Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ೧೯೪೪ ರಲ್ಲಿ ಪಂಚಾಕ್ಷರಿ ಗವಾಯಿಗಳು ಚಕ್ಕಡಿಯಲ್ಲಿಯೇ ಸಂಚಾರಿ ಸಂಗೀತ ಸೇವಾ ಕಾರ್ಯಕ್ರಮವನ್ನು ನಡೆಸುತ್ತಾ ಚಕ್ಕಡಿಯಲ್ಲಿ ತಂಬೂರಿ, ತಬಲಾ ಸಂಗೀತ ನಾದಕ್ಕೆ ತಕ್ಕಂತಿರುವ ಈ ಎಲ್ಲ ಸಲಕರಣೆಗಳನ್ನಿಟ್ಟುಕೊಂಡು ಗ್ರಾಮಾಂತರ ಪ್ರದೇಶದಲ್ಲಿ ಸಂಚರಿಸುತ್ತಾ ಸಾಗಿದ ಸಂಗೀತ ಪ್ರೇಮಿಗಳು ಸಂಗೀತ ನಾದವನ್ನು ಕೇಳಿ ದೌಡಾಯಿಸಿ ಆ ಕಾರ್ಯಕ್ರಮವನ್ನು ವೀಕ್ಷಿಸಲು ಈ ಹಿಂದೆ ಆಗಮಿಸುವ ಕಾರ್ಯವೂ ಸಹ ನಡೆಯುತ್ತಿತ್ತೆಂದು ಖ್ಯಾತ ಗವಾಯಿಗಳಾದ ಬಿ.ಎಸ್. ಸಾಲಿಮಠ ಅವರ ಪುತ್ರ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕಾಶೀನಾಥ ಪಿ ಸಾಲಿಮಠ ಅವರು ನುಡಿದರು.ರವಿವಾರರಂದು ಎ.ಎಸ್. ವಠಾರ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಬಸವ ಸಮೀತಿಯ ಪ್ರಣಾಂಗಳದಲ್ಲಿ ಏರ್ಪಡಿಸಲಾದ ಪಿ.ಎ. ಸಾಲಿಮಠ ಗವಾಯಿಗಳ ೨೨ ನೇಯ ಹಾಗೂ ಶ್ರೀ ಎ.ಎಸ್. ವಠಾರ ಗುರುಗಳ ೮ ನೇ ಸ್ಮರಣೋತ್ಸವ ಅಂಗವಾಗಿ ಏರ್ಪಡಿಸಲಾದ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ಬಿ.ಎಸ್. ಸಾಲಿಮಠ ಗುರುಗಳು ಪಂಚಾಕ್ಷರಿ ಗವಾಯಿಗಳೊಂದಿಗೆ ಅವರೂ ಕೂಡಾ ಸಂಗೀತದ ಸಂಚಾರಿ ಚಕ್ಕಡಿಯಲ್ಲಿ ಕುಳಿತು ಸಂಗೀತ ಸೇವೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ರಾಜ್ಯದಲ್ಲಿಯೇ ದಾಖಲೆ ಆಗುವ ರೀತಿಯಲ್ಲಿ ಜನಸ್ತೋಮ ಸೇರಿ ಅನಾವರಣ ಮಾಡಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭರವಸೆ ನೀಡಿದರು.ನಗರದ ಅಹಿಲ್ಯಾಬಾಯಿ ಹೋಳ್ಕರ್ ವೃತ್ತದಲ್ಲಿ ರವಿವಾರ ರಾಜಮಾತಾ ಅಹಿಲ್ಯಾಬಾಯಿ ಹೋಳ್ಕರ್ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ಮಹಾರಾಷ್ಟ್ರಕ್ಕೆ ಸೀಮಿತವಾಗಿದ್ದ ಹಿಂದೂ ಧರ್ಮ ರಕ್ಷಕಿ ಅಹಿಲ್ಯಾಬಾಯಿ ಹೋಳ್ಕರ್ ಅವರ ಇತಿಹಾಸ ರಾಜ್ಯದಲ್ಲಿಯೂ ಪ್ರಚುರಪಡಿಸಲು ಅವರ ವೃತ್ತ ಸೇರಿದಂತೆ ಅನೇಕ ಮಹಾಪುರುಷರ, ಸ್ವಾತಂತ್ರ್ಯ ಹೋರಾಟಗಾರರ, ನಾಡಿಗಾಗಿ ಸೇವೆ ಸಲ್ಲಿಸಿದ ಮಹನೀಯರ ವೃತ್ತಗಳ ಸ್ಥಾಪನೆ, ರಸ್ತೆಗಳಿಗೆ ಹೆಸರು ನಾಮಕರಣ ಮಾಡಲಾಗಿದೆ. ರಾಯಣ್ಣನವರ ಮೂರ್ತಿ ಬಾಕಿಯಿದ್ದು, 2027ರ ಅಗಸ್ಟ್ 15 ರಂದು ಅದನ್ನೂ ಮಾಡುವುದಾಗಿ ತಿಳಿಸಿದರು.