Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಯೋಜನೆ ರೂಪಿಸುವ ಸಂಭವ ನವದೆಹಲಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಭಾರತ ಬಂದ್ ನಡೆಸಲು ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಯೋಜನೆ ರೂಪಿಸುವ ಸಂಭವವಿದೆ ಎಂದು ಪೆಡರೇಶನ್ ವಿವಿಧ ರಾಜ್ಯಗಳ ಪದಾಧಿಕಾರಿಗಳು ನವದೆಹಲಿಯ ಸಿರಿ ಪೊರ್ಟ ಅಡಿಟೊರಿಯಂನಲ್ಲಿ ಗುರುವಾರ ನಡೆದ ಅಖಿಲ ಭಾರತ ಶಿಕ್ಷಕರ ಪೆಡರೇಷನ ಆರಂಭಿಸಿದ ಭಾರತ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಿರ್ಮಾನಿಸಿದರು.ಬ್ರಹತ್ ಸಭೆ ಜರುಗಿಸುವ ಮುಖಾಂತರ ತಕ್ಷಣ ಹಳೇ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಕೊಳ್ಳಬೇಕೆಂದು ಸಭೆ ಒತ್ತಾಯಿಸಿತು. ಕನ್ಯಾಕುಮಾರಿಯಿಂದ ಆರಂಭವಾದ ಭಾರತ ಯಾತ್ರೆ ಹತ್ತು ಸಾವಿರ ಕೀಮಿ ಸಂಚರಿಸಿದೆ. ಇದೇ ಅಸ್ಸಾಂದ ಗೌಹಾಟಿಯಿಂದ ನವದೆಹಲಿ, ಪಂಜಾಬದ ವಾಘಾ ಬರ್ಡಾರದಿಂದ ನವದೆಹಲಿ, ಗುಜರಾತಿನ ಸೋಮನಾತಪುರದಿಂದ ನವದೆಹಲಿವರೆಗೆ ನಾಲ್ಕು ತಂಡಗಳಲ್ಲಿ ಭಾರತ ಯಾತ್ರೆ ಜರುಗಿದೆ. ಎಲ್ಲ ರಾಜ್ಯಗಳಲ್ಲಿ ಉತ್ತಮವಾದ ಯಶ್ವಸನ್ನು ಸಾಧಿಸಿದೆ. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವದು ಸೇರಿದಂತೆ, ಇನ್ನಿತರ ನಾಲ್ಕು ಬೇಡಿಕೆಗಳನ್ನು ಈಡೇರಿ ಸುವಂತೆ ಸರಕಾರವನ್ನು ಒತ್ತಾಯಿಸಿತು.ಅಂತರರಾಷ್ಟ್ರೀಯ…
ವಿಜಯಪುರ: ಸಾರ್ವಜನಿಕ ಜಿಲ್ಲಾ ಆಸ್ಪತ್ರೆಗೆ ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಹೆರಿಗೆ ವಾರ್ಡ್, ಬಾಣಂತಿಯರ ವಾರ್ಡ್ , ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಕಾಂಗ್ರೊ ಮದರ್ ಕೇರ್, ಮಕ್ಕಳ ಪೌಷ್ಟಿಕ ಪುನಶ್ಚೇತನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರೊಂದಿಗೆ ವ್ಯವಸ್ಥೆ ಕುರಿತು ಚರ್ಚಿಸಿದರು.ಆಸ್ಪತ್ರೆಯ ಬಾಣಂತಿಯರ ವಾರ್ಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಾಣಂತಿಯರಿಗೆ ಸ್ನಾನಕ್ಕಾಗಿ ಬಿಸಿ ನೀರು, ಸರಿಯಾದ ಬೆಡ್ ವ್ಯವಸ್ಥೆ, ಬೆಡ್ಶಿಟ್, ಶುದ್ಧ ಕುಡಿಯುವ ನೀರು ಸೇರಿದಂತೆ ಬಾಣಂತಿಯರಿಗೆ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಷ್ಕಾಳಜಿ ವಹಿಸದೇ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಒಂದು ವಾರ್ಮರ್ಸ್ನಲ್ಲಿ ಎರಡು ಮಕ್ಕಳ ವೈದ್ಯಕೀಯ ಉಪಚಾರ ಮಾಡಬಾರದೆಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ನವಜಾತಾ ಶಿಶುಗಳ ಆರೈಕೆಯ ಸಲಕರಣಿಗಳು, ವಾರ್ಮರ್ಸ್, ಫೋಟೋ ತೆರೆಫಿ ಯೂನಿಟ್, ಇನ್ಫೂಜನ್ ಪಂಪ್, ಟ್ರಾನ್ಫೋಟ್ ಇನ್ ಕ್ಯೂಬೆಟರ್ ಸೇರಿದಂತೆ ಎಲ್ಲ ಸಲಕರಣೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.ನವಜಾತ ಶಿಶುಗಳ…
