Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಾರ್ವಜನಿಕರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾಗಿ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಬೇಕು ಎಂದು ಗ್ರಾಪಂ ಕಾರ್ಯದರ್ಶಿ ಮಾದೇವ ಪೂಜಾರಿಯವರು ಹೇಳಿದರು.ಶನಿವಾರದಂದು ರೇವತಗಾಂವ ಗ್ರಾಪಂ ಸಿಬ್ಬಂದಿಗಳ ಜೊತೆ ಗ್ರಾಮದ ಸಾರ್ವಜನಿಕ ಸ್ಥಳಗಳು, ಮನೆಮನೆಗಳಿಗೆ ತೆರಳಿ ಸಮೀಕ್ಷಾ ಕಾರ್ಯವನ್ನು ಪರಶೀಲನೆ ನಡೆಸಿದರು.ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು. ನಿಮಗೆ ತಿಳಿದಿರುವಂತೆ ಯಾರಾದರೂ ಗಣತಿಯಿಂದ ಹೊರಗುಳಿದಿದ್ದರೆ ಮಾಹಿತಿ ನೀಡಿ, ಕೆಲವೇ ದಿನಗಳ ಹಿಂದೆ ಜನಿಸಿದ ಮಗುವಾಗಲೀ, ಆಧಾರ ಕಾರ್ಡ್ ಇಲ್ಲದೆ ಇರುವ ಮಗುವು ಕೂಡಾ ಗಣತಿ ಕಾರ್ಯದಿಂದ ಹೊರಗೆ ಉಳಿಯಬಾರದು ಎಂದು ಸಾರ್ವಜನಿಕರಲ್ಲಿ ವಿನಂತಿಸದಿಕೊಂಡರು.ಈ ವೇಳೆ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರಿಗೆ ಸಮೀಕ್ಷಾದಾರರ ಮನೆ, ವಿಳಾಸ ಗೊತ್ತಿಲ್ಲದಿದ್ದರೆ ಅವರ ಮನೆಗಳಿಗೆ ತೆರಳಿ ಸಮೀಕ್ಷಾ ಕಾರ್ಯ ಸುಗಮವಾಗುವಂತೆ ಗ್ರಾಮ ಪಂಚಾಯತ ಸಿಬ್ಬಂದಿಗಳು ಸಹಕರಿಸಿದ್ದಾರೆ.ಈ ವೇಳೆಯಲ್ಲಿ ಗ್ರಾಮೀಣ ಪುರ್ನವಸತಿ ಕಾರ್ಯಕರ್ತ ಎಸ್.ಎಂ.ಮಾಳಿ, ಗ್ರಾಪಂ ಸಿಬ್ಬಂದಿ ಲಾಯಪ್ಪ ಲೋಣಿ, ಗ್ರಾಮಸ್ಥರಾದ ಶಿವಾನಂದ ಪೂಜಾರಿ, ಭೋಜಪ್ಪ ಹಕ್ಕೆ,…

