Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ. ಕೋಟೆ: ಆದಿವಾಸಿ ಮತ್ತು ಬುಡಕಟ್ಟು ಜನರಲ್ಲಿ ಆರೋಗ್ಯ ಬಗ್ಗೆ ಅರಿವು ಮೂಡಿಸುವ ಮೂಲಕ, ನಮ್ಮ ತಾಲೂಕಿನಲ್ಲಿ ಸಿಕೆಲ್ ಸೆಲ್ (ಕುಡಗೋಲು) ರೋಗ ಮರುಕಳಿಸದಂತೆ ಜಾಗೃತವಹಿಸಬೇಕಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಹೇಳಿದರು.ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹೆಚ್ ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ ಡಿ ಕೋಟೆ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್ ಡಿ ಕೋಟೆ ವತಿಯಿದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನ ಕಾರ್ಯಕ್ರಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಾಗೃತಿ ಕಾರ್ಯಕ್ರಮಗಳ ಮೂಲಕ ಆದಿವಾಸಿ ಜನರಲ್ಲಿ ಆರೋಗ್ಯ ಕಾಳಜಿ ಬಗ್ಗೆ ಅರಿವು ಮೂಡಿಸಿ, ರೋಗಗಳು ಉದ್ಭವಿಸದಂತೆ ನಾವು ನೀವೆಲ್ಲರೂ ಸಹಕರಿಸಬೇಕಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಈ ಹಿಂದೆ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಿ, ಅಂಕಗಳಿಕೆ ಎಂಬುದು ಉದ್ಯೋಗದ ಭಾಗವಷ್ಟೇ, ಸಚ್ಚಾರಿತ್ರ್ಯದ ಸನ್ಮಾರ್ಗ ತೋರುವುದೇ ಶಿಕ್ಷಣದ ಅಂತಿಮ ಗುರಿಯಾಗಬೇಕು ಎಂದು ಉಪನ್ಯಾಸಕ ಡಾ.ಯಂಕನಗೌಡ ಎಸ್ ಪಾಟೀಲ ಹೇಳಿದರು.ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವ ಮತ್ತು ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ ಎಂದವರು. “ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ” ಎಂಬಂತೆ ಪತ್ನಿ ಮತ್ತು ಪತಿಯರು ಒಂದಾಗಿ, ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಮುಖ್ಯ ಶಿಕ್ಷಕ ಬಾಬು ಪಟೇಲ್ ಯಲ್ಗೋಡ ಹಾಗೂ ಅವರ ಧರ್ಮಪತ್ನಿ ಮಾಸಾಬಿ ಯಲ್ಗೋಡ ಇವರ ಮಹಾನ್ ಕಾರ್ಯಕ್ಕೆ ಸಾಥ್ ನೀಡುತ್ತಿರುವ ಆಡಳಿತ ಮಂಡಳಿಯ ಸರ್ವ ಸದಸ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯ, ಕಳೆದ ಮೂರು ದಶಕಗಳಿಂದ ನೂರಾರು ವಿದ್ಯಾರ್ಥಿಗಳ ಬಾಳಲಿ ಜ್ಞಾನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಮಧೇನು ಕಲ್ಪವೃಕ್ಷವಾಗಿರುವ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸ್ಮರಣೆ ಮಾಡಲು ಪೂರ್ವ ಜನ್ಮದ ಪುಣ್ಯ ಮಾಡಿರಬೇಕು ಎಂದು ಗುರು ರಾಘವೇಂದ್ರ ಸೇವಾ ಸಮಿತಿಯ ಪ್ರಮುಖ ಪ್ರಕಾಶ ಅಕ್ಕಲಕೋಟ ಹೇಳಿದರು.