Author: editor.udayarashmi@gmail.com

ವಿಜಯಪುರ: ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಎಲ್ಲ ಜಾತಿ-ಜನಾಂಗದವರನ್ನು ಪ್ರೀತಿಯಿಂದ ಕಾಣುವ ವ್ಯಕ್ತಿತ್ವ ಉಳ್ಳವರು. ಎಲ್ಲ ಸಮಾಜಗಳೊಂದಿಗೆ ಅನೋನ್ಯತೆ ಹೊಂದಿದವರು. ಈ ಬಾರಿ ಚುನಾವಣೆಗೆ ವಿಜಯಪುರ ನಗರ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಟಿಕೆಟನ್ನು ಪಕ್ಷವು ಅಪ್ಪು ಅವರಿಗೆ ನೀಡಬೇಕೆಂದು ವಿವಿಧ ಸಮಾಜದ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.ಮಂಗಳವಾರ ನಗರದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ನಾವೆಲ್ಲ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು. ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ಸತತ ದುಡಿದವರು. ನಮ್ಮಂಥ ಕಾರ್ಯಕರ್ತರ ದುಡಿಮೆ ಫಲದಿಂದ ಪಕ್ಷ ಇಂದು ಹೆಮ್ಮರವಾಗಿ ಬೆಳೆದಿದೆ. ನಗರ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತಮ್ಮನ್ನು ಅರ್ಪಿಸಿಕೊಂಡ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಪಕ್ಷ ಟಿಕೆಟ್ ಕೊಡಬೇಕು. ಈ ಹಿಂದೆ ಎರಡು ಸಲ ಅವರಿಗೆ ಟಿಕೆಟ್ ಕೈ ತಪ್ಪಿದರೂ ಸಹ ಅಪ್ಪು ಅವರು ಪಕ್ಷ ನಿಷ್ಠರಾಗಿಯೇ ಮುಂದುವರೆದಿದ್ದಾರೆ. ಕಾರ್ಯಕರ್ತರ ಒಲವು ಸಂಪಾದಿಸಿ ಅವರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಆದರೆ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾರ್ಯಕರ್ತರ ಕಡೆಗಣನೆ ಮಾಡಿದ್ದಲ್ಲದೆ, ಅನ್ಯ…

Read More

ಅಪ್ಪು ಪಟ್ಟಣಶೆಟ್ಟಿಗೆ ಬಿಜೆಪಿ ಟಿಕೆಟ್ ನೀಡಲು ಆಗ್ರಹ | ಶಾಸಕ ಯತ್ನಾಳ ವಿರುದ್ಧ ವಾಗ್ದಾಳಿ | ಭ್ರಷ್ಟಾಚಾರದ ಆರೋಪ ವಿಜಯಪುರ: ನಗರದಲ್ಲಿ ಭಾರತೀಯ ಜನತಾ ಪಕ್ಷವು ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ನಿಯಂತ್ರಣದಲ್ಲಿದೆ. ಮೂಲ ಕಾರ್ಯಕರ್ತರಿಗೆ ಇಲ್ಲಿ ಬೆಲೆ ಇಲ್ಲ. ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಉಳಿಯಬೇಕಾದರೆ ಈ ಬಾರಿ ಶಾಸಕ ಬಸನಗೌಡ ಯತ್ನಾಳ ಅವರಿಗೆ ಟಿಕೆಟ್ ಕೊಡದೆ, ಕಾರ್ಯಕರ್ತರ ಭಾವನೆಗಳನ್ನು ಗೌರವಿಸುವ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಕೊಡಬೇಕೆಂದು ಬಿಜೆಪಿಯ ಉಚ್ಛಾಟಿತ ನಾಯಕರಾದ ರವಿ ಬಗಲಿ ಮತ್ತು ರಾಜು ಬಿರಾದಾರ ಆಗ್ರಹಿಸಿದರು.ಮಂಗಳವಾರ ನಗರದಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷರು ತಪ್ಪು ಸಂದೇಶದಿಂದ ಹಾಗೂ ಶಾಸಕ ಯತ್ನಾಳ್ ಅವರ ಒತ್ತಡಕ್ಕೆ ಮಣಿದು ನಮ್ಮನ್ನು ಉಚ್ಚಾಟಿಸಿದ್ದರೂ ನಾವು ಯಾವ ಪಕ್ಷಕ್ಕೂ ಹೋಗದೆ ಈಗಲೂ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ಮುಂದುವರೆದಿದ್ದೇವೆ. ನಮ್ಮೊಂದಿಗೆ ನೂರಾರು ಕಾರ್ಯಕರ್ತರಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೂಲ ಕಾರ್ಯಕರ್ತರನ್ನು ಶಾಸಕ ಯತ್ನಾಳ ಅವರು ಕಡೆಗಣಿಸಿ…

