Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸ್ಪೀಕರ್ಗೆ ಯು.ಟಿ. ಖಾದರ್ ರಿಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ | ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಕೋರಿದ್ದಾರೆ.ಸ್ಪೀಕರ್ ಅವರಿಗೆ ಬರೆದ ಪತ್ರದಲ್ಲಿ, ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.ಡಿಸೆಂಬರ್ 8 ರಂದು ಬೆಳಗಾವಿಯಲ್ಲಿ ಪ್ರಾರಂಭವಾದ ಅಧಿವೇಶನ ಈ ತಿಂಗಳ 19 ರವರೆಗೆ ನಡೆಯಲಿದೆ. “ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧರಿಸಲಾಗಿತ್ತು ಆದರೆ ಕೆಲವು ಕಾರಣಗಳಿಂದಾಗಿ, ಅಧಿವೇಶನವನ್ನು 2 ದಿನಗಳವರೆಗೆ ಕಡಿಮೆ ಮಾಡಲಾಗಿದೆ” ಎಂದು ಅಶೋಕ್ ಹೇಳಿದರು.ಹಾಲಿ ಶಾಸಕರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಡಿಸೆಂಬರ್ 8 ಮತ್ತು 15 ರಂದು ಸದನವನ್ನು ಮುಂದೂಡಲಾಗಿದೆ.ರಾಜ್ಯಕ್ಕೆ ಸಂಬಂಧಿಸಿದಂತೆ ಅನೇಕ ಜ್ವಲಂತ ಸಮಸ್ಯೆಗಳಿವೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ, (ಟೆಕ್ಸಾಕ್) ಬೆಂಗಳೂರ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (ರ್ಯಾಂಪ್) ಯೋಜನೆಯಡಿಯಲ್ಲಿ ಟ್ರೆಡ್ಸ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಇತ್ತಿಚಿಗೆ ನಗರದ ಹೋಟೆಲ್ ಮಧುವನ ಇಂಟರ್ ನ್ಯಾಷನಲ್, ನಡೆಯಿತು.ಜಿಲ್ಲಾ ಅಗ್ರಣೀಯ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ, ಸಿದ್ದಯ್ಯ ಬಿ. ಇವರು ಮಾತನಾಡಿ, ಎಂ.ಎಸ್.ಎಂ.ಇ. ಗಳಿಗೆ ಬ್ಯಾಂಕಿನಿಂದ ದೊರೆಯುವ ಯೋಜನೆಗಳ ಮತ್ತು ಬ್ಯಾಂಕ ಮೂಲಕ ಸಾಲ ಪಡೆಯುವಲ್ಲಿ ಸಮಸ್ಯೆಗಳು ಎದುರಾದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.ವಿಜಯಪುರದ ಎಸ್.ಎಂ.ಇ. ಶಾಖೆಯ ಭಾರತೀಯ ಸ್ಟೇಟ್ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಶ್ರೀಶೈಲಯ್ಯ ಹೆಚ್. ಗಲಗಲಿ ಇವರು ಮಾತನಾಡಿ, ಟ್ರೆಡ್ಸ್ ಯೋಜನೆಯಲ್ಲಿ ಎಂ.ಎಸ್.ಎಂ.