Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇದೇ ಏ. ೧೪ ರಂದು ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.ಅಂದು ಬೆಳಗ್ಗೆ ೮ ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.ನಂತರ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಬುದ್ಧವಿಹಾರ ಜಲನಗರದಿಂದ ಪ್ರಾರಂಭಿಸಿ, ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ, ಬಾಗಲಕೋಟೆ ಕ್ರಾಸ್, ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಕೆ.ಸಿ.ಮಾರ್ಕೆಟ್, ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದವರೆಗೆ ನಡೆಯಲಿದೆ.ಬೆಳಿಗ್ಗೆ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬಸವನನಾಡು, ಸೂಫಿಸಂತರ ನೆಲೆಬೀಡು ಬೀದರನಲ್ಲಿ ಇದೇ 11 ಮತ್ತು 12 ರಂದು ಕೆಯುಡಬ್ಲ್ಯೂಜೆ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ಅವರುಸಿಎಂ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನ ನೀಡಿದರು.

Read More

ನಾಡಿನ ಕಾರ್ಯನಿರತ ಪತ್ರಕರ್ತರ ಭರವಸೆಯ ಬೆಳಕು KUWJ | ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಕರೆ ಉದಯರಶ್ಮಿ ದಿನಪತ್ರಿಕೆ ಶತಮಾನೋತ್ಸವದ ಕಡೆಗೆ ಚಲಿಸುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಲವತ್ತನೆ ರಾಜ್ಯಸಮ್ಮೇಳನ ಈ ಬಾರಿ ಮಹಾಮಾನವತಾವಾದಿ, ಕನ್ನಡ ನಾಡಿನ ಸಾಂಸ್ಕೃತಿಕ ನಾಯಕ ಬಸವಣ್ಣನ ಶರಣಭೂಮಿ ಬೀದರ್ ನಲ್ಲಿ ಏಪ್ರಿಲ್ 11 &12 ರಂದು ನಡೆಯುತ್ತಿದೆ.ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಮೊದಲ ದೇಣಿಗೆಯಿಂದ ಡಿ.ವಿ.ಗುಂಡಪ್ಪ (ಡಿವಿಜಿ) ಅವರಿಂದ ಸ್ಥಾಪಿತಗೊಂಡ ಮೈಸೂರು ಪತ್ರಕರ್ತರ ಸಂಘವು 1956ರಲ್ಲಿ ಏಕೀಕರಣದ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಂದಾಗಿ ಕಾರ್ಯನಿರತ ಪತ್ರಕರ್ತರ ಹಿತರಕ್ಷಣೆ ಮತ್ತು ಅಭ್ಯುದಯಕ್ಕಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ.ಸಂಘ ನಡೆದು ಬಂದ ಹಾದಿ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಆದರೆ ಕಳೆದ 10 ವರ್ಷಗಳಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಮೂಲ ಉದ್ದೇಶವನ್ನು ಈಡೇರಿಸಿಕೊಳ್ಳುವ ಹೆಜ್ಜೆಗಳಿಗೆ ಶಕ್ತಿ ಸಂಚಯವನ್ನು ಮಾಡಿಕೊಂಡಿದೆ.ಸಂಘವು ರಚನಾತ್ಮಕ ಮತ್ತು ಕ್ರೀಯಾತ್ಮಕವಾಗಿ ತನ್ನ ಸಂಘಟನಾ ಚಟುವಟಿಕೆಗಳನ್ನು…

Read More

ಚಡಚಣದಲ್ಲಿ ನಡೆದ ಟಾಸ್ಕಫೊರ್ಸ್ ಸಭೆಯಲ್ಲಿ ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಲ್ಲಿ ಬೇಸಿಗೆ ವೇಳೆ ರೈತರು, ಜನಸಾಮಾನ್ಯರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಸೂಚಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಟಾಸ್ಕಫೊರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಸಭೆಯಲ್ಲಿ ಮಾತನಾಡಿದ ಶಾಸಕ ಕಟಕಧೋಂಡ ಅವರು, ಮುಂದಿನ ಎರಡು ತಿಂಗಳು ಕಡುಬೇಸಿಗೆ ಸಮಯವಾದ್ದರಿಂದ ಕಾಲುವೆಗಳಿಗೆ ಬಿಟ್ಟ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು ಎಂದು ರೈತರಿಗೆ ಮನವಿ ಮಾಡಿಕೊಂಡರು.ಕೆಬಿಜೆಎನ್‌ಎಲ್ ಅಧೀಕ್ಷಕ ಅಭಿಯಂತರ ಮನೋಜ ಕಡಬಳ್ಳಿ ಮಾತನಾಡಿ, ತಾಲೂಕಿನ ಎಲ್ಲ ಅಧಿಕಾರಿಗಳು ನಮ್ಮ ಕೆಬಿಜೆಎನ್‌ಎಲ್‌ಗೆ ಸಹಕಾರಕೊಟ್ಟು ಎಲ್ಲರು ಕೂಡಿ ಕೆಲಸ ಮಾಡಿದರೆ ಮಾತ್ರ ಸಮಸ್ಯೆ ಬಗೆಹರಿಯಲಿದೆ, ಚಡಚಣ ಭಾಗದ ಹಾವಿನಾಳ ಹಾಗೂ ಹತ್ತಳ್ಳಿ ಭಾಗದ ಕಾಲುವೆಗಳವರೆಗೆ ಮಾತ್ರ ನೀರು ಹರಿಸಲು ಸಾಧ್ಯವಾಗುತ್ತದೆ ಆದ್ದರಿಂದ ಸಹಕಾರ ನೀಡುವಂತೆ ಎಲ್ಲ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.ಡಿಎಸ್‌ಪಿ…

