Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಚಿಮ್ಮಲಗಿ ಭಾಗ-೧ ಎ ಗ್ರಾಮದ ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ದೇವಸ್ಥಾನದ ಜಾತ್ರೆ ಶುಕ್ರವಾರ ಅದ್ಧೂರಿಯಿಂದ ಜರುಗಿತು.ಬೆಳಿಗ್ಗೆಯಿಂದಲೇ ಅಂಬಾಭವಾನಿಗೆ ವಿಶೇಷ ಪೂಜೆ, ಅಭಿಷೇಕ ಜರುಗಿದವು.ಬೆಳಿಗ್ಗೆ ೯ ಕ್ಕೆ ಆರಂಭಗೊಂಡ ದೇವಿಯ ಪಲ್ಲಕ್ಕಿ ಉತ್ಸವ ಕೃಷ್ಣಾ ನದಿಗೆ ತೆರಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಮಾರು ನಾಲ್ಕು ಗಂಟೆಗಳ ಕಾಲ ಜರುಗಿದ ಮೆರವಣಿಗೆಯಲ್ಲಿ ಕುಂಭ ಹೊತ್ತ ೧೦೧ ಮಹಿಳೆಯರು ಮೆರವಣಿಗೆಗೆ ಮೆರಗು ತಂದರು. ಗದಗ ಜಿಲ್ಲೆ ಕೊಣ್ಣೂರಿನ ಚಂದ್ರಮುಖಿ ಮಹಿಳಾ ಡೊಳ್ಳು ಕುಣಿತದ ನಿನಾದ ಗಮನಸೆಳೆಯಿತು. ಆ ಹಲಗೆ, ಡೊಳ್ಳು ಕಂಪಿನ ರಾಗತಾಳಕ್ಕೆ ಹೆಜ್ಜೆ ಗೆಜ್ಜೆ ಬಳೆಗಳ ಗಲ್ಲಗಲ್ಲ ಸಪ್ಪಳದ ಕಂಪನವೂ ಪರಿಮಳಿಸಿತ್ತು. ತಲೆ ಮೇಲೆ ಕುಂಭ ಹೊತ್ತು ಜಯಘೋಷದ ಸದ್ದು ಮೊಳಗಿಸಿ ಭಕ್ತಿಯ ಉನ್ಮಾದದ ಸೆಲೆಯಲ್ಲಿ ಲೀನರಾಗಿದ್ದರು.ಜಯಪ್ರಕಾಶಾಚಾರ್ಯ ಚಿಮ್ಮಲಗಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ೮ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ನಿರಂತರ “ಮಹಾಲಕ್ಷ್ಮಿ ಯಾಗ” ದೇವಸ್ಥಾನದ ಆವರಣದಲ್ಲಿ ಜರುಗಿತು.ಕಾರ್ಯಕ್ರಮ:ನಂತರ ನಡೆದ ಸನ್ಮಾನ, ಧಾರ್ಮಿಕ ಕಾರ್ಯಕ್ರಮದಲ್ಲಿ ವಿಜಯಪುರ ಮಹಾನಗರ…
೯ ವರ್ಷಗಳಿಂದ ಬಂದಾಗಿದ್ದ: ರಾಕ್ ಉದ್ಯಾನದ ಸಿಲ್ವರ್ ಲೇಕ್ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಪ್ರವಾಸಿ ತಾಣ ಆಲಮಟ್ಟಿಯ ರಾಕ್ ಉದ್ಯಾನದಲ್ಲಿರುವ ಸಿಲ್ವರ್ ಲೇಕ್ ನಲ್ಲಿ ಕಳೆದ ೯ ವರ್ಷಗಳಿಂದ ಸ್ಥಗಿತಗೊಂಡಿದ್ದ ದೋಣಿ ವಿಹಾರಕ್ಕೆ ಜ.೨೪ ಶನಿವಾರ ಮಧ್ಯಾಹ್ನ ೩ ಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಲಿದ್ದಾರೆ.ಮಾಜಿ ಸಚಿವ ಎಸ್.ಆರ್. ಪಾಟೀಲ, ಮುಖ್ಯ ಎಂಜಿನಿಯರ್ ಡಿ. ಬಸವರಾಜ ಇರಲಿದ್ದಾರೆ.ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ವತಿಯಿಂದ ೨೦೦೬ ಏಪ್ರಿಲ್ ೨೧ ರಿಂದಲೇ ಪ್ರವಾಸಿಗರಿಗಾಗಿ ಪ್ಯಾಡೆಲ್ ಬೋಟಿಂಗ್ ಕಾರ್ಯಾಚರಣೆ ಆರಂಭಗೊಂಡಿತ್ತು. ಆಗ ಇಡೀ ಜಿಲ್ಲೆಯಲ್ಲಿಯೇ ಪ್ರವಾಸಿಗರಿಗಾಗಿ ಇದ್ದ ಏಕೈಕ ಬೋಟಿಂಗ್ ತಾಣ ಇದಾಗಿತ್ತು. ಇದು ಬಹಳಷ್ಟು ಪ್ರವಾಸಿಗರನ್ನು ಆಕರ್ಷಿಸಿತ್ತು.