ಗ್ರಾಮದ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ವಿಜಯಪುರದ ಗುರು ರಾಘವೇಂದ್ರ ಸೇವಾ ಸಮಿತಿಯಿಂದ ಮಂತ್ರಾಲಯ ಪಾದಯಾತ್ರೆ ಹೊರಡುವ ಭಕ್ತಾದಿಗಳಿಗೆ ದಾಸೋಹ ಸೇವೆ ಮಾಡುತ್ತಿರುವ ನಿಮಿತ್ತ ನಡೆದ ೨೫ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಅವಳಿ ಜಿಲ್ಲೆಯ ಸಾಕಷ್ಟು ಭಕ್ತರು ಯಲಗೂರಿನಿಂದ ಹುಲ್ಲೂರು, ಮುದ್ದೇಬಿಹಾಳ ಮಾರ್ಗವಾಗಿ ಮಂತ್ರಾಲಯಕ್ಕೆ ಪಾದಯಾತ್ರೆ ಬೆಳೆಸುತ್ತಾರೆ. ಯಲಗೂರಿನಿಂದ ಮುದ್ದೇಬಿಹಾಳದವರೆಗಿನ ೨೫ ಕಿಮೀ ಅಂತರದಲ್ಲಿ ಪಾದಯಾತ್ರಿಗಳಿಗೆ ಯಾವುದೇ ಸೌಲಭ್ಯವಿರಲಿಲ್ಲ. ಇದರಿಂದ ಪಾದಯಾತ್ರಿಕರು ಪ್ರಯಾಸ ಪಡುತ್ತಿದ್ದರು. ಇದನ್ನು ತಪ್ಪಿಸಲು ಮಧ್ಯವರ್ತಿ ಸ್ಥಳವಾದ ಹುಲ್ಲೂರು ಬಸ್ ನಿಲ್ದಾಣದ ಬಳಿ ಗುರು ರಾಘವೇಂದ್ರ ಸೇವಾ ಸಮಿತಿಯಿಂದ ೨೦೦೧ರಿಂದ ದಾಸೋಹ ಸೇವೆ ಆರಂಭಿಸಲಾಗಿದ್ದು ನಿರಂತರವಾಗಿ ನಡೆದುಕೊಂಡು ಬಂದಿದೆ. ರಾಯರ ಕೃಪೆಯಿಂದ ನಮಗೆಲ್ಲ ಒಳ್ಳೆಯದಾಗಿದೆ ಎಂದರು.ಗೋಪಾಲಾಚಾರ್ಯ ಹಿಪ್ಪರಗಿ ಮಾತನಾಡಿ, ಪಾದಯಾತ್ರಿಕರ ಕಷ್ಟಗಳನ್ನು ಅರಿತು ದಾಸೋಹ ಸೇವೆ ಆರಂಭಿಸಿದ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ವಿದ್ಯಾಲಯದ ಮೂಲಭೂತ ಸೌಲಭ್ಯಗಳು, ಅನುದಾನ ಬಳಕೆ, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ದಿಸಲು ಕಾಲೇಜು ಅಭಿವೃದ್ದಿ ಸಮೀತಿಯ ಪಾತ್ರವೂ ಮಹತ್ವದ್ದಾಗಿದ್ದು. ಕ್ರಿಯಾಶೀಲ ಸಮೀತಿಯಿಂದ ಅಭಿವೃದ್ಧಿ ಸಾಧ್ಯವೆಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಹೇಳಿದರು.ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದ ಪಾಲಕರ ಸಭೆಯಲ್ಲಿ ಕಾಲೇಜು ಅಭಿವೃದ್ದಿ ಸಮೀತಿಯ ಅಧ್ಯಕ್ಷ, ಉಪಾಧ್ಯಕ್ಷ, ಸರ್ವಸದಸ್ಯರ ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಅವರು ವಿದ್ಯಾಲಯದ ಅಗತ್ಯಗಳಿಗೆ ಗ್ರಾಮದ ಪ್ರತಿಯೊಬ್ಬರು ಸ್ಪಂದನೆ ನಿರಂತರವಾಗಿರಲಿದ್ದು ಪಧಾದಿಕಾರಿಗಳು ನಿರಂತರ ಸಂಪರ್ಕದಿಂದ ವಿದ್ಯಾಲಯಕ್ಕೆ ಯಾವುದೇ ಸಮಸ್ಯೆ ಬಾರದಂತೆ ಸ್ಪಂದಿಸಬೇಕೆಂದು ಸಲಹೆ ನೀಡಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ. ಕಾಳಪ್ಪ ಬಡಿಗೇರ ಮಾತನಾಡಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಬೀರಪ್ಪ ಹಳೆಮನಿ, ಶಂಕರಗೌಡ ಬ. ಪಾಟೀಲ, ರಾಚಯ್ಯ ಮಠಮತಿ, ನಿಂಗಣ್ಣ ಪೂಜಾರಿ, ಪ್ರಭು ಮುಧೋಳ, ಪ್ರಕಾಶ ಪಾಟೀಲ, ಪಿರಸಾಬ ನದಾಫ, ಪ್ರಾಶುಪಾಲೆ ಶ್ರೀಮತಿ ಎಸ್.