Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಭಕ್ತರ ಸೌಹಾರ್ದಯುತ ಒಮ್ಮತದೊಂದಿಗೆ ನಡೆದಿದೆ. ಇದರಲ್ಲಿ ಯಾವುದೇ ಗೊಂದಲದ ಮಾತಿಲ್ಲ. ಆದರೆ ಕೆಲವರು ವೈಯಕ್ತಿಕ ದುರುದ್ದೇಶದಿಂದ ಸುಳ್ಳು ಸುದ್ದಿ ಹಾಗೂ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಭಕ್ತರು ಇಂತಹ ಯಾವುದೇ ಊಹಾಪೋಹಗಳಿಗೆ ಮನ್ನಣೆ ನೀಡಬಾರದು,” ಎಂದು ನ್ಯಾಯವಾದಿ ಹಾಗೂ ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮನವಿ ಮಾಡಿದರು.ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರಾವಣ ಮಾಸದಲ್ಲಿ ನೂತನ ಉತ್ತರಾಧಿಕಾರಿಗಳ ಪುರ ಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮಠದ ಸಮಿತಿ ನಿರ್ಧರಿಸಿದೆ. ಶೀಘ್ರದಲ್ಲೇ ಭಕ್ತರ ಸಭೆ ಕರೆದು ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗುವುದು. ಈ ಧಾರ್ಮಿಕ ಮಹೋತ್ಸವದಲ್ಲಿ ಉತ್ತರ ಕರ್ನಾಟಕ ಭಾಗದ ಸಹಸ್ರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮುಳಜಿ ಮಾಹಿತಿ ನೀಡಿದರು.ಒಮ್ಮತದ ಆಯ್ಕೆಗೆ ಭಕ್ತರ ಹರ್ಷ: ತಾಂಬಾ ಗ್ರಾಮದ ಹಿರಿಯ ಮುಖಂಡರಾದ ಜಿ. ವಾಯ್. ಗೊರನಾಳ ಮಾತನಾಡಿ, “ಬಂಥನಾಳ ಮಠವು ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿದೆ. ಮಠದ ಗರಿಮೆಗೆ…

