Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತಾಳಿಕೋಟಿ. ಪಟ್ಟಣದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕಾ ಆಡಳಿತ ತಾಲೂಕ ಪಂಚಾಯತ ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ತಾಳಿಕೋಟಿ ಮತ್ತು ವಾಲ್ಮೀಕಿ ಸಮಾಜದ ವತಿಯಿಂದ ಸಡಗರದಿಂದ ಆಚರಿಸಲಾಯಿತು.ಶನಿವಾರ ಪಟ್ಟಣದ ದೇವರ ಹಿಪ್ಪರಗಿ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಸಮಾಜ ದಲಿತ ಪರ ಸಂಘಟನೆಗಳ ಸಹಯೋಗ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಹಾಗೂ ಪುರಸಭೆ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಜಯಂತೋತ್ಸವವನ್ನು ಏರ್ಪಡಿಸಲಾಗಿತ್ತು. ನಂತರ ತಹಸಿಲ್ದಾರ್ ಕಾರ್ಯಾಲಯ ಸಭಾಂಗಣದಲ್ಲಿ ತಹಸಿಲ್ದಾರ್ ಕೀರ್ತಿ ಚಾಲಕ್ ಅವರು ಮಹರ್ಷಿ ವಾಲ್ಮೀಕಿ ಇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಪ್ರೇಮನಗೌಡ ಪಾಟೀಲ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಬೇಡ ಜನಾಂಗದಲ್ಲಿ ಜನಸಿದರೂ ಇಡೀ ವಿಶ್ವಕ್ಕೆ ಸಮಾಜಮುಖಿ ಚಿಂತನೆಯನ್ನು ನೀಡಿದ್ದಾರೆ. ಮಹಾನ್ ಗ್ರಂಥ ರಾಮಾಯಣ ರಚಿಸುವುದರ ಮೂಲಕ ದಾರ್ಶನಿಕ ಎನಿಸಿಕೊಂಡರು. ಅವರೊಬ್ಬ ಮಹಾ ತಪಸ್ವಿ.…
ದೇವರಹಿಪ್ಪರಗಿಯ ಐತಿಹಾಸಿಕ ರಾವುತರಾಯ ಮಲ್ಲಯ್ಯ ಜಾತ್ರಾಮಹೋತ್ಸವ ದೇವರಹಿಪ್ಪರಗಿ: ಐತಿಹಾಸಿಕ ರಾವುತರಾಯ ಮಲ್ಲಯ್ಯ ಜಾತ್ರಾ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯು ಅನ್ನದಾಸೋಹ ಏರ್ಪಡಿಸುವುದರ ಮೂಲಕ ಪಟ್ಟಣದ ವಿವಿಧ ಗೆಳೆಯರ ಬಳಗಗಳು ಭಕ್ತರ ಪ್ರಸಾದ ಸೇವೆಯಲ್ಲಿ ನಿರತವಾಗಿವೆ.ಪಟ್ಟಣದ ರಾವುತರಾಯ ಮಲ್ಲಯ್ಯ ಜಾತ್ರೆಯ ೪ನೇ ದಿನದ ಸಕ್ಕರೆ ಲೋಬಾನ ಕಾರ್ಯಕ್ರಮದ ಅಂಗವಾಗಿ ಪ್ರತಿ ವರ್ಷ ನೆರೆಯ ಮಹಾರಾಷ್ಟ್ರ, ಗೋವಾ, ತೆಲಂಗಾಣ ರಾಜ್ಯಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ಊಟ ಹಾಗೂ ಉಪಹಾರದ ಅನುಕೂಲತೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿವರ್ಷ ವಿವಿಧ ಗೆಳೆಯರ ಬಳಗಗಳು ಅನ್ನದಾಸೋಹದ ವ್ಯವಸ್ಥೆ ಕಲ್ಪಿಸಿ ತಮ್ಮದೇಯಾದ ಸೇವೆಯಲ್ಲಿ ನಿರತವಾಗಿವೆ.ಗೆಳೆಯರ ಬಳಗ ಕಳೆದ ೧೦ ವರ್ಷಗಳಿಂದ ಆರಂಭಿಸಿದ ದಾಸೋಹ ವ್ಯವಸ್ಥೆಯಲ್ಲಿ ಪಟ್ಟಣದ ವ್ಯಾಪಾರಸ್ಥರು, ವೈದ್ಯರು, ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಸಮುದಾಯಗಳಿಗೆ ಸೇರಿದ ಯುವಕರು ಪಾಲ್ಗೊಳ್ಳುವುದು ವಿಶೇಷವಾಗಿದೆ. ಬೆಳಿಗ್ಗೆ ಬೇಗ ಪ್ರಸಾದವನ್ನು ತಯಾರಿಸಿ ದೇವರಿಗೆ ನೈವಿಧ್ಯ ಅರ್ಪಿಸಿ ನಂತರ ದಾಸೋಹ ಸೇವೆ ಪ್ರಾರಂಭಿಸಲಾಗುತ್ತದೆ. ಒಂದು ಕಡೆ…
