Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ನಿತ್ಯ ಸಮಾಜದಲ್ಲಿ ನಾವು ಉತ್ತಮ ಬದುಕು ಕಂಡುಕೊಳ್ಳಬೇಕಾದರೆ ಸಂಸ್ಕೃತಿ, ಸಂಸ್ಕಾರ ಜೀವನದಲ್ಲಿಅಳವಡಿಸಿಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಸುಗ್ಗಮದ ಹೇಳಿದರು.ಸ್ಥಳಿಯ ವಿರಕ್ತಮಠದ ಚನ್ನಬಸವೇಶ್ವರ ಸಭಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಭು ಮಹಾಸ್ವಾಮಿಗಳ ೫೫ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಬೆಳಗುತ್ತಿರುವ ದೀಪಗಳನ್ನು ಆರಿಸಿ ಜನ್ಮದಿನ ಆಚರಿಸುವ ಸಂಸ್ಕತಿ ಪಾಶ್ಚಾತರದ್ದು. ಇನ್ನೊಬ್ಬರ ಜೀವನದಲ್ಲಿ ಬೆಳಗುವ ದೀಪವಾಗುವ ಕಾರ್ಯ ಮಾಡುವುದು ಭಾರತೀಯ ಸಂಸ್ಕೃತಿ. ನಮ್ಮ ಪರಂಪರೆಯನ್ನು ನಮ್ಮ ಮಕ್ಕಳಿಗೆ ಕಲಿಸಬೇಕಾಗಿದೆ ಆ ಕಾರಣಕ್ಕ ಶ್ರೀಮಠದ ಭಕ್ತ ಮಂಡಳಿ ಈ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.ನಿವೃತ್ತ ಪ್ರಾದ್ಯಾಪಕ ಡಾ. ವಿರುಪಾಕ್ಷ ಚಿಮ್ಮಡ, ಗ್ರಾ.ಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ, ಪ್ರವೀಣ ಪೂಜಾರಿ ಮಾತನಾಡಿದರು.ಸಮಾರಂಭದ ಸಾನಿಧ್ಯವಹಿಸಿದ ಪ್ರಭು ಮಹಾಸ್ವಾಮಿಗಳು ಗ್ರಾಮದ ವಿವಿಧ ಸಮುದಾಯಗಳ ಪ್ರಮುಖರಿಂದ ಗೌರವ ಸ್ವೀಕರಿಸಿ ಕಾಣಿಕೆಯಾಗಿ ಸ್ವೀಕರಿಸಿದ ಕಲಿಕಾ ಸಾಮಗ್ರಿಗಳನ್ನು ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿದರು.ಶಾಸಕ ಸಿದ್ದು ಸವದಿ, ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ,…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವಿನ ಕಿರಣಾ,ಗಿಳಿ ಹಸಿರು ಬಣ್ಣದ ಚೆಂದದ ಕುರ್ತಾ ಅದಕ್ಕೊಪ್ಪುವ ಬಿಳಿ ಬಣ್ಣದ ಪಟಿಯಾಲಾ ಪ್ಯಾಂಟ್, ಕಿವಿಯಲ್ಲಿ ಅತ್ತಿತ್ತ ಓಲಾಡುವ ಹಸಿರು ಬಿಳಿ ಹರಳಿರುವ ಜುಮ್ಕಿ, ತಿದ್ದಿ ತೀಡಿ ಮಾಡಿದಂತಿರುವ ಕಾಮನ ಬಿಲ್ಲಿನಂತಹ ಹುಬ್ಬುಗಳು ಮತ್ತು ಕಣ್ಣಿಗೆ ನಯವಾಗಿ ತೀಡಿದ ಕಾಡಿಗೆ, ತೆಳುವಾಗಿ ಬಣ್ಣ ಲೇಪಿಸಿದ ಅಂದದ ಅಧರಗಳು. ನೀಲಿ ಬಣ್ಣದ ಕಂಗಳು, ನಕ್ಕರೆ ಕೆನ್ನೆಯಲ್ಲಿ ಬೀಳುವ ಗುಳಿಗಳು. ಲೂಸಾಗಿ ಹೆಣೆದ ಜಡೆ. ಐದೂವರೆ ಅಡಿ ಎತ್ತರದ ಸಮತೂಕದ ನಿಂಬೆ ಬಣ್ಣದ ಮೈಕಟ್ಟಿನವಳು. ಸರಿ ಪ್ರಮಾಣದ ಅಂಗ ಸೌಷ್ಟವ ಇರುವ ಸುಂದರಿ ನೀನು, ಮೊದಲ ನೋಟದಲ್ಲೇ ಕಳೆದು ಹೋದೆ.ಮತ್ತೇರಿಸುವ ಮೋಹಕ ನಗು ಚೆಲ್ಲುವವಳು ಸರಳ ಉಡುಗೆ ತೊಡುಗೆ ಇರುವ ಸಿಂಪಲ್ ಸುಂದರಿ ಎನ್ನಬಹುದು. ಸಿಂಪಲ್ಲಾಗಿದ್ರೂ ಗತ್ತು ಗಾಂಭರ‍್ಯತೆ. ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ಚೆಲುವಿ ಯಾರಿರಬಹುದೆಂದು ನಿನ್ನ ಹೆಜ್ಜೆಯನ್ನೇ ಹಿಂಬಾಲಿಸಿದವು ನನ್ನ ಕಾಲುಗಳು. ನಾನು ಮಾಸ್ಟರ್ ಡಿಗ್ರಿ ಮುಗಿಸಿ ಜಾಬ್‌ಗೆ ಹುಡುಕಾಡುತ್ತಿದ್ದ…

