Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿಡದಿ ಟೌನ್ ಶಿಪ್, ಶರಾವತಿ ಪಂಪ್ಡ್ ಸ್ಟೋರೇಜ್, ಕ್ರಿಕೆಟ್ ಸ್ಟೇಡಿಯಂ ಯೋಜನೆ ಕೈಬಿಡದಿದ್ದರೆ ಹೋರಾಟ ನಿಶ್ಚಿತ :ಶಾಸಕ ಯತ್ನಾಳ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಹಾಗೂ ಆನೇಕಲ್ ನ ಫಲವತ್ತಾದ ಭೂಮಿಯಲ್ಲಿ ಬರುತ್ತಿರುವ ಕ್ರಿಕೆಟ್ ಸ್ಟೇಡಿಯಂ ಯೋಜನೆಗಳನ್ನು ಮುಂಬರುವ ಸಂಪುಟ ಸಭೆಯಲ್ಲಿ ರದ್ದುಗೊಳಿಸದಿದ್ದರೆ, ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಿಶ್ಚಿತ ಎಂದು ಶಾಸಕ ಬಸನಗೌಡ ಪಾಟೀಲ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ರಿಯಲ್ ಎಸ್ಟೇಟ್ ಲಾಬಿಗೆ, ಬಂಡವಾಳಶಾಹಿಗಳ ಒತ್ತಡಕ್ಕೆ ಶರಣಾಗಿರುವ ಸರ್ಕಾರ ಒತ್ತಾಯಪೂರ್ವಕವಾಗಿ ರೈತರ ಜಮೀನನ್ನು ಪಡೆಯುತ್ತಿರುವುದು ಖಂಡನೀಯ. ರೇಷ್ಮೆ, ಮಾವು, ಅಡಿಕೆ, ಬಾಳೆ, ತರಕಾರಿ, ಹಲಸು, ಪೇರಳೆ ಹೀಗೆ ವಿವಿಧ ರೀತಿಯ ಬೆಳೆಗಳನ್ನು ಬೆಳೆಯುತ್ತಿರುವ ಬಿಡದಿಯ ರೈತರು ಸಮೃದ್ಧರಾಗಿದ್ದರೆ. ಸುಮಾರು 6500 ಎಕರೆಯ ಅತ್ಯಂತ ಫಲವತ್ತಾದ, ನೀರಾವರಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಸ್ವಾಧೀನಪಡೆಸಿಕೊಳ್ಳುತ್ತಿರುವ ಸರ್ಕಾರದ ಕ್ರಮ ಅತಾರ್ಕಿಕವಾದದ್ದು.ಕೃಷಿಗೆ ಯೋಗ್ಯವಲ್ಲದ…
ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಆಡಂ ಹಾರ್ಟ-ಡೇವಿಸ್ ಅವರು, “ಸೈಕಲ್ ಎಂದರೆ ಮನುಷ್ಯನ ಪಾರಂಪರಿಕ-ಸಾಂಪ್ರದಾಯಿಕ ಮತ್ತು ಅತ್ಯಂತ ಸುಲಭ ಮತ್ತು ಅಗ್ಗದ ಸಾರಿಗೆಯ ಸಾಧನ.ಸೈಕಲ್ ತುಳಿಯುವುದರಿಂದ ನಿಮ್ಮ ದೇಹಕ್ಕೆ ಕಸರತ್ತು ಮತ್ತು ವ್ಯಾಯಾಮ ನೀಡುವ ಸವಾರಿಯಾಗಿದೆ” ಎಂದು ಹೇಳಿದ್ದಾರೆ. ಸೈಕಲ್ ಸವಾರಿ ಎಂದರೆ ಕೇವಲ ವ್ಯಾಯಾಮವಲ್ಲ. ಅದು ನಮ್ಮ ದೇಹ ಮತ್ತು ಮನಸ್ಸಿಗೆ ನವ ಚೈತನ್ಯವನ್ನು ನೀಡುವ ಒಂದು ಸಾಧನ. ನಾವು ಬಾಲ್ಯದಲ್ಲಿದ್ದಾಗ ಒಡನಾಡಿ ಇದ್ದಂತೆ. ಇದರಿಂದ ಪ್ರಕೃತಿಯ ಸೌಂದರ್ಯವನ್ನು ಸವಿಯಲು, ಆರೋಗ್ಯವನ್ನು ಕಾಪಾಡಲು ಮತ್ತು ಪರಿಸರವನ್ನು ಸಂರಕ್ಷಿಸಲು ಸಹಕಾರಿಯಾಗಿದೆ. ನಮ್ಮ ಪಾರಂಪರಿಕ-ಸಾಂಪ್ರದಾಯಿಕ ವಾಹನವಾದ ಈ ಸೈಕಲ್ ಅನ್ನು ಬಳಸಿ, ಮುಗಿದು ಹೋಗುತ್ತಿರುವ ಇಂಧನವನ್ನು ಉಳಿಸಿ. ನಾವು ಸಣ್ಣವರಿದ್ದಾಗ ಗೆಳೆಯರೊಂದಿಗೆ ಜೊತೆಗೂಡಿ ಸೈಕಲ್ ಸವಾರಿ ಮಾಡುತ್ತಾ ನಾ ಮುಂದು ತಾ ಮುಂದು ಎಂದು ಸ್ಪರ್ಧೆಗಿಳಿಯುತ್ತಿದ್ದ ಸಂದರ್ಭಗಳು ನೆನೆಪಿಗೆ ಬಂದರೆ ಮನಸ್ಸಿಗೆ ಆಹ್ಲಾದಕರವೆನಿಸುತ್ತದೆ. ಸೈಕಲ್ ಒಂದು ವ್ಯಕ್ತಿ ಚಾಲಿತ ವಾಹನವಾಗಿದ್ದು, ಮಾನವನಿಗೆ ದೈಹಿಕ ಕಸರತ್ತು ನೀಡಬಲ್ಲ ಸಾಧನ. ಯಾವುದೇ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಸೋಮವಾರ ತಹಶಿಲ್ದಾರ ಬಿ ಎಸ್ ಕಡಕಭಾವಿ ಅವರ ಮುಖಾಂತರ ಸರಕಾರಕ್ಕೆ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು .ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ರ್ಯಾಲಿ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತಲುಪಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವ ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ ಡಿ ಇನಾಮದಾರ ಮಾತನಾಡಿ, ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿ ಪ್ರತಿಯೊಂದು ಜೀವಿಗೂ, ಪ್ರಕೃತಿಗೂ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದೆ. ಅದರಲ್ಲಿಯೂ ಮುಖ್ಯವಾಗಿ ಗೋವು (ಹಸು) ಭಾರತೀಯ ಸಂಸ್ಕೃತಿ, ಕೃಷಿ ಪ್ರಧಾನ ಆರ್ಥಿಕತೆ ಮತ್ತು ಕೋಟ್ಯಂತರ ಜನರ ಭಾವನೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ. ಶಾಂತಿ, ಕರುಣೆ ಮತ್ತು ಪೋಷಣೆಯ ಸಂಕೇತವಾಗಿರುವ ಹಸುವನ್ನು ಭಾರತದ ‘ರಾಷ್ಟ್ರ,…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: 2004-05 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಗುರು ನಮನ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಬಾಬಾನಗರದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಲ್. ಇಂಗಳೇಶ್ವರ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯೆ ಶಿಕ್ಷಕರ ಆಶಯ ಆಗಿರುತ್ತದೆ ಎಂದರು.ಉಪನ್ಯಾಸ ಸಿ. ಎಸ್. ಪೂಜಾರಿ ಮಾತನಾಡಿ ಮಕ್ಕಳ ಪ್ರೀತಿ,ವಿಶ್ವಾಸ ನೋಡಿ ಶಿಕ್ಷಕನಾಗಿರುವುದು ಸಾರ್ಥಕವಾಯಿತು. ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ ಎಂದರು.ಮುಖ್ಯೋಪಾದ್ಯಾಯ ಎಸ್. ಬಿ. ಬಿರಾದಾರ ಮಾತನಾಡಿದರು.ವಾಣಿಜ್ಯ ತೆರಿಗೆ ಅಧಿಕಾರಿಗ ಸಿ. ಎಸ್. ಹಡಪದ, ಮುಖ್ಯೋಪಾಧ್ಯಾಯ ಸಿ .ಆರ್. ಝೆಂಡೆ, ಕಮಲಾ ಹಂಡಿ ಮಾತನಾಡಿದರು. ಅಕಾಲಿಕ ನಿಧನ ಹೊಂದಿದ ಶಿಕ್ಷಕರಿಗೆ ಮೌನ ಆಚರಿಸಿ ಸ್ಮರಿಸಲಾಯಿತು.ಎಲ್ಲರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.ಸಾನಿಧ್ಯವನ್ನು ಬಾಬಾನಗರ ಹಿರೇಮಠದ ರಾಚಯ್ಯ ಹಿರೇಮಠ ವಹಿಸಿದ್ದರು. ಅಧ್ಯಕ್ಷತೆಯನ್ನು ಬಿ.ಜಿ ಸಜ್ಜನ್ ವಹಿಸಿದ್ದರು.ಎಸ್. ಜಿ. ಪುಕಾಳೆ, ಎನ್. ಸಿ. ಶರ್ಮಾ,ಎನ್. ಎ.ಸ್ ಜೊಳ್ಳಿ , ಎಚ್. ಎಲ್. ಪಾಂಡುಗೋಳ, ಗೀತಾ ಪಾಟೀಲ, ಜಿ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಜೂನ್ ೩ ರಂದು ವಿಶ್ವ ಬೈಸಿಕಲ್ ದಿನ ಆಚರಣೆ ಹಿನ್ನೆಲೆಯಲ್ಲಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೭ ಗಂಟೆಗೆ ಸೈಕಲ್ ಜಾಥಾವು ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಿAದ ಆರಂಭವಾಗಿ, ಗೋಲಗುಂಬಜ, ಗಗನಮಹಲ್, ವೀರರಾಣಿ ಕಿತ್ತೂರ ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್, ಗಾಂಧಿಚೌಕ್, ಶಿವಾಜಿ ಸರ್ಕಲ್,ವಾಟರ್ ಟ್ಯಾಂಕ್, ಇಬ್ರಾಹಿಂ ರೋಜಾ, ಗೋದಾವರಿ ಮಾರ್ಗವಾಗಿ ವಾಟರ್ ಟ್ಯಾಂಕ್, ಬಿ.