Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ ಪ್ರತಿಭಾ ಅಕಾಡೆಮಿ (ರಿ), ವಿಜಯಪುರ ಇವರಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿ. 21 ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಮಾರು 140 ಮಂದಿ ಪ್ರತಿಭಾವಂತ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಈ ಸಮಾರಂಭದಲ್ಲಿ ಸನ್ಮಾನ ಹಾಗೂ ಪ್ರಶಸ್ತಿ ವಿತರಿಸಲಾಗುವುದು ಎಂದು ಕರ್ನಾಟಕ ಪ್ರತಿಭಾ ಅಕಾಡೆಮಿ (ರಿ), ವಿಜಯಪುರ ಜಿಲ್ಲಾ ಸಂಚಾಲಕರಾದ ಚನ್ನು ಕಟ್ಟಿಮನಿ ಅವರು ಹೇಳಿದರು.ಕಾರ್ಯಕ್ರಮವು ವೀರಶೈವ ಲಿಂಗಾಯತ ಮಹಾ ಸಭಾಭವನ, ಬಂಜಾರ ಕ್ರಾಸ್, ಸೋಲಾಪುರ ರಸ್ತೆ, ವಿಜಯಪುರದಲ್ಲಿ ನಡೆಯಲಿದೆ.ಮಾನವ ಬಂಧುತ್ವ ವೇದಿಕೆಯ ವಿಭಾಗಿಯ ಸಂಚಾಲಕರಾದ ಪ್ರಭುಗೌಡ ಪಾಟೀಲ ಅವರ ಸಹಯೋಗದೊಂದಿಗೆ ಮತ್ತು ಉಧ್ಘಾಟಕರಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಮತ್ತು ಬಸವ ಚಿಂತಕರು ಮತ್ತು ವಿಮರ್ಶಕರಾದ ಡಾ| ಜೆ.ಎಸ್.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜರಗುವದು ಎಂದರು.ಈ ಕಾರ್ಯಕ್ರಮಕ್ಕೆ ಚಡಚಣ ತಾಲೂಕಿನಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಐದು ವಿದ್ಯಾರ್ಥಿಗಳಾದ…

Read More

ಲೇಖನ- ಬಸವರಾಜ ಹೂಗಾರನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರುಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ಭಾರತೀಯ ಜನತಾ ಪಕ್ಷವು ತನ್ನ ರಾಜಕೀಯ ಯಶಸ್ಸಿನ ಹಿಂದೆ ಸಂಘಟನಾ ಶಕ್ತಿಯನ್ನು ಪ್ರಮುಖ ಆಧಾರವಾಗಿ ಹೊಂದಿದೆ. ಕಾರ್ಯಕರ್ತಕೇಂದ್ರಿತ ರಾಜಕಾರಣ, ಶಿಸ್ತುಬದ್ಧ ಕಾರ್ಯವೈಖರಿ ಮತ್ತು ದೀರ್ಘಕಾಲೀನ ದೃಷ್ಟಿಕೋನವೇ ಪಕ್ಷದ ವೈಶಿಷ್ಟ್ಯ. ಈ ಸಂಘಟನಾ ಪರಂಪರೆಯ ಮುಂದುವರಿಕೆಯಾಗಿ ಶ್ರೀ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷರಾಗಿ ನೇಮಿಸಿರುವುದು ಕೇವಲ ಹುದ್ದೆಯ ನೇಮಕವಲ್ಲ; ಅದು ಪಕ್ಷದ ಭವಿಷ್ಯದ ಕಾರ್ಯಯೋಜನೆಗೆ ನೀಡಿದ ಸ್ಪಷ್ಟ ಸಂದೇಶವಾಗಿದೆ.ಬಿಹಾರ ರಾಜ್ಯದ ಪಾಟ್ನಾ ನಗರದಲ್ಲಿ ಜನಿಸಿದ ಶ್ರೀ ನಿತಿನ್ ನಬಿನ್ ಅವರು ವಿದ್ಯಾರ್ಥಿ ಜೀವನದಲ್ಲಿಯೇ ರಾಷ್ಟ್ರಭಕ್ತಿ ಮತ್ತು ಸೇವೆಯ ಮೌಲ್ಯಗಳನ್ನು ಅಳವಡಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಿಂತನೆಗಳಿಂದ ರೂಪುಗೊಂಡ ಅವರ ವ್ಯಕ್ತಿತ್ವದಲ್ಲಿ ಶಿಸ್ತು, ಸಮರ್ಪಣೆ ಮತ್ತು ಸಂಘಟನಾ ಬದ್ಧತೆ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಮೌಲ್ಯಗಳೇ ಅವರ ರಾಜಕೀಯ ಬದುಕಿನ ದಿಕ್ಕನ್ನು ನಿರ್ಧರಿಸಿವೆ. ರಾಜಕೀಯ ಬದುಕನ್ನು ನೆಲಮಟ್ಟದ ಕಾರ್ಯಕರ್ತನಾಗಿ ಆರಂಭಿಸಿದ ಅವರು, ಭಾರತೀಯ…