Read More

ಸಂಗನಬಸವ ಶ್ರೀಗಳನ್ನು ಬಿಡುಗಡೆ ಮಾಡದಿದ್ದರೆ ವಿಜಯಪುರ ಬಂದ್‌ಗೆ ಕರೆ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ಹಿಂದೂ ಸ್ವಾಮೀಜಿಗಳ ಮೇಲೆ ದೊಡ್ಡ ಷಡ್ಯಂತ್ರ ಮಾಡುತ್ತಿದೆ, ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಈ ರೀತಿ ಹಿಂಸೆ ನೀಡುವ ಕೆಲಸ ಮಾಡುತ್ತಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ನ್ಯಾಯಯುತ ಹೋರಾಟದಲ್ಲಿ ತೊಡಗಿದ್ದ ಶ್ರೀ ಸಂಗನಬಸೇಶ್ವರ ಸ್ವಾಮೀಜಿಯವರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ವಿಜಯಪುರ ಬಂದ್ ಸೇರಿದಂತೆ ವಿವಿಧ ಹಂತದ ಹೋರಾಟ ಕೈಗೊಳ್ಳಲು ನಾವು ಸಿದ್ಧ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.ಮುಖ್ಯಮಂತ್ರಿಗಳು ವಿಜಯಪುರಕ್ಕೆ ಬರುವ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ, ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ಮೂರ್ತಿ ಸಿ.ಎಂ. ಸಿದ್ಧರಾಮಯ್ಯ ಅವರು ಉದ್ಘಾಟಿಸುವುದು ಬೇಡ ಎಂದು ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ್ದಾರೆ, ಈಗ ಪಿಪಿಪಿ ಹೋರಾಟಗಾರರಿಂದ ಮುಖ್ಯಮಂತ್ರಿಗಳಿಗೆ ವಿರೋಧ ವ್ಯಕ್ತವಾಗುವ ದೃಷ್ಟಿಯಿಂದ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆದಿದೆ ಎಂದರು.ಬAದಾಗ ಯಾವ ವಿರೋಧವೂ ವ್ಯಕ್ತವಾಗಬಾರದು ಎಂದು ಉದ್ದೇಶಪೂರ್ವಕವಾಗಿ ಸರ್ಕಾರಿ ಮೆಡಿಕಲ್ ಕಾಲೇಜ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪುಸ್ತಕಗಳ ಆಯ್ಕೆ ಲೇಖಕ, ಲೇಖಕ-ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ಹಾಗೂ ಸ್ಪರ್ಧಾತ್ಮಕ, ಪಠ್ಯ, ಪರಾಮರ್ಶನ, ಸಾಂದರ್ಭಿಕ ಮತ್ತು ಅಭಿನಂದನ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಬಹುದು.೨೦೨೫ರ ಕರ್ನಾಟಕದಲ್ಲಿ ಪ್ರಥಮವಾಗಿ ಮುದ್ರಣಗೊಂಡ ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ಉಪನಿರ್ದೇಶಕರ ಕಚೇರಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ದಿನಾಂಕ ೩೧-೦೧-೨೦೨೬ರ ಸಂಜೆ ೫:೩೦ರ ಒಳಗಾಗಿ ನೋಂದಣಿ ಮಾಡಿಸುವುದು ಹಾಗೂ ಈ ಪುಸ್ತಕಗಳನ್ನು ಮಾತ್ರ ರಾಜ್ಯ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗೆ ಪರಿಗಣಿಸಲಾಗುವುದು.ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದು ಹಾಗೂ ಪುಸ್ತಕದ ಒಂದು ಪ್ರತಿಯನ್ನು ದಿನಾಂಕ:೩೧-೦೧-೨೦೨೬ರ ೫:೩೦ರೊಳಗೆ ಆಯ್ಕೆಗಾಗಿ ಉಪನಿರ್ದೇಶಕರು, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಬೆಂಗಳೂರು ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೇಂದ್ರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ.ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ,ಈ ಪ್ರಕಟಣೆಯ ೦೩ ದಿನಗಳೊಳಗೆ ಮಹಾನಗರ ಪಾಲಿಕೆಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರದ ಬಾಲಮಂದಿರದಲ್ಲಿ ಹೊಸ ವರ್ಷಾಚರಣೆ | ಮಕ್ಕಳೊಂದಿಗೆ ಸಂಭ್ರಮ | ಸಸಿ ನೆಡುವಿಕೆ | ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ದಿನಾಂಕ ೦೧-೦೧-೨೦೨೬ ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ ಅನೇಕ ಸೌಲಭ್ಯ ಒದಗಿಸಿದೆ. ಇದರ ಸದುಪಯೋಗಪಡೆದುಕೊಂಡು ಸತತ ಪರಿಶ್ರಮಿಗಳಾಗಿ ಅಧ್ಯಯನ ಮಾಡಿ, ಉನ್ನತ ಹುದ್ದೆಗೇರುವ ಗುರಿ ಹೊಂದಬೇಕು ಎಂದು ಪ್ರೇರಣಾ ನುಡಿಗಳನ್ನಾಡಿದರು.ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಹಲವು ಯೋಜನೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಆಧುನಿಕ ಕೃಷಿ ಪಧ್ಧತಿ ಅಳವಡಿಸಿಕೊಂಡು ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ. ಸರಕಾರಗಳಿಗೆ ರೈತರು ಸಾಲ ಮನ್ನಾ ಮಾಡುವಂತೆ ಮನವಿ ಮಾಡುವುದನ್ನು ನಿಲ್ಲಿಸಿ, ಉತ್ತಮ ಕೃಷಿ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ಮುಂದಾಗಿ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ತಾಲೂಕಿನ ಲಚ್ಯಾಣ ಗ್ರಾಮದ ಅಹಿರಸಂಗ ರಸ್ತೆಯ ಶ್ರೀಮಂತ ಇಂಡಿ ಇವರ ತೋಟದಲ್ಲಿ ಶುಕ್ರವಾರ ಕೃಷಿ ಇಲಾಖೆ ಇಂಡಿ, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ, ಭೀಮಾಶಂಕರ ಸಕ್ಕರೆ ಕಾರ್ಖಾನೆ ಮರಗೂರ ಹಾಗೂ ಶಾಂತೇಶ್ವರ ವಿವಿದೊದ್ದೇಶಗಳ ಸಹಕಾರಿ ಸಂಘ ಹೋರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರಣ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.ಮಣ್ಣಿನ ಫಲವತ್ತತೆ ಕಾಪಾಡಿ ಆಧುನಿಕ ಪದ್ದತಿಯ ಡ್ರೀಪ್ ನೀರಾವರಿ ಪದ್ದತಿ ಅಳವಡಿಸಿ ಕಬ್ಬಿನ ಇಳುವರಿ ಹೆಚ್ಚಿಸಲು ಸಾಧ್ಯವಾಗುತ್ತದೆ. ಒಂದು ಎಕರೆ ಪ್ರದೇಶದಲ್ಲಿ ೪೦ ಸಾವಿರ ಸಸಿ ನೆಡಬೇಕು. ಒಂದು ಸಸಿ ಎರಡರಿಂದ ಮೂರು ಕಿಲೋ ಆಗುವಂತೆ ನೋಡಿಕೊಳ್ಳಬೇಕು. ಆಗ…