ಎಲ್.ಡಿ.ಇ ಮುಖ್ಯ ಗೇಟ್, ಹಾಸ್ಪಿಟಲ್ ಗೇಟ್, ಸಿದ್ದೇಶ್ವರ ದೇವಸ್ಥಾನ, ಗಾಂಧಿ ಚೌಕ್ ಮಾರ್ಗವಾಗಿ ಸಾಗಿ ಪುನಃ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಅಗಮಿಸಿ ಮುಕ್ತಾಯಗೊಳ್ಳಲಿದೆ. ಸಾರ್ವಜನಿಕರು, ಯುವಕರು ಹಾಗೂ ಕ್ರೀಡಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸೈಕಲ್ ಜಾಥಾವನ್ನು ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬೂದಿಹಾಳ ಡೋಣ(ದೇವರಹಿಪ್ಪರಗಿ): ಗುರು ಮತ್ತು ಶಿಷ್ಯರ ಸಂಬಂಧ ಜಗತ್ತಿನ ಶ್ರೇಷ್ಠ ಹಾಗೂ ದೊಡ್ಡ ಸಂಬಂಧವಾಗಿದೆ ಎಂದು ದೇವೂರ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯರು ಹೇಳಿದರು.ತಾಲ್ಲೂಕಿನ ಬೂದಿಹಾಳ ಡೋಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಜರುಗಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನೀಯರ ಗುರುವಂದನಾ ಹಾಗೂ ಅಭಿನಂದನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.ಜಗತ್ತಿನಲ್ಲಿ ಗುರುವಿಗೆ ಉನ್ನತ ಸ್ಥಾನವಿದೆ. ಇಲ್ಲಿ ಗುರು ಶಿಷ್ಯರ ಸ್ನೇಹ ಸಂಬಂಧ ಅತ್ಯಂತ ಪವಿತ್ರವಾದದು ಎಂದರು.ಕೆರೂಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಸ್.ಎಸ್.ಸಾತಿಹಾಳ ಮಾತನಾಡಿ, ಅಕ್ಷರಜ್ಞಾನ ನೀಡಿದ ಗುರುಗಳ ಉಪಕಾರವನ್ನು ಸ್ಮರಿಸುವ ಮೂಲಕ ಗುರುವಂದನಾ ಕಾರ್ಯಕ್ರಮ ಜರುಗುತ್ತಿರುವು ಅತ್ಯಂತ ಶ್ಲಾಘನೀಯ ಎಂದರು.ಶಿಕ್ಷಕರಾದ ಜಿ.ಬಿ.ಹೊಕ್ಕುಂಡಿ, ಶೇಖಸಾಬ್ ಪಾನಪರೋಶ, ಎನ್.ಎಸ್.ಸಜ್ಜನ, ಪಿ.ಸಿ.ತಳಕೇರಿ, ಆರ್.ಜಿ.ಬನಸಿ, ಬಿ.ಎಂ.ಕಠಾರೆ, ಶಿವನಗೌಡ ಪಾಟೀಲ, ವಿ.ಎಸ್.ಅಗ್ನಿ, ಪಿ.ಎಸ್.ಓತಿಹಾಳ, ಎಸ್.ಎಸ್.ಇನಾಮದಾರ, ಜಿ.ಎ.ಪಾಟೀಲ, ಎಂ.ಎನ್.ಮಯೂರ, ಪಿ.ಆಯ್.ಕಾಳೆ, ಶಕುಂತಲಾ ಗುಬ್ಬೇವಾಡ ಮಾತನಾಡಿದರು. ಎಸ್ಡಿಎಮ್ಸಿ ಅಧ್ಯಕ್ಷ ಗುರುಬಾಳಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಭೂದಾನಿ ದಿ.ಬಸವಂತ್ರಾಯಗೌಡ ಬಿರಾದಾರ ಹಾಗೂ…
ದೇವರ ಹಿಪ್ಪರಗಿ ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ದೇವರ ಹಿಪ್ಪರಗಿ ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ ಹೇಳಿದರು.ಸಿಂದಗಿ ನಗರದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಅಖಂಡ ಸಿಂದಗಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಹಮ್ಮಿಕೊಂಡ ೨೦೨೫-೨ ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ತಂದೆ-ತಾಯಿ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ನಾಗರತ್ನ ಅಶೋಕ ಮನಗೂಳಿ ಸನ್ಮಾನಿಸಿದ ಬಳಿಕ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮತ್ತು ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.…
