Author: editor.udayarashmi@gmail.com

ಎಸ್‌ಸಿಪಿ/ ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಯೋಜನೆಯ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಹಾಗೂ ಎಸ್‌ಸಿಪಿ/ಟಿಎಸ್‌ಪಿ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದು ಹಾಜರಿರಬೇಕು. ಯೋಜನೆಗೆ ನಿಗದಿ ಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಿಯಾ ಯೋಜನೆ ರೂಪಿಸಿಕೊಂಡು ನಿಗದಿತ ಕಾಲಾವಧಿಯೊಳ್ಳಗೆ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಗಳಡಿ ನಿಗದಿತ ಯೋಜನೆಗಳ ಪ್ರಗತಿ ಸಾಧಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಯೋಜನೆ ಅನುಷ್ಠಾನಗೊಳಿಸಬೇಕು. ಅರ್ಹ…

Read More

ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಸನ್ಮಾನ | ಅತೀ ಹೆಚ್ಚು ಬಂಗಾರ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದ ಅಕಾಡೆಮಿ ವಿದ್ಯಾರ್ಥಿಗಳು ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಿಲ್ಲಾ ರೋಲರ್ ಸ್ಕೇಟಿಂಗ್‌ ಅಸೋಶಿಯೇಷನ್‌ ವತಿಯಿಂದ ವಿಜಯಪುರದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚು ಪದಕಗಳನ್ನು ಪಡೆದುಕೊಂಡ ಮುದ್ದೇಬಿಹಾಳ ತಾಲೂಕಿನ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿಯ ಕ್ರೀಡಾಪಟುಗಳಿಗೆ ಅಕಾಡೆಮಿವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಿ, ಸಮಾಜ ಸೇವಕ, ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಮಕ್ಕಳನ್ನು ವಿನೂತನವಾದ ಕ್ರೀಡೆಗಳಲ್ಲಿ ಭಾಗಿಯಾಗಿಸುವಲ್ಲಿ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿ ಪರಿಶ್ರಮ ಸಾಕಷ್ಟಿದೆ. ಹಿಂದೆ ಕೇವಲ ಕ್ರಿಕೇಟ್, ಕಬ್ಬಡ್ಡಿ ಹಾಗೂ ಕರಾಟೆ ಕ್ರೀಡೆಗಳಲ್ಲಿ ನಮ್ಮ ಮಕ್ಕಳು ಭಾಗಿಯಾಗುವುದನ್ನು ನೋಡುತ್ತಿದ್ದೇವು. ಆದರೆ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿವತಿಯಿಂದ ನಮ್ಮ ಮಕ್ಕಳಿಗೆ ಸ್ಕೇಟಿಂಗ್ ಹಾಗೂ ಏರ್‌ಗನ್ ಕ್ರೀಡೆಯಲ್ಲಿ ಭಾಗಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಅಕಾಡೆಮಿಯನ್ನು ರಚಿಸಿರುವ ಶಿವುಕುಮಾರ ಶಾರದಳ್ಳಿ ಅವರ ಸಾಧನೆ ಅಮೋಘವಾದದ್ದು ಎಂದರು.ಚಿಂತಕ ಅರವಿಂದ ಕೊಪ್ಪ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ಸಗಟು ನೀರು ಸರಬರಾಜು ಮಾಡುವ ಪಿ.ಎಸ್.ಸಿ ಕೊಳವೆ ಮಾರ್ಗವನ್ನು ಬದಲಾಯಿಸಿ ಎಂ.ಎಸ್ ಪೈಪ್ ಅಳವಡಿಸುವ ಕಾಮಗಾರಿಗೆ ರೂ.50.13 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಹಾಗೂ ನಗರಕ್ಕೆ ಅಗತ್ಯವಿರುವ 3ನೇ ಹಂತದ ಯೋಜನೆ ಅನುಷ್ಠಾನಕ್ಕಾಗಿ ಸರ್ವೇ ಕಾರ್ಯಕ್ಕೆ ಹಣ ಭರಣಾ ಮಾಡಲು ಮಹಾನಗರ ಪಾಲಿಕೆಗೆ ಕೋರಲಾಗಿದೆ ಎಂದು ಸರ್ಕಾರ ತಿಳಿಸಿದೆ.ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಬೃಹತ್ತಾಗಿ ಬೆಳೆಯುತ್ತಿರುವ ವಿಜಯಪುರ ಮಹಾನಗರವು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಹಾಗೂ ಭವಿಷ್ಯತ್ತಿನ ದಿನಗಳಲ್ಲಿ ಇಡೀ ಮಹಾನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಕುರಿತಂತೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 962ರ ಮೂಲಕ ಸರ್ಕಾರದ ಗಮನಸೆಳೆದಿದ್ದರು.ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ ಪದೇ ಪದೇ ಪೈಪ್ ಗಳು ಒಡೆದು ಅನಾವಶ್ಯಕವಾಗಿ ಸಾಕಷ್ಟು ನೀರು ಸೋರಿಕೆ ಆಗುವುದಲ್ಲದೆ, ದುರಸ್ತಿಗಾಗಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಜಿಲ್ಲೆಯ ಇಬ್ಬರು ಸಚಿವರು ಮತ್ತು ಶಾಸಕರು ಪಕ್ಷಾತೀತವಾಗಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಹರೀಶ ಎಂಟಮಾನ ಆಗ್ರಹಿಸಿದರು.ಮಂಗಳವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಖಾಸಗೀಕರಣ ಕೈಬಿಟ್ಟು ಸರಕಾರಿ ವೈದ್ಯಕೀಯ ಕಾಲೇಜಾಗಿಯೆ ಪ್ರಾರಂಭಿಸಬೇಕು ಎಂದು ಕಳೆದ 90 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಅವರ ಹೋರಾಟಕ್ಕೆ ಜಿಲ್ಲೆಯ ವಿವಿದ ಸಂಘಟನೆಗಳು ಬೆಂಬಲಿಸಿವೆ. ಹಾಗೆ ವಿವಿಧ ಸಂಘಟನೆಗಳಿಂದ ವಿನೂತನವಾಗಿ ಜಿಲ್ಲೆಯಾದ್ಯಂತ ಹೊರಾಟ ಮಾಡಿದ್ದು ಇದೆಲ್ಲವನ್ನು ಮನಗಂಡಂತ ಜಿಲ್ಲೆಯ ಸಚಿವರು, ಶಾಸಕರು ಹೋರಾಟಕ್ಕೆ ಬೆಂಬಲಿಸಿ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಾಗೂ ಇನ್ನೋರ್ವ ಸಚಿವರಾದ ಶಿವಾನಂದ ಪಾಟೀಲ ಮತ್ತು ವಿಜಯಪುರ ನಗರ ಶಾಕ ಬಸನಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಸರಕಾರಕ್ಕೆ ಒತ್ತಾಯಿಸಿ ಸರಕಾರಿ ವೈದ್ಯಕೀಯ ಕಾಲೇಜು ಆರಂಬಿಸಬೇಕು. ಒಂದು ವೇಳೆ ನಿಷ್ಕಾಳಜಿ ತೋರಿದರೆ ಜಿಲ್ಲೆಯ ಸಚಿವರು ಶಾಸಕರು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇಂಡಿ ತಾಲೂಕಿನ ಝಳಕಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬಳ್ಳೊಳ್ಳಿ ಗ್ರಾಮದಲ್ಲಿ ರವಿವಾರ ತಡರಾತ್ರಿ ಯುವ ಕಳ್ಳರು 8 ಮನೆಗಳಿಗೆ ನುಗ್ಗಿ ಸರಣಿ ಗಳ್ಳತನ ನಡೆಸಿ, ಓಮಿನಿ ವ್ಯಾನ ವಾಹನದಲ್ಲಿ ಪರಾರಿಯಾದ್ದಾರೆ ಎಂದು ಝಳಕಿ ಠಾಣಾಧಿಕಾರಿ ಮಂಜುನಾಥ ತೀರಕನ್ನವರ ತಿಳಿಸಿದರು.ಬಳ್ಳೊಳ್ಳಿ ಗ್ರಾಮದ ಬಡ ಜನರು ಕಬ್ಬಿನ ಕಟಾವಕ್ಕೆ, ಇಟಿಂಗಿ ಭಟ್ಟಿಗಳಿಗೆ ದುಡಿಯಲು ಹೊಗಿದ್ದು ಅಂತಹ ಬಡವರ ಮನೆಗಳಿಗೆ ಸುಮಾರು ರಾತ್ರಿ 1:30 ರಿಂದ 2:30 ರ ಸಮಯದಲ್ಲಿ ಸುಮಾರು 8 ಮನೆಗಳ ಬೀಗ ಒಡೆದಿದ್ದಾರೆ, ಗ್ರಾಮದ ಸಿ. ಸಿ ಕ್ಯಾಮರಾ ಒಂದರಲ್ಲಿ ನಾಲ್ಕು ಜನ ಯುವಕರು, ಕೈಯಲ್ಲಿ ಮಾರಕಾಸ್ತ್ರಗಳೊಂದಿಗೆ ರಸ್ತೆಯಲ್ಲಿ ತಿರುಗಾಡುವ ದೃಶ್ಯ ಕಂಡುಬಂದಿದೆ, ಆದರೆ ಸರಿಯಾದ ಸಾಕ್ಷಿಗಳು ಮತ್ತು ಪುರಾವೇಗಳನ್ನು ಕಲೆ ಹಾಕಲು ಪೋಲಿಸರು ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಬಳ್ಳೊಳ್ಳಿ ಗ್ರಾಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ,ಮನೆಯಲ್ಲಿ ಇಲ್ಲದ ಸಮಯ ನೋಡಿ,ದುಡಿಯಲು ಹೊಗಿರುವವರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಅದರ ಫಲಿತಾಂಶ ಈಗ ಪ್ರಕಟವಾಗಿದೆ.ಈ ವಿದ್ಯಾರ್ಥಿಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನ ಮೂರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ವಿಜಯಪುರದ ಒಟ್ಟು 14 ವಿದ್ಯಾರ್ಥಿಗಳು 79 ನಿಮಿಷಗಳ ಕಾಲ ತಡೆರಹಿತ ಸ್ಕೇಟಿಂಗ್ ಮಾಡಿ ಈ ದಾಖಲೆಯಲ್ಲಿ ಹೆಸರು ದಾಖಲಿಸಿದ್ದಾರೆ. ಏಳನೇ ತರಗತಿಯ ವಿದ್ಯಾರ್ಥಿನಿ ಅಲ್ವಿನಾ ಪಟೇಲ, ಆರನೇ ತರಗತಿಯ ವಿದ್ಯಾರ್ಥಿ ಜೈನ್ ಬಾಗವಾನ, ಎಂಟನೇ ತರಗತಿ ವಿದ್ಯಾರ್ಥಿನಿ ಹೀರಾ ಮೆಹತಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿನ ದಿನಗಳಲ್ಲಿ ಹುರುಕು ಅಂದರೆ ಕಜ್ಜಿ(ಸ್ಕೇಬೀಸ್) ರೋಗದ ಅವಾಂತರ ಹೆಚ್ಚಾಗಿದ್ದು, ರೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಕಾಲೇಜಿನ ಚರ್ಮ ರೋಗ ವಿಭಾಗದಲ್ಲಿ ಡಿಸೆಂಬರ್ 20 ರಿಂದ ಡಿಸೆಂಬರ್ 24ರ ವರೆಗೆ ಉಚಿತ ತಪಾಸಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಈ ಚರ್ಮರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಸಾರ್ಕೊಪ್ಟಸ್ ಸ್ಕೇಬೈ ಎಂಬ ಪರಾವಲಂಬಿ ಜೀವಜಂತುವಿನಿಂದ ಬರುವ ಸಾಂಕ್ರಾಮಿಕ ಕಾಯಿಲೆ ಇದಾಗಿದೆ. ರಾತ್ರಿ ವೇಳೆಯಲ್ಲಿ ವಿಪರೀತ ತುರಿಕೆ ಉಂಟಾಗುತ್ತದೆ. ದೇಹದ ಎಲ್ಲ ಸಂದುಗಳಲ್ಲಿ ಈ ಕಾಯಿಲೆ ಕಂಡು ಬರುತ್ತದೆ. ಒಬ್ಬರಿಂದ ಒಬ್ಬರಿಗೆ ಬಹುಬೇಗ ಈ ರೋಗ ಹರಡುತ್ತಿದೆ. ಆಸ್ಪತ್ರೆಯ ಚರ್ಮರೋಗ ವಿಭಾಗದಲ್ಲಿ ಪ್ರತಿದಿನ ಈ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಚಿಕಿತ್ಸೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಸಂದೇಶ ಬಂದಿದ್ದು, ಪೊಲೀಸರು ತೀವ್ರ ತಪಾಸಣೆ, ಪರಿಶೀಲನೆ ನಡೆಸಿದರು.ಮಂಗಳವಾರ ಬೆಳಗ್ಗೆ 6:58ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಮೂಲಕ ಸಂದೇಶ ಸ್ವೀಕೃತವಾಗಿದ್ದು, ಅದರಲ್ಲಿ ಕಾರ್ಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿಯಲಾಗಿದೆ.ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಗಳು, ಸಿಬ್ಬಂದಿ ತಕ್ಷಣವೇ ಶ್ವಾನ ದಳದೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.ನಗರ ವಲಯದ ಡಿವೈಎಸ್ಪಿ, ಡಿಎಆರ್ ಡಿವೈಎಸ್ಪಿ, ಸಿಪಿಐ ಹಾಗೂ ಗೋಲಗುಂಬಜ್ ಠಾಣೆಯ ಪಿಎಸ್‌ಐ ಸೇರಿ ಹಿರಿಯ ಅಧಿಕಾರಿಗಳು ಸಹ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದರು.ಆದ್ದರಿಂದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read More

ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಅವರು ಕನ್ನಡ ನಾಡಿನ ಶೈಕ್ಷಣಿಕ ಮತ್ತು ಸಾಹಿತ್ಯಕ ಪ್ರಪಂಚದಲ್ಲಿ ಪ್ರಸಿದ್ಧ ಹೆಸರಾಗಿದ್ದಾರೆ. ಆಡಳಿತ ಶಿಕ್ಷಣ ಅಧ್ಯಾತ್ಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ನಾಮಾಂಕಿತರೆನಿಸಿದ ಪ್ರೊ ಎಸ್ ಎಸ್ ಮಾಳವಾಡ ಅವರು ದೇಶ ಕಂಡ ಶ್ರೇಷ್ಠ ಆಡಳಿತಗಾರರು ಮತ್ತು ಅಧ್ಯಾತ್ಮಜೀವಿಗಳು.ಪ್ರೊ.