Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಚಕ್ಕೋಡನಹಳ್ಳಿ ಗ್ರಾಮದಲ್ಲಿ ಶ್ರೀ ಕಾಳಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಕಾಳಮ್ಮ ದೇವಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಬೀದಿಗಳನ್ನು ವಿದ್ಯುತ್ ದೀಪಗಳಿಂದ, ಹೂಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು. ಮೂರು ದಿನಗಳ ಕಾಲ ನಡೆದ ದೇವಿಯ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಸಾಕ್ಷಿಯಾದರು.ಇತಿಹಾಸ ಹಿನ್ನೆಲೆಯುಳ್ಳ ಕಾಳಮ್ಮ ದೇವಸ್ಥಾನಕ್ಕೆ ಶುಕ್ರವಾರ ಹಿರೇಹಳ್ಳಿ ಗ್ರಾಮಸ್ಥರು ಸೊಪ್ಪು ತಂದು ಚಪ್ಪರ ಹಾಕಿದರು. ಶನಿವಾರ ಸೋನಹಳ್ಳಿ ಕೆರೆಯಲ್ಲಿ ಕಾಳಮ್ಮ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸತ್ತಿಗೆ, ಡೊಳ್ಳು ಕುಣಿತ, ವಾದ್ಯಗೋಷ್ಠಿ ಸೇರಿದಂತೆ ಕಲಾತಂಡಗಳೊಂದಿಗೆ ಕೆರೆಯಿಂದ ಕಾಳಮ್ಮ ದೇವಸ್ಥಾನದವರೆಗೂ ತಾಯಿಯ ಮೆರವಣಿಗೆ ಮಾಡಿ ದೇವಸ್ಥಾನದಲ್ಲಿ ಪೂಜಿಸಲಾಯಿತು. ಭಾನುವಾರ ಮುಂಜಾನೆ ಮತ್ತೆ ಕೆರೆಯಲ್ಲಿ ಕಾಳಮ್ಮ ತಾಯಿ ವಿಗ್ರಹವನ್ನು ಶುದ್ಧಗೊಳಿಸಿ, ಹೂವಿನ ಅಲಂಕಾರ ಮಾಡಿ ಪೂಜಿಸಲಾಯಿತು. ಬಳಿಕ ಕೆರೆಯಿಂದ ದೇವಸ್ಥಾನದವರೆಗೂ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮಾಡಲಾಯಿತು. ಈ ವೇಳೆ ಸಾವಿರಾರು ಮಹಿಳಾ ಭಕ್ತಾದಿಗಳು ತಂಬಿಟ್ಟು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಈ ದೃಶ್ಯವನ್ನು ನೋಡುವುದಕ್ಕೆ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಎ.ಕೆ.ನಂದಿ ಕಾಲೇಜಿನಲ್ಲಿ ಆಲಮೇಲ ತಾಲ್ಲೂಕಿನ 2027ರ ಮೊದಲ ಹಂತದ ಜನಗಣತಿ ಕಾರ್ಯದ ಮೇಲ್ವಿಚಾರಕರರಿಗೆ ಹಾಗೂ ಗಣತಿದಾರರಿಗೆ 3 ದಿನದ ತರಬೇತಿಯನ್ನು ಪ್ರಾರಂಭಿಸಲಾಯಿತು.ಈ ವೇಳೆ ತರಬೇತಿ ಕೇಂದ್ರವನ್ನು ಭೇಟಿ ನೀಡಿ ಮಾತನಾಡಿದ ತಹಶಿಲ್ದಾರರರು ಎಮ್.ಅರಕೇರಿ ರವರು ದೇಶದ ಮಹತ್ವಾಕಾಂಕ್ಷೆ ಜನಗಣತಿ 2027 ರ ಮೊದಲ ಹಂತದ ಸಮೀಕ್ಷೆ ಎಪ್ರಿಲ್ 16 ರಿಂದ ಜನಗಣತಿ ಮನೆಗಳ ಭೌತಿಕ ಸ್ಥಿತಿಗತಿಗಳನ್ನು 33 ಸರಳ ಪ್ರಶ್ನೆಗಳೊಂದಿಗೆ ಇದೆ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲು ಮನೆ ಮನೆಗೆ ತೆರಳಿ ಗಣತಿ ಕಾರ್ಯ ಪ್ರಾರಂಭಗೊಳ್ಳಲಿದೆ. ಈ ಮಹತ್ವದ ಕಾರ್ಯದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಬರುವ ಹತ್ತು ವರ್ಷಗಳಿಗೆ ಸರಕಾರದ ನೀತಿ ಆಯೋಗಗಳಿಗೆ, ವಿವಿಧ ಯೋಜನೆಗಳಿಗೆ ಮತ್ತು ದೇಶದ ಪ್ರಜೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಸರಿಯಾದ ಅಂಕಿ ಅಂಶಗಳನ್ನು ನೀಡಬೇಕು ಎಂದು ತಿಳಿಸಿದರು.