Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ, ಫಾರ್ಮ್ ಹೌಸ್, ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ, ಫಾರ್ಮ್ ಹೌಸ್, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ₹2.5 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕೋರ್ಟ್ ವಾರೆಂಟ್ ಪಡೆದು ಮಂಗಳವಾರ ಆಪಾದಿತ ಅಧಿಕಾರಿಗೆ ಸಂಬಂಧಿಸಿದ ಬಸವನ -ಬಾಗೇವಾಡಿ ತಾಲ್ಲೂಕಿನ ಕಣಕಾಲ ಗ್ರಾಮದ ಫಾರ್ಮ್ ಹೌಸ್, ಮುದ್ದೇಬಿಹಾಳದಲ್ಲಿರುವ ಮಾವನ ಮನೆ ಮತ್ತು ಕಚೇರಿ ಹಾಗೂ ವಿಜಯಪುರದ ನವರಸಪುರದಲ್ಲಿರುವ ಮನೆ, ಬ್ಯಾಂಕ್ ಲಾಕರ್ನಲ್ಲಿ ಶೋಧ ನಡೆಸಿದಾಗ ₹29.42 ಲಕ್ಷ ನಗದು, ಬೆಳ್ಳಿ, ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಅಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ಸೇರಿದಂತೆ ಅಂದಾಜು ₹2.5 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ ಎಂದು…
ವಿಜಯಪುರ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತ್ಯರ್ಥಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳಲ್ಲಿರುವ ದಾಖಲೆಗಳೊಂದಿಗೆ ಸರಿ ಹೊಂದಿಸಿಕೊಂಡು, ನಿಯಮಾನುಸಾರ ಕ್ರಮವಹಿಸಿ,ಅಧಿಕಾರಿಗಳು…
ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಸನ್ನಿವೇಶದಲ್ಲಿ ದೊಡ್ಡ ದೊಡ್ಡ ಉದ್ಯಮಿಗಳು ಯಶಸ್ವಿಯಾಗುವುದಕ್ಕೆ ಆಧ್ಯಾತ್ಮಿಕ ಸಾಧನೆಯು ಅತ್ಯಂತ ಸಹಾಯಕಾರಿಯಾಗಿದೆ ಎಂದು ಬೆಳಗಾವಿಯ ರಾಮಕೃಷ್ಣ ಮಿಶನ ಆಶ್ರಮದ ಪರಮ ಪೂಜ್ಯ ಮೋಕ್ಷಾತ್ಮಾನಂದಜಿ ಮಹಾರಾಜ್ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದ ಅವರು; ವಿವೇಕವೆಂದರೆ ಮಾತೃತ್ವ, ಭ್ರಾತೃತ್ವ ಹಾಗೂ ಸಮಾನತೆಯ ತತ್ವವಾಗಿದೆ. ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡ ನರೇಂದ್ರರು ಸ್ವಾಮಿ ವಿವೇಕಾನಂದರಾದರು. ಹೀಗಾಗಿ ವಿದ್ಯಾರ್ಥಿಯಲ್ಲಿಯ ವಿವೇಕ ಜಾಗೃತವಾದರೆ ಅವರೂ ಸಹ ವಿವೇಕಾನಂದರಾಗಬಹುದು. ಅದಕ್ಕಾಗಿ ಏಕಾಗ್ರತೆಯನ್ನು ಸಾಧಿಸಬೇಕು. ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾಡುವ ಕಾರ್ಯವನ್ನು ಪರಿಪೂರ್ಣ ಹಾಗೂ ದೋಷರಹಿತವಾಗಿ ಮಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಅದಕ್ಕೆ ಆಧ್ಯಾತ್ಮಿಕ ಸಾಧನೆಯು ನೆರವಾಗುತ್ತದೆ. ನಿರಂತರ ಧ್ಯಾನದಿಂದ ನಿತ್ಯವೂ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಈ ಕಾರಣದಿಂದಾಗಿಯೆ ಉದ್ದಿಮೆದಾರರು ಆಧ್ಯಾತ್ಮಿಕ ಸಾಧನೆಯನ್ನು ಅಳವಡಿಸಿಕೊಂಡು ಯಶಸ್ವಿ ಉದ್ದಿಮೆದಾರರಾಗಿ ಬೆಳೆದಿದ್ದಾರೆ. ಅದೇ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ವಾಣಿಜ್ಯ ಮಳಿಗೆಯಲ್ಲಿರುವ ಬಸವನಬಾಗೇವಾಡಿ ತಾಲೂಕು ಒಕ್ಕಲುತನ ಹಿಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ ಕಚೇರಿ ಮುಂಭಾಗ ಮಂಗಳವಾರ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಮಾರಾಟದ ನೋಂದಣಿ ಮಾಡಲು ಅಪಾರ ಸಂಖ್ಯೆಯ ರೈತರು ಸರದಿಯಲ್ಲಿ ನಿಂತಿರುವದು ಕಂಡುಬಂದಿತ್ತು.ಬಸವನಬಾಗೇವಾಡಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾರಾಟ ಕೇಂದ್ರದಲ್ಲಿ ಇಂದು ನೋಂದಣಿ ಆರಂಭವಾಗುತ್ತಿದ್ದ ವಿಷಯ ಅರಿತ ರೈತ ಬಾಂಧವರು ಈ ಕಚೇರಿ ಮುಂಭಾಗ ಸೋಮವಾರ ರಾತ್ರಿಯಿಂದಲೇ ಠಿಕಾಣಿ ಹೂಡಿದ್ದರು. ಬೆಳಗ್ಗೆ 8.30 ಗಂಟೆಗೆ ಆರಂಭ ನೋಂದಣಿ ಆರಂಭವಾಗುವ ಮುನ್ನ ಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆ ರೈತ ಬಾಂಧವರು ಸರದಿಯಲ್ಲಿ ತಾ ಮುಂದು, ನಾ ಮುಂದು ಎಂದು ಗದ್ದಲ ಆರಂಭಿಸಿದರು. ಇದನ್ನು ಅರಿತ ಪೊಲೀಸ್ ಸಿಬ್ಬಂದಿಗಳು ರೈತರನ್ನು ಸರದಿಯಲ್ಲಿ ನಿಲ್ಲುವಂತೆ ಕ್ರಮ ಕೈಗೊಂಡರು.ಮಧ್ಯಾನ್ಹದವರೆಗೂ ರೈತರ ಸರದಿಯಲ್ಲಿ ನಿಂತು 112 ರೈತರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರು.ತಾಲೂಕಿಗೆ ಒಟ್ಟು 4,520 ಕ್ವಿಂಟಾಲೆ…
ಬಸವನಬಾಗೇವಾಡಿಯಲ್ಲಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರಿಂದ ತಹಸೀಲ್ದಾರಗೆ ಮನವಿ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮತಕ್ಷೇತ್ರದ ಕೊಲ್ಹಾರ ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ.ಯಿಂದ ಹೊರಹೋಗುವ ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯವನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರು ಸೋಮವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಕೂಡಗಿ ಎನ್.ಟಿ.ಪಿ.