Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕಾಂಗ್ರೆಸ್ ಪಕ್ಷವು ೭೦ ವರ್ಷ ದೇಶದ ಆಡಳಿತ ಚುಕ್ಕಾಣಿ ಹಿಡಿದಿದ್ದರೂ ದಲಿತರು ಮತ್ತು ಹಿಂದುಳಿದ ವರ್ಗಗಳ ಏಳ್ಗೆಗಾಗಿ ಯಾವುದೇ ಯೋಜನೆಗಳನ್ನು ರೂಪಿಸದೆ ಅವರನ್ನು ಕೇವಲ ಓಟಿಗಾಗಿ ಬಳಸಿಕೊಂಡು ದುರುಪಯೋಗ ಮಾಡಿಕೊಂಡಿದೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ವಕ್ತಾರ ಸುರೇಶ ಬಿರಾದಾರ ಆರೋಪಿಸಿದರು.ಶನಿವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ದೇಶದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವಂತಹ ಸಂವಿಧಾನವನ್ನು ರಚಿಸಿದ ಅಂಬೇಡ್ಕರ ಅವರನ್ನು ಆಗ ಕಾಂಗ್ರೆಸ್ ಪಕ್ಷ ಹೀನಾಯವಾಗಿ ನಡೆಸಿಕೊಂಡಿತು. ಎರಡು ಸಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಂಬೇಡ್ಕರ ಅವರನ್ನು ಕಾಂಗ್ರೆಸ್ ಪಕ್ಷವು ಕಮ್ಯೂನಿಷ್ಟರ ನೆರವಿನೊಂದಿಗೆ ಸೋಲಿಸಿತು. ಅವರು ತೀರಿಕೊಂಡಾಗ ಅವರ ಅಂತ್ಯಕ್ರಿಯೆ ನೆರವೇರಿಸಲು ಅಂದಿನ ಪ್ರಧಾನಿ ನೆಹರು ಅವರು ಸ್ಥಳ ಒದಗಿಸದೇ ಅನ್ಯಾಯ ಮಾಡಿದರು. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಈಗ ಅಂಬೇಡ್ಕರ್ ಹೆಸರು ಹೇಳಿ ದಲಿತರ ಮತಯಾಚಿಸುತ್ತಿದೆ. ಕಾರಣ ದಲಿತರು ಯಾವುದೇ ಕಾರಣಕ್ಕೂ ಕಾಂಗೆಸ್ ಪಕ್ಷವನ್ನು ನಂಬದೇ, ಅದನ್ನು ತಿರಸ್ಕರಿಸಿ, ಬಿಜೆಪಿಯನ್ನು ಬೆಂಬಲಿಸಿ ರಾಜ್ಯದಲ್ಲಿ…
ವಿಜಯಪುರ: ನಗರದ ಅಲ್ಲಾಪುರ ಓಣಿಯ ಬಸವ- ಮಲ್ಲಿಕಾರ್ಜುನ ದೇವಸ್ತಾನದ ಮಲ್ಲಯ್ಯನ ಕಂಬಿ ಐದೇಶಿ ಅತ್ಯಂತ ಅದ್ದೂರಿಯಾಗಿ ಜರುಗಿತು.ತಿಂಗಳ ಕಾಲ ಪಾದಯಾತ್ರೆ ಮೂಲಕ ಕಂಬಿ ಹೊತ್ತುಕೊಂಡು ಶ್ರೀಶೈಲಕ್ಕೆ ತೆರಳಿದ್ದ ಸ್ವಾಮೀಜಿಗಳು ಮತ್ತು ಯಾತ್ರಾರ್ಥಿಗಳನ್ನು ಕಳೆದ ಐದು ದಿನಗಳ ಹಿಂದೆ ವಿಜೃಂಭಣೆಯಿAದ ಬರಮಾಡಿಕೊಂಡು ಪ್ರತಿ ದಿನ ಸಾಯಂಕಾಲ ಪೂಜೆ ಪುನಸ್ಕಾರ ಮದಾಲಸಿ ಪ್ರಸಾದವಿತರಣೆ ಮಾಡಲಾಗುತಿತ್ತು. ಪ್ರತಿ ಭಕ್ತರ ಮನೆಯಲ್ಲಿ ಬ್ರಮರಾಂಬ ಸಹಿತ ಮಲ್ಲಿಕಾರ್ಜುನನ ಪೂಜಿಸಿ. ಸ್ವಾಮೀಜಿ ಅವರಿಗೆ ಮುತ್ತೈದೆಯರಿಗೆ ಪೂಜೆ ಬಾಗಿನ ಅರ್ಪಣೆ ಮಾಡಲಾಯಿತು.