ಇ ಯವರಿಗೆ ಬರಬೇಕಾದ ಪಾವತಿಗಳನ್ನು ಹಣಕಾಸು ಸಂಸ್ಥೆಗಳ ಮೂಲಕ ತ್ವರಿತವಾಗಿ ನಗದು ಪಡೆಯಲು ಅನುಕೂಲವಾಗುವ ಒಂದು ಡಿಜಿಟಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು ಬ್ಯಾಂಕ್ ಖಾತೆಗೆ ಮಹಾನಗರ ಪಾಲಿಕೆ ವಾರ್ಡ್ ನಂ.22 ಸದಸ್ಯರಾದ ಪ್ರೇಮಾನಂದ ಬಿರಾದಾರ ಅವರು ವೈಯಕ್ತಿಕವಾಗಿ ರೂ.50 ಸಾವಿರ ಸಂದಾಯ ಮಾಡುವ ಮೂಲಕ ಆರ್ಥಿಕ ಸಹಾಯ ಮಾಡಿ ಬಡ ವಿದ್ಯಾರ್ಥಿ ವ್ಯಾಸಂಗಕ್ಕೆ ನೆರವಾಗಿದ್ದಾರೆ.ಸಿದ್ದೇಶ್ವರ ದೇವಸ್ಥಾನದ ಪೂಜೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಶ್ರೀ ಎಂ.ಎಸ್.ಕರಡಿ, ಮುಖಂಡರಾದ ಚಂದ್ರು ಚೌದರಿ, ಬಸವರಾಜ ಬಿರಾದಾರ, ಶ್ರೀಶೈಲ ಕಣಮುಚನಾಳ, ಪ್ರಶಾಂತಗೌಡ ಬಿರಾದಾರ, ರಾಜಕುಮಾರ ಬಿರಾದಾರ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚಿಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಪ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ ಪ್ರತಿ ವರ್ಷದ ವಾರ್ಷಿಕ ಪರೀಕ್ಷೇಯಲ್ಲಿ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಧನ ಸಹಾಯ ಮಾಡಲು ಈ ಠೇವಣಿ ಹಣ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯಗುರುಮಾತೆ ಜಿ.ಎ.ಹಿರೇಮಠ, ಎಸ್ಡಿಎಂಸಿ ಅಧ್ಯಕ್ಷ ಶಿವಾನಂದ ಮೆಳ್ಳಿಗೇರಿ, ಬಾಬು ಛಲವಾದಿ, ಎಚ್. ಎಚ್. ಇಂಗಳಗಿ, ಸಿಆರ್ಪಿ ಶಿವು ಕಾಂಬಳೆ ಹಾಜರಿದ್ದರು.ಶಾಲೆಯ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ನೀಡಿದ ಪ್ರೋತ್ಸಾಹಕ್ಕೆ ವಿಜಯಪುರ ಗ್ರಾಮೀಣವಲಯದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ನಮ್ಮ ಮಕ್ಕಳಧಾಮದ ವಿದ್ಯಾರ್ಥಿ ಮಣಿಕಂಠ ಕಡಕೋಳ ಅಂಡರ್-೧೯, ಟಿ-೨೦ ಕ್ರಿಕೆಟ್ ಚಾಂಪಿಯನ್ಶಿಪ್-೨೦೨೫ಕ್ಕಾಗಿ ಕರ್ನಾಟಕ ರಾಜ್ಯ ತಂಡಕ್ಕೆ ಅಯ್ಕೆಯಾಗಿದ್ದಾನೆ.ಸರ್ದಾರ್ ವಲ್ಲಭಭಾಯಿ ಪಟೇಲ ಅಖಿಲ ಭಾರತ ಅಂತರರಾಜ್ಯ ಟಿ-೨೦ ಕ್ರಿಕೆಟ್ ಚಾಂಪಿಯನ್ಶಿಪ್- ೨೦೨೫ನ್ನು ಗುಜರಾತ ಕ್ರಿಕೆಟ್ ಮಂಡಳಿ ಹಾಗೂ ಡಿಸಿಸಿಎನ್ ನವಸಾರಿ ಆಯೋಜಿಸುತ್ತಿದೆ.