Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾತೋಶ್ರೀ ಶಂಕ್ರೆಮ್ಮಾತಾಯಿ ಪ್ರಾಥಮಿಕ ಶಾಲೆ ಕತಕನಹಳ್ಳಿಯ ವಿದ್ಯಾರ್ಥಿಗಳು ಹಿಟ್ಟಿನಹಳ್ಳಿ ಕ್ಲಸ್ಟರ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವಾದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.ಚೈತ್ರಾ ಬಿರಾದಾರ ಅಭಿನಯ ಗೀತೆ, ಮಾದೇಗೌಡ ಅಲ್ಲಾಪೂರ ಇಂಗ್ಲೀಷ ಕಂಠಪಾಠ, ಪ್ರದೀಪ ಹಂಡಿ ಮಿಮಿಕ್ರಿ ಈರಣ್ಣ ಬಿರಾದಾರ ಚಿತ್ರಕಲೆ, ಸೈದು ವಾಲಿಕಾರ ಕ್ಲೇಮಾಡಲಿಂಗ, ಲಕ್ಷ್ಮಿ ಮೋದಿ ಕಥೆೆ ಹೇಳುವುದು, ಸ್ಪಂದನಾ ಸೋಲಾಪೂರ ಕನ್ನಡ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟದ ಸ್ಟರ್ದೇಯಲ್ಲಿ ಆಯ್ಕೆಯಾಗಿದ್ದಾರೆ, ಸಮೃದ್ದಿ ಕಲ್ಯಾಣಿ ದೇಶಭsಕ್ತಿಗೀತೆ, ಜವೇರಿಯಾ ದಳವಾಯಿ ಧಾರ್ಮಿಕ ಪಠಣ, ಸನ್ನಿಧಿ ಶಿರಮಗೊಂಡ ಪ್ರಬಂಧದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸುಕೃತಾ ಬಿರಾದಾರ ಇಂಗ್ಲೀಷ ಕಂಠಪಾಠ, ಅಖಿಲ ಬಡಿಗೇರ ಕಥೆ ಹೇಳುವುದು, ಮುಫಿಜ್ ಕೊಟೆಖಾನ ಕ್ಲೇಮಾಡಲಿಂಗ ಚೈತ್ರಾ ಬಬಲೇಶ್ವರ ದೇಶಭಕ್ತಿಗೀತೆ, ಗೌತಮಿ ಬಬಲೇಶ್ವರ ಪದ್ಯವಾಚನದಲ್ಲಿ ತೃತೀಯ ಸ್ಥಾನ ಪಡೆದು ತಮ್ಮ ಶಾಲೆಯ ಹಾಗೂ ತಂದೆ ತಾಯಿಯ ಹೆಸರು ತರುವಲ್ಲಿ ಯಶಸ್ವಿಯಾಗಿದ್ದಾರೆ. ಎಂದು ಹೇಳಲು ಹರ್ಷವೆನಿಸುತ್ತದೆ. ಈ…

Read More

ಉದಯರಶ್ಮಿ ದಿನಪತ್ರಿಕೆ ಹೊನವಾಡ: ನಿತ್ಯ ಸಂಚಾರದಲ್ಲಿ ಅನಾನುಕೂಲತೆ ಊಂಟಾಗಿ ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ್ ಅವರು ಸ್ಪಂದಿಸಿ ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿದ್ದಾರೆನಿತ್ಯ ಸಂಚರಿಸಲು ವಿಜಯಪುರ-ಹೊನವಾಡ-ತೆಲಸಂಗದವರೆಗೆ ಎರಡು ಸಿಟಿ ಬಸ್ಸುಗಳ ಸೇವೆ ಕಲ್ಪಿಸಿ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ.ಬುಧವಾರ ಬಂದ ಎರಡು ಬಸ್ಸುಗಳಿಗೆ ಸಚಿವರ ಆಪ್ತ ಸಹಾಯಕರಾದ ಸಂತೋಷ ಲೋಕುರಿ ಅವರು ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸಮಿತಿಯ ಎಲ್ಲ ಸದಸ್ಯರು, ಮಾಜಿ ತಾಲುಕಾ ಪಂಚಾಯತ್ ಅಧ್ಯಕ್ಷರಾದ ಸಿದ್ದು ಬೆಳಗಾವಿ, ಮಾಜಿ ಗ್ರಾ ಪಂ ಅಧ್ಯಕ್ಷರಾದ ದುಂಡಪ್ಪಾ ವಾಲಿಕಾರ, ಮುಖಂಡರಾದ ಸುರೇಶ ಪಾಟೀಲ, ವಿಜಯಕುಮಾರ ಹಿರೇಮಠ, ದುಂಡಪ್ಪಾ ಮಾಲಗಾರ, ಸಂಜಯಕುಮಾರ ಯಚ್ಚಿ, ಭೀಮರಾಯ ಮೋಳೆ, ಅರುಣ ಉಪ್ಪಾರ, ಸುರೇಶ ನರಳೆ, ಅನೀಲ ನಾಟಿಕಾರ, ಗ್ರಾಮದ ಹಿರಿಯರು, ಅನೇಕ ಯುವಕರು ಉಪಸ್ಥಿತರಿದ್ದರು.

