Author: editor.udayarashmi@gmail.com

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ಬೆಂಗಳೂರು: ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಕೋಗಿಲು ಫಕೀರ್ ಲೇಔಟ್​​ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿದ್ದು, “ಭೂ ಕಳ್ಳರ” ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಸೋಮವಾರ ಯಲಹಂಕ ಬಳಿಯ ಕೋಗಿಲು ಲೇಔಟ್ ನಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಸರ್ಕಾರ 9-10 ವರ್ಷಗಳಿಂದ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕಸದ ಗುಂಡಿ ಇತ್ತು. ಆದರೆ ಅದರ ಮೇಲೆಯೇ ಕೆಲವರು ರಾತ್ರೋರಾತ್ರಿ ಬಂದು ಶೆಡ್ ನಿರ್ಮಿಸಿದ್ದಾರೆ ಎಂದರು.ಯಾರೂ ಸಹ ಸರ್ಕಾರಿ ಭೂಮಿಗೆ ಮತದಾರರ ಚೀಟಿ ನೀಡಿಲ್ಲ. ಸ್ಥಳೀಯ ಶಾಸಕರು ಅದನ್ನು ತಮ್ಮ ಗಮನಕ್ಕೂ ತಂದಿದ್ದಾರೆ ಎಂದರು.”ಅವರು ಕಸದ ರಾಶಿಯ ಮೇಲೆ ಎಲ್ಲಾ ಮನೆಗಳನ್ನು ನಿರ್ಮಿಸಿದ್ದಾರೆ, ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸರ್ಕಾರ ಅಲ್ಪಸಂಖ್ಯಾತರಿಗೆ ಸಹಾನುಭೂತಿ ತೋರಿಸಲು ಹೊರಟಿದೆ, ಆದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿರುವ ಉಡುಪಿ ಕೃಷ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಮೂರು ಅಂತಸ್ತಿನ ಈ ಹೊಟೆಲ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ, ಕೆಲವೇ ಕ್ಷಣಗಳಲ್ಲಿ ಹೊಟೆಲ್ ಸುಟ್ಟು ಕರಕಲಾಗಿದೆ.ಘಟನೆ ಕುರಿತು ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಆರಿಸುವ ಕಾರ್ಯದಲ್ಲಿ ಸ್ಥಳೀಯರೂ ಸಹಕಾರ ನೀಡಿದರು.ಪ್ರಾಥಮಿಕ ಮಾಹಿತಿಯಂತೆ, ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಈ ಘಟನೆ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಉಂಟಾದ ನಷ್ಟದ ಅಂದಾಜು ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಆಯ್.ಜೋಗೂರ ಕುವೆಂಪು ರವರ ಕುರಿತು ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿರುವುದು ಶ್ಲಾಘನೀಯ ಕಾರ್ಯ ಎಂದರು.ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ಕುವೆಂಪು ರವರ ಶ್ರೇಷ್ಠ ಸಾಹಿತ್ಯದ ಕೃತಿಗಳ ಮುಖಾಂತರ ನಮ್ಮ ನಾಡಿಗೆ ಹಲವಾರು ರಾಷ್ಟ್ರ ಮಟ್ಟದ ಗೌರವ ಸಂದಿದೆ. ಅಂತೆಯೇ ಅವರ ಪುಸ್ತಕಗಳು ಹಾಗೂ ವಿಚಾರಗಳು ವಿಶ್ವಮಟ್ಟದಲ್ಲಿ ಜನಮನ್ನಣೆ ಗಳಿಸಿವೆ ಹಾಗಾಗಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆಯುವುದರ ಮುಖೇನ ಕನ್ನಡಕ್ಕೆ ವಿಶ್ವಮಟ್ಟದಲ್ಲಿ ಸ್ಥಾನಮಾನ ಲಭಿಸಿದೆ. ಹಾಗಾಗಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ವಿಶ್ವ ಮಾನವ ದಿನಾಚರಣೆ ವನ್ನಾಗಿ ಆಚರಿಸಲಾಗುತ್ತಿದೆಈ ವೇಳೆ ಕುವೆಂಪು ರವರ ಕುರಿತು ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಉತ್ತಮ…