Read More

೨,೫೯,೪೧೪ ಮತದಾರರಿಗೆ ಗಣತಿ ನಮೂನೆ ವಿತರಣೆ | ಮತದಾರರ ನೋಂದಣಿ ಅಧಿಕಾರಿ ವಿಜಯ ಮೆಕ್ಕಳಕಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತಕ್ಷೇತ್ರದಲ್ಲಿ ೨,೯೦,೪೭೯ ಮತದಾರರಿದ್ದು, ಈ ಪೈಕಿ ೨,೫೯,೪೧೪ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಮತದಾರರ ನೋಂದಣಿ ಅಧಿಕಾರಿ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ಶೇ.೭೭.೬೮ ರಷ್ಟು ಮತದಾರರು ಮ್ಯಾಪ್ ಪ್ರಕ್ರಿಯೆಗೆ ಒಳಪಟ್ಟಿದ್ದಾರೆ. ಮನೆ ಮನೆ ಭೇಟಿ ಹಾಗೂ ಆನ್ ಲೈನ್ ಮೂಲಕ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಡಿಜಿಟಲೀಕರಣ ಪ್ರಕ್ರಿಯೆಯು ಚುರುಕಾಗಿ ನಡೆದಿದೆ ಎಂದವರು ತಿಳಿಸಿದ್ದಾರೆ.ಒಟ್ಟು ೧,೦೦,೮೭೬ ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಆನ್‌ಲೈನ್ ನಲ್ಲಿ ೨೧೬೭ ಮತದಾರರು ಸಲ್ಲಿಸಿದ್ದಾರೆ. ೧೩೭೫ ಮತದಾರರು ಮರಣ ಹೊಂದಿದ್ದನ್ನು ದೃಢಪಡಿಸಲಾಗಿದೆ. ಹೊಸಾಗಿ ೧೨೮೮ ಮತದಾರರು ನೋಂದಾಯಿಸಿಕೊಂಡಿದ್ದಾರೆ. ೭೬೬ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದವರು ತಿಳಿಸಿದ್ದಾರೆ.ಎಸ್ ಐಆರ್ ಕಾರ್ಯಕ್ಕೆ ಮತದಾರರು ತಮ್ಮ ವಿವರಗಳನ್ನು ಸರಿಯಾಗಿ ಪರಿಶೀಲಿಸಿಕೊಂಡು, ಈ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹಿಂದೂ ಧರ್ಮದಲ್ಲಿ ಪ್ರತಿಯೊಂದು ಹಬ್ಬಗಳಿಗೆ ತನ್ನದೇ ಆದ ವೈಶಿಷ್ಟ್ಯತೆ ಮತ್ತು ಸಾಂಪ್ರದಾಯಿಕ ಹಿನ್ನೆಲೆ ಇದೆ. ಆದರೆ ಸಧ್ಯದ ದಿನಮಾನಗಳಲ್ಲಿ ಹಿಂದೂ ಹಬ್ಬಗಳ ಬಗ್ಗೆ ಕಂದಾಚಾರ, ಮೂಢನಂಬಿಕೆ ಎಂದು ಅಪಪ್ರಚಾರವಾಗುತ್ತಿರುವುದರ ಪರಿಣಾಮ ಹಿಂದೂ ಹಬ್ಬಗಳು ನಶಿಸಿ ಹೋಗುತ್ತಿವೆ. ಇಂತಹ ಮಾತುಗಳಿಗೆ ಕಿವಿಗೊಡದೇ ಪ್ರತಿಯೊಬ್ಬ ಹಿಂದೂಗಳು ಪ್ರತಿಯೊಂದು ಹಬ್ಬಗಳಲ್ಲಿ ಭಾಗಿಯಾಗಿ ಹಬ್ಬಗಳ ಹಿಂದೆ ವಿಜ್ಞಾನ ಇದೆ ಎಂದು ಸಮಾಜಕ್ಕೆ ಸಾರಿ ಹೇಳಬೇಕು ಎಂದು ಹೋರಾಟಗಾರ ಮತ್ತು ಹಿಂದು ಕಾರ್ಯಕರ್ತ ಬಸಯ್ಯ ನಂದಿಕೇಶ್ವರಮಠ ಕರೆ ನೀಡಿದರು.ಪಟ್ಟಣದ ಮಾರುತಿ ನಗರದಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಣ್ಣೆತ್ತು ಪ್ರತಿಷ್ಠಾಪಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ನಮ್ಮ ದೇಶ ಉಳಿಯಲು ಕಾರಣನೇ ಹಿಂದೂ ಹಬ್ಬಗಳು. ಕಾಲ, ಋತು ಮತ್ತು ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಹಿಂದೂ ಹಬ್ಬಗಳನ್ನು ಜೋಡಿಸಲಾಗಿದೆ. ಪ್ರತಿಯೊಂದು ಹಬ್ಬಗಳ ಆಚರಣೆಯ ಹಿಂದೆ ಸಾಮಾಜಿಕ ಹಾಗೂ ವೈಜ್ಞಾನಿಕ ಮಹತ್ವ ಅಡಗಿದೆ. ಹಬ್ಬಗಳು ಕುಟುಂಬ ಹಾಗೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತವೆ. ಹಿಂದೂ ಸಂಪ್ರದಾಯ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.​ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ವಿಜಯಪುರದ ಸ್ನಾತಕೋತ್ತರ ಕೇಂದ್ರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸ್ಗಳ ವ್ಯಾಸಂಗಕ್ಕಾಗಿ ಯು.ಯು.ಸಿ.ಎಂ.ಎಸ್ (UUಅಒS) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ.೨೦ ರವರೆಗೆ ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆಯ ಅವಧಿಯನ್ನುದಿನಾಂಕ:೨೧-೦೭-೨೦೨೬ ರಿಂದ ೨೬-೦೭-೨೦೨೬ರವರೆಗೆ ವಿಸ್ತರಿಸಲಾಗಿದೆ.೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯು ದಿನಾಂಕ : ೦೧-೦೮-೨೦೨೬ ರಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದಲ್ಲಿ ಜರುಗಲಿದ್ದು, ಸಂಪೂರ್ಣ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣವಾದ:ತಿತಿತಿ.ಡಿಛಿub.ಚಿಛಿ.iಟಿ ಪಡೆಯಬಹುದಾಗಿದೆ.​ಅದರಂತೆ, ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿನ ಕೋರ್ಸ್ಗಳ ಅಧ್ಯಯನಕ್ಕೆ ಅರ್ಜಿ ಸಲ್ಲಿಸಿದ…

Read More

ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಸಮಾಜದಲ್ಲಿ ಉತ್ತಮ ಜೀವನ ನಡೆಸಬೇಕಾದರೆ, ನ್ಯಾಯತವಾಗಿ ಬದುಕಬೇಕಾದರೆ, ಮದ್ಯಪಾನ ತ್ಯಜಿಸಬೇಕು. ಆಗ ನಾವು ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಮದ್ಯ ಮಾರುವವನು ಶ್ರೀಮಂತರಾದರೆ, ಮದ್ಯ ಕುಡಿಯುವವರು ಬಡವರಾಗಿ ಬೀದಿಪಾಲಾಗುತ್ತಾರೆ. ಹೀಗಾಗಿ, ಮದ್ಯಪಾನ ನಿಲ್ಲಿಸಬೇಕೆಂದು ಸಬ್ ಇನ್ಸ್ಪೆಕ್ಟರ್ ಚಿಕ್ಕನಾಯಕ ಹೇಳಿದರು.ಪಟ್ಟಣದ ಬಿರ್ಸಾ ಮುಂಡಾ ಭವನದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ಮದ್ಯವರ್ಧನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.ಮದ್ಯ ಸೇವನೆಯಿಂದ ಜೀವನ ನರಕವಾಗುತ್ತದೆ. ಸಮಾಜದಲ್ಲಿ ಗೌರವ ಯುತವಾಗಿ ಬದುಕಲು ಕಷ್ಟವಾಗುತ್ತದೆ. ಆರ್ಥಿಕವಾಗಿ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿನ್ನಡೆ ಉಂಟಾಗುತ್ತದೆ. ಹೀಗಾಗಿ ನೆಮ್ಮದಿ ಜೀವನಕೆ ಕುಡಿತ ಚಟದಿಂದ ಸಂಪೂರ್ಣವಾಗಿ ದೂರವಿರಬೇಕು ಎಂದು ಹೇಳಿದರು.ಅಬಕಾರಿ ಇಲಾಖೆಯ ಉಪನಿರೀಕ್ಷಕ ರವಿ ಮಾತನಾಡಿ, ಸರ್ಕಾರವೇ ಮದ್ಯ ಮಾರಾಟ ಮಾಡಲು ಲೈಸೆನ್ಸ್ ಕೊಡುತ್ತದೆ ಅಂತೇಳಿ ಕುಡಿತವನ್ನೇ ಅಭ್ಯಾಸವನ್ನಾಗಿ ಮಾಡಿಕೊಳ್ಳಬಾರದು. ಮಿತವಾಗಿ ಮದ್ಯ ಸೇವನೆ ಮಾಡಿದಾಗ ಯಾವುದೇ ಸಮಸ್ಯೆ ಬರುವುದಿಲ್ಲ, ಅದು ಅತಿಯಾದಾಗ ಮಾತ್ರ ಸಮಸ್ಯೆಗಳು ಉಂಟಾಗುತ್ತೆ. ಆರೋಗ್ಯ ಹದಗೆಡುತ್ತೆ. ಸಮಾಜದಲ್ಲಿ ನಾನಾ ತೊಂದರೆಗಳು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮಗಳ ಜನ್ಮ ದಿನಕ್ಕೆ ಅತಿಯಾದ ದುಂದು ವೆಚ್ಚ ಮಾಡದೇ, ಜನ್ಮ ದಿನಕ್ಕೆ ಖರ್ಚು ಮಾಡುವ ಹಣವನ್ನೆ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟಬುಕ್ ಹಾಗೂ ಪೆನ್ ವಿತರಣೆ ಮಾಡಿದ್ದಾರೆ.ತಾಲ್ಲೂಕಿನ ಘೋಣಸಗಿ ಎಲ್.ಟಿ.‌ 01 ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಿದ್ದಪ್ಪಾ ಬಾರಿಗಿಡದ ಹಾಗೂ ಪತ್ನಿ ಪವಿತ್ರಾ ಆಗಮಿಸಿ ಅದೇ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ಅವರ ಮಗಳ ಸಾನ್ವಿಯ ಜನ್ಮ ದಿನದಂದು ಶಾಲೆಯ ಎಲ್ಲ ಮಕ್ಕಳಿಗೆ ನೋಟಬುಕ್ ಹಾಗೂ ಪೆನ್ ವಿತರಿಸಿದ್ದಾರೆ.ಮಗಳ ಜನ್ಮ ದಿನಕ್ಕೆ ಮಾಡುವ ಖರ್ಚು ವೆಚ್ಚದಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳ ಕಲಿಕೆಗೆ ಅನೂಕೂಲ ಆಗಲೆಂದು ನೋಟಬುಕ್ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.ಎಲ್ಲ ಮಕ್ಕಳಿಗೆ ಸಿಹಿ ನೀಡಿ ದಂಪತಿಗಳು ಖುಷಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರುಗಳು, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಇದ್ದರು.