Read More

ನಾದ ಕೆಡಿ ಗ್ರಾಮದ ಸಕ್ಕರೆ ಕಾರ್ಖಾನೆಗೆ ಬೃಹತ್ ಪ್ರಮಾಣದಲ್ಲಿ ಮುತ್ತಿಗೆ ಹಾಕಿ ರೈತರ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಜಮಖಂಡಿ ಸಕ್ಕರೆ ಕಾರ್ಖಾನೆ ಘಟಕ ೨ ರ ನಾದ ಕೆಡಿ ಗ್ರಾಮದ ಸಕ್ಕರೆ ಖಾರ್ಖಾನೆ ಮುಂದೆ ತಾಲೂಕಿನ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಬಾಳು ಮುಳಜಿಯವರ ನೇತೃತ್ವದಲ್ಲಿ ಮೊದಲು ಒಂದು ಟನ್ ಕಬ್ಬಿಗೆ ಕಾರ್ಖಾನೆಯವರು ದರ ನಿಗದಿ ಪಡಿಸಿ ನಂತರ ಕಾರ್ಖಾನೆ ಪ್ರಾರಂಭಿಸಿ ಎಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಅಲ್ಲಿ ಮಾತನಾಡಿದ ರೈತ ಮುಖಂಡ ಬಾಳು ಮುಳಜಿಯವರು, ಜಿಲ್ಲಾಧಿಕಾರಿಗಳು ಟನ್ ಕಬ್ಬಿಗೆ ರೂ ೩೩೦೦ ರೂ ಎಂದು ಹೇಳುತ್ತಾರೆ, ಕಾರ್ಖಾನೆಯವರು ಎಫ್‌ಆರ್‌ಪಿ ಆಧಾರದ ಮೇಲೆ ಟನ್ ಕಬ್ಬಿಗೆ ಎಷ್ಟು ಹಣ ನೀಡಬೇಕೆಂದು ಒಂದು ವಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಕೋಡುವದಾಗಿ ಹೇಳುತ್ತಾರೆ. ಹೀಗಾಗಿ ರೈತರು ಗೊಂದಲದಲ್ಲಿದ್ದು ದರ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭಿಸಬೇಕು. ಇಲ್ಲದಿದ್ದರೆ ಕಾರ್ಖಾನೆ ಪ್ರಾರಂಭ ಮಾಡಲು ಬಿಡುವದಿಲ್ಲ ಎಂದರು.ಶ್ರೀಶೈಲ ಮದರಿ ಮಾತನಾಡಿ, ಜಿಲ್ಲಾಧಿಕಾರಿಗಳು ಮೊದಲು ದರ ಘೋಷಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿಯವರ ಮೂಲಕಸೌಕರ್ಯ ಅಭಿವೃದ್ಧಿ ಯೋಜನೆಯಡಿ ನಗರಾಭಿವೃದ್ಧಿ ಇಲಾಖೆಯಡಿ ವಿವಿಧ ಸಮುದಾಯ ಭವನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ವಾ.ನಂ.2ರ ದರ್ಗಾದ ಕರಿಸಿದ್ದೇಶ್ವರ ದೇವಸ್ಥಾನ ಹತ್ತಿರ ರೂ.50 ಲಕ್ಷ, ವಾ.ನಂ.13ರ ಶಹಾಪೇಟೆಯ ಮಹಾದೇವಪ್ಪ ದೇವಸ್ಥಾನ ಹತ್ತಿರ ರೂ.25 ಲಕ್ಷ, ವಾ.ನಂ.8ರ ವೆಂಕಟರಮಣ ಗಲ್ಲಿಯ ವೆಂಕಟೇಶ್ವರ ದೇವಸ್ಥಾನ ಹತ್ತಿರ ರೂ.25 ಲಕ್ಷ, ವಾ.ನಂ.2ರ ಶಕ್ತಿನಗರದ ಶಿವಶಿಂಪಿ ಸಮಾಜದ ಸಮುದಾಯ ಭವನ ರೂ.25 ಲಕ್ಷ, ವಾ.ನಂ.17 ರಂಭಾಪುರ ರಾಮಲಿಂಗೇಶ್ವರ ದೇವಸ್ಥಾನ ಹತ್ತಿರ ರೂ.15 ಲಕ್ಷ, ವಾ.