Author: editor.udayarashmi@gmail.com

ವಿಜಯಪುರ: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.ಅಲ್ಪಸಂಖ್ಯಾತರ ಇಲಾಖೆಯಿಂದ ಮಂಜೂರಿಸಿದ ರೂ.೬ ಕೋಟಿ ಅನುದಾನಲ್ಲಿ, ಕೇಂದ್ರ ಬಸ್ ನಿಲ್ದಾಣದಿಂದ ಸರ್ದಾರ ವಲ್ಲಭ ಬಾಯಿ ಪಟೇಲ್ ರಸ್ತೆವರೆಗಿನ ರಸ್ತೆ ಕಾಮಗಾರಿಗೆ, ರೂ.೨ ಕೋಟಿ ಅನುದಾನದಲ್ಲಿ ವಾ.ನಂ.೩೦ರ ವಿಶ್ವೇಶ್ವರಯ್ಯ ರಸ್ತೆಯ ನೀರಿನ ಗಂಜ ಮೂಲಕ ದರ್ಬಾರ್ ಗಲ್ಲಿಯ ಖಾದಿ ಗ್ರಾಮೋದ್ಯೋಗ ವರೆಗೆ ಆಂತರಿಕ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ಮಹಾನಗರ ಪಾಲಿಕೆಯಿಂದ ಮಂಜೂರಿಸಿದ ರೂ.೨ ಕೋಟಿ ಅನುದಾನದಲ್ಲಿ ವಾ.ನಂ.೪ರ ಸೇವಾಲಾಲ ನಗರ ಮತ್ತು ಚಂದು ನಗರದ ಆಂತರಿಕ ರಸ್ತೆ ಕಾಮಗಾರಿಗೆ, ಮಹಾನಗರ ಪಾಲಿಕೆಯಿಂದ ಮಂಜೂರಿಸಿದ ರೂ.೩೦ ಲಕ್ಷ ಅನುದಾನದಲ್ಲಿ ಭೂತನಾಳದಲ್ಲಿ ಮಳೆ ನೀರು ಚರಂಡಿ ಕಾಮಗಾರಿಗೆ, ರೂ.೫೬ ಲಕ್ಷ ಅನುದಾನದಲ್ಲಿ ಸೊಲ್ಲಾಪುರ ಮುಖ್ಯ ರಸ್ತೆಯಿಂದ ಭೂತನಾಳ ತಾಂಡಾ ಮೂಲಕ ಅರಕೇರಿ ಕೂಡುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ರೂ.೧.೯೪ ಕೋಟಿ ಅನುದಾನದಲ್ಲಿ ಸುಕುನ್ ಕಾಲೊನಿಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ವೆಟ್ ವೆಲ್) ನಿರ್ಮಾಣ…

