Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತೀಯ ಅಂಚೆ ಇಲಾಖೆ ಇಂದು ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿದೆ‌. ಜನತೆ ಸಹಕಾರ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆಗಳನ್ನು ನೀಡಲು ಸಾಧ್ಯವಾಗುತ್ತದೆ ‌ಎಂದು ವಿಜಯಪುರ ಜಿಲ್ಲೆಯ ಅಂಚೆ ಅಧೀಕ್ಷಕ‌ ಮಹಾಂತೇಶ ತೊಗರಿ ಹೇಳಿದರು.ತಾಲೂಕೀನ ಬೊಮ್ಮನಜೋಗಿ ‌ಗ್ರಾಮದ ಹನುಮಾನ ಮಂದಿರದಲ್ಲಿ ಅಂಚೆ ಜನಸಂರ್ಪಕ ಅಭಿಯಾನದಲ್ಲಿ ಅವರು ಮಾತನಾಡಿದರು.ಅಂಚೆ ಇಲಾಖೆ ಹಲವು ವರ್ಷಗಳಿಂದ ಕೇವಲ ಸಂವಹನ ಹಾಗೂ ಪತ್ರವ್ಯವಹಾರಗಳ ನಿರ್ವಹಣೆಗೆ ಸೀಮಿತವಾಗಿತ್ತು. ಆದರೆ ಇಂದು ಬ್ಯಾಂಕುಗಳಂತೆ ಕೆಲಸ ಮಾಡುತಿದ್ದು ಇಲಾಖೆಯಡಿ ದೊರೆಯುವ ಪಿ ಎಲ್ ಐ ಹಾಗೂ‌ ಆರ್‌ ಪಿ ಎಲ್ ಐ, ಅಪಘಾತ ವಿಮೆ, ಆರ್‌ ಡಿ, ಸುಕನ್ಯ ಯೋಜನೆ, ಪಿ ಪಿ ಎಫ್, ಉಳಿತಾಯ‌ ಖಾತೆ‌ ಸಹಿತ‌ ಇರುವ‌ ಸೇವೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು‌ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಅಂಚೆ ಉಪ‌ಅಧಿಕ್ಷಕರಾದ ಬಿ.ಎಸ.ದಾಸರ್‌ ಅವರು, ಬಡವರ ಹಾಗೂ‌ ಕೂಲಿ ಕಾರ್ಮಿಕರ ಅವಶ್ಯಕತೆಗಳು ಅರಿತುಕೊಂಡ ಅಂಚೆ ಇಲಾಖೆಯು ಜನರ ವಯಸ್ಸಿನ ಅನುಗುಣವಾಗಿ ಹಲವಾರು ಸೇವೆಗಳಾದ…