ಜನಗಣತಿ ಸಮೀಕ್ಷೆಗೆ ನಿಯುಕ್ತಿ ಆದ ಸಿಬ್ಬಂದಿ ಯಾರಾದರೂ ತರಬೇತಿಗೆ ಗೈರು ಉಳಿದರೆ ಅಂತಹವರ ವಿರುದ್ಧ ಕ್ರಮ ಕೈಗೊಂಡು ಶಿಸ್ತು ಕ್ರಮ ಜರುಗಿಸಲಾಗುವುದು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶ್ರೀ ಶಾಂತಿನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿನ್ನರ ಉತ್ಸವ ಕಾರ್ಯಕ್ರಮವು ಅತ್ಯಂತ ವಿಜ್ರಮಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾರ್ಥಿನಿಯಾಗಿ ಸೃಷ್ಟಿ ನರಸಗೊಂಡ ಹಾಗೂ ಆದರ್ಶ ವಿದ್ಯಾರ್ಥಿಯಾಗಿ ನಿಖಿಲಕುಮಾರ ಶಿಂಧೆ ಆಯ್ಕೆಯಾಗಿದ್ದು, ಚೀಟಿ ಹಾರಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಶಾಲೆಯ ಕಾರ್ಯಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯೋಪಾಧ್ಯಾಯರು, ಕಾರ್ಯನಿರ್ವಾಹಕರು ಹಾಗೂ ಶಿಕ್ಷಕರ ಬಳಗವು ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಯೂ ಗಮನ ಸೆಳೆಯಿತು. 5ನೇ ತರಗತಿ ವಿದ್ಯಾರ್ಥಿ ಸೈಯದ್ ಉಜೇರ್ ಜುನೇದಕರ ಕ್ರಿಕೆಟ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, 4ನೇ ತರಗತಿ ವಿದ್ಯಾರ್ಥಿ ಸಮದ್ ಜುನೇದಕರ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಶಾಲೆಯ ಮುಖ್ಯ ಗುರುಮಾತೆ ಜ್ಯೋತಿ ಚೌಗಲೆ ಅವರು ಮಾಹಿತಿ ನೀಡುತ್ತಾ, “ವಿದ್ಯಾರ್ಥಿಗಳ ಸಾಧನೆ ನಮ್ಮ ಶಾಲೆಯ ಗೌರವವನ್ನು ಹೆಚ್ಚಿಸಿದೆ. ಅವರ ಪರಿಶ್ರಮಕ್ಕೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಕಾಲೇಜಿನ 2024-25ನೇ ಸಾಲಿನಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಪ್ರಶಿಕ್ಷಣಾರ್ಥಿಗಳು ಮೂರು ರ್ಯಾಂಕ್ ಪಡೆದಿದ್ದಾರೆ. ವಿಶ್ವವಿದ್ಯಾಲಯ ಕೊಡಲ್ಪಡುವ ಮೂರೂ ರ್ಯಾಂಕ್ ಗಳನ್ನು ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಸುಷ್ಮಾ ತಂಬಾಕು ಸುವರ್ಣ ಪದಕದೊಂದಿಗೆ ಪ್ರಥಮ ರ್ಯಾಂಕ್, ಅಮುಲ ಗುಲಗಾಂವಿ ದ್ವಿತೀಯ ರ್ಯಾಂಕ್, ರಮೇಶ ಅಂಬಿ ತೃತೀಯ ರ್ಯಾಂಕ್ ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ರ್ಯಾಂಕ್ ಬಂದ ಪ್ರಶಿಕ್ಷಣಾರ್ಥಿಗಳಿಗೆ ಬಿ.