Read More

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಬೈಪಾಸ್ ಹತ್ತಿರ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಈರ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಳೆದ ೨ ವರ್ಷದಿಂದ ಅವರು ಕಳ್ಳತನ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.ಸಿAದಗಿಯ ಹುಡ್ಕೊ ನಿವಾಸಿ ಸಿದ್ದಪ್ಪ ಜೇರಟಗಿ (೩೭), ಆಲಮೇಲ ತಾಲೂಕಿನ ನಾಗರಾಳ ಗ್ರಾಮದ ಸಿದ್ರಾಮ ಪಾಟೀಲ (೩೫) ಬಂಧಿತ ಅರೋಪಿಗಳು.ಇವರಿಂದ ೧೪೧.೩೭೯ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇವುಗಳ ಅಂದಾಜು ಬೆಲೆ ೫ ಲಕ್ಷದ ೫೧ ಸಾವಿರದ ೭೩೨ರೂ. ಆಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಸಿಪಿಐ ಡಿ.ಹುಲುಗೆಪ್ಪ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವರಾಜ ನಾಯಕವಾಡ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಸ್.ಪಿ ಹುಣಸಿಕಟ್ಟಿ, ಆರ್.ಎಲ್. ಕಟ್ಟಿಮನಿ, ಸಿ.ಡಿ.ಕಲ್ಲೂರ, ಎಸ್.ಎಸ್.ಕೊಂಡಿ, ಪಿ.ಕೆ.ನಾಗರಾಳ ಸೇರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಶಾಸಕ ನಡಹಳ್ಳಿ Vs ಮಾಜಿ ಶಾಸಕ ನಾಡಗೌಡ ಚುನಾವಣಾ ಅಖಾಡದಲ್ಲಿ ಸೆಣಸಲು ಸನ್ನದ್ಧ -ಹುಸನಪ್ಪ ನಡುವಿನಮನಿತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರ ವಿಜಯಪುರ ಜಿಲ್ಲೆಯ ೮ ವಿಧಾನ ಸಭೆ ಕ್ಷೇತ್ರಗಳಲ್ಲಿ ಈ ಬಾರಿ ಅತಿ ಹೆಚ್ಚು ಕುತೂಹಲ ಕೆರಳಿಸಿದ ಹಾಗೂ ಭಾರಿ ಜಿದ್ದಾ ಜಿದ್ದಿನ ಕ್ಷೇತ್ರವಾಗಿದೆ ಎಂದೆನಿಸುತ್ತಿದೆ.೨೦೧೮ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಎ.ಎಸ್. ಪಾಟೀಲ (ನಡಹಳ್ಳಿ) ಅವರು ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಅಪ್ಪಾಜಿ ನಾಡಗೌಡರನ್ನು ಪರಾಭವಗೊಳಿಸಿ ಪಕ್ಷಕ್ಕೆ ಐತಿಹಾಸಿಕವಾದ ಗೆಲುವು ತಂದುಕೊಟ್ಟಿದ್ದರು. ಈ ಬಾರಿ ಮತ್ತೆ ಈ ಇಬ್ಬರು ದಿಗ್ಗಜ ನಾಯಕರು ಅಖಾಡಾದಲ್ಲಿ ಮುಖಾಮುಖಿಯಾಗಲು ಸರ್ವಸನ್ನದ್ಧರಾಗಿದ್ದಾರೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳಾಗಿವೆ. ಯಾರ ಕೈ ಮೇಲಾಗುತ್ತದೆ ಎಂದು ಈಗಲೇ ಹೇಳಲು ಅಸಾಧ್ಯವಾಗಿದೆಯಾದರೂ ಈವರೆಗಿನ ಸಮೀಕ್ಷೆಗಳು ಸಧ್ಯಕ್ಕೆ ನಡಹಳ್ಳಿಯವರು ಒಂದು ಹೆಜ್ಜೆ ಮುಂದಿದ್ದಾರೆಂದು ಹೇಳುತ್ತಿವೆ. ಆದರೆ ಚುನಾವಣೆಗಿನ್ನೂ ಒಂದು ತಿಂಗಳಿಗೂ ಅಧಿಕ ಕಾಲಾವಧಿ ಇರುವುದರಿಂದ ಈ ಅವಧಿಯಲ್ಲಿ ಏನು ಬೇಕಾದರೂ ಆಗಬಹುದಾಗಿದೆ. ಜೆಡಿಎಸ್‌ನಿಂದ ಡಾ.ಸಿ.ಎಸ್. ಸೋಲಾಪೂರ ಅಧಿಕೃತ ಅಭ್ಯರ್ಥಿ ಎಂದು ಈಗಾಗಲೇ…