Read More

ವಿಜಯಪುರದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ರಸ್ತೆಗಳು, ಕೆರೆಗಳ ಅಭಿವೃದ್ದಿ, ಅಕ್ರಮ ಮದ್ಯ ಮಾರಾಟ ಕಡಿವಾಣದಲ್ಲಿ ಪ್ರಗತಿ ಸಾಧಿಸಲಾಗಿದ್ದು, ವಿಜಯಪುರ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ ಮಾದರಿ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಸಂಪೂರ್ಣ ಅಭಿವೃದ್ದಿಗಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕೆರೆ, ನದಿ ಇಕ್ಕೆಲಗಳಲ್ಲಿ ಗಿಡ ಬೆಳೆಸುವ ಮೂಲಕ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಅರಣ್ಯ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಅರಣ್ಯೀ ಪ್ರದೇಶ ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಟ್ರೀ ಪಾರ್ಕ್ ಯೋಜನೆ ಸಮರ್ಪಕವಾಗಿ ಅನುಷ್ಠನಗೊಳಿಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸುವತ್ತ ಯೋಜನೆ ರೂಪಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆ ನೀಡುವ ಜವಾಬ್ದಾರಿ ನಮ್ಮೆಲ್ಲರಮೇಲಿದೆ. ಆ ನಿಟ್ಟಿನಲ್ಲಿ ಅರಣ್ಯೀಕರಣಕ್ಕೆ ಇನ್ನಷ್ಟು…

Read More

ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾವಿಗೆ ಪವಿತ್ರತೆ ಇದೆ, ಆದರೆ ಪವಿತ್ರ ಕಾವಿಗೆ ಅಗೌರವ ತೋರಿ ಕಾವಿ ಬಟ್ಟೆಯುಟ್ಟ ಸ್ವಾಮೀಜಿಯವರನ್ನು ಎಳೆದಾಡಿ, ಅವರ ಮೊಬೈಲ್ ಕಸಿದು ಗುಂಡಾ ವರ್ತನೆ ಮಾಡಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ೧೦೦ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಯುತ್ತಿದೆ. ಸಮಾಜದ ಹಿತಕ್ಕಾಗಿ ಅನೇಕರು ತಮ್ಮ ಮನೆ-ಮಠ ಬಿಟ್ಟು ಹೋರಾಟ ನಡೆಸುತ್ತಿದ್ದಾರೆ. ಆದರೆ, ಗುರುವಾರ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಯ ಕಾವಿ ಬಟ್ಟೆಯನ್ನು ಎಳೆದಾಡಿ, ಅವರ ಮೇಲೆ ಕೈಹಾಕಿ, ಮೊಬೈಲ್ ಕಸಿದುಕೊಂಡು ಗುಂಡಾವರ್ತನೆ ಮಾಡಿರುವುದು ಖಂಡನೀಯ ಎಂದರು.ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸೇರಿ ಹಲವು ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ರಾಜ್ಯ ಸರ್ಕಾರ ದ್ರೋಹ ಹಾಗೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹೋರಾಟಗಾರರಲ್ಲಿ ಎಲ್ಲ ಪಕ್ಷ, ಜಾತಿ,…