Read More

ಇಂದು (ಜನೇವರಿ ೩೦) “ಹುತಾತ್ಮ ದಿನ” ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಹಾತ್ಮಾ ಗಾಂಧೀಜಿ ಅವರು, “ಆeಚಿಣh is ಚಿಣ ಚಿಟಿಥಿ ಣime bಟesseಜ buಣ iಣ is ಣತಿiಛಿe bಟesseಜ ಜಿoಡಿ ಚಿ ತಿಚಿಡಿಡಿioಡಿ ತಿho ಜies his ಛಿಚಿuse, ಣhಚಿಣ is ಣಡಿuಣh” ಎಂದು ಹೇಳಿದ್ದಾರೆ. ಸತ್ಯ, ಶಾಂತಿ, ಉಪವಾಸ, ಅಹಿಂಸೆ, ತ್ಯಾಗ ಮತ್ತು ಬಲಿದಾನಗಳೆಂಬ ಮೂಲ ಮಂತ್ರವನ್ನೇ ತನ್ನ ಉಸಿರಾಗಿಸಿಕೊಂಡು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅಮೂಲ್ಯ ಪಾತ್ರ ವಹಿಸಿದವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು. ಬ್ರಿಟಿಷರ ಕಪಿಮುಷ್ಠಿಯಿಂದ ದೇಶವನ್ನು ಸರ್ವತಂತ್ರ ಸ್ವತಂತ್ರಗೊಳಿಸಲು ಅನೇಕ ಹೋರಾಟಗಾರದು, ಮಹಾನ್ ನಾಯಕರು ಮತ್ತು ಕ್ರಾಂತಿಕಾರಿ ದೇಶಭಕ್ತರು ಹೋರಾಡಿದ್ದರ ಫಲಪ್ರದವಾಗಿ ಸ್ವಾತಂತ್ರ್ಯ ದೊರಕಿದೆ. ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಮತ್ತು ವೀರ ಮರಣವನ್ನಪ್ಪಿದ ಯೋಧರು ಮತ್ತು ಹೋರಾಟಗಾರರನ್ನು ಸ್ಮರಿಸುವ ದಿನವೇ ಈ ಹುತಾತ್ಮ ದಿನವಾಗಿದೆ. ಈ ದಿನಕ್ಕೆ ಶಹೀದ್ ದಿವಸ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ತಾಯಂದಿರು ಸಹ ಜೀಜಾಮಾತಾ ಅವರಂತೆ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ನೀಡಿ, ದೇಚಶಭಕ್ತಿ, ಧೈರ್ಯ, ಶೌರ್ಯ, ಸಾಹಸ ಮನೋಭಾವವನ್ನು ಬೆಳೆಸಿ, ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಪ್ರಯತ್ನಿಸಬೇಕು ಎಂದು ಮರಾಠಾ ಸಮಾಜದ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಹೇಳಿದರು.ನಗರದ ಶ್ರೀ ಅಂಬಾಭವಾನಿ ಜಾತ್ರಾ ಮಹೋತ್ಸವಯು ನಾಲ್ಕನೇ ದಿನ ಧರ್ಮಸಭೆ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿ, ಅವರು ನಾಲ್ಕು ದಿನಗಳ ಕಾಲ ಅತಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೀರಿ ತಾಯಿ ಭವಾನಿ ಮಾತಾ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರ್ಶೀವಚನ ನೀಡಿದರು.ಶಿವಾಜಿ ಮಹಾರಾಜರು ಧೀರ ಮತ್ತು ಪರಾಕ್ರಮಿ ಆಗಿದ್ದರು. ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಭಾರತವೇ ತನ್ನ ದೇಶ, ಭಾರತೀಯರೆಲ್ಲರೂ ತನ್ನವರು ಎಂಬ ಭಾವ ಹೊಂದಿದ್ದರು ಶಿವಾಜಿ ಮಹಾರಾಜರಂತೆ ನಮ್ಮ ದೇಶದ ಯುವಕರಲ್ಲಿ ಧೈರ್ಯ, ಸ್ಥೈರ್ಯ ಬೆಳೆಸಬೇಕಿದೆ. ಶಿವಾಜಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿದೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗವು, ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ, ಸಂಶೋಧನಾ ಸಮಿತಿ (SARS), ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ (ASI) ಮತ್ತು ಭಾರತೀಯ ವೈದ್ಯಕೀಯ ಸಂಘ (IMA) ಸಹಯೋಗದೊಂದಿಗೆ ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.ಫೆಬ್ರವರಿ 3 ಮತ್ತು 4 ರಂದು ಮಧ್ಯಾಹ್ನ 12 ರಿಂದ 1ರ ವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ವರ್ಷದ ಧ್ಯೇಯವಾಕ್ಯ “ಅನನ್ಯತೆಯಿಂದ ಒಂದುಗೂಡಿದೆ” ವಿಷಯದ ಕುರಿತು ನಿಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಫೆಬ್ರವರಿ 4 ರಂದು ಮುಂಜಾನೆ 11 ಘಂಟೆಗೆ ಬಿ.