Read More

ವಿಜಯಪುರ: ಪರಿಶಿಷ್ಟ ಜಾತಿಯಲ್ಲಿರುವ ಸಮಾನ ಅವಕಾಶ ವಂಚಿತ ಶೋಷಿತ ತಳ ಸಮುದಾಯಗಳನ್ನು ಮರುವರ್ಗೀಕರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ಆದರೂ ಸಹ ಮುಖ್ಯಮಂತ್ರಿ ಬೊಮ್ಮಾಯಿಯವರು ಒಳ ಮೀಸಲಾತಿ ಘೋಷಿಸಿ ಲಂಬಾಣಿ, ಭೋವಿ ಮೊದಲಾದ ಸಮುದಾಯಗಳಿಗೆ ಅನ್ಯಾಯವೆಸಗಿದ್ದಾರೆಂದು ವಿರೋಧ ಪಕ್ಷದ ಮುಖ್ಯ ಸಚೇತಕ ಮತ್ತು ಕೆಪಿಸಿಸಿ ವಕ್ತಾರ ಪ್ರಕಾಶ್ ಕೆ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಭಾನುವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಸರ್ಕಾರವು ಮೀಸಲಾತಿಯ ಮೂಲ ಪರಿಕಲ್ಪನೆಯಾದ ಸಾಮಾಜಿಕ, ಶೈಕ್ಷಣಿಕ, ಹಿಂದುಳಿದಿರುವಿಕೆಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯಾವ ಪ್ರಮಾಣದಲ್ಲಿ ಯಾವ ಯಾವ ಜಾತಿಗಳು ಹಿಂದುಳಿದಿವೆ ಎಂಬುದನ್ನು ವೈಜ್ಞಾನಿಕ ಮಾನದಂಡಗಳ ಮೂಲಕ ಅಧ್ಯಾಯನ ಮಾಡಿ, ವಸ್ತುನಿಷ್ಠ, ವರದಿ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಪರಿಗಣಿಸದೇ “ಕೇವಲ ಜನಸಂಖ್ಯೆಯ ಆಧಾರದ ಮೇಲೆ ಪರಿಶಿಷ್ಟ ಜಾತಿಯ ಪಟ್ಟಿಯನ್ನು ತಿದ್ದಿ, ಪಹಚ್ಚಿ, ಮರು ವರ್ಗೀಕರಿಸಿ ಮೇಲ್ನೋಟಕ್ಕೆ 5 ಗುಂಪುಗಳನ್ನಾಗಿ ಮಾಡುತ್ತಿರುವುದು ಕಾರ್ಯಸಾಧುವಲ್ಲ. ಕಾರಣ ಮೀಸಲಾತಿಗೆ ಹಿಂದುಳಿದಿರುವಿಕೆ ಮಾನದಂಡವಾದ ಮೇಲೆ ಒಳಮೀಸಲಾತಿ ಹಿಂದುಳಿದಿರುವಿಕೆಯೇ ಮಾನದಂಡವಾಗಬೇಕೆ ಹೊರತು ಜನಸಂಖ್ಯೆಯಲ್ಲ” ಆದ್ದರಿಂದ ಈ ವರ್ಗೀಕರಣ ಅಸಂವಿಧಾನಿಕವಾಗಿದೆ.…

Read More

ಕೊಲ್ಹಾರ: ಧಾರ್ಮಿಕ ಸಮನ್ವತೆ ಸಾಮಾಜಿಕ ಸಮಾನತೆಯ ಸಂದೇಶವನ್ನು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸರಳ ಭಾಷೆಯ ವಚನಗಳ ಮೂಲಕ ನಾಗರಿಕ ಬಂಧುಗಳಿಗೆ ಮನಮುಟ್ಟುವಂತಹ ಕಾರ್ಯವನ್ನು ೧೨ನೇ ಶತಮಾನದಲ್ಲಿ ಶರಣರು ಮಾಡಿರುವದು ದೇಶಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆಯಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದೇವಾಂಗ ಸಮಾಜದ ಸಮುದಾಯಭವನದಲ್ಲಿ ಹಮ್ಮಿಕೊಂಡಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದಿಗAಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು ಮಾತನಾಡಿದರು.ಹಿರೇಮಠದ ವೇದಮೂರ್ತಿ ಮುರುಗಯ್ಯ ಹಿರೇಮಠ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಸಾನಿಧ್ಯ ವಹಿಸಿದ್ದರು.ಸಮಾಜದ ಅಧ್ಯಕ್ಷ ಸಂಗಪ್ಪ ಚೌಡಪ್ಪಗೋಳ, ಉಪಾದ್ಯಕ್ಷ ಸಂಗಪ್ಪ ಗೋಕಾಂವಿ, ಪಟ್ಟಣ ಪಂಚಾಯತ ಸದಸ್ಯ ಅಪ್ಪಸಿ ಮಟ್ಯಾಳ, ವಿಶೇಷ ಉಪನ್ಯಾಸಕರಾಗಿ ಶ್ರೀನಿವಾಸ ಐಹೊಳ್ಳಿ, ಈರಣ್ಣ ಔರಸಂಗ, ದೇವಾಂಗ ಸಮಾಜದ ಪ್ರಮುಖರು ಭಾಗವಹಿಸಿದ್ದರು.

