Author: editor.udayarashmi@gmail.com

ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಬೆಂಬಲ ಹಾಗೂ ಸಹಕಾರದಿಂದ ಬರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.ದೇವರಹಿಪ್ಪರಗಿ ಮತಕ್ಷೇತ್ರದ ಆಕಾಂಕ್ಷಿಗಳಲ್ಲಿ ಯಾವುದೇ ಭಿನ್ನಮತವಿಲ್ಲ. ಇದನ್ನು ನಾವೆಲ್ಲ ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಈಗ ನನಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸ್ಪರ್ಧೆಗೆ ಅವಕಾಶ ದೊರೆತಿದೆ. ಈ ಅವಕಾಶವನ್ನು ನಾವು ಸದುಪಯೋಗ ಪಡೆಸಿಕೊಳ್ಳುತ್ತೇವೆ.ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ನೀಡಿದ ಭ್ರಷ್ಟಾಚಾರರಹಿತ ಆಡಳಿತ ಹಾಗೂ ಜನಪ್ರೀಯ ಯೋಜನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಪ್ರಣಾಳಿಕೆಗಳು, ಗ್ಯಾರಂಟಿ ಕಾರ್ಡ ಭರವಸೆಗಳು ಜನರನ್ನು ಸೆಳೆಯುವಲ್ಲಿ ಸಫಲವಾಗಿವೆ ಎಂದು ಹೇಳುತ್ತಾ, ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗುವುದು. ನಂತರ ದಿ:೧೯ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಹಾಗೂ ಕ್ಷೇತ್ರದ ಎಲ್ಲ ಆಕಾಂಕ್ಷಿಗಳ ಉಪಸ್ಥಿತಿಯಲ್ಲಿ ಮತ್ತೋಮ್ಮೆ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಯಾವುದೇ ಪಕ್ಷ ಪ್ರತಿಸ್ಪರ್ಧಿಯಲ್ಲ. ಎಲ್ಲ ನಾಯಕರ ನಾಯಕತ್ವದಡಿ ಪ್ರಚಾರ ಕೈಗೊಂಡು…

Read More

ವಿಜಯಪುರ: ನಗರ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ರಾಮನಗೌಡ ಪಾಟೀಲ ಅವರು ಸೋಮವಾರ ನಗರದ ವಿವಿಧೆಡೆ ಸಂಚರಿಸಿ ಪ್ರಚಾರ ನಡೆಸಿ, ಮತಯಾಚಿಸಿದರು.ಈ ವೇಳೆ ಮಾತನಾಡಿದ ಅವರು, ನಮ್ಮ ತಂದೆ ಕಳೆದ ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ದೂಳಾಪುರವಾಗಿದ್ದ ನಗರವನ್ನು ಸ್ಮಾರ್ಟ್ ಸಿಟಿ ಆಗಿ ಹೊಳೆಯುವಂತೆ ಮಾಡಿದ್ದಾರೆ. ಅವರ ವಿರೊಧಿಗಳು ಕೂಡ ಇದನ್ನು ಒಪ್ಪುತ್ತಾರೆ. ಗುಣಮಟ್ಟದ ಆಂತರಿಕ ಹಾಗೂ ಮುಖ್ಯ ರಸ್ತೆಗಳ ಅಭಿವೃದ್ಧಿ, ಒಳಚರಂಡಿ ನಿರ್ಮಾಣ, ಝಿಮ್, ಚಿಲ್ಡ್ರನ್ ಪಾರ್ಕ್, ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಮೂಲಭೂತ ಸೌಕರ್ಯಗಳ ಜೊತೆಗೆ ವೈನ್ ಪಾರ್ಕ್, ಜವಳಿ ಪಾರ್ಕ್, ಜಿಟಿಟಿಸಿ ಕಾಲೇಜು ಮಂಜೂರು ಮಾಡಿಸಿದ್ದಾರೆ. ಇನ್ನೂ ಹಲವು ಕನಸುಗಳನ್ನು ಹೊತ್ತಿಕೊಂಡಿದ್ದು, ತಾವುಗಳು ಆಶೀರ್ವದಿಸುವ ಮೂಲಕ ಈಡೇರಿಸಲು ನೆರವಾಗಬೇಕು ಎಂದು ಮನವಿ ಮಾಡಿದರು.ಈ ವೇಳೆ ಮುಖಂಡರಾದ ಅಶೋಕ್ ತೊರವಿ, ಸಿದ್ದನಗೌಡ ಬಿರಾದಾರ, ತುಳಸಿರಾಮ್ ಸೂರ್ಯವಂಶಿ, ಚಂದ್ರಕಾAತ ಪತ್ತಾರ, ಭೀಮು ಮಾಶಾಳ, ಶಂಕರ ಹೂಗಾರ…