ಆದರೆ ೨೦೧೬ ರಲ್ಲಿ ಬೋಟಿಂಗ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಸಿಲ್ವರ್ ಲೇಕ್ ನಡಿ (೯ ಅಡಿ ಆಳ ಇರುವ) ಬಿದ್ದು ಮೃತಪಟ್ಟಿದ್ದ.ಈ ಘಟನೆಯಾದಾಗಿನಿಂದ ಬೋಟಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಾನಾ ತಾಂತ್ರಿಕ, ಕಾನೂನು ಸಮಸ್ಯೆಯ ಕಾರಣ ಬೋಟಿಂಗ್ ಆರಂಭಗೊಳ್ಳಲೇ ಇಲ್ಲ. ಆಲಮಟ್ಟಿಗೆ ನಿತ್ಯ ಬರುತ್ತಿದ್ದ ಸಹಸ್ರಾರು ಪ್ರವಾಸಿಗರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ಅಲೋಪಥಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಾಳೆ ಜನೇವರಿ 24 ರಂದು ಶನಿವಾರ ನಡೆಯಲಿದೆ.ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಅಲೋಪಥಿ ಚಿಕಿತ್ಸೆಗಳಾದ ವೈದ್ಯಕೀಯ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಎಲುಬು ಮತ್ತು ಕೀಲು ಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ ಚಿಕಿತ್ಸೆ, ಚಿಕ್ಕಮಕ್ಕಳ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ ಮತ್ತು ಬೆಂಬಲಿತ ಸೇವೆಗಳಾದ ಎಲ್ಲಾ ಬಗೆಯ ರಕ್ತಪರೀಕ್ಷೆಗಳು, ಔಷಧಾಲಯ, ತುರ್ತು ಸೇವೆಗಳು, ಆ್ಯಂಬ್ಯೂಲನ್ಸ್ ಸೇವೆಗಳು ಲಭ್ಯವಿರಲಿವೆ.ಅಲ್ಲದೇ, ಶಿಬಿರಾರ್ಥಿಗಳಿಗೆ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಔಷಧಿ ವಿತರಿಸಲಾಗುವುದು. ಅಷ್ಟೇ ಅಲ್ಲ, ಪ್ರಾಥಮಿಕ ರಕ್ತ ಮತ್ತು ಮೂತ್ರ ತಪಾಸಣೆಗಳನ್ನು ಮಾಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಲಾಗುವುದು. ಹೀಗೆ ಶಿಫಾರಸು ಮಾಡಲಾದ ರೋಗಗಳಿಗೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಹೊಸ ಉಮರಾಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುಜರಾತದ ತಾಪಿದಾಸ ವಜ್ರದಾಸ ತುಲಸಿದಾಸ ಚಾರಿಟೇಬಲ್ ಟ್ರಸ್ಟ್ ನ ಮುಂಬೈ ಶಾಖೆಯ ವತಿಯಿಂದ ಸುಮಾರು 1.80 ಸಾವಿರ ರೂಪಾಯಿ ಮೌಲ್ಯದ ಪ್ರೊಜೆಕ್ಟರ್ ಹಾಗೂ ಸ್ಮಾರ್ಟ್ ಬೋರ್ಡ್ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಟ್ರಸ್ಟ್ ನ ಕೋ ಆರ್ಡಿನೇಟರ್ ವಿ.