ಅಲ್ಲಾಪೂರ ಓಣಿಯ ಬಸವ- ಮಲ್ಲಿಕಾರ್ಜುನ ದೇವಸ್ತಾನದ ಸಮಿತಿ ಅಧ್ಯಕ್ಷ ಮಲ್ಲನಗೌಡ ಪಾಟೀಲ. ಸಿದ್ರಾಮಯ್ಯ ರೂಗಿಮಠ. ಕಲ್ಲಯ್ಯ ಸ್ವಾಮೀಜಿ. ರಾಜಶೇಖರ ಮಠ. ನಂದಯ್ಯಾ ಯಾದವಾಡಮಠ, ಶರಣು ಜೋಗುರ. ಪ್ರಭು ಸೊಲ್ಲಾಪುರ. ಸಿದ್ದಪ್ಪ ಅಂಗಡಿ ಮಲ್ಲಪ್ಪ ತೋನಸ್ಯಾಳ. ಈರನಗೌಡ ಪಾಟೀಲ್. ಭೀಮು ಲೋಗಾವಿ. ಚಂದ್ರಶೇಖರ್ ಹುಂಡೆಕಾರ.ಗೊಲ ನಗೌಡ ಬಿರಾದಾರ. ಡಾ.ಆರ್.ಜಿ.ಕಳ್ಳಿ. ನ್ಯಾಯವಾದಿ ದಾನೇಶ ಅವಟಿ ಸೇರಿದಂತೆ ಅನೇಕರಿದ್ದರು.
ವಿಜಯಪುರ : ಇಂದು ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಕೇಶ ಇಂಗಳಗಿ ಅವರು ವಿಜಯಪುರ ನಗರದ ಚುನಾವಣಾ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ (ನಾಮಪತ್ರ) ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಯಡಹಳ್ಳಿ, ನಗರ ಘಟಕದ ಅಧ್ಯಕ್ಷ ಹಮೀದ ಇನಾಮದಾರ, ಪ್ರಕಾಶ ಪಾಟೀಲ, ವಾಮನ್ ದೇಶಪಾಂಡೆ ಇನ್ನಿತರರಿದ್ದರು.
ಮುದ್ದೇಬಿಹಾಳ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹಳ ದೊಡ್ಡ ಮಟ್ಟದ ಹಿನ್ನೆಡೆ ಏನೂ ಆಗಿಲ್ಲ. ಪ್ರತೀ ಬೂತ್ ಗೆ ಕೇವಲ ೨೦ ಮತಗಳ ಅಂತರವಾಗಿದ್ದು ಈ ಬಾರಿ ಅತೀ ಹೆಚ್ಚು ಮತಗಳನ್ನು ಕಾಂಗ್ರೇಸ್ ಪಕ್ಷ ಪಡೆಯುವ ವಿಶ್ವಾಸ ಇದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಹೇಳಿದರು.ಬೆಂಗಳೂರಿನ ಡಿ.ಕೆ.ಶಿವಕುಮಾರ ಅವರ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬಿ-ಫಾರಂ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಇತಿಹಾಸದಲ್ಲಿಯೇ ಯಾವುದೇ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಇಷ್ಟೊಂದು ಬೆಂಬಲ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಊಹೆಗೂ ಮೀರಿ ಮತಕ್ಷೇತ್ರದ ಜನತೆ ಬೆಂಬಲಿಸುತ್ತಿರುವುದು ನೋಡಿದರೆ ದುರಾಡಳಿತಕ್ಕೆ ಜನತೆ ರೋಸಿ ಹೋಗಿರುವುದು ಕಾಣುತ್ತಿದೆ. ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಬರೀ ಸೋಲಿಸುವದಷ್ಟೇ ಅಲ್ಲದೇ ಹೀನಾಯವಾಗಿ ಸೋಲಿಸಲು ಕಾತುರದಿಂದ ಕಾಯುತ್ತಿದ್ದಾರೆ. ಎಂದರು.
