Author: editor.udayarashmi@gmail.com

ಚಡಚಣ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಕರೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ (ಕೆಕೆಎಂಪಿ) ಬೆಂಗಳೂರು, ವಿಜಯಪುರ ಜಿಲ್ಲಾ ಶಾಖೆಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತೋತ್ಸವ ಹಾಗೂ ಜಿಲ್ಲಾ ಸಮಾವೇಶವನ್ನು ಜೂನ್ 7ರಂದು ವಿಜಯಪುರ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವದು ಎಂದು ಚಡಚಣ ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಹೇಳಿದರು.ವಿಜಯಪುರ ನಗರದ ಆಶ್ರಮ ರಸ್ತೆಯ ಐಶ್ವರ್ಯ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸುಸಜ್ಜಿತ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಮಂಜುನಾಥ ಭಾರತಿ ಸ್ವಾಮೀಜಿ, ಗೋಸಾಯಿ ಮಠ, ಗವಿಪುರಂ (ಬೆಂಗಳೂರು) ವಹಿಸಲಿದ್ದು, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯಾಧ್ಯಕ್ಷ ಸುರೇಶರಾವ್ ಎಸ್. ಸಾಠೆ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿವಿಧ ಜಿಲ್ಲೆಗಳ ಹಾಗೂ ತಾಲೂಕುಗಳ ಕೆಕೆಎಂಪಿ ಪದಾಧಿಕಾರಿಗಳು, ಸಮಾಜದ ಮುಖಂಡರು ಮತ್ತು ಗಣ್ಯರು…