ಎಂ. ಸಿಂಧಗಿ ಮಾತನಾಡಿ, ಟ್ರಸ್ಟ್ ನಡೆಸುತ್ತಿರುವ ಸಮಾಜಮುಖಿ ಕೆಲಸಗಳಲ್ಲಿ ಒಂದಾದ ದಾನ ಚಟುವಟಿಕೆಗಳ ಕುರಿತು ವಿವರಿಸಿದರು.ಉಚಿತ ಪುಸ್ತಕ ವಿತರಣೆ, ಸೌಂಡ್ ಸಿಸ್ಟಮ್, ಶಾಲಾ ಫರ್ನಿಚರ್ ಹಾಗೂ ಡಿಜಿಟಲ್ ಸ್ಮಾರ್ಟ್ ಬೋರ್ಡ್ ವಿತರಣೆಗಳ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಟ್ರಸ್ಟ್ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸವಿವರವಾಗಿ ವಿವರಿಸಿದ ಅವರು,“ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕನು ತನ್ನಲ್ಲಿರುವ ಪ್ರಮಾಣಿಕತೆ, ವಿಶ್ವಾಸ ಮತ್ತು ಮೌಲ್ಯಗಳನ್ನು ಬಲಪಡಿಸಬೇಕು. ಸಮಾಜಕ್ಕೆ ಬೇಕಾದ ಸ್ಥಳಗಳಲ್ಲಿ ಸಾಧ್ಯವಾದ ಮಟ್ಟಿಗೆ ದಾನ ಮಾಡುವುದೇ ನಿಜವಾದ ಸೇವೆ,” ಎಂದು ಹೇಳಿದರು.ರೈತ ಸಂಘ ಚಡಚಣ ತಾಲೂಕಾಧ್ಯಕ್ಷ ವಸಂತ ಭೈರಾಮಡಿ ಮಾತನಾಡಿ, ಗುಜರಾತದ ತಾಪಿದಾಸ ವಜ್ರದಾಸ ತುಲಸಿದಾಸ…
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಸೂಚನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ‘ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಶಾಲಾ ಶಿಕ್ಷಣ ಇಲಾಖೆ ಸಿದ್ಧಪಡಿಸಿ ಹೊರಡಿಸಲಾದ 40 + ಅಂಕ ಪಡೆಯುವ ಕ್ರಿಯಾ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿ-ರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಹೇಳಿದರು.ಸಂಗಮೇಶ್ವರ ಮಾಧ್ಯಮಿಕ ಶಾಲೆಯಲ್ಲಿ ಬುಧವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.3 ಸರಣಿ ಪರೀಕ್ಷೆಯನ್ನು ಇಲಾಖೆ ಅನುಷ್ಠಾನಗೊಳಿಸಿದೆ. ಪ್ರತಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆಯುವ ಅಂಕದ ಮೇಲೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣ-ರಾಗುವಂತೆ ಮಾಡುವುದು ಶಿಕ್ಷಕರಜವಾಬ್ದಾರಿ ಎಂದರು.ವಿಷಯ ಪರಿವೀಕ್ಷಕಿ ಶೈಲಾ ಹಳೆಮನಿ ಮಾತನಾಡಿ, ನಿಧಾನಗತಿ ಕಲಿಕಾಮಟ್ಟವುಳ್ಳ ವಿದ್ಯಾರ್ಥಿಗಳನ್ನು ಉತ್ತೀರ್ಣ ಗೊಳಿಸುವದು ನಮ್ಮ ಮೊದಲ ಗುರಿ. ವಿವಿಧ ಕಲಿಕಾ ತಂತ್ರಗಳನ್ನು ಅಳವಡಿಸಿ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಶಿಕ್ಷಕರು ಪ್ರಯತ್ನಿಸಬೇಕು ಎಂದರು.ಚಡಚಣದ ಸಂಗಮೇಶ್ವರ ಮಾಧ್ಯಮಿಕ ಶಾಲೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆಯ ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ ೨೬೫ ಕೋಟಿ ರೂ.ಗಳಾಗಿದ್ದು ಅದರಲ್ಲಿ ಆದಾಯ ಹಾಗೂ ವೆಚ್ಚಗಳನ್ನು ಸರಿದೂಗಿಸಿ ೧೨ ಲಕ್ಷ ರೂ.ಗಳ ಉಳಿತಾಯ ಬಜೆಟ್ನ್ನು ಮೇಯರ್ ಎಂ.ಎಸ್. ಕರಡಿ ಶುಕ್ರವಾರ ಮಂಡಿಸಿದರು.ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ವಿಸ್ತçತವಾಗಿ ವಿವರಣೆ ನೀಡುವ ಮೂಲಕ ಕರಡಿ ಬಜೆಟ್ ಮಂಡಿಸಿದರು.ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮಹಾನಗರ ಪಾಲಿಕೆಯ ಆಯ್ಯ ವ್ಯಯಕ್ಕೆ ಸಂಬAಧಿಸಿದAತೆ ೨೬೫.೨೦ ಕೋಟಿ ರೂ.ಗಳು ಸ್ವೀಕೃತಿಯಾಗಿದ್ದು ಅದರಲ್ಲಿ ೨೬೫.೦೮ ಕೋಟಿ ರೂ.ಗಳು ವೆಚ್ಚವಾಗಿದ್ದು ಒಟ್ಟು ೧೨ ಲಕ್ಷ ರೂ. ಉಳಿತಾಯದ ಬಜೆಟ್ ಇದಾಗಿದೆ ಎಂದು ಕರಡಿ ವಿಶ್ಲೇಷಿಸಿದರು.ಆರ್ಥಿಕ ಅಂಶಗಳ ಕುರಿತು ವಿವರಣೆ ನೀಡಿದ ಅವರು, ೨೦೨೬-೨೭ ನೇ ಸಾಲಿನಲ್ಲಿ ರಾಜಸ್ವ ಸ್ವೀಕೃತಿ ೧೭೨.೦೬ ಕೋಟಿ ರೂ. ಇದ್ದು, ಬಂಡವಾಳ ಸ್ವೀಕೃತಿ ೫೮.೪೮ ಕೋಟಿ ರೂ., ಅಸಾಧಾರಣ ಸ್ವೀಕೃತಿ ೩೪.೬೬ ಕೋಟಿ ರೂ. ಇದೆ ಎಂದು ವಿವರಿಸಿದರು.೨೦೨೬-೨೭ ನೇ ಸಾಲಿನಲ್ಲಿ ವೆಚ್ಚಗಳಿಗೆ ಸಂಬAದಿಸಿದAತೆ ೧೬೫.೯೦ ಕೋಟಿ ರೂ. ರಾಜಸ್ವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ ಎರಡು ದಿನಗಳ ಹಿಂದಷ್ಟೇ ಸೈಬರ್ ಪ್ರಕರಣಗಳನ್ನು ಬೇಧಿಸಿ ಕೋಟ್ಯಂತರ ರೂ. ಮೌಲ್ಯದ ನಗದು ಜಪ್ತು ಮಾಡಿಕೊಂಡು ನೊಂದವರಿಗೆ ಮರಳಿ ಒಪ್ಪಿಸುವ ಮೂಲಕ ಉತ್ತಮ ಕಾರ್ಯ ಮಾಡಿದ್ದ ವಿಜಯಪುರ ಪೊಲೀಸರು ಈಗ ಪುನ: ವಿವಿಧ ಬಂಗಾರ ಕಳ್ಳತನ, ಮೋಟಾರ್ ಬೈಕ್ ಕಳ್ಳತನ ಪ್ರಕರಣಗಳನ್ನು ಬೇಧಿಸಿ ಲಕ್ಷಾಂತರ ರೂ. ಮೌಲ್ಯದ ಬಂಗಾರ, ಮೋಟಾರ್ ಬೈಕ್ ಹಾಗೂ ಪೂರಕ ವಸ್ತುಗಳನ್ನು ಜಪ್ತು ಮಾಡಿಕೊಂಡಿದ್ದಾರೆ.ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ ೪೮ ಬಂಗಾರ, ಮೋಟಾರ್ ಬೈಕ್ ಕಳುವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ೧೪ ಜನ ಅಂತರ ರಾಜ್ಯ ಹಾಗೂ ಅಂತರ ಜಿಲ್ಲಾ ಆರೋಪಿತರನ್ನು ಬಂಧಿಸಿ ಅವರಿಂದ ಅಂದಾಜು ೬೫ ಲಕ್ಷ ರೂ. ಮೌಲ್ಯದ ೪೨೬.