉಪ ನಿರ್ದೇಶಕರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವಿಜಯಪುರ ವಿನಯಕುಮಾರ ಪಾಟೀಲ ಅವರಿಗೆ ಅಕ್ರಮ ನಡೆದಿದೆ ಮತ್ತು ನಡೆಯುತ್ತಿದೆ ಅನ್ನುವದಕ್ಕೆ ನೀಡಿರುವ ಫೋಟೊ ಹಾಗೂ ದಾಖಲಾತಿಗಳು ಮತ್ತು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಮೊತ್ತವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ನಿರಂತರವಾಗಿ ಬರುತ್ತಿರುವದರಿಂದ ತಕ್ಷಣವೆ ಕ್ರಮ ಕೈಗೊಂಡ ವಿನಯಕುಮಾರ ಪಾಟೀಲ.ಉಪ ನಿರ್ದೇಶಕರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವಿಜಯಪುರ ವಿನಯಕುಮಾರ ಪಾಟೀಲ ಅವರು ಚಡಚಣ ತಾಲೂಕಿನ ಆಹಾರ ನಿರೀಕ್ಷಕರಾದ ಶಿವಾನಂದ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಇಂಗಾಲದ ಹೆಜ್ಜೆ ಗುರುತು ಕಡಿಮೆ ಮಾಡಿ, ಪ್ರಕೃತಿ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವುದು ನಮ್ಮ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಅಗತ್ಯ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಕೃತಿ ನಮ್ಮೆಲ್ಲರ ಉಸಿರು ಎನ್ನುವಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಏಕ್ ಪೆಡ್ ಮಾಁ ಕೆ ನಾಮ್” ಅಭಿಯಾನದಂತೆ ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಸಸಿಯನ್ನು ನೆಟ್ಟು, ಅದನ್ನು ಮಕ್ಕಳಂತೆ ಸಾಕಿ ಬೆಳೆಸಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಹಾಗೂ ಅಭಿಮಾನಿ ಬಳಗದ ವತಿಯಿಂದ ಎಸ್.ಕೆ. ಬೆಳ್ಳುಬ್ಬಿ ಅವರ 72ನೇ ಜನ್ಮದಿನವನ್ನು ಯಾವುದೇ ಆಡಂಬರವಿಲ್ಲದೆ ಶಾಲಾ ಮಕ್ಕಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಸಾನ್ನಿಧ್ಯವಹಿಸಿದ್ದರು. ಅತಿಥಿಗಳಾಗಿ ಚಿನ್ನಪ್ಪ ಗಿಡ್ಡಪ್ಪಗೋಳ, ಬಸವರಾಜ ಹಂಗರಗಿ, ಸಿದ್ರಾಮಪ್ಪ ಕಾಖಂಡಕಿ, ಮಲ್ಲಿಕಾರ್ಜುನ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು, ಸಸಿಗಳನ್ನು ನೆಟ್ಟು ಪೊಷಿಸಬೇಕು ಎಂದು ಹುಲ್ಯಾಳ ಗುರುದೇವಾಶ್ರಮದ ಹರ್ಷಾನಂದ ಶ್ರೀಗಳು ಹೇಳಿದರು.ತಾಲೂಕಿನ ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ತಾಲುಕು ಛಾಯಾ ಚಿತ್ರಗ್ರಾಹಕರ ಸಂಘ, ಕೊಣ್ಣೂರು ವಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.ಪರಿಸರಕ್ಕೆ ಹಾನಿ ಮಾಡದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಎಂದು ತಿಳಿಸಿದರು. ಛಾಯಾಚಿತ್ರಕಾರರ ಕಷ್ಟಕ್ಕೆ ಸಮಾಜ ಸಹಕಾರಿಯಾಗಿ ನಿಲ್ಲಬೇಕು ಎಂದು ತಿಳಿಸಿದರು.ನಿವೃತ್ತ ತಹಸೀಲ್ದಾರ ಬಿ.ಎಸ್. ಗೋಠೆ, ನಿವೃತ್ತ ಶಿಕ್ಷಕ ಗುರುನಾಥ ಸುತಾರ, ನಿವೃತ್ತ ಶಿಕ್ಷಕ ವೈ.ಎಚ್.ಕಳ್ಳಿಮನಿ, ನ್ಯಾಯವಾದಿ ಶ್ರೀಮಂತಪ್ಪ ಝುಲಪಿ, ಪಿಡಿಓ ಸುರೇಶ ಕಡಪಟ್ಟಿ ಮಾತನಾಡಿದರು.