Author: editor.udayarashmi@gmail.com

ರೂ.25 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿಪೂಜೆ | ಡಾ.ಅಂಬೇಡ್ಕರ್ ಸೇರಿ ಹಲವು ವೃತ್ತಗಳ ಉದ್ಘಾಟನೆ ವಿಜಯಪುರ: ನಗರದಲ್ಲಿ ಬುಧವಾರ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು, ರೂ.25 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ನೂತನವಾಗಿ ನಿರ್ಮಿಸಲಾದ ವೃತ್ತಗಳನ್ನು ಉದ್ಘಾಟಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸ್ವಾತಂತ್ರ್ಯ ಹೋರಾಟಗಾರರಾದ ಮಹಾರಾಣಾ ಪ್ರತಾಪ್‌ ಸಿಂಗ್, ವೀರ ಸಾವರ್ಕರ್, ಸರ್ದಾರ ವಲ್ಲಭ ಬಾಯಿ ಪಟೇಲ್, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ, ಸಂತ ವೀರ ಕೇಸರಿ ಸ್ವಾಮಿ ವಿವೇಕಾನಂದ, ಅಹಿಲ್ಯಾಬಾಯಿ ಹೋಳ್ಕರ್, ಡಾ.ಬಾಬು ಜಗಜೀವನ ರಾಂ ಅವರ ವೃತ್ತಗಳನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಐದು ವರ್ಷದ ಅವಧಿಯಲ್ಲಿ ಎರಡು ವರ್ಷ ಕೊರೊನಾದ ಕಾಟದಲ್ಲೂ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ. ಜಿಲ್ಲೆಗೆ ಹಲವಾರು ಯೋಜನೆಗಳನ್ನು ತರಲು ಪ್ರಯತ್ನಿಸಿ, ಯಶಸ್ವಿಯಾಗಿರುವೆ. ಸುರಕ್ಷತೆಯ ನಗರವನ್ನಾಗಿ ಪರಿವರ್ತಿಸಿರುವೆ. ಇದರಿಂದ ಜನ ನೆಮ್ಮದಿಯಾಗಿ ಜೀವನ‌ ನಡೆಸುತ್ತಿದ್ದಾರೆ ಎಂದರು. ಮಹಾನ್ ನಾಯಕರಿಗೆ ಗೌರವ ಸಲ್ಲಿಸಲು,…

Read More

ಸಿಂದಗಿ: ಪತ್ರಕರ್ತರ ಬಹು ದಿನದ ಬೇಡಿಕೆಯಾಗಿದ್ದ ಪತ್ರಿಕಾ ಭವನಕ್ಕೆ ಎಸ್.ಎಫ್.ಸಿ ಅನುದಾನದಲ್ಲಿ ರೂ.೨೦ಲಕ್ಷ ಮಂಜೂರು ಮಾಡಲಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಬುಧವಾರದಂದು ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಪತ್ರಿಕಾ ಭವನದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸುದ್ದಿ ಮಾಡುವ ವರಿದಗಾರರಿಗೆ ಒಂದು ನಿರ್ದಿಷ್ಟ ಸ್ಥಳದ ಅವಶ್ಯಕತೆಯಿತ್ತು. ಆ ಬೇಡಿಕೆಯನ್ನು ಈ ದಿನ ಈಡೇರಿಸಿದ್ದೇವೆ. ಮತ್ತು ಅತ ಶೀಘ್ರದಲ್ಲಿ ಈ ಪತ್ರಿಕಾ ಭವನ ಲೋಕಾರ್ಪಣೆಯಾಗಲಿದೆ ಎಂದು ಹೇಳಿದರು.ಈ ವೇಳೆ ಪುರಸಭೆ ಅಧ್ಯಕ್ಷ ಹಣಮಂತ ಸುಣಗಾರ ಮಾತನಾಡಿ, ಪತ್ರಿಕಾ ಭವನಕ್ಕೆ ಪುರಸಭೆ ವತಿಯಿಂದ ಕಾಂಪೌAಡ್ ನಿರ್ಮಿಸಿಕೊಳ್ಳಲು ರೂ.೫ ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಶಾಂತೂ ಹಿರೇಮಠ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಪತ್ರಕರ್ತರಾದ ರವಿಚಂದ್ರ ಮಲ್ಲೇದ, ಸುದರ್ಶನ ಜಂಗಣ್ಣಿ, ಮಹಾಂತೇಶ ನೂಲಾನವರ, ಶಿವಾನಂದ ಆಲಮೇಲ, ಗುರುರಾಜ ಮಠ, ಗುಂಡು ಕುಲಕರ್ಣಿ, ರಮೇಶ ಪೂಜಾರ, ರಾಜೂ…

