Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಮ್ಮನವರ ಕನಸಿನ ಕೂಸಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ಲೋಣಿ ಬಿ.ಕೆ ವಲಯದ, ಲೋಣಿ ಬಿ.ಕೆ ಗ್ರಾಮದ ನಿರ್ಗತಿಕರಾದ ದುಂಡವ್ವ ತೇಲಿ ಮತ್ತು ದ್ರೌಪದಿ ತಳವಾರ ಇಬ್ಬರು ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ಮತ್ತು ಪ್ರತಿ ತಿಂಗಳು ಮಾಶಾಸನ ವಿತರಣೆ, ಮತ್ತು ಮನೆ ಕಟ್ಟಿ ಕೊಡುವುದರಮುಖೇನ ಅದೇ, ನಿರ್ಗತಿಕರಿಗೆ ದಿನ ಬಳಕೆ ವಸ್ತುಗಳಾದ ಹಾಸಿಗೆ, ದಿಂಬು, ಪೌಷ್ಟಿಕ ಆಹಾರ ಕಿಟ್, ಬಟ್ಟೆ, ಸಾಮಗ್ರಿಗಳನ್ನು ಪ್ರತಿ ವರ್ಷ ವಿತರಣೆ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ವಿತರಣೆ ಮಾಡಲಾಗುತಿದ್ದು ವಲಯದ ಮೇಲ್ವಿಚಾರಕರಾದ ಮಹಾಂತೇಶ ವ್ಹಿ.ಎ. ಅವರು ಕಿಟ್ ವಿತರಣೆ ಮಾಡಿ ಮಾತನಾಡಿದರು.ಈ ಸಂದರ್ಭದಲ್ಲಿ ಲೋಣಿ ಗ್ರಾಮದ ಗಣ್ಯರಾದ ಕೆ.ಎಸ್.ಪಾಟೀಲ, ಒಕ್ಕೂಟದ ಅಧ್ಯಕ್ಷರು ಲಕ್ಷ್ಮಿ ಕಾಪಸೆ, ಸೇವಾಪ್ರತಿನಿಧಿ ಸಂಗೀತ ಉಟಗಿ ಸಿಎಸ್ಸಿ ಸೇವಾದಾರರು ಸಾಹೇರಬಾನು ಶೇಕ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆಚಡಚಣ : ವಿಜಯಪುರದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ಸಾವಿತ್ರಿಬಾಯಿ ಫುಲೆ / ಜ್ಯೋತಿಬಾ ಫುಲೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಚಡಚಣ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯ ಶಿಕ್ಷಕ ತುಕಾರಾಮ ಕೋಳಿ ಅವರು ಆಯ್ಕೆಯಾಗಿದ್ದಾರೆ.ಅಕ್ಷರದವ್ವ ಎಂದೇ ಖ್ಯಾತರಾದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯ ಅಂಗವಾಗಿ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಇದೇ ಫೆ. 8ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸಗಂಗೋತ್ರಿ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ.ಎಸ್. ಕಾಂಬಳೆ ತಿಳಿಸಿದ್ದಾರೆ.ಮಾಡಲಾಗುತ್ತಿದೆ ಎಂದು ಸಮಿತಿ ತಿಳಿಸಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆ, ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ, ಸಾಮಾಜಿಕ ಜಾಗೃತಿ ಹಾಗೂ ಶಿಸ್ತುಬದ್ಧ ಬದುಕಿನ ಮಹತ್ವವನ್ನು ಬೋಧಿಸುವ ಮೂಲಕ ಅವರು ಶಿಕ್ಷಕ ವೃತ್ತಿಗೆ ಗೌರವ ತಂದುಕೊಟ್ಟಿದ್ದಾರೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಶೈಕ್ಷಣಿಕ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲ್ಲೂಕಿನ ಜೇವೂರ ಗ್ರಾಮದ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಸವಂತ ವಾಘಮೋರೆ ಅವರು ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜಯಪುರ ಜಿಲ್ಲೆಯ ತಿಡಗುಂದಿ ಪಟ್ಟಣದ ಮಾನಸ ಗಂಗೋತ್ರಿ ಮಾದರಿ ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಫೆ. 8 ರಂದು ಭಾನುವಾರ ಬೆ. 