ದೇವರಹಿಪ್ಪರಗಿ: ಮಹರ್ಷಿ ವಾಲ್ಮೀಕಿ ರಾಮಾಯಣ ಎಂಬ ಸುಂದರ ಮಹಾಕಾವ್ಯವನ್ನು ರಚಿಸುವುದರ ಮೂಲಕ ಕವಿಗಳ ಕವಿ ಎಂದು ಇತಿಹಾಸದಲ್ಲಿ ಹೆಸರಾಗಿದ್ದಾನೆ ಎಂದು ಕಾಂಗ್ರೆಸ್ ಧುರೀಣ ಸಾಯಿಕುಮಾರ ಬಿಸನಾಳ ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಶನಿವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. ಜಗತ್ತಿನಲ್ಲಿ ಸತ್ವ ಮತ್ತು ಮೌಲ್ಯಯುತ ಸಾಹಿತ್ಯ ಸೃಷ್ಟಿಗೆ ಅಡಿಪಾಯವಾದ ರಾಮಾಯಣವನ್ನು ರಚಿಸುವುದರ ಮೂಲಕ ಮಹರ್ಷಿ ವಾಲ್ಮೀಕಿಯವರು ಮಮತೆ, ಭಾತೃತ್ವ, ತ್ಯಾಗ, ಮಮಕಾರ, ದೇಶಪ್ರೇಮ, ಅಳಿಲು ಸೇವೆ, ಪಿತೃ-ಮಾತೃ-ಭಾತೃ ವಾಕ್ಯ ಪರಿಪಾಲನೆಯಂತಹ ಮಾನವೀಯ ಮೌಲ್ಯಗಳನ್ನು ಇಡೀ ಮಾನವಕುಲಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಇಂಥ ಕವಿಯನ್ನು ಮಹಾಕವಿ ಕಾಳಿದಾಸ ‘ಕವಿಗಳಕವಿ’ ಎಂದು ಗೌರವಿಸಿ ಶ್ಲಾಘಿಸಿದ್ದಾನೆ ಎಂದರು.ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಮಳಸಿದ್ದಯ್ಯ ಹಿರೇಮಠ ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವಿತರಿಸಲಾಯಿತು.ಶಿವಪ್ಪ ಪೂಜಾರಿ, ವಿಠ್ಠಲ ದೇಗಿನಾಳ, ವಿದ್ಯಾಧರ ಸಂಗೋಗಿ, ಶರಣಬಸು ದೇಗಿನಾಳ, ಶಿವಪದ್ಮ ಹಳ್ಳಿ, ಅಪ್ಪಣ್ಣ ಗಣಜಲಿ, ರಾಜು ದೇಗಿನಾಳ, ಬಸವರಾಜ ಗಣಜಲಿ, ಅಂಬಾದಾಸ ಮಾನೆ, ಗೋವಿಂದ ದಳವಾಯಿ, ಸದಾಶಿವ ಜಂಬಗಿ,…
ದೇವರಹಿಪ್ಪರಗಿ: ಕನ್ನಡಪರ ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘಟನೆಗಳ ಸಹಕಾರದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶುಕ್ರವಾರ ಜರುಗಿದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಶರಣ ಸಾಹಿತ್ಯ, ಚುಟುಕು ಸಾಹಿತ್ಯ ಪರಿಷತ್ಗಳು, ದಲಿತಪರ ಸಂಘಟನೆಗಳ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ ಪ್ರಮುಖರು ಹಾಗೂ ವಿವಿಧ ರಂಗಗಳ ಸಾಧಕರು ಸೇರಿದಂತೆ ಕನ್ನಡ ಭಾಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಜರುಗಲಿದೆ. ಜೊತೆಗೆ ಮುಖ್ಯವಾಗಿ ಕರ್ನಾಟಕಕ್ಕೆ ೫೦ರ ಸಂಭ್ರಮದ ಅಂಗವಾಗಿ ಅವಿಸ್ಮರಣೀಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶಿಷ್ಟವಾಗಿ ಆಚರಿಸೋಣ ಎಂದರು.ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಆರ್.ಕೊಕಟನೂರ, ಸಿಆರ್ಪಿ ವಿಜಯಲಕ್ಷ್ಮಿ ನವಲಿ, ತಾಲ್ಲೂಕು ಶಿಕ್ಷಕರ ಸಂಘದ ಸಂಘದ ಕಾರ್ಯದರ್ಶಿ ಜಿ.ಪಿ.ಬಿರಾದಾರ, ಕನ್ನಡಪರ ಸಂಘಟನೆಗಳ ಪ್ರಕಾಶ ಡೋಣೂರಮಠ, ರಹಿಮಾನ ಕಣಕಾಲ, ಚಂದ್ರಶೇಖರ…
ಮುದ್ದೇಬಿಹಾಳ: ೨೪ಸಾವಿರ ಶ್ಲೋಕಗಳನ್ನು ಒಳಗೊಂಡ ಮಹಾ ಕಾವ್ಯವನ್ನು ರಚಿಸಿ ಮಹರ್ಷಿ ವಾಲ್ಮೀಕಿ ಅವರು ನಮಗೆ ಕೊಟ್ಟಿದ್ದಾರೆ. ಕಾರ್ಟೂನ್ಗಳಲ್ಲಿ ತೋರಿಸುವ ಚಿತ್ರಗಳನ್ನು ನೋಡಿ ನಾವು ಇದು ರಾಮಾಯಣ ಅಂದುಕೊಂಡಿದ್ದೇವೆ. ಆದರೆ ಮಹರ್ಷಿ ವಾಲ್ಮೀಕಿ ನಮಗೆ ಕೊಟ್ಟಿರುವ ರಾಮಾಯಣದ ಮೌಲ್ಯಗಳೇ ಬೇರೆ ಎಂದು ಬಾಗೇವಾಡಿಯ ಶಿಕ್ಷಕ, ವಾಗ್ಮಿ ಅಶೋಕ ಹಂಚಲಿ ಹೇಳಿದರು.ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.ಕೌಟುಂಬಿಕ ಜೀವನದ ಮಹಾ ಮೌಲ್ಯಗಳನ್ನು ತೋರಿಸುವ ರಾಜ, ತಂದೆ-ತಾಯಿಗಳು ಹೇಗಿರಬೇಕು, ಹೆಂಡತಿಯ ಆದರ್ಶಗಳು ಏನಾಗಿರಬೇಕು, ಸಹೋದರರ ಭಾತೃತ್ವದ ಬಾಂಧವ್ಯ ಹೇಗಿರಬೇಕು ಎನ್ನುವ ವಿಚಾರಧಾರೆಗಳನ್ನಿಟ್ಟುಕೊಂಡು ಬರೆದ ಮಹಾಕಾವ್ಯ ರಾಮಾಯಣವಾಗಿದೆ. ಅದಕ್ಕೆ ಇಂದಿಗೂ ಕೂಡ ರಾಮಾಯಣ ಜನಮಾನಸದಲ್ಲಿ ಉಳಿದು ಜನರ ದಾರಿ ತೋರುವ ಮಹಾ ದೀಪವಾಗಿ ಬೆಳಗುತ್ತಿದೆ ಎಂದರು.ಡಿಎಸ್ಎಸ್ ಮುಖಂಡ ಹರೀಶ ನಾಟೇಕಾರ ಮಾತನಾಡಿದರು.ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಮಾತನಾಡಿ, ರಾಮಾಯಣ,…
ವಿಜಯಪುರ: ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ಸರ್ಕಾರದಿಂದ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ನೊಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ.ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನ್ರಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಿದ್ದು, ಜಿಲ್ಲೆಯ ಖಾಸಗಿ ಸಾರಿಗೆ ವಾಹನಗಳ ನಿವಾಹಕರು, ಕ್ಲೀನರ್ಗಳು ನೊಂದಾಯಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.ಈ ಯೋಜನೆಯಡಿ ನೋಂದಾಯಿಸಿದ ಕಾರ್ಮಿಕರಿಗೆ ಅಪಘಾತದಿಮದ ಚಾಲಕರು, ನಿವಾಹಕರು ಹಾಗೂ ಕ್ಲೀನರ್ಗಳು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರಿಗೆ ೫ ಲಕ್ಷ ರೂ. ಪರಿಹಾರ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ೨ ಲಕ್ಷದವರೆಗೆ ಪರಿಹಾರ ಒದಗಿಸಲಾಗುತ್ತದೆ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದ ಫಲಾನುಭವಿಗೆ ಆಸ್ಪತ್ರೆ ವೆಚ್ಚದ ಮರುಪಾವತಿ, ಅಪಘಾತಕ್ಕೊಳಗಾಗಿ ೧೫ ದಿನಗಳಿಗಿಂತ ಕಡಿಮೆ ಅವದಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ೫೦ ಸಾವಿರ ರೂ.ವರೆಗೆ ಅಥವಾ ನಿಖರ ಆಸ್ಪತ್ರೆ…
೫೦ನೇ ಕರ್ನಾಟಕ ಸಂಭ್ರಮ ಹಿನ್ನಲೆಕನ್ನಡ ಕಾರ್ಯಗಳಿಗೆ ಕೈಜೋಡಿಸಿ ರಾಜ್ಯೋತ್ಸವ ವಿಶೇಷವಾಗಿಸಿ ವಿಜಯಪುರ: ನಗರದ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಮೂಲಕ ಕನ್ನಡತನ ಮೆರೆಯಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ೫೦ನೇ ಕರ್ನಾಟಕ ಸಂಭ್ರಮ ಹಿನ್ನೆಲೆಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸುವ ಕುರಿತು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಮತ್ತು ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ನವಂಬರ್ ೧ರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡ ನಾಮ ಫಲಕ ಅಳವಡಿಸಿ ೫೦ನೇ ಕರ್ನಾಟಕದ ಸಂಭ್ರಮ ಆಚರಣೆ ಮಾಡಲು ಆ ದಿನದಂದು ಕನ್ನಡಮಯ ವಾತಾವರಣದಿಂದ ಅಂಗಡಿ ಮುಂಗಟ್ಟುಗಳನ್ನು ಶೃಂಗರಿಸಿ ಸಾಯಂಕಾಲ ದೀಪ (ಹಣತೆ) ಗಳನ್ನು ಬೆಳಗಿಸಲು ಮನವಿ ಮಾಡಿದರು.ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು…
ವಿಜಯಪುರ: ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿ ವಿಜಯಪುರ ಜಿಲ್ಲೆಯ ೪೦ ಆರೋಗ್ಯ ಸಂಸ್ಥೆಗಳಿಗೆ ಲಭಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರದಿಂದ ೨೦೧೫ ರಿಂದ ಕಾಯಕಲ್ಪ ಪ್ರಶಸ್ತಿ ನೀಡಲಾಗುತ್ತಿದ್ದು, ೨೦೧೯-೨೦ನೇ ಸಾಲಿನಲ್ಲಿ ಜಿಲ್ಲೆಯ ೧೫ ಆರೋಗ್ಯ ಸಂಸ್ಥೆಗಳಿಗೆ, ೨೦೨೦-೨೧ನೇ ಸಾಲಿನಲ್ಲಿ ೨೦ ಆರೋಗ್ಯ ಸಮಸ್ಥೆಗಳಿಗೆ ಪ್ರಶಸ್ತಿ ದೊರಕಿದ್ದು, ಈ ವರ್ಷ ೨೦೨೩ನೇ ಸಾಲಿನಲ್ಲಿ ಜಿಲ್ಲೆಯ ೪೦ ಆರೋಗ್ಯ ಸಂಸ್ಥೆಗಳಿಗೆ ಕಾಯಕಲ್ಪ ಪ್ರಶಸ್ತಿ ದೊರೆತಿದೆ.ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕಾ ಆಸ್ಪತ್ರೆಗಳ ವಿಭಾಗದಲ್ಲಿ ತಾಲೂಕಾ ಆಸ್ಪತ್ರೆ ಬ.ಬಾಗೇವಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಜಿಲ್ಲೆಯಲ್ಲಿ ಪ್ರಾ.ಆ.ಕೇಂದ್ರ ತಿಕೋಟಾ ಅತ್ಯೂತ್ತಮ ಪ್ರಾ.ಆ.ಕೇಂದ್ರ, ಎಂದು ಪ್ರಶಸ್ತಿ ಪಡೆದಿರುತ್ತದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಬಾಗಲಕೋಟ ಮತ್ತು ಬಿಜಾಪುರ ಕ್ಲಸ್ಟರ್…
