Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.೩೫ ರಿಂದ ೩೮.೭೫ ಕ್ಕೆ ಸರ್ಕಾರ ಹೆಚ್ಚಳ ಮಾಡಿರುವದಕ್ಕೆ ಸಮಸ್ತ ನೌಕರ ಬಾಂಧವರಿಗೆ ಸಂತಸ ತಂದಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿರುವದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಅವರ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ, ಎಲ್ಲ ಅಧಿಕಾರಿ ವೃಂದಕ್ಕೆ, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹಾಗೂ ಸಂಘದ ಪದಾಧಿಕಾರಿಗಳು ತಾಲೂಕಿನ ಸಮಸ್ತ ನೌಕರ ಬಾಂಧವರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮನಗೂಳಿ ಸಂಗನಬಸವ ಮಂಗಲ ಕಾರ್ಯಾಲಯದ ಲೋಕಾರ್ಪಣೆಯಂಗವಾಗಿ ಫೆ.3-4 ರಂದು ವಿವಿಧ ಕಾರ್ಯಕ್ರಮಗಳು ಬಸವನಬಾಗೇವಾಡಿ: ನಾಡಿನ ಮಠ-ಮಾನ್ಯಗಳು ಆಧ್ಯಾತ್ಮ ಸಂದೇಶ ಸಾರುವ ಜೊತೆಗೆ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಪಾರ. ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಿಂದ ನಿರ್ಮಾಣಗೊಂಡಿರುವ ಸಂಗನಬಸವ ಮಂಗಲ ಕಾರ್ಯಾಲಯದ ಲೋಕಾರ್ಪಣೆಯಂಗವಾಗಿ ೨೦೨೪ ರ ಫೆ. ೩ ಮತ್ತು ೪ ರಂದು ಹಮ್ಮಿಕೊಂಡಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಎಲ್ಲರೂ ಕೂಡಿಕೊಂಡು ಯಶಸ್ವಿಗೊಳಿಸಿ ಸ್ಮರಣೀಯವಾಗಿಸೋಣವೆಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದ ಆವರಣದಲ್ಲಿ ಸಂಗನಬಸವ ಮಂಗಲ ಕಾರ್ಯಾಲಯ ಲೋಕಾರ್ಪಣೆ ಕಾರ್ಯಕ್ರಮದಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಂಗನಬಸವ ಮಂಗಲ ಕಾರ್ಯಾಲಯ ಲೋಕಾರ್ಪಣೆಯಂಗವಾಗಿ ಶ್ರೀಮಠವು ಹಮ್ಮಿಕೊಂಡಿರುವ ಸಾಮೂಹಿಕ ವಿವಾಹಗಳನ್ನು ನಾವೆಲ್ಲರೂ ಅರ್ಥಪೂರ್ಣವಾಗಿ ನೆರವೇರಿಸಬೇಕಾಗಿದೆ. ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಪೂಜ್ಯರಿಂದ ೨೫ ಮಂಟಪ ಪೂಜೆ, ಧರ್ಮಸಭೆ, ರಾಜ್ಯಮಟ್ಟದ ಸಂಗನಬಸವ ಶ್ರೀ ಪ್ರಶಸ್ತಿ ಪ್ರದಾನ, ನೂತನ ರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಮಠದ ಪೂಜ್ಯರು ಆಯೋಜನೆ…
ಮುದ್ದೇಬಿಹಾಳ : ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಹಿಂದಿನ ಬದಿ ಇರುವ ಅಂಬಾಭವಾನಿ ದೇವಸ್ಥಾನದಲ್ಲಿ ೨೦೦ ಕ್ಕೂ ಹೆಚ್ಚು ಮುತೈದೆಯರಿಗೆ ಉಡಿ ತುಂಬಲಾಯಿತು.ಈ ವೇಳೆ ಮುಖಂಡರಾದ ಭರತ ಭೋಸಲೆ, ಶಿವಾಜಿ ಬಿಜಾಪೂರ, ಕಿರಣ ದುದಾನಿ, ಅನಿಲ ಜಾಧವ, ಲೋಹಿತ ಘಾಟಗೆ, ಶಂಕರ ಪವಾರ, ಸತೀಶ ಪವಾರ, ತಾನಾಜಿ ಘೋರ್ಪಡೆ ಸೇರಿದಂತೆ ಮತ್ತೀತರರು ಇದ್ದರು.