೨ ಗ್ರಾಂ ಬಂಗಾರದ ಆಭರಣಗಳನ್ನು ಮತ್ತು ೨೦ ಲಕ್ಷ ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ೦೨ ಕಾರುಗಳನ್ನು ಹಾಗೂ ೩೯ ಮೋಟಾರ್ ಬೈಕ್ ಜಪ್ತು ಮಾಡಿಕೊಂಡಿದ್ದು, ಆರೋಪಿತರಿಂದ ೧,೧೭,೦೦,೦೦೦ ರೂ. ಮೌಲ್ಯದ ವಸ್ತಗಳನ್ನು ಸ್ವತ್ತುಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಇದೇ ದಿನಾಂಕ ೨೪ ರಿಂದ ಮೂರು ದಿನಗಳ ಕಾಲ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ೪೫ ನೇ ಪ್ರಾಂತ ಸಮ್ಮೇಳನ ನಡೆಯಲಿದೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಪ್ರಾಂತ ಸಮ್ಮೇಳನದ ಕುರಿತು ವಿವರಣೆ ನೀಡಿದ ಅವರು, ಈಗಾಗಲೇ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ, ೬ ವಿಭಾಗಗಳ ೧೬ ಜಿಲ್ಲೆಯಿಂದ ಸುಮಾರು ೭೦೦ ವಿದ್ಯಾರ್ಥಿಗಳು, ೩೦೦ ವಿದ್ಯಾರ್ಥಿನಿಯರು ಮತ್ತು ೧೦೦ ಕ್ಕೂ ಹೆಚ್ಚು ಅಧ್ಯಾಪಕರು ಮತ್ತು ಶಿಕ್ಷಣ ತಜ್ಞರು ಸೇರಿ ಒಟ್ಟು ೧೧೦೦ ಕ್ಕೂ ಅಧಿಕ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದರು.ದಿ.೨೩ ರಂದು ಎಲ್ಲ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ, ರಾತ್ರಿ ೯ ಗಂಟೆಗೆ ರಾಜ್ಯದ ವಿದ್ಯಾರ್ಥಿ ಪರಿಷತ ನ ಚಟುವಟಿಕೆಗಳು ಹಾಗೂ ವಿಶೇಷ ಅಭಿಯಾನಗಳನ್ನು ಒಳಗೊಂಡ ಪ್ರದರ್ಶಿನಿಯನ್ನು ನಗರದ ಶ್ರೀ ಸಿದ್ದೇಶ್ವರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.ದಿ.೨೪ ರಂದು ಬೆಳಿಗ್ಗೆ ಧ್ವಜಾರೋಹಣದಿಂದ ಸಮ್ಮೇಳನ ಪ್ರಾರಂಭವಾಗಲಿದೆ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಮರಸ್ಯ, ಪರಿಸರ ಸಂರಕ್ಷಣೆ, ಸ್ವದೇಶಿ ಚಿಂತನೆ ಎಂಬ ಉದಾತ್ತ ತತ್ವಗಳ ಆಶಯಗಳೊಂದಿಗೆ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿ ನೇತೃತ್ವದಲ್ಲಿ ಇದೇ ದಿ.