Read More

ಸಿಂದಗಿ: ತಾಲೂಕಿನ ಯಂಕAಚಿ ಗ್ರಾಮದಲ್ಲಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ, ಬೂತ್ ಅಧ್ಯಕ್ಷ ಮತ್ತು ಪೇಜ್ ಪ್ರಮುಖರಿಂದ ಹಮ್ಮಿಕೊಂಡ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ರಮೇಶ ಭೂಸನೂರ ಮಾತನಾಡಿದರು.ಇದೇ ಸಂಧರ್ಭದಲ್ಲಿ ಗ್ರಾಮದ ಚುನಾವಣಾ ಉಸ್ತುವಾರಿಗಳಾದ ಬಾಲಚಂದ್ರ ಜಿ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಗುರು ತಳವಾರ ಯಶವತ್ರಾಯಗೌಡ ರೋಗಿ, ಡಾ.ಅನೀಲ ನಾಯಕ ಸಂತೋಷ ಪಾಟೀಲ್, ಜಿ.ಆರ್.ಪಾಟೀಲ್ ಶ್ರೀಶೈಲಗೌಡ ಬಿರಾದಾರ, ಸಿದ್ದು ಬುಳ್ಳಾ, ಮಲ್ಲಿಕಾರ್ಜುನ ಬಿರಾದಾರ, ಶಿವಕುಮಾರ ಬಿರಾದಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.