ವಿಜಯಪುರ: ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ೨೦೨೩-೨೪ನೇ ಸಾಲಿನಲ್ಲಿ ಕರ್ನಾಟಕ ಐಟಿಐ ಉದ್ಯೋಗ ಸೊಸೈಟಿ ಮೂಲಕ ಸಿಎಂಕೆಕೆವೈ ಅಡಿಯಲ್ಲಿ ಜೂನಿಯರ್ ರೋಬೊಟ್ ಆಪರೇಟರ್ & ಪ್ರೋಗ್ರಾಮರ್ ಮಟೇರಿಯಲ್ ಹ್ಯಾಂಡಲಿಂಗ್, ಬ್ಯಾಟರಿ ಇಲೆಕ್ಟ್ರಿಕ್ ವ್ಹಿಕಲ್ ಜ್ಯೂನಿಯರ್ ಟೆಕ್ನಿಶಿಯನ್, ಇಲೆಕ್ಟ್ರಿಶಿಯನ್ ಡೊಮೆಸ್ಟಿಕ್ ಸಲೂಷನ್ ಹಾಗೂ ಟಿವಿ ರಿಪೇರ ಟೆಕ್ನಿಷಿಯನ್ ಅಲ್ಪಾವಧಿ ಕೋರ್ಸ್ಗಳನ್ನು ದಿನಾಂಕ : ೦೨-೧೧-೨೦೨೩ ರಿಂದ ಪ್ರಾರಂಭಿಸಲಾಗುವುದು.ಈ ತರಬೇತಿಗಳು ಉದ್ಯಮದಲ್ಲಿ ಉದ್ಯೋಗ ಪಡೆಯಲು ಅನುಕೂಲಕರವಾಗಿವೆ. ಹಾಗೂ ಈ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ರೋಬೋಟಿಕ್ ಪ್ರೊಗ್ರಾಮ, ಬ್ಯಾಟರಿ ವ್ಹಿಕಲ್ ಟೆಕ್ನಿಶಿಯನ್, ಇಲೆಕ್ಟಿçಷಿಯನ್ & ಆಫ್ಟರ್ ಸೇಲ್ಸ್ ಆಂಡ್ ಸರ್ವಿಸ್ ಕ್ಷೇತ್ರಗಳಲ್ಲಿ ವ್ಯಾಪಕ ಉದ್ಯೋಗಗಳು ಲಭವಿರುತ್ತದೆ.ಕೋರ್ಸ್ಗಳಿಗೆ ೧೧ ಸಾವಿರ ರೂ. ಶುಲ್ಕವನ್ನು ನಿಗದಿಗೊಳಿಸಿದ್ದು, ಕೇವಲ ೩೬ ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರ ಕಾರ್ಯಾಲಯ ದೂ:೦೮೩೫೨-೨೬೦೩೬೦, ಮೊ: ೯೫೯೧೫೭೧೩೮೯, ೯೯೬೪೧೫೨೦೪೦ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ನಗರದ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ ಮಾಡಲು ಸಂಘ-ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನಲೆಯಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರನ್ನು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಈ ಪ್ರಕಟಣೆಯ ೧೫ ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ-ಸAಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನಲೆಯಲ್ಲಿ ವಿಶ್ವ ಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.