Author: editor.udayarashmi@gmail.com

ಕಲಕೇರಿಯಲ್ಲಿ ಜಗದ್ಗುರುಗಳ ಸಾರೋಟ ಮೆರವಣಿಗೆ | ರಕ್ತದಾನ ಶಿಬಿರ | ಉಚಿತ ಆರೋಗ್ಯ ತಪಾಸಣಾ ಶಿಬಿರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮಹಾ ಸಂಸ್ಥಾನಮಠ ಜಾಲಹಳ್ಳಿ-ಕಲಕೇರಿಯ ಪೀಠಾಧಿಪತಿಗಳಾದ ಶಿವಾಚಾರ್ಯ ರತ್ನ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ೭೦ನೇ ವರ್ಷದ ಹುಟ್ಟುಹಬ್ಬದ ವರ್ಧಂತಿ ಮಹೋತ್ಸವ ಹಾಗೂ ಅಭಿನಂದನಾ ಸಮಾರಂಭ ಸೇರಿದಂತೆ ವಿವಿದ ಧಾರ್ಮಿಕ ಕಾರ್ಯಕ್ರಮಗಳಿಗೆ ಜೆ ಜೆ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಓಂಕಾರ ದ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.ಪಂಚರಂಗ ಸಂಸ್ಥಾನ ಗದ್ದುಗೆ ಮಠದ ಶ್ರೀಗುರುಮಡಿವಾಳೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು.ನಂತರ ಜಿಲ್ಲಾ ಏಡ್ಸ್ ಹಾಗೂ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ಅಧ್ಯಕ್ಷತೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸುಮಾರು ೭೧ ಜನ ಸ್ವಯಂಪ್ರೇರಿತರಾಗಿ ಪೂಜ್ಯರ ೭೦ನೇ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಮಾಡಿದರು.ವಿಜಯಪುರದ ಶ್ರೀಗೌರಿ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಮತ್ತು ಸುಚಿರಾಯು ಆಸ್ಪತ್ರೆಯ ಡಾ. ಶಂಕರರಾವ್ ದೇಶಮುಖ, ಡಾ.ರಾಜೇಶ್ವರಿ ದೇಸಾಯಿ ಮತ್ತು ಡಾ.ಸಂತೋಷಕುಮಾರ ಗಲಗಲಿ ಇವರಿಂದ ಉಚಿತ…

Read More

ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪ ಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಆಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು. ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ೨೪-೧೨-೨೦೨೫ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್…

Read More

೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಅಧಿಕಾರಿಗಳಿಗೆ ಡಿಸಿ ಡಾ. ಕೆ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.೨೧ ರಿಂದ ೨೪ರವರೆಗೆ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸಕ್ತ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿಯೋಜನಗೊಂಡ ವೈದ್ಯರು,ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.ತಮ್ಮ ವ್ಯಾಪ್ತಿಯಲ್ಲಿನ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಕುರಿತು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ದಿನದ ೨೪ ಗಂಟೆಯೂ ಲಸಿಕಾ ಕೇಂದ್ರಗಳನ್ನು ತೆರೆಯುವಂತೆ…