10 ಗಂಟೆಗೆ ಆಯೋಜಿಸಿರುವ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಸಾವಿತ್ರಿಬಾಯಿ ಫುಲೆ ರವರ ಸ್ಮರಣಾರ್ಥ ಕೊಡಮಾಡುವ “ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಬಸವಂತ ವಾಘಮೋರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗಣಪತಿ ಕಾಂಬಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನವಿಗೆ ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ರಿಂದ ಪೂರಕ ಸ್ಪಂದನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ತಿಂಗಳಿಗೆ ಒಂದು ಪುಟ ಹೆಚ್ಚುವರಿ ಸರ್ಕಾರಿ ಜಾಹೀರಾತು ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ದಿನಪತ್ರಿಕೆಗಳ ಸಂಪಾದಕರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಿದ ಬಳಿಕ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರ ನೇತೃತ್ವದಲ್ಲಿ ಪ್ರಕಟವಾಗುತ್ತಿರುವ ದಿನಪತ್ರಿಕೆಗಳು ಸಾಮಾಜಿಕ ಜಾಗೃತಿ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಸಮಸ್ಯೆಗಳ ಕುರಿತಾಗಿ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಇಂತಹ ಪತ್ರಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರೋತ್ಸಾಹ ಅಗತ್ಯವಿದ್ದು, ಹೆಚ್ಚುವರಿ ಜಾಹೀರಾತು ಸೌಲಭ್ಯ ದೊರೆತರೆ ಮಹಿಳಾ ಸಂಪಾದಕತ್ವದ ಪತ್ರಿಕೆಗಳು ಆರ್ಥಿಕವಾಗಿ ಬಲಿಷ್ಠವಾಗುವ ಜೊತೆಗೆ ಗುಣಮಟ್ಟದ ಪತ್ರಿಕೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದು ಹೇಳಿದರು.ಕಳೆದ ಏಳು ವರ್ಷಗಳಿಂದ ಸಂಘದ ವತಿಯಿಂದ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಸಮರ್ಪಕ ಸ್ಪಂದನೆ ದೊರಕಿಲ್ಲ. ಈ ಬಾರಿಯಾದರೂ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸುಪ್ರಸಿದ್ಧ ಯಲಗೂರ ಕ್ಷೇತ್ರದ ಶ್ರೀ ಯಲಗೂರೇಶನ ಕಾರ್ತಿಕೋತ್ಸವವು ಪಾಲ್ಗುಣ ಮಾಸ ಷಷ್ಠಿ, ಸಪ್ತಮಿ ೦೭ ಮತು ೮ ರಂದು ಅದ್ದೂರಿಯಾಗಿ ಜರುಗುವುದು. ಆ ದಿನ ಬೆಳಿಗ್ಗೆ ಪಂಚಾಮೃತ ಅಭಿಷೇಕ ಪವಮಾನ ಹೋಮ, ಮಹಾಪೂಜೆ, ಮುಂಜಾನೆ ೧೦ ಗಂಟೆಗೆ ದಿಂಡಿನ ಸ್ಪರ್ಧೆ, ತೀರ್ಥ ಪ್ರಸಾದ, ಹರಿದಾಸರ ಕೀರ್ತನೆ ಹಾಗೂ ಈ ಕೆಳಗಿನಂತೆ ಸಂಗೀತ ಕಾರ್ಯಕ್ರಮಗಳು ನಡೆಯುತ್ತಿದು ್ದ, ರಾತ್ರಿ ಕಾರ್ತಿಕೋತ್ಸವ ನಡೆಯಲಿದೆ. ಪಂ. ಬಸವರಾಜ ಭಜಂತ್ರಿ, ಸಹನಾಯಿ, ಶ್ರೀಮತಿ ಅದಿತಿ ದೇಸಾಯಿ, ಕುಮಾರ ಹೃಷಿಕೇಶ ಅರಬಟ್ಟಿ, ಕುಮಾರಿ ವೈಷ್ಣವಿ ಜೋಶಿ, ಶ್ರೀಮತಿ ಪ್ರೇಮಾ, ಸ್ನೇಹಾ ಕಡಿವಾಲ, ಡಾ.ಶ್ರೀಮತಿ ಸಂಗೀತಾ ಕಾಖಂಡಕಿ, ಶ್ರೀ ನಾರಾಯಣ ತಾಸಗಾವ, ಶ್ರೀ ಸಂತೋಷ ಗದ್ದನಕೇರಿ, ಶ್ರೀಮತಿ ಪರಿಮಳ ಗಿರಿಯಾಚಾರ್ಯ, ಶ್ರಿ ಬಿ.ಬಿ. ಕುಲಕರ್ಣಿ, ಕುಮಾರಿ ಭಾಗ್ಯ ಕುಲಕರ್ಣಿ, ಕುಮಾರಿ ಸುನಯನಾ ಮನೋಹರ ದೇಶಪಾಂಡೆ, ವಿಧೂಷಿ ಶ್ರೀಮತಿ ರೇಣುಕಾ ನಾಕೋಡ್, ಪಂ. ಶ್ರೀ ರಘುನಾಥ ನಾಕೋಡ್ ಮತು ್ತ ಪಂ. ಶ್ರೀ ರವಿಕಿರಣ ನಾಕೋಡ್, ಕುಮಾರಿ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ;ಇಲ್ಲಿ ಪಾರ್ವತಿ ಕಟ್ಟಾ ಸೇತುವೆ ಬಳಿಯಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೊಬ್ಬ ಬಿದ್ದು ಮೃತಪಟ್ಟ ಘಟನೆ ಬುಧವಾರ ಜರುಗಿದೆ.