ಉದಯರಶ್ಮಿ ದಿನಪತ್ರಿಕೆ ಅಥಣಿ: ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸುವುದು ನಮ್ಮ ಜವಾಬ್ದಾರಿ ಎಂಬ ಧ್ಯೇಯದೊಂದಿಗೆ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ ಹೇಳಿದರು.ಅವರು ಪಟ್ಟಣದ ವಿಕ್ರಮಪೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ,ಈ ಶಾಲೆಯಲ್ಲಿ ಎಲ್ ಕೆಜಿ, ಯುಕೆಜಿ, ಯಿಂದ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿದ್ದು 5 ನೇ ತರಗತಿಯಿಂದ ಇಂಗ್ಲಿಷ್ ಭಾಷೆಯಲ್ಲಿದ್ದು ಅದೇ ರೀತಿ 1ನೇ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಬೋಧನೆ ಇದ್ದು ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ಗ್ರಂಥಾಲಯ ಉಚಿತ ಆರೋಗ್ಯ ಸೇವೆ ಉಚಿತ ಪಠ್ಯಪುಸ್ತಕ ಸಮವಸ್ತ್ರ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಮ್ ಆರ್ ಮುಂಜೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿ ತಿಂಗಳು ಪಾಲಕ ಹಾಗೂ ಶಿಕ್ಷಕರ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಭೂಮಿಕಾ ವಿದ್ಯಾಸಂಸ್ಥೆಯಿಂದ ರವಿವಾರ ಆಯೋಜಿಸಲಾಗಿದ್ದ ಪ್ರತಿಭಾ ಪರೀಕ್ಷೆಯಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಪ್ರತಿಭೆ ಪ್ರದರ್ಶಿಸಿದರು.ಭೂಮಿಕಾ ರೆಸಿಡೆನ್ಸಿಯಲ್ ಸ್ಕೂಲ್ನ ಆವರಣದಲ್ಲಿ ಮೂರರಿಂದ ಹತ್ತನೇ ತರಗತಿಯ ಕನ್ನಡ ಹಾಗೂ ಇಂಗ್ಲಿಷ್ ಮಾದ್ಯಮದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಿ ಪ್ರಥಮಸ್ಥಾನ ಪಡೆದ ಪ್ರತೀ ತರಗತಿಯ ವಿದ್ಯಾರ್ಥಿಗಳಿಗೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರರಿಂದ ಉಚಿತ ಸೈಕಲ್ ಹಾಗೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಪ್ರತೀ ತರಗತಿಯ ತಲಾ ಹತ್ತು ವಿದ್ಯಾರ್ಥಿಗಳಿಗೆ ಒಟ್ಟು ಮೂವತ್ತೆರಡು ಲಕ್ಷ ಐವತ್ತು ಸಾವಿರ ರೂ.ಗಳ ಬಹುಮಾನ ಹಾಗೂ ಶಿಷ್ಯವೇತನ ನೀಡಲಾಗುವುದೆಂದು ಸಂಸ್ಥೆಯ ಸಂಸ್ಥಾಪಕ ಮುತ್ತು ಢವಳೇಶ್ವರ ಘೊಷಿಸಿದರು.ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಧರ್ಮಪತ್ನಿ ಕವಿತಾ ಸಿದ್ದು ಕೊಣ್ಣೂರ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುವ ಸೈಕಲ್ಗಳನ್ನು ಅನಾವರಣಗೊಳಿಸಿದರು.