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಶಿಸ್ತುಕ್ರಮಕ್ಕೆ ಸೂಚನೆ ದೇವರಹಿಪ್ಪರಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು.ಪಟ್ಟಣದ ಇಂಗಳಗಿ ಕ್ರಾಸ್ ನಲ್ಲಿಯ ಮೊರಾರ್ಜಿದೇಸಾಯಿ ವಸತಿ ಶಾಲೆಗೆ ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲೆಯ ನ್ಯೂನ್ಯತೆಗಳ ಪಟ್ಟಿ ಮಾಡಿ ಸಿಬ್ಬಂದಿಗೆ ಸುಧಾರಣೆ ಕುರಿತು ತಿಳುವಳಿಕೆ ನೀಡಿ ಮಾತನಾಡುತ್ತಾ, ಶಾಲೆಯ ಮಕ್ಕಳ ಪಾಲಕರ ದೂರುಗಳ ಅನ್ವಯ ಇಂದು ಶಾಲೆಗೆ ಭೇಟಿ ನೀಡಲಾಗಿದೆ.ಶಾಲೆಯ ಆವರಣದಲ್ಲಿ ನಲ್ಲಿಗೆ ತೊಟೆಗಳಿರದೇ ನೀರು ಪೋಲಾಗುತ್ತಿರುವುದು, ರಾತ್ರಿ ಸಮಯದಲ್ಲಿ ವಿದ್ಯುತ್ ಕೈಕೊಟ್ಟಾಗ ಜನರೇಟರ್ ವ್ಯವಸ್ಥೆ ಇರದೇ ಇರುವುದು, ಜೊತೆಗೆ ರಾತ್ರಿ ಮಕ್ಕಳೊಂದಿಗೆ ವಾರ್ಡನ್ ಅಥವಾ ಯಾವುದೇ ಸಿಬ್ಬಂದಿ ಇರದೇ ಇರುವುದು, ಇದರಿಂದ ಮಕ್ಕಳಲ್ಲಿ ಭಯದ ವಾತಾವರಣ ಮೂಡುವಂತಾಗಿದ್ದು ಕೂಡಲೇ ಬೆಳಕಿನ ವ್ಯವಸ್ಥೆ ಮಾಡಬೇಕು. ಶಾಲೆಯ ಪ್ರಾಚಾರ್ಯರ ಕೋಣೆಯಲ್ಲಿ…
ಮುದ್ದೇಬಿಹಾಳ: ಬರಗಾಲ ಪೀಡಿತ ತಾಲೂಕು ಘೋಷಣೆಯಾದ ಹಿನ್ನಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಗ್ರಾಮ ಪಂಚಾಯತಿ ಸಿದ್ಧವಾಗಿದೆ. ಗ್ರಾಮೀಣಾ ಪ್ರದೇಶ ಜನರಿಗೆ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗುವುದು. ಆದ್ದರಿಂದ ಉದ್ಯೋಗ ಚೀಟಿ ಹೊಂದಿದ ಕುಟುಂಬಗಳು ಬೇಡಿಕೆ ಅರ್ಜಿ ಸಲ್ಲಿಸಿ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಜಯ ಮಹಾಂತೇಶ ಕೋರಿ ಹೇಳಿದರು.ತಾಲೂಕಿನ ಇಂಗಳಗೇರಿ ಗ್ರಾಮ ಪಂಚಾಯತಿಯಲ್ಲಿ ನಡೆದ ನರೇಗಾ ಯೋಜನೆಯ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮದಡಿ ಗುರುವಾರ ವಿಶೇಷ ರೋಜಗಾರ ದಿವಸ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಅವರು ಮಾತನಾಡಿದರು.ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಟುಂಬಗಳ ಸಮೀಕ್ಷೆ ನಡೆಸಲಾಗುತ್ತಿದೆ. ಯಾವುದೇ ಕೂಲಿ ಪಾವತಿಯಾಗದೆ ನಿಷ್ಕ್ರಿಯಗೊಂಡಿರುವ ಉದ್ಯೋಗ ಚೀಟಿಗಳನ್ನು ಸಕ್ರಿಯ ಮಾಡಲು ಅವಕಾಶವಿದೆ. ಹೊಸ ಉದ್ಯೋಗ ಚೀಟಿ ಹೊಂದಲು ಇಚ್ಛಿಸುವವರು ನಮೂನೆ -೧ ರಲ್ಲಿ ತಮ್ಮ ಸ್ವ-ವಿವರ ಭರ್ತಿ ಮಾಡಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.ನರೇಗಾ ತಾಲೂಕು ಐಇಸಿ ಸಂಯೋಜಕ ಪರಮೇಶ…
ವಿಜಯಪುರ: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಸ್ವಾವಲಂಬಿ ಸಾರತಿ ಯೋಜನೆ ಹಾಗೂ ಸ್ವಯಂ ಉದ್ಯೋಗ ನೇರಸಾಲ ( ಬ್ಯಾಂಕುಗಳ ಸಹಯೋಗದೊಂದಿಗೆ), ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೩-೧೧-೨೦೨೩ ಕೊನೆಯ ದಿನವಾಗಿದೆ. ಶೈಕ್ಷಣ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ : https://www.upparadevelopment.