Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬುಧವಾರ ಮುಸ್ಸಂಜೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾತಲಿಂಗಯ್ಯ ಶಂ. ಸಾಲಿಮಠ, ಉಪಾಧ್ಯಕ್ಷೆಯಾಗಿ ಲಕ್ಷ್ಮಿ ಚಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಹಡಲಗೇರಿ, ನಿಂಗಪ್ಪ ಮಲ್ಲಪ್ಪ ಸಂಗಾಪುರವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಮಹೇಶ ವಿ. ಶಟಗಾರ, ಶರಣಬಸಪ್ಪ ಮಸಳಿ ಹಾಗೂ ಶಶಿಕಾಂತ ಮೆಂಡೆಗಾರ ಕಾರ್ಯ ನಿರ್ವಹಿಸಿದರು. ಅಲ್ಲದೇ, ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಘೋಷಣೆ ಪತ್ರ ವಿತರಿಸಿ ಶುಭ ಕೋರಿದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದರ ಚೆನ್ನಯ್ಯನವರ ವಚನಗಳ ಚಿಂತನೆಗಳು ಸಾಮಾಜಿಕ ಸಮಾನತೆ, ಕಾಯಕದ ಮಹತ್ವ, ಪರಿಸರ ಪ್ರಜ್ಞೆ ಮತ್ತು ಆಧ್ಯಾತ್ಮಿಕ ಪ್ರಜಾಪ್ರಭುತ್ವದ ಮೇಲೆ ಬೆಳಕು ಚೆಲ್ಲಿವೆ. ಅವರು ನಡೆ-ನುಡಿ ಸಾಮರಸ್ಯಕ್ಕೆ ಆದ್ಯತೆ ನೀಡಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರದಂದು ನಗರದ ಬಸವೇಶ್ವರ ಪಿಯು ಕಾಲೇಜಿನಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂಬಸವೇಶ್ವರ ಪಿಯು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯನವರ ಕುರಿತು ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.’ಜಾತಿ, ಲಿಂಗ, ವರ್ಗ ಬೇಧಗಳಿಲ್ಲದೆ ಎಲ್ಲರೂ ಸಮಾನರು ಎಂದು ತಿಳಿಸಿದ ಚೆನ್ನಯ್ಯನವರು ಕಾಯಕದ ಜತೆಗೆ ಪಾರಮಾರ್ಥಿಕ ಚಿಂತನೆ ಮಾಡಿದ ಅಪರೂಪದ ವಚನಕಾರರಾಗಿದ್ದಾರೆ. ಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಅವರ ವಚನಗಳು ಇಂದಿನ ಬದುಕಿನ ತಲ್ಲಣಗಳಿಗೆ ದಿವ್ಯ ಔಷಧಿಯಾಗಿವೆ’ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಎಸ್ ಆರ್ ಕುಲಕರ್ಣಿ, ‘ದಯೆ ಮತ್ತು ಧರ್ಮದ ಪರಿಕಲ್ಪನೆ, ಅಸ್ಪೃಶ್ಯತೆ, ಅನುಭಾವ, ಕಲ್ಯಾಣ ಸಮಾಜದ ನಿರ್ಮಾಣದಂತಹ ವೈಶಿಷ್ಟ್ಯಪೂರ್ಣ ಜೀವನ ಮೌಲ್ಯ ಪರಿಕಲ್ಪನೆಗಳನ್ನು ಇಡೀ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹೃದಯ ಭಾಗ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಆವರಣದಲ್ಲಿನ ವೀರರಾಣಿ ಕಿತ್ತೂರ ಚೆನ್ನಮ್ಮಳ ಮೂರ್ತಿ ಅನಾವರಣ ಮಹೂರ್ತ ಫಿಕ್ಸ ಆಗಿದೆ. ಬರುವ 2026ರ ಜನೇವರಿ 4 ರಂದು ಅನಾವರಣಗೊಳಸಲಾಗುವದು ಎಂದು ವೀರರಾಣಿ ಕಿತ್ತೂರ ಚೆನ್ನಮ್ಮ ಮೂರ್ತಿ ನಿರ್ಮಾಣ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ ಕೊಳಕೂರ ತಿಳಿಸಿದರು.ನಗರದ ಬೆಂಗಳೂರು ರೆಸ್ಟಾರೆಂಟ್ನಲ್ಲಿ ಗುರುವಾರದಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವಿದಾನ ಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ. ಇದಲ್ಲದೆ ಜಿಲ್ಲೆಯ ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಜಿಲ್ಲೆಯ ಎಲ್ಲ ಶಾಸಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.100 ಅಡಿ ಸುತ್ತಳತೆಯ ಸರ್ಕಾರಿ ಜಾಗೆಯಲ್ಲಿ ಸುಮಾರು 22 ಅಡಿ ಎತ್ತರದ 12 ಅಡಿ ಅಗಲದ ಭವ್ಯವಾದ ಈ ಮೂರ್ತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 6 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಲ್ಲಿನ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಕಿರಿಯ ಎಂಜಿನಿಯರ್ ವಿಷ್ಣು ಪೋಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ.ಇಲ್ಲಿನ ಕಿರಿಯ ಎಂಜಿನಿಯರ್ ವಿಷ್ಣು ಪೋಳ, ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ 2023-24ನೇ ಸಾಲಿನ ಅನುದಾನದಲ್ಲಿ ವಿಜಯಪುರ ತಾಲೂಕಿನ ಕೃತಕನಹಳ್ಳಿ ಗ್ರಾಮದ ಮರಗಮ್ಮ ದೇವಸ್ಥಾನ ಬಳಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಕಾಮಗಾರಿಯ ದಾಖಲಾತಿಗಳಿಗೆ ಸಹಿ ಮಾಡಿ ಕೊಡಲು 6 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿ ಲಂಚದ ಹಣ ಪಡೆಯುತ್ತಿದ್ದಾಗ ಆತನನ್ನು ಬಂಧಿಸಿ, ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಪ್ರತಿಭಾವಂತ ಶಿಕ್ಷಕರಾದ ಅಮಸಿದ್ಧ ಬಗಲಿ ಅವರು ಚಡಚಣ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಅಡಿಯಲ್ಲಿ ಆಯೋಜಿಸಲಾದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಚಡಚಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಅವರು ತಮ್ಮ ಸೃಜನಾತ್ಮಕ ಕೌಶಲ್ಯದ ಮೂಲಕ ಜಯ ಸಾಧಿಸಿದರು. ಪ್ರಸ್ತುತ ಅವರು ಶಿರಾಡೋಣದ ಶ್ರೀ ಬೀರೇಶ್ವರ ಪ್ರೌಢ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಸುರೇಶ ನಾಯಕ, ಬಿಆರ್ಪಿಗಳಾದ ಶ್ರೀಮತಿ ರಾಜೇಶ್ವರಿ ಕಾಮಗೊಂಡ, ಎಸ್.ಎಸ್. ಪಾಟೀಲ, ಗುರುಗಳು ಜೇವೂರ, ಸುನಿಲ್ ಯಳಮೇಲಿ, ಸುನಿಲ್ ಶಾಹಾ, ಜಗದೀಶ ಚಲವಾದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಅಮಸಿದ್ಧ ಬಗಲಿ ಅವರ ಈ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಶ್ರೀ ಬೀರೇಶ್ವರ ಪ್ರೌಢ ಶಾಲೆಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶಿಕ್ಷಣ ವಲಯದವರಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ
ಅಧ್ಯಕ್ಷರಾಗಿ ರಮೇಶ ಬಿರಾದಾರ, ಪ್ರ.ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ ಎರಡನೆ ಅವಧಿಗೆ ಪುನರಾಯ್ಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಾ ಕಾ.ನಿ.ಪ. ಘಟಕದ 2025-2028 ನೇ ಸಾಲಿನ ಚುನಾವಣೆ ಬುಧವಾರ ಜರುಗಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.2025-2028 ನೇ ಸಾಲಿಗೆ ಅಧ್ಯಕ್ಷರಾಗಿ ರಮೇಶ ಬಿರಾದಾರ, ಉಪಾಧ್ಯಕ್ಷರಾಗಿ ಸಂಗಮೇಶ ಹೂಗಾರ, ಅನೀಲ ಕೊಡತೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ, ಕಾರ್ಯದರ್ಶಿಗಳಾಗಿ ಪ್ರಶಾಂತ ಮುಂಡೇವಾಡಿ, ಸಂಗಮನಾಥ ಚಿಂಚೋಳಿ, ಕಾರ್ಯಕಾರಣಿ ಸದಸ್ಯರಾಗಿ ಭೀಮರಾಯ ಕಾರಂಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಜಂಟಿಯಾಗಿ ಘೋಷಿಸಿದರು.