ಎಲ್.ಡಿ.ಇ ಅಂಗ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಶ್ರೀಕಾಂತ ಲಗಳಿ, ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಅರುಣಕುಮಾರ ಶಹಾ, ಪ್ರಾಂಶುಪಾಲರಾದ ಪ್ರೊ.ಕೆ ಜೆ. ಜೀರಗಾಳಿ, ಉಪನ್ಯಾಸಕ ವೃಂದ, ಪ್ರಶಿಕ್ಷಣಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ತಕ್ಷಣ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿ ಮೂಲಕ ಸಚಿವರಿಗೆ ಶಿವಾನಂದ ಬೋದಲಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಸಮೀಪ ವಿಜಯಪುರ–ಜಮಖಂಡಿ ಮುಖ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಎಡ ಹಾಗೂ ಬಲ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಟ್ಟಂಗಿ ಭಟಿಗಳಿಂದ ಸಾರ್ವಜನಿಕರ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಶಿವಾನಂದ ಬೋದಲಿ ಆರೋಪಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ನಗರದ ತಾಲೂಕು ಆಡಳಿತ ಭವನದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ ಅವರ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಟ್ಟಂಗಿ ಭಟಿಗಳಿಂದ ಹೊರಬರುವ ದೂಳು, ಹೊಗೆ ಹಾಗೂ ದುರ್ವಾಸನೆಯಿಂದ ವಯೋವೃದ್ಧರು ಮತ್ತು ಚಿಕ್ಕಮಕ್ಕಳು ನಿರಂತರವಾಗಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಜೊತೆಗೆ ಭಾರಿ ಪ್ರಮಾಣದ ವಾಹನ ಸಂಚಾರದಿಂದ ಶಾಲಾ ಮಕ್ಕಳಿಗೆ ರಸ್ತೆ ದಾಟಲು ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದರು.ಇನ್ನು ಸುತ್ತಮುತ್ತಲಿನ ಕೃಷಿ ಜಮೀನುಗಳ ಮೇಲೆ ದೂಳು ಜಮೆಯಾಗುವುದರಿಂದ ಬೆಳೆಗಳು ಹಾನಿಗೊಳಗಾಗಿ ಇಳುವರಿ ಕಡಿಮೆಯಾಗುತ್ತಿದೆ. ಭಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ…
ವಿಜಯಪುರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 14 ಜನರಲ್ಲಿ ಮೂವರ ಸಾವು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ 14 ಜನರಲ್ಲಿ ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಸಂಭವಿಸಿದ ದಾರುಣ ಘಟನೆಯಲ್ಲಿ ಮೂವರು ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತರಾಗಿದ್ದಾರೆ.ಒಟ್ಟು 14 ಜನರ ತಂಡ ವಿಜಯಪುರಕ್ಕೆ ಪ್ರವಾಸಕ್ಕೆ ಆಗಮಿಸಿದ್ದು, ಕೆರೆಯ ಬಳಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.ನೀರಿನಲ್ಲಿ ಇಳಿದಿದ್ದ ಬಾಲಕ ಹೈದರ್ ಪಾಶಾ ಮುಳುಗುತ್ತಿದ್ದಂತೆ, ಆತನ ರಕ್ಷಣೆಗೆ ಅಬ್ದುಲ್ ಖುದ್ದುಸ್ ಹಾಗೂ ಮತ್ತೊಬ್ಬರು ಮುಂದಾಗಿದ್ದಾರೆ. ಆದರೆ ದುರದೃಷ್ಟವಶಾತ್ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ನೀರಿನಿಂದ ಹೊರತೆಗೆದರು. ಬಾಲಕ ಮಹಮ್ಮದ್ ಹಯಾತ್ ಹಾಗೂ ಹೈದರ್ ಪಾಶಾ ಸ್ಥಳದಲ್ಲೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ವತಿಯಿಂದ ಏಪ್ರಿಲ್ 11 ಶನಿವಾರ ದಂದು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರರ್ಣ ಅನುಸಂಧಾನ-11 ನಡೆಯಲಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ.ಪಿ. ಜಿ. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ,ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ, ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ, ನವದೆಹಲಿಯ ಬೋರ್ಡ ಆಫ್ ಆಯುರ್ವೇದ ಎನ್. ಸಿ. ಐ. ಎಸ್. ಎಂ ಅಧ್ಯಕ್ಷ, ಡಾ. ಅಲ್ಲಮಪ್ರಭು ಗುಡ್ಡಾ, ಮಾಜಿ ಅಧ್ಯಕ್ಷ ಡಾ. ಬಿ. ಶ್ರೀನಿವಾಸ ಪ್ರಸಾದ ಮುಂತಾದವರು ಉಪಸ್ಥಿತರಿರಲಿದ್ದಾರೆ. ರಾಜ್ಯದಿಂದ ನಾನಾ ಭಾಗಗಳಿಂದ…
ಲೇಖನ.- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರುಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ್ಯ ನಿರ್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ ಶಕ್ತಿ ಇದೆ ಎನ್ನುವುದು ಈಗಾಗಲೇ ಮಹಾನ ಸಾಧಕರು ತೋರಿಸಿಕೊಟ್ಟಿದ್ದಾರೆ ಎಷ್ಟು ಶ್ರಮವಹಿಸಿದರೂ ಅಷ್ಟೇ ಬದುಕು ಅದೃಷ್ಟದಾಟ. ಅದೃಷ್ಟದ ಮುಂದೆ ಪರಿಶ್ರಮವೂ ಒಂದು ಆಟಿಗೆಯಂತೆ.ಎಂದು ನಂಬಿ ಜೀವನವನ್ನು ಅದೃಷ್ಟದ ಕೈಗೆ ಕೊಟ್ಟು ಹಗಲು ರಾತ್ರಿ ಹಲಬುವವರ ಸಂಖ್ಯೆಯೇನೂ ಕಮ್ಮಿಯಿಲ್ಲ. ‘ಪರಿಸ್ಥಿತಿಗೆ ಅಂಜಲಾರೆ. ನಾನೇ ಆ ಪರಿಸ್ಥಿತಿಯ ನಿರ್ಮಾತೃ.’ ಎಂಬ ನೆಪೋಲಿಯನ್ ಬೊನಾಪಾರ್ಟೆ ಮಾತಿಗೆ ಅಮೂಲ್ಯವಾದ ಬೆಲೆ ನೀಡಿದ ಮಹಾ…