Read More

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠವು ಶ್ರೀಗುರು ಮಹಾಂತೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಈ ವರ್ಷದಿಂದ ಗುರು ಮಹಾಂತೇಶ್ವರಶ್ರೀ ಪ್ರಶಸ್ತಿ ನೀಡಲು ಮುಂದಾಗಿದ್ದು. ಈ ವರ್ಷದ ಪ್ರಶಸ್ತಿಗೆ ವಿಜಯಪುರದ ಹಿರಿಯ ಸಾಹಿತಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಬಿ.ಎಂ.ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೧ ಸಾವಿರ ನಗದು, ಕಂಚಿನ ಪ್ರಶಸ್ತಿ, ನೆನಪಿನ ಕಾಣಿಕೆ ಒಳಗೊಂಡಿದೆ. ಈ ಪ್ರಶಸ್ತಿಯನ್ನು ಏ.೨೦ ರಂದು ಬೆಳಗ್ಗೆ ೧೧ ಗಂಟೆಗೆ ಶ್ರೀಮಠದಲ್ಲಿ ನಡೆಯುವ ಶ್ರೀಗುರು ಮಹಾಂತೇಶ್ವರರ ೭೪ ನೇ ಯಾತ್ರಾ ಮಹೋತ್ಸವ ಹಾಗೂ ಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಗಳ ೨೨ ನೇ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ೪೦ ಜನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೆ ಸು.೨ ಸಾವಿರ ಬೆಲೆ ಬಾಳುವ ಬ್ಯಾಗ್, ನೋಟ್‌ಪುಸ್ತಕ ಮೊದಲಾದ ಪಠ್ಯಪರಿಕರಗಳನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ನೀಡಲಾಗುತ್ತಿದೆ ಎಂದು ಪಟ್ಟಿಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಅತಾಲಟ್ಟಿ ಗ್ರಾಮದಲ್ಲಿರುವ ಶಿವಾನಿ ಗಾರ್ಮೆಂಟ್ಸ್ನಲ್ಲಿ ಗುರುವಾರ ಸದರಿ ಘಟಕದ ಎಲ್ಲ ಕಾರ್ಮಿಕರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎ ವಾಘಮೋರೆ ಅವರು ಮಾತನಾಡಿ ಮತದಾನ ನಮ್ಮ ಹಕ್ಕು. ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಶಿವಾನಿ ಗಾರ್ಮೆಂಟ್ಸ್ ಘಟಕದ ಮಾಲೀಕರಾದ ನಿತೀನ್ ಕೊಕಟನೂರ ಹಾಗೂ ಘಟಕದ ಮಾನವ ಸಂಪನ್ಮೂಲ ಅಧಿಕಾರಿಗಳಾದ ಜೋಶಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕೊಲ್ಹಾರ: ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ‌ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಏ.20 ಗುರುವಾರದಂದು ಬಸವನಬಾಗೇವಾಡಿ ತಹಶಿಲ್ದಾರ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶಂಕರಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ.ಈ ಕುರಿತು ಭಾನುವಾರ ಕೊಲ್ಹಾರ ಪಟ್ಟಣದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅಂದು ಬೆಳಿಗ್ಗೆ 11 ಕ್ಕೆ ಬಾಗೇವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆ ಮೂಲಕ ತಹಶಿಲ್ದಾರ ಕಚೇರಿವರೆಗೂ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಬಸವನ ಬಾಗೇವಾಡಿ, ಕೊಲ್ಹಾರ ಹಾಗೂ ನಿಡಗುಂದಿ ತಾಲ್ಲೂಕುಗಳ ಪಟ್ಟಣ ಹಾಗೂ ಗ್ರಾಮಗಳಿಂದ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಳ್ಳುಬ್ಬಿಯವರಿಗೆ ಬಹಿರಂಗ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದರು.ಈ ವೇಳೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮಂಡಲ‌ ಸಂಚಾಲಕ ಅರುಣ್ ನಾಯಕ್ ಮಾತನಾಡಿ, ಬೆಳ್ಳುಬ್ಬಿಯವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನೆಲೆ ದಿನೇದಿನೇ ಮತಕ್ಷೇತ್ರದ…

Read More

ಕೊಲ್ಹಾರ: 2023 ವಿಧಾನಸಭಾ ಚುನಾವಣೆ ಹಿನ್ನೆಲೆ ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ‌ ಅಭ್ಯರ್ಥಿಯಾಗಿರುವ ಎಸ್.ಕೆ.ಬೆಳ್ಳುಬ್ಬಿಯವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ತತ್ವಸಿದ್ದಾಂತ ಮೆಚ್ಚಿಕೊಂಡು ಕೊಲ್ಹಾರ ತಾಲ್ಲೂಕಿನ ಕೂಡಗಿ ಗ್ರಾಮದ ಅಪಾರ ಸಂಖ್ಯೆಯ ವಿವಿಧ ಸಮಾಜಗಳ ಗುರುಹಿರಿಯರು ಹಾಗೂ ಯುವಕರು ಬೆಳ್ಳುಬ್ಬಿಯವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಬೆಂಬಲ ಸೂಚಿಸಿದರು. ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿ ಜೈಕಾರ ಹಾಕಿದರು.