Read More

ಯಾದಗಿರಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ ಯಾದಗಿರಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಕರ್ನಾಟಕದ ಯಾದಗಿರಿ ಜಿಲ್ಲೆಯ ಕಳಪೆ ಸಾಮಾಜಿಕ-ಆರ್ಥಿಕ ಸೂಚ್ಯಂಕಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮಹಿಳಾ ಸಾಕ್ಷರತಾ ಪ್ರಮಾಣ ಕಡಿಮೆಯಾಗಿರುವುದು, ಬಹು ಆಯಾಮದ ಬಡತನದ ಪ್ರಮಾಣ ಹೆಚ್ಚಿರುವುದು, ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೊನೆಯ ಸ್ಥಾನದಲ್ಲಿರುವುದು ಹಾಗೂ ತಲಾ ಆದಾಯ ಅತಿ ಕಡಿಮೆ ಇರುವುದು ಆತಂಕಕಾರಿ ಸಂಗತಿಗಳಾಗಿವೆ ಎಂದು ಹೇಳಿದರು.ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿರುವ ಸೀತಾರಾಮನ್, ಯಾದಗಿರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ತುರ್ತು ಮತ್ತು ವಿಶೇಷ ಗಮನದ ಅಗತ್ಯವಿದೆ ಎಂದು ಒತ್ತಿ ಹೇಳಿದರು.ಯಾದಗಿರಿಯಲ್ಲಿ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಯಾದಗಿರಿ ಹಾಗೂ ಪಕ್ಕದ ರಾಯಚೂರು ಜಿಲ್ಲೆಗಳನ್ನು “ಆಕಾಂಕ್ಷಿ ಜಿಲ್ಲೆಗಳು” (Aspirational Districts) ಎಂದು ಗುರುತಿಸಲಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಜನ್ಮದಿನ, ವಿಶ್ವ ಪರಿಸರ ದಿನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಅಂಗವಾಗಿ ಶುಕ್ರವಾರ (ಜೂನ್ 5) ಬೆಳಿಗ್ಗೆ 11 ಗಂಟೆಗೆ ಪಟ್ಟಣದ ವಿಶ್ವ ಭಾರತಿ ವಿದ್ಯಾ ವರ್ಧಕ ಸಂಘದ ಯಲ್ಲಮ್ಮ ದೇವಿ ಸಿಬಿಎಸ್ಇ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಸೂಚನೆಯಂತೆ, ಅಭಿಮಾನಿಗಳು ಯಾವುದೇ ಆಡಂಬರಗಳನ್ನು ತೊರೆದು ಶಾಲು, ಹೂವುಗಳ ಬದಲು ಸಸಿಗಳನ್ನು ನೆಡುವ ಮೂಲಕ ಶುಭಾಶಯ ಕೋರಬೇಕು ಎಂದು ಎಸ್.ಕೆ. ಬೆಳ್ಳುಬ್ಬಿ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತವು ದೂರದೃಷ್ಟಿ, ಜನಪರ ಕಲ್ಯಾಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿಯಾಗಿದ್ದು, ಅವರ ಕಾಲದಲ್ಲಿ ರಾಜ್ಯವು ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನದಲ್ಲಿ ಭಾರತದಲ್ಲೇ ಮುಂಚೂಣಿಯಲ್ಲಿತ್ತು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ 142 ನೇ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರಸ್ತುತ ನಗರೀಕರಣದ ಸಮಸ್ಯೆಗಳು ಮತ್ತು ನೀರಿನ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ನಮಗೆ, ಶಿವನಸಮುದ್ರ ಜಲವಿದ್ಯುತ್ ಯೋಜನೆ ಮತ್ತು ಕನ್ನಂಬಾಡಿ ಅಣೆಕಟ್ಟು ನಿರ್ಮಾಣದ ಅವರ ದೂರದೃಷ್ಟಿ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ ಎಂದು ಹೇಳಿದರು.ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ, ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಿದ ನಾಲ್ವಡಿ ಕೃಷ್ಣರಾಜರು ಇಂದಿನ ಆಧುನಿಕ ಕಾಲದ ಸಮಾನತೆಯ ಆಶಯಗಳನ್ನು ಅಂದೇ ಕಾರ್ಯರೂಪಕ್ಕೆ ತಂದು, ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,ಇಂದಿನ ಅಭಿವೃದ್ಧಿಶೀಲ ಭಾರತಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದ ಚಡಚಣ ತಾಲೂಕು ಗೋವಿಂದಪೂರ ಗ್ರಾಮದಲ್ಲಿ ನಡೆದ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಗುರುವಾರ ಮತ್ತೆ ಆರು ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರೋಪಿ ನಂ. 1 :ಅಪ್ಪುಗೌಡ ತಂ. ಲಗಮನಗೌಡ @ ಲಕ್ಕನಗೌಡ ಪಾಟೀಲ (49 ವರ್ಷ), ಆರೋಪಿ ನಂ. 11 ಶಂಕ್ರೆಪ್ಪ ತಂ. ಮಾದೇವ ಅರಕೇರಿ ( 33 ವರ್ಷ), ಆರೋಪಿ ನಂ. 12 ಅಪ್ಪಾಸಾಬ @ ಕಿಶನ್‌ ತಂ. ಶಂಕರ ಭೋವಿ )56 ವರ್ಷ), ಆರೋಪಿ ನಂ. 22ಸತ್ಯೆಪ್ಪ ತಂ. ಜಕ್ಕಪ್ಪ ಬಿರಾದಾರ (46 ವರ್ಷ), ಆರೋಪಿ ನಂ. 23 ಸುಲ್ತಾನ ತಂ. ಮಾದೇವ ಬಿರಾದಾರ (24 ವರ್ಷ), ಆರೋಪಿ ನಂ. 24 ಮಹೇಶ ತಂ. ಬೆಳ್ಳೆಣ್ಣಿ ಬಿರಾದಾರ (25 ವರ್ಷ) ಆರೋಪಿಗಳನ್ನು ಬಂಧಿಸಲಾಗಿದ್ದು, ಈಗಾಗಲೇ ದಿನಾಂಕ: 01-06-2026 ರಂದು 12 ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೀಗೆ ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 18 ಜನ…