Read More

ವಿಜಯಪುರದಲ್ಲಿ ಶಿವಸೇನೆ (ಏಕನಾಥ ಶಿಂಧೆ ಬಣ) ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಸ್ವಾಮೀಜಿ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾತಿನ ಭರದಲ್ಲಿ ಆಡಿದ ಮಾತುಗಳನ್ನೇ ದೊಡ್ಡದು ಮಾಡಿ ಕನೇರಿ ಶ್ರೀಗಳನ್ನು ಅಪಮಾನ ಮಾಡುವ ಕೆಲಸ ನಡೆಯುತ್ತಿದೆ, ಅಂಬಿಗರ ಚೌಡಯ್ಯನವರು ಸಹ ಕಟುವಾಗಿ ತಮ್ಮ ವಚನಗಳಲ್ಲಿ ಅನ್ಯಾಯವನ್ನು ವಿರೋಧಿಸಿದ್ದಾರೆ, ಇದೇ ಮಾದರಿಯಲ್ಲಿ ಕನೇರಿ ಶ್ರೀಗಳು ಒಡಕು ಮೂಡಿಸುವುದರ ವಿರುದ್ಧ ಕಿಡಿಕಾರಿದ್ದಾರೆ ಎಂದು ಶಿವಸೇನೆ (ಏಕನಾಥ ಶಿಂಧೆ ಬಣ) ರಾಜ್ಯ ಘಟಕದ ಅಧ್ಯಕ್ಷ ಶ್ರೀ ಆಂದೋಲ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತಿನ ಭರದಲ್ಲಿ ಶ್ರೀಗಳು ಮಾತನಾಡಿರಬಹುದು, ಲಿಂಗಾಯತ ಮಹಾಸಭೆಗೆ ಸೂತ್ರಧಾರಿಯಾಗಿರುವ ಜಿಲ್ಲೆಯ ಉಸ್ತುವಾರಿ ಸಚಿವರು ಶ್ರೀಗಳಿಗೆ ಕರೆ ಮಾಡಿ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಟ್ಟು ಕ್ಷಮೆ ಕೇಳುವಂತೆ ಹೇಳಿದ್ದರೆ ಈ ವಿಷಯ ದೊಡ್ಡದಾಗುತ್ತಿರಲಿಲ್ಲ, ಆದರೆ ಹಿಂಬಾಲಕರಿಂದ ಈ ವಿಷಯವನ್ನು ದೊಡ್ಡದು ಮಾಡಿದ್ದು ಯಾರು? ಜಿಲ್ಲೆಯಲ್ಲಿ ಎಗ್ಗಿಲ್ಲದೇ ಗಾಂಜಾ ದೊರಕುತ್ತಿದೆ, ಈ ಎಲ್ಲವೂಗಳನ್ನು ಕಡಿವಾಣ ಹಾಕುವ ಬದಲು ಈ ವಿಷಯವನ್ನು ದೊಡ್ಡದು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ ತಿಳಿಸಿದರು.ತಾಲ್ಲೂಕಿನ ಚಿಕ್ಕರೂಗಿ ಗ್ರಾಮಪಂಚಾಯಿತಿಯಲ್ಲಿ ಶನಿವಾರ ಇ-ಕೆವೈಸಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.ತಾಲ್ಲೂಕಿನ ಒಟ್ಟು ೧೪ ಗ್ರಾಮ ಪಂಚಾಯಿತಿಗಳ ಪೈಕಿ ೧೬೯೯೫ ಸಕ್ರಿಯ ಉದ್ಯೋಗ ಕಾರ್ಡ್ಗಳಿದ್ದು. ಅದರಲ್ಲಿ ಈಗಾಗಲೇ ೨೮೦೮ ಇ-ಕೆವೈಸಿ ಮಾಡಲಾಗಿದೆ. ಹೆಚ್ಚಾಗಿ ಮಣೂರು ೨೩೮೭, ಜಾಲವಾದ ೧೮೭೯, ಹುಣಿಶ್ಯಾಳ ೧೭೦೮ ಉದ್ಯೋಗ ಕಾರ್ಡ್ ಗಳಿದ್ದು ಬಾಕಿ ಉಳಿದ ಎಲ್ಲಾ ಉದ್ಯೋಗ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ರವರು ಇದರ ಬಗ್ಗೆ ಹೆಚ್ಚಿನ ಗಮನವಹಿಸಿ ಈ ತಿಂಗಳು ಪೂರ್ಣಗೊಳಿಸಬೇಕು ಎಂದರು.ಗ್ರಾಮೀಣ ಉದ್ಯೋಗಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಕೂಲಿಕಾರರ ಕಾರ್ಡ್ಗಳನ್ನು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ ಎಂದರು.ಐಇಸಿ ಸಂಯೋಜಕ ಸಿದ್ದು ಕಾಂಬಳೆ ಗ್ರಾಮದ ಸಂತೆಯಲ್ಲಿ…