ಕೆ. ರಾಠೋಡ ಉಪಸ್ಥಿತರಿದ್ದರು.ಕಾಲೇಜು ಅಭಿವೃದ್ದಿ ಸಮೀತಿಗೆ ನೂತನ ಅಧ್ಯಕ್ಷರಾಗಿ ಅವ್ವನಪ್ಪ ಮುಗಳಖೋಡ ಉಪಾಧ್ಯಕ್ಷರಾಗಿ ಬಸಪ್ಪ ಮಮದಾಪೂರ, ಗಟಿಗೆಪ್ಪ ಜಂಗನೂರ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಜನವರಿ 29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ ಹಾಗೂ ಶೋಭಾಯಾತ್ರೆ ಜರುಗಲಿದೆ.ಈ ಕಾರ್ಯಕ್ರಮ ನಿಮಿತ್ಯ ಸೋಮವಾರ ಎಲ್ಲ ಮಠಾದೀಶರು ನೇತೃತ್ವದಲ್ಲಿ ಎಲ್ಲ ಸಮುದಾಯದ ಹಿಂದೂಗಳ ಮನೆಗೆ ತೆರಳಿ ಕಾರ್ಯಕ್ರಮದ ಸಂಪರ್ಕ ಅಭಿಯಾನ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ತಾರಾಪೂರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಗುರು ಸಂಸ್ಥಾನ ಹಿರೇಮಠ ಚಂದ್ರಶೇಖರ ಶಿವಾಚಾರ್ಯರು, ಅರ್ಜುಣಗಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಕುಮಸಗಿಯ ಶಿವಾನಂದ ಮಹಾಸ್ವಾಮಿಗಳು ನೇತೃತ್ವದಲ್ಲಿ ಪಟ್ಟಣ ಪ್ರತಿಯೊಂದು ನಗರಗಳಿಗೆ ತೆರಳಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಹ್ವಾನಿಸಿದರು.ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮುಖಂಡ ಜಿ.ಸಿ. ಪಷುಪತಿಮಠ ಮಾತನಾಡಿ, 29 ರಂದು ನಡೆಯುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಿಮಿತ್ಯ ಶೋಭಾಯಾತ್ರೆ ನಡೆಯಲಿದ್ದು, ಈ ಶೋಭಾಯಾತ್ರೆಯಲ್ಲಿ ಹಿಂದೂ ಧರ್ಮದ ಎಲ್ಲ ಸಮಾಜದ ಸಾದು ಸಂತರ, ಮಹಾನ ನಾಯಕರ, ಹೋರಾಟಗಾರ ಭಾವ ಚಿತ್ರಗಳೊಂದಿಗೆ ಶೋಭಾಯಾತ್ರೆ ಮಾಡಲಾಗುವದು. ಸೋಮವಾರ ಎಲ್ಲ ಸ್ವಾಮಿಜಿಗಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸಂಪರ್ಕ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಭಾನುವಾರ ಅಮವಾಸ್ಯೆಯ ನಿಮಿತ್ತ ಇಲ್ಲಿಯ ಸಮೀಪದ ಯಲಗೂರುದ ಯಲಗೂರೇಶ್ವರ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಕೊಂಡರು. ಅಮವಾಸ್ಯೆಯ ದಿನ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ, ಭಾನುವಾರ ಅಮವಾಸ್ಯೆ ಬಂದರೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚು.ಬೆಳಿಗ್ಗೆಯಿಂದಲೇ ಕೃಷ್ಣಾ ತಟದಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದರು. ಚಂದ್ರಗಿರಿ ಚಂದ್ರಮ್ಮಾ ದೇವಿ, ಯಲಗೂರದ ಹನುಮಾನ ದೇವಸ್ಥಾನ ಭಕ್ತರ ಸಂಖ್ಯೆ ಹೆಚ್ಚಿತ್ತು. ಎಲ್ಲೆಡೆಯೂ ಜಾತ್ರೆಯೇ ನೆರೆದಿತ್ತು. ಕಾಯಿ, ಕರ್ಪೂರ, ಹಾರ ಖರೀದಿಯ ಭರಾಟೆ ಜೋರಾಗಿತ್ತು. ಯಲಗೂರದಲ್ಲಿ ಬಂದ ಭಕ್ತರಿಗೆ ಅನ್ನ ಸಾಂಬಾರು, ಶಿರಾ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ೧೪ ಕ್ಷಿಂಟಲ್ ಅಕ್ಕಿಯ ಅನ್ನ ಮಾಡಲಾಗಿತ್ತು ಎಂದು ಯಲಗೂರೇಶ್ವರ ಅನ್ನದಾಸೋಹ ಕಮಿಟಿಯ ಅಧ್ಯಕ್ಷ ಶ್ಯಾಮ ಪಾತರದ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಕಾರಣ ಸುತ್ತಲಿನ ಪ್ರದೇಶವನ್ನೆಲ್ಲಾ ಸ್ವಚ್ಛಗೊಳಿಸಲಾಗಿತ್ತು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಪಟ್ಟಣದ ಹೆಸ್ಕಾಂ ಕಚೇರಿ ಹತ್ತಿರದ ವಿದ್ಯುತ್ ಗುತ್ತಿಗೆದಾರರ ಕಾರ್ಯಾಲಯದಲ್ಲಿ ಭಾನುವಾರ ನೂತನ ತಾಲ್ಲೂಕು ಸಮಿತಿ ರಚನೆ ಮಾಡಲಾಯಿತು. ಪದಾಧಿಕಾರಿಗಳಾಗಿ ಅಬ್ಬಾಸಲಿ ಮಣ್ಣೂರ(ಕೇಂದ್ರ ಸಲಹಾ ಸಮಿತಿ ಸದಸ್ಯ), ರಾಜಶೇಖರ ಹಳ್ಳದಗೆಣ್ಣೂರ( ಅಧ್ಯಕ್ಷರು), ಸಿದ್ಧನಗೌಡ ಬಿರಾದಾರ, ಅಬ್ದುಲ್ಸತ್ತಾರ ಮುಲ್ಲಾ(ಉಪಾಧ್ಯಕ್ಷರು), ಬಂದಗೀಸಾಬ್ ಡೆಂಗಿ (ಕಾರ್ಯದರ್ಶಿ), ಬಸಪ್ಪ ಬೊಮ್ಮನಳ್ಳಿ(ಸಹಕಾರ್ಯದರ್ಶಿ), ಅಬ್ದುಲ್ಮಜೀದ್ ಮಳಖೇಡ (ಸಂಘಟನಾ ಕಾರ್ಯದರ್ಶಿ), ಲಕ್ಷಿö್ಮÃ ಸತೀಶಕುಮಾರ ಪಾಟೀಲ(ಖಜಾಂಚಿ) ಆಯ್ಕೆಯಾದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ವಿದ್ಯಾನಗರ ೪ನೇ ಕ್ರಾಸ್ನಲ್ಲಿ ಶನಿವಾರ ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳರು ಅಂದಾಜು ೮೦ಗ್ರಾಂ ಬಂಗಾರ, ೧೦೦ಗ್ರಾಂ ಬೆಳ್ಳಿ ಹಾಗೂ ೧ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.ಸಿದ್ದಲಿಂಗಯ್ಯ ಹಿರೇಮಠ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಳಿಗ್ಗೆ ಮನೆಗೆ ಬೀಗ ಹಾಕಿ ಕುಟುಂಬದ ಸದಸ್ಯರೆಲ್ಲ ಅಮಾವಾಸ್ಯೆ ನಿಮಿತ್ಯ ದೇವರಿಗೆ ಹೋಗಿದ್ದರು ಎನ್ನಲಾಗಿದೆ. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ ಅಂದಾಜು ೮೦ಗ್ರಾಂ ಬಂಗಾರ, ೧೦೦ಗ್ರಾಂ ಬೆಳ್ಳಿ ಹಾಗೂ ೧ಲಕ್ಷ ನಗದು ದೋಚಿ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.ಪಿಎಸ್ಐ ಆರೀಫ್ ಮುಷಾಪುರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಬೇಕು ಎನ್ನುವ ದಿಸೆಯಲ್ಲಿ ಕಳ್ಳರನ್ನು ಪತ್ತೆ ಹಚ್ಚುಲು ಸ್ವಾನದಳ ಮತ್ತು ಬೆರಳಚ್ಚು ವಿಭಾಗಕ್ಕೆ ಬರಲು ಮಾಹಿತಿ ನೀಡಲಾಗಿದೆ ಎಂದು ಪಿಎಸ್ಐ ಆರೀಫ್ ಮುಷಾಪುರಿ ಮಾಹಿತಿ ನೀಡಿದ್ದಾರೆ. ಈ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ:ಭಾರತದಲ್ಲಿರುವ ಯುವ ಸಮೂಹ ಭಾರತ ದೇಶದ ಬೆಳೆವಣಿಗೆಯಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತದೆ. ಒಬ್ಬ ವಿದ್ಯಾರ್ಥಿ ಬೆಳವಣಿಗೆ ಗಣಿತ ಅಷ್ಟೇ ಮುಖ್ಯ ಅಲ್ಲ. ಅದರ ಜೊತೆಗೆ ಸಂಸ್ಕಾರಯುತ ಮನೋಭಾವ ಇರಬೇಕು ಎಂದು ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹೇಳಿದರು.ಸಿಂದಗಿ ಪಟ್ಟಣದ ಕಲಕೇರಿ ರಸ್ತೆಯ ಹೊರ ವಲಯದಲ್ಲಿರುವ ಎಲೈಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ ಎಲೈಟ್ ಯುವೋತ್ಸವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಹಸಿರು ಕ್ರಾಂತಿಯು ಭಾರತದಂತಹ ದೇಶಗಳಲ್ಲಿ ಆಹಾರ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ, ದೇಶವನ್ನು ಆಹಾರ ಧಾನ್ಯಗಳಲ್ಲಿ ಸ್ವಾವಲಂಬಿಯನ್ನಾಗಿಸಿದೆ, ಹಸಿವು ನೀಗಿಸಿದೆ, ರೈತರ ಆದಾಯ ಹೆಚ್ಚಿಸಿದೆ ಮತ್ತು ಕೃಷಿಯನ್ನು ಆಧುನಿಕ ಕೈಗಾರಿಕಾ ಪದ್ಧತಿಯಾಗಿ ಪರಿವರ್ತಿಸಿದೆ. ಬದ್ಧತೆಯೇ ಕಾಲೇಜುಗಳಿಗೆ ಶ್ರೀರಕ್ಷೆ. ಸಿಂದಗಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಎಲೈಟ್ ಸಹ ಒಂದು. ಜಗತ್ತಿನ ಆರ್ಥಿಕತೆಗೆ ಬಹು ದೊಡ್ಡ ಶಕ್ತಿ ಎಂದರೆ ಭಾರತ. ಇದಕ್ಕೆ ಕಾರಣ ಯುವ ಶಕ್ತಿ ಎಂದರು.ಈ ವೇಳೆ ತಹಶೀಲ್ದಾರ್ ಕರೆಪ್ಪ ಬೆಳ್ಳಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಬಸವ ಶರಣರ ತತ್ವದ ಆಧಾರದಲ್ಲಿ ತಮ್ಮ ಬದುಕನ್ನು ನಡೆಸಿದ ಸರಳ ನಾಯಕ ಡಾ.ಭೀಮಣ್ಣ ಖಂಡ್ರೆ ಅವರು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಹಮ್ಮಿಕೊಂಡ ಬೀದರನ ಲೋಕ ನಾಯಕ, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಡಾ.ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನಲೆಯಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೀಮಣ್ಣ ಖಂಡ್ರೆ ಅವರು ತಮ್ಮ ಬದುಕನ್ನು ಬಡ ಜನತೆಗಾಗಿ ಮೀಸಲಿಟ್ಟಂತವರು. ಕರ್ನಾಟಕದ ಏಕೀಕರಣ ಚಳುವಳಿಯಲ್ಲಿಯೂ ಅವರ ಪಾತ್ರ ಹಿರಿಯದು. ಅವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿವೆ. ಖಂಡ್ರೆ ಅವರು ಸಮಾಜದ ಋಣ ತೀರಿಸಿ ಸಾರ್ಥಕ ಬದುಕನ್ನು ಸಾಗಿಸಿ ಇಂದು ನಮ್ಮನೇಲ್ಲ ಅಗಲಿದ್ದಾರೆ. ಅವರ ಆತ್ಮಕ್ಕೆ ಭಗವಂತ ಚಿರ ಶಾಂತಿಯನ್ನು ನೀಡಲಿ ಎಂದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ ಸುಂಬಡ,…