Read More

ಕಲಕೇರಿ: ಗ್ರಾಮದ ಜೆ ಜೆ ಶಿಕ್ಷಣ ಸಂಸ್ಥೆ ಯ ಆವರಣದಲ್ಲಿ ಕಳೆದ ೧೧ ದಿನಗಳಿಂದ ಹಮ್ಮಿಕೊಂಡ ಆದಿಗುರು ಪಂಚಾಚಾರ್ಯರ ಯುಗಮಾನೋತ್ಸವ, ವೀರಶೈವ ಶಿವಾಚಾರ್ಯರ ಸಮ್ಮೇಳನ, ಸಿದ್ದಾಂತ ಶಿಖಾಮಣಿ ಪ್ರವಚನದ ಸಮಾರೋಪ ಮಂಗಳವಾರ ನಡೆಯಿತು.ಕಾಶಿ ಪೀಠದ ಜಗದ್ಗುರು ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ದರಾಮ‌ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಕಾರ್ಯಕ್ರಮದ ಸನ್ನಿದಾನವನ್ನು ವಹಿಸಿ, ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.ಸ್ವಾಗತ ಸಮಿತಿಯ ಅಧ್ಯಕ್ಷ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ‌ ಸಾಸನೂರ ಮಾತನಾಡಿ, ಪಂಚಪೀಠಗಳು ವೀರಶೈವ ಸಮಗ್ರ ಅಭಿವ್ರದ್ಧಿಯ ವಿಚಾರಧಾರೆಗಳೊಂದಿಗೆ ಸ್ವಸ್ಥ ಸಮಾಜವನ್ನು ನಿರ್ಮಿಸಿ ಭಕ್ತರನ್ನು ಉದ್ಧರಿಸುವ ಕಾರ್ಯವನ್ನು ಮಾಡುತ್ತಿವೆ ಎಂದು ಹೇಳಿದರು.ಇದೇ ವೇಳೆ‌ ವಿವಿಧ ಕ್ಷೇತ್ರಗಳಲ್ಲಿ ಸಾಧನೆ‌ ಮಾಡಿದ 15 ಕ್ಕೂ ಹೆಚ್ಚು ಸಾಧಕರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸಮ್ಮೇಳನದ ಸರ್ವಾಧ್ಯಕ್ಷ ಮಹಾರಾಷ್ಟ್ರದ ದಾರೇಶ್ವರ ಮಠದ ನೀಲಕಂಠ ಶಿವಾಚಾರ್ಯರು,‌‌‌ ಜಾಲಹಳ್ಳಿಯ ಜಗಧಾರಾಧ್ಯ ಜಯಶಾಂತಲಿಂಗೇಶ್ವರ ಶ್ರೀಗಳು, ಪಂಡಿತ್ ರಾಜಗುರು ಗುರುಸ್ವಾಮಿ ಕಲಕೇರಿ, ಹಿರೂರಿನ ಜಯಸಿದ್ದೇಶ್ವರ ಶಿವಾಚಾರ್ಯರು,…