Read More

ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಹರಿದುಬಂದ ಭಕ್ತಸಾಗರ | ನಗರದೆಲ್ಲೆಡೆ ಸಿದ್ಧೇಶ್ವರ ಶ್ರೀಗಳ ಭಾವಚಿತ್ರವಿಟ್ಟು ಪೂಜೆ | ಎಲ್ಲೆಡೆ ಅನ್ನಸಂತರ್ಪಣೆ ಉದಯರಶ್ಮಿ ದಿನಪತ್ರಿಕೆ ವರದಿ: ದೇವೇಂದ್ರ ಹೆಳವರವಿಜಯಪುರ: ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಶತಮಾನದ ಶ್ರೇಷ್ಠ ಸಂತ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಮೂರನೇ ವರ್ಷದ ಗುರುನಮನ ಮಹೋತ್ಸವವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಗುರುನಮನ ಮಹೋತ್ಸವ ಕಾರ್ಯಕ್ತಮದಲ್ಲಿ ಭಾಗವಹಿಸಲು ಜ್ಞಾನಯೋಗಾಶ್ರಮಕ್ಕೆ ನೆರೆಯ ಮಹಾರಾಷ್ಟ ಸೇರಿದಂತೆ ನಾಡಿನ ವಿವಿಧೆಡೆಯಿಂದ ಭಕ್ತಸಾಗರವೇ ಹರಿದು ಬಂದಿತ್ತು.ಗುರುನಮನ ಮಹೋತ್ಸವದ ಅಂಗವಾಗಿ ನಗರದ ಬಿ.ಎಲ್.ಡಿ.ಇ.ರಸ್ತೆ, ಆಶ್ರಮ ರಸ್ತೆಯುದ್ದಕ್ಕೂ ಆಕರ್ಷಕ ಮಂಟಪ ನಿರ್ಮಿಸಿ ಪುಷ್ಪಾಲಂಕಾರ ಮಾಡಿ ಸಿದ್ಧೇಶ್ವರ ಮಹಾಸ್ವಾಮಿಗಳ ಭಾವಚಿತ್ರವಿಟ್ಟು ಗುರುನಮನ ಸಲ್ಲಿಸುವ ಜತೆಗೆ ಜ್ಞಾನಯೋಗಾಶ್ರಮಕ್ಕೆ ತೆರಳುವ ಭಕ್ತಾದಿಗಳಿಗೆ, ಉಪಹಾರ, ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ವಿವಿಧ ಸಂಘಟನೆಯವರು ಹಾಗೂ ಸಾರ್ವಜನಿಕರು ಭಕ್ತಿಸೇವೆ ಸಲ್ಲಿಸಿದರು.ಆಶ್ರಮ ರಸ್ತೆಯ ಶ್ರೀ ಸಿದ್ಧೇಶ್ವರ ಅಪ್ಫಾಜಿ( ಚಾರಲೈಟ್ ಬಳಿ) ವೃತ್ತದಲ್ಲಿ ಬಣ್ಣದ ರಂಗೋಲಿಯಿಂದ ಆಕರ್ಷಕ ಚಿತ್ರ ಬಿಡಿಸಿ ಅಲಂಕಾರ ಮಾಡಿದ್ದು ಭಕ್ತರ ಗಮನ ಸೆಳೆಯಿತು.ಗುರುನಮನ ಮಹೋತ್ಸವ ಪ್ರಯುಕ್ತ…

Read More