Author: editor.udayarashmi@gmail.com

ಬದುಕಿನ ಪಯಣದಲ್ಲಿ ಅನೇಕರು ನಮ್ಮೊಂದಿಗೆ ಬರುತ್ತಾರೆ- ಹೋಗುತ್ತಾರೆ. ಹೆತ್ತ ತಾಯಿಯ ಮಡಿಲಿನಿಂದ ಭೂಮಿತಾಯಿಯ ಒಡಲು ಸೇರುವವರೆಗೂ ಇರುವ ನಾಲ್ಕು ದಿನಗಳಲ್ಲಿ ನಮ್ಮ ಕುಟುಂಬದವರೂ ಸೇರಿದಂತೆ ನಾನಾ ತರಹದವರು‌ ನಮ್ಮ‌ ಲೈಫ಼ಲ್ಲಿ ಎಂಟ್ರಿ ಕೊಡುತ್ತಾರೆ ಹಾಗೂ ನಾವೂ ಅನೇಕರ ಜ಼ಿಂದಗಿಯಲ್ಲಿ ಜೀಕುತ್ತೇವೆ. ಇದುವರೆಗಿನ ನಿಮ್ಮ ನಿಮ್ಮ ಬಾಳಿನ ಫ಼್ಲಾಶ್ ಬ್ಯಾಕಿಗೆ ಹೋಗಿ ಸ್ವಲ್ಪ ನೆನಪು ಮಾಡಿಕೊಂಡಾಗ , ಉಸಿರಾರಂಭದಿಂದ ಉಸಿರಾರುವವರೆಗಿನ ನಿಮ್ಮ ದುನಿಯಾದಲ್ಲಿ ಎಷ್ಟು ಮಂದಿ ಜೊತೆಜೊತೆಯಾಗಿ ಬಂದಿದ್ದಾರೆ, ಹೆಜ್ಜೆ ಹೆಜ್ಜೆಗೂ ಸಾಥ್ ಕೊಟ್ಟಿದ್ದಾರೆ, ಕೈ ಹಿಡಿದು ನೆಡೆಸಿದ್ದಾರೆ, ಕೈಕೊಟ್ಟು ಹೋಗಿದ್ದಾರೆ ಎನ್ನುವ ಅರಿಥ್ ಮೆಟಿಕ್ ಕಣ್ಮುಂದೆ ಲೆಕ್ಕಾಚಾರ ಹಾಕಿ ತಕಧಿಮಿ ಹಾಡುತ್ತದೆಯಲ್ಲವೇ..! ಪ್ರತಿಯೊಬ್ಬರ ಬಾಳಲ್ಲೂ ಬರೋರು ಹೋಗೋರು ಕಾಮನ್ ಬಿಡಿ. ಆದರೆ ನನ್ನ ಈ ಬರಹದ ಮೂಲ ಸೆಲೆ…. ; ನಮ್ಮ ಸ್ನೇಹ‌ ಬಂಧನ, ಬಂದು-ಬಾಂಧವ್ಯಗಳಿಂದ ಕೆಲವರು ದೂರ ಹೋಗುವಾಗ ಏನನ್ನೂ ಹೇಳದೇ, ಯಾಕೆ ಎಂದು ತಿಳಿಸದೇ ಕಾರಣ ಕೊಡದೇ…. ಧಿಡೀರನೇ ಅಂತರ್ಧಾನವಾಗಿ ಬಿಡುವ‌ ಬಗ್ಗೆ…! . ಅವರು ನಮ್ಮೊಂದಿಗೆ ಬಂದಿದ್ದಕ್ಕೆ…