Read More

ವಿಜಯಪುರ: ಅಕ್ರಮವಾಗಿ ಸಾಗಿಸುತ್ತಿದ್ದ 1512 ಲೀ. ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಬಲೇಶ್ವರ ಪಟ್ಟಣದ ಶಾಂತವೀರ ಸರ್ಕಲ್ ಹತ್ತಿರ ಗಸ್ತು ಕಾರ್ಯದಲ್ಲಿದ್ದಾಗ, ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಗ್ರಾಮದಿಂದ ಹೊಸೂರಕ್ಕೆ ಬರುವ ರಸ್ತೆಯಲ್ಲಿ ಮಹಿಂದ್ರಾ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಿಜಯಪುರ ಅಬಕಾರಿ ನಿರೀಕ್ಷಕರ ನೇತೃತ್ವದ ತಂಡ ದಾಳಿ ನಡೆಸಿ, ವಾಹನ ಸಂಖ್ಯೆ.ಕೆಎ-28, ಬಿ-3432 ರಲ್ಲಿರುವ 175 ರಟ್ಟಿನ ಬಾಕ್ಸಗಳಲ್ಲಿ 180 ಎಂ.ಎಲ್.ನ ೪೮ ಮದ್ಯದ ಟೆಟ್ರಾ ಪಾಕಟ್‌ಗಳಂತೆ ಒಟ್ಟು 150 ರಟ್ಟಿನ ಪೆಟ್ಟಿಗೆಗಳಲ್ಲಿ 7200 ಮದ್ಯದ ಟೆಟ್ರಾ ಪಾಕೆಟ್‌ಗಳು ಹಾಗೂ ಹೈವರ್ಡ ವಿಸ್ಕಿ ಎಂಬುದಾಗಿ ಮುದ್ರಿತ 12೦೦ ಮದ್ಯದ ಟೆಟ್ರಾ ಪಾಕೆಟ್ ಸೇರಿದಂತೆ 7,೦8,912 ಮೊತ್ತದ ಒಟ್ಟು 1512 ಲೀಟರ್ ಮದ್ಯ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.ಈ ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಅನೀಲ ಎಂ.ಪತ್ತಾರ ನೇತೃತ್ವ ವಹಿಸಿದ್ದರು.…

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ರಾಜೇಂದ್ರ ಅವರ ಚಿಕಿತ್ಸೆಗಾಗಿ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮಾಡಿದ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ತೀವ್ರ ಅನಾರೋಗ್ಯದ ಕಾರಣ, ಬೆಂಗಳೂರಿನ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದು ಸುಮಾರು 4 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿಕೊಂಡಿದ್ದರು. ಅವರು ಕಷ್ಟದಲ್ಲಿರುವ ಬಗ್ಗೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಗಮನಕ್ಕೆ ತಂದಿತ್ತು. ಪತ್ರಕರ್ತನ ಕುಟುಂಬಕ್ಕೆ ಕೂಡಲೇ ಪರಿಹಾರ ಮಂಜೂರು ಮಾಡುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ. ಹಿರಿಯ ಪತ್ರಕರ್ತ ರಾಜೇಂದ್ರ ಅವರಿಗೆ ಪರಿಹಾರ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆಯನ್ನು ಸಲ್ಲಿಸಿದೆ.

Read More

ಬಿಜೆಪಿಯಿಂದ ಜಾತಿಗಳಲ್ಲಿ ಜಗಳ ಹಚ್ಚುವ ಕೆಲಸ | ಯಥಾಸ್ಥಿತಿ ಕಾಯ್ದುಕೊಳ್ಳದಿದ್ದರೆ ಹೋರಾಟದ ಎಚ್ಚರಿಕೆ ವಿಜಯಪುರ: ಬಿಜೆಪಿ ಸರ್ಕಾರವು ನ್ಯಾ.ಸದಾಶಿವ ಆಯೋಗವನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಒಡಹುಟ್ಟಿದ ಸಹೋದರರಂತಿದ್ದ ಪರಿಶಿಷ್ಟ ಜಾತಿಗಳನ್ನು ಒಡೆದು ಅವರವರಲ್ಲಿಯೇ ಒಳಜಗಳ ಹಚ್ಚುವ ಕೆಲಸಮಾಡಿದ್ದು ಖಂಡನೀಯ ಎಂದು ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ ಚವ್ಙಾಣ ಆಕ್ರೋಶ ವ್ಯಕ್ತಪಡಿಸಿದರು.ಮಂಗಳವಾರ ನಗರದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಬಿಜೆಪಿ ಸರ್ಕಾರದ ಈ ಕ್ರಮದಿಂದ ಸಮಾಜದಲ್ಲಿ ಜಾತಿ-ಜಾತಿಗಳ ನಡುವೆ ಸಂಘರ್ಷಗಳು ಏರ್ಪಟ್ಟುಆಶಾಂತಿ ಮತ್ತು ಆರಾಜಕತೆಗಳು ಸೃಷ್ಟಿಯಾಗಿ, ಸಮಾಜದ ಶಾಂತಿಗೆ ಭಂಗವುಂಟಾಗುತ್ತದೆ ಎಂದು ಆರೋಪಿಸಿದರು.ಕೇಂದ್ರ ಸರ್ಕಾರವು 1976 ರಲ್ಲಿ ಸಂಸತ್‌ನಲ್ಲಿ ಬಿಲ್ ಪಾಸ್ ಮಾಡುವ ಮೂಲಕ ಹಿಂದುಳಿದ ಬುಡಕಟ್ಟುಜನಾಂಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿತ್ತು, ಆದರೆ ರಾಜ್ಯ ಬಿ.ಜೆ.ಪಿ ಸರ್ಕಾರವು ಅವೈಜ್ಞಾನಿಕವಾಗಿರುವ ನ್ಯಾ.ಸದಾಶಿವ ಆಯೋಗವನ್ನು ಜಾರಿಗೊಳಿಸಿರುವುದು ಸಂಪೂರ್ಣ ಅಸಂವಿಧಾನಿಕ ನಿರ್ಣಯವಾಗಿದೆ. ಮತ್ತು ಸಂವಿಧಾನಕ್ಕೆಸಗಿರುವ ಅಪಚಾರವಾಗಿದೆ ಎಂದರು.ಸರ್ಕಾರವು ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸಿರುವದರಿಂದ, ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಿಂದ ಲಂಬಾಣಿ, ಕೊರಮ, ಭೋವಿ, ಕೊರಚ ಹಾಗೂ ಕೊರವ ಜಾತಿಗಳಿಗೆ ಅನ್ಯಾಯವಾಗಲಿದೆ.ಪರಿಶಿಷ್ಟ…