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ : ೦೮೩೫೨-೨೨೫೨೫೫೫, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರತಿ ಯೋಜನೆ ಹಾಗೂ ಸ್ವಯಂ ಉದ್ಯೋಗ ನೇರಸಾಲ ( ಬ್ಯಾಂಕುಗಳ ಸಹಯೋಗದೊಂದಿಗೆ), ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೩-೧೧-೨೦೨೩ ಕೊನೆಯ ದಿನವಾಗಿದೆ. ಶೈಕ್ಷಣ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ : : https://www.kaad.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: ೦೮೩೫೨-೨೫೮೧೨೫೮, ಮೊ:೮೦೫೦೭೭೦೦೦೪, ೮೦೫೦೭೭೦೦೦೫…
ವಿಜಯಪುರ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರತಿ ಯೋಜನೆ ಹಾಗೂ ಸ್ವಯಂ ಉದ್ಯೋಗ ನೇರಸಾಲ ( ಬ್ಯಾಂಕುಗಳ ಸಹಯೋಗದೊಂದಿಗೆ), ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೩-೧೧-೨೦೨೩ ಕೊನೆಯ ದಿನವಾಗಿದೆ. ಶೈಕ್ಷಣ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ : : https://www.kaad.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: ೦೮೩೫೨-೨೫೮೧೨೫೮, ಮೊ:೮೦೫೦೭೭೦೦೦೪, ೮೦೫೦೭೭೦೦೦೫…
ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಅವಧಿಯನ್ನು ಅಕ್ಟೋಬರ್ ೨೦ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕರಾದ ಮೈತ್ರಿ ಡಿ.ಎಸ್.ಅವರು ತಿಳಿಸಿದ್ದಾರೆ.ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಸ್ತುತ ೨೦೨೩-೨೪ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶ ಆರಂಭಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ ೨೦ ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ (ಐಟಿ) ಹಾಗೂ ಬಿಎಸ್ಸಿ (೧೪ ಕಾಂಬಿನೇಷನ್ಸ್), ಬಿಎಸ್ಡಬ್ಲೂ, ಬಿಎಲ್ಐಎಸ್ಸಿ, ಎಂ.ಎ, ಎಂ.ಕಾಂ, ಎಂಬಿಎ, ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ, ಎಂಸಿಎ ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮಗಳಿಗೆ ಪ್ರವೇಶ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಕೋರ್ಸ್ಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದಾಗಿದೆ.ವಿಜಯಪುರ ಪ್ರಾದೇಶಿಕ ಕೇಂದ್ರ ಎರಡನೇ ಮತ್ತು ನಾಲ್ಕನೇ…
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ ೨೮ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದ್ದು, ಜಿಲ್ಲೆಯ ಗಣ್ಯರು, ಮುಖಂಡರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ ಅವರು ಅಕ್ಟೋಬರ್ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಕ್ಟೋಬರ್ ೬ ರಂದು ಬರ ಪರಿಸ್ಥಿತಿ ಅಧ್ಯಯನ ತಂಡದೊAದಿಗೆ ಬೆಳಗಾವಿಯಿಂದ ವಿಜಯಪುರಕ್ಕೆ ಆಗಮಿಸಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅ.೭ರಂದು ಬೆಳಿಗ್ಗೆ ವಿಜಯಪುರದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