Read More

ಕಲಕೇರಿ: ಸಮೀಪದ ಆಲಗೂರ ಗ್ರಾಮದಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ್ ( ಕುದುರಿ ಸಾಲೋಡಗಿ)ಗ್ರಾಮದ ವಿವಿಧೆಡೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.ನಂತರ ಮಾರುತಿ ದೇವಸ್ಥಾನದಲ್ಲಿ ಸಭೆ ನಡೆಸಿ ಮಾತನಾಡಿದ ರಾಜುಗೌಡ ಪಾಟೀಲ್ ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳು ಬಂಡಾಯದ ಬೇಗುದಿಯಲ್ಲಿ ಒದ್ದಾಡುತ್ತಿವೆ. ಕ್ಷೇತ್ರದಲ್ಲಿ ಜೆಡಿಎಸ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಎಷ್ಟೆ ಪ್ರಯತ್ನಿಸಿದರು ಈಬಾರಿ ಜಾತ್ಯತೀತವಾಗಿ ನನಗೆ ಕ್ಷೇತ್ರದ ಜನತೆ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದೆ ಏ.18ರಂದು ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳ ತೊರೆದು ಜೆಡಿಎಸ್ ಸೇರ್ಪಡೆಗೊಂಡರು. ಜೆಡಿಎಸ್ ಮುಖಂಡ ಸಾಯಬಣ್ಣ ಬಾಗೇವಾಡಿ. ಮುನ್ನಾ ಮಳಖೇಡ, ಮಡು ಸಾಹುಕಾರ್, ಕಾಸಿಂ ನಾಯ್ಕೋಡಿ. ರಮೇಶ್ ಹೆಂಡಿ. ಶರಣು ಧರಿ. ಶಂಕರಗೌಡ ಪಾಟೀಲ. ಕಂಠೆಪ್ಪ ಮು ಜನ್ನಪ್ಪಗೋಳ. ಮಡಿವಾಳಪ್ಪ ಮಾಗಣಗೇರಿ. ಲಕ್ಷ್ಮಣ ವಾಲಿಕಾರ. ಮಲ್ಲಿಕಾರ್ಜುನ ತಮ್ಮಣ್ಣಗೋಳ. ಸಂತೋಷ್ ತಮ್ಮಣ್ಣಗೋಳ. ಕೆಂಚಪ್ಪ ಜನ್ನಪ್ಪಗೋಳ. ರಘುವೀರ್ ವರ್ಧಮಾನ. ಮಹಿಬೂಬ ದಲಾಲ. ಪೀರಮೊಹ್ಮದ…

Read More

ವಿಜಯಪುರ: ಲಿಂಗಾಯತರನ್ನು ಬಿಜೆಪಿ ಎಂದೂ ಕಡೆಗಣಿಸಿಲ್ಲ, ಬಿಜೆಪಿ ಲಿಂಗಾಯತ ವಿರೋಧಿ ಎಂದರೆ ಹೇಗೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿರುದ್ಧ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವರಿಗೆ ಎಲ್ಲ ರೀತಿಯಿಂದ ಅಧಿಕಾರ ನೀಡಿದೆ. ಮಾನ, ಮರ್ಯಾದೆ, ಸ್ವಾಭಿಮಾನ ಇದ್ದವರು ಕಾಂಗ್ರೆಸ್‌ಗೆ ಹೋಗುವುದಿಲ್ಲ. ಲಿಂಗಾಯತ ಮತಗಳಿಂದ ಶಾಸಕರಾಗಿದ್ದೀರಿ, ಮುಖ್ಯಮಂತ್ರಿಯಾಗಿದ್ದೀರಿ, ಎಲ್ಲ ಅಧಿಕಾರವನ್ನು ಪಕ್ಷ ಕೊಟ್ಟಿದೆ. ಆದರೆ ಸದ್ಯ ಬಿಜೆಪಿ ಲಿಂಗಾಯತ ವಿರೋಧಿ ಎನ್ನುವುದು ಸರಿಯಲ್ಲ. ನನ್ನನ್ನೂ ಉಚ್ಚಾಟನೆ ಮಾಡಲಾಗಿತ್ತು. ನಾನು ಯಾವತ್ತೂ ಪಕ್ಷವನ್ನು ವಿರೋಧಿಸಿ ಮಾತನಾಡಲಿಲ್ಲ. ಸದ್ಯ ಕೆಲವೊಂದು ವಿಷಯ ಬಹಿರಂಗ ಪಡಿಸುತ್ತೇನೆ ಎಂದು ಶೆಟ್ಟರ್ ಹೇಳಿಕೆ ನೀಡುವುದು ಬ್ಲಾö್ಯಕ್ ಮೇಲೆ ಅಷ್ಟೇ ಎಂದರು.ಕೆ.ಎಸ್. ಈಶ್ವರಪ್ಪ ಅವರಿಗೂ ಟಕೆಟ್ ನಿರಾಕರಣೆ ಮಾಡಲಾಗಿದೆ. ಆದರೆ ಅವರು ಪಕ್ಷ ಸಂಘಟನೆ ಮಾಡಲು ಮುಂದಾಗಿಲ್ಲವೇ ? ಈಶ್ವರಪ್ಪ ಅವರನ್ನು ಅನುಕರಣೆ ಮಾಡಬೇಕು ಎಂದರು.ಕೋಮುವಾದಿ, ವಿದೇಶಿ ಹಣವನ್ನು ಬಳಕೆ ಮಾಡಿ ಮುಸ್ಲಿಂ ರಾಷ್ಟçವನ್ನಾಗಿಸುವ ಗುರಿ ಹೊಂದಿರುವ ಎಸ್‌ಡಿಪಿಐ…