Read More

ಶೀಘ್ರವೇ ತಾಲೂಕು ಕಛೇರಿಗಳನ್ನು ಆರಂಭಿಸುವಂತೆ ಆಗ್ರಹಿಸಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕವಾಗಿ ರಚನೆಗೊಂಡಿರುವ ನಿಡಗುಂದಿ ತಾಲೂಕ ಕೇಂದ್ರದಲ್ಲಿ ಈವರೆಗೂ ತಾಲೂಕ ಕಛೇರಿಗಳನ್ನು ತೆರೆದಿಲ್ಲ. ಆಡಳಿತದ ಹಿತದೃಷ್ಟಿಯಿಂದ ಶೀಘ್ರವೇ ತಾಲೂಕ ಕಛೇರಿಗಳನ್ನು ಆರಂಭಿಸುವಂತೆ ಆಗ್ರಹಿಸಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಭಾನುವಾರ ವಿಜಯಪುರ ನಗರದಲ್ಲಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿಯಾದ ನಿಡಗುಂದಿ ಪಟ್ಟಣ ಪಂಚಾಯತ್ ಸದಸ್ಯರು, ತಾಲೂಕಿನ ಪ್ರಮುಖರು, ಆಡಳಿತ ಹಿತದೃಷ್ಟಿಯಿಂದ ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕಗೊಂಡು ನಿಡಗುಂದಿ ತಾಲೂಕು ರಚನೆಯಾಗಿದೆ. ಆದರೆ ಆಡಳಿತನ ನಿರ್ವಹಣೆಗೆ ತಹಶಿಲ್ದಾರರ ಕಛೇರಿ ಹೊರತಾಗಿ ಇತರೆ ಇಲಾಖೆಗಳ ಕಛೇರಿ ಇಲ್ಲದ ಕಾರಣ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿದೆ ಎಂದು ಸಚಿವರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಯುವ ಪೀಳಿಗೆ ಮತ್ತೆ ಕೃಷಿಯತ್ತ ಆಕರ್ಷಿಸಲು ಕೃಷಿ ಕ್ಷೇತ್ರದಲ್ಲಿ ಹಲವಾರು ಅವಿಷ್ಕಾರಗಳು ಯಂತ್ರೋಪಕರಣಗಳ ಬಳಕೆಯಾಗುತ್ತಿವೆ. ಕೃಷಿಯೂ ಲಾಭದಾಯಕ ಎಂಬುದನ್ನು ಸಾಬಿತುಪಡಿಸಲಾಗುತ್ತಿದೆ ಎಂದು ವಿಜಯಪುರದ ಕೃಷಿ ವಿವಿ ಕೀಟ ಶಾಸ್ತ್ರ ಉಪನ್ಯಾಸಕರಾದ ಎ.ಪಿ.ಬಿರಾದಾರ ಹೇಳಿದರು.ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ವಿಜಯಪುರದ ಕೃಷಿ ವಿಶ್ವ ವಿದ್ಯಾಲಯದಿಂದ ೯೦ ದಿನಗಳ ಕಾಲ ರೈತರಿಗೆ ಕೃಷಿ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡುವ ಮತ್ತು ರೈತರಿಂದ ಕೃಷಿ ಮಾಹಿತಿ ಪಡೆಯುವ ವಿದ್ಯಾರ್ಥಿಗಳು ಹಮ್ಮಿಕೊಂಡ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ರೈತ ದೇಶದ ಬೆನ್ನಲಬು, ಇದು ಹಳ್ಳಿಗಳ ದೇಶ. ದೇಶದಲ್ಲಿಯೇ ಶೇ ೬೬ ರಷ್ಟು ರೈತರಿದ್ದು ಈ ಪೈಕಿ ಶೇ. ೮೦ ರಷ್ಟು ಸಣ್ಣ ಮತ್ತು ಅತಿಸಣ್ಣ ರೈತರಿದ್ದಾರೆ, ಶೇ ೨೦ ರಷ್ಟು ದೊಡ್ಡ ರೈತರಿದ್ದಾರೆ, ಕೃಷಿ ಶೇ ೫೨ ರಷ್ಟು ಉದ್ಯೋಗ ಸೃಷ್ಠಿಸುವ ಕ್ಷೇತ್ರವಾಗಿದ್ದು ಪ್ರತಿ ಹಂತದಲ್ಲೂ ಕೃಷಿ ಕ್ಷೇತ್ರವನ್ನು ಉತ್ಪಾದಕ ಕ್ಷೇತ್ರವನ್ನಾಗಿ ಮಾರ್ಪಡಿಸಲು ಸರಕಾರ ಜನ ಪ್ರತಿನಿಧಿಗಳು ಯೋಜನೆ ರೂಪಿಸುತ್ತಿದ್ದಾರೆ. ವಿದ್ಯಾವಂತ ಕೃಷಿ ಯುವಕರು ಕೃಷಿಯ…