ದೇವರಹಿಪ್ಪರಗಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರಿಗೆ ಮನ್ನಣೆ ನೀಡಿ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಿರುವ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹರ್ಷ ವ್ಯಕ್ತ ಪಡಿಸಿದ್ದಾರೆ.ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಿಲ್ಲೆಗೆ ಒಂದು ಅವಕಾಶ ನೀಡಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಶರಣಪ್ಪಣ್ಣ ಸುಣಗಾರ ಅವರಿಗೆ ಟಿಕೆಟ್ ನೀಡಿರುವುದು ಸಂತಸ ತಂದಿದೆ. ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ನೀಡುವಲ್ಲಿ ವರಿಷ್ಠರು ಸಹಕರಿಸಿದ್ದಾರೆ. ನಾನೂ ಸಹ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಸುಣಗಾರ ಅವರಿಗೆ ಟಿಕೆಟ್ ನೀಡಿದ್ದು, ನನಗೆ ನೀಡಿದಷ್ಟು ಸಂತೋಷವಾಗಿದೆ. ಎಲ್ಲ ಅಭ್ಯರ್ಥಿಗಳು ಬಹಳಷ್ಟು ಶ್ರಮವಹಿಸಿ ಕ್ಷೇತ್ರದ ತುಂಬ ಸಂಚರಿಸಿ ಮತದಾರರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ತಿಳಿಸಿದ್ದಾರೆ.
ಕೊಲ್ಹಾರ: ನನ್ನ ಮೇಲೆ ವಿಶ್ವಾಸವಿಟ್ಟು ವರಿಷ್ಠರು ನನಗೆ ಟಿಕೆಟ್ ಘೋಷಣೆ ಮಾಡಿದ್ದು ಇದು ಕೊಲ್ಹಾರ ಪಟ್ಟಣದ ಜನತೆಗೆ ಸಿಕ್ಕ ಅವಕಾಶವಾಗಿದ್ದು ತಮ್ಮೆಲ್ಲರ ಸೇವೆಗಾಗಿ ನನ್ನನ್ನು ಗೆಲ್ಲಿಸಬೇಕೆಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮನವಿ ಮಾಡಿದರು.ಪಟ್ಟಣದ ಅಗಶಿಯ ಹತ್ತಿರ ಭಾರತೀಯ ಜನತಾಪಕ್ಷದ ಕೊಲ್ಹಾರ ತಾಲೂಕು ಕೇಂದ್ರ ಕಛೇರಿಯ ಉದ್ಘಾಟನೆ ಹಾಗೂ ಕಾರ್ಯಕರ್ತರ, ಮತದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಮತಕ್ಷೇತ್ರದ ಜನರ ಸೇವೆಗಾಗಿ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ಸಿಕ್ಕಿದ್ದು, ಇದು ನನ್ನ ಕೊನೆಯ ಚುನಾವಣೆಯಾಗಿದೆ. ನನಗೀಗ ೭೦ ವರ್ಷ. ಆದ್ದರಿಂದ ಕ್ಷೇತ್ರದ ಜನತೆ ನನ್ನ ಕೈಬಿಡುವುದಿಲ್ಲ ಎಂಬ ಅಚಲ ವಿಶ್ವಾಸ ನನಗಿದೆ ಎಂದರು.