Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ೨೦೨೫ರ ನ.೪ ರಿಂದ ೨೦೨೬ರ ಫೆ.೩ರವರೆಗೆ ೩ ತಿಂಗಳ ಜೇನುಗಾರಿಕೆ ತರಬೇತಿ ಹಮ್ಮಿಕೊಂಡಿದ್ದು, ತರಬೇತಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲೆಯಿಂದ ಓರ್ವ ರೈತ ಮಕ್ಕಳಿಗೆ ತರಬೇತಿ ಪಡೆಯಲು ಅವಕಾಶವಿದ್ದು, ಅರ್ಜಿಯನ್ನು ತೋಟಗಾರಿಕೆ ಜಂಟಿ ನಿರ್ದೇಶಕರು (ಜಿ.ಪಂ.) ವಿಜಯಪುರ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ವಿಜಯಪುರ ಅಥವಾ ಇಲಾಖೆ ವೆಬ್ಸೈಟ್ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.೨೦, ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳು ೧೦ ರೂ. ಮೌಲ್ಯದ ಐಪಿಓ-ಡಿಡಿಯನ್ನು ಜಿಲ್ಲೆಯ ತೋಟಗಾರಿಕೆ ಜಂಟಿ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆ ಲಗತ್ತಿಸಿ ದಿನಾಂಕ : ೩೦-೧೦-೨೦೨೫ರೊಳಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮಪದವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲಸಂಗಿ ಗೆಳೆಯರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಉಜಿರೆಯ ಎಸ್ಡಿಎಂ ಕಾಲೇಜಿನ ಪ್ರೊ: ರಾಜಶೇಖರ ಹಳೆಮನೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ. ಅವರು ಆ ಕಾಲದಲ್ಲಿ ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದರು. ಸಾಂಸ್ಕೃತಿಕ ವಿನಿಮಯದ ನಿಜವಾದ ಅರ್ಥ ಈ ಕಾರ್ಯಕ್ರಮದ ಮೂಲಕ ಈಡೇರಿದೆ. ಮಧುರಚೆನ್ನರ ಸಾಹಿತ್ಯಿಕ ಆಶಯಗಳು ವರ್ತಮಾನವನ್ನು ಬಹಳ ಪ್ರಭಾವಿಸುತ್ತಿವೆ. ಅವರ ಕೃತಿಗಳು ಈ ಸಂಗತಿಯನ್ನು ಸ್ಪಷ್ಟಪಡಿಸುತ್ತವೆ ಎಂದು ಹೇಳಿದರು.ಹಿರಿಯ ಸಾಹಿತಿ ಡಾ.ಶಂಕರ ಬೈಚಬಾಳ ಹಲಸಂಗಿ ಗೆಳೆಯರ ಹಾಡು ಪಾಡು ಕುರಿತು ಉಪನ್ಯಾಸ ನೀಡಿ, ನುಡಿ ಪ್ರಜ್ಞೆಯ ಸಾರ್ಥಕ ರೂಪಕವಾಗಿ ಹಲಸಂಗಿ ಗೆಳೆಯರ ಜಾನಪದೀಯ ಕೃತಿಗಳು ಮೂಡಿ ಬಂದಿವೆ. ಸಾಂಸ್ಕೃತಿಕ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅವು ತೆರೆದಿಟ್ಟಿವೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹಕೀಮ ಚೌಕ್ ಹತ್ತಿರದ ಪಾಶ್ಚಾಪುರ ಪೇಠ ನಿವಾಸಿಯಾದ ೩೩ ವರ್ಷದ ರೇಖಾ ಗಂ. ಭೀಮಾಶಂಕರ ಕುಮಟಗಿ ಎಂಬ ಮಹಿಳೆ ದಿನಾಂಕ : ೦೩-೧೦-೨೦೨೫ರಿಂದ ಕಾಣೆಯಾಗಿರುವ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಮಹಿಳೆ ಪತ್ತೆಗೆ ಠಾಣೆಯ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾದ ಮಹಿಳೆಯು ಸಾಧಾರಣ ಮೈಕಟ್ಟು, ದುಂಡುಮುಖ, ನೆಟ್ಟನೆಯ ಮೂಗು, ಸಾದಾಗಪ್ಪು ಮೈ ಬಣ್ಣ ಹೊಂದಿದ್ದಾಳೆ. ೫.೪ ಅಡಿ ಎತ್ತರವಿದ್ದು, ಕನ್ನಡ ಮತ್ತು ವಡ್ಡರ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮಿಶ್ರಿತ ಚಾಕಲೇಟ್ ಬಣ್ಣದ ನೈಟಿ ಧರಿಸಿದ್ದು, ಈ ಚಹರೆಪಟ್ಟಿಯುಳ್ಳ ಮಹಿಳೆ ಪತ್ತೆಯಾದಲ್ಲಿ ಸಾರ್ವಜನಿಕರು ಪೊಲಿಸ್ ಕಂಟ್ರೋಲ್ ರೂಂ ದೂ: ೦೮೩೫೨-೨೫೦೨೧೪ ಅಥವಾ ಗೋಲಗುಂಬಜ್ ಪೊಲಿಸ್ ಠಾಣೆಗೆ ಮಾಹಿತಿ ಒದಗಿಸುವಂತೆ ಪ್ರಕಟಣೆ ತಿಳಿಸಿದೆ.
ವಿಜಯಪುರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ | ಸಾರ್ವಜನಿಕರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುವ ಪೊಲೀಸರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಹಗಲಿರುಳು ಧೈರ್ಯ ಸಾಹಸ ಹಾಗೂ ಕರ್ತವ್ಯಕ್ಕೆ ಕಟಿಬದ್ಧರಾಗಿ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಪೊಲೀಸ ಕಾರ್ಯ ಅನನ್ಯವಾಗಿದೆ. ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಅವರು ಹೇಳಿದರು.ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ, ಮಾತನಾಡಿದ ಅವರು, ಜನರ ಸಂಧಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ.ಸಾರ್ವಜನಿಕರ ಸುರಕ್ಷತೆಯನ್ನೇ ಆದ್ಯತೆಯನ್ನಾಗಿಸಿ ತಮ್ಮ ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಾ ಹುತಾತ್ಮರಾದ ಪೊಲೀಸರ ಸಂಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬ ಹರಿದಿನಗಳೆನ್ನದೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಮಹಾರಾಷ್ಟçದ ಫಂಡರಪುರದಲ್ಲಿ ಜರುಗುವ ಕಾರ್ತಿಕ ಏಕಾದಶಿ ಜಾತ್ರೆ ನಿಮಿತ್ಯ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಒಂದೇ ಗುಂಪಿನಿಂದ ಪ್ರಯಾಣಿಸುವ ಕನಿಷ್ಠ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಫಂಡರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು.ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ-೧ ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ವಿಜಯಪುರ-೩ ಮೊ: ೭೭೬೦೯೧೪೦೦೮, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬ.ಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ೦೮೩೫೨-೨೫೧೩೪೪, ಸಹಾಯಕ…
ಲೇಖನಡಾ.ಜಯವೀರ ಎ.ಕೆಖೇಮಲಾಪುರ ( ರಾಯಬಾಗ ) ಉದಯರಶ್ಮಿ ದಿನಪತ್ರಿಕೆ “ಸಾಹಿತ್ಯ ಕ್ಷೇತ್ರದಲ್ಲಿ ದಲಿತ ಸಾಹಿತಿ ಎಂಬ ಕ್ರೆಡಿಟ್ ಅಗತ್ಯವಿಲ್ಲ” ಕವಿ ಡಾ. ಎಲ್ ಹನುಮಂತಯ್ಯ ಅವರು ಬೆಂಗಳೂರಿನಲ್ಲಿ ಇತ್ತೀಚಿಗೆ ಪುಸ್ತಕಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಸಮಕಾಲಿನ ಸಂದರ್ಭದಲ್ಲಿ ವ್ಯಕ್ತಗೊಳಿಸಿದ ಈ ಪ್ರಬುದ್ಧ ಹೇಳಿಕೆ ಸ್ವಾಗತಾರ್ಹವಾದುದು. ಕನ್ನಡ ಸಾಹಿತ್ಯ ಲೋಕದಲ್ಲಿ ದಲಿತ ಕವಿ, ಬಲಿತ ಕವಿ, ಎಂಬ ಬೇಧ ಭಾವ ನಮ್ಮಿಂದ ಪೂರ್ಣ ತೊಲಗಬೇಕಾಗಿದೆ ಎಂಬ ಚಿಂತನೆಗೆ ಇವರ ಮನೋಜ್ಞ ಹೇಳಿಕೆ ನಿಜಕ್ಕೂ ಪುಷ್ಟಿ ನೀಡುತ್ತದೆ. ಕವಿ ಅಥವಾ ಸಾಹಿತಿಯ ಮಾನಸ ಗರ್ಭದಿಂದ ಅವಿರ್ಭವಿಸುವ ಮಹೋನ್ನತ ಜಾತ್ಯತೀತ ಭಾವಗಳು ಅಕ್ಷರ ರೂಪ ಪಡೆದು ಅಪೂರ್ವ ಸಾಹಿತ್ಯ ಸೃಷ್ಟಿಯಾಗುತ್ತದೆ. ಪರಿವರ್ತನೆಯ ಈ ಕಾಲ ಘಟ್ಟದಲ್ಲಿ ಸಾಹಿತಿಗಳನ್ನು ಬಲಿತ ಕವಿ, ದಲಿತ ಕವಿ ಎಂದು ಕ್ರೆಡಿಟ್ ಕೊಡಬಾರದು,ಸಾಹಿತ್ಯ ಕ್ಷೇತ್ರದಲ್ಲಿ ದಲಿತ ಎಂದು ಗುರುತಿಸಿಕೊಳ್ಳುವ ಹೆಮ್ಮೆ ಆಗಬಾರದು ಎಂಬ ಪ್ರಸ್ತುತ ಇವರ ಈ ಸೂಚ್ಯ ಹೇಳಿಕೆ ನಮ್ಮೆಲ್ಲರನ್ನು ಸುದೀರ್ಘವಾಗಿ ಚಿಂತನೆಗೆ ಪ್ರೇರೇಪಿಸುತ್ತದೆ. ಸದ್ಯ ನಿತ್ಯ ನಿರಂತರ ಅನುಗಾಲವೂ ಅಕ್ಷರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದ ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿರುವ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಯುವಪ್ರತಿಭೆ ಸಂಜಯಕುಮಾರ ಬಿರಾದಾರ ಅವರನ್ನು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸನ್ಮಾನಿಸಿದರು.ಕೇಂದ್ರ ಸರಕಾರದ ಯುವ ಸಬಲೀಕರಣ ಸಚಿವಾಲಯ ನೀಡುವ ಪ್ರತಿಷ್ಠಿತ ಮೈ ಭಾರತ್ ರಾಷ್ಟ್ರೀಯ ಸೇವಾ ಯೋಜನೆಯ ಪ್ರಶಸ್ತಿಗೆ ಜಿಲ್ಲೆಯ ತಾವು ಪ್ರತಿನಿಧಿಸುವ ಬಸವನಬಾಗೇವಾಡಿ ಕ್ಷೇತ್ರದ ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಸಂಜಯಕುಮಾರ ಯಂಕನಗೌಡ ಬಿರಾದಾರ ಭಾಜನರಾಗಿದ್ದರು. ಅಲ್ಲದೇ ಈಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನವದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದರು.ರಾಷ್ಟ್ರೀಯ ಪ್ರಶಸ್ತಿ ಮೂಲಕ ಬಸವಜನ್ಮಭೂಮಿಗೆ ಕೀರ್ತಿ ತಂದಿರುವ ಸಂಜಯಕುಮಾರ ಬಿರಾದಾರ ಅವರನ್ನು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಛೇರಿಯಲ್ಲಿ ಸಚಿವರು ಸನ್ಮಾನಿಸಿ,ಗೌರವಿಸಿದರು.ಸಂಜಯ ತಮ್ಮ ಸಾಧನೆಯಿಂದ ಬಸವನಬಾಗೇವಾಡಿ ತಾಲೂಕಿಗೆ ಮಾತ್ರವಲ್ಲ ಜಿಲ್ಲೆಯ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಅವರ ಸಾಧನೆ ಇಂದಿನ ಯುವ ಸಮೂಹಕ್ಕೆ ಪ್ರೇರಣೆ, ಅನುಕರಣೀಯ ಮಾತ್ರವಲ್ಲದೆ…
ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಸಂಸ್ಕೃತ ವೇದ ಅಧ್ಯಯನ ಶಾಲೆಯಲ್ಲಿಯ ಶಿಕ್ಷಕನೊಬ್ಬ 9 ನೇ ತರಗತಿಯಲ್ಲಿ ಓದುತ್ತಿರುವ ಚಿಕ್ಕಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮಗು ತನ್ನ ಅಜ್ಜಿಗೆ ಫೋನ್ ಕಾಲ್ ಮೂಲಕ ಮಾತನಾಡಿದ್ದಕ್ಕೆ ಮಗುವಿನ ಮೇಲೆ ಮೃಗದಂತೆ ಮೇಲೇರಗಿ ಕಾಲಿನಿಂದ ಮನಬಂದಂತೆ ಓದ್ದಿರುವ ಶಿಕ್ಷಕ ವಿರೇಶ ನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಪ್ರಾಯಪಟ್ಟಿದ್ದಾರೆ.ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಅಧಿಕಾರಿಗಳಿಗೆ ಈ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ ಮತ್ತು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಇಂಥಹ ಮಾನವೀಯ ಕೃತ್ಯಗಳು ನಾಡಿನ ಯಾವುದೇ ಶಾಲೆಯ ವಸತಿ ನಿಲಯಗಳಲ್ಲಿ ಮರುಕಳಿಸದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಾಗಿದೆ. ಯಾರೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶಭಕ್ತಿ, ದೇಶಸೇವೆಯನ್ನೇ ಉಸಿರಾಗಿಸಿಕೊಂಡು ನೂರು ವಸಂತಗಳ ಸಂಭ್ರಮದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ದೊಡ್ಡ ಪಾಪ ಮಾಡಿದ್ದಾರೆ, ಅವರ ಸ್ವಪಕ್ಷದಲ್ಲಿಯೇ ಬೆಂಬಲ ಇಲ್ಲದೇ ಒಂಟಿಯಾಗುವಂತಾಗಿದೆ, ಇನ್ನಾದರೂ ಸಂಘ ಪರಿವಾರದ ಶ್ರೇಷ್ಠತೆಯ ಬಗ್ಗೆ ಅರಿವು ಹೊಂದಿ ಸಂಘ ಪರಿವಾರದ ಬಗ್ಗೆ ಅಗೌರವ ತೋರಿದ ಪಾಪಕ್ಕೆ ಪ್ರಾಯಶ್ಚಿತ್ತ ಪಟ್ಟು ಸಂಘ ಪರಿವಾರಕ್ಕೆ ಅಗೌರವ ತೋರಿದ ಬಗ್ಗೆ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘ ಪರಿವಾರ ದೇಶಭಕ್ತಿಯ ಇನ್ನೊಂದು ಹೆಸರು, ಸಂಘ ಪರಿವಾರದ ಸ್ವಯಂ ಸೇವಕರು ಈ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸುವ ನಿಸ್ವಾರ್ಥಿಗಳು, ಅಷ್ಟೇ ಏಕೆ ಅಂದಿನ ಪ್ರಧಾನಿ ದಿ.ಜವಾಹರಲಾಲ್ ನೆಹರೂ ಅವರು ಸಂಘ ಪರಿವಾರದ ಕಾರ್ಯದಕ್ಷತೆ, ಸೇವಾ ಮನೋಭಾವವನ್ನು ಶ್ಲಾಘಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಮರೆತಂತೆ ಕಾಣುತ್ತಿದೆ, ದೇಶದ ಸಂಸ್ಕೃತಿ, ಸಂಸ್ಕಾರ ಪ್ರಸಾರ ಕಾರ್ಯದ ಜೊತೆಗೆ ಪ್ರವಾಹ, ಭೂಕಂಪ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಕೇಸರಿ ಪಾರ್ಮರ್ ಪ್ರಡ್ಯೂಜರ್ ಕಂಪನಿ ಲಿಮಿಟೆಡ್ ವತಿಯಿಂದ ಇದೇ ದಿನಾಂಕ 22-10-25 ರ ಬುಧವಾರ ತಾಲ್ಲೂಕಿನ ಕಗ್ಗೋಡದಲ್ಲಿರುವ ಶ್ರೀ ರಾಮನಗೌಡ ಬಾಪುಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದ ಆವರಣದಲ್ಲಿರುವ ಶಿವಾನುಭವ ಮಂಟಪದ ಹತ್ತಿರ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಸಿದ್ದಸಿರಿಯ ಎಜಿಎಂ ಸಂತೋಷ ಗುಂಜುಟಗಿ ತಿಳಿಸಿದ್ದಾರೆ.ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದಲ್ಲಿ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗಾಗಿ ಖರೀದಿ ಕೇಂದ್ರ ಆರಂಭಿಸಲಾಗುತ್ತಿದೆ. ಮೆಕ್ಕೆಜೋಳ ತೇವಾಂಶ (ಮೈಸರ್) ಶೇ 15 ರೊಳಗೆ ಇರಬೇಕು. ಸುತ್ತಮುತ್ತಲಿನ ಗ್ರಾಮಗಳ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