Read More

“ಇವನಾರವ ಇವನಾರವ ಎಂದೆನ್ನದೆ, ಇವ ನಮ್ಮವ ಇವ ನಮ್ಮವ..” ಎಂದೆನ್ನುತ ಸರ್ವರನ್ನೂ ಅಪ್ಪಿಕೊಳ್ಳುವ ಸಹೃದಯತೆಯ ಧೀಮಂತ ಉದಯರಶ್ಮಿ ದಿನಪತ್ರಿಕೆ ಪಾದರಸದಂತೆ ಓಡಾಟ, ಸ್ನೇಹ ಪರತೆ, ಚಾಣಾಕ್ಷ ಮುನ್ನಡೆ, ಸಾಮಾಜಿಕ ಬದ್ಧತೆಯ ಅವಿಶ್ರಾಂತ ಕೆಲಸಗಾರ ಮಲ್ಲನಗೌಡ ಬಸನಗೌಡ ಪಾಟೀಲ್ ರವರು.ಮಾಜಿ ಸಚಿವ, ಶಿಕ್ಷಣ ಪ್ರೇಮಿ, ಸೋಲರಿಯದ ಸರದಾರ ನಿರಂತರ 25ವರ್ಷಗಳ ಕಾಲ ಕರ್ನಾಟಕ ಶಾಸನ ಸಭೆ ಸದಸ್ಯರಾಗಿದ್ದ ದಿ.ಬಿ.ಎಂ.ಪಾಟೀಲ್‍ರ ಜೇಷ್ಠ ಸುಪುತ್ರರಾಗಿರುವ ಎಂ.ಬಿ.ಪಾಟೀಲ್ ವಿಜಯಪುರದಲ್ಲಿ 7 ಅಕ್ಟೋಬರ 1964 ರಂದು ಜನಿಸಿ, ಬೆಂಗಳೂರು, ವಿಜಯಪುರದಲ್ಲಿ ತಮ್ಮ ಶಿಕ್ಷಣ ಪಡೆದು 1991 ರಲ್ಲಿ ಆಗ ತಾನೇ ಬಿ.ಇ. ಸಿವಿಲ್ ಪದವಿ ಪಡೆದ ನವತರುಣ.ತಂದೆಯವರ ಅಕಾಲಿಕ ನಿಧನದ ನಂತರ ಅವರು ಮುನ್ನಡೆಸಿದ ಬಿಜಾಪುರ ಲಿಂಗಾಯತ ಶಿಕ್ಷಣ ಸಂಸ್ಥೆಯ ನೇತೃತ್ವ ವಹಿಸಿಕೊಂಡು ಹಾಗೂ ತಂದೆಯವರ ನಿಧನದ ಹಿನ್ನಲೆಯಲ್ಲಿ ತೆರವಾದ ತಿಕೋಟಾ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿ ತಮ್ಮ 26ನೇ ವಯಸ್ಸಿನಲ್ಲಿ (1991-1994) ಶಾಸಕರಾದರು. ನಂತರ 1998 ರಲ್ಲಿ ವಿಜಯಪುರದಿಂದ ಲೋಕಸಭೆ ಸದಸ್ಯರಾಗಿ ಆಯ್ಕೆಗೊಂಡರು.2004ರಲ್ಲಿ ತಿಕೋಟಾ ಕ್ಷೇತ್ರದಿಂದ…