Read More

ಆಲಮಟ್ಟಿ: ದೇವರಹಿಪ್ಪರಗಿ ಮತಕ್ಷೇತ್ರದಿಂದ ವಿಧಾನಸಭೆಗೆ ಕೆಜಿಪಿ ಪಕ್ಷದಿಂದ ಸ್ಪರ್ಧಿಸುವುದಾಗಿ ನಿಡಗುಂದಿ ತಾಲ್ಲೂಕಿನ ಇಟಗಿ ಗ್ರಾಮದ ಭೂಕೈಲಾಸ ಮೇಲುಗದ್ದುಗೆ ಹಿರೇಮಠದ ಗುರುಶಾಂತವೀರ ಸ್ವಾಮೀಜಿ ಸ್ಪರ್ಧಿಸುವುದಾಗಿ ಸೋಮವಾರ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಬಡ, ದಲಿತ, ಹಿಂದುಳಿದವರ ಏಳಿಗೆಯ ಜತೆ, ರೈತರ ಏಳಿಗೆಗೆ ಇಡೀ ಮತಕ್ಷೇತ್ರವನ್ನು ಸಮಗ್ರ ನೀರಾವರಿ ಮಾಡುವುದಾಗಿಯೂ ಅವರು ಘೋಷಿಸಿದರು. ನನ್ನ ಕನಸು ಎಂದರು. ಸಾಮಾಜಿಕ ಸೇವೆ ಸಲ್ಲಿಸುವ ಉದ್ದೇಶದಿಂದ, ಅಂವಿಕಲರ ಏಳಿಗೆಯ ಜತೆಗೆ ನೌಕರರ ಹಿತವನ್ನು ಕಾಪಾಡುವುದಾಗಿ ತಿಳಿಸಿದರು. ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಗೊಳಿಸಿ ನೌಕರರ ಬಾಳನ್ನು ಹಸನಾಗಿ ಮಾಡಲು ಪ್ರಯತ್ನಿಸುವೆ ಎಂದರು.ಯಾರೂ ಹಣ, ಹೆಂಡ, ತುಂಡಿನ ಆಸೆಗಾಗಿ ತಮ್ಮ ಮತವನ್ನು ಮಾರಿಕೊಳ್ಳದೇ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರಿಗೆ ಮತ ನೀಡಿ ಎಂದರು.ರಾಜಕೀಯ ಕ್ಷೇತ್ರ ಉಳ್ಳವರ ಪಾಲಾಗದೇ ಅದು ಎಲ್ಲರ ಪಾಲಾಗಬೇಕು ಎಂದರು. ಜೋಳಿಗೆ ಹಾಕಿಕೊಂಡೇ ಪ್ರತಿಯೊಂದು ಗ್ರಾಮದ ಪ್ರತಿ ಮನೆಗೂ ಮತ ಭಿಕ್ಷೆ ಬೇಡುವೆ ಎಂದರು.ಬಿಜೆಪಿ, ಕಾಂಗ್ರೆಸ್…

Read More