Author: editor.udayarashmi@gmail.com

ಹೆಚ್ ಡಿ ಕೋಟೆ ಹಿಂದೂ ಸಮಾಜೋತ್ಸವ | ಹಿಂದೂ ಜಾಗರಣಾ ವೇದಿಕೆಯ ಉಲ್ಲಾಸ್ ಜೀ ಅಭಿಮತ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಪ್ರಯುಕ್ತ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ನಡೆಯಿತು.ಚಾಮುಂಡೇಶ್ವರಿ ದೇವಾಲಯದಿಂದ ಹೊರಟ ಭಾರತಮಾತಾ ರಥಯಾತ್ರೆ ವಿವಿಧ ಕಲಾತಂಡಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಾಗಿ ಒಂದನೇ ಮುಖ್ಯರಸ್ತೆ ಬಾಪೂಜಿ ಸರ್ಕಲ್ ಹತ್ತಿರ ಇರುವ ಹಳೆ ಆಸ್ಪತ್ರೆ ಮೈದಾನದಲ್ಲಿ ಸಮಾಪ್ತಿಗೊಂಡಿತ್ತು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಬಿಡುಗಲು ಪಡುವಲು ವಿರಕ್ತ ಮಠದ ಮಹಾದೇವಸ್ವಾಮಿಗಳು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.ಹಿಂದೂ ಜಾಗರಣಾ ವೇದಿಕೆಯ ಉಲ್ಲಾಸ್ ಜೀ ಮಾತನಾಡಿ, ಎಲ್ಲಿಯವರೆಗೆ ಧರ್ಮ ಸುರಕ್ಷಿವಾಗಿರುತ್ತೋ ಅಲ್ಲಿಯವರೆಗೆ ರಾಷ್ಟ್ರ ಸುರಕ್ಷಿತವಾಗಿತ್ತೆ. ಭಾರತದ ಶಕ್ತಿಯನ್ನು ಕುಗ್ಗಿಸಲು ಸುತ್ತಮುತ್ತಲಿನ ರಾಷ್ಟ್ರಗಳಲ್ಲಿ ದಂಗೆ ಎಬ್ಬಿಸಲಾಗುತ್ತಿದೆ. ಬೆಂಗಳೂರಿನ ಕೆಜೆ, ಡಿಜೆ ಹಳ್ಳಿ, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಗಳ ಹಿಂದೆ ವಿದೇಶ ಶಕ್ತಿಗಳ ಕೈವಾಡ ಇದೆ. ಮತೀಯ ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿವೆ. ಇದನ್ನು ತಡೆಯಬೇಕಾದರೆ ಹಿಂದೂಗಳು ಎದ್ದು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಮಾಜಿಕ, ಸಹಕಾರ ರಂಗದಲ್ಲಿ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ದಿ.ಬಿ.ಎಸ್.ಪಾಟೀಲ ಮೇರುವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ವಕೀಲ ಎಸ್.ಬಿ.ಪಾಟೀಲ ಹೇಳಿದರು.ತಾಲ್ಲೂಕಿನ ನಿವಾಳಖೇಡ ಗ್ರಾಮದಲ್ಲಿ ಬುಧವಾರ ಜರುಗಿದ ಸಹಕಾರಿ ಕ್ಷೇತ್ರದ ಧುರೀಣ ದಿ:ಬಿ.ಎಸ್.ಪಾಟೀಲ ಇವರ ನಾಲ್ಕನೆಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದೇವರಹಿಪ್ಪರಗಿ ಶ್ರೀಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಸತತ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯ ಮೂಲಕ ಮನೆಮಾತಾಗಿದ್ದ ಪಾಟೀಲರು ಯಾವುದೇ ವಿವಾದಗಳಿಗೆ ಅವಕಾಶ ನೀಡದೇ ಸದಾ ಹಸನ್ಮುಖಿಯಾಗಿ, ಗ್ರಾಹಕರ ಮನೋಭಾವನೆಗಳಿಗೆ ಸ್ಪಂದಿಸುವುದರ ಮೂಲಕ ಬ್ಯಾಂಕ್‌ನ್ನು ಪ್ರಗತಿಪಥದಲ್ಲಿ ಮುನ್ನಡೆಸಿ ಸಮಾಜಕ್ಕೆ ಕೊಡುಗೆ ನೀಡಿದವರು. ಇಂತಹ ಮಹನೀಯರ ಆದರ್ಶಗಳನ್ನು ಇಂದಿನ ಸಹಕಾರ ರಂಗದ ಇತರರು ಮೈಗೂಡಿಸಿಕೊಳ್ಳಬೇಕು ಎಂದರು.ಬಸವನ ಬಾಗೇವಾಡಿ ಮುತ್ತಯ್ಯ ಸ್ವಾಮೀಜಿ ಹಾಗೂ ಜಂಬಲದಿನ್ನಿ ಸಿದ್ಧರಾಮ ದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಲೋಕೋಪಯೋಗಿ ಇಲಾಖೆಯ ನಿವೃತ್ತ ಇಇ ಬಿ.ಬಿ.ಪಾಟೀಲ, ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ವೈ.ಬಿ.ಪಾಟೀಲ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ವಿಶೇಷ ಸಾಧಕರಿಗೆ ಕೊಡಮಾಡುವ ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಯನ್ನು ನಗರದ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಡಿ.ಎನ್.ಧರಿ ಅವರಿಗೆ ಬುಧವಾರ ಪ್ರದಾನ ಮಾಡಲಾಯಿತು.ಜ.28 ರ ಇಳಿಹೊತ್ತು ನಗರದಲ್ಲಿ ನಡೆದ ‘ಜ್ಞಾನಸಿರಿ ಉತ್ಸವ-2026’ ಸಮಾರಂಭದಲ್ಲಿ ಮನುಗೂಳಿಯ ಸಂಗನಬಸವ ಶಿವಾಚಾರ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಮತ್ತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಸೇರಿದಂತೆ ಅನೇಕ ಗಣ್ಯರು ಡಾ. ಡಿ.ಎನ್.ಧರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Read More