Read More

ಲೇಖನ- ಮ.ನಾ.ಉಡುಪಮಂಡ್ಯ ಉದಯರಶ್ಮಿ ದಿನಪತ್ರಿಕೆ ತಮಿಳುನಾಡಿನ ರಾಜಕಾರಣದ ನಾಡಿಮಿಡಿತವನ್ನು ಅರಿತವರಿಗೆ ಒಂದು ವಿಷಯ ಸ್ಪಷ್ಟ. ಇಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಅಸ್ಮಿತೆಗೆ, ಪ್ರಾದೇಶಿಕ ಭಾವನೆಗಳಿಗೆ ಹೆಚ್ಚಿನ ಮನ್ನಣೆ. ದ್ರಾವಿಡ ಚಳವಳಿಯ ಬೇರುಗಳು ಇನ್ನೂ ಗಟ್ಟಿಯಾಗಿರುವ ಈ ನೆಲದಲ್ಲಿ, ಕಾಂಗ್ರೆಸ್ ಆಗಲಿ ಬಿಜೆಪಿ ಆಗಲಿ, ‘ದೆಹಲಿ ಪಕ್ಷ’ ಎಂಬ ಹಣೆಪಟ್ಟಿಯಿಂದ ಹೊರಬರುವುದು ಸುಲಭವಲ್ಲ. ಈ ಕಹಿ ಸತ್ಯ ಬಿಜೆಪಿ ಹೈಕಮಾಂಡ್‌ಗೂ ಚೆನ್ನಾಗಿ ಗೊತ್ತಿದೆ. ಅಣ್ಣಾಮಲೈ ಅವರಿಗೂ ಗೊತ್ತಿದೆ.ಈ ಹಿನ್ನೆಲೆಯಲ್ಲಿ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಕೇವಲ ‘ವೈಯಕ್ತಿಕ ನಿರ್ಧಾರ’ ಎಂದು ನೋಡಿದರೆ ಅದು ರಾಜಕೀಯ ಅಜ್ಞಾನವಾಗುತ್ತದೆ. ಇದು ದೂರದೃಷ್ಟಿಯ, ಲೆಕ್ಕಾಚಾರದ ನಡೆ. ಬಿಜೆಪಿಗೆ ತಮಿಳುನಾಡಿನಲ್ಲಿ ನೇರವಾಗಿ ಅಧಿಕಾರದ ಗದ್ದುಗೆ ಏರುವುದು ಸದ್ಯಕ್ಕೆ ಕನಸಿನ ಮಾತು ಎಂಬುದನ್ನು ಅರಿತ ನಾಯಕತ್ವ, ಪರೋಕ್ಷ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ ಎಂಬುದು ಸ್ಪಷ್ಟ. ಪ್ರಾದೇಶಿಕ ಮುಖವಾಡ, ರಾಷ್ಟ್ರೀಯ ಲಾಭಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪರೋಕ್ಷ ಆಶೀರ್ವಾದ ಇಲ್ಲದೆ ಅಣ್ಣಾಮಲೈ ಅವರಂಥ ಪ್ರಬಲ ನಾಯಕ ಬಿಜೆಪಿ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ‘ಸುಖದ ಕಡಲಲಿ ಹೊರಟರೆ ಕಷ್ಟದಲೆಗಳು ಎದುರಾಗುವುದೆ? ನೋವಿನ ಮಳೆಯಲಿ ನೆನೆದು ಹೋದರೆ ನಾಳಿನ ಹಗಲು ಮೂಡುವುದೇ? ಇವು ಕವಿ ಕೆಎಸ್‌ಎನ್‌ರವರ ಕವಿತೆಯ ಸುಂದರ ಸಾಲುಗಳು ಬದುಕಿನ ಸತ್ಯವನ್ನು ಅತ್ಯಂತ ಮಾರ್ಮಿಕವಾಗಿ ಉಲ್ಲೇಖಿಸಿವೆ. ಬದುಕು ನಿತ್ಯವೂ ನಮಗೆ ಹೊಸ ಹೊಸ ಪಾಠಗಳನ್ನು ಕಲಿಸುತ್ತಲೇ ಇರುತ್ತದೆ. ಅಷ್ಟೆ ಅಲ್ಲ ಅದು ನಾವು ಕಲಿಯುವವರೆಗೂ ಬಿಡದೇ ಇರುವ ಗುರು. ಕಷ್ಟಗಳೇ ಹೆಚ್ಚು ಕಲಿಸುತ್ತೇವೆ ಎಂಬುದು ಅಚ್ಚರಿಯೆನಿಸಿದರೂ ನಂಬಲೇಬೇಕು. ಕಷ್ಟಗಳಿಲ್ಲದೇ ಸುಖದ ಸವಿ ತಿಳಿಯಲು ಸಾಧ್ಯವಿಲ್ಲ. ಇದನ್ನೇ ಸಮಾಜ ಸೇವಕಿ ಸುಧಾ ಮೂರ್ತಿ. ‘ಜೀವನದಲ್ಲಿ ಕಷ್ಟಗಳು ಬರುವುದು ಸಹಜ. ಆದರೆ ಆ ಕಷ್ಟಗಳನ್ನು ನಾವು ಹೇಗೆ ಎದುರಿಸುತ್ತೇವೆ ಮತ್ತು ಅದರಿಂದ ಏನು ಕಲಿಯುತ್ತೇವೆ ಎಂಬುದು ಮುಖ್ಯ.’ ಎಂದಿದ್ದಾರೆಹೂ ನಗೆಇವತ್ತೇನೋ ಹೀಗಾಯ್ತು. ನಾಳೆ ಆದರೂ ಚೆನ್ನಾಗಿರುತ್ತದೆ ಅಂದರೆ ಮತ್ತೆ ಯಾವುದಾದರೊಂದು ಸಮಸ್ಯೆ ಒಕ್ಕರಿಸಿಕೊಂಡೇ ಬಿಡುತ್ತದೆ. ದಿನಾಲೂ ತೊಂದರೆ ತಾಪತ್ರಯಗಳು ಇದ್ದೇ ಇರುತ್ತವೆ. ಈ ಕಷ್ಟದ ಹಾದಿಯಲ್ಲಿ ಸುಖದ ಬದುಕನ್ನು…