Read More

ಅವಳಿ ಜಿಲ್ಲೆಯ ಪೊಲೀಸರಿಗೆ ಐಜಿಪಿ ಎನ್.ಸತೀಶಕುಮಾರ ಸೂಚನೆ ಆಲಮಟ್ಟಿ: ಈಗ ವಿಧಾನಸಬಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳು, ಪಕ್ಷಗಳು ಮತದಾರರ ಆಮಿಷಕ್ಕಾಗಿ ತಂದಿರುವ ವಸ್ತುಗಳನ್ನು ಅನಧಿಕೃತವಾಗಿ ಸಂಗ್ರಹಿಸಿದ್ದರೆ ಅವಳಿ ಜಿಲ್ಲೆಯ ಪೋಲಿಸರು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಬೆಳಗಾವಿ ವಲಯ ಐಜಿಪಿ ಎನ್.ಸತೀಶಕುಮಾರ ಹೇಳಿದರು.ಗುರುವಾರ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಬಾಂಗಣದಲ್ಲಿ ವಿಜಯಪುರ-ಬಾಗಲಕೋಟ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳಲ್ಲಿ 46 ಅಂತರಾಜ್ಯ ಮತ್ತು ಅಂತರ್ಜಿಲ್ಲಾ ಚೆಕ್‌ಪೋಸ್ಟಗಳನ್ನು ಆರಂಭಿಸಲಾಗುವುದು. ಅಷ್ಟೇ ಅಲ್ಲದೇ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ದಿನದ ೨೪ಗಂ. ಕಾರ್ಯನಿರ್ವಹಿಸುತ್ತಾರೆ, ಆ ವೇಳೆಯಲ್ಲಿ ಕಾಲಕಾಲಕ್ಕೆ ಸಿಪಿಐ, ಡಿವೈಎಸ್ಪಿ, ಆಡಿಷನಲ್ ಎಸ್ಪಿ ಮತ್ತು ಎಸ್ಪಿಯವರು ಕಡ್ಡಾಯವಾಗಿ ಪರಿಶೀಲಿಸಲಿ ಸೂಚಿಸಲಾಗಿದೆ ಎಂದರು. ಪ್ರತಿಯೊಬ್ಬ ಪೊಲೀಸ್ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಬಗ್ಗೆ, ಪೊಲೀಸ್ ಮಾದರಿ ನಡತೆಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು…

Read More

ಸೆಕ್ಟರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ದಾನಮ್ಮನವರ ಸೂಚನೆ ವಿಜಯಪುರ: ಮುಂಬರುವ ಚುನಾವಣೆಗೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಕ್ಲೀಷ್ಟಕರ ಹಾಗೂ ಕಷ್ಟಕರ ಪರಿಸ್ಥಿತಿಯನ್ನು ನಿಭಾಯಿಸುವ ಕೌಶಲ್ಯ ರೂಢಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಗ್ರ ಜ್ಞಾನ ಹೊಂದುವ ಮೂಲಕ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಮತದಾನ ಪೂರ್ವಸಿದ್ಧತೆ ಹಾಗೂ ಚುನಾವಣೆಗೆ ನಿಯೋಜಿತ ೨೯-ಬಬಲೇಶ್ವ್ವರ, ೩೦-ಬಿಜಾಪುರ ನಗರ, ೩೧-ನಾಗಠಾಣ ಮತಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಿಯೋಜಿತ ಅಧಿಕಾರಿಗಳು ಆಯೋಗದ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆಯೋಜಿಸಲಾದ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮತಗಟ್ಟೆ ವ್ಯಾಪ್ತಿ ಸೇರಿದಂತೆ ಸಿಬ್ಬಂದಿ ಮತಗಟ್ಟೆಯಲ್ಲಿನ ಮೂಲ ಸೌಕರ್ಯಗಳ ನಿಖರ ಮಾಹಿತಿ ಹೊಂದಿರಬೇಕು. ಗೊಂದಲವಿದ್ದರೆ ತರಬೇತಿಯಲ್ಲಿ ಪರಿಹರಿಸಿಕೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.ಚುನಾವಣಾ ಕಾರ್ಯಕ್ಕೆ ನಿಯೋಜಿತ ಸೆಕ್ಟರ್ ಅಧಿಕಾರಿಗಳಿಗೆ ಪಿಪಿಟಿ ಮೂಲಕ ತರಬೇತಿ ನೀಡಲಾಯಿತು.ಈ ಸಂದರ್ಭದಲ್ಲಿ…