ಈ ಪ್ರಕಟಣೆಯ ೧೫ ದಿನಗಳೊಳಗಾಗಿ ವಿಶ್ವಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಬದ್ಧ ಸಿಂದಗಿ: ನಗರದಲ್ಲಿ ಬಹು ದಿನಗಳಿಂದ ನೆನಗುದಿಗೆ ಬಿದ್ದ ಸ್ವಾಮಿ ವಿವೇಕಾನಂದ ವೃತ್ತದ ಜಿರ್ಣೋದ್ದಾರ ಮಾಡುವ ಮಹದಾಸೆಯನ್ನು ಹೊಂದಿದ್ದೇನೆ. ಅತೀ ಶೀಘ್ರದಲ್ಲೇ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಹಮ್ಮಿಕೊಂಡ ವೀರ ರಾಣಿ ಕಿತ್ತೂರ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಹೋರಾಟ, ದೈರ್ಯ, ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಏನು ಎಂಬುದನ್ನು ೨೪೫ ವರ್ಷಗಳ ಹಿಂದೆಯೇ ತಿಳಿಸಿಕೊಟ್ಟ ಮಹಾನ್ ತಾಯಿ. ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಮಾಡಿದ ಸಾಧನೆ, ಸಾಹಸ, ತ್ಯಾಗ, ಹೋರಾಟದ ಕುರಿತು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.ಇದೇ ಸಂದರ್ಭದಲ್ಲಿ ಇಂಡಿ ತಾಲೂಕಿನ ನಾದ ಕೆಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ.ಎಂ. ಬಂಡಗರ ಉಪನ್ಯಾಸ ನೀಡಿ ಮಾತನಾಡಿದರು.ಈ ವೇಳೆ ಆಸಂಗಿಹಾಳದ ಆರೂಢಮಠದ ಶಂಕರಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಸ್ವಾಗತಿಸಿದರು.…
ಸಿಂದಗಿ: ನಗರದಲ್ಲಿರುವ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ. ಆದರೆ ದಲಿತ ಶರಣ, ಮಾದರ ಚನ್ನಯ್ಯ ವೃತ್ತಕ್ಕೆ ಉದ್ದೇಶ ಪೂರ್ವಕವಾಗಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಂದು ದೀಪಾಲಂಕಾರ ಮಾಡದೇ ಅವಮಾನ ಮಾಡಿದ್ದಾರೆ ಎಂದು ಕರ್ನಾಟಕ ಆದಿಜಾಂಬವ ಜನಸಂಘದ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ನಗರದಲ್ಲಿರುವ ಬಹುತೇಕ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡಿದ್ದಾರೆ. ಆದರೆ ಮಾದಾರ ಚನ್ನಯ್ಯ ವೃತ್ತಕ್ಕೆ ದೀಪಾಲಂಕಾರ ಮಾಡದೇ ಅಧಿಕಾರಿಗಳು ಅವಮಾನಿಸಿದ್ದು ಖಂಡನೀಯ. ಈ ರೀತಿಯಾಗಿ ಮಾಡುತ್ತಿರುವುದು ಇದೇನೂ ಮೊದಲಲ್ಲ. ಈ ಹಿಂದೆಯೂ ಹಲವಾರು ಬಾರಿ ಇಂತಹ ತಪ್ಪುಗಳನ್ನು ಮಾಡಿದ್ದಾರೆ. ಆದ ಕಾರಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಾತಿಯತೆಯನ್ನು ಪೋಷಿಸದೇ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದರು.ಈ ವೇಳೆ ಏಕನಾಥ ದ್ವಾಶ್ಯಾಳ, ರಮೇಶ ಗುಬ್ಬೇವಾಡ, ಮಲ್ಲೇಶಿ ಕೆರೂರ, ರಮೇಶ ಖಾನಾಪೂರ, ಚಂದ್ರಶೇಖರ ದೇವೂರ, ಪರಶುರಾಮ ಬನ್ನೇಟ್ಟಿ, ಸಾಯಬಣ್ಣ ಪರದಾಳ,…