ಚಡಚಣದಲ್ಲಿ ವಿವಿಧ ಇಲಾಖೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭರವಸೆ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲಾಧಿಕಾರಿ ಡಾ| ಆನಂದ.ಕೆ. ಅವರು ಬುಧವಾರ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಸಮುದಾಯ ಆರೋಗ್ಯ ಕೇಂದ್ರ, ಬಿಸಿಎಮ್ ವಸತಿಗೃಹ, ಅಂಗನವಾಡಿ ಕೇಂದ್ರ, ಭೂಮಿ ಕೇಂದ್ರ, ತಹಶೀಲದಾರರ ಕಾರ್ಯಾಲಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಪರಿಶೀಲಿಸಿದರು.ಪರಿಶೀಲನೆಯ ವೇಳೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಸೇವೆಗಳ ಸ್ಥಿತಿ, ಸಿಬ್ಬಂದಿ ಹಾಜರಾತಿ, ಔಷಧಿ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯಬದ್ಧ ಸೇವೆ ನೀಡುವಂತೆ ಹಾಗೂ ಔಷಧಿಗಳನ್ನು ಹೊರಗಡೆಯಿಂದ ಬರೆದುಕೊಡಬಾರದು, ಡಯಾಲಿಸಿಸ್ ವಿಭಾಗದಲ್ಲಿ ಕೇವಲ 2 ಹಾಸಿಗಳು ಇದ್ದು, ಹೆಚ್ಚುವರಿ ಹಾಸಿಗೆಗಳ ಬೇಡಿಕೆ ಇಟ್ಟಿದ್ದು, ನಾನು ಸರಕಾರದ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದ ಅವರು, ಈ ಆಸ್ಪತ್ರೆಯನ್ನು ತಾಲೂಕಾ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪತ್ರಕರ್ತರು ಕೇಳಿದಾಗ ತಾಲೂಕಾ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಬೇಕಾದರೆ ವೈದ್ಯರ ಕೊರತೆ ಇದೆ. ಅದೂ ಅಲ್ಲದೇ…

