Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಆದೇಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ಬಾರಿಯ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ ಮತ್ತು ಪ್ರತಿಷ್ಠಾಪನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಮೂರ್ತಿಗಳನ್ನು ನದಿ, ಕಾಲುವೆ, ಬಾವಿ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತಗೊಂಡು ಸಾಂಕ್ರಾಮಿಕ ರೋಗಗಳು ಹರಡುವ ಜತೆಗೆ ಪರಿಸರಕ್ಕೆ ತೀವ್ರ ಹಾನಿಯಾಗುತ್ತದೆ.ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ರನ್ವಯ ಈ ನಿಷೇಧ ಹೇರಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವೇಳೆ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ. ಪರಿಸರ ಸ್ನೇಹಿ ಗಣಪತಿ ತಯಾರಕರು ಮತ್ತು ವ್ಯಾಪಾರಸ್ಥರು ಕೇವಲ ಜೇಡಿಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಮಾತ್ರ ತಯಾರಿಸಿ, ಮಾರಾಟ ಮಾಡುವಂತೆ ತಿಳಿಸಿದ್ದಾರೆ.ಸಾರ್ವಜನಿಕರು ರಾಸಾಯನಿಕ ಬಣ್ಣದ ಮೂರ್ತಿಗಳನ್ನು ಖರೀದಿಸದೇ, ಪರಿಸರ ಸ್ನೇಹಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿಜಯಪುರ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಹಾಗೂ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಸೆಪ್ಟೆಂಬರ್ ೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಎಸ್.ಬಿ. ಕೆಂಬೋಗಿ ಹೇಳಿದರು.ಅವರು ಶುಕ್ರವಾರ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.ಕರವೇ ಮುಖಂಡ ಶ್ರೀಶೈಲ ಮುಳಜಿ, ಭೀಮರಾಯ ಪೂಜಾರಿ, ಅದೃಷ್ಯಪ್ಪ ವಾಲಿ, ತಮ್ಮಾರಾಯ ಆಸಂಗಿ ಮಾತನಾಡಿ, ಈ ಪ್ರತಿಭಟನೆಯಲ್ಲಿ ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಹಕ್ಕುಗಳಿಗಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ಗಿರೀಶ್ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಜಿಲ್ಲಾ ಪ್ರಜಾಸೇವೆ ಅಭಿಯಾನ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಸಭೆಯ ಬಳಿಕ ಅವರು ವಿಜಯಪುರದಿಂದ ಬೆಂಗಳೂರಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀಕೃಷ್ಣ ಪರಮಾತ್ಮನು ಜಗತ್ತಿಗೆ ನೀಡಿರುವ ಅತ್ಯಂತ ದೊಡ್ಡ ಕೊಡುಗೆಗಳಲ್ಲಿ ಭಗವದ್ಗೀತೆ ಪ್ರಮುಖವಾದುದು. ಭಗವದ್ಗೀತೆಯಲ್ಲಿನ ತತ್ವ, ಜ್ಞಾನ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿ, ಸಹಬಾಳ್ವೆ, ಮಾನವೀಯತೆ ಹಾಗೂ ಸೌಹಾರ್ದತೆ ನಮ್ಮ ಜೀವನದ ಪ್ರಮುಖ ಮೌಲ್ಯಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಕಷ್ಟದ ಸಂದರ್ಭಗಳಲ್ಲಿ ಧೈರ್ಯ ಕಳೆದುಕೊಳ್ಳದೆ, ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವುದು ಹಾಗೂ ಸತ್ಯದ ಮಾರ್ಗದಲ್ಲಿ ಸಾಗುವುದು ಶ್ರೀಕೃಷ್ಣನ ಜೀವನದಿಂದ ಕಲಿಯಬಹುದಾದ ಪ್ರಮುಖ ಪಾಠಗಳಾಗಿವೆ ಎಂದರು.ಡಾ. ಮಾಧವ ಗುಡಿ ಉಪನ್ಯಾಸ ನೀಡಿ, ಶ್ರೀಕೃಷ್ಣನ ಜನನ, ಬಾಲ್ಯ ಜೀವನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದವತಿಯಿಂದ ‘ಸಾಧಕರೊಂದಿಗೆ ಸಂವಾದ’ ವಿಶೇಷ ಕಾರ್ಯಕ್ರಮವನ್ನು ಸೆ.೫ರಂದು ಆಯೋಜಿಸಲಾಗಿದೆ. ಕಾರ್ಯಕ್ರಮವು ಶನಿವಾರ ಸಂಜೆ ೪ ಗಂಟೆಗೆ ವಿಜಯಪುರದ ಬಿ.ಎಲ್.ಡಿ.ಇ. ಕ್ಯಾಂಪಸ್ನಲ್ಲಿರುವ ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆಯಲಿದೆ. ಇತಿಹಾಸ ತಜ್ಞರು ಹಾಗೂ ಹಿರಿಯ ಸಂಶೋಧಕರಾದ ಡಾ. ಕೃಷ್ಣ ಕೊಲ್ಲಾರಕುಲಕರ್ಣಿ ಅವರು ಕಾರ್ಯಕ್ರಮದಲ್ಲಿ ಮುಖ್ಯ ಸಾಧಕರಾಗಿ ಭಾಗವಹಿಸಿ, ತಮ್ಮ ಸಾಹಿತ್ಯಿಕ ಹಾಗೂ ಸಂಶೋಧನಾ ಕ್ಷೇತ್ರದ ಅನುಭವ, ಸಾಧನೆ ಮತ್ತು ಕಾರ್ಯಚಟುವಟಿಕೆಗಳ ಕುರಿತು ಸಂವಾದ ನಡೆಸಲಿದ್ದಾರೆ.ಸಾಹಿತ್ಯ, ಇತಿಹಾಸ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ಸಾಧಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅನುಭವ ಹಾಗೂ ವಿಚಾರಗಳನ್ನು ಅರಿಯಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ. ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಹಾಗೂ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ…
ಲೇಖನ- ಲಕ್ಷ್ಮೀಪುತ್ರ ಕಿರನಳ್ಳಿ.ಶಿಕ್ಷಕ ಸಾಹಿತಿಆಲಮೇಲವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ “ಸಮರ್ಥ ಶಿಕ್ಷಕ – ರಾಷ್ಟ್ರ ಶಿಕ್ಷಕ” ಎಂಬ ಉಕ್ತಿ ಶಿಕ್ಷಕರ ಮಹತ್ವವನ್ನು ಅತ್ಯಂತ ಅರ್ಥಪೂರ್ಣವಾಗಿ ಸಾರುತ್ತದೆ. ಒಂದು ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ. ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕದ ಜ್ಞಾನವನ್ನು ನೀಡುವುದಷ್ಟೇ ಶಿಕ್ಷಕರ ಕೆಲಸವಲ್ಲ; ಅವರಲ್ಲಿ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳು, ಶಿಸ್ತು, ದೇಶಪ್ರೇಮ, ಕರ್ತವ್ಯಪ್ರಜ್ಞೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮಹತ್ತರ ಜವಾಬ್ದಾರಿಯೂ ಶಿಕ್ಷಕರ ಮೇಲಿದೆ. ಆದ್ದರಿಂದಲೇ “ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ತೋರಿಸುವ ವ್ಯಕ್ತಿ ಶಿಕ್ಷಕ” ಎಂದು ಹೇಳಬಹುದು.ಪ್ರತಿಯೊಬ್ಬರ ಜೀವನದಲ್ಲಿಯೂ ತಂದೆ-ತಾಯಿಯ ನಂತರ ಅತ್ಯಂತ ಗೌರವದ ಸ್ಥಾನವನ್ನು ಪಡೆಯುವವರು ಶಿಕ್ಷಕರು. ಅಜ್ಞಾನವೆಂಬ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ವಿದ್ಯಾರ್ಥಿಯನ್ನು ಕರೆದೊಯ್ಯುವವರು ಗುರುಗಳು. ಜೀವನದಲ್ಲಿ ಯಾವ ದಾರಿಯನ್ನು ಆರಿಸಿಕೊಳ್ಳಬೇಕು, ಸವಾಲುಗಳನ್ನು ಹೇಗೆ ಎದುರಿಸಬೇಕು, ಯಶಸ್ಸಿನತ್ತ ಹೇಗೆ ಸಾಗಬೇಕು ಎಂಬುದನ್ನು ಮಾರ್ಗದರ್ಶನ ಮಾಡುವವರು ಶಿಕ್ಷಕರು. ಹೀಗಾಗಿ ಶಿಕ್ಷಕರನ್ನು ಕೇವಲ ಬೋಧಕರಾಗಿ ನೋಡುವುದಕ್ಕಿಂತ ಮಾರ್ಗದರ್ಶಕ, ಪ್ರೇರಕ, ಆದರ್ಶ ವ್ಯಕ್ತಿ ಮತ್ತು ರಾಷ್ಟ್ರದ ಭವಿಷ್ಯ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್.ಮುಂಡರಗಿಗದಗ್ ಉದಯರಶ್ಮಿ ದಿನಪತ್ರಿಕೆ ಇತ್ತೀಚಿಗಿನ ದಿನಗಳಲ್ಲಿ ಪಾಲಕರಲ್ಲಿ ಒಂದು ಹೊಸ ರೀತಿಯ ಭ್ರಾಂತಿ ಆರಂಭವಾಗಿದೆ. ತಮ್ಮ ಮಕ್ಕಳು ಯಾವುದೇ ವಿಷಯದಲ್ಲಿ ಸೋಲಬಾರದು ಅವರು ಬಯಸುವ ಪ್ರತಿಯೊಂದು ವಸ್ತು ಅವರಿಗೆ ದೊರೆಯಲೇಬೇಕು , ಇನ್ನೂ ಮುಂದೆ ಹೋಗಿ ಈ ಹಿಂದೆ ನಮಗೆ ದೊರೆಯದ್ದು ನಮ್ಮ ಮಕ್ಕಳಿಗೆ ದೊರೆಯಲಿ ಎಂಬ ಆಶಯ. ಆದರೆ ಇದು ಶುದ್ಧ ತಪ್ಪು.ಬೀಳುವವನು ಏಳುತ್ತಾನೆ. ಸೋತವನು ಗೆಲ್ಲುವ ಕುರಿತು ಯೋಚಿಸುತ್ತಾನೆ.. ಸೋಲೇ ಗೆಲುವಿನ ಮೆಟ್ಟಿಲು ಪ್ರತಿಯೊಂದು ಸೋಲು ಕೂಡ ಮನುಷ್ಯನಿಗೆ ಒಂದು ಹೊಸ ಪಾಠವನ್ನು ಕಲಿಸುತ್ತದೆ.ಮಕ್ಕಳ ಸೋಲು ತಮ್ಮ ಅಹಮಿಕೆಗೆ ನೀಡುವ ಪೆಟ್ಟು ಎಂಬಂತೆ ಭಾವಿಸುವ ಪಾಲಕರು ನಮ್ಮಲ್ಲಿ ಇದ್ದಾರೆ. ಆದರೆ ನಿಜವಾಗಿಯೂ ಸೋಲನ್ನು ಒಪ್ಪಿಕೊಳ್ಳುವ ಮಗು ಆ ಸೋಲಿನಿಂದ ಉಂಟಾಗುವ ಧಕ್ಕೆಯನ್ನು ತಾಳಿಕೊಳ್ಳುವ ಸೈರಣ ಶಕ್ತಿಯನ್ನು ಪಡೆಯುತ್ತದೆ. ಸೋಲು ಗೆಲುವುಗಳು ಆಟದ ಅವಿಭಾಜ್ಯ ಅಂಗ ಇಂದಿನ ಸೋಲು ನಾಳೆಯ ಗೆಲುವಿಗೆ ಕಾರಣವಾಗುತ್ತದೆ ಎಂಬುದನ್ನು ನಾವು ಮಕ್ಕಳಿಗೆ ಕಲಿಸಬೇಕು. ಚಿಕ್ಕಂದಿನಿಂದಲೂ ಮಕ್ಕಳಿಗೆ ಬಿದ್ದು ಗಿದ್ದೀಯಾ,…
