Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಯತ್ನಾಳಗೆ ಬಿಜೆಪಿ ಅನಿವಾರ್ಯ | ವಿಜಯಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಜೆಪಿ ಒಂದು ಶಿಸ್ತಿನ ಪಕ್ಚವಾಗಿದ್ದು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಅನಿವಾರ್ಯ ಇದೆ. ಆದರೆ ಬಿಜೆಪಿಗೆ ಯತ್ನಾಳ ಅನಿವಾರ್ಯ ಇಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ಶಿಸ್ತಿನ ಪಕ್ಷವಾಗಿದೆ. ಬಿಜೆಪಿ ಪಕ್ಷಕ್ಕೆ ತನ್ನದೇ ಯಾದ ಸಿದ್ದಾಂತ ಹೊಂದಿದೆ. ಪಕ್ಷಕ್ಕೆ ಯಾರಿಂದ ಅನಿವಾರ್ಯ ಇಲ್ಲ. ಪಕ್ಷದ ಅನಿವಾರ್ಯ ಎಲ್ಲರಿಗೂ ಇದೆ. ಯತ್ನಾಳ ಅವರ ಅವಶ್ಯಕತೆ ಪಕ್ಷಕ್ಕೆ ಇಲ್ಲ, ಆದರೆ ಪಕ್ಷದ ಅನಿವಾರ್ಯ ಎಂದು ಹೇಳಿದರು.ಬಾಗಲಕೋಟೆ ಉಪಚುನಾವಣೆಯಲ್ಲಿ ಶಾಸಕ ಯತ್ನಾಳ ಅವರು ಬಿಜೆಪಿ ಪರ ಪ್ರಚಾರದ ಕುರಿತು ಹೇಳಿಕೆ ನೀಡಿದ ಅವರು, ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಆಪ್ತರಾಗಿದ್ದರಿಂದ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ. ಅವರಿಗೆ ಬಿಜೆಪಿಯಿಂದ ಯಾರೂ ಆವ್ಹಾನ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.ಯತ್ನಾಳವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಂಡರೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮನುಷ್ಯನ ಜೀವನದಲ್ಲಿ ಆರೋಗ್ಯ ಬಹಳಷ್ಟು ಪ್ರಮುಖವಾದದ್ದು ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕಾದರೆ ಜೀವನಶೈಲಿ, ಧನಾತ್ಮಕ ವಿಚಾರಿಸುವ ಶಕ್ತಿಯ ಬದಲಾವಣೆಯಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಲಾಗುವುದು. ನಮ್ಮ ದಿನನಿತ್ಯದ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ನಗರದ ಖ್ಯಾತ ವೈದ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಚ್ ಜಿ ದಡ್ಡಿ ಹೇಳಿದರು.ಅವರು ಪ್ರತಿಷ್ಠಿತ ಬಿ ಎಲ್ ಡಿ ಇ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಜಮಖಂಡಿಯಲ್ಲಿ ಮಂಗಳವಾರ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಸಹಪಾಧ್ಯಾಪಕರಾದಪ್ರೊ.ಎಲ್.ಎಮ್ ಮಾರ್ಕಪನಳ್ಳಿ ಅಧ್ಯಕ್ಷೀಯ ಪರ ನುಡಿಗಳನ್ನು ಹೇಳಿದರು. ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ಅಶ್ವಿನಿ ಅನಂತಪೂರ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಪ್ರೊ.ಪ್ರೇಮಾನಂದ ಹಿರೇಮಠ ರವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ಮೇಘಾ ಶಿರಗುಪ್ಪಿ, ನವೀನಕುಮಾರ ಬೆಳ್ಳುಬ್ಬಿ ಅನಿಸಿಕೆ ವ್ಯಕ್ತಪಡಿಸಿದರು. ಪ್ರಶಿಕ್ಷಣಾರ್ಥಿಗಳಾದ ಶ್ರುತಿ ಗುಡದಿ ಪ್ರಾರ್ಥನೆ, ಸಂಜನಾ ಬಾಡಗಿ ಸ್ವಾಗತ ಮತ್ತು ಪುಷ್ಪಾಪಣೆ, ವಿನಯ ಕಟ್ಟಿಮನಿ ಮುಖ್ಯ ಅತಿಥಿಗಳ ಪರಿಚಯ, ರಮೇಶ ಗೊಡಚಿ,…