ಸಂಘದ ಅಧ್ಯಕ್ಷ ಹಾಸೀಮ ಜಮಖಂಡಿ ಸ್ವಾಗತಿಸಿ ಮಾತನಾಡಿದರು.ಅಶೋಕ ಜೋಷಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲೆಯ ಮುಖ್ಯೋಪಾಧ್ಯಾಯೆ ಎಸ್.ಎಂ. ಆನಿ, ರೈತಸಂಘದ ಅಧ್ಯಕ್ಷ ಶ್ರೀಶೈಲ ಭೂಮಾರ, ಅರಣ್ಯ ಅಧಿಕಾರಿ ಎ.ಐ,ಕುಂಬಾರ, ತೊದಬಲಬಾಗಿ ಗ್ರಾಮದ ಪರಿಸರ ಪ್ರೇಮಿ ಶ್ರೀಕಾಂತ ಬಡಿಗೇರ, ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.ಶಿಕ್ಷಕ ಪ್ರಕಾಶ ನಂದೆಪ್ಪನವರ ಕಾರ್ಯಕ್ರಮ ನಿರೂಪಿಸಿದರು. ಎಸ್ಎಸ್ಎಲ್ಸಿ ಪರಿಕ್ಷೆಗಳಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ಎಂದು ಪತ್ರಕರ್ತ ಫಿರೋಜ್ ರೋಜಿಂದಾರ್ ಅವರು ಹೇಳಿದರು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ, ಮುಂದಿನ ಭವಿಷ್ಯದ ಪೀಳಿಗೆಗೆ ಸ್ವಚ್ಛ ಹಾಗೂ ಸುಂದರವಾದ ಪರಿಸರವನ್ನು ಕೊಡುಗೆಯಾಗಿ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯೂಬ್ ದ್ರಾಕ್ಷಿ, ಪ್ರಮುಖರಾದ ರಾಕೇಶ, ಕಿರಣ್ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ಮಿಥುನ್ ಬನಸೋಡೆ, ವೈಷ್ಣವಿ ಭಗವತಿ, ರತ್ನಾಂಜಲಿ ವಾಲಿಕಾರ, ಲಕ್ಷ್ಮಣ ಘಟಕಾಂಬಳೆ ಮತ್ತು ನಾಗರಾಜ್ ಉಪಸ್ಥಿತರಿದ್ದರು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯೊದಿಗೆ ಶುಕ್ರವಾರ ಬೆಳಿಗ್ಗೆ ಆವರಣ ಸ್ವಚ್ಛತಾ ಹಾಗೂ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಸಿ ನೆಟ್ಟು, ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಪಾದಿಸಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಹಸಿರು ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಹಸಿರೇ ಉಸಿರಾಗಿದೆ. ಹಸಿರನ್ನು ಉಳಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆ ನೀಡೋಣ. ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯವೂ ನಡೆಸಲಾಯಿತು. ಪರಿಸರ ಸ್ವಚ್ಛತೆ ಮತ್ತು ಹಸಿರು ವಾತಾವರಣ ನಿರ್ಮಾಣ ಎರಡೂ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಪಂಚಾಯಿತಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ನೀರುಣಿಸಿ ಮಾತನಾಡಿದರು.ಪರಿಸರ ದಿನಾಚರಣೆ ಕೇವಲ ಇಂದಿನ ದಿನ ನೆಪ ಮಾತ್ರಕ್ಕೆ ಆಚರಿಸದೇ ನಮ್ಮ ಉಳಿವಿಗಾಗಿ ಅಳವಡಿಸಿಕೊಳ್ಳಬೇಕಾಗಿದೆ. ಆದ್ದರಿಂದ ಗಿಡ ಮರಗಳ ಬೆಳೆಸುವುದರ ಮೂಲಕ ಸ್ವಚ್ಛ, ಸುಂದರ ಪರಿಸರ ನಿರ್ಮಾಣಕ್ಕೆ ಬದ್ಧರಾಗೋಣ ಎಂದರು.ಮುಖ್ಯಾಧಿಕಾರಿ ಅಫ್ರೋಜ್ ಅಹ್ಮದ್ ಪಟೇಲ ಮಾತನಾಡಿ, ಹಸಿರೇ ಉಸಿರು. ನಮ್ಮ ಭವಿಷ್ಯ ಹಾಗೂ ಮುಂದಿನ ಪೀಳಿಗೆಗಾಗಿ ನಾವೆಲ್ಲ ಸಸಿಗಳನ್ನು ನೆಟ್ಟು, ನಾಡನ್ನು ಹಸಿರಾಗಿಸೋಣ ಎಂದರು.ಪಟ್ಟಣದ ಪಂಚಾಯಿತಿ ಸಿಬ್ಬಂದಿ ಆವರಣದಲ್ಲಿ ೧೦ಕ್ಕೂ ಹೆಚ್ಚು ಸÀಸಿ ನೆಟ್ಟು ನೀರುಣಿಸಿದರು. ನಂತರ ಪಟ್ಟಣದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಸಸಿ ನೆಟ್ಟು ಪೋಷಿಸಿ ಬೆಳೆಸುವ ನಿರ್ಧಾರ ಕೈಗೊಳ್ಳಲಾಯಿತು.ಸೋಮು ದೇವೂರ, ವಿನೋದ ಚವ್ಹಾಣ, ಮಕಬೂಲ್ ಬಾಗವಾನ, ಶಂಕರಗೌಡ ಪಾಟೀಲ,…