Read More

ಅತ್ಯಂತ ಶಿಸ್ತುಬದ್ಧ-ಯಶಸ್ವಿ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಜನವರಿ ೯ರಂದು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲಾನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜ.೯ರಂದು ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ನಂತರ ನಗರದ ದರಬಾರ ಶಾಲಾ ಮೈದಾನದಲ್ಲಿ ಆಯೋಜಿಸಲಾಗುವ ವೇದಿಕೆ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದು, ವ್ಯವಸ್ಥಿತವಾಗಿ ಯಾವುದೇ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೂರ್ತಿ ಟ್ರಸ್ಟ್,ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆ ಹಾಗೂ ಇವರ ಸಹಯೋಗದಲ್ಲಿ ಇದೇ ಜನವರಿ ೩ ಹಾಗೂ ೪ ರಂದು ಎರಡು ದಿನಗಳ ಕಾಲ ನಗರದ ಐತಿಹಾಸಿಕ ಸ್ಮಾರಕವಾದ ಗೋಳಗುಮ್ಮಟ ಆವರಣದಲ್ಲಿ ಭಾರತೀಯ ಶಾಸ್ತ್ರೀಯ ಕಲೋತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಮೂರ್ತಿ ಟ್ರಸ್ಟ್ನ ಸಹಕಾರದೊಂದಿಗೆ ಭಾರತೀಯ ವಿದ್ಯಾಭವನ ಬೆಂಗಳೂರು ವತಿಯಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ.ಜ.೩ರಂದು ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾಮೂರ್ತಿ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಭಾಗವಹಿಸಲಿದ್ದಾರೆ.ಜ.೩ರಂದು ಪದ್ಮಶ್ರೀ ಪುರಸ್ಕೃತ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್ ಅವರಿಂದ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದ್ದು, ತಬಲಾದಲ್ಲಿ ಪಂಡಿತ ರಘುನಾಥ ನಾಕೋಡ್ ಹಾಗೂ ಹಾರ್ಮೋನಿಯಂನಲ್ಲಿ ಪಂಡಿತ…

Read More

ಅಹಿಂದ ಲೀಡರ್‌ ಆಗಿದ್ದರೆ ಎಲ್ಲಿ ಬೇಕಾದರೂ ಗೆಲ್ಲಬಹುದಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ ದೇವೇಗೌಡ ಬೆಂಗಳೂರು: ನೀವು ನಿಜವಾದ ಅಹಿಂದ ಲೀಡರ್‌ ಆಗಿದ್ದರೆ ಎಲ್ಲಿ ಬೇಕಾದರೂ ಗೆಲ್ಲಬಹುದಿತ್ತು. ನಿಮ್ಮ ಮಗ ಬಿಟ್ಟ ಕ್ಷೇತ್ರವನ್ನೇ ಏಕೆ ಆಯ್ಕೆ ಮಾಡಿಕೊಂಡಿರಿ? ಇದು ಅಹಿಂದವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜ.25ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ನಾವು ಜ.23ರಂದ ಹಾಸನದಲ್ಲಿ ಒಂದು ಸಮಾವೇಶ ಮಾಡುತ್ತೇವೆ. ಈ ಅಹಿಂದ ವ್ಯಾಖ್ಯಾನ ಮಾಡಲು ನಾನು ತಡವರಿಸುತ್ತೇನೆ. ಅದನ್ನು ವಿವರಿಸುವುದು ಕಷ್ಟ ಎಂದರು.ಈ ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಮೀಸಲಾತಿ ಕೊಟ್ಟವರು ಯಾರು? ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟವರು ಯಾರು? ಆರು ರೆಸಿಡೆನ್ಶಿಯಲ್‌ ಸ್ಕೂಲ್‌ ಕೊಟ್ಟವರು ಯಾರು? ನಾಯಕ ಸಮುದಾಯಕ್ಕೆ ಮೀಸಲಾತಿ ತಂದವರು ಯಾರು ಎಂದು ಪ್ರಶ್ನಿಸಿದರು.ಡಾಕ್ಟರ್‌ ಆಗಿದ್ದ ಎರಡನೇ ಮಗನನ್ನು ರಾಜಕೀಯಕ್ಕೆ ತನ್ನಿ ಹೇಳಿದ್ದೆ. ಈ ಇಳಿವಯಸ್ಸಿನಲ್ಲೂ ಎಷ್ಟು ದುಡಿಯುತ್ತೀರಿ ಸಾರ್‌ ಎಂದು ಅವರು…

Read More

ಜಮಖಂಡಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಶಾಸಕ ಜಗದೀಶ ಗುಡಗುಂಟಿ ಯಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರೋಪ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ರಾಜ್ಯದ ಕಾಂಗ್ರೆಸ್‌ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕಾನೂನು ಜಾರಿಗೆ ತರುವ ಹುನ್ನಾರ ನಡೆಸಿದೆ. 1975ರ ತುರ್ತು ಪರಿಸ್ಥಿತಿಯನ್ನು ಜನವಿರೋಧಿ ಕಾನೂನಿನ ಅಡಿಯಲ್ಲಿ ಜಾರಿಗೊಳಿಸಿ ಸಾರ್ವಜನಿಕರು, ವಿಪಕ್ಷಗಳು, ಮಾಧ್ಯಮಗಳ ಅಭಿವ್ಯಕ್ತಿ ಸ್ವತಂತ್ಯ್ರವನ್ನು ಹತ್ತಿಕ್ಕುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.ತಾಲ್ಲೂಕು ಆಡಳಿತ ಸೌಧದ ಮುಂದೆ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ತಹಶೀಲ್ದಾರ ಅನೀಲ ಬಡಿಗೇರಗೆ ಮನವಿ ಸಲ್ಲಿಸಿ ಮಾತನಾಡಿ ಕಾಂಗ್ರೆಸ್‌ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ನ್ನು ತರಾತುರಿಯಲ್ಲಿ ಜಾರಿಗೆ ತಂದು ಒಂದು ಕೋಮಿನವರನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದೆ ಎಂದರು.ಬಾಬಾಸಾಹೇಬ್‌ ಅಂಬೇಡ್ಕರ ಅವರು ನೀಡಿದರುವ ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ಯ್ರದ ಉಲ್ಲಂಘನೆ ಆಗಿದೆ. ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳಲು ಹೊರಟಿದೆ…