ಮಾಳವಾಡ ಅವರ ಪತ್ನಿ ಶಾಂತಾದೇವಿ ಮಾಳವಾಡ ಅವರು ಸಹಾ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದವರಾಗಿದ್ದು ಈ ದಂಪತಿಗಳು ತಮ್ಮ ಮಹತ್ವದ ಕೊಡುಗೆಗಳಿಗಾಗಿ ಕನ್ನಡ ನಾಡಿನ ಪ್ರಾತಃಸ್ಮರಣೀಯರೆನಿಸಿದ್ದಾರೆ.ಪ್ರಾಧ್ಯಾಪನ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಮಹಾನ್ ಹೆಸರಾದ ಸ. ಸ ಮಾಳವಾಡರು ಧಾರವಾಡ ಜಿಲ್ಲೆಯ ಮೆಣಸಗಿಯಲ್ಲಿ ನವೆಂಬರ್ 14, 1910ರ ವರ್ಷದಲ್ಲಿ ಜನಿಸಿದರು. ತಂದೆ ಸಂಗನ ಬಸಪ್ಪನವರು ಮತ್ತು ತಾಯಿ ಕಾಳಮ್ಮನವರು.ಮಾಳವಾಡರ ಪ್ರಾರಂಭಿಕ ಶಿಕ್ಷಣವು ಗೋವನ ಕೊಪ್ಪ, ಗುಳೇದಗುಡ್ಡ, ಬಾಗಲಕೋಟೆ, ವಿಜಾಪುರಗಳಲ್ಲಿ ನೆರವೇರಿತು. ಉನ್ನತ ವ್ಯಾಸಂಗವನ್ನು ಧಾರವಾಡದಲ್ಲಿ ನಡೆಸಿದ ಅವರು ಎಂ. ಎ ಪದವೀಧರರಾದ ಮೇಲೆ ಕೆಲಕಾಲ ಮಾಧ್ಯಮಿಕ ಕಾಲೇಜು ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಂತರದಲ್ಲಿ ಧಾರವಾಡದ ಕರ್ನಾಟಕ…

Read More

ಲೇಖನ- ಜಯಶ್ರೀ ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನಗೇನೂ ದೊರೆಯುತ್ತಿಲ್ಲ ಇತರರಿಗೆ ಸಲೀಸಾಗಿ ಅವರು ಬಯಸಿದ್ದು ಸಿಗುತ್ತಿದೆ. ಎಂದು ಹೆಚ್ಚಿನ ಸಂದರ್ಭಗಳಲ್ಲಿ ನಮಗೆ ಅನ್ನಿಸುವುದು. ಬಯಸಿದ್ದನ್ನು ಪಡೆಯಬೇಕಾದರೆ ಮಾಡಬೇಕಾಗಿರುವುದು ಏನು? ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಹೊರಟರೆ ಅಳವಡಿಸಿಕೊಳ್ಳಲೇಬೇಕಾದ ಕೆಲ ಗುಣಗಳ ಪಾತ್ರ ಎದ್ದು ಕಾಣುತ್ತದೆ. ಅದರಲ್ಲಿ ಅತಿ ಮುಖ್ಯವಾದುದು ಸ್ವಯಂ ಶಿಸ್ತು. ಅಯ್ಯೋ! ಪ್ರತಿಯೊಂದರಲ್ಲೂ ಶಿಸ್ತು ಪಾಲಿಸಬೇಕು ಎನ್ನುವ ಹಿರಿಯರ ಮಾತು ಕೇಳಿ ಕೇಳಿ ಸುಸ್ತಾಗಿದ್ದೇವೆ ಎನ್ನುತ್ತಿರೇನು? ಶಿಸ್ತು ಪಾಲಿಸದಿದ್ದರೆ ಸಣ್ಣ ಪುಟ್ಟದನ್ನು ಪಡೆಯಲು ಸಾಧ್ಯವಿಲ್ಲ. ಮೌರಿನ್ ಡೌಡ್ ಹೇಳಿದ ಪ್ರಕಾರ” ನಿಮಗೆ ಅರ್ಹತೆ ಇರುವುದಕ್ಕಿಂತ ಕಡಿಮೆ ಲೆಕ್ಕಾಚಾರಕ್ಕೆ ನೀವು ಒಪ್ಪಿಕೊಂಡ ತಕ್ಷಣ ನೀವು ಕೇಳಿದ್ದಕ್ಕಿಂತಲೂ ಕಡಿಮೆ ದೊರೆಯುತ್ತದೆ.” ನಾವು ಎಷ್ಟರ ಮಟ್ಟಿಗೆ ಅರ್ಹರು ಎನ್ನುವುದನ್ನು ತಿಳಿದುಕೊಳ್ಳುವುದು ಪ್ರಮುಖವಾಗಿದೆ. ಸ್ವಯಂ ಶಿಸ್ತು ಎಂದರೆ..?ಶಿಸ್ತು ಎಂದರೆ ನಮಗೆ ನಾವು ಕಠಿಣತಮವಾಗಿ ನಡೆದುಕೊಳ್ಳುವುದಲ್ಲ. ಅದೊಂದು ಕ್ರಮಬದ್ಧ ನಡುವಳಿಕೆ. ‘ಸ್ವಯಂ ನಿಯಂತ್ರಣವೇ ಸ್ವಯಂ ಶಿಸ್ತು.’ನಮ್ಮ ದೌರ್ಬಲ್ಯಗಳನ್ನು ಜಯಿಸುವುದೇ ಸ್ವಯಂ ಶಿಸ್ತು.’ ಸ್ವಯಂ ಶಿಸ್ತಿಲ್ಲದ…

Read More