Read More

ಪ್ರಥಮ ಬಾರಿಗೆ ವಿದ್ಯುತ್ ಉತ್ಪಾದನೆಯೂ ಶುರು | ರಾತ್ರಿ ನೀರಿನ ಹೊರಹರಿವು ಹೆಚ್ಚಳ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ನಾರಾಯಣಪುರ ಜಲಾಶಯಕ್ಕೆ ಕುಡಿಯುವ ನೀರಿಗಾಗಿ ಕಾಲುವೆಗೆ ನೀರು ಹರಿಸುವ ಉದ್ದೇಶದಿಂದ ಆಲಮಟ್ಟಿ ಜಲಾಶಯದಿಂದ ಶನಿವಾರ ಮೊದಲ ಬಾರಿಗೆ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ೩,೫೦೦ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ. ಇದರೊಂದಿಗೆ ಪ್ರಸಕ್ತ ಹಂಗಾಮಿನಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆಯೂ ಆರಂಭವಾಗಿದೆ. ಹಂತ ಹಂತವಾಗಿ ನೀರನ್ನು ಬಿಡಬೇಕಾಗಿರುವುದರಿಂದ ರಾತ್ರಿ ೮ ಗಂಟೆಯ ನಂತರ ಹೊರಹರಿವನ್ನು ೮,೦೦೦ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಆಲಮಟ್ಟಿ ಜಲಾಶಯದ ಅಧಿಕಾರಿಗಳು ತಿಳಿಸಿದರು.ಜಲಾಶಯದ ಮಟ್ಟಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ ಸಂಜೆ ೫೧೭.೪೨ ಮೀಟರ್ ಎತ್ತರದಲ್ಲಿ ೮೯.೮ ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಒಳಹರಿವಿನ ಪ್ರಮಾಣ ೬,೦೯೧ ಕ್ಯುಸೆಕ್ ಇತ್ತು. ವಿದ್ಯುತ್ ಉತ್ಪಾದನೆ ಆರಂಭಆಲಮಟ್ಟಿ ಜಲಾಶಯದ ಬಲಭಾಗದಲ್ಲಿರುವ ಜಲ ವಿದ್ಯುದಾಗಾರದ…