Read More

ಮಾ.31ರಿಂದ ಏ.15 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ | 147 ಪರೀಕ್ಷಾ ಕೇಂದ್ರಗಳು | 40446 ಪರೀಕ್ಷಾರ್ಥಿಗಳು ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜರುಗಿದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 147 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಯಾವುದೇ ರೀತಿಯ ಅನಾನೂಕೂಲವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮಹತ್ವದ ಘಟ್ಟವಾಗಿದೆ. ಅವರ ಜೀವನ ಅಭ್ಯುದಯ, ಏಳಿಗೆಗೆ ಹೆಜ್ಜೆಯಾಗಿದೆ. ನಕಲುಮುಕ್ತವಾಗಿ ಪರೀಕ್ಷೆಗಳನ್ನು ನಡೆಸಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಈ ಪರೀಕ್ಷೆಗಳು ಅತ್ಯಂತ ಮಹತ್ವವಾಗಿರುವುದರಿಂದ ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡಬಾರದು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳನ್ನು ಪ್ರತ್ಯೇಕವಾಗಿ ವ್ಯವಸ್ಥಿತವಾಗಿ ವಿತರಣೆಯಾಗಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು.…

Read More

ರೂ.5.64 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ತಾಳಿಕೋಟಿ: ನಾನು ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಕೆಲವು ಸ್ವಪಕ್ಷೀಯ ಮುಖಂಡರು ಹೊಟ್ಟೆಕಿಚ್ಚಿನಿಂದ ನನ್ನನ್ನು ಟೀಕಿಸುತ್ತಿದ್ದಾರೆ. ಕೇವಲ ಸುದ್ದಿಗೋಷ್ಠಿ ಮಾಡಿ ಇನ್ನೊಬ್ಬರನ್ನು ಟೀಕಿಸುವವರೆಂದೂ ದೊಡ್ಡವರಾಗುವದಿಲ್ಲ. ಕುತಂತ್ರ ರಾಜಕಾರಣ ಮಾಡುವದನ್ನು ನಿಲ್ಲಿಸಿ ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ (ನಡಹಳ್ಳಿ) ಹೇಳಿದರು.ಮತಕ್ಷೇತ್ರದ ತಾರನಾಳ ಗ್ರಾಮದಲ್ಲಿ ರೂ. ೨೩೪ ಲಕ್ಷ ಮೊತ್ತದ ತಾರನಾಳದಿಂದ ಮುದ್ದೇಬಿಹಾಳದವರೆಗಿನ ರಸ್ತೆ ಸುಧಾರಣೆ ರೂ. ೨೫೪ ಲಕ್ಷ ಮೊತ್ತದ ಕೆರೆ ಮೇಲಿನ ರಸ್ತೆ ಅಭಿವೃದ್ಧಿ ಹಾಗೂ ರೂ. ೮೨ ಲಕ್ಷ ಮೊತ್ತದ ತಾರನಾಳ ಸಣ್ಣ ನೀರಾವರಿ ಕೆರೆಯ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಂತರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.ಇವತ್ತು ಈ ಗ್ರಾಮದಲ್ಲಿ ಸುಮಾರು ೫.೬೪ ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ಕೊಟ್ಟಿದ್ದೇನೆ. ಯುಗಾದಿಯ ಈ ಸಂಭ್ರಮದ ಸಂದರ್ಭದಲ್ಲಿ ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಇದು ಎಂದೂ ನಿಲ್ಲದು. ಸುಮಾರು ೪೩೦೦ ಕೋಟಿ ಅನುದಾನ ತಂದು…

