Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ.. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಶುಕ್ರವಾರ ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.ಸುಮಾರು ಒಂದು ವರ್ಷ ಏಳು ತಿಂಗಳ ಜನ್ಮಜಾತ ಕಿವುಡುತನ ಹೊಂದಿರುವ ಮಗುವಿಗೆ ಅತ್ಯಾಧುನಿಕ ನೆಕ್ಸಾ(NEXA 1022) ಕಾಕ್ಲಿಯರ್ ಇಂಪ್ಲಾಂಟ್ ಉಪಕರಣವನ್ನು ಒಳಕಿವಿಯ ಭಾಗದಲ್ಲಿ ಅಳವಡಿಸಲಾಯಿತು. ಈ ಉಪಕರಣವು ಮಾತನಾಡುವ ಧ್ವನಿಗಳನ್ನು ವಿದ್ಯುತ್ ಪ್ರೇರಣೆಯಾಗಿ ಪರಿವರ್ತಿಸಿ, ಕಿವಿಯ ನರಗಳನ್ನು ಉತ್ತೇಜಿಸುವ ಮೂಲಕ ಮೆದುಳಿಗೆ ಸಂದೇಶಗಳನ್ನು ಕಳುಹಿಸಿ, ಪದಗಳನ್ನು ಸ್ಪಷ್ಟವಾಗಿ ಕೇಳಿಸಿಸುವ ಸಾಮರ್ಥ್ಯವನ್ನು ಹೊಂದಿದೆ.ಈ ಶಸ್ತ್ರಚಿಕಿತ್ಸೆಯಲ್ಲಿ ಬಳಸಲಾದ ಸ್ಮಾರ್ಟ್ ನಾವ್(SMART NAV) ತಂತ್ರಜ್ಞಾನವು ಮೊಬೈಲ್‌ ಜೊತೆ ನೇರ ಸಂಪರ್ಕ ಹೊಂದಿದ್ದು, ಡೈರೆಕ್ಟ್ ಸ್ಟ್ರೀಮಿಂಗ್ ಮತ್ತು ಟ್ರ್ಯಾಕಿಂಗ್ ಸೌಲಭ್ಯವನ್ನು ಒದಗಿಸುತ್ತದೆ. ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಉತ್ತರ ಕರ್ನಾಟಕ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ವಿಶೇಷವಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತ್ಯಾಧುನಿಕ ಆರೋಗ್ಯ ಸೇವೆಯನ್ನು ಸಮಾಜದ ಪ್ರತಿಯೊಬ್ಬರಿಗೂ ಸುಲಭವಾಗಿ ಮತ್ತು ಸಮಾನವಾಗಿ ತಲುಪಿಸುವ ಉದ್ದೇಶದಿಂದ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಉಚಿತ ಮಾನವ ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಎಚ್.ಎಲ್.ಎ (Human Leukocyte Antigen Typing) ಪರೀಕ್ಷೆ ಶಿಬಿರ ನಡೆಯಿತು.ಭಾರತೀಯ ಮಕ್ಕಳ ವೈದ್ಯರ ಸಂಘ ವಿಜಯಪುರ ಶಾಖೆ ಮತ್ತು ಎನ್. ಎಚ್. ಮಜುಂದಾರ ಶಾ ವೈದ್ಯಕೀಯ ಕೇಂದ್ರದ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಉಚಿತವಾಗಿ ಅಂಗಾಂಗ ಪ್ರತಿರೋಪಣೆಗೆ ಅತ್ಯಂತ ಮಹತ್ವದ ಹೊಂದಾಣಿಕೆ ಪರೀಕ್ಷೆ ನಡೆಸಲಾಯಿತು.ಈ ಶಿಬಿರದಲ್ಲಿ ಒಟ್ಟು 40 ರೋಗಿಗಳು ಉಚಿತ ಪರೀಕ್ಷೆಯ ಸೌಲಭ್ಯವನ್ನು ಪಡೆದುಕೊಂಡರು. ಸುಮಾರು ರೂ. 1.60 ಲಕ್ಷ ಮೌಲ್ಯದ ಅತ್ಯಾಧುನಿಕ ಪರೀಕ್ಷೆಗಳನ್ನು ಯಾವುದೇ ಶುಲ್ಕವಿಲ್ಲದೆ ನಡೆಸಲಾಗಿದ್ದು, ಪ್ರತಿ ರೋಗಿಗೂ ಸರಾಸರಿ ರೂ. 4 ಸಾವಿರ ವೆಚ್ಚ ಉಳಿತಾಯವಾದಂತಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ,…