Read More

ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.ಸಂಘದ ಜಿಲ್ಲಾ ಮತ್ತು ತಾಲೂಕು ಘಟಕಗಳ ಚುನಾವಣೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರು ಹಾಗೂ ಸಂಘದ ಹಿತೈಷಿಗಳಾದ ಶರಣು ಮಸಳಿ, ಮಹೇಶ ಶೆಟಗಾರ, ರಾಜು ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಮೋಹನ್ ಕುಲಕರ್ಣಿ, ಕೆ.ಕೆ‌.ಕುಲಕರ್ಣಿ, ದೇವೆಂದ್ರ ಹೆಳವರ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಟಿ.ಕೆ.ಮಲಗೊಂಡ ಅವರನ್ನು ಸಚಿವ ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರಕಾರದಿಂದ ಬಡ ಕಾರ್ಮಿಕರ ಅನುಕೂಲಕ್ಕಾಗಿ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ. ಎಲ್ಲ ಕಾರ್ಮಿಕರು ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರ ಕಷ್ಟಗಳಲ್ಲಿ ಭಾಗವಹಿಸಿದ್ದು ಕಾಂಗ್ರೆಸ್ ಸರಕಾರ. ಕಾರ್ಮಿಕರ ಹಿತದೃಷ್ಠಿಯಿಂದ ಸರಕಾರ ಅನೇಕ ಯೋಜನೆಗಳನ್ನು ತಂದಿದೆ. ಮುಂಬರುವ ದಿನಮಾನಗಳಲ್ಲಿ ಕಾರ್ಮಿಕರ ಹಿತದೃಷ್ಠಿಯಿಂದ ಮತಕ್ಷೇತ್ರಕ್ಕೆ ಒಂದು ಕಾರ್ಮಿಕರ ಶಾಲೆ ಮಂಜೂರು ಮಾಡುವಂತೆ ಸಂಬಂಧಿಸಿದ ಸಚಿವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದಕ್ಕೆ ಬೇಕಾದ ಜಾಗೆಯನ್ನು ಆಲಮೇಲ ಮತ್ತು ಸಿಂದಗಿ ಮಧ್ಯದಲ್ಲಿ ಹೂವಿನಹಳ್ಳಿಯ ಹತ್ತಿರ ೭ಎಕರೆ ಜಾಗೆಯನ್ನು ಶಾಲೆಗಾಗಿ ಮೀಸಲಿಡಲಾಗಿದೆ. ಜನೆವರಿ ತಿಂಗಳಲ್ಲಿ ಮಂಜೂರಾಗುವ ಭರವಸೆ ಇದೆ. ಕಾರ್ಮಿಕರ ಏಳೆಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಪರಿಸರ ಪ್ರೇಮ ಬೆಳೆಸಲು ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ವ್ಯವಹಾರಿಕ ಮನೋಭಾವ ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಮಹತ್ವವುಳ್ಳವು ಎಂದು ಶ್ರೀಪದ್ಮರಾಜ ಮಹಿಳಾ ಪಪೂ ಕಾಲೇಜಿನ ಪ್ರಾಚಾರ್ಯ ವ್ಹಿ.ಡಿ.ಪಾಟೀಲ ಕರೆ ನೀಡಿದರು.ಸಿಂದಗಿ ನಗರದ ಆರ್.ಡಿ.ಪಾಟೀಲ ಪದವಿಪೂರ್ವ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡ ೨೦೨೫-೨೬ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯಡಿ ವಾರ್ಷಿಕ ವಿಶೇಷ ಶಿಬಿರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ನಿಸ್ವಾರ್ಥತೆಯಿಂದ ದುಡಿದು ಶ್ರಮದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ. ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿ ಸ್ವಯಂಸೇವಕರು ೭ದಿನಗಳ ಕಾಲ ಬಂದಾಳ ಗ್ರಾಮವನ್ನು ದತ್ತು ಪಡೆದ ಗ್ರಾಮ ಸಮಾಜ ಸೇವೆ ಮಾಡುವ ಒಂದು ಕಾರ್ಯಕ್ರಮವಾಗುವ ಜೊತೆಗೆ ಸಮುದಾಯದೊಂದಿಗೆ ಸಂಪರ್ಕ ಬೆಳೆಸುವಂತಹ…

Read More