ಬಸವನ ಬಾಗೇವಾಡಿ ಮತಕ್ಷೇತ್ರದ ಚುಣಾವಣಾ ಉಸ್ತುವಾರಿ, ಉತ್ತರಾಖಂಡ ರಾಜ್ಯದ ರಾಜ್ಯಸಭಾ ಸದಸ್ಯ ನರೇಶ್ ಬನ್ಸಾಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಆಡಳಿತ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ಸರ್ವರೀತಿಯ ಸರಕಾರಿ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಜನರಿಗೆ ಅನುಲಕೂಲವಾಗುತ್ತಿದೆ ಆದ್ದರಿಂದ ಮತದಾರರು ಈ ಬಾರಿಯ ಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.ಸಭೆಯಲ್ಲಿ…
ದೇವರಹಿಪ್ಪರಗಿ: ೨೦೨೩ ರ ವಿಧಾನಸಭೆಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಜಯಗಳಿಸುವಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿದೆ ಎಂದು ಉತ್ತರಪ್ರದೇಶದ ಮಾಜಿ ಸಚಿವ ಆನಂದ ಸ್ವರೂಪ ಶುಕ್ಲಾಜೀ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿಯ ಕಾರ್ಯಕರ್ತರು ಕ್ಷೇತ್ರದ ಮತದಾರರನ್ನು ಪಕ್ಷದೊಂದಿಗೆ ಜೋಡಿಸುವ ಕಾರ್ಯವನ್ನು ಅಭಿಮಾನ ಹಾಗೂ ಪ್ರೇಮದೊಂದಿಗೆ ಮಾಡಬೇಕು. ಎಲ್ಲಿ ಅಭಿಮಾನ ಹಾಗೂ ಪ್ರೇಮ ಇರುತ್ತದೆಯೋ ಅಲ್ಲಿ ದೋಷಣೆಗೆ ಅವಕಾಶವಿಲ್ಲ. ನಾಯಕರ ಕೆಲವು ತಪ್ಪು ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ದೇಶ ಹಾಗೂ ರಾಜ್ಯದ ಒಳಿತಿಗಾಗಿ ಚುನಾವಣೆಯಲ್ಲಿ ಕನಿಷ್ಠ ೧೫ ಗಂಟೆಗಳವರೆಗೆ ಕಾರ್ಯನಿರ್ವಹಿಸೋಣ. ಬಿಜೆಪಿಯ ಏಳು ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರೊಂದಿಗೆ ಸೇರಿ ಮನೆಮನೆ, ಓಣಿ, ಗ್ರಾಮಗಳಿಗೆ ತೆರಳಿ ಮತಯಾಚಿಸೋಣ ಎಂದರು.ಮ0ಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಮಾತನಾಡಿ, ಸ್ಥಳೀಯ ಶಾಸಕರ ಸಾಧನೆ ಹಾಗೂ ರಾಜ್ಯ, ಕೇಂದ್ರ ಸರ್ಕಾರಗಳ ಜನಪ್ರೀಯ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿಸಿ ಚುನಾವಣೆಗೆ ಉಳಿದಿರುವ ಅಲ್ಪ ಸಮಯದಲ್ಲಿ ಜಯದ ಗುರಿ ಮುಟ್ಟಲು ಶ್ರಮಿಸೋಣ ಎಂದರು.ಬಿಜೆಪಿ ಜಿಲ್ಲಾ…