Read More

ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಹೇಳಿದ್ದಾರೆ.ಶುಕ್ರವಾರ ನಗರದದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾದ ಪ್ರಥಮ ವರ್ಷದ ಶಸ್ತ್ರ ಚಿಕಿತ್ಸೆ ಆಧಾರಿತ ವಿಭಾಗಗಳ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯು ದೇಶಾದ್ಯಂತ ವೈದ್ಯಕೀಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಚಲಿಸುವ ವಾಹನದ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಬಿ.ಎಲ್.ಡಿ.ಇ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಈಗಾಗಲೇ ವಿಶ್ವದರ್ಜೆಯ ಕೌಶಲ್ಯಾಭಿವೃದ್ಧಿ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ ಎಂದು ಅವರು ತಿಳಿಸಿದರು.ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಸೋಮವಾರ ಕೋಲಾರದ ಹೋಂಡಾ ಮೋಟಾರ್ ಸೈಕಲ್ ಸ್ಕೂಟರ್ ಇಂಡಿಯಾ ಪ್ರೈ. ಲಿ ಕಂಪನಿ ಅಪ್ರೆಂಟಿಸ್‌ಶಿ ಗಾಗಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆಯಾಗಿದ್ದಾರೆ.ಈ ಕ್ಯಾಂಪಸ್ ಡ್ರೈವ್ ನಲ್ಲಿ 122 ತರಬೇತಿದಾರರು ಭಾಗವಹಿಸಿದ್ದರು. ಇವರಲ್ಲಿ 81 ಜನ ಆಯ್ಕೆಯಾಗಿದ್ದು, ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯ(ಐಟಿಐ)ಗೆ ಸೇರಿದ 75 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ ಹಾಗೂ ಪ್ರಾಚಾರ್ಯರ ಎಂ. ಡಿ. ಪಡಸಲಗಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನ ಬಾಗೇವಾಡಿ: ರಾಜ್ಯದ ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕೆಂದು ಬಸವನಬಾಗೇವಾಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಿಹಾನ್ ಆರ್. ಕೆರೂರ್ (ಬಾಗವಾನ್) ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಶಿವಾನಂದ ಪಾಟೀಲರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಜನಪರ ನಾಯಕರಾಗಿ ಹಾಗೂ ಅಭಿವೃದ್ಧಿ ಪರ ಚಿಂತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಶಿವಾನಂದ ಪಾಟೀಲರು ರೈತರು, ಕಾರ್ಮಿಕರು, ನೇಕಾರರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕರೆಂದು ಗುರುತಿಸಿಕೊಂಡಿದ್ದಾರೆ. ಅವರ ಆಡಳಿತ ಅನುಭವ, ರಾಜಕೀಯ ಪ್ರೌಢಿಮೆ ಮತ್ತು ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ…

Read More

ವಿಜಯಪುರದಲ್ಲಿ ನಿವೃತ್ತಿಯಾದ ಡಿಸಿ ಕುರುಬರಗೆ ಬೀಳ್ಕೊಡುಗೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ತಮ್ಮ ಸೌಮ್ಯ ಸ್ವಭಾವದಿಂದ ಕಾನೂನು ಪರಿಪಾಲಿಸುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರು ಹೇಳಿದರು.ಸೇವಾ ನಿವೃತ್ತಿ ಹೊಂದಿದ ಕಲ್ಯಾಣ ಕರ್ನಾಟ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಜೊತೆಗೆ ನಿವೃತ್ತಿ ಹೊಂದಿದ ಇತರೇ ಸಿಬ್ಬಂದಿಗೆ ಇಲ್ಲಿನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ ಮಾತನಾಡಿ, ಸಂಸ್ಥೆಯ ಸಿಬ್ಬಂದಿ ಸಹಕಾರದೊಂದಿಗೆ ನಾರಾಯಣಪ್ಪ ಕುರುಬರ ಅವರು ಸಂಸ್ಥೆ ಕಟ್ಟುವಲ್ಲಿ ಅವಿರತ ಶ್ರಮ ವಹಿಸಿದ್ದಾರೆ. ಖಡಕ್ ಅಧಿಕಾರಿಯಾಗಿದ್ದ ಕುರುಬರ ಅವರು, ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸುಮಧುರ ಒಡನಾಟ ಹೊಂದಿದ್ದರು ಎಂದು ಹೇಳಿದರು.ಸೋಮನಾಥ ಕಳ್ಳಿಮನಿ ಮಾತನಾಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ,…