Read More

ಅತೀ ಕಡಿಮೆ ದರದಲ್ಲಿ ಉನ್ನತ ಪರೀಕ್ಷೆ | ತ್ವರಿತ ಫಲಿತಾಂಶ | ಮನೆ ಬಾಗಿಲಿಗೆ ಸೇವೆ ವಿಜಯಪುರ: ಐತಿಹಾಸಿಕ ನಗರವಾಗಿ ಗುರುತಿಸಿಕೊಂಡಿರುವ ನಮ್ಮ ವಿಜಯಪುರ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಯನ್ನು ಹೊಂದಬೇಕು, ಹಾಗೂ ವಿಶ್ವದರ್ಜೆಯ ಆರೋಗ್ಯ ಸೇವೆಗಳು ಒಂದೇ ಸೂರಿನಡಿಯಲ್ಲಿ ಸಿಗಬೇಕು ಎನ್ನುವ ದೃಷ್ಠಿಯಿಂದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೆ.ಎಸ್.ಎಸ್ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಯಿತು. ಅದರ ವಿಸ್ತೃತ ರೂಪವಾಗಿ ಇಂದು ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ನ್ನು ಪ್ರಾರಂಭಿಸಲಾಗಿದ್ದು ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯುತ್ತಮ ಹೈಟೆಕ್ ಲ್ಯಾಬ್ ಆಗಿ ಸಾರ್ವಜನಿಕರ ಸೇವೆಗೆ ಸಜ್ಜುಗೊಂಡು ನಿಂತಿದೆ. ವಿಶೇಷ ಸೇವೆಗಳೊಂದಿಗೆ ಕಾರ್ಯವನ್ನು ಪ್ರಾರಂಭಿಸಿರುವ ಡೈಗ್ನೊಸ್ಟಿಕ್ಸ್ ಅತೀ ಕಡಿಮೆ ದರದಲ್ಲಿ ಉನ್ನತವಾದ ಪರೀಕ್ಷೆಗಳನ್ನು ನಡೆಸುತ್ತಿದೆ. ಡ್ರೆöÊವ್ ಥ್ರೂ ಕಲೆಕ್ಷನ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಬಂದಲ್ಲಿ ವಾಹನದಲ್ಲಿಯೇ ರಕ್ತ ಮಾದರಿಯನ್ನು ಸಂಗ್ರಹಿಸಿಕೊಳ್ಳುವ ವ್ಯವಸ್ಥೆ ಇದಾಗಿದ್ದು ಕಾಲು ನೋವು ಹಾಗೂ ತೀವ್ರ ಸಮಸ್ಯೆ ಇರುವ ಜನಗಳಿಗೆ ಇದು ನೆರವು ನೀಡುತ್ತದೆ. ಅದೂ ಅಲ್ಲದೇ ಸಾರ್ವಜನಿಕರಿಗೆಸಮಯ ಹಾಗೂ…

Read More

ವಿಜಯಪುರ: ಹಿಂದೂಗಳ ಅತ್ಯಂತ ವೈಭವದ ನಗರ ವಿಜಯಪುರ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಹನುಮಗಿರಿ ರಸ್ತೆಯ ಖಣಿ ಹತ್ತಿರದ ಮೋಹನ ನಗರದಲ್ಲಿ ಬುಧವಾರ ವೆಂಕಟೇಶ್ವರ ದೇವಸ್ಥಾನದ ಗೀತಾ ಭವನ ಹಾಗೂ ವಾನಪ್ರಸ್ಥಧಾಮ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಗರದಲ್ಲಿ ಅನೇಕ ದೇವಸ್ಥಾನಗಳನ್ನು ದಾಳಿ ಮಾಡಿದ ಕಾಲದಲ್ಲಿ ನಾಶಪಡಿಸಲಾಗಿದೆ. ನಗರದಲ್ಲಿ ಎಲ್ಲಿಯೇ ಉತ್ಖನನ ಮಾಡಿದರೂ ಹಿಂದು ಕುರುಹು ಸಿಗುವ ನಗರ ವಿಜಯಪುರ ಎಂದರು.ಆದಿಲ್ ಶಾಹಿ ಹೋಟೆಲ್ ಬಳಿಯ ಯಾದವರ ಕಾಲದಲ್ಲಿ ಸ್ವಯಂ ಶಂಭುಲಿಂಗ ಪ್ರತಿಷ್ಠಾಪನೆ ಆಗಿದೆ ಎನ್ನುವುದು ಈಚೆಗೆ ಭೇಟಿ ನೀಡಿದಾಗ ತಿಳಿಯಿತು. ಅದನ್ನು ಕೆಲವರು ಮಸೀದಿಯಾಗಿ ಪರಿವರ್ತಿಸಲು ಯತ್ನಿಸಿದ್ದರೂ ಸಫಲರಾಗಿಲ್ಲ. ಅಲ್ಲಿ ಅದರ ಉತ್ಖನನ ಮಾಡಲು ಎ.ಎಸ್.ಐ ಅಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಅಧಿಕಾರಿಗಳು ನಗರಕ್ಕೆ ಭೇಟಿ ನೀಡಿದ್ದು, ಶೀಘ್ರ ಉತ್ಖನನ ಮಾಡಿ, ಪೂಜೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಇದರ ಬಳಿಕ ಮಸೀದಿ ಅಂತ ಬ್ರಿಟಿಷರು ಡಿಕ್ಲೆರ್ ಮಾಡಿರುವ ನರಸಿಂಹ ದೇವಾಲಯ ನಮ್ಮ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು…