ಭಾರತದ ಇತಿಹಾಸದಲ್ಲಿ ರಾಜಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರು ನಡೆಸಿದ 35 ವರ್ಷಗಳ ಸುಧೀರ್ಘ ಆಡಳಿತ ಕಾಲವನ್ನು ಸುವರ್ಣ ಯುಗ ಎಂದು ಕರೆಯಲಾಗುತ್ತದೆ. ಅಹಿಲ್ಯಾಬಾಯಿ ಅವರು ಸಮರ್ಥ ಆಡಳಿತಗಾರರಾಗಿದ್ದರು. ಮಹಿಳಾ ಸಬಲೀಕರಣಕ್ಕೆ ಒತ್ತು…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭ ಹಾಗೂ ಮೇಗಾ ಪೋಷಕರ ಸಭೆ ವಿಜೃಂಭಣೆಯಿಂದ ಆಚರಿಸಲಾಯಿತು.ಮೊದಲ ದಿನವೇ ಶಾಲೆಯು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಬಲೂನ್, ರಿಬ್ಬನ್, ಹೂ-ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಶಾಲೆಯ ಆವರಣದಲ್ಲಿ ಚಿಣ್ಣರು ಹೊಸ ಬಟ್ಟೆ ತೊಟ್ಟು ಅತೀ ಉತ್ಸಾಹದಿಂದ ಓಡಾಡುತ್ತಿದ್ದು ಕಂಡು ಬಂತು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ ಹೊಸದಾಗಿ ಶಿಶುವಿಹಾರ ಹಾಗೂ ಒಂದನೆಯ ತರಗತಿಗೆ ದಾಖಲಾತಿ ಆದ ಸುರಕ್ಷಾ ರಾಜಶೇಖರ ಅಲೋಣಿ ಹಾಗೂ ಅನುಷ್ಕಾ ವಿಲಾಸ ಅಲೋಣಿ ಮಕ್ಕಳಿಗೆ ಶಾಲಾ ಬ್ಯಾಗ್, ನೋಟ್ ಬುಕ್, ಕಂಪಾಸ್ ಪೆಟ್ಟಿಗೆ ಹಾಗೂ ಪಠ್ಯಪುಸ್ತಕ ಉಚಿತವಾಗಿ ಕೊಡಮಾಡುವ ಮುಖಾಂತರ ಸ್ವಾಗತಿಸಿದರು. ಶಿಕ್ಷಕವೃಂದದವರು ಎಲ್ಲಾ ಮಕ್ಕಳ ಮೇಲೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಮಕ್ಕಳಿಗೆ ಸ್ವಾಗತಿಸಿದರು.ಈ ವೇಳೆ ಮಾತನಾಡಿದ ಜೋಗೂರವರು ಉಜ್ವಲ ಭವಿಷ್ಯ, ಉಜ್ವಲ ಕಲಿಕೆ ಎಂಬ ಹೊಸ ಧ್ಯೇಯ ವಾಕ್ಯದೊಂದಿಗೆ ಈ ವರ್ಷದ ಶಾಲಾ ಪ್ರಾರಂಬೋತ್ಸವವು ಅತ್ಯಂತ ವಿಜೃಂಭಣೆಯಿಂದ ಉಚಿತ…
ಉದಯರಶ್ಮಿ ದಿನಪತ್ರಿಕೆ ಅಥಣಿ: ಜೂನ್ 3 ರಂದು ರಚನೆಯಾಗಲಿರುವ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಮಾಜಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.ಡಾ. ಡಿ.ಜಿ. ಸಾಗರ ಅವರ ಆದೇಶದ ಮೇರೆಗೆ ಸೋಮವಾರ ಅಥಣಿ ನಗರದ ಜತ್ತ ರಸ್ತೆಯ ಜ್ಯೋತಿಭಾ ಫುಲೆ ವೃತ್ತದಲ್ಲಿ ದಸಂಸ ಜಿಲ್ಲಾ ಸಂಚಾಲಕ ಶ್ರೀಕಾಂತ ತಳವಾರ ಹಾಗೂ ಸಂಜಯ ತಳವಲಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ಜಿಲ್ಲಾ ಸಂಚಾಲಕ ಶ್ರೀಕಾಂತ ತಳವಾರ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಡಾ. ಎಚ್.ಸಿ. ಮಹಾದೇವಪ್ಪ ಅವರು ಸಮಾಜ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ದಲಿತ ಹಿಂದುಳಿದ ವರ್ಗಗಳ ಪರವಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಹೀಗಾಗಿ ಹೊಸ ಸಂಪುಟದಿಂದ ಅವರನ್ನು ಕೈಬಿಡಬಾರದು ಎಂದು ಒತ್ತಾಯಿಸಿದರು.