ಡಾ.ಬಾಬು ಜಗಜೀವನ ರಾಮ್ ಜಯಂತಿ ಆಚರಿಸದ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಮುಖಂಡರ ಮನವಿ ಉದಯ ರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ನಿರ್ಲಕ್ಷಿಸಿದ ಅಧಿಕಾರಿ ರವೀಂದ್ರ ಮುರಗಾಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಿವಾನಂದ ಸೌದಾಗರ್ ಹಾಗೂ ದಲಿತ ಸಮುದಾಯದ ಮುಖಂಡರು ತಹಸೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಿವಾನಂದ ಸೌದಾಗರ್, “ತಾಲೂಕು ಆಡಳಿತದ ವತಿಯಿಂದ ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಆದರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿಯಲ್ಲಿ ಒಬ್ಬ ರಾಷ್ಟ್ರೀಯ ನಾಯಕರ ಜಯಂತಿಯನ್ನು ಆಚರಿಸದೆ ಇರುವುದು ವಿಷಾದನೀಯ. ಈ ಬಗ್ಗೆ ಅಧಿಕಾರಿ ರವೀಂದ್ರ ಮುರಗಾಲಿ ಅವರನ್ನು ದೂರವಾಣಿ ಮೂಲಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ಗೆ ೬೫೪೦.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷರಾದ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ ೫ ಕ್ವಿಂಟಲ್ನಂತೆ ಪ್ರತಿ ರೈತರಿಂದ ಗರಿಷ್ಠ ೨೦ ಕ್ವಿಂಟಾಲ್ ಖರೀದಿಸಲಾಗುತ್ತದೆ. ನೋಂದಣಿ ಅವಧಿ ೮೦ ದಿನಗಳವರೆಗೆ ಇದೆ. ಖರೀದಿ ಅವಧಿ ೯೦ ದಿನ ಇರುತ್ತದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತದೆ.ಕೃಷಿ ಇಲಾಖೆಯಿಂದ ನೀಡಿರುವ ಎಫ್.ಆಯ್.ಡಿ ಸಂಖ್ಯೆ.ಆಧಾರ್ ಕಾರ್ಡ ನೀಡಿ ರೈತರು ಹೆಸರು ನೋಂದಾಯಿಸಬಹುದು. ಪ್ರೊಟ್ಸ್ ತಂತ್ರಾಂಶದಲ್ಲಿ ಬೆಳೆ ಬೆಳೆಯುವುದು ಕಂಡು ಬರದಿದ್ದರೆ ಹತ್ತಿರದ ಕೃಷಿ ಇಲಾಖೆಗೆ ತೆರಳಿ ಅಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು.ತಾಲೂಕಿನ ಕುಸುಬೆ ಖರೀದಿ ಕೇಂದ್ರ: ಬಬಲೇಶ್ವರ ತಾಲೂಕು ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ಬಬಲೇಶ್ವರ, ಸವನಹಳ್ಳಿ, ಬೆಳ್ಳುಳ್ಳಿ, ತಾಜಪುರ, ವಿಜಯಪುರ ಟಿ.ಎ.ಪಿ.ಸಿ.ಎಂ.ಎಸ್ ವಿಜಯಪರ, ಮುದ್ದೇಬಿಹಾಳ ತಾಲೂಕಿನ ಎಣ್ಣೆಬೀಜ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪ್ರಕಟಣೆಯಾಗಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಲಭ್ಯವಿರುತ್ತವೆ. ಸಾಹಿತ್ಯಾಸಕ್ತರು ಪುಸ್ತಕಗಳನ್ನು ಕಚೇರಿ ವೇಳೆಯಲ್ಲಿ ಖರೀದಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:೦೮೩೫೨-೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಸಾಲೋಟಗಿ ಗ್ರಾಮದ ಶ್ರೀ ಶಿವಯೋಗೀಶ್ವರ ಜಾತ್ರೆಯ ನಿಮಿತ್ತ ನೀರಾಟ ವಿಬೃಂಜಣೆಯಿಂದ ಜರುಗಿತು.ರಾತ್ರಿ ೧ ಗಂಟೆಗೆ ಪಾಲ್ಗೊಂಡ ಯುವಕರು ಮತ್ತು ಭಕ್ತರು ಬೆಳಗ್ಗೆ ೬ ಗಂಟೆಯ ವರೆಗೆ ನೀರಾಟದಲ್ಲಿ ಪಾಲ್ಗೊಂಡಿದ್ದರು.ಶ್ರೀ ಶಿವಯೋಗೀಶ್ವರ ಹೊರಗಿನ ದೇವಸ್ಥಾನದ ಹತ್ತಿರ ಇರುವ ಬಾವಿಯಿಂದ ನೀರನ್ನು ಕೊಡದಲ್ಲಿ ಬಿಂದಿಗೆಯಲ್ಲಿ ತಂದು ದೇವಸ್ಥಾನದಲ್ಲಿರುವ ಗಂಗಮ್ಮನ ಬಿಂದಿಗೆಯ ಮೇಲೆ ಸುರಿಯುವದೇ ನೀರಾಟ ವೈಶಿಷ್ಠ.ಹಿನ್ನೆಲೆ – ಶಿವಯೋಗೀಶ್ವರರು ಗಂಗಾಬಿಕೆಯೊಂದಿಗೆ ಮದುವೆ ಆಗುವಾಗ ಬ್ರಹ್ಮಚಾರಿಯಾದ ಶಿವಯೋಗೀಶ್ವರರು ಮದುವೆ ಮಂಟಪದಿಂದ ಹೊರಗೆ ಹೋಗುತ್ತಾರೆ. ಸುರಿಗೆಯ ನೀರು ಗಂಗಾಬಿಕೆ