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ಹಮ್ಮಿಕೊಂಡು ಮಕ್ಕಳ ಸ್ನೇಹಿ ಪೀಠೋಪಕರಣ ಬಳಕೆ ಹಾಗೂ ಪಾಲಕರು ತಮ್ಮ ಮಕ್ಕಳ ಕ್ರಿಯಾತ್ಮಕ ಚಟುವಟಿಕೆ ಅರಿತುಕೊಳ್ಳಲು ಪಾಲಕರ ಸಭೆ ಸಹಕಾರಿಯಾಗಿದೆ.ಮಕ್ಕಳ ಸ್ನೇಹಿ ಪೀಠೋಪಕರಣ: ಅಂಗನವಾಡಿ ಕೇಂದ್ರಗಳಿಗೆ ಬರುವ ಆರಾಮದಾಯಕ ಮಕ್ಕಳ ಸ್ನೇಹಿ ಪೀಠೋಪಕರಣ ಪೀಠೋಪಕರಣಗಳನ್ನು ಗ್ರಾಮ ಪಂಚಾಯತಿಯ ಮೂಲಕ ಅಂಗನವಾಡಿಗಳಿಗೆ ಒದಗಿಸಲಾಗುತ್ತಿದೆ. ಮಕ್ಕಳ ಸ್ನೇಹಿ ಪೀಠೋಪಕರಣ ಬಳಕೆ ಮಾಡಿಕೊಂಡು ಮಕ್ಕಳು ತುಂಬಾ ಉಲ್ಲಾಸಿತರಾಗಿ ಉತ್ಸುಕತೆಯಿಂದ ಬರುತ್ತಿದ್ದು, ಕಲಿಕೆಯಷ್ಟೇ ಅಲ್ಲದೇ ಮಕ್ಕಳು ಕೇಂದ್ರಕ್ಕೆ ಬರುವ ಹಾಜರಾತಿ ಪ್ರಮಾಣ ಹೆಚ್ಚಳವಾಗುತ್ತಿದೆ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆಯಂತೆ ಪ್ರತಿ ಮಾಹೆ ಮೂರನೇ ಶನಿವಾರ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಮಕ್ಕಳು ಕ್ರೀಯಾತ್ಮಕ ಚಟುವಟಿಕೆಯಿಂದಿರಲು ಹಾಗೂ ಮಕ್ಕಳಲ್ಲಿರುವ ಅಂಜಿಕೆ, ಕೀಳರಿಮೆ ಹೋಗಲಾಡಿಸಿ ಓದಿನಡೆಗೆ ಚುರುಕುಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪಾಲಕರೊಂದಿಗೆ ಚರ್ಚಿಸಿ ಅನುಷ್ಠಾನಗೊಳಿಸಲಾಗುತ್ತಿದೆ.ಅಕ್ಟೋಬರ್ ತಿಂಗಳಿನ…
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಗೆ ಚಾಲನೆ ನೀಡಿ ಎಡಿಸಿ ಮಹಾದೇವ ಮುರಗಿ ಅಭಿಮತ ವಿಜಯಪುರ: ನಾಡು-ನುಡಿಗಾಗಿ, ಈ ದೇಶಕ್ಕಾಗಿ ಸಮಾಜದ ಸುಧಾರಣೆಗಾಗಿ, ಸ್ವಾಭಿಮಾನಕ್ಕಾಗಿ ಧೀರೋದಾತ್ತೆತೆಯಿಂದ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮರಂತಹ ಮಹನೀಯರ ಆದರ್ಶ ವಿಚಾರಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಈ ದೇಶದ ಇತಿಹಾಸ, ಸಮಾಜದ ಸುಧಾರಣೆಗಾಗಿ ಹೋರಾಡಿದ ಮಹನೀಯರ ಬಗ್ಗೆ ಇಂದಿನ ಯುವ ಪೀಳಿಗೆ ಅರಿತುಕೊಳ್ಳುವ ಉದ್ದೇಶದಿಂದ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕಿತ್ತೂರು ಚೆನ್ನಮ್ಮ ಅವರು ಮಾಡಿದ ಕಾರ್ಯಗಳಿಂದ ಇತಿಹಾಸದ ಪುಟದಲ್ಲಿ ಅವರು ಅಜರಾಮರವಾಗಿದ್ದಾರೆ. ಇಂತಹ ಮಹನೀಯರ ಕುರಿತಾಗಿ ಅಧ್ಯಯನ ಮಾಡುವ ಮೂಲಕ ಮತ್ತಷ್ಟು ತಿಳಿದುಕೊಳ್ಳಬೇಕು.ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ…