Read More

ವಿಧಾನಸಭೆಯಲ್ಲಿ ‘ಗೃಹ ಲಕ್ಷ್ಮಿ’ ಕೋಲಾಹಲ :ಬಿಜೆಪಿ ಸಭಾತ್ಯಾಗ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ಬುಧವಾರ ನಡೆಯಿತು.ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು “ವಿತರಿಸದಿರುವ” ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.ಪ್ರಮುಖವಾಗಿ ಗೃಹ ಲಕ್ಷ್ಮಿ ಯೋಜನೆಯ ಪಾವತಿ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವು ಸದನಕ್ಕೆ “ತಪ್ಪು” ಮಾಹಿತಿಯನ್ನು ಒದಗಿಸುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿದ ನಂತರ ಪ್ರತಿಭಟನೆ ನಡೆಯಿತು. ಬಿಜೆಪಿ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗಿದರು, ಇದು ಸದನದ ಕಲಾಪವನ್ನು ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲು ಕಾರಣವಾಯಿತು. ಸದನಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ, ಸಿಂದಗಿ.ಶಾಖೆಯ ವತಿಯಿಂದ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಹೆಚ್ಚುತ್ತಿರುವ ಚಳಿಯನ್ನು ಗಮನದಲ್ಲಿಟ್ಟುಕೊಂಡು, ವೃದ್ಧರು ಮತ್ತು ಅಸಹಾಯಕರನ್ನು ಹಾಗೂ ಅತ್ಯಂತ ಬಡ ಕುಟುಂಬದ ಜನರಗೆ ಚಳಿಯಿಂದ ರಕ್ಷಿಸಿಕೊಳ್ಳಲು ಬುಧವಾರ ಕಂಬಳಿಗಳನ್ನು ವಿತರಿಸಲಾಯಿತು.ಈ ವೇಳೆ ಎನ್.ಕೆ.ಚೌದರಿ ಗುರುಗಳು ವೇದಿಕೆ ಉದ್ದೇಶ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಿ, ವೇದಿಕೆ ಯಾವುದೆ ಜಾತಿ ಭೇದ ಮತ-ಪಂಥ ಅನ್ನದೆ ಬಡವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆಯ ಸಂದೇಶ ಸಾರುತ್ತಿದೆ. ಎರಡು ವರ್ಷಗಳಿಂದ ನಮ್ಮ ಶಾಲೆಯ ಮಕ್ಕಳಿಗೆ ಬ್ಯಾಗ್, ನೋಟ ಪುಸ್ತಕ ಕೊಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಿದೆ. ಇಂದು ನಾವು ಎಲ್ಲರೂ ಸಹಾಯದ ಭಾವನೆ ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.ವೇದಿಕೆಯ ಮೌಲಾನಾ ದಾವುದ ನದ್ವಿ ಮಾತನಾಡಿ, ಮಾನವನಿಗೆ ಮಾನವನೆ ಪರಿಹಾರ. ಆದ ಕಾರಣ ನಾವು ಎಲ್ಲರೂ ಒಗ್ಗಟ್ಟಿನಿಂದ ಬಾಳುವುದು ಬಹಳ ಮುಖ್ಯ. ಸುಂದರ ಸಮಾಜದ ನಿರ್ಮಾಣ ಪರಸ್ಪರ ಸಹಕಾರ ಸಹಾಯದಿಂದ ಸಾದ್ಯ. ಮಾನವೀಯ ಮೌಲ್ಯಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್ ಬೋರ್ಡಗಳನ್ನು ಅಳವಡಿಸಿ ಮಕ್ಕಳಿಗೆ ಅತ್ಯಾಧುನಿಕ ರೀತಿಯಲ್ಲಿ ಉನ್ನತಮಟ್ಟದ ಶಿಕ್ಷಣ ನೀಡುತ್ತಿದೆ. ಈ ಎಲ್ಲ‌ ಅಂಶಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ತೆಲಂಗಾಣ ರಾಜ್ಯದ ಹೈದರಾಬಾದಿನಲ್ಲಿ ಶುಕ್ರವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದದಲ್ಲಿ ಅಕಾಡೆಮಿದ ಅಧಿಕಾರಿಗಳು ಶಾಲೆಯ ಪ್ರಾಚಾರ್ಯ ಡಾ. ಶೈಜೂ ಕೆ. ನಾಯರ ಪ್ರಶಸ್ತಿ ಸ್ವೀಕರಿಸಿದರು.ಶಾಲೆಗೆ ಪ್ರಶಸ್ತಿ‌ ಲಭಿಸಿರುವುದಕ್ಕೆ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಧಾನ ಕಾರ್ಯದರ್ಶಿ…