ಎಲ್.ಡಿ.ಇ ಮಹಿಳಾ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಸಂಜೀವ ರಾಠೋಡ ಕ್ಯಾನ್ಸರ್ ಕುರಿತು ಉಪನ್ಯಾಸ ನೀಡಲಿದ್ದಾರೆ.ಇದೇ ದಿನ ಮತ್ತೋರ್ವ ಸಹಾಯಕ ಪ್ರಾಧ್ಯಾಪಕ ಮತ್ತು ಕ್ಯಾನ್ಸರ್ ಶಸ್ತ್ರಚಿಕಿತ್ಸಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಜ.28 ರಂದು ಬಂಜಾರ ಸಮುದಾಯದ ತಜ್ಞರ ಸಭೆಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಲ್ಲಿ ಆಯೋಜಿಸಲಾಗಿತ್ತು.ಈ ಸಭೆಯಲ್ಲಿ ಬಂಜಾರ ಸಮುದಾಯದ ಹಿರಿಯ ತಜ್ಞರುಗಳಾದ ಡಾ ಡಿ.ಬಿ. ನಾಯಕ್‌, ಡಾ.ಹರಿಲಾಲ ಪವಾರ, ಪ್ರೊ.ಸಣ್ಣರಾಮ ನಾಯ್ಕ್‌, ಬಿ.ಹೀರಾ ನಾಯ್ಕ್‌, ಭೋಜ್ಯಾ ನಾಯಕ್, ಬಾಲರಾಜ್‌ ನಾಯಕ್ ಇವರುಗಳು ಬಂಜಾರಾ ಸಮುದಾಯದ ಐತಿಹಾಸ, ಭಾಷೆ, ಸಂಸ್ಕೃತಿಯ ಹಿನ್ನೆಲೆಯನ್ನು ಚರ್ಚೆಸಿ, ವರದಿಯನ್ನು ಸಿದ್ದಪಡಿಸಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಮೋತಿಲಾಲ್‌ ಚವ್ಹಾಣ್‌ ಹಾಗೂ ರಿಜಿಸ್ಟ್ರಾರ್‌ ಡಿ.ಎಂ.ರವಿಕುಮಾರ್ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಡಾ.ಎಂ.ರವಿ ನಾಯ್ಕ ಅವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೂರ್ಯ ಪೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕರಿಯರ್ ಅಕಾಡೆಮಿ ಅವರು ನೀಡುವ ರಾಜ್ಯ ಮಟ್ಟದ “ಶಿಕ್ಷಣ ಚೈತನ್ಯ ಪ್ರಶಸ್ತಿ “ಗೆ ಆಕ್ಸಫರ್ಡ್ ಇಂಟರನ್ಯಾಷನಲ್ ಸ್ಕೂಲ್ ಹಾಗೂ ಬಿ ಎಂ ಪಾಟೀಲ್ ಪ್ರೌಢ ಶಾಲೆ ಗುಬ್ಬೆವಾಡ ಶಾಲೆಯನ್ನು ಆಯ್ಕೆ ಮಾಡಿ ಆ ಪ್ರಶಸ್ತಿ ಯನ್ನು ನೀಡಿದ್ದಕ್ಕಾಗಿ ಗಣರಾಜ್ಯೋತ್ಸವ ದಿನದಂದು ಊರಿನ ಎಲ್ಲ ಗಣ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಸೇರಿ ಶ್ರೀ ಅಪ್ಪಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾಪೂಗೌಡ ಎಂ ಪಾಟೀಲ್ ಅವರಿಗೆ ಸನ್ಮಾನಿಸಿ, ಗೌರವಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕತೆ ಬೆಳದಂತೆ ಮೋಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ತೀರ ಆತಂಕಕಾರಿ ಸಂಗತಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ, ಸುಪ್ತವಾದ ಕಲೆ-ಕೌಶಲ್ಯ ಅನಾವರಣಗೊಳ್ಳಲು ಸಾಂಸ್ಕೃತಿಕ ವೇದಿಕೆಗಳು ಇಂದಿನ ಅಗತ್ಯತೆಯಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅವರು ಅಭಿಪ್ರಾಯಪಟ್ಟರು.ಅವರು ಮಾತನಾಡುತ್ತಾ, ಪ್ರತಿಯೊಂದು ಮಗುವಿನಲ್ಲಿ ಒಂದೊಂದು ವಿಶಿಷ್ಟವಾದ ಪ್ರತಿಭೆ ಮತ್ತು ನೈಪುಣ್ಯತೆ ಇದ್ದೇ ಇರುತ್ತದೆ. ಆ ಪ್ರತಿಬೆಯು ಸಮಾಜದ ಮುಖ್ಯವಾಹಿನಿಗೆ ಬರಲು ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ವೇದಿಕೆ ಕಲ್ಪಿಸಿಕೊಡಬೇಕು. ಅಳಿವಿನ ಅಂಚಿನಲ್ಲಿರುವ ನಮ್ಮ ದೇಶೀಯ ಸಂಗೀತ, ಸಾಹಿತ್ಯ, ಕಲೆ-ಸಂಸ್ಕೃತಿ, ಗರತಿಯ ಹಾಡುಗಳು, ಕೋಲಾಟ, ನೃತ್ಯ, ಯಕ್ಷಗಾನ, ಶಿವತಾಂಡವ ಇವೆಲ್ಲವನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ನಟರಾಜ ಡ್ಯಾನ್ಸ್ ಅಕ್ಯಾಡೆಮಿಯ ಸುಮಾರು ೬೦ ಕ್ಕೂ ಹೆಚ್ಚು ಮಕ್ಕಳಿಂದ ಹೇ ಶಾರದೆ, ವೀಣಾ ಪುಸ್ತಕ, ಗರುಡ…