Read More

ಅಗ್ನಿವೀರರ ನೇಮಕಾತಿ ರ‍್ಯಾಲಿ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐತಿಹಾಸಿಕ ವಿಜಯಪುರದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ವತಿಯಿಂದ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ‍್ಯಾಲಿ ನಗರದಲ್ಲಿ ಸೆಪ್ಟೆಂಬರ್ ೧೦ ರಿಂದ ೩೦ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಅಗ್ನಿಪಥ ನೇಮಕಾತಿ ರ‍್ಯಾಲಿಯ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯು ಒಳಗೊಂಡಂತೆ ರಾಜ್ಯದ ೧೧ ಜಿಲ್ಲೆಗಳ ಅಭ್ಯರ್ಥಿಗಳು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ಅವಧಿಯಲ್ಲಿ ಪ್ರತಿದಿನ ಅಂದಾಜು ೮೦೦ ಅಭ್ಯರ್ಥಿಗಳಿಗೆ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.ಅಗ್ನಿವೀರರ ಆಯ್ಕೆ ಪ್ರಕ್ರಿಯೆಯ ರ್ಯಾಲಿಯ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳು ಸೆಪ್ಟೆಂಬರ್ ೧೦ ರಿಂದ ೩೦ರವರೆಗೆ ನಡೆಯಬಹುದಾಗಿದೆ. ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ…

Read More

ಕನ್ನಡ-ಮರಾಠಿ ಭಾಷಾ ಬಾಂಧವ್ಯ ಬೆಳೆಸಿ, ಬಲಪಡಿಸಲೆಂದು ಈ ಪ್ರತಿಷ್ಟಿತ ಪ್ರಶಸ್ತಿ | “ಉದಯರಶ್ಮಿ” ಬಳಗದ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಕನ್ನಡ ಮರಾಠಿ ಭಾಷಾ ಬಾಂಧವ್ಯ ಬೆಳೆಸಲೆಂದು ಬಲಪಡಿಸಲೆಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಕೊಡ ಮಾಡಿದಡಾ ಪಂಡಿತ ಅವಳೀಕರ ಅವರ ದತ್ತಿ ಪ್ರಶಸ್ತಿ ಆನಂದ ಕಂದ ೨೦೨೬ ಈ ಭಾರಿ ಡಾ ಜಯಶ್ರೀ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಇವರಿಗೆ ದೊರೆತಿದೆ.ಕನ್ನಡ ಸಾಹಿತ್ಯದ ಕವಿ ಶ್ರೇಷ್ಠ ಸಾಹಿತಿ ಡಾ ಬೆಟಗೇರಿ ಕೃಷ್ಣ ಶರ್ಮಾ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ೨೦೦೦ ರಿಂದ ಕರ್ನಾಟಕ ವಿದ್ಯಾವರ್ಧಕ ಸಂಘ ಕನ್ನಡದಿಂದ ಮರಾಠಿಗೆ ಮರಾಠಿಯಿಂದ ಕನ್ನಡಕ್ಕೆ ಭಾಷಾಂತರ ಅನುವಾದ ಮತ್ತು ಸಾಹಿತ್ಯ ರಚನೆ ಮಾಡುವ ಎರಡೂ ಭಾಷೆಯ ಮಧ್ಯೆ ಬಾಂಧವ್ಯ ಸಾಮರಸ್ಯ ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಮಹಾರಾಷ್ಟ್ರದ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು.ಡಾ ಗುರುಲಿಂಗ ಕಾಪಸೆ ಹಿಂದಿನ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಮೊದಲ ಆನಂದ ಕಂದ ಪ್ರಶಸ್ತಿ ದೊರೆತಿತ್ತು. ತದನಂತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಲೌಕಿಕ, ಅಲೌಕಿಕ, ಸತ್ಯ, ನಿಷ್ಠೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ಪೂಜೆಯಾಗಬೇಕು ಎಂದು ಉಪನ್ಯಾಸಕಿ ಶಾರದಾ ಕೊಪ್ಪ ಐಹೊಳ್ಳಿ ಹೇಳಿದರು.ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದವರು ವೀರಶೈವ ಸಭಾ ಭವನದಲ್ಲಿ ಏರ್ಪಡಿಸಿದ ೭೫ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ‘ವಚನ ಬಂಡಾಯ ಶಾಂತರಸ ಅವರ ಬದುಕು ಮತ್ತು ಸಾಧನೆ’ ಕುರಿತು ಮಾತನಾಡಿದರು.ಅನುಭವ ಮಂಟಪದ ಅಂಗ ಸಂಸ್ಥೆ ಅದರ ಕಾರ್ಯ ಬಸವಾದಿ ಶರಣರು ರಚಿಸಿದ ವಚನಗಳನ್ನು ವ್ಯವಸ್ಥಿತವಾಗಿ ಜೋಡಿಸಿರುವ ಕಾರ್ಯ ಶಾಂತರಸರದು ಅದರಂತೆ ಶರಣರ ವಚನಗಳನ್ನು ಬರೆದು ಬರೆಸುವ ನಡೆದಂತೆ ನುಡಿಯುವ ಚಿಂತನ-ಮಂಥನ ನಡೆದು ಬಸವಣ್ಣನವರ ಮುದ್ರೆಯೊಂದಿಗೆ ಭಂಡಾರಕ್ಕೆ ಕಳುಹಿಸುವ ಕಾಯಕ ಮಾಡುತ್ತ ವಚನ ಕಟ್ಟುಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸುವ ಕಾರ್ಯ ಮಾಡುತ್ತಿದ್ದರು. ಶಾಂತರಸರು ಶರಣರು ಗ್ರಂಥಾಲಯ ಭಂಡಾರದ ಮುಖ್ಯಸ್ಥರು. ಜನರಿಂದ ಜನರಿಗಾಗಿ ವಚನ ಭಂಡಾರ ಶಾಂತರಸರು ‘ಅಲೇಖನಾದ ಶೂನ್ಯ ಕಲ್ಲಿದೇವ’ ಎಂಬ ಅಂಕಿತನಾಮ…