ಮೃತ ವ್ಯಕ್ತಿ ಆಲಮಟ್ಟಿ ಆರ್.ಎಸ್. ಗ್ರಾಮದ ಮಹೇಂದ್ರಕುಮಾರ ಶಂಕ್ರಪ್ಪ ರಾಠೋಡ (43).ಈ ವ್ಯಕ್ತಿ ಕಳೆದ ಎರಡು ದಿನದಿಂದ ಕಾಣೆಯಾಗಿದ್ದ ಎನ್ನಲಾಗಿದೆ.ಬುಧವಾರ ಮೃತನ ಶವ ಕಾಲುವೆಯಲ್ಲಿ ತೇಲುತ್ತಿತ್ತು. ಸಂಜೆ ಪೊಲೀಸರ ಸಮ್ಮುಖದಲ್ಲಿ ಮೃತ ವ್ಯಕ್ತಿಯ ದೇಹ ಹೊರ ತೆಗೆಯಲಾಯಿತು.ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕ್ಯಾನ್ಸರ್ ತಡೆಗಟ್ಟಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.ಮೋರಟಗಿ ಸಮುದಾಯ ಆರೋಗ್ಯ ಕೇಂದ್ರ, ಸಿಂದಗಿ ತಾಲೂಕಿನ ಗಬಸಾವಳಗಿ ಆಯುಷ್ಮಾನ್ ಆರೋಗ್ಯ ಕೇಂದ್ರ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಘಟಕದ ಸಹಯೋಗದೊಂದಿಗೆ ಗಬಸಾವಳಗಿ ಗ್ರಾಮದಲ್ಲಿ ಹಮ್ಮಿಕೊಂಡ ವಿಶ್ವ ಕ್ಯಾನ್ಸರ್ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾನ್ಸರ್ ತಡೆಗಟ್ಟುವಿಕೆ, ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಲು, ಕ್ಯಾನ್ಸರ್ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಈ ಮಾರಣಾಂತಿಕ ಕಾಯಿಲೆಯ ಜಾಗತಿಕ ಹೊರೆಯನ್ನು ಕಡಿಮೆ ಮಾಡಲು ಇದನ್ನು ಆಚರಿಸಲಾಗುತ್ತದೆ. ನಿಯಮಿತ ಆರೋಗ್ಯ ತಪಾಸಣೆ ದೈಹಿಕ ಚಟುವಟಿಕೆ ಹಾಗೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡದೆ ಇರುವದರಿಂದ ರೋಗವನ್ನು ತಡೆಗಟ್ಟಬಹುದು ಎಂದು ಹೇಳಿದರು.ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಆರ್.ಮಾಶಾಳ, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಜಿ.ಎಂ.ಸದಬ, ಗಬಸಾವಳಗಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ವಿದ್ಯಾರಾಣಿ ಮಾತನಾಡಿದರು.ಇದೇ ಸಂದರ್ಭದಲ್ಲಿ 60ಕ್ಕೂ ಅಧಿಕ ಜನ…
ನಿವೃತ್ತ ಪ್ರಾಚಾರ್ಯ ಡಾ. ಎಸ್.ಬಿ.ಮಟೋಳಿ ಬಣ್ಣನೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ಕಲಾವಿದರಿಂದಲೇ ತುಂಬಿರುವ ಹುನ್ನೂರು ಬಯಲಾಟ ಮತ್ತು ನಾಟಕ ಕಲೆಯಲ್ಲಿ ಪಳಗಿದೆ ಎಂದು ಬನಹಟ್ಟಿ ಎಸ್ಟಿಸಿ ಕಾಲೇಜ್ ನಿವೃತ್ತ ಪ್ರಾಚಾರ್ಯ ಡಾ.ಎಸ್.ಬಿ.ಮಟೋಳಿ ಬಣ್ಣಿಸಿದರು.ಗ್ರಾಮದ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ಬಾಗಲಕೋಟೆ ಹಿರಿಯ ಸಾಹಿತಿ ಹಣಮಂತ ತಾಸಗಾಂವಕರ ಅವರ ಹುನ್ನೂರು ಬಯಲಾಟಗಳು ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆ, ಶಿಕ್ಷಣ ಇತರೆ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹುನ್ನೂರು ಗ್ರಾಮದ ಕಲಾವಿದರು ಪ್ರದರ್ಶಿಸುವ ದೀಪಾವಳಿ ಬಯಲಾಟ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ದೀಪಾವಳಿ ಬಯಲಾಟದ ಗ್ಯಾರಂಟಿ ಮತ್ತು ಬಾಲಿ ಪಾತ್ರದ ದಿ. ಪ್ರಹ್ಲಾದ ಗುರವ, ಚಿನ್ನಪ್ಪ ಕಾಮಗೊಂಡ ಅವರ ಅಭಿನಯ ಪ್ರೇಕ್ಷಕರಲ್ಲಿ ಹಚ್ಚ ಹಸಿರಾಗಿ ಉಳಿದಿದೆ. ಸಾಂಸ್ಕೃತಿಕವಾಗಿ ಮುಂಚೂಣಿಯಲ್ಲಿರುವ ಗ್ರಾಮದ ಬಯಲಾಟ, ನಾಟಕಗಳ ಕುರಿತು ಪುಸ್ತಕ ಹೊರ ತಂದಿರುವುದು ಔಚಿತ್ಯ ಪೂರ್ಣವಾಗಿದೆ ಎಂದರು.ಕೃತಿ ಪರಿಚಯಿಸಿದ ಹಿರಿಯ ಸಾಹಿತಿ ವಸಂತ ಅಗಸಿಮನಿ ಮಾತನಾಡಿ, ಹುನ್ನೂರಲ್ಲಿ ನಾಟಕ ಸಂಘಗಳು ನಡೆದು ಬಂದ ದಾರಿ, ಗ್ರಾಮದ…