ನಂ.22 ವಿವೇಕನಗರದ ಜಾಗೃತ ಹನುಮಾನ ದೇವಸ್ಥಾನದ ಹತ್ತಿರ ರೂ.15 ಲಕ್ಷ, ವಾ.ನಂ.24ರ ಕಮಲಖಾನ ಬಜಾರ್ ಈಶ್ವರಲಿಂಗ ದೇವಸ್ಥಾನ ಹತ್ತಿರ ರೂ.15 ಲಕ್ಷ, ವಾ.ನಂ.23ರ ಪಿಡಿಜೆ ಸ್ಕೂಲ್ ಹತ್ತಿರದ ಅಖಿಲ ಭಾರತ ಮಧ್ವ ಮಹಾಂಡಳ ರೂ.25 ಲಕ್ಷ, ವಾ.ನಂ.21ರ ಗುರುಪಾದೇಶ್ವರ ನಗರದ ಯೋಗಿಶ್ವರ ಯಾಜ್ಞವಲ್ಕ್ಯ ಮಂದಿರ ನಿರ್ಮಾಣ ರೂ.15 ಲಕ್ಷ, ವಾ.ನಂ.2ರ ಗಂಗಾಪುರಂ ಬಡಾವಣೆಯ ಮರ್ಚಂಟ್ಸ್…

Read More

ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಪ್ರಕರಣ | ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅಮಾಯಕ ಜನರ ಪ್ರಾಣ ತೆಗೆದ ಮಾನವೀಯತೆಯ ವಿರೋಧಿಗಳಾದ ಭಯೋತ್ಪಾದಕರಿಗೆ ಜೈಲಿನಲ್ಲಿ ರಾಜಾತೀಥ್ಯ ನೀಡಿರುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.ಭಯೋತ್ಪಾದನ ಚಟುವಟಿಕೆಗಳಲ್ಲಿ ಭಾಗಿಯಾದ ಉಗ್ರರಿಗೆ ಜೈಲಲ್ಲಿ ರಾಜಾತಿಥ್ಯ ನೀಡುವುದರಿಂದ ಇನ್ನೊಬ್ಬ ಉಗ್ರ ತಯಾರಾಗಲು ಪ್ರಚೋದನೆ ನೀಡಿದಂತಾಗುತ್ತದೆ, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜೈಲಿನಲ್ಲಿ ಉಗ್ರರಿಗೂ ರಾಜಾತೀಥ್ಯ ದೊರಕುವ ಮಟ್ಟಿಗೆ ವ್ಯವಸ್ಥೆ ಹಾಳಾಗಿದೆ, ಕೂಡಲೇ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಪಟ್ಟಣಶೆಟ್ಟಿ ಒತ್ತಾಯಿಸಿದರು.ಭಯೋತ್ಪಾದನಾ ಚಟುವಟಿಕೆ ಸೇರಿದಂತೆ ಗಂಭೀರ ಆರೋಪ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ರಾಜಾರೋಷವಾಗಿ ಮೊಬೈಲ್ ಬಳಕೆ ಹಾಗೂ ವಿಲಾಸಿ ಜೀವನದಲ್ಲಿ ತೊಡಗಿದ್ದಾರೆ, ಐಸಿಸ್ ಸಂಘಟನೆಯ ಸದಸ್ಯರು ಐಷಾರಾಮಿಯಾಗಿ ಎಲ್ಲ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೈನಿಕ ಶಾಲೆಯಲ್ಲಿ 10ನೇ ಅಕ್ಟೋಬರ್ 2025, ಸೋಮವಾರ ರಂದು ಸೈಬರ್ ಜಾಗೃತಿ ಕಾರ್ಯಕ್ರಮ ನೆರವೇರಿತು.ಇಂದಿನ ದಿನಮಾನದಲ್ಲಿ ಸೈಬರ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು ಸರ್ವರೂ ಅಂತರ್ಜಾಲದ ಬಳಕೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಬೇಕು ಎಂದು ಸಿ.