Read More

ವಿಜಯಪುರ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂಸಹ ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನಗಳು ಸಿಗುತ್ತಿಲ್ಲ.ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯನ್ನು ಕಡೆಗಣಿಸುತ್ತಿರುವುದು ಅತ್ಯಂತ ನೊವಿನ ಸಂಗತಿ ಎಂದು ಯುಗದರ್ಶಿನಿ ಫೌಂಡೇಶನ್ ಅಧ್ಯಕ್ಷೆ, ಹಿರಿಯ ಸಾಹಿತಿ ಸರಸ್ವತಿ ಚಿಮ್ಮಲಗಿ ವಿಷಾದಿಸಿದರು.ಮಂಗಳವಾರ ನಗರದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು. ದೇಶವನ್ನು ಮುನ್ನಡೆಸಿಕೊಂಡು ಹೋಗುವಲ್ಲಿ ಮಹಿಳೆಯರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಆದರೆ ರಾಜಕೀಯದಲ್ಲಿ ಸಮಾನ ಅವಕಾಶ ಸಿಗುವುದು ಒತ್ತಟ್ಟಿಗಿರಲಿ, ಈಗ ಆಯಾ ಪಕ್ಷಗಳು ಬಿಡುಗಡೆ ಮಾಡಿದ ಮೊದಲ ಹಂತದ ಪಟ್ಟಿ ನೋಡಿದರೆ ಮಹಿಳಾ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಎಲ್ಲೋ ಅಲ್ಲೊಂದು – ಇಲ್ಲೊಂದು ಎನ್ನುವಂತಿದೆ ಎಂದರು.ಮೀಸಲಾತಿ ಕಸದ ಬುಟ್ಟಿ ಸೇರಿದೆ. ಮಹಿಳೆಯರಿಗೆ ಸಮಾನ ಹಕ್ಕುಗಳನ್ನು, ಸಮಾನ ಅವಕಾಶಗಳನ್ನು ನೀಡಲುಪುರುಷವರ್ಗ ಹಿಂದೇಟು ಹಾಕುತ್ತಿದೆ.ನಾಯಕರಾದವರು “ಮಹಿಳೆಯರಿಗೆ ಸ್ಥಾನಮಾನ ನೀಡಲಾಗುವುದು, ಮಹಿಳೆಯರನ್ನು ಮುಂದೆ ತರಲಾಗುವುದು, ಮಹಿಳಾ ಸಬಲೀಕರಣ ಮಾಡಲಾಗುವುದು” ಎಂದು ಹೇಳುವ ಹಲವಾರು ವಿಚಾರಗಳು ಬರೀ ಭಾಷಣಕ್ಕೆ ಮಾತ್ರ ಸೀಮಿತವಾಗಿವೆ. ಎಲ್ಲ ರಾಜಕೀಯ ಪಕ್ಷಗಳು ಇಂಥ…

Read More