ವಿಜಯಪುರ ಜಿಲ್ಲೆಯಲ್ಲಿ ವಿದೇಶಿ ಮಾವಿನಹಣ್ಣು ಬೆಳೆದು ಯಶಸ್ವಿಯಾದ ಪ್ರಥಮ ಮಹಿಳೆ | ೧ ಕೆಜಿ ಮಿಯಾ ಜೋಕಿ ಮಾವಿಗೆ ರೂ.೨.೫ ಲಕ್ಷ ರೂ ಬೇಡಿಕೆ! ಉದಯರಶ್ಮಿ ದಿನಪತ್ರಿಕೆ ಇಂಡಿ: ಹಲವು ವರ್ಷಗಳಿಂದ ಬಂಜರು ಬಿದ್ದ ಭೂಮಿಯಲ್ಲಿ ಸಧ್ಯ ಮಿಯಾ ಜೋಕಿ, ಬನಾನಾ ಮಾವಿನ ಹಣ್ಣು ಹಾಗೂ ವಾಟರ್ ಆಪಲ್ ಸೇರಿದಂತೆ ಇತರೆ ಹಣ್ಣುಗಳು ನಳನಳಿಸುತ್ತಿವೆ. ಇದು ಸಾಧ್ಯವಾದದ್ದು ಸಾವಯುವ ಕೃಷಿ ಪದ್ದತಿಯಿಂದ ಸಾಧಿಸಿ ತೋರಿಸಿದವರು ಇಂಡಿ ನಗರದ ರಾಜಶ್ರೀ ಅನಂತ ಜೈನ.ಇಂಡಿ ನಗರದ ರಾಜಶ್ರೀಯವರು ಪತಿ ಅನಂತ ಅವರ ಸಹಾಯದಿಂದ ೦.೨೫ ಎಕರೆ ಅಂದರೆ ಒಂದು ನಾಲ್ಕನೆಯ ಅಂಶ ಎಕರೆ ಹೊಲದಲ್ಲಿ ವಿದೇಶಿ ಮಿಯಾಜೋಕಿ ಮಾವಿನ ಹಣ್ಣು , ಒಂದು ನಾಲ್ಕನೆಯ ಅಂಶ ಹೊಲದಲ್ಲಿ ವಿದೇಶಿ ಬನಾನಾ ಮಾವಿನ ಹಣ್ಣು, ಒಂದು ನಾಲ್ಕನೆಯ ಅಂಶ ಹೊಲದಲ್ಲಿ ವಿದೇಶಿ ವಾಟರ್ ಆಪಲ್ ಸೇರಿದಂತೆ ೪೦ ರೀತಿಯ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಅದರಲ್ಲಿ ೧೦ ಮಾವಿನ ಹಣ್ಣು ಮತ್ತು ಎರಡು ಮಾವಿನಹಣ್ಣು ವಿದೇಶ ತಳಿಯಿಂದ ಕೂಡಿವೆ.ದೇಶ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಜನರ ಊರಿಗೆ ಉತ್ತಮ ಸಾರಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಇಂಡಿ ಬಸ್ ಘಟಕಕ್ಕೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ವೈ ಪಾಟೀಲ ಭೇಟಿ ನೀಡಿ ಸಾರಿಗೆ ಘಟಕದಲ್ಲಿಯ ಸೌಲಭ್ಯಗಳು ಹಾಗೂ ಕಾರ್ಯಾಚರಣೆ ಸ್ಥಿತಿಗತಿಗಳನ್ನು ಸಮಗ್ರವಾಗಿ ಪರಿಶೀಲಿಸಿದರು.ಈ ಭೇಟಿ ವೇಳೆ ಸಾರ್ವಜನಿಕ ಸೇವೆಗೆ ಸಂಬಂಧಿತ ಕೆಲವು ಗಂಭೀರ ಸಮಸ್ಯೆಗಳು ಬೆಳಕಿಗೆ ಬಂದಿದ್ದು ಜನರ ಅನುಕೂಲತೆ ಮತ್ತು ಪ್ರಯಾಣದ ಭದ್ರತೆಯನ್ನು ಮೊದಲ ಆಧ್ಯತೆಯಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದರು.ಸಾರ್ವಜನಿಕರಿಗೆ ಗುಣಮಟ್ಟದ ವಿಶ್ವಾಸಾರ್ಹ ಹಾಗೂ ಸಮಯೋಚಿತ ಸಾರಿಗೆ ಸೇವೆ ಒದಗಿಸುವದು ನಮ್ಮ ಪ್ರಮುಖ ಬದ್ದತೆಯಾಗಿದೆ. ಸಮಸ್ಯೆ ತ್ವರಿತ ನಿವಾರಣೆ ಮಾಡಿ ಸೇವೆ ವೇಗಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಘಟಕ ವ್ಯವಸ್ಥಾಪಕ ರೇವಣಸಿದ್ದ ಖೈನೂರ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸೇವಾ ಸುಧಾರಣೆಗೆ ಕೈ ಜೊಡಿಸುವ ಸಂಕಲ್ಪ ವ್ಯಕ್ತಪಡಿಸಿದರು..