Read More

ಕೊಲ್ಹಾರ: ನಾವುಗಳು ಬರೆಯುವ ಸಾಹಿತ್ಯ ಜಾನಪದವಾಗಿರಲಿ, ಭಾವಗೀತೆಯಾಗಿರಲಿ, ಕವನಗಳೇ ಆಗಿರಲಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಕೊಡುವ ರಚನೆಗಳಾಗಿರಬೇಕು. ಅಂದಾಗ ಮಾತ್ರ ಓದಲು, ಕೇಳಲು ಜನರು ಆಸಕ್ತರಾಗಿರುತ್ತಾರೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ೩ನೇ ವಾರ್ಡಿನ ಶಿವಾಜಿ ಬಡಾವಣೆಯಲ್ಲಿ ಹೆಬ್ಬಾಳೆಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಹಳ್ಳಿ ಹುಡಗಿ ಮಸರ ಗಡಿಗಿ ಎಂಬ ಸಾಮಾಜಿಕ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸಾಹಿತ್ಯದಲ್ಲಿ ಅಶ್ಲೀಲ, ಅಸಹ್ಯಕರವಾದ ಶಬ್ದಗಳನ್ನು ಕವಿಗಳು ಬಳಸುವುದನ್ನು ತಮ್ಮಷ್ಟಕ್ಕೆ ತಾವೇ ಕಡಿವಾಣ ಹಾಕಿಕೊಳ್ಳಬೇಕು. ಭಾರತೀಯರಾದ ನಾವು ಹೆಣ್ಣನ್ನು ಪೂಜ್ಯತಾ ಭಾವದಲ್ಲಿ ಕಾಣುವ ಸ್ವಭಾವದವರು. ಆದಿಶಕ್ತಿ ಅವತಾರದಲ್ಲಿ ಗೌರವಿಸುತ್ತೇವೆ. ಒಬ್ಬ ಮಹಿಳೆ ಮಡದಿಯಾಗಿ, ತಂಗಿಯಾಗಿ, ಅಕ್ಕಳಾಗಿ, ತಾಯಿಯಾಗಿ ಒಂದಿಲ್ಲ ಒಂದು ರೀತಿಯಲ್ಲಿ ಪುರುಷರಿಗೆ ಸಹಕಾರಿಯಾಗಿರುತ್ತಾಳೆ ಅಂತಹ ನಾರಿಯರಿಗೆ ನಾವುಗಳು ಗೌರವ ಕೊಡುವದನ್ನು ಕಲಿಯುವದರ ಜೊತೆಗೆ ಬರವಣಿಗೆಯೂ ಕೂಡ ಗೌರವ ಪೂರ್ವಕವಾಗಿ ಇರಬೇಕೆಂದು ಸಲಹೆ ಕೊಟ್ಟರು.ಗ್ರಾ ಪಂ ಮಾಜಿ ಉಪಾಧ್ಯಕ್ಷ ಈರಯ್ಯ ಮಠಪತಿ ಮಾತನಾಡಿದರು.ಮಾಜಿ ಸಚಿವ ಬೆಳ್ಳುಬ್ಬಿಯವರು ಸರ್ವಜನರನ್ನು ಸಮಾನ ಭಾವದಿಂದ…

Read More

ಚಡಚಣ: ಪರೋಪಕಾರವನ್ನೇ ಜೀವನವನ್ನಾಗಿಟ್ಟುಕೊಂಡು ಬದುಕುವ ಆದರ್ಶ ಪುರುಷರಲ್ಲಿ ಜೇಡರ ದಾಸಿಮಯ್ಯ ಪ್ರಮುಖರಾಗಿದ್ದಾರೆ. ಮಹಿಳಾ ಸಮಾನತೆ, ಅಸ್ಮಿತೆಯ ಬಗ್ಗೆ ತನ್ನ ವಚನದ ಮೂಲಕವೇ ತಿಳಿಸಿದ ಶ್ರೇಷ್ಠ ವಚನಕಾರರಾಗಿದ್ದು, ಆತ್ಮಕ್ಕೆ ಯಾವುದೇ ಜಾತಿ, ಲಿಂಗ ಭೇದವಿಲ್ಲವೆಂದು ಅಂದಿನ ಕಾಲದಲ್ಲಿಯೇ ತಿಳಿಸಿದ ವಚನಕಾರ ಎಂದು ಮೈಂದರಗಿ ಗುರು ಹಿರೇಮಠದ ರೇವಣಸಿದ್ಧ ಪಟ್ಟದದೇವರು ಹೇಳಿದರು.ಪಟ್ಟಣದಲ್ಲಿ ಆಯೋಜಿಸಲಾದ ದೇವರದಾಸೀಮಯ್ಯ ಜಯಂತಿಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಸಾಹಿತಿ ಹಾಗೂ ಸಮುದಾಯದ ಹಿರಿಯ ಮುಖಂಡ ಬಸವರಾಜ ಯಂಕಂಚಿ ಮಾತನಾಡಿ, ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.ಮೈoದರಗಿ ವಿರಕ್ತ ಮಠದ ಮೃತ್ಯುಂಜಯ ಮಹಾಸ್ವಾಮೀಜಿ ಮಾತನಾಡಿ,ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ…