ಮಹರ್ಷಿ ವಾಲ್ಮೀಕಿಯವರ ಜಯಂತಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ವಿಜಯಪುರ: ರಾಮಾಯಣ ಮಹಾಕಾವ್ಯವವನ್ನು ರಚಿಸಿದವರು ವಾಲ್ಮೀಕಿಯವರು. ಅವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,ಅವರು ಮಾತನಾಡಿದರು.ರಾಮಾಯಣ ಎಂಬ ಮಹಾಕಾವ್ಯವನ್ನು ರಚಿಸಿದ್ದು ವಾಲ್ಮೀಕಿಯವರು. ನಿಸರ್ಗದೊಂದಿಗೆ ಸಂಪರ್ಕ ಹೊಂದಿದ್ದ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಬ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ,ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ ಎಂದು ಹೇಳಿದರು. ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ…
ದೇವರಹಿಪ್ಪರಗಿ: ನವೆಂಬರ್ ೧ರಿಂದ ಮತಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುವುದರೊಂದಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ತಿಳಿಸಿದ್ದಾರೆ.ನ.೧ರಂದು ಬೆಳಿಗ್ಗೆ ೦೯ಗಂಟೆಗೆ ಮಾರ್ಕಬ್ಬಿನಹಳ್ಳಿ, ೧೧ ಗಂಟೆಗೆ ಸಾತಿಹಾಳ, ೦೧ ಗಂಟೆಗೆ ಯಾಳವಾರ, ೦೩ಗಂಟೆಗೆ ಕುದರಿಸಾಲವಾಡಗಿ, ೦೫ಗಂಟೆಗೆ ವಡವಡಗಿ, ಸಂಜೆ ೦೭ಗಂಟೆಗೆ ಹೂವಿನಹಿಪ್ಪರಗಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆ ನಡೆಸಲಾಗುತ್ತಿದೆ.ನ.೨ರಂದು ಬೆಳಿಗ್ಗೆ ೦೯ಗಂಟೆಗೆ ದಿಂಡವಾರ, ೧೧ಗಂಟೆಗೆ ರೆಬಿನಾಳ, ಮದ್ಯಾಹ್ನ ೦೧ಗಂಟೆಗೆ ಬ್ಯಾಕೋಡ, ೦೩ಗಂಟೆಗೆ ಹುಣಶ್ಯಾಳ ಪಿಬಿ, ಸಂಜೆ ೦೫ಗಂಟೆಗೆ ಕಣಕಾಲ, ೦೭ಗಂಟೆಗೆ ಇಟಗಿ, ಸಭೆ ನಡೆಯಲಿವೆ. ಅದರಂತೆ ನ.೩ರಂದು ಬೆಳಿಗ್ಗೆ ೦೯ ಗಂಟೆಗೆ ತುಂಬಗಿ, ೧೧ಗಂಟೆಗೆ ಬಮ್ಮನಳ್ಳಿ, ಮದ್ಯಾಹ್ನ ೦೧ಗಂಟೆಗೆ ಬ. ಸಾಲವಾಡಗಿ, ೦೩ಗಂಟೆಗೆ ಕೊಡಗಾನೂರ, ಸಾಯಂಕಾಲ ೦೫ಗಂಟೆಗೆ ಬಂಟನೂರ ಹಾಗೂ ಸಂಜೆ ೦೭ ಗಂಟೆಗೆ ಅಸ್ಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗುತ್ತಿದೆ.ಸಭೆಯಲ್ಲಿ ಸರಕಾರದ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಜೊತೆಗೆ…