Read More

“ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಪ್ರದೇಶಗಳ ಅನೇಕ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ, ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ ಕೂಡ ಒಬ್ಬರಾಗಿದ್ದಾರೆ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಅಭಿನಂದಾನ ಸಮಿತಿ ವಿಜಯಪುರ ಇವರ ಸಹಯೋಗದಲ್ಲಿ ಆಯೋಜಿಸಿದ್ದ “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿ಼ಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಾರತವು ಅಪಾರ ಭಾಷಾ ವೈವಿಧ್ಯತೆಯನ್ನು ಹೊಂದಿರುವ ದೇಶವಾಗಿದ್ದು, ವಿವಿಧ ಭಾಷೆಗಳ ಮೂಲಕ ಅನೇಕ ಸಮುದಾಯಗಳು ಹಾಗೂ ಸಮಾಜಗಳ ಬೆಳವಣಿಗೆಯಲ್ಲಿ ಪತ್ರಿಕೋದ್ಯಮ ಮಹತ್ವದ ಪಾತ್ರ ವಹಿಸಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಸಂತೋಷಗೌಡ ಬಿ.ಪಾಟೀಲ, ದತ್ತಾತ್ರೇಯ ಹೊಸಮಠ, ಅಲ್-ಅಮೀನ್ ವೈದ್ಯಕೀಯ ಕಾಲೇಜಿನ ಡಾ.ಆಶ್ಪಾಕ ಅಹ್ಮದ ಕಕ್ಕೇರಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಗೋವಿಂದ ಎಲ್.ರಾಠೋಡ ಭಾಗವಹಿಸಿದ್ದರು.ಈ ಶಿಬಿರದಲ್ಲಿ 101 ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಅವರಿಂದ 2024 ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ನೀಡಲು ಮಕ್ಕಳ ಸಾಹಿತಿಗಳಿಂದ ಪುಸ್ತಕಗಳನ್ನು ಆಹ್ವಾನಿಸಿದೆ.2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುದರ ಬಗ್ಗೆ ಸ್ಪಷ್ಠವಾಗಿ ನಮೂದಿಸಬೇಕು. ಪ್ರಶಸ್ತಿಗಾಗಿ ಪರಿಗಣಿಸಲು-ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ದಿನಾಂಕ : 20-02-2026ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂ:0836-2465490 ವಿಳಾಸಕ್ಕೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8050392209, 7204396275,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಜನವರಿ 30 ರಂದು ನಗರದ ಮೀನಾಕ್ಷಿ ಚೌಕ್‍ನಲ್ಲಿ ಬೆಳಿಗ್ಗೆ 11 ಗಂಟೆಗೆ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆ ಹಾಗೂ ಅಚ್ಚುಕಟ್ಟು ನಿರ್ವಹಣೆಗಾಗಿ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವೇದಿಕೆ ನಿರ್ಮಾಣ, ಕಾರ್ಯಕ್ರಮದ ಇತರ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಬ್ಯಾನರ್ ವ್ಯವಸ್ಥೆ, ಭಜನೆ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರ್ಯತೆ ಮತ್ತು ಅತ್ಯುತ್ತಮವಾಗಿ ಆಚರಿಸಲು ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಭಾಷಣ-ಚರ್ಚೆಗಳನ್ನು ಏರ್ಪಡಿಸುವುದು. ಈ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆಯ ಮೂಲ ಉದ್ಧೇಶಗಳ ಕುರಿತು ಸಾಂಸ್ಕøತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸುವುದು, ಮಹಾತ್ಮಾ ಗಾಂಧೀಜಿಯವರ ವೃತ್ತದವರೆಗೆ ಪಾದಯಾತ್ರೆ ಮೂಲಕ ತೆರಳಿ ಗಾಂಧೀಜಿ ಪ್ರತಿಮೆ ಮಾಲಾರ್ಪಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.ಜ‌. 29 ರಂದು ಗುರುವಾರ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ‌ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಕೇಂದ್ರ…

Read More

ಭ್ರಷ್ಟಾಚಾರದ ಕೂಪವಾಗಿದ್ದ ಮನರೆಗಾ ಗೆ ಮುಕ್ತಿ | ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಪಿಎ ಆಡಳಿತಾವಧಿಯ ಮನರೆಗಾ ಯೋಜನೆಯು ಭ್ರಷ್ಟಾಚಾರ, ಅಸಮರ್ಪಕ ಅನುಷ್ಠಾನ ಮತ್ತು ಸುಳ್ಳು ಆಸ್ತಿ ಸೃಷ್ಟಿಯ ಕೇಂದ್ರವಾಗಿತ್ತು. ಈ ವೈಫಲ್ಯಗಳನ್ನು ಸರಿಪಡಿಸಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್ಡಿಎ ಸರ್ಕಾರವು ಕ್ರಾಂತಿಕಾರಿ ‘ವಿಬಿ-ಜಿ ರಾಮ್ ಜಿ’ (VB-G RAM G Act, 2025) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು.ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಆಯೋಜಿಸಲಾಗಿದ್ದ ‘ವಿಬಿ-ಜಿ ರಾಮ್ ಜಿ’ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.ಯುಪಿಎ vs ಎನ್ಡಿಎ ಹೋಲಿಕೆ: “ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ ಶೇ. 17.6 ರಷ್ಟು ವೈಯಕ್ತಿಕ ಆಸ್ತಿ ಸೃಷ್ಟಿಯಾಗಿದ್ದರೆ, ಎನ್ಡಿಎ ಅವಧಿಯಲ್ಲಿ ಇದು ಶೇ. 62.95 ಕ್ಕೆ ಏರಿಕೆಯಾಗಿದೆ. ಹಳೆಯ ಯೋಜನೆಯಲ್ಲಿ 290 ಕೋಟಿ…

Read More