Read More

ಬೀದರ ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತಿಮಾರ್ಗ ಒಂದೆ ಸುಲಭ ಮಾರ್ಗಎಂದು ವೇದಮೂರ್ತಿ ಚೆನ್ನವೀರಸ್ವಾಮಿ ಹಿರೇಮಠ, ಕಡಣಿ ಹೇಳಿದರು.ಬೀದರ ತಾಲೂಕಾ ಸುಕ್ಷೇತ್ರ ಶ್ರೀ ಗುರುಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದಂಗವಾಗಿ ಹಮ್ಮಿಕೊಂಡಿರುವ ಭಕ್ತಿ ವಿಜಯ ಆಧ್ಯಾತ್ಮಿಕ ಪ್ರವಚನದಲ್ಲಿ ಅವರು ಹೇಳಿದರು.ಭಗವಂತನನ್ನ ಕೂಡಿಕೊಳ್ಳಲು ಭಕ್ತಿ, ಜ್ಞಾನ, ವೈರಾಗ್ಯ ಮೂರು ದಾರಿಗಳು ಇದ್ದರೂ ಕೂಡ ವೈರಾಗ್ಯ ಮತ್ತು ಜ್ಞಾನಮಾರ್ಗದಲ್ಲಿ ಎಲ್ಲರಿಗೂ ಸಾಗಲು ಸಾಧ್ಯವಿಲ್ಲ, ಆದರೆ ಭಕ್ತಿ ಮಾರ್ಗದಲ್ಲಿ ಎಲ್ಲರೂ ಸುಲಭವಾಗಿ ಭಗವಂತನನ್ನ ಸಾಕ್ಷಾತ್ಕಾರ ಮಾಡಿಕೊಳ್ಳಲಿಕ್ಕೆ ಸುಲಭ ಮಾರ್ಗವಿದೆ. ಅಂತಹ ಭಕ್ತಿ ಮಾರ್ಗದಲ್ಲಿ ಗುರು ಭದೇಶ್ವರರು, ಬಸವಾದಿ ಪ್ರಮಥರು ನಡೆದು ತೋರಿಸಿದ್ದಾರೆ. ಅವರ ಮಾರ್ಗ ನಮಗೆ ಅನುಕರಣೀಯ ಕಾರಣ ನಾವು ನೀವೆಲ್ಲ ಸರಳ ಮಾರ್ಗವಾದ ಭಕ್ತಿ ಮಾರ್ಗವನ್ನು ಅನುಸರಿಸಿ ನಮ್ಮ ಜೀವನವನ್ನು ಸಾಫಲ್ಯ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರುದಿನಾಂಕ 02 .4.2023 ರಿಂದ 06.4. 2023 ವರೆಗೆ ಜಾತ್ರಾ ನಿಮಿತ್ಯ ಹಮ್ಮಿಕೊಂಡಿರುವ ಆಧ್ಯಾತ್ಮ ಭಕ್ತಿ ವಿಜಯ ಆಧ್ಯಾತ್ಮ ಪ್ರವಚನದ ಲಾಭವನ್ನು ಆಸ್ತಿಕರು ಪಡೆದುಕೊಳ್ಳಲು ತಿಳಿಸಿದರು.ಶ್ರೀಗುರು ಭದೇಶ್ವರ ಸಂಸ್ಥಾನದ ವಂಶ ಪರಂಪರೆಯ…