Read More

ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗ | ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಮತ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ. ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ.ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಣಕು ನ್ಯಾಯಾಲಯ ಸ್ಪರ್ಧೆಗಳು ಕಾನೂನು ವಿದ್ಯಾರ್ಥಿಗಳಿಗೆ ವೃತ್ತಿಕೌಶಲ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ ಎಂದು ಅಂಜುಮನ್ ಕಾನೂನು ಕಾಲೇಜಿನ ಪ್ರಾಧ್ಯಾಪಕಿ ಉಜ್ವಲಾ ಸರನಾಡಗೌಡ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ಅಂತರ ತರಗತಿ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅವರು ನ್ಯಾಯಾಧೀಶರಾಗಿ ಪಾಲ್ಗೋಂಡು ಮಾತನಾಡಿದರು.ಈ ಅಣಕು ನ್ಯಾಯಾಲಯ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಕಾನೂನು ವಿದ್ಯಾರ್ಥಿಗಳು ಹೆಚ್ಚೆಚ್ಚು ಇಂಥ ಸ್ಪರ್ಧೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ಅವರು ಹೇಳಿದರು.ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದ ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರದೀಪ ಸಂಕದ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕಾನೂನಿನಲ್ಲಿ ಆಗುವ ತಿದ್ದುಪಡಿಗಳತ್ತ ಗಮನ ಹರಿಸಬೇಕು. ಈ ಮೂಲಕ ವೃತ್ತಿಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.ಕಾನೂನು ಮಹಾವಿದ್ಯಾಲಯದ ಡೀನ್ ಮತ್ತು ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ ಅಣುಕು ಶಾಲೆ ಸ್ಪರ್ಧೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಈ ಸ್ಪರ್ಧೆಯಲ್ಲಿ ನಾಲ್ಕು ತಂಡಗಳು ಭಾಗವಹಿಸಿದ್ದವು. 1 ಮತ್ತು 2ನೇ ವರ್ಷದ ಬಿ. ಎ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೂಳೆ ತಪಾಸಣೆ ಉಚಿತ ಶಿಬಿರ ಅಕ್ಟೋಬರ್ 24 ರಂದು ಶುಕ್ರವಾರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ಬಿ.ಎಲ್.ಡಿ.ಇ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಲಿದ್ದು, ಖ್ಯಾತ ಆರ್ತ್ರೋಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ಅನೀಲ ಬಿ. ಪಾಟೀಲ ತಪಾಸಣೆ ನಡೆಸಲಿದ್ದಾರೆ.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಬಿ.ಎಲ್.ಡಿ,ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಮೂಳೆ ಚಿಕಿತ್ಸೆ ವಿಭಾಗದಲ್ಲಿ 27 ವರ್ಷಗಳ ಅನುಭವ ಹೊಂದಿರುವ ಡಾ. ಅನೀಲ ಬಿ. ಪಾಟೀಲ ತಪಾಸಣೆ ನಡೆಸಲಿದ್ದಾರೆ.ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಮೂಳೆ-ಸಂಧಿ ನೋವು, ಬೆನ್ನು ನೋವು, ಮೊಣಕಾಲು ಸಮಸ್ಯೆ ಹಾಗೂ ಅರ್ಥರೈಟಿಸ್ ಸೇರಿದಂತೆ ಮೂಳೆ ಸಂಬಂಧಿತ ರೋಗಗಳ ತಪಾಸಣೆ ಮತ್ತು ಸಲಹೆ ಉಚಿತವಾಗಿ ನೀಡಲಾಗುತ್ತದೆ.ಮೂಳೆ ಸಂಧಿ ನೋವು ಮತ್ತೀತರ ಮೂಳೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸ್ವಯಂ ಸಂಘದ ಶತಮಾನೋತ್ಸವದ ಅಂಗವಾಗಿ ಸಿಂದಗಿ ನಗರದಲ್ಲಿ ಗಣವೇಷಧಾರಿಗಳಿಂದ ಪಥ ಸಂಚಲನ ಅದ್ದೂರಿಯಾಗಿ ಜರುಗಿತು.ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯೊಂದಿಗೆ ಪಟ್ಟಣದ ಸಾರಂಗಮಠದಿಂದ ಗಣವೇಷಧಾರಿಗಳ ಪಥ ಸಂಚಲನ ಅತ್ಯಂತ ಅದ್ದೂರಿಯಾಗಿ. ಪ್ರಾರಂಭಗೊಂಡಿತು.ಮಾಜಿ ವಿಪ ಸದಸ್ಯ ಅರುಣ ಶಹಾಪುರ, ರಮೇಶ ಭೂಸನೂರ, ಮುತ್ತು ಶಾಬಾದಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಂಭುಲಿಂಗ ಕಕ್ಕಳಮೇಲಿ, ಸಂತೋಷ ಪಾಟೀಲ ಡಂಬಳ, ಅಶೋಕ ಅಲ್ಲಾಪುರ, ಪ್ರದೀಪ ದೇಶಪಾಂಡೆ, ಶೇಖರ ಪಾಟೀಲ, ಡಾ.ಗಿರೀಶ ಕುಲಕರ್ಣಿ, ಡಾ.ಸಿದ್ರಾಮ ಚಿಂಚೊಳ್ಳಿ ಸೇರಿದಂತೆ ಅನೇಕ ಗಣ್ಯರು ಗಣವೇಷಧಾರಿ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.ಸಾರಂಗ ಮಠದಿಂದ ಪ್ರಾರಂಭಗೊಂಡು ಕನಕದಾಸ ವೃತ್ತ, ಹೆಗ್ಗೆರೇಶ್ವರ ದೇವಸ್ಥಾನ, ವಿ.ಎಮ್.ಕುಲಕರ್ಣಿ ಅಂಗಡಿ, ಹಳೆ ಬಜಾರ್, ನೀಲಗಂಗಾ ದೇವಸ್ಥಾನ, ವಿವೇಕಾನಂದ ವೃತ್ತ, ತೋಂಟದ ಸಿದ್ದಲಿಂಗ ಶ್ರೀಗಳ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ರೇ.ಚ.ರೇವಡಿಗಾರ ರಸ್ತೆಯ ಮಾರ್ಗ, ಅಂಬಿಗರ ಚೌಡಯ್ಯ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತದಿಂದ ಡಾ.ಎಂ.ಎಂ.ಕಲಬುರ್ಗಿ ರಸ್ತೆ ಮಾರ್ಗವಾಗಿ ಸಂಚರಿಸಿ ಆರ್.ಡಿ.ಪಾಟೀಲ ಕಾಲೇಜಿನ ಮೈದಾನಕ್ಕೆ ಪಥ ಸಂಚಲನ ಆಗಮಿಸಿ…