Read More

ಬಾಗಲಕೋಟ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ ನೀಡಬೇಕು. ಜ್ಞಾನದಿಂದ ಮಾತ್ರ ಎಲ್ಲವನ್ನು ಗೆಲ್ಲಬಹುದು ಎಂದು ಅವರು ಹೇಳಿದರು.ಪ್ರಾಚಾರ್ಯ ಡಾ. ಎಸ್. ಬಿ. ಕಮತಿ ಮಾತನಾಡಿ, ನಮ್ಮಲ್ಲಿರುವ ಜ್ಞಾನದಿಂದ ಬದುಕು ಸುಂದರವಾಗಲು ಬುದ್ಧಿವಂತಿಕೆ ಬೇಕು. ಸಂದರ್ಭಾನುಸಾರ ಜ್ಞಾನವನ್ನು ಬಳಸಿದಾಗ ಕಾರ್ಯ ಯಶಸ್ವಿಯಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಡಾ.‌ ಅಶ್ವಿನಿ ಯರನಾಳ, ಡಾ. ಗೌರಿ ಕಲಗೊಂಡ, ಪ್ರೊ. ಲಕ್ಷ್ಮಣ ಪವಾರ, ಪ್ರೊ. ಗಂಗಾಧರ ಮಮದಾಪುರ, ಪ್ರೊ. ರವಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮುಂದಿನ ಮೂರು ತಿಂಗಳು ಶಿಕ್ಷಕರು ಸೇರಿದಂತೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಕರ್ನಾಟಕ ಪ್ರೌಢಶಾಲಾ ಮಂಡಳಿ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಪ್ರಕಾಶ ನಿಟ್ನಳ್ಳಿ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಅವರ ಸಹಯೋಗದಲ್ಲಿ ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಫ.ಗು.ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಜಯಪುರ-ಬಾಗಲಕೋಟೆಯ ವಿಭಾಗ ಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಮಗುವಿನ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಹಾಗೂ ಮನಸ್ಥಿತಿಯನ್ನು ಅರಿತುಕೊಂಡು ಗುಣಾತ್ಮಕ ಮತ್ತು ಪರಿಮಾಣಾತ್ಮಕವಾಗಿ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡು ಶಿಕ್ಷಕರು ಬೋಧನೆ ಮಾಡುವ ಮೂಲಕ ಅವರ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಿ ವಿಷಯ ಕರಗತ ಮಾಡಿಸಬೇಕು. ಮುಂದಿನ ಮೂರು ತಿಂಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾಳಜಿ ಪೂರಕವಾಗಿ ಶ್ರಮಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು.ಪರೀಕ್ಷೆಗೆ ಸಂಬಂಧಿಸಿದ ನೀಲನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆ, ಪರೀಕ್ಷಾ ಉಪಕ್ರಮಗಳನ್ನು ಈಗಾಗ…