ಕೊಲ್ಹಾರ: ನಂಜುಡಪ್ಪ ವರದಿ ಪ್ರಕಾರ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಅಖಂಡ ಬಸವನ ಬಾಗೇವಾಡಿ ತಾಲೂಕನ್ನು ಇಂದು ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿ ಅಭಿವೃದ್ದಿ ಪಡಿಸಲು ಮತದಾರರಿಗೆ ಮಾತುಕೊಟ್ಟಂತೆ ನಡೆದುಕೊಂಡಿದ್ದೇನೆ. ದುಡಿದಿರುವ ನನಗೆ ಮತ್ತೊಮ್ಮೆ ತಾವುಗಳು ಹೆಚ್ಚಿನ ಮತಗಳಿಂದ ಆರಿಸಿ ತಮ್ಮೆಲ್ಲರ ಸೇವೆ ಮಾಡಲು ಅನುಕೂಲಮಾಡಿಕೊಡಬೇಕೆಂದು ಶಾಸಕ ಶಿವಾನಂದ ಪಾಟೀಲ ಮನವಿ ಮಾಡಿದರು.ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಗೆದ್ದುಬಂದರೆ ಜನರಿಗೆ ನೀರಿನ ಬದಲು ಬಿಯರ್, ಸಾರಾಯಿ ಕುಡಿಸುತ್ತಾರೆ ಎಂದು ವಿರೋಧಿಗಳು ಅಪಪ್ರಚಾರ ಮಾಡಿದ್ದರು. ಆದರೆ ಅಪಪ್ರಚಾರ ಮಾಡಿದ ವ್ಯಕ್ತಿಗಳು ಇಂದು ತಮ್ಮ ಸ್ವಂತ ಊರಿನಲ್ಲಿ, ತಾಲೂಕಿನಲ್ಲಿ ಬಾರ್ ಗಳನ್ನು ನಡೆಸುತ್ತಿದ್ದಾರೆ. ಈಗ ಯಾರು ಜನರಿಗೆ ಬಿಯರ್ ಕುಡಿಸುತ್ತಿದ್ದಾರೆ ಎನ್ನುವ ಸತ್ಯ ಮತದಾರರು ಮನಗಾಣಬೇಕು ಎಂದರು.ನನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವೆ. ಸಂಪರ್ಕ ರಸ್ತೆಗಳ ನಿರ್ಮಾಣ, ೧೧೦*೧೧ ಕೆವಿ ವಿದ್ಯುತ್ ಘಟಕಗಳ ಪ್ರಾರಂಭ, ಸರಕಾರಿ ಪದವಿ, ತಾಂತ್ರಿಕ, ಮಾಧ್ಯಮಿಕ, ಪದವಿಪೂರ್ವ ಕಾಲೇಜುಗಳ ಮಂಜೂರಾತಿ ಜೊತೆಗೆ ಕಟ್ಟಡಗಳ ನಿರ್ಮಾಣ,…
ವಿಜಯಪುರ: ನಗರದಲ್ಲಿ ನಿರೀಕ್ಷೆಗೂ ಮೀರಿ ಆದ ಅಭಿವೃದ್ಧಿ ಹಾಗೂ ಸುರಕ್ಷತೆಯಿಂದ ಜನ ಈ ಬಾರಿ ಬಿಜೆಪಿಗೆ ಮತ ಹಾಕಲು ಉತ್ಸಾಹ ಹೊಂದಿದ್ದಾರೆ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಕೆಎಚ್ ಬಿ ಕಾಲೊನಿಯ ಯೋಗಾ ಗಾರ್ಡನ್ ದಲ್ಲಿ ಶನಿವಾರ ವಾಯು ವಿಹಾರಿಗಳನ್ನು ಭೇಟಿ ಮಾಡಿದ ಅವರು, ಕಳೆದ ೨೫ ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯವನ್ನು, ಕೊರೊನಾದಿಂದ ಎರಡು ವರ್ಷ ಅಭಿವೃದ್ಧಿ ಕುಂಠಿತಗೊAಡರೂ, ಉಳಿದ ಕೇವಲ ಮೂರು ವರ್ಷದಲ್ಲಿ ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ ಮಾಡಿರುವ ತೃಪ್ತಿ ಇದೆ ಎಂದರು.