ವಿದ್ಯಾರ್ಥಿ ಆಯ್ಕೆಗೆ ಮಕ್ಕಳಪರ ಚಿಂತಕ ವಾಸುದೇವ ತೋಳಬಂದಿ, ಉಜ್ವಲ ಸಂಸ್ಥೆ ನಿರ್ದೇಶಕಿ ಸುನಂದಾ ತೋಳಬಂದಿ, ಧಾಮದ ಮುಖ್ಯಶಿಕ್ಷಕ ರಾವುತ ಮರಬಿ ತರಬೇತುದಾರ ಶ್ರೀಕಾಂತ ಕಾಖಂಡಕಿ ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಲೇಖನ- ಬಸವರಾಜ್ ಹೂಗಾರ್ನಿಕಟ ಪೂರ್ವ ಜಿಲ್ಲಾಧ್ಯಕ್ಷರುಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ಕೇರಳದ ಚುನಾವಣಾ ರಾಜಕೀಯದಲ್ಲಿ ಈ ಬಾರಿ ಒಂದು ಮಹತ್ವದ ಸಂದೇಶ ಸ್ಪಷ್ಟವಾಗಿ ಮೂಡಿಬಂದಿದೆ. ವರ್ಷಗಳಿಂದ ಒಂದೇ ವಂಶ, ಒಂದೇ ಗುಂಪು, ಒಂದೇ ಚಿಂತನೆಗೆ ಸೀಮಿತವಾಗಿದ್ದ ಕೇರಳ ರಾಜಕೀಯಕ್ಕೆ ಬಿಜೆಪಿ ಯುವಶಕ್ತಿಯ ಮೂಲಕ ಸವಾಲು ಹಾಕಿದೆ. ಇದು ಕೇವಲ ಚುನಾವಣಾ ಪ್ರಯೋಗವಲ್ಲ; ಇದು ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸುವ ಕ್ರಾಂತಿಕಾರಿ ಹೆಜ್ಜೆ.ಬಿಜೆಪಿ ಯಾವತ್ತೂ ಹೇಳುತ್ತಾ ಬಂದಿರುವ “Party With Difference” ಎಂಬ ಮಾತು ಈ ಬಾರಿ ಕೇವಲ ಘೋಷಣೆಯಾಗಿರಲಿಲ್ಲ ಅದು ಕಾರ್ಯರೂಪಕ್ಕೆ ಬಂದಿದೆ. ರಾಜಕೀಯ ಅನುಭವವೇ ಇಲ್ಲದ, ಸರಳ ಕುಟುಂಬಗಳಿಂದ ಬಂದ ಯುವಕ ಯುವತಿಯರಿಗೆ, ಸಾಮಾನ್ಯ ಜನರ ನಡುವೆ ಬದುಕು ಕಟ್ಟಿಕೊಂಡ ಸಹೋದರ ಸಹೋದರಿಯರಿಗೆ ಟಿಕೆಟ್ ನೀಡುವ ಮೂಲಕ, ಬಿಜೆಪಿ ಕೇರಳ ಒಂದು ಸ್ಪಷ್ಟ ಸಂದೇಶ ನೀಡಿದೆ.ರಾಜಕೀಯವು ಸಿರಿವಂತರ ಸ್ವತ್ತಲ್ಲ, ಅದು ಸಾಮಾನ್ಯ ಕಾರ್ಯಕರ್ತನ ಸೇವೆಯ ವೇದಿಕೆ.ಇತರ ಪಕ್ಷಗಳು ಗೆಲುವಿನ ಲೆಕ್ಕಾಚಾರಕ್ಕೆ ಮಾತ್ರ ಸೀಮಿತಗೊಂಡಾಗ, ಬಿಜೆಪಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮನೆಗಳ ಇ-ಸ್ವತ್ತು (ಗಣಕೀಕೃತ ಉತಾರಿ)ಗಾಗಿ ಪಟ್ಟಣದ ಕೆಲವು ವಾರ್ಡ ನಿವಾಸಿಗಳು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ)ಪದಾಧಿಕಾರಿಗಳೊಂದಿಗೆ ಸೇರಿ ಪ್ರತಿಭಟನೆ ಕೈಗೊಂಡು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಟಿಪ್ಪು ವೃತ್ತದಲ್ಲಿ ಸೋಮವಾರ ಸಭೆ ಸೇರಿದ ೦೫,೦೮,೧೨,೧೬,೧೭ ನೇ ವಾರ್ಡುಗಳ ನಿವಾಸಿಗಳು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಗಣಕೀಕೃತ ಉತಾರೆಗಾಗಿ ಆಗ್ರಹಿಸಿ ಮೆರವಣಿಗೆ ಹೊರಟು ಮೊಹರೆ ಹಣಮಂತ್ರಾಯ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಪಟ್ಟಣ ಪಂಚಾಯತಿ ತಲುಪಿ ಆವರಣದಲ್ಲಿ ಧರಣಿ ಕುಳಿತು ಪ್ರತಿಭಟನೆ ಕೈಗೊಂಡರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮಾತನಾಡಿ, ವಾರ್ಡಿನಲ್ಲಿ ಹಲವು ವರ್ಷಗಳಿಂದ ಸಾವಿರಾರು ಕುಟುಂಬಗಳು ಮನೆ ಕಟ್ಟಿಸಿ ವಾಸವಾಗಿದ್ದಾರೆ ಅವರ ಮನೆಗಳಿಗೆ ಇ-ಸ್ವತ್ತು ಉತಾರಿ ಪಟ್ಟಣ ಪಂಚಾಯತಿಯಿAದ ನೀಡಬೇಕು. ಉತಾರಿ ನೀಡುವವರೆಗೆ ನಾವು ಕದಡುವದಿಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ ಅಹ್ಮದ ಪಟೇಲ ಅವರಿಗೆ ಆಗ್ರಹಿಸಿದರು.ಕರವೇ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ, ತಾಲ್ಲೂಕು ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅತಿವೃಷ್ಠಿ, ಮಳೆ ಹಾನಿ, ಕೀಟ ಬಾಧೆ, ಗೊಬ್ಬರ ಬೆಲೆ ಹೆಚ್ಚಳ, ಕೂಲಿ ಕಾರ್ಮಿಕರ ಸಮಸ್ಯೆ ನಡುವೆ ಇಂಡಿ ತಾಲೂಕಿನ ರೈತರು ಕಬ್ಬು ಬೆಳೆದಿದ್ದು ಉತ್ತಮ ಆದಾಯ ನಿರೀಕ್ಷೆಯಲ್ಲಿದ್ದಾರೆ. ತಾಲೂಕಿನ ಹಿರೇಬೇವನೂರ ಸಕ್ಕರೆ ಕಾರ್ಖಾನೆ, ಭೀಮಾಶಂಕರ ಕಾರ್ಖಾನೆ ಮತ್ತು ನಾದ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬೆಲೆ ನಿಗದಿ ಪಡಿಸಿದ್ದು ಮೂರು ಸಾವಿರ ರೂ ಪ್ರತಿ ಕ್ವಿಂಟಾಲಗೆ ನೀಡುತ್ತಿದ್ದಾರೆ. ಆದರೂ ರೈತರು ಪಕ್ಕದ ಮಹಾರಾಷ್ಟ್ರ ಕಾರ್ಖಾನೆಗಳತ್ತ ಮುಖ ಮಾಡುತ್ತಿದ್ದು ಇದರಿಂದ ರಾಜ್ಯಕ್ಕೆ ತೆರಿಗೆ ನಷ್ಟವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಬಿ.ಕಂಬೋಗಿ ತಿಳಿಸಿದ್ದಾರೆ.ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಬ್ಬು ಬೆಳೆದಿರುವ ಇಂಡಿ ತಾಲೂಕಿನಲ್ಲಿ ಮೂರು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ಕಳೆದ ಮೂರು ವರ್ಷದಿಂದ ಪ್ರತಿ ದಿನ ಮೂರು ಸಾವಿರ ಟನ್ ಪ್ರತಿ ದಿನ ಪ್ರತಿ ಕಾರ್ಖಾನೆ ನುರಿಸುತ್ತಿದೆ. ಆದರೂ ಮಹಾರಾಷ್ಟ್ರದ ರಾಜ್ಯಕ್ಕೆ ಕಬ್ಬು ಸಾಗಿಸುತ್ತಿದ್ದಾರೆ.ಮಹಾರಾಷ್ಟ್ರದಲ್ಲಿ ಕಬ್ಬು ಹಂಗಾವು ಆರಂಭವಾಗಿದ್ದು ನ. ೧ ರಿಂದ ಕಾರ್ಖಾನೆಯ ಕಬ್ಬು ನುರಿಸುತ್ತಿದೆ.…