ಲೇಖನ- ಕಬೂಲ್ ಆರ್. ಕೊಕಟನೂರ.ಶಿಕ್ಷಕರುವಿಜಯಪುರ ಉದಯರಶ್ಮಿ ದಿನಪತ್ರಿಕೆ ಶಿಕ್ಷಕ ಈ ರಾಷ್ಟ್ರ ರಕ್ಷಕ, ಸಮಾಜ ಸುಧಾರಕನಾಗಿದ್ದು, ಇಡೀ ಸಮಾಜ ಅವನ ಆಶಯದಲ್ಲಿಯೇ ಬೆಳೆಯುತ್ತದೆ. ಹುಮಾಯೂನ್ ಕಬೀರದಾಸ ಹೇಳುವಂತೆ ಅಕ್ಷರಶಃ ಶಿಕ್ಷಕ ರಾಷ್ಟ್ರದ ಅದೃಷ್ಠದ ನಿರ್ಣಾಯಕ. ಒಂದು ದೇಶದ ಅಳಿವು-ಉಳಿವು ಪರೋಕ್ಷವಾಗಿ ಅಲ್ಲಿಯ ಶಿಕ್ಷಕರನ್ನು ಅವಲಂಬಿಸಿದೆ. ವೇದ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವಿದೆ. ಆದ್ದರಿಂದಲೆ ಆಚಾರ್ಯ ದೇವೋಭವ’ ಎಂಬ ಉಕ್ತಿ ನಮ್ಮ ಮುಂದಿದೆ. ಇಂದು ನಾವೆಲ್ಲ ಜನ್ಮದಿನ ಆಚರಿಸುತ್ತಿರುವ ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹೇಳುವಂತೆ ಶಿಕ್ಷಕರೆಂದರೆ ಜೀವನವನ್ನು ಪ್ರಕಾಶಿಸುವ ಪ್ರೇರಕ ಶಕ್ತಿ. ಗುರುವಿನ ಕೃಪೆ ಕರುಣೆ, ಪ್ರೇರಣೆ ಇಲ್ಲದೆ ಯಾವುದನ್ನು ಸಾಧಿಸಲಾಗದು.‘ಹರ ಮುನಿದರೆ ಗುರು ಕಾಯುವನು’ಶಿಕ್ಷಕನಿಗೆ ಗುರು, ಅಧ್ಯಾಪಕ, ಆಚಾರ್ಯ ಎಂಬ ನಾಮಗಳುಂಟು. ಶಿಕ್ಷಕನಾದವನು ಸದಾ ಸಹನಾ ಮೂರ್ತಿಯಾಗಿದ್ದು, ಮಗುವಿನ ಅಂತರಂಗವನ್ನರಿತು ಬೋಧನೆಗೈದಾಗ ಮಾತ್ರ ನಿಜವಾದ ಮುಖ ನೋಡಲು ಸಾಧ್ಯ. ಭವಿಷ್ಯತ್ತಿನ ನಿರ್ಮಾಣವಾಗುವುದು ನಾಲ್ಕು ಗೋಡೆಗಳ ಮಧ್ಯೆ ಎಂಬುದು ಕೋಠಾರಿ ಆಯೋಗದ ಮಾತು ಅಕ್ಷರಶಃ ಸತ್ಯ. ಮಕ್ಕಳೆಂದರೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಬಾಲಕರಿಗಾಗಿ ಹೊಯ್ಸಳ, ಬಾಲಕಿಯರಿಗಾಗಿ ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಹ ಮಕ್ಕಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನಿಸಿದೆ.ಅಸಾಧಾರಣ ಸಾಧನೆಗೈದ ೫ ರಿಂದ ೧೮ ವರ್ಷದೊಳಗಿನ ಜಿಲ್ಲೆಯ ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗುವುದು. ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ. ಈ ನಾಲ್ಕು ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ ತಲಾ ಇಬ್ಬರು ಮಕ್ಕಳಂತೆ ಜಿಲ್ಲೆಯಲ್ಲಿ ಒಟ್ಟು ೮ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ.ಪ್ರಶಸ್ತಿ ವಿಜೇತ ಪ್ರತಿಯೊಬ್ಬ ಮಗುವಿಗೆ ತಲಾ ೧೦ ಸಾವಿರ ರೂ. ಗಳ ನಗದು ಬಹುಮಾನ ನೀಡಿ ಗೌರವಿಸಲಾಗುವುದು.ಅರ್ಹ ಮಕ್ಕಳು ಅರ್ಹ ಮಕ್ಕಳು ನಗರದ ಗಾಂಧಿ ಭವನದ ಎದುರಿಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆ. ೩೦ ಕೊನೆಯ ದಿನವಾಗಿದೆ.ಅರ್ಜಿಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ಭರ್ತಿ ಮಾಡಿ ಸಲ್ಲಿಸಬೇಕಾಗಿದ್ದು, ನಿಗದಿತ ದಿನಾಂಕದ ನಂತರ…