Read More

ತ್ವರಿತ ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಡಿಸಿ ಡಾ.ಆನಂದ್ ಕೆ. ಎಚ್ಚರಿಕೆ | ಜಲಧಾರೆ ಯೋಜನೆ ಅನುಷ್ಠಾನಕ್ಕೆ ವಿಶೇಷ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು. ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಯೋಜನೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಲಧಾರೆ ಯೋಜನೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ಆಲಮಟ್ಟಿ ಹಾಗೂ ನಾರಾಯಣಪುರ ಹಿನ್ನೀರಿನ ಮೂಲಕ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಈ ಯೋಜನೆ ನಮ್ಮ ಜಿಲ್ಲೆಗೆ ವರದಾನವಾಗಿದೆ. ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು ಎಂದರು.ಈ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದು, ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಯೋಜನೆ ಪೂರ್ಣಗೊಳಿಸಬೇಕು ಎಂದರು.ಯೋಜನೆ ಅನುಷ್ಠಾನಕ್ಕೆ ಅನುದಾನದ ಕೊರತೆ ಇಲ್ಲ. ಸಮಸ್ಯೆ ಎಲ್ಲಿದೆ ಗುರುತಿಸಿ, ಜಾಗ ಗುರುತಿಸುವಿಕೆ ಪೈಪ್ ಲೈನ್ ಅಳವಡಿಸಲು ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.೪೩ ಸೈಟ್ ನಲ್ಲಿ ಸಮಸ್ಯೆ ಇದೆ. ೩೫ಕಿ.ಮೀ ಪೈಪ್ ಲೈನ್ ಮಾಡಲು…

Read More

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೇಸಿಗೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು, ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈವರೆಗೂ ಟ್ಯಾಂಕರ್ ಸರಬರಾಜು ಅವಶ್ಯಕತೆ ಕಂಡುಬಂದಿಲ್ಲ. ಆದಾಗ್ಯೂ ಸಮಸ್ಯೆ ಇರುವ ಭಾಗದಲ್ಲಿ ಕುಡಿಯುವ ನೀರಿಗೆ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.ಪ್ರತಿ ಗ್ರಾಪಂಗಳು ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಭವಿಷ್ಯದ ದಿನಗಳಲ್ಲಿ ಎಲ್ಲಿ ಸಮಸ್ಯೆ ಉಲ್ಬಣಿಸಬಹುದೋ ಅಲ್ಲಿ ಪರ್ಯಾಯವಾಗಿ ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಬೋರವೆಲ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.ಈ ಹಿಂದೆ ಕುಡಿಯುವ ನೀರಿಗೆ ಎಲ್ಲೆಲ್ಲಿ ಸಮಸ್ಯೆಯಾಗಿತ್ತು ಎಂಬ ಮಾಹಿತಿ ಇದೆ. ಅಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಕಾಲ-ಕಾಲಕ್ಕೆ ಕಾರ್ಯಪಡೆ ಸಭೆ ನಡೆಸುವ ಮೂಲಕ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.ಇನ್ನೊಂದೆಡೆ ಲಭ್ಯವಿರುವ ಜಲಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು.…

Read More