Read More

ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ದೇಶ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ನೀಡಿ ತನ್ನ ನಾಯಕನನ್ನು ಆರಿಸುವ ಸೌಭಾಗ್ಯ ಕಲ್ಪಿಸಿದರೂ ಇನ್ನೂ ಶೇ.೧೦೦ ರಷ್ಟು ಮತದಾನವಾಗದಿರೋದು ದುರದೃಷ್ಟಕರ ಸಂಗತಿ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಚುನಾವಣಾ ಆಯೋಗ, ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು. ಕೆಲವರು ನನ್ನ ಮತದಿಂದ ಏನು ಬದಲಾವಣೆ ಆಗುತ್ತದೆ ಎಂದು ನಿರ್ಲಕ್ಷ ತೋರಿಸುವದು ತಪ್ಪು. ಒಂದು ಮತವೂ ಫಲಿತಾಂಶವನ್ನು ಬದಲಿಸುವ ಶಕ್ತಿ ಹೊಂದಿದೆ ಎನ್ನುವ ಸತ್ಯವನ್ನು ಪ್ರತಿಯೊಬ್ಬರು ಅರಿಯಬೇಕು. ಚುನಾವಣೆ ಸಮಯದಲ್ಲಿ…

Read More

25 ಶಾಸಕರ ನಿಗಮ-ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯ | ಆದೇಶ ಹೊರಡಿಸಿದ ರಾಜ್ಯ ಸರ್ಕಾರ | ಬೆಂಗಳೂರು: 25 ಶಾಸಕರ ನಿಗಮ – ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಈ ನೇಮಕಾತಿಯು ಜನವರಿ 26, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಯಾರೆಲ್ಲಾ ಮುಂದುವರಿಕೆ?ಎನ್.ಎ. ಹ್ಯಾರಿಸ್: ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).ಎಸ್.ಆರ್. ಶ್ರೀನಿವಾಸ್ (ವಾಸು): ಅಧ್ಯಕ್ಷರು, ಕೆಎಸ್‌ಆರ್‌ಟಿಸಿ (KSRTC).ಕೆ.ಎಂ.…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಜೇಮ್ಸ್ ಎಲ್ಲೀಸ್ ಅವರು, “ವೃತ್ತಪತ್ರಿಕೆಗಳು ಈ ಜಗತ್ತಿನ ಕನ್ನಡಿ ಇದ್ದಂತೆ” ಎಂದು ಹೇಳಿದ್ದಾರೆ. ಅಂದರೆ ವಿಶ್ವದೆಲ್ಲೆಡೆ ನಡೆದ ಘಟನೆ, ಪ್ರಚಲಿತ ಮತ್ತು ಮುಂದೆ ನಡೆಯಬಹುದಾದ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ಒಂದು ಪರಿಣಾಮಕಾರಿ ಸಂವಹನ ಮತ್ತು ಮಾಧ್ಯಮವಾಗಿದೆ. ಪ್ರತಿಯೊಬ್ಬರೂ ಬೆಳಿಗ್ಗೆ ಎದ್ದ ಕೂಡಲೇ ಕೈಯಲ್ಲಿ ಟೀ ಅಥವಾ ಕಾಫಿ ಹಿಡಿದು ವೃತ್ತಪತ್ರಿಕೆಯನ್ನು ಒದುತ್ತಿರುವದನ್ನು ನಾವೆಲ್ಲರೂ ಕಂಡಿದ್ದೇವೆ. ರಾಜ್ಯ, ದೇಶ-ವಿದೇಶಗಳ ಸುದ್ದಿಗಳನ್ನು ಪ್ರತಿ ಮನೆಗೆ ತಲುಪಿಸುವ ಏಕೈಕ ಸಾಧನವೆಂದರೆ ಅದುವೇ ವೃತ್ತಪತ್ರಿಕೆ. ನಾವು ಇಡೀ ವಿಶ್ವದ ದಶ ದಿಕ್ಕುಗಳ (ನಾರ್ಥ, ಈಸ್ಟ್, ವೆಸ್ಟ್ & ಸೌಥ್) ದೈನಂದಿನ ದಿನಚರಿ ಮತ್ತು ಆಗಿ ಹೋದ ಘಟನೆಗಳ ಬಗ್ಗೆ ತಿಳಿಸುವ ಪತ್ರಿಕೆಯ ಕಾರ್ಯ ಶ್ಲಾಘನೀಯ. ನಮಗೆ ಜಗತ್ತಿನ ಎಲ್ಲ ಅಗು-ಹೋಗುಗಳ ಕುರಿತು ತಿಳಿಸಿಕೊಡುವುದೇ ವೃತ್ತಪತ್ರಿಕೆ. ಇಂದಿನ ಡಿಜಿಟಲ್ ಯುಗದಲ್ಲಿ ವೃತ್ತಪತ್ರಿಕೆಯು ಇ-ಪೇಪರ್, ಸಾಮಾಜಿಕ ಜಾಲತಾಣ ಮತ್ತು ವಿವಿಧ ವೆಬಸೈಟಗಳ ಮೂಲಕವೂ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸುತ್ತಾ…

Read More