Read More

ಮೋರಟಗಿ: ದ್ವಿಚಕ್ರ ವಾಹನ, ಆಟೋರಿಕ್ಷಾ, ಕಾರು, ಜೀಪುಗಳು ಸೇರಿದಂತೆ ಸರ್ಕಾರಿ ಬಸ್ಸುಗಳ ಮೇಲೂ ಕೂಡಾ ಹದ್ದಿನ ಕಣ್ಣಿಟ್ಟಿರಬೇಕು ಎಂದು ತಹಸಿಲ್ದಾರ ಸುರೇಶ ಚಾವಲರ್ ಅಧಿಕಾರಿಗಳಿಗೆ ಸೂಚಿಸಿದರು.ಶನಿವಾರ ಮೋರಟಗಿ ಚೆಕ್ ಪೋಸ್ಟಗೆ ಭೇಟಿ ನೀಡಿ ವಾಹನಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.ಸ್ಥಳೀಯ ದ್ವಿಚಕ್ರ ವಾಹನ ಅಥವಾ ಕಾರು ಮೋಟಾರುಗಳ ಚಾಲಕರು ಪರಿಚಿತರಂತೆ ವರ್ತಿಸಿ ಪಾರಾಗುತ್ತಾರೆ ಹಂತವರ ವಾಹನಗಳು ಮುದ್ದಾಮ ಮುಲಾಜ ಇಲ್ಲದೆ ವಾಹನ ಪರಿಶೀಲಿಸಿ ಎಂದು ಹೇಳಿದ ಅವರು ಸುಮಾರು ೬ ಘಂಟೆಗಳ ಕಾಲ ಚೆಕ್ ಪೋಸ್ಟನಲ್ಲೆ ಖುದ್ದಾಗಿ ಸುಮಾರು ವಾಹನಗಳನ್ನು ಪರಿಶೀಲಿಸಿದರು. ಪರಿಶೀಲನೆಯಲ್ಲಿ ಒಂದು ವಾಹನದಲ್ಲಿ ಒಬ್ಬ ರೈತನ ಹತ್ತಿರ ಎರಡು ಲಕ್ಷ ನಗದು ಹಣ ಸಿಕ್ಕಿದ್ದು ಅದು ಹತ್ತಿ ಮಾರಾಟ ಮಾಡಿದ ಅಧಿಕೃತ ಪಾವತಿ ಇರುವುದರಿಂದ ಮರಳಿ ಹಣ ನೀಡಿದರು.ವಾಹನ ಪರಿಶೀಲನೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಸಿದ್ರಾಮ್ ಮಾರಿಹಾಳ, ಎಇಇ ರಾಜಪ್ಪ ಎಸ್, ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಚಕ್ರವರ್ತಿ, ಗ್ರಾಮ ಲೆಕ್ಕಾಧಿಕಾರಿ ಮಾರುತಿ ಸಾಳಂಕಿ, ಪೊಲೀಸ್ ಸಿಬ್ಬಂದಿಗಳಾದ ಆರ್…