ಪರಿಸರ ದಿನಾಚರಣೆ | ಆಲಮಟ್ಟಿಯಲ್ಲಿ ಮ್ಯಾರಥಾನ್ಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಹಾಗೂ ಸುತ್ತಮುತ್ತಲಿನ ಇಡೀ ಪ್ರದೇಶ ಕೆಬಿಜೆಎನ್ಎಲ್ನ ಅರಣ್ಯ ವಿಭಾಗದ ಕಾರ್ಯಚಟುವಟಿಕೆಯಿಂದ ಹಸಿರೀಕರಣಗೊಂಡಿದೆ ಎಂದು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಡಿ. ಬಸವರಾಜ ಹೇಳಿದರು.ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಸಂಜೆ ಆಲಮಟ್ಟಿಯ ಅಣೆಕಟ್ಟು ವೃತ್ತದ ಬಳಿ ಕೃಷ್ಣಾ ಭಾಗ್ಯ ಜಲ ನಿಗಮ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಮ್ಯಾರಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.ಆಲಮಟ್ಟಿ ಅಣೆಕಟ್ಟು ವೃತ್ತದಿಂದ ರಾಮಲಿಂಗೇಶ್ವರ ದೇವಸ್ಥಾನದವರೆಗೆ ಮ್ಯಾರಥಾನ್ ನಡೆಯಿತು. ಕೆಬಿಜೆಎನ್ಎಲ್ ನೌಕರರು, ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ದಳವಾಯಿ, ಡಿಎಫ್ಓ ಎನ್.ಕೆ. ಬಾಗಾಯತ್, ಐ.ಎಲ್. ಕಳಸಾ, ಅಸಿಸ್ಟೆಂಟ್ ಕಮಾಂಡೆಂಟ್ ಈರಪ್ಪ ವಾಲಿ, ಮಹೇಶ ಪಾಟೀಲ, ರವಿ ಚಂದ್ರಗಿರಿಯವರ, ಕೆ.ಜಯಣ್ಣ, ವೈ.ಎಂ. ಪಾತ್ರೋಟ, ಬಿ.ಜಿ. ಬನ್ನೂರ, ಮಹೇಶ ಗಾಳಪ್ಪಗೋಳ, ಪಿ.ಎ. ಹೇಮಗಿರಿಮಠ, ಜಿ.ಎಂ.…
ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಯಾದಾಗ ಮಾತ್ರ ಜೀವ ಸಂಕುಲದ ರಕ್ಷಣೆಯಾಗುತ್ತದೆ ಎಂಬುದನ್ನು ನಾವು ಅರಿತು ನಡೆಯಬೇಕು. ಅಂದಾಗ ಮಾತ್ರ ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಬಿಟ್ಟು ಹೋಗಲು ಸಾಧ್ಯ ಎಂದು ಆದರ್ಶ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಸಜ್ಜನ ಅವರು ಹೇಳಿದರು.ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಪದವಿ, ಪಿಯುಸಿ ಮತ್ತು ವಿವಿಧ ವಿಭಾಗಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆದರ್ಶ ಪದವಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿದ ನಂತರ ವಿಶ್ವ ಪರಿಸರ ದಿನಾಚರಣೆ ಕುರಿತು ಅವರು ಮಾತನಾಡಿದರು.ಆಡಳಿತಾಧಿಕಾರಿಗಳಾದ ಅಬ್ದುಲ್ಸತ್ತಾರ ಸಿರಸಗಿ ಅವರು ಮಾತನಾಡಿ, ನಾವು ಅಭಿವೃದ್ಧಿಯ ನೆಪದಲ್ಲಿ ಗಿಡಮರಗಳನ್ನು ಕಡಿದು ಕಾಂಕ್ರೀಟ್ ಪರಿಸರವನ್ನು ನಿರ್ಮಾಣ ಮಾಡುತ್ತಿದ್ದು, ಇದರಿಂದ ಕಾಲಕಾಲಕ್ಕೆ ಮಳೆಯಾಗದೇ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿ ಭೂಮಿಯಲ್ಲಿ ಕಾಲಮಾನಗಳ ಬದಲಾವಣೆಯಾಗುವ ಮೂಲಕ ಜೀವಸಂಕುಲಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ.…