Read More

ಚಡಚಣ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ರಾಜು ಆಲಗೂರ ಅವರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಅವರಿಗೆ ಟಕೆಟ್ ಕೈ ತಪ್ಪಿದರೆ ಜಿಲ್ಲೆಯಾದ್ಯಂತ ಎಸ್ ಸಿ ಬಲಗೈ ಸಮುದಾಯವು ಉಗ್ರ ಹೋರಾಟ ಮಾಡುವುದಾಗಿ ಚಲವಾದಿ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.ಪಟ್ಟಣದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ ಸಿ ಘಟಕದ ಉಪಾಧ್ಯಕ್ಷ ರಾಜು ಸಿಂಗೆ ಮಾತನಾಡಿ,ರಾಜು ಆಲಗೂರ ಅವರು ೧೯೯೦ ರಿಂದಲೂ ಅವಳಿ ಜಿಲ್ಲೆಯಲ್ಲಿ ಡಿಎಸ್ಸೆಸ್ ಸಂಘಟನೆ ಮೂಲಕ ಹತ್ತು ಹಲವು ಹೋರಾಟಗಳಿಂದ ಜನನಾಯಕರಾಗಿ ಬೆಳೆದವರು. ಮಾಜಿ ಸಚಿವ ದಿ. ಬಿ.ಎಂ. ಪಾಟೀಲರು ಇವರಿಗೆ ರಾಜಕೀಯಕ್ಕೆ ಕರೆ ತಂದು ಅವಕಾಶ ಒದಗಿಸಿದರು. ಈಗ ಶಾಸಕ ಎಂ.ಬಿ. ಪಾಟೀಲ ಅವರು ಸಹ ಆಲಗೂರ ಅವರಿಗೆ ಒತ್ತಾಸೆಯಾಗಿ ನಿಂತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಇವರನ್ನು ಲೋಕಸಭೆಗೆ ಸ್ಪರ್ಧಿಸಲು ತಿಳಿಸಿದ್ದರಿಂದ ವಿಧಾನಸಭೆಗೆ ಅವಕಾಶ ಸಿಗಲಿಲ್ಲ. ಹೀಗಿರುವಾಗ ಈ ಸಲವೂ ರಾಜು ಆಲಗೂರ ಅವರಿಗೆ…

Read More

ಸಿಂದಗಿ: ಮುಸ್ಲಿಮರು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆಯಲು ಚಿನ್ನಪ್ಪ ರೆಡ್ಡಿ ಆಯೋಗ ಶೇ ೪ರಷ್ಟು ಮೀಸಲಾತಿ ನೀಡಿ ಈ ಸಮುದಾಯದ ಬಲವರ್ಧನೆಗೆ ಅನುಕೂಲ ಮಾಡಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಶೇಕಡ ನಾಲ್ಕು ಮೀಸಲಾತಿಯನ್ನು ಕಿತ್ತು ಹಾಕಿರುವುದರ ಮೂಲಕ ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದು ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಮನಗೂಳಿ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಸ್ಲಿಂ ಸಮಾಜದಲ್ಲಿ ಅನೇಕ ಜನ ಬಡವರಿದ್ದಾರೆ ಇದನ್ನು ಅರಿಯದೆ ಕೇವಲ ರಾಜಕಾರಣಕ್ಕಾಗಿ ದ್ವೇಷದ ಬೀಜ ಬಿತ್ತಲು ಮೀಸಲಾತಿ ಕಸಿದು ಈ ಸಮುದಾಯದ ಬಡ ಮಕ್ಕಳ ಶಿಕ್ಷಣ ಆರ್ಥಿಕತೆಗೆ, ಸ್ವಾವಲಂಬನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಇದು ಒಂದು ವರ್ಗಕ್ಕೆ ಮಾಡಿದ ಅಪಮಾನ ಎಂದರು.ಪಂಚಮಸಾಲಿ ಸಮುದಾಯ ತನ್ನ ಮೀಸಲಾತಿ ಹಕ್ಕಿಗಾಗಿ, ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಿರಂತರ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ರಾಜ್ಯ ಸರ್ಕಾರ ಈ ಸಮುದಾಯಕ್ಕೂ ಮೀಸಲಾತಿ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವುದು ಖಂಡನೀಯವಾಗಿದೆ. ಮೀಸಲಾತಿ…