೨೪ ರಂದು ಮಧ್ಯಾಹ್ನ ೩ ಕ್ಕೆ ಭವ್ಯ ಭಕ್ತಿಭಾವದ ಶೋಭಾಯಾತ್ರೆ ನಡೆಯಲಿದೆ ಎಂದು ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿ ಸಂಚಾಲಕ ಸದಾನಂದ ದೇಸಾಯಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ನಾಲ್ಕು ಕಡೆಗಳಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ, ವಿಜಯಪುರದ ನಾಲ್ಕು ದಿಕ್ಕುಗಳಲ್ಲಿಯೂ ಸಹ ಈ ಕಾರ್ಯಕ್ರಮ ನಡೆಯಲಿದೆ, ಜಲನಗರ ಮೊದಲಾದ ಬಡಾವಣೆಗಳ ಭಾಗಗಳನ್ನು ಬಸವೇಶ್ವರ ಭಾಗ ಎಂದು ಗುರುತಿಸಿ ಅಲ್ಲಿ ಈ ಕಾರ್ಯಕ್ರಮಗಳ ಸರಣಿ ನಡೆಯಲಿದೆ, ದಿ.೨೪ ರಂದು ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಮುರಾಣಕೇರಿಯ ಶ್ರೀ ಈಶ್ವರಲಿಂಗ ದೇವಸ್ಥಾನದಿಂದ ಭಾರತ ಮಾತೆ ಹಾಗೂ ವಿವಿಧ ಮಹಾಪುರುಷರ ಭಾವಚಿತ್ರಗಳ ಮೆರವಣಿಗೆ ಸಂಜೆ ೩ ರಿಂದ ಆರಂಭಗೊಳ್ಳಳಿದೆ, ಮಕ್ಕಳು ಮಹಾಪುರುಷರ ವೇಷಗಳನ್ನು ಧರಿಸಿ ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿದ್ದು, ಮುರಾಣಕೇರಿ ಕೋರ್ಟ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೯೫೯ ರ ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಕಾಯ್ದೆ ಅನ್ವಯ ಯಂಕಂಚಿಯ ದಾವಲ್ ಮಲಿಕ್ ಉರುಸು (ಜಾತ್ರಾ ಮಹೋತ್ಸವ)ದಲ್ಲಿ ನಡೆಯುವ ಪ್ರಾಣಿ ಬಲಿಯನ್ನು ಕೂಡಲೇ ತಡೆಯಬೇಕು ಎಂದು ಪಶು ಪ್ರಾಣಿ ಬಲಿ ನಿರ್ಮೂಲನಾ ಜಾಗೃತ ಮಹಾಸಂಘದ ಪ್ರಮುಖರಾದ ದಯಾನಂದ ಸ್ವಾಮೀಜಿ ಒತ್ತಾಯಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಂಕಂಚಿಯ ದಾವಲ್ ಮಲಿಕ್ ಜಾತ್ರೆ (ಉರುಸು) ಸಂದರ್ಭದಲ್ಲಿ ಸಾವಿರಾರು ಪ್ರಾಣಿ ಬಲಿ ನಡೆಯುತ್ತದೆ, ಕಳೆದ ಬಾರಿಯೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದೆ, ಈ ಬಾರಿಯೂ ಸಹ ನಾನು ಈ ವಿಷಯವನ್ನು ಗಮನಕ್ಕೆ ತಂದಿರುವೆ, ಕೂಡಲೇ ಅಲ್ಲಿ ನಡೆಯುವ ಪ್ರಾಣಿ ಬಲಿಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.ಕರ್ನಾಟಕ ಸಂಪೂರ್ಣ ಪ್ರಾಣಿ ಬಲಿ ಮುಕ್ತ ರಾಜ್ಯ ಎಂದು ಘೋಷಿಸಿಕೊಂಡಿದೆ, ೧೯೫೯ ರಲ್ಲಿ ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಕಾಯ್ದೆ ಅನ್ವಯ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಪ್ರಾಣಿಬಲಿ ಕೊಡುವಂತಿಲ್ಲ, ಬಲಿಗೆ ಪ್ರೇರಣೆ ಕೊಡುವಂತಿಲ್ಲ, ಈ ಮೊದಲು ಕೇವಲ ಹಿಂದೂ ದೇವಾಲಯಕ್ಕೆ ಸೀಮಿತವಾಗಿದ್ದ ಈ…