ಇ.ಎನ್. ಸೈಬರ್ ಕ್ರೈಂ ಪೊಲೀಸ್ ಠಾಣೆ ವಿಜಯಪುರದ ಪೊಲೀಸ್ ಇನ್ಸ್ ಪೆಕ್ಟರ್ ರವಿ ಯಡವನ್ನವರು ಹೇಳಿದರು. ಬಿಜಾಪುರದ ಸೈನಿಕ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸೈಬರ್ ಅಪರಾಧಗಳು ಯಾವುದೇ ಗಡಿ ಹೊಂದಿಲ್ಲ, ಹಲವಾರು ಅನಕ್ಷರಸ್ಥರು ಹಾಗೂ ಅಕ್ಷರಸ್ಥರು ಸಹ ಈ ಒಂದು ಸೈಬರ್ ಅಪರಾಧ ಹಾಗೂ ವಂಚನೆಗೆ ಬಲಿಯಾಗಿರುವ ಅನೇಕ ಪ್ರಕರಣಗಳನ್ನು ಕಾಣಬಹುದಾಗಿದೆ. ಸೈಬರ್ ಅಪರಾಧಗಳು ಸವಾಲಾಗಿ ಪರಿಣಮಿಸಿವೆ. ‘ಇಂಟರ್ನೆಟ್’ ಹೊಂದಿರುವ ಸ್ಮಾರ್ಟ್ಫೋನ್ ಬಳಕೆ ಹೆಚ್ಚಾಗಿರುವ ಪರಿಣಾಮ ಅಪರಾಧ ಹಾಗೂ ವಂಚನೆ ಎಸಗಲು ಅಪರಾಧಿಗಳಿಗೆ ಆನ್ಲೈನ್ ನಲ್ಲಿ ಅನೇಕ ಸಾಧನಗಳು ಲಭ್ಯವಿವೆ. ವಂಚಕರು ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ಸೌಲಭ್ಯ ನೀಡುವ ಆಸೆ ಹುಟ್ಟಿಸಿ ವಂಚಿಸುವ ಪ್ರಕರಣಗಳು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ (ಚಮ್ಮಾರ) ಸಂಘ (ರಿ) ನಾಗರಭಾವಿ ಬೆಂಗಳೂರು.ಸಮಗಾರ ಹರಳಯ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ ರಾ. ಶಹಾಪೂರ ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಮಗಾರ ಹರಳಯ್ಯಸಮಾಜದ ತಾಲೂಕ ಅಧ್ಯಕ್ಷರನ್ನಾಗಿ ರಾಘವೇಂದ್ರ ಆನಂದ ಕೊಡಹೊನ್ನ ಸಾ|| ಅಹಿರಸಂಗ, ಇವರನ್ನುಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಅದೇ ರೀತಿಯಾಗಿ ಎಲ್ಲಾ ಪದಾಧಿಕಾರಿಗಳಾಗಿ ಆಯ್ಕೆಮಾಡಲಾಯಿತು. ಗೌರವ ಅಧ್ಯಕ್ಷರು: ಶಂಕ್ರಪ್ಪ ಸರ್ಜಾಪೂರ ಸಾ||ಸಾಲೋಟಗಿ, ಉಪಾಧ್ಯಕ್ಷರಾಗಿ: ಸಿದ್ದಪ್ಪಲಕ್ಷ್ಮಣ ಹೊನ್ನಕೇರಿ ಮತ್ತು ಪರಶುರಾಮ ಬಾಬುಕಸ್ವಾರ ಸಾಇಂಡಿ ಪರಮೇಶ್ವರ ಹಿ. ಕಟ್ಟಿಮನಿ ಸಾ||ಇಂಡಿ, ರಾಜುಕುಮಾರ ಲಕ್ಷಣ ಬಾಬುಕಸವಾರ, ಪ್ರಧಾನ ಕಾರ್ಯದರ್ಶಿ: ಸಿದ್ರಾಮ ಮ ಹೊನ್ನಕೋರೆಸಾ|| ಚಿಕ್ಕಬೇನೂರ, ಸಹಕಾರ್ಯದರ್ಶಿ: ಚಿದಾನಂದ ಕೊಂಜಾರೆ ಸಾಭತಗುಣಕಿ, ಖಜಾಂಚಿ ಶಿವಾನಂದಬಾಬುಕಸ್ವಾದ ಸಾಆಳೂರ, ಸಂಘಟನಾ ಕಾರ್ಯದರ್ಶಿ: ಹಣಮಂತ ಕಟ್ಟಿಮನಿ ಸಾ|| ಬಬಲಾದ, ಶ್ರೀಶೈಲವನಂಜಕರ ಸಾ|| ಅಥರ್ಗಾ, ಮಹಿಳಾ ಪ್ರತಿನಿದಿ: ಅನಿತಾ ಗಣೇಶ ವಾಘಮೋರೆ, ಇವರನ್ನು ಜಿಲ್ಲಾಅಧ್ಯಕ್ಷರು ಶ್ರೀನಿವಾಸಮೂರ್ತಿ ರಾ ಶಹಾಪೂರ ಹಾಗೂ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದಅಶೋಕ ಸೌದಾಗಾರ, ಜಿಲ್ಲಾ ಪದಾಧಿಕಾರಿಗಗಳು, ಶಂಕರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷರಿಗೆ ಸುಪ್ರೀಂಕೋರ್ಟ ಟಿಇಟಿ ಕಡ್ಡಾಯಗೊಳಿಸಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಶಿಕ್ಷಕರು ಇಇಡಿಎಸ್ ತಂತ್ರಾಂಶದಲ್ಲಿ ಮಾಹಿತಿ ತುಂಬಬೇಕಾಗಿದೆ ತಕ್ಷಣವೇ ಈ ಕಾರ್ಯವನ್ನು ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ ತಿಳಿಸಿದ್ದಾರೆ.ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ1ಲಕ್ಷ 22 ಸಾವಿರ ಜನ ಶಿಕ್ಷಕರು ಟಿಇಟಿ ಕುರಿತು ಇನ್ನೂ ಮಾಹಿತಿ ತುಂಬಿಲ್ಲ. ಕೇವಲ 10 ಸಾವಿರ ಜನ ಮಾತ್ರ ಟಿಇಟಿ ಸಂಬಂಧಿಸಿದ ಮಾಹಿತಿಯನ್ನು ತುಂಬಿದ್ದಾರೆ. ಇನ್ನೂ 1 ಲಕ್ಷ 22 ಸಾವಿರ ಜನ ಶಿಕ್ಷಕರು ಮಾಹಿತಿಯನ್ನು ತುಂಬಬೇಕಾಗಿದೆ. ತಕ್ಷಣ ತಮ್ಮ ತಮ್ಮ ಇಇಡಿಎಸ್ ತಂತ್ರಾಂಶದಲ್ಲಿ ಟಿಇಟಿ ಪರೀಕ್ಷೆ ಕುರಿತು ಮಾಹಿತಿ ತುಂಬುವುದರ ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳರವರ ಕಚೇರಿಯಲ್ಲಿ ತೆರಳಿ ಯಾರು ಟಿಇಟಿ ಪಾಸಾಗಿಲ್ಲ ಎಂಬ ಮಾಹಿತಿಯನ್ನು ತಕ್ಷಣ ಅಪಡೇಟ್ ಮಾಡಿಸಬೇಕು. ಸುಪ್ರೀಂ ಕೋರ್ಟಿಗೆ ಲಕ್ಷಾಂತರ ಜನ ಶಿಕ್ಷಕರ ಅಂಕಿ ಅಂಶಗಳ ಮೂಲಕ ದಾವೆ ಸಲ್ಲಿಸಬೇಕಾಗಿದೆ. ಇದು ಅತ್ಯಂತ ತುರ್ತು ಮಾಹಿತಿಯಾಗಿರುವುದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೀಸಲಾತಿ ಗೊಂದಲ ಶೀಘ್ರ ನಿವಾರಿಸಿ ರಾಜ್ಯದ ನಾನಾ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಜತೆಗೆ ವಯೋಮಿತಿ ಸಡಿಲಗೊಳಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.