ಭಾವರಶ್ಮಿ ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ “ಗುರುರ್ ಬ್ರಹ್ಮ ಗುರುರ್ ವಿಷ್ಣು ಗುರುರ್ ದೇವೋ ಮಹೇಶ್ವರಃಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ “ಇದರ ಅರ್ಥ”ಗುರುವು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಸಾಕಾರವಾಗಿದ್ದು, ಸ್ವತಃ ಪರಬ್ರಹ್ಮನೇ ಆಗಿರುವ ಗುರು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಕೊಂಡೊಯುತ್ತಾನೆ” ಎಂಬುದಾಗಿದೆ. ಅಂದರೆ ಶಿಕ್ಷಕ ಶಿಕ್ಷಣದ ಮುಖ್ಯಭಾಗ ಎಂಬುದನ್ನು ಮರೆಯುವಂತಿಲ್ಲ.ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಹೇಳಿಕೊಡಲು ನಿಯೋಜನೆಗೊಂಡ ಎಲ್ಲರೂ ಔಪಚಾರಿಕವಾಗಿ ಶಿಕ್ಷಕರೆ. ಅದನ್ನು ಅವರು ಮಾಡಿಯೇ ಮಾಡುತ್ತಾರೆ. ಏಕೆಂದರೆ ಅಲ್ಲೊಂದು ಕಟ್ಟುಪಾಡು, ಬದ್ಧತೆ ಇರುತ್ತದೆ. ಆದರೆ ಗುರುವಾಗುವ ಹಂತ ಬೆಣ್ಣೆಯಿಂದ ತುಪ್ಪವಾದಂತೆ. ತುಪ್ಪದ ಶುದ್ಧತೆ, ಅದನ್ನು ಕೆಡಲು ಬಿಡುವುದಿಲ್ಲ.ಸ್ವಸ್ಥ ಸಮಾಜದ ನಿರ್ಮಾಣ ಉತ್ತಮ ಶಿಕ್ಷಕರ ಸಮರ್ಪಣಾಭಾವದಿಂದ ಸಾಧ್ಯ ಎಂಬುದನ್ನು ಯಾವ ಶಿಕ್ಷಕರೂ ಮರೆಯುವಂತಿಲ್ಲ. ಹಿಂದೆ ಮರದ ಕೆಳಗೆ ಪಾಠಮಾಡುವ ʼಗುರುಕುಲʼ ವ್ಯವಸ್ಥೆ ಇತ್ತು. ಇಂದು ʼಗುರುಕುಲʼ ಎಂಬ ಹೆಸರಿನ ಶಾಲಾ-ಕಾಲೇಜುಗಳು ಇವೆ. ಮೊದಲಿಗೆ ಮರದ ನೆರಳಿನಲ್ಲಿ ಗುರುಕುಲ ಇತ್ತು. ಇಂದು ಗುರುಕುಲದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಪ್ರಗತಿ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಸಚಿವರಾಗಿ, ಲೋಕಸಭಾ ಸದಸ್ಯರಾಗಿ ಅವರ ಕೊಡುಗೆ ಅನನ್ಯ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವಾನಂದ ಪಾಟೀಲ ಪ್ರಾರ್ಥಿಸಿದ್ದಾರೆ.