Read More

ಲೇಖನ- ಮಲ್ಲಪ್ಪ. ಸಿ.ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಬಾಲ್ಯದಲ್ಲಿ ನಾನು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಮನೋಭಿಲಾಷೆ ಮತ್ತು ಮಹತ್ವಾಕಾಂಕ್ಷೆಯನ್ನು ಹೊಂದಿದ್ದೆ. ನಾನು ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗ ನನ್ನ ನೆಚ್ಚಿನ ಗುರುಗಳು “ ನೀನು ಮುಂದೆ ಏನಾಗಬೇಕೆಂದು ಅಂದುಕೊಂಡಿದ್ದೀಯಾ? ಎಂದು ಕೇಳಿದರು. ಆ ಪ್ರಶ್ನೆ ನನ್ನ ಜೀವನದಲ್ಲಿ ಒಂದು ಬದಲಾವಣೆಯನ್ನು ತಂದುಕೊಟ್ಟಿತು. ನಾನು ಕಲಿತ ನಮ್ಮೂರ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಪ್ರೇಮಿ, ಪ್ರಾಮಾಣಿಕ, ಆದರ್ಶಪ್ರಾಯ, ಮೌಲ್ಯಗಳ ಆಗರವಾಗಿರುವ ಮತ್ತು ಸದಾ ವಿದ್ಯಾರ್ಥಿಗಳ ಏಳ್ಗೆಯನ್ನು ಬಯಸುತ್ತಿರುವ ನನ್ನ ಜೀವನದ ಗುರು ಎಂದೇ ಸ್ವೀಕರಿಸಿದ ಸರ್ವ ಶ್ರೇಷ್ಠ ಶಿಕ್ಷಕರ ಪ್ರಭಾವವು ನನ್ನ ಮೇಲಾಗಿತ್ತು. ಅಂದಿನಿಂದ ನಾನು ಒಬ್ಬ ನನ್ನ ಗುರುವಿನಂತೆ ಒಬ್ಬ ಶಿಕ್ಷಕನಾಗಬೇಕೆಂಬ ಮಹದಾಸೆಯು ನನ್ನ ಮನದಲ್ಲಿ ಚಿಗುರೊಡೆಯಿತು. ಅದಕ್ಕೆ ಪುಷ್ಟಿ ಕೊಡುವಂತೆ ನನಗೆ ಆ ಗುರುಗಳು ಹೇಳಿಕೊಟ್ಟ ಪಾಠ, ಕಲಿಸಿದ ವಿದ್ಯೆ, ಜ್ಞಾನಧಾರೆ, ಬದುಕಿಗೆ ತೋರಿದ ಮಾರ್ಗದರ್ಶನಗಳೆಲ್ಲವೂ ನನ್ನನ್ನು ಇಂದು ಪ್ರಾಧ್ಯಾಪಕನನ್ನಾಗಿ ರೂಪುಗೊಳ್ಳಲು ಪ್ರೇರೇಪಿಸಿದವು.ಆದ್ದರಿಂದ ನಾವು ಜೀವನದಲ್ಲಿ ಮುಂದೊಂದು…