Read More

ವಿಜಯಪುರ: ಬುದ್ಧ, ಬಸವ, ಅಂಬೇಡ್ಕರ ಅವರ ವಿಚಾರಧಾರೆಗಳ ಅಡಿಯಲ್ಲಿ ಕಾಂಗ್ರೆಸ್ ಸರ್ವ ಜನಾಂಗಗಳ ಹಿತ ಕಾಪಾಡುತ್ತಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಸಾರವಾಡ, ದದಾಮಟ್ಟಿ, ಹೊನಗನಹಳ್ಳಿ ಮತ್ತು ಸವನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಅವರು ಗ್ರಾಮಸ್ಥರೊಂದಿಗೆ ಮಾತನಾಡಿದರು. ಈಗಿನ ಅಸಮರ್ಥ ಸರಕಾರದಿಂದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಆಡಳಿತವನ್ನು ಬಯಸುತ್ತಿದ್ದಾರೆ. ನಮ್ಮ ಪಕ್ಷ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಸಮುದಾಯಗಳ ಅಭ್ಯುದಯಕ್ಕಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ, ಬಿಜೆಪಿ ಜನರ ಭಾವನೆಗಳನ್ನು ಕೆರಳಿಸಿ ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಅಲ್ಲದೇ, ಮನುಸ್ಮೃತಿ ಜಾರಿ ಮಾಡಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ ಜೆಡಿಎಸ್ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ವಿರುದ್ಧ ಜಾತಿ, ಧರ್ಮದ ಆದಾರದ ಮೇಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದೆ. ಈ ಮೂಲಕ ಅತಂತ್ರ ಫಲಿತಾಂಶ ಬಂದು ಅದರಿಂದ ತನಗೆ ಲಾಭ ಗಳಿಸುವ ನಿಟ್ಟಿನಲ್ಲಿ ತಂತ್ರ ರೂಪಿಸುತ್ತಿದೆ. ಆದರೆ, ಅಹಿಂದ ಮತಗಳನ್ನು ವಿಭಜಿಸುವ ಜೆಡಿಎಸ್ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು…

Read More

ವಿಜಯಪುರ: ಕಾರ್ಯಕರ್ತರ ಮೂಲಕವೇ ಅಭಿಪ್ರಾಯ ಸಂಗ್ರಹಿಸಿ, ಮುಕ್ತ ಮತದಾನ ಪ್ರಕ್ರಿಯೆ ‌ಮೂಲಕ ಅಭ್ಯರ್ಥಿಗಳ ‌ಆಯ್ಕೆ‌‌‌ ಮಾಡುವ ಹೊಸ ಪ್ರಯೋಗವನ್ನು ಭಾರತೀಯ ಜನತಾ ಪಕ್ಷ ಮಾಡಿರುವುದು ಒಂದು ಹೊಸ‌ ಮೈಲುಗಲ್ಲು, ಈ ಪ್ರಕ್ರಿಯೆಯಿಂದ ಕಾರ್ಯಕರ್ತರ‌ ಉತ್ಸಾಹ ಹಾಗೂ‌ ಜನರ ವಿಶ್ವಾಸ ಪಕ್ಷದ ‌ಮೇಲೆ ಮತ್ತಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ‌ಉಮೇಶ ಕಾರಜೋಳ ಹೇಳಿದ್ದಾರೆ.ಈ‌‌ ಕುರಿತು ‌ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕರ್ತರು ‌ಪಕ್ಷದ ಆಸ್ತಿ ಹಾಗೂ ಜೀವಾಳ, ಈ ಮಾತನ್ನು ಎಲ್ಲ ‌ರಾಜಕೀಯ ಪಕ್ಷಗಳು ಹೇಳುತ್ತವೆ, ಆದರೆ ಇದನ್ನು ಉಸಿರಾಗಿಸಿಕೊಂಡು,‌ನೈಜವಾಗಿಯೂ ಕಾರ್ಯಕರ್ತರಿಗೆ‌ ಮಹತ್ವ ನೀಡುವ‌ ಪಕ್ಷ ಬಿಜೆಪಿ ಎಂಬುದು ಸಾಬೀತಾಗಿದೆ. ಅಭ್ಯರ್ಥಿಗಳ ‌ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯವೇ ಮಾನದಂಡ ಎಂಬ ಸೂತ್ರ ವನ್ನು ‌ಅನುಸರಿಸಿರುವುದು ಅತ್ಯಂತ ‌ಮಹತ್ವದ್ದಾಗಿದೆ, ಪಕ್ಷದ ‌ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕಾರ್ಯಕರ್ತರಿಗೆ ಜನರ‌ ನಾಡಿಮಿಡಿತ ಅರಿತಿರುತ್ತಾರೆ,‌ ಕಾರ್ಯಕರ್ತರೇ ಗುಪ್ತ ಮತದಾನ ಮೂಲಕ ಪಾರದರ್ಶಕವಾಗಿ ಅಭ್ಯರ್ಥಿಗಳ ಆಯ್ಕೆ‌ ಮಾಡುವ ವ್ಯವಸ್ಥೆ ಕೇವಲ ಕಾರ್ಯಕರ್ತರಲ್ಲಿ ಅಷ್ಟೇ ಅಲ್ಲದೇ ಜನತೆಯಲ್ಲೂ ಬಿಜೆಪಿ ಬಗ್ಗೆ…