Read More

ವಿಜಯಪುರದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ನಿಮಿತ್ತ ಸೈಕ್ಲಿಂಗ್ ಜಾಥಾ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸದೃಢ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಸೈಕಲ್ ಓಡಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ರಾಜ್ಯ ಸೈಕ್ಲಿಂಗ್ ಅಸೋಸಿಯೇನ್ ಅಧ್ಯಕ್ಷರಾದ ರಾಜು ಬಿರಾದಾರ ಹೇಳಿದರು.ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಶನ್ ಹಾಗೂ ವಿಶಾಲ್ ಸೈಕಲ್ ಮಹಾಲ್ ಸಹಯೋಗದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕ್ಲಿಂಗ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.೧೮೬೮ರಲ್ಲಿ ಸೈಕ್ಲಿಂಗ್ ಕ್ರೀಡೆಯಾಗಿ ಪರಿವರ್ತನೆಯಾಗಿ ಭಾರತದೇಶಕ್ಕೆ ೧೯೩೮ ರಲ್ಲಿ ಪಾದಾರ್ಪಣೆಯಾಯಿತು. ಬಳಿಕ ೭೦ ರ ದಶಕದಲ್ಲಿ ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಸೈಕ್ಲಿಂಗ್ ಕ್ರೀಡೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಕ್ಕಿತು. ಇದರಿಂದಾಗಿ ಅವಿಭಜಿತ ವಿಜಯಪುರ ಜಿಲ್ಲೆಯ ಸೈಕ್ಲಿಸ್ಟ್ಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿ ಬೆಳಗಿಸಿದ್ದಾರೆ.ಈ ಕ್ರೀಡೆ ಕೇವಲ ಸೈಕ್ಲಿಸ್ಟ್ಗಳಿಗೆ ಮಾತ್ರವಲ್ಲ. ಜನಸಾಮಾನ್ಯರು ಸೈಕಲ್ ನಿತ್ಯ ಬಳಸಬಹುದಾಗಿದೆ. ನಿತ್ಯ ಸೈಕಲ್…

Read More