Read More

ಲೇಖನ- ವೀಣಾ ಹೇಮಂತ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಭಾರತ ದೇಶವು ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ದೇಶ. ಹೆಜ್ಜೆ ಹೆಜ್ಜೆಗೂ ವಿವಿಧ ವೇಷ ಭೂಷಣ ಭಾಷೆ ಮತ್ತು ಸಂಸ್ಕೃತಿಗಳನ್ನು ಒಡಗೂಡಿಸಿಕೊಂಡಿರುವ ನಮ್ಮ ದೇಶದಲ್ಲಿ ಎಲ್ಲರೂ ಸಾರ್ವತ್ರಿಕವಾಗಿ ಆಚರಿಸುವ, ಆನಂದಿಸುವ ಹಬ್ಬ ದೀಪಾವಳಿ. ದೀಪಾವಳಿ ಎಂಬ ಹೆಸರನ್ನು ಕೇಳಿದ ಕೂಡಲೇ ಕಣ್ಣ ಮುಂದೆ ಕತ್ತಲನ್ನು ದೂರ ಮಾಡುವ ಬೆಳಕನ್ನು ಸೂಸುವ ಸಾಲು ಹಣತೆಗಳ ಸಾಲು ನರ್ತನಗೈಯುತ್ತದೆ.ದೀಪಾವಳಿ ಹಬ್ಬ ಎಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ, ಇದು ಸಾಲು ಸಾಲು ಹಬ್ಬಗಳ ಆಚರಣೆಯ ಹಬ್ಬ. ಸುಮಾರು ಐದು ದಿನಗಳ ಕಾಲ ಸಡಗರ ಸಂಭ್ರಮದಿಂದ ಆಚರಿಸಲ್ಪಡುವ ಈ ಹಬ್ಬ ಜಗತ್ತಿನಾದ್ಯಂತ ತನ್ನ ಬೆಳಕನ್ನು ಪಸರಿಸುತ್ತದೆ.ಪೌರಾಣಿಕ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಗಳನ್ನು ಹೊಂದಿರುವ ದೀಪಾವಳಿ ಹಬ್ಬ ನಮ್ಮ ದೇಶದ ಪ್ರಮುಖ ರಾಷ್ಟ್ರೀಯ ಹಬ್ಬವಾಗಿ ಪರಿಗಣಿಸಲ್ಪಟ್ಟಿದೆ.ರಾಮನು ಸ್ವರ್ಣಲಂಕೆಯಲ್ಲಿ ರಾಕ್ಷಸೇಂದ್ರ ರಾವಣನನ್ನು ಕೊಂದು, ಆತನ ಸಹೋದರ ವಿಭೀಷಣನಿಗೆ ಪಟ್ಟ ಕಟ್ಟಿ, ಅಯೋಧ್ಯೆಯೆಡೆಗೆ ಪ್ರಯಾಣ ಬೆಳೆಸಿದ. ಕಾರ್ತಿಕದ ಆ…

Read More