Read More

ಪ್ರತಿಭಟನೆ ನಡೆಸಿದ ಎಸೈಆರ್ ವಿರೋಧಿ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಎಸೈಆರ್ ಕ್ರಮವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಎಸೈಆರ್ ವಿರೋಧಿ ಜಾತ್ಯತೀತ ಸಂಘಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.ವಿಜಯಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಜನಪರ, ಪ್ರಗತಿಪರ ಹಾಗೂ ರಾಜಕೀಯ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, SIR ಕ್ರಮದಿಂದ ಬಡವರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶ್ರೀನಾಥ ಪೂಜಾರಿ, “ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹೆಸರಿನಲ್ಲಿ ಜಾರಿಗೊಳಿಸಲಾಗುತ್ತಿರುವ SIR ಕ್ರಮವು ಸಾಮಾನ್ಯ ಜನರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು…

Read More

ಸಿಎಂ ಸಿದ್ದರಾಮಯ್ಯ ರಿಂದ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ | ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅನುಮೋದನೆ ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಅನುಮೋದಿಸಿದರು. ನಂತರ ಎಲ್ಲಾ ಶಾಸಕರು ಅದಕ್ಕೆ ಒಪ್ಪಿಗೆ ನೀಡಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಯಜ್ಞ, ಯಾಗಾದಿಗಳು, ಅದ್ದೂರಿ, ಆಡಂಬರದ ಖರ್ಚುಗಳ ಮೂಲಕ ಜನಸಾಮಾನ್ಯರಿಗೆ ನಿಲುಕದ ಗಗನ ಕುಸುಮವಾಗಿದ್ದ ದೇವರ ಅಸ್ತಿತ್ವವನ್ನು ೧೨ ನೇ ಶತಮಾನದ ಬಸವಾದಿ ಶರಣರು ತಮ್ಮ ನಡೆ, ನುಡಿ, ವಚನಗಳ ಮೂಲಕ ಸರಳಗೊಳಿಸಿದರು ಎಂದು ಮಹಾಮನೆ ಬಳಗದ ಅಧ್ಯಕ್ಷರಾದ ಎಸ್.ಎ.ಬೇವಿನಗಿಡದ ಹೇಳಿದರು.ಪಟ್ಟಣದ ವಿಶ್ವಕರ್ಮ ಬಡಾವಣೆಯಲ್ಲಿರುವ ಮಹಾಬಲೇಶ್ವರ ಗಡೇದ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ೧೦೫೭ ನೇ “ಮಹಾಮನೆ” ಕಾರ್ಯಕ್ರಮದಲ್ಲಿ ಶರಣ ಗುರುಪುರದ ಮಲ್ಲಯ್ಯನವರ ವಚನ ವಿಶ್ಲೇಷಿಸಿ ಅವರು ಮಾತನಾಡಿದರು.ಕನ್ನಡದ ನೆಲದಲ್ಲಿ ಅಚ್ಚಳಿಯದ ತಿರುವು ಪಡೆದುಕೊಂಡ ಯುಗ. ಸಾಮಾಜಿಕ, ಧಾರ್ಮಿಕ ಚಿಂತನೆಗಳಿಗೆ ತಿರುವು ಕೊಟ್ಟ ಕಾಲ ೧೨ನೇ ಶತಮಾನ. ಶ್ರೀಮಂತರ ಸ್ವತ್ತಾಗಿದ್ದ ದೇವರು, ಆಚಾರ, ವಿಚಾರ, ಸಂಪ್ರದಾಯ, ಆಧ್ಯಾತ್ಮಿಕ ನೆಲೆಯನ್ನು ಶರಣರು ಬದಲಿಸಿದರು. ಏನೊಂದೂ ಓದದ ಜನ ಸಾಮಾನ್ಯರು, ಮಹಿಳೆಯರು ಶ್ರೇಷ್ಠ ಮಟ್ಟದ ವಚನಗಳನ್ನು ಬರೆದರು. ಬರೆದಂತೆಯೇ ತಮ್ಮ ಜೀವನ ರೂಪಿಸಿಕೊಂಡರು ಎಂದು ಹೇಳಿದರು.ಈ ವೆಳೆ ಶರಣಬಸಪ್ಪ ಗಡೇದ ಮಾತನಾಡಿದರು. “ಕಾಯಕ ಯೋಗಿ” ಪ್ರಶಸ್ತಿ ಪಡೆದ ಮಹಾಬಲೇಶ್ವರ ಗಡೇದ ಅವರನ್ನು ಸನ್ಮಾನಿಸಿ…

Read More