ಅಧ್ಯಕ್ಷರಾಗಿ ರಮೇಶ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ ಅವರು ಈ ಮೊದಲು 2022-2025 ಹಾಗೂ 2025-2028 ರ ಅವಧಿಗೆ ಅದೆ ಸ್ಥಾನಕ್ಕೆ 2 ನೇ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಮ್ಮೆ ಅಕ್ಬರ್ ಬೀರಬಲ್ನನ್ನು ಕರೆದು ಅವನ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಕಠಿಣ ಪ್ರಶ್ನೆಗಳನ್ನು ಕೇಳಿದ. ‘ಬೀರಬಲ್, ನನಗೆ ಸತ್ಯವಾಗಿ ಉತ್ತರಿಸು ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯ ಯಾವುದು? ‘ಬೀರಬಲ್ ಒಂದು ಕ್ಷಣ ಯೋಚಿಸಿ ಹೇಳಿದ.’ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯವೆಂದರೆ ವರ್ತಮಾನದಲ್ಲಿ ಬದುಕುವುದು. ಭೂತಕಾಲ ಕಳೆದುಹೋಗಿದೆ ಮತ್ತು ಭವಿಷ್ಯವು ಅನಿಶ್ಚಿತವಾಗಿದೆ. ಆದರೆ ವರ್ತಮಾನವು ನಮಗೆ ಕಾರ್ಯನಿರ್ವಹಿಸುವ ಶಕ್ತಿ ಇರುವ ಸ್ಥಳವಾಗಿದೆ. ಅಕ್ಬರ ಚಿಂತನಶೀಲವಾಗಿ ತಲೆಯಾಡಿಸಿ ನಂತರ. ಅತ್ಯಂತ ಮುಖ್ಯವಾದ ಸಮಯ ಯಾವುದು?’ ಎಂದು ಕೇಳಿದ. ಅದಕ್ಕೆ ಬೀರಬಲ್ ಹೇಳಿದ ಉತ್ತರ ವರ್ತಮಾನ ಎಂದಾಗಿತ್ತು. ಅದು ಹೇಗೆ ಎಂದು ಮರುಪ್ರಶ್ನಿಸಿದಾಗ ಬೀರಬಲ್ನಿಂದ ಬಂದ ಉತ್ತರ ಬಹಳಷ್ಟು ವಾಸ್ತವಿಕವಾಗಿದೆ: ಏಕೆಂದರೆ ಅದು ನಾವು ನಿಯಂತ್ರಿಸಬಹುದಾದ ಏಕೈಕ ಸಮಯವೆಂದ. ಬೀರಬಲ್ಲನ ಉತ್ತರಗಳಿಂದ ಅಕ್ಬರ್ ಪ್ರಭಾವಿತನಾದ. ಕಳೆದು ಹೋದುದರ ಮೇಲೆ ಮುಂದೆ ಆಗಲಿರುವುದರ ಮೇಲೆ ನಮಗೆ ನಿಯಂತ್ರಣವಿಲ್ಲ. ಆದರೆ ಕೈಯಲ್ಲಿರುವ ಕ್ಷಣದ ಮೇಲೆ ನಿಯಂತ್ರಣವಿದೆ. ಆದ್ದರಿಂದ ನಾವು ಅನಿರೀಕ್ಷಿತ…
ಕೆಂಭಾವಿ: ಪಟ್ಟಣದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸುವಂತೆ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕದ ಹೋಬಳಿ ಅಧ್ಯಕ್ಷ ಗುರುರಾಜ ಎಸ್ ಅಂಗಡಿ ಒತ್ತಾಯಿಸಿದ್ದಾರೆ.ಈ ಕುರಿತು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚೆನ್ನಮ್ಮ ವೃತ್ತದಲ್ಲಿ ಜನದಟ್ಟಣೆ ಹಾಗೂ ವಾಹನ ಸಂಚಾರ ಹೆಚ್ಚಾಗಿದ್ದು, ಕೃಷ್ಣಾ ಕಾಲುವೆ ಪಕ್ಕದಲ್ಲಿ ಇರುವ ಕಾರಣ ಪಾದಚಾರಿಗಳು ಸಂಚಾರ ಮಾಡುವಾಗ ಬೆಳಕಿನ ಅಭಾವ ಎದುರಾಗಿ ಅಪಘಾತ ಸಂಭವಿಸುತ್ತವೆ. ಕೂಡಲೇ ಚೆನ್ನಮ್ಮ ವೃತ್ತದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.
ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ಗ್ರಾಮದ ಶ್ರೀಶೈಲ ಮಾಳಿ ಶಿಕ್ಷಕರು ಚಡಚಣ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮಂಗಳವಾರದಂದು ಚಡಚಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ದೇವರ ನಿಂಬರಗಿಯ ಸರ್ಕಾರಿ ಕಿರಿಯ ಪ್ರಾಥಮಿಕ ಮಣಿಯಾರ ವಸ್ತಿ ಶಾಲೆಯಲ್ಲಿ ಶಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಶಿಕ್ಷಕ ಸಂಯೋಜಕ ಸುರೇಶ ನಾಯಕ, ಬಿಆರ್ಪಿ ಶ್ರೀಮತಿ ರಾಜೇಶ್ವರಿ ಕಾಮಗೊಂಡ, ಎಸ್.ಎಸ್.ಪಾಟೀಲ, ಗುರು ಜೇವೂರ, ಸುನೀಲ ಯಳಮೇಲಿ, ಸುನೀಲ ಶಾಹ, ಜಗದೀಶ ಚಲವಾದಿಯವರುಗಳು ಸೇರಿದಂತೆ ಇತರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು,ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