ಉದಯರಶ್ಮಿ ದಿನಪತ್ರಿಕೆಕೊಲ್ಹಾರ: ಸಮಾಜ ಸಂಘಟನೆ ಮಾಡುವದು ಜನರ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಸಾಗುವದು ಇಂದಿನ ದಿನಮಾನಗಳಲ್ಲಿ ಅವಶ್ಯಕವಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶ್ರೀಮತಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದ ತೆರಪಿ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ನಂತರ ಕೊಲ್ಹಾರದ ಅವರ ಅಭಿಮಾನಿಗಳು ಹಾಗೂ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿಯವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ನಾಡಿನ ಜನರು ಮೆಚ್ಚುವಂತಹ ಜನಪರವಾದ ಕೊರ್ತೀ ಕೊಲ್ಹಾರ ಸೇತುವೆ ನಿರ್ಮಾಣ, ಕೂಡಗಿ ಎನ್ ಟಿಪಿಸಿ ಸೇರಿದಂತೆ ಹಲವಾರು ಅಭಿವೃದ್ದಿ ಕಾಮಗಾರಿಗಳನ್ನು ಜಾರಿಗೆ ತಂದಿರುವದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು. ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಸಮಾಜದಲ್ಲಿ ಯುವಜನತೆ ಪರಿಶ್ರಮದಿಂದ ತಾವು ಮಾಡುವ ಕಾಯಕದಲ್ಲಿ ನಿರತರಾದಾಗ ಯಶಸ್ವಿ ಹೆಜ್ಜೆಯತ್ತ ದಾಪುಗಾಲು ಹಾಕಲು ಸಾದ್ಯವಾಗುತ್ತದೆ ಎಂದರು. ಜೇನು ಹುಳಗಳು ಗೂಡು ಕಟ್ಟಿ ಸಿಹಿಯನ್ನು ಕೊಡುವಂತೆ ಬದುಕಿನಲ್ಲಿ ನಾವುಗಳು ಕೂಡಾ ಕಹಿ ನೆನಪು ಮರೆತು ಸರ್ವ ಜನರಲ್ಲಿ ಸಿಹಿಯಾದ…
ವಿಶ್ವಪರ್ವ ಕಾರ್ಯಕ್ರಮದಲ್ಲಿ ಅಧ್ಯಕ್ಷ ವಿಶ್ವನಾಥ ಶೇಷಾಚಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ : ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಸಿಬಿಎಸ್ಇ ಶಾಲೆ, ಬಿಎಡ್ ಕಾಲೇಜು ಹಾಗೂ ಎಲ್ ಕೆಜಿ, ಯುಕೆಜಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಉತ್ಸಕನಾಗಿದ್ದೇನೆ ಎಂದು ಶ್ರೀ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಶೇಷಾಚಲ ಅವರು ಹೇಳಿದರು. ಪಟ್ಟಣದಲ್ಲಿ ಶ್ರೀ ವಿಶ್ವಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಪರ್ವ 2026 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಣ ಅನ್ನೋದು ಆಹಾರ ಇದ್ದಂತೆ. ಒಂದು ದೇಶ ಬಲಿಷ್ಠವಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಣ ಮಾಡೆಲ್ ಇದ್ದಂತೆ. ಹೀಗಾಗಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಕಳೆದ ಮೂರು ವರ್ಷಗಳಿಂದ ನಾವು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬರುತ್ತಿದ್ದು, ಮಕ್ಕಳಿಗೆ ಯಾವುದರಲ್ಲಿಯೂ ಕೊರತೆ ಆಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ…