Read More

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮದ ನಿವಾಸಿಯಾದ ಲಾಲಪ್ಪ ಭಜಂತ್ರಿ ಎಂಬ ವ್ಯಕ್ತಿಯ ಸೊಸೆಯು ಇತ್ತೀಚೆಗೆ ಅಗ್ನಿಸ್ಪರ್ಶದಿಂದಾಗಿ ತೀವ್ರ ಗಾಯಗೊಂಡಿದ್ದಳು. ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವರು ನೊಂದಿತರ ಮನೆಗೆ ಭೇಟಿ ನೀಡಿ ಅವಳ ಆರೋಗ್ಯವನ್ನು ವಿಚಾರಿಸಿ ವೈಯಕ್ತಿಕವಾಗಿ ಧನಸಹಾಯವನ್ನು ಮಾಡಿ ಮಾನವೀಯತೆಯನ್ನು ಮೆರೆದರು.ಶನಿವಾರ ತಾಲೂಕಿನ ನಾವದಗಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲು ಆಗಮಿಸಿದ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರಿಂದ ಇದರ ಮಾಹಿತಿಯನ್ನು ಪಡೆದ ಶಾಸಕರು ಕಾರ್ಯಕ್ರಮ ಮುಗಿಸಿ ನೇರವಾಗಿ ನೊಂದಿತ ಮಹಿಳೆಯ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯ ಮಾಡಿದರು.ಈ ಸಮಯದಲ್ಲಿ ಮುಖಂಡರಾದ ಸಂಗನಗೌಡ ಹೆಗರಡ್ಡಿ, ಪ್ರಶಾಂತ ಹಾವರಗಿ, ರಾಜುಗೌಡ ಇಬ್ರಾಹಿಂಪೂರ (ನಾವದಗಿ), ಬಸನಗೌಡ ಬಿರಾದಾರ (ಟಿಪಿ). ಸಾಹೇಬಗೌಡ ರಾರಡ್ಡಿ, ನಿಂಗನಗೌಡ ಬಿರಾದಾರ (ಗಡಿಸೋಮನಾಳ) ಇದ್ದರು.

Read More

ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಶನಿವಾರ ತಡರಾತ್ರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ ಅವರು ದಿಢೀರ್ ಭೇಟಿ ನೀಡಿ ಚೆಕ್‌ಫೋಸ್ಟನ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು.ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ ಸೇರಿದಂತೆ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಭಾಗದ ವಿವಿಧ ಸ್ಥಳಗಳಲ್ಲಿ ಅಂತರರಾಜ್ಯ ಚೆಕ್‌ಫೋಸ್ಟ್ಗಳನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊAಡAತಿರುವ ಒಳ ಬರುವ ಮತ್ತು ಹೊರ ಹೋಗುವ ವಾಹನಗಳನ್ನು ಕಡ್ಡಾಯವಾಗಿ ತಪಾಸಿಸಬೇಕು. ಪ್ರತಿ ವಾಹನಗಳ ಚಲನ-ವಲನ ಕುರಿತು ಚಲನ-ವಲನ ವಹಿ ಇಟ್ಟು ನಿರ್ವಹಿಸಬೇಕು. ಎಲ್ಲಾ ವಾಹನಗಳ ವಿವರ ದಾಖಲಿಸಬೇಕು. ಪ್ರತಿ ವಾಹನದ ಮೇಲೆ ನಿಗಾ ವಹಿಸಬೇಕು. ಯಾವುದೇ ರೀತಿಯ ಅಕ್ರಮ ವಸ್ತುಗಳ ಸಾಗಾಣಿಕೆ…

Read More