Read More

೨೧ ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ನಾಡಿನ ಪ್ರತಿ ವ್ಯಕ್ತಿಗೂ ಕನ್ನಡ ನಾಡು-ನುಡಿ, ನೆಲ-ಜಲದ ಅಭಿಮಾನ ಇರಬೇಕು. ಅಂದಾಗ ಮಾತ್ರ ಕನ್ನಡ ನಾಡಿನ ಹಿರಿಮೆ-ಗರಿಮೆಯನ್ನು ದೇಶಾದ್ಯಂತ ಪಸರಿಸಲು ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ೨೧ನೆಯ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹಿರಿಯರು ಹಾಗೂ ಮಕ್ಕಳ ಸಾಹಿತಿಗಳು ಸಾಹಿತ್ಯ ಚಟುವಟಿಕೆಗಳಲ್ಲಿ ಸಾಕಷ್ಟು ಕೃಷಿ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ರಾಜ್ಯೋತ್ಸವ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಹ.ಮ ಪೂಜಾರ ಗುರುಗಳನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಸಿಂದಗಿ ಜನತೆ ಹಾಗೂ ಸಾಹಿತ್ಯಾಸಕ್ತರಿಗೆ ಅತ್ಯಂತ ಹರುಷ ತಂದಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಜನ ಆಗಮಿಸುವ ಕಾರಣ ಊಟೋಪಹಾರ, ಆಸನಗಳ ವ್ಯವಸ್ಥೆ ಹಾಗೂ ಅತಿಥಿಸತ್ಕಾರಗಳನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು. ಅಲ್ಲದೇ ೧೪ವರ್ಷಗಳ ನಂತರ ಸಿಂದಗಿ ನಗರಕ್ಕೆ ಸಾಹಿತ್ಯ ಸಮ್ಮೇಳನ ನಡೆಸುವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಲ್ಲಿಯ ನಗರಸಭೆಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ನೂತನ ಶಾಖಾ ಪದಾಧಿಕಾರಿಗಳ ಆಯ್ಕೆ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯಲ್ಲಿ ಸರ್ವಾನುಮತದಿಂದ ಶಾಖಾ ಅಧ್ಯಕ್ಷರಾಗಿ ಕಲ್ಲಪ್ಪ ಚೌರ, ಉಪಾಧ್ಯಕ್ಷರಾಗಿ ಈರಬಸು ಮಾದರ, ಕಾರ್ಯದರ್ಶಿಯಾಗಿ ಜಗದೀಶ ದೊಡ್ಡಮನಿ, ಖಜಾಂಚಿಯಾಗಿ ಅಲ್ತಾಫ್ ಮುಜಾವರ್, ಸಂಘಟನಾ ಕಾರ್ಯದರ್ಶಿಯಾಗಿ ಪರಶುರಾಮ ಜವಳಗಿ, ಸಹ ಸಂಘಟನಾ ಕಾರ್ಯದರ್ಶಿಯಾಗಿ ಅನಿಲ್ ಚೌರ ಹಾಗೂ ಗೌರವಾಧ್ಯಕ್ಷರಾಗಿ ನಬಿರಸೂಲ್ ಉಸ್ತಾದ್ ಅವರನ್ನು ಆಯ್ಕೆ ಮಾಡಲಾಯಿತು.ಆಯ್ಕೆ ಸಭೆಯಲ್ಲಿ ನಗರಸಭೆ ಪೌರಾಯುಕ್ತ ರವಿ ಸಿರಗುಪ್ಪ, ಕಚೇರಿ ಸಿಬ್ಬಂದಿ ಸಿದ್ದು ಅಂಗಡಿ, ಪರಶುರಾಮ, ಅನಿಲ ಸೇರದಂತೆ ನೀರು ಸರಬರಾಜು ವಿಭಾಗದ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಭೀಮಾಶಂಕರ ಕಾಂಬಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳಲ್ಲಿ ಶಾಲಾ ಸಂಸತ್ತಿನ ಕಲ್ಪನೆಯನ್ನು ಮೂಡಿಸುವುದರಿಂದ ಮಕ್ಕಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವಲ್ಲಿ ಸಹಾಯಕವಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ನಗರದ ನಾಗೂರ ಬಡಾವಣೆಯ ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಮಕ್ಕಳಲ್ಲಿ ಮತದಾನದ ಜಾಗೃತಿ ಭಾಗವಹಿಸಿ ಮಾತನಾಡಿದ ಅವರು, ಮತದಾನದ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳಲ್ಲಿ ಮತದಾನದ ವಿವಿಧ ಹಂತಗಳನ್ನು ಬಾಲ್ಯದಲ್ಲಿಯೇ ಪರಿಚಯಿಸುವುದರಿಂದ ಮಕ್ಕಳಲ್ಲಿ ಕುತೂಹಲ ಮತ್ತು ಆಸಕ್ತಿಯನ್ನು ಮೂಡಿಸಿದಂತಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ, ಮಕ್ಕಳೊಂದಿಗೆ ಶಿಕ್ಷಕರು ಒಟ್ಟು ಗೂಡಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಚುನಾವಣೆಯ ಮತಗಟ್ಟೆಯ ಅಧಿಕಾರಿಗಳಾಗಿ ಶ್ರೀಕಾರ ಪತ್ತಾರ, ವಿಹಾನ ಜೋಶಿ, ಅನನ್ಯ ಬಿರಾದಾರ, ರಚಿತಾ ಇಂಡಿ, ಸಾನ್ವಿ ಇಂಡಿ, ಪುನಿತ ನಾರಾಯಣಕರ ಕಾರ್ಯ ನಿರ್ವಹಿಸಿದರು.ಶಾಲಾ ಸಂಸತ್ತಿನ ಚುನಾವಣೆಯಲ್ಲಿ ವಿದ್ಯಾರ್ಥಿಗಳಾದ ಶ್ರೀರಕ್ಷಾ ಬಿರಾದಾರ, ಸಾಧನಾ ಚೌಡಿಹಾಳ, ಕೃತಿ ದೇಶಮುಖ, ಪ್ರಗತಿ ಹರನಾಳ, ಕಿರ್ತನ ಪಡಸಾಲಗಿ, ವೈಬವ ಬಾಗಲಕೋಟ,…

Read More