Read More

ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಂಚಮಸಾಲಿ ಲಿಂಗಾಯತ ಸಮುದಾಯದ ಶಾಂತಿಯುತ ಹೋರಾಟದ ಮೇಲೆ 2024ರ ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ನಡೆದ ಪೊಲೀಸ್ ಲಾಠಿಚಾರ್ಜ್ ಘಟನೆಗೆ ರಾಜ್ಯ ಸರ್ಕಾರ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ವಿಳಂಬ ಮಾಡದೆ ಸಮುದಾಯಕ್ಕೆ 2A ಮೀಸಲಾತಿ ಕಲ್ಪಿಸಬೇಕು ಎಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ಈ ಕುರಿತು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.ಬೆಳಗಾವಿ ಅಧಿವೇಶನದ ವೇಳೆ ನಮ್ಮ ಸಮುದಾಯದವರು ಶಾಂತಿಯುತವಾಗಿ ಹಕ್ಕು ಮಂಡಿಸಲು ತೆರಳಿದ್ದಾಗ, ಪೊಲೀಸ್ ದೌರ್ಜನ್ಯ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಈ ಘಟನೆಯು ಮಹಿಳೆಯರು, ವೃದ್ಧರು ಮತ್ತು ಯುವಕರ ಮನಸ್ಸಿನಲ್ಲಿ ಆಳವಾದ ಗಾಯ ಉಂಟುಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಹಿಂದಿನ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಗಳು ಹೋರಾಟಗಳನ್ನು ಸಂಯಮದಿಂದ ಮತ್ತು ಸಂವಾದದ ಮೂಲಕ…

Read More

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ | ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ | ಸಿಎಂ ಕಾಲೆಳೆದ ವಿಪಕ್ಷ ಬೆಂಗಳೂರು: ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು.ಮಂಗಳವಾರ ಬೆಳಗಾವಿ ಸದನ ಕಲಾಪದಲ್ಲಿ ಆಗಿದ್ದೇನು?ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡೆಗೆ ಬೆರಳು ತೋರಿಸಿ, ಮಧುಗಿರಿಗೆ 100 ಕೋಟಿ ಅನುದಾನ ಕೊಡುತ್ತೀರಿ, ಆದರೆ ನನ್ನ ಕ್ಷೇತ್ರಕ್ಕೆ ಏಕೆ ಅನುದಾನ ನೀಡುತ್ತಿಲ್ಲ? ನನ್ನ ಕ್ಷೇತ್ರಕ್ಕೆ ಹಿಂದೆ ಮಂಜೂರಾಗಿದ್ದ ಒಂದು ಸಾವಿರ ಕೋಟಿ ಅನುದಾನವನ್ನು ತಡೆ ಹಿಡಿಯಲಾಗಿದೆ ಎಂದು ಆಕ್ರೋಶದಿಂದ ಪ್ರಶ್ನಿಸಿದರು. ರಂಗನಾಥ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದು, ಅವರ ಈ ಪ್ರಶ್ನೆಯು ಸದನದಲ್ಲಿ ಸಿಎಂ ಕುರ್ಚಿ ಕಾದಾಟದ…