Read More

ವಿಜಯಪುರದ ಇಬ್ರಾಹಿಂಪುರದಲ್ಲಿ ನಂದಬಸವೇಶ್ವರ ಜಾತ್ರೆಯ ವೈಭವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಇಬ್ರಾಹಿಂಪುರದಲ್ಲಿ ಬುಧವಾರ ಶ್ರೀ ನಂದಬಸವೇಶ್ವರ ಜಾತ್ರೆಯ ಅಂಗವಾಗಿ ನಂದಿಕೋಲ ಮೆರವಣಿಗೆ ವೈಭವದಿಂದ ನಡೆಯಿತು.ಸಿದ್ಧೇಶ್ವರ ಸಂಕ್ರಮಣ ಜಾತ್ರೆಯ ಮಾದರಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ನಡೆದ ಅಲಂಕೃತ ನಂದಿಕೋಲ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.ಗ್ರಾಮದ ಹೃದಯ ಭಾಗದಲ್ಲಿರುವ ಶ್ರೀ ನಂದಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ನಂದಿಕೋಲ ಮೆರವಣಿಗೆ ಭಕ್ತರ ಮನೆಗಳಿಗೆ ಭೇಟಿ ನೀಡುತ್ತ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮುಂದೆ ಹಾಯ್ದು ಸಂಜೆ ನಗರದ ರೇಲ್ವೆ ಸ್ಟೇಷನ್ ಮುಂದುಗಡೆ ನಡೆಯುವ ಶ್ರೀ ಪವಾಡ ಬಸವೇಶ್ವರ ದೇವರ ಭೇಟಿಗೆ ತೆರಳಿತು.ಮೆರವಣಿಗೆಯಲ್ಲಿ ನೂರಾರು ಜನ ಸುಮಂಗಲೆಯರು ಕೈಯ್ಯಲ್ಲಿ ಆರತಿ ತಟ್ಟೆ ಹಿಡಿದುಕೊಂಡು ನಂದಿಕೋಲ ಹಿಂದಿದ್ದರು. ಯುವಕರು, ಗ್ರಾಮದ ಹಿರಿಯರು, ಜಾತ್ರಾ ಕಮೀಟಿಯ ಮುಖಂಡರು, ಯುವಕರು ನಂದಿಕೋಲ ಮುಂದೆ ಸಾಗುತ್ತಿದ್ದರು. ಕೆಲವು ಯುವಕರು ಬಿಳಿ ಬಣ್ಣದ ಉಡುಗೆ ತೊಟ್ಟು ತಲೆಗೆ ಕೆಂಪು ಪೇಟಾ ಸುತ್ತಿಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು.ಮೆರವಣಿಗೆ ಪ್ರಮುಖ ಬೀದಿಯಲ್ಲಿ ಸಂಚರಿಸಿ ತಮ್ಮ ಮನೆಗಳ ಬಳಿ…

Read More

ಧೂಳಖೇಡ ಅಂಡರ್‌ಪಾಸ್ ಸುತ್ತಮುತ್ತಲಿನ ಅತಿಕ್ರಮ ಅಂಗಡಿ ತೆರವಿಗೆ ಶನಿವಾರದವರೆಗೆ ಗಡುವು ಉದಯರಶ್ಮಿ ದಿನಪತ್ರಿಕೆ ಚಡಚಣ: ಧೂಳಖೇಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಸಂಪರ್ಕ ರಸ್ತೆಯ ಎರಡೂ ಬದಿಯಲ್ಲಿ ನಿರ್ಮಾಣವಾಗಿರುವ ಅತಿಕ್ರಮ ಅಂಗಡಿಗಳನ್ನು ಸಂಬಂಧಪಟ್ಟವರು ಬರುವ ಡಿ.20 ಶನಿವಾರದೊಳಗೆ ತೆರವುಗೊಳಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿ ಚೇತನ ರಂಗಸೊಬೆ ಸೂಚನೆ ನೀಡಿದರು.ಬುಧವಾರ ಧೂಳಖೇಡ ಗಾ.ಪಂ.ಸಭಾ ಭವನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ ಮೇಲೆಯೆ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದ್ದು ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು ಅಂಗಡಿ ತೆರವುಗೋಳಿಸುವ ಕುರಿತು ಈಗಾಗಲೇ ಹಲವು ಬಾರಿ ನೋಟಿಸ್ ನೀಡಲಾಗಿದ್ದು, ವ್ಯಾಪಾರಸ್ಥರಿಗೆ ಅಂತಿಮವಾಗಿ ಡಿ.20 ಶನಿವಾರದವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿತ ಅವಧಿಯೊಳಗೆ ಅಂಗಡಿಗಳನ್ನು ಸ್ಥಳಾಂತರಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ರಸ್ತೆ ಬದಿಯಲ್ಲಿ ಇರುವ ವ್ಯಾಪಾರಸ್ಥರು, ರಸ್ತೆ ಬದಿಯಲ್ಲಿ ಕಸ ಎಸೆಯುವುದರಿಂದ ಮಾಲಿನ್ಯ ಉಂಟಾಗಿ ಕ್ರಿಮಿ–ಕೀಟಗಳ ಹೆಚ್ಚಳದಿಂದ ರೋಗಗಳು ಹರಡುವ ಸಾಧ್ಯತೆ ಇದೆ ಆದ್ದರಿಂದ…

Read More