Read More

ವಿಜಯಪುರ: ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಾಡಿನಲ್ಲಿ ರಾಜಯೋಗವಿತ್ತು. ಆದರೆ ಡಂಬಲ್ ಎಂಜಿನ್ ಸರಕಾರದ ಈ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿ ಸುವರ್ಣ ಯುಗ ಪುನಾರಂಭವಾಗಲಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ತಿಕೋಟಾ ತಾಲೂಕಿನ ಹೊನವಾಡ, ಕೋಟ್ಯಾಳ ಮತ್ತು ಹರನಾಳ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡ ಅವರು ಗ್ರಾಮಸ್ಥರೊಂದಿಗೆ ಮಾತನಾಡಿದರು, ಹೊನವಾಡದಲ್ಲಿ ಮಾತನಾಡಿದ ಅವರು ಸೂರ್ಯ, ಚಂದ್ರ ಇರುವವರೆಗೆ ಈ ಭಾಗದ ಜನರ ಬದುಕು ಹಸನಾಗಿರಿಸಲು ಹೊನ್ನದ ರೂಪದಲ್ಲಿ ನೀರು ನೀಡಿದ್ದೇನೆ. ನಾನು ಮಾಡಿದ ಕೆಲಸ ನೋಡಿ ಮತ ಹಾಕಿ ಎಂದು ಮನವಿ ಮಾಡಿದರು. ಈ ಭಾಗದಲ್ಲಿ ಕೈಗೊಂಡ ನೀರಾವರಿ ಮತ್ತು ಅಭಿವೃದ್ಧಿ ಕಾರ್ಯಗಳು ಉತ್ತಮ ಫಲ ನೀಡುತ್ತಿದ್ದು, ರೈತರ ಆದಾಯ, ವ್ಯಾಪಾರ ವಹಿವಾಟು ಹತ್ತು ಪಟ್ಟು ಹೆಚ್ಚಾಗಿದೆ. ಇಲ್ಲಿನ ಜನರ ಆರ್ಥಿಕ ಸ್ಥಿತಿ ಸುಧಾರಿಸಿ ಸುಖ ಸಂಸಾರ ನಡೆಸಲು ಸಾಧ್ಯವಾಗಿದೆ. ಈ ಸಲ ಪ್ರತಿ ಪಕ್ಷದಲ್ಲಿದ್ದರೂ ಶಕ್ತಿಮೀರಿ ಕೆಲಸ…

Read More