Read More

ಉದಯರಶ್ಮಿ ದಿನಪತ್ರಿಕೆ ಹೊನವಾಡ: ಶಿಕ್ಷಕರಾದ ಎಸ್ ಎ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘‘ಪ್ರಸ್ತುತ ಯುವಕರು ದುಶ್ಚಟಗಳಿಗೆ ಬಲಿಯಾಗುವ ಮೂಲಕ ಭವಿಷ್ಯದ ಸುಂದರ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಂತಹ ಚಟಗಳಿಗೆ ದಾಸರಾಗದೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು,’’ ಎಂದರು.ತಿಕೋಟಾ ತಾಲ್ಲೂಕಿನ ಹೊನವಾಡಗ್ರಾಮದ ಬಸವಂತರಾಯ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಧರ್ಮಸ್ಥಳದ ಸಂಸ್ಥೆಯ ಹೊನವಾಡ ವಲಯದ ಮೇಲ್ವಿಚಾರಕರಾದ ಕಿಶೋರ ತೋರಸ್ಕರ ಪ್ರಾಸ್ತಾವಿಕ ವಾಗಿ ಮಾತನಾಡಿದರು.ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷಾ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆ ಗಮನಕೊಡದೆ ಮಧುಮೇಹ, ರಕ್ತದೊತ್ತಡ ಮುಂತಾದವು ಆರೋಗ್ಯದ ಮೇಲೆ ಇಂದು ದುಷ್ಪರಿಣಾಮ ಬೀರುತ್ತಿರುವುದು ಸಾಮಾನ್ಯವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ನಗರದ ದರಬಾರ ಸಂಸ್ಥೆಯ ಉಪಾಧ್ಯಕ್ಷ ಕೆ.ಜಿ.ದೇಶಪಾಂಡೆ ಹೇಳಿದರು.ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಹಾಗಾಗದೆ ಮಕ್ಕಳಿಗೆ ದೈಹಿಕ ಶಿಕ್ಷಕರು ಪ್ರತಿನಿತ್ಯ ವ್ಯಾಯಾಮ, ಯೋಗ, ಕಬಡ್ಡಿ, ಖೋ-ಖೋ ಮುಂತಾದ ಕ್ರೀಡೆಯನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕ ವಾತಾವರಣ ಶಾಲೆಯಲ್ಲಿ ಮೂಡಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು, ಮೊಬೈಲ್ ಸಾಮಾಜಿಕ ಜಾಲತಾಣಗಳಿಂದ ದೂರವಿರುವಂತೆ ಶಿಕ್ಷಕರು, ಪಾಲಕರು ಹಾಗೂ ಮಕ್ಕಳ ಭವಿಷ್ಯತ್ತಿಗಾಗಿ ತಮ್ಮ ಜವಾಬ್ದಾರಿ ಮೆರೆಯಬೇಕಾಗಿದೆ ಎಂದರಲ್ಲದೆ ಮನಸ್ಸಿನ ಏಕಾಗ್ರತೆಗೆ ಒಳ್ಳೆ ಪುಸ್ತಕ ಓದುವುದು, ಸತ್ಸಂಗದ ಸುವಿಚಾರ ಮತ್ತು ದಾರ್ಶನಿಕರ ತತ್ವ ಜ್ಞಾನ ಸುಭಾಷಿತಗಳನ್ನು ಮಕ್ಕಳೊಂದಿಗೆ ವಿನಿಮಯ ಮಾಡಿಕೊಂಡು ಸೈದ್ಧಾಂತಿಕ…

Read More

ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅಲೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಅವರಿಗೆ ದೊರಕುವ ಸವಲತ್ತು ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ ಸಮುದಾಯದವರ ಅಭಿವೃದ್ಧಿಗಾಗಿ ಯೋಜನೆಗಳ ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಿಸಿ ಅನುಷ್ಟಾನಗೊಳಿಸುತ್ತಿದ್ದು, ಅವರಿಗೆ ದೊರಕಿಸಬೇಕಾದ ಸೌಲಭ್ಯ-ಸವಲತ್ತುಗಳನ್ನು ತಲುಪಿಸಲು ಕ್ರಮವಹಿಸಿ. ಈ ಜನಾಂಗದ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಪಡೆಯಲು ಉತ್ತೇಜನೆ ನೀಡಬೇಕು. ಶಿಕ್ಷಣದ ಪ್ರಾಮುಖ್ಯತೆ ಕುರಿತು ಅರಿವು ತಿಳುವಳಿಕೆ ನೀಡಬೇಕು. ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಅವರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಸುವಂತೆ ಅವರು ಹೇಳಿದರು.…