ಸಿ. ವಿದ್ಯುತ್ ಸ್ಥಾವರ ಇದೆ. ಈ ಸ್ಥಾವರದಲ್ಲಿ ಕಲ್ಲಿದ್ದಲನ್ನು ಸುಟ್ಟು ನಂತರ ಅದರಿಂದ ಬರುವ ಬೂದಿಯನ್ನು ಸ್ಥಾವರ ಟ್ಯಾಂಕರ್ ಮೂಲಕ ಬೇರೆ ಬೇರೆ ಕಡೆ ಕಾರ್ಖಾನೆಗಳಿಗೆ ಹೋಗುತ್ತಿದೆ. ಬಸವನಬಾಗೇವಾಡಿ ಪಟ್ಟಣದ ಮೂಲಕ ಹಾದು ಹೋಗುವ ಈ ವಾಹನಗಳಿಂದ ಪಟ್ಟಣದಲ್ಲಿ ತುಂಬಾ ವಾಯು ಮಾಲಿನ್ಯವಾಗುತ್ತಿದೆ. ಇದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದೀಗ ಚಳಿಗಾಲ ಮಿತಿಮೀರಿದ್ದರಿಂದಾಗಿ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂತಹದರಲ್ಲಿ ಬೂದಿ ತುಂಬಿದ ಈ ಟ್ಯಾಂಕರ್ ವಾಹನಗಳು ಹಾದು ಹೋಗುವಾಗ ಹಾರುವ ಬೂದಿಯ ಮೂಲಕ ಅಸ್ತಮಾ ಮತ್ತು ಉಸಿರಾಟದ ತೊಂದರೆ ಇರುವ ಜನರಿಗೆ ಆರೋಗ್ಯ ಹಾನಿ ಉಂಟು ಮಾಡುವ ಸಾಧ್ಯತೆಯಿದೆ. ಕೆಲವೊಂದು…
ಉದಯರಶ್ಮಿ ದಿನಪತ್ರಿಕೆ ಚಡಚಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಶಾಮನೂರ ಶಿವಶಂಕರಪ್ಪ ಮತ್ತು ವಚನ ಶಿಲಾ ಮಂಟಪದ ರೂವಾರಿಗಳು ಆದ ಇಂಗಳೇಶ್ವರ ವಿರಕ್ತಮಠದ ಶ್ರೀ ಮನಿಪ್ರ ಚೆನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದರ ನಿಮಿತ್ಯ ಚಡಚಣ ಪಟ್ಟಣದಲ್ಲಿ ವೀರಶೈವ ಮಹಾಸಭಾದ ವತಿಯಿಂದ ನುಡಿನಮನ ಕಾರ್ಯಕ್ರಮ ಸೋಮವಾರ ಪಟ್ಟಣದ ವೀರಕ್ತ ಮಠದಲ್ಲಿ ಜರುಗಿತು.ವೀರಶೈವ ಲಿಂಗಾಯತ ಮಹಾಸಭಾದ ಚಡಚಣ ತಾಲೂಕ ಘಟಕದ ಗೌರವ ಅಧ್ಯಕ್ಷರು ಮನಿಪ್ರ ಷಡಕ್ಷರಿ ಮಹಾಸ್ವಾಮಿಗಳು ಮಾತನಾಡಿ ಚೆನ್ನಬಸವ ಮಹಾಸ್ವಾಮಿಗಳು ಕಾಯಕ ಮತ್ತು ದಾಸೋಹದ ಸಿದ್ಧಾಂತವನ್ನು ತಮ್ಮ ಕೊನೆ ಉಸಿರು ಇರುವವರೆಗೂ ಪಾಲಿಸಿಕೊಂಡು ಬಂದವರು ಅವರ ನೆನಪು ಸದಾ ನಮಗೆ ಶ್ರೀರಕ್ಷೆ ಎಂದರು.ಅಧ್ಯಕ್ಷ ಸಂಗಮೇಶ ಅವಜಿ ಮಾತನಾಡಿ, ಶಾಮನೂರ ಶಿವಶಂಕರಪ್ಪ ನಮ್ಮನ್ನ ಅಗಲಿದ್ದು ನಮ್ಮ ಸಮಾಜಕ್ಕೆ ತುಂಬಲಾರದ ನಷ್ಠ ಆಗಿದೆ, ನೇರ ಮಾತುಗಳ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಅಜಾತಶತ್ರುಗಳಾಗಿ ದಾವಣಗೆರೆ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ ಮಾಡುವದರ ಮೂಲಕ ಜನ ಸಾಮಾನ್ಯರ ಬೆಳಕಾಗಿದ್ದರು ಎಂದರು.ಪ್ರೊ ರವಿ ಅರಳಿ, ವೀರಶೈವ ಲಿಂಗಾಯತ ಮಹಾಸಭಾ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಬಹುತೇಕ ಸೋಷಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ಹರಿದಾಡುತ್ತಿರುವ ಕಳ್ಳರ ಹಾವಳಿಯ ಸಿಸಿಟಿವ್ಹಿ ಫೂಟೇಜ್ನ ವಿಡಿಯೊ ಪಟ್ಟಣದ ಜನರಲ್ಲಿ ಭಯ ಮತ್ತು ಆತಂಕ ಹುಟ್ಟಿಸಿದೆ.