ಅಭಿವೃದ್ಧಿ ಜೊತೆಗೆ ದೌರ್ಜನ್ಯ, ಗೂಂಡಾಗಿರಿ ನಿಲ್ಲಿಸಿ, ಹಿಂದೂ ಬಾಂಧವರು ನೆಮ್ಮದಿಯಿಂದ ಬದುಕುವಂತೆ ಮಾಡಿರುವೆ. ಕಾಯಿಪಲ್ಲೆ ಮಾರುಕಟ್ಟೆಯಲ್ಲಿ ನಮ್ಮ ಹೆಣ್ಣು ಮಕ್ಕಳಿಗೆ ಆಗುತ್ತಿರುವ ಅವಮಾನ ತಪ್ಪಿಸಲು ೩೫ ಕಡೆ ಮಾರುಕಟ್ಟೆ ಮಾಡಿರುವೆ ಎಂದರು.ವಿಧಾನಸಭೆಯಲ್ಲಿ ಧ್ವನಿ ಎತ್ತಿದಕ್ಕೆ ಮತ್ತೆ ಹೆಚ್ಚುವರಿ ರೂ.೨೫೦ ಕೋಟಿ ಅನುದಾನ ಬಿಡುಗಡೆಗೊಂಡಿದ್ದರಿAದ ಅತ್ಯುನ್ನತ ವಿಮಾನ ನಿಲ್ದಾಣ ಆಗಲು ಸಾಧ್ಯವಾಯಿತು. ವೈನ್ ಪಾರ್ಕ, ಟೆಕ್ಸಟೈಲ್ಸ್ ಪಾರ್ಕ, ಜಿಟಿಟಿಸಿ…
ಇಂಡಿ: ಇಂಡಿ ಮತಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಕಾಸುಗೌಡ ಬಿರಾದಾರ ಶನಿವಾರ ಪಟ್ಟಣದಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಸರಳವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಡಳಿತ ಸೌಧಕ್ಕೆ ತೆರಳಿ ಅಲ್ಲಿನ ಚುನಾವಣೆ ಅಧಿಕಾರಿ ಹಾಗೂ ಕಂದಾಯ ಉಪ ಅಧಿಕಾರಿಯಾಗಿರುವ ರಾಮಚಂದ್ರ ಗಡದೆ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹಾಗೂ ಅಭ್ಯರ್ಥಿ ಕಾಸುಗೌಡ ಬಿರಾದಾರ ಮಾತಾನಾಡಿ, ಇಂದು ಸರಳವಾಗಿ ನಾಮಪತ್ರ ಸಲ್ಲಿಸಿರುವೆ. ಇದೇ ಏ.19 ರಂದು ಬೃಹತ್ ಪ್ರಮಾಣದಲ್ಲಿ ರಾಜ್ಯದ, ಜಿಲ್ಲೆಯ ಹಾಗೂ ತಾಲ್ಲೂಕು ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಆಕಾಂಕ್ಷಿಗಳ ಪಟ್ಟಿ ದೊಡ್ಡದು ಇರಬಹುದು. ಆದರೆ ಎಲ್ಲರ ಜೊತೆಗೆ ಸೌಹಾರ್ದ ಬೇಟಿ ಮಾಡಿದ್ದೇವೆ. ಅವರನ್ನು ಕರೆದುಕೊಂಡು ಎಲ್ಲರೂ ಸೇರಿ ಬಿಜೆಪಿ ಪಕ್ಷಕ್ಕೆ ಪಕ್ಕಾ ಗೆಲುವು ತರುತ್ತೆವೆ ಎಂದು ಹೇಳಿದರು.ಸದ್ಯ ಕ್ಷೇತ್ರದಲ್ಲಿ ಸುಮಾರು 86 ಹಳ್ಳಿಗಳಿಗೆ…