Read More

ನಂದರಗಿ ಗ್ರಾಮದ ಸಭೆಯಲ್ಲಿ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಇಂಡಿ: ಕೃಷಿ ಪರಿಸರದ ಮೂಲ ಸೆಲೆ ಭೌತಿಕ ರಾಸಾಯನಿಕ ಜೈವಿಕ ಗುಣಧರ್ಮಗಳಿಂದ ರಚಿತವಾದ ಮಣ್ಣು ವಿಜ್ಞಾನದ ವಿಸ್ಮಯವನ್ನು ಸಾರುವ ಜ್ಞಾನ ನಿರಂತರವಾಗಿರಲಿ ಎಂದು ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.ತಾಲೂಕಿನ ನಂದರಗಿ ಗ್ರಾಮದಲ್ಲಿ ಸಿದ್ದಪ್ಪ ಸಾತಪ್ಪ ಪೂಜಾರಿ ಇವರ ಹೊಲದಲ್ಲಿ ರೈತರಿಗೆ ಅಮೃತ ರೈತ ಸಂಸ್ಥೆಗಳ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ ಮಣ್ಣು ನೀರು ಮತ್ತು ಸಸ್ಯ ಅಂಗಾಂಶ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.ಅಸ್ವಾಭಾವಿಕ ದಬ್ಬಾಳಿಕೆ, ಅವೈಜ್ಞಾನಿಕ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಮಣ್ಣು ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ವಿನಾಶದಕೊನೆಯ ಹಂತ ತಲುಪಿರುವದನ್ನು ಗಂಭೀರವಾಗಿ ಪರಿಗಣಿಸಿ ಮಣ್ಣು ಉಳಿಸುವ ಕಾರ್ಯಕ್ರಮದಿಂದ ಕೃಷಿ ಬಲಪಡಿಸಬೇಕಾಗಿದೆ ಎಂದರು.ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ಮಾತನಾಡಿ, ಮಣ್ಣಿನ ರಚನೆ, ವರ್ಗೀಕರಣ, ಮತ್ತು ಫಲವತ್ತತೆ ಆಧಾರದ ಮೇಲೆ ನಿರ್ವಹಣಾ ಕ್ರಮ ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಸುಸ್ಥಿರ…

Read More

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ಮಹೇಶ ಪೋತದಾರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಾದ ಮಹೇಶ ಪೋತದಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಸಾವಿತ್ರಿಬಾಯಿ ಫುಲೆ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ನೂತನವಾಗಿ ಪರಿಚಯಿಸಲಾದ ನಿಲಯ ಪೋರ್ಟಲ್ ಅನುಷ್ಠಾನ ತರಬೇತಿ ಕಾರ್ಯಾಗಾರ ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಅವರು ಮಾತನಾಡಿದರು.ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಫಲಿತಾಂಶ ಸುಧಾರಣೆಯನ್ನು ಸಾಧಿಸಲು ವಿಶೇಷ ನೀಲನಕ್ಷೆ ತಯಾರಿಸಿ, ನೀಡಿರುವ ನಿರ್ದೇಶನ ಹಾಗೂ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳಲು ಅವರು ಸೂಚನೆ ನೀಡಿದರು.ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾದ ಬಯೋಮೆಟ್ರಿಕ್ ಹಾಜರಾತಿ, ಆಹಾರ ತಯಾರಿಕೆ ಹಾಗೂ ಹಂಚಿಕೆಯಲ್ಲಿ ಪಾರದರ್ಶಕತೆ ಕುರಿತ ಪೋಟೋಗಳನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವುದು, ವಸತಿ ನಿಲಯಗಳ ಮೆಂಟರಗಳ ಭೇಟಿ, ವಸತಿ…

Read More