ದಿ.20 ರಂದು ರಾತ್ರಿ 3.16 ಗಂಟೆಗೆ ಸಿಸಿ ಟಿವಿ ಫೂಟೇಜ್ನಲ್ಲಿ 6 ಕಳ್ಳರು ಪಟ್ಟಣದ ಶಿವಾಜಿ ವೃತ್ತದಲ್ಲಿ ಹತ್ತಳ್ಳಿ ಗ್ರಾಮದ ರಸ್ತೆಗೆ ಓಡಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಇವರೆಲ್ಲರೂ ಕಳ್ಳರಾಗಿದ್ದು, ಪೊಲೀಸ್ ವಾಹನದ ಸದ್ದು ಕೇಳಿ ಓಡಿ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಮರಡಿಯ ನೇಕಾರ ಕಾಲೊನಿಯಲ್ಲಿಯ 3 ಮನೆಗಳ ಕಳ್ಳತನ ನಡೆದಿದೆ ಮತ್ತು ಇಂದಿರಾನಗರದಲ್ಲಿ ಒಂದು ಮನೆ ಕಳ್ಳತನವಾಗಿವೆ, ಸಮೀಪದ ಶಿರಾಡೋಣ ಗ್ರಾಮದ ದೇವಸ್ಥಾನದಲ್ಲಿಯ ವಸ್ತುಗಳನ್ನು ಕಳ್ಳರು ಕದ್ದೋಯ್ದಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.ಈ ಮೊದಲು ಮರಡಿ ಮೇಲಿನ ಆದರ್ಶ ನಗರ ಮತ್ತು ಸಂಗಮೇಶ್ವರ ನಗರದ ಮಧ್ಯದಲ್ಲಿ ಇರುವ ಮನೆಯಲ್ಲಿ ನ.25 ರಂದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದರು, ಆದರೆ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಪೋಲೀಸರು ಬಂದು ಕಳ್ಳನನ್ನು ಹಾಗೂ…
ಸೈನಿಕ ಶಾಲೆ ಬಿಜಾಪುರ ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಂಗ್ ಕಮಾಂಡರ್ ಸುಮನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೈನಿಕ ಶಾಲೆ ಬಿಜಾಪುರದಲ್ಲಿ 22ನೇ ಡಿಸೆಂಬರ್ 2025, ಸೋಮವಾರ ರಂದು ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಿತು.ಬಿಜಾಪುರದ ಸೈನಿಕ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಮಾಂಡಿಂಗ್ ಆಫೀಸರ್, ವಿಂಗ್ ಕಮಾಂಡರ್ ಸುಮನ್ ಅಧಿಕಾರಿ ಯವರು ಉಪನ್ಯಾಸ ನೀಡಿದರು.ಸೈಬರ್ ವಾರ್ಫೇರ್ (Cyber Warfare) ಎಂದರೆ ರಾಷ್ಟ್ರಗಳು ಅಥವಾ ಸಂಘಟನೆಗಳು ಪರಸ್ಪರರ ಕಂಪ್ಯೂಟರ್ ವ್ಯವಸ್ಥೆಗಳನ್ನು ಗುರಿಯಾಗಿಸಿ ಮಾಡುವ ದಾಳಿ (ವೈರಸ್, ಡಿನಯಲ್-ಆಫ್-ಸರ್ವಿಸ್) ಮೂಲಕ ಮೂಲಸೌಕರ್ಯಗಳಿಗೆ ಹಾನಿ ಅಥವಾ ಅಡ್ಡಿಪಡಿಸುವುದು, ಹಾಗೂ ಸೈಬರ್ ಸೆಕ್ಯುರಿಟಿ (Cybersecurity) ಎಂದರೆ ಡಿಜಿಟಲ್ ವ್ಯವಸ್ಥೆಗಳು, ನೆಟ್ವರ್ಕ್ಗಳು ಮತ್ತು ಡೇಟಾವನ್ನು ಸೈಬರ್ ದಾಳಿಗಳಿಂದ ರಕ್ಷಿಸುವ ತಂತ್ರಜ್ಞಾನ, ಪ್ರಕ್ರಿಯೆ ಮತ್ತು ನೀತಿಗಳ ಸಮೂಹವಾಗಿದ್ದು ಇಂದಿನ ದಿನಮಾನದಲ್ಲಿ ಸೈಬರ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು ಸರ್ವರೂ ಅಂತರ್ಜಾಲದ…
ಯಾವುದೇ ಕಾರಣಕ್ಕೂ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಂಡ ಮಾಜಿ ಡಿಸಿಎಂ ಈಶ್ವರಪ್ಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವೇಷ ಭಾಷಣ ವಿರೋಧಿ ವಿಧೇಯಕ ಮಂಡಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಪುನ: ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಹವಣಿಸುತ್ತಿದೆ, ಹೀಗಾಗಿ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಬಾರದು, ಈ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸರ್ವಾಧಿಕಾರ ವರ್ತನೆ ತೋರಿದ ದಿ.ಇಂದಿರಾ ಗಾಂಧೀ ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ನಂತರ ಕಾಂಗ್ರೆಸ್ ಪಕ್ಷ ನೆಲಕಚ್ಚಿತು. ಈಗ ದ್ವೇಷ ಭಾಷಣ ವಿರೋಧಿ ಮಸೂದೆ ಹಿಂದೂ ನಾಯಕರನ್ನು ಹತ್ತಿಕ್ಕಲು ತಂದಿರುವ ಕರಾಳ ಶಾಸನ, ಪಾಕಿಸ್ತಾನ್ ಜಿಂದಾಬಾದ್ ಎನ್ನುವ ದುಷ್ಟರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅರೆಸ್ಟ್ ಮಾಡಿಲ್ಲ, ತಮಗೆ ಸರಿ ಕಾಣದವರನ್ನು ಅರೆಸ್ಟ್ ಮಾಡುವ ವ್ಯವಸ್ಥಿತ ಷಡ್ಯಂತ್ರಕ್ಕಾಗಿ ಕಾಂಗ್ರೆಸ್ ಈ ಕಾಯ್ದೆ ಜಾರಿಗೆ ತಂದಿದೆ ಎಂದು ದೂರಿದರು.ಹಿಂದೂ ನಾಯಕರನ್ನು, ಹಿಂದೂ ಸಂಘಟನೆಗಳನ್ನು…
ಹೋರಾಟಗಾರರ ದಿಕ್ಕು ತಪ್ಪಿಸುತ್ತಿರುವ ಕೆಲ ಬಿಜೆಪಿ ನಾಯಕರು | ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವ | ಸಚಿವ ಡಾ. ಎಂ.ಬಿ.ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವವಿದೆ, ಅವರು ನಮ್ಮವರು, ಆದರೆ ಹೋರಾಟಗಾರರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ನಾಯಕರು ಮೊದಲು ಹೋಗಿ ಪ್ರಧಾನಿ ಅವರನ್ನು ಖಾಸಗೀಕರಣದ ಪ್ರಶ್ನೆ ಮಾಡಲಿ, ಪಿಪಿಪಿ ಬಿಜೆಪಿ ಹಾಗೂ ಮೋದಿ ಅವರ ಕೂಸು, ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿಯ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಹೊರಡಿಸಲಾದ ಅಧಿಸೂಚನೆ ಮೊದಲಾದ ದಾಖಲಾತಿಗಳನ್ನು ಪ್ರದರ್ಶಿಸಿದರು. ಈ ಬಗ್ಗೆ ಸದನದಲ್ಲಿಯೂ ಬಿಜೆಪಿ ನಾಯಕರು ಬಿಜೆಪಿ ನಿಲುವಿನ ಬಗ್ಗೆ ಸ್ಪಷ್ಟಪಡಿಸಿದ್ದಾರೆ, ಆ ದಾಖಲಾತಿಯೂ ನನ್ನ ಬಳಿ ಇದೆ, ಇಷ್ಟೆಲ್ಲ ಇರುವಾಗ…