ಗ್ರಾಮೀಣ ಭಾಗದ ಬಡ ನಿರುದ್ಯೋಗಿಗಳು ಸರ್ಕಾರಿ ನೌಕರಿ ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು, ವಯಸ್ಸಾದ ತಂದೆ-ತಾಯಿ ಹಾಗೂ ಕುಟುಂಬ ವರ್ಗದವರನ್ನು ಬಿಟ್ಟು ದೂರದ ಬೆಂಗಳೂರು, ಧಾರವಾಡ ಹಾಗೂ ವಿಜಯಪುರದಂತಹ ನಗರಗಳಲ್ಲಿ ಸಾಲ ಶೂಲ ಮಾಡಿದ್ದಾರೆ. 5-6 ವರ್ಷಗಳಿಂದ ಬಾಡಿಗೆ ಮನೆ, ಪಿಜಿಗಳಲ್ಲಿದ್ದು, ಕಷ್ಟ ಪಟ್ಟು ಹಗಲಿರುಳು ಓದುತ್ತಿದ್ದಾರೆ.ಅಲ್ಲದೆ ಕಳೆದ ಎರಡು ವರ್ಷಗಳಿಂದ ಒಳ ಮೀಸಲಾತಿ ಜಾರಿ ವಿಳಂಬದಿಂದಾಗಿ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಡೆ ಹಿಡಿದಿರುವುದರಿಂದ ಪಿಜಿ ರೂಮುಗಳ ಬಾಡಿಗೆಯನ್ನು ಕಟ್ಟಲಿಕ್ಕಾಗದೇ ಊಟ ಮಾಡುವುದಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ‌.‌ಹೊಸ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ ಯಾವುದೇ ನೇಮಕಾತಿಯಿಲ್ಲದೇ ಇರುವುದರಿಂದ ಲಕ್ಷಾಂತರ ಯುವಕರು ತಮ್ಮ ಬದುಕಿನ ಭರವಸೆ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ 11-11-2025 ಮಂಗಳವಾರದಂದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.ಕಾಲೇಜಿನ ಐಕ್ಯೂಎಸಿ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕೋಶ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ `ನಿಮ್ಮ ಧ್ವನಿ-ನಿಮ್ಮ ಹಕ್ಕು’ ಕುರಿತು ಕಾನೂನು ಜಾಗೃತಿ ಮೂಡಿಸಿ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಸವಿತಾ ಶಾಸ್ತ್ರಿಮಠ ಮಾತನಾಡಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಡಾ.ರಾಜೇಶ್ವರಿ ಪುರಾಣಿಕ, ಪ್ರೊ.ಆರ್.ಆರ್. ಹಟಗಾರ್, ಪ್ರೊ.ಪವನಕುಮಾರ್ ಮಹೀಂದ್ರಕರ, ಗಾಯತ್ರಿ ಗೌಡರ, ಲಕ್ಷ್ಮಿ ಪಟ್ಟಣಶೆಟ್ಟಿ, ಪಿಒಎಸ್‌ಎಚ್ ಸೆಲ್‌ನ ಅಧ್ಯಕ್ಷೆ ಪ್ರೊ.ಆರ್.ಡಿ.ಜೋಶಿ, ಭಾರತಿ ಹೊನ್ನಳ್ಳಿ, ವಿಜಯಪುರದ ಮಕ್ಕಳ ಸಹಾಯವಾಣಿ 1098/112 ರ ಕೌನ್ಸೆಲರ್ ನೀಲಮ್ಮ ಅರಳಗುಂಡಗಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More