ದಸಂಸ ಅಥಣಿ ಸಂಚಾಲಕ ರವಿ ಕಾಂಬಳೆ ಮಾತನಾಡಿದರು.ಈ ಸಂದರ್ಭದಲ್ಲಿ ಪಾಂಡುರಂಗ ಕಾಂಬಳೆ, ಸಂತೋಷ ಗಸ್ತಿ, ರಮೇಶ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿಬಿಎಸ್ಇ) ಶಾಲೆಯಲ್ಲಿ ಸೋಮವಾರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅದ್ಧೂರಿಯಾಗಿ ನಡೆಯಿತು.ಮಕ್ಕಳು ಶಾಲಾ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಅವರನ್ನು ಬೋಧಕರು ಮತ್ತು ಬೋಧಕರ ಹೊರತಾದ ಸಿಬ್ಬಂದಿ ವೈಭವದಿಂದ ಸ್ವಾಗತಿಸಿ, ಪ್ರತಿ ಮಗುವಿಗೂ ಶುಭಾಶಯ ಪತ್ರವನ್ನು ನೀಡಿ ಕರತಾಡನದ ಮೂಲಕ ಎಲ್ಲರನ್ನು ಬರಮಾಡಿಕೊಂಡರು. ಈ ವೇಳೆ ಎಲ್ಲ ತರಗತಿಗಳನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿತ್ತು.ಪ್ರಾರ್ಥನಾ ಸಭೆಯ ವೇದಿಕೆಯಲ್ಲಿ ಸರಸ್ವತಿ ಪೂಜೆ ನೆರವೇರಿಸಿದ ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಮತ್ತು ನೂತನ ಉಪಪ್ರಾಚಾರ್ಯೆ ವಸುಧಾ ನಾರ್ವೆಕರ್ ಅವರು ಮಕ್ಕಳಿಂದ ದೀಪ ಹಚ್ಚಿಸುವ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿಯ ಚಾಲನೆ ನೀಡಿದರು.ಸಂಗೀತ ಶೀಕ್ಷಕಿ ಸಂತೋಷಿ ಕುಸೂರ ಸರಸ್ವತಿ ಭಜನೆಯನ್ನು ಹಾಡಿದರು. ಸಾಂಸ್ಕೃತಿಕ ಕಾರ್ಯ ಸಂಯೋಜಕಿ ಫರಾ ಜಾಗಿರದಾರ ಸ್ವಾಗತಿಸಿದರು. ಶಾಲೆಗೆ ಹೊಸದಾಗಿ ಆಗಮಿಸಿದ ಪ್ರತಿ ಶಿಕ್ಷಕರನ್ನು ವಿಶೇಷ ರೀತಿಯಲ್ಲಿ ಪರಿಚಯಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ನೂತನ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ, ಮುಂದಿನ ಶೈಕ್ಷಣಿಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಥೈರಾಯ್ಡ್ ಕಾಯಿಲೆಯನ್ನು ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ. ಗಿರೀಶ ಕುಲ್ಲೊಳ್ಳಿ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ವಿಜಯಪುರದ ಕೆ. ಸಿ. ಪಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಥೈರಾಯ್ಡ್ ಗ್ರಂಥಿ ರೋಗಗಳ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಥೈರಾಯ್ಡ್ ಮಾನವ ದೇಹದಲ್ಲಿನ ಅತಿದೊಡ್ಡ ನಿರ್ನಾಳ ಗ್ರಂಥಿಯಾಗಿದ್ದು, ಇಡೀ ದೇಹದ ಚಯಾಪಚಯ ಕ್ರಿಯೆ ಮತ್ತು ನಾನಾ ಶಾರೀರಿಕ ಕಾರ್ಯಗಳನ್ನು ನಿಯಂತ್ರಿಸುವ ಮಹತ್ವದ ಪಾತ್ರ ವಹಿಸುತ್ತದೆ.ಲ. ಥೈರಾಯ್ಡ್ ಗ್ರಂಥಿಯ ಕಾರ್ಯಕ್ಷಮತೆಯಲ್ಲಿ ಏರುಪೇರಾದಾಗ ಹೈಪೊ ಅಥವಾ ಹೈಪರ್ ಥೈರಾಯ್ಡಿಸಮ್ ಉಂಟಾಗಿ ಕುತ್ತಿಗೆಯ ಮುಂಭಾಗದಲ್ಲಿ ಗಂಟು ಕಾಣಿಸಿಕೊಳ್ಳಬಹುದು. ಈ ಸಮಸ್ಯೆ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವೊಮ್ಮೆ ಅನುವಂಶಿಕವಾಗಿಯೂ ಇದು ಬರಬಹುದು ಎಂದು ಅವರು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸಹಾಯಕ ಪ್ರಾಧ್ಯಾಪಕಿ ಡಾ. ಶೃತಿ ಶೀಳೀನ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು.ಪ್ರವರ್ಗ-೧, ಎಸ್.ಸಿ & ಎಸ್.ಟಿ. ೨.೫೦ ಲಕ್ಷದೊಳಗಿರಬೇಕು. ಪ್ರವರ್ಗ-೨ಎ, ೨ಬಿ, ೩ಎ, ೩ಬಿ- ರೂ. ೧.೦೦ ಲಕ್ಷದೊಳಗಿರಬೇಕು.ಆಸಕ್ತರು ವೆಬ್ ಸೈಟ್ https://shp.karnataka.gov.in/bcwdನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜೂ. ೧೫ ಕೊನೆ ದಿನ.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸರಕಾರಿ ಐಟಿಐ ಸಂಸ್ಥೆಯಲ್ಲಿ ೨೦೨೬ನೇ ಸಾಲಿನ ಪ್ರತಿಷ್ಠಿತ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಎಸ್ಸೆಸ್ಸೆಲ್ಸಿ ಫೇಲಾದ ಅರ್ಹ ಅಭ್ಯರ್ಥಿಗಳಿಗೆ ಎನ್ ಸಿವಿಟಿ ನವದೆಹಲಿಯಿಂದ ಸಂಯೋಜನೆಯಾದ ಎರಡು ಹೊಸದಾಗಿ ಟಾಟಾ ಉದ್ಯೋಗದಡಿ ಪ್ರಾರಂಭ ಮಾಡಲಾಗುವ ಪ್ರತಿಷ್ಟಿತ ಕೊರ್ಸಗಳ ಪ್ರವೇಶಕ್ಕಾಗಿ ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಖುದ್ದಾಗಿ ಕಾಲೇಜಿಗೆ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಪ್ರಸ್ತುತ ಸಾಲಿನಿಂದ ಉಚಿತವಾಗಿ ಪ್ರವೇಶ ಒದಗಿಸಲಾಗುವುದು ಎಂದು ಪ್ರಭಾರಿ ಪ್ರಾಚಾರ್ಯ ಪೂಜಪ್ಪ ಪೂಜಾರಿ ತಿಳಿಸಿದ್ದಾರೆ.ಎರಡು ವರ್ಷ ಅವಧಿಯ ಎಲೆಕ್ಟ್ರೀಸಿಯನ್ ಕೋರ್ಸ್ಗೆ ೨೦ ಸೀಟುಗಳು, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಕೋರ್ಸ್ಗೆ ೪೮ ಸೀಟಿಗಳು, ಟಾಟಾ ಟೆಕ್ನಾಲಾಜಿ ಉದ್ಯೋಗ ಟ್ರೇಡ್ಸ್ ನಲ್ಲಿರುವ ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಮ್ಯಾನ್ಯೂಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಅಟೋಮೇಶನ್, ಇಂಡಸ್ಟ್ರೀಯಲ್ ರೊಬೊಟಿಕ್ಸ್ ಮತ್ತು ಡಿಜಿಟಲ್ ಮ್ಯಾನ್ಯೂಫ್ಯಾಕ್ಚರಿಂಗ್ ಟೆಕ್ನಿಸಿಯನ್, ವರ್ಚುಲ್ ಅನಾಲಿಸಿಸ್ ಮತ್ತು ಡಿಸೈನರ್, ಸಿಎನ್ಸಿ ಮಶಿನಿಂಗ್ ಟೆಕ್ನಿಶಿಯನ್, ಎಂಜಿನೀಯರಿಂಗ್ ಡಿಸೈನ್ ಟೆಕ್ನಿಸಿಯನ್ (ಇಡಿಟಿ) ಕೋರ್ಸ್ಗಳ ಸೀಟುಗಳಿವೆ.ಕೋರ್ಸ್ ಪ್ರವೇಶಕ್ಕೆ ಎಸ್ಸೆಸ್ಸೆಲ್ಸಿ ಅಂಕ ಪತ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ನೂತನ ಅಧ್ಯಕ್ಷರಾಗಿ ಅರ್ಜುನ ಗಂ ಲಮಾಣಿ ಆಯ್ಕೆಯಾಗಿದ್ದಾರೆ.ಅದರಂತೆ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ಹಣಮಂತ ಬ. ಕೊಣದಿ, ಉಪಾಧ್ಯಕ್ಷರಾಗಿ ಬಿ ಎಸ್ ಶೆಖಣ್ಣವರ, ಹಾಗೂ ಶ್ರೀಮತಿ ಆರ್ ಎಸ್ ಗಿಡ್ಡಪ್ಪಗೋಳ, ಖಜಾಂಚಿಯಾಗಿ ಸುನೀಲ ಯಳಮೇಲಿ, ಸಹಕಾರ್ಯದರ್ಶಿಯಾಗಿ ಎಂ ಎಂ ಮುಲ್ಲಾ ಹಾಗೂ ಶ್ರೀಮತಿ ಜ್ಯೋತಿ ಎಸ್ ಹಿಪ್ಪರಗಿ, ಸಂಘಟನಾ ಕಾರ್ಯದರ್ಶಿಗಳಾಗಿ ಕೆ ಆರ್ ಕೊಕಟನೂರ ಹಾಗೂ ಶ್ರೀಮತಿ ಭಾರತಿ ಚಿಮ್ಮಲಗಿ ಆಯ್ಕೆಯಾಗಿದ್ದಾರೆ.ಇವರ ಆಯ್ಕೆಯನ್ನು ರಾಜ್ಯ ಚುನಾವಣಾ ಅಧಿಕಾರಿಗಳಿಂದ ಅನುಮೋದನೆ ಪಡೆದು ಜಿಲ್ಲಾ ಸಂಘದ ಪದಾಧಿಕಾರಿಗಳ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಿಕಾರ್ಜುನ ಬಿ ಮೆಡೆಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ವಿಶೇಷ ದಾಳಿಯಲ್ಲಿ ಕಳ್ಳಭಟ್ಟಿ ಸರಾಯಿ ಮತ್ತು ಬೆಲ್ಲದ ರಸಾಯನವನ್ನು ಜಪ್ತಿ ಮಾಡಲಾಗಿದ್ದು, ಆರೋಪಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಮಾನ್ಯ ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಬೆಳಗಾವಿ ಹಾಗೂ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಬೆಳಗಾವಿ ಅವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಆಯುಕ್ತರು ವಿಜಯಪುರ ಜಿಲ್ಲೆ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ವಲಯಗಳ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿ ಸಾಮೂಹಿಕ ಅಬಕಾರಿ ದಾಳಿ ನಡೆಸಿದರು.ಈ ವೇಳೆ ಬಂದ ಖಚಿತ ಮಾಹಿತಿಯ ಮೇರೆಗೆ ವಿಜಯಪುರ ನಗರದ ಹರಣಶಿಕಾರಿ ಕಾಲನಿಯ ಮರಗಮ್ಮ ದೇವಸ್ಥಾನದ ಸಮೀಪದಲ್ಲಿರುವ ಲೈಲಾ ಶಿವಕುಮಾರ ಉರ್ಫ್ ಶಿವಾಜಿ ಜುಮನಾಳ ಅವರ ನಿವಾಸದ ಮೇಲೆ ದಾಳಿ ನಡೆಸಲಾಯಿತು.ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು 3.5 ಲೀಟರ್ ಕಳ್ಳಭಟ್ಟಿ ಸರಾಯಿ ಹಾಗೂ 1 ಲೀಟರ್ ಬೆಲ್ಲದ ರಸಾಯನ ವನ್ನು ಜಪ್ತಿ ಮಾಡಿದರು.ಈ ಸಂಬಂಧ ಆರೋಪಿತೆ ಲೈಲಾ ಶಿವಕುಮಾರ ಉರ್ಫ್ ಶಿವಾಜಿ ಜುಮನಾಳ…