Read More

ನಮ್ಮಹೆಮ್ಮೆಯ ಭಾರತ ದೇಶವು, ವೈವಿಧ್ಯಮಯ ಸಂಸ್ಕೃತಿ, ಆಚರಣೆ ಹಬ್ಬಗಳ ಗೂಡಾಗಿದೆ. ಇಲ್ಲಿ ಆಚರಿಸುವ ಪ್ರತಿ ಹಬ್ಬವೂ ತನ್ನದೇ ಆದ ಪೌರಾಣಿಕ, ಸಾಂಸ್ಕೃತಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ.ವಿದೇಶಗಳಲ್ಲಿ ಜನವರಿ ೧ ರಂದು ಹೊಸ ವರ್ಷ ಆಚರಿಸುವ ಹಾಗೆ, ನಮ್ಮ ದೇಶದಲ್ಲಿ ಚೈತ್ರ ಮಾಸದ ಇವತ್ತಿನ (೨೨/೩/೨೦೨೩) ದಿನದಂದು ಯುಗಾದಿಯೊಂದು (ಯುಗ+ಆದಿ) ಹೊಸ ವರ್ಷದ ಸಂಭ್ರಮ ಹೆಸರು ಸೂಚಿಸುವಂತೆ ‘ಹೊಸ ಹೋಗದ ಆರಂಭ’ ಮಾನವರು ಮಾತ್ರವಲ್ಲದೆ, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವ ಗಿಡ-ಮರಗಳೆಲ್ಲವೂ ಹಲವು ಎಲೆಗಳನ್ನು ಉದುರಿಸಿ ಹೊಸ ಚಿಗುರು ಹೊಸ ಎಲೆ ಹೂಗಳು ವಸಂತ ಕಾಲದ ಹೊಸ ವರ್ಷವನ್ನು ಸ್ವಾಗತಿಸುತ್ತವೆ. ಪೌರಾಣಿಕ ಮಹತ್ವ:ಹಿಂದೂ ಪುರಾಣಗಳ ಪ್ರಕಾರ, ಸೋಮಕಾಸುರ ಎಂಬ ರಾಕ್ಷಸನು, ಬ್ರಹ್ಮದೇವನಿಂದ ವೇದಗಳನ್ನು ಕಳವು ಮಾಡಿಕೊಂಡು ಸಮುದ್ರದಲ್ಲಿ ಬಚ್ಚಿಡುತ್ತಾನೆ. ಆಗ ಬ್ರಹ್ಮನು ವಿಷ್ಣುವಿನ ಹತ್ತಿರ ಹೋಗಿ ವೇದಗಳನ್ನು ಮರಳಿ ತರಲು ಸಹಾಯ ಕೇಳಿದಾಗ, ವಿಷ್ಣುವು ‘ಮತ್ಸ್ಯಾವತಾರ’ವನ್ನು ತಾಳಿ ಸಮುದ್ರದಲ್ಲಿರುವ ಸೋಮಕಾಸುರನನ್ನು ಕೊಂದು, ವೇದಗಳನ್ನು ಬ್ರಹ್ಮನಿಗೆ ಹಿಂತಿರುಗಿಸುತ್ತಾನೆ. ಹಾಗೂ ಈ ದಿನದಂದು ಬ್ರಹ್ಮನು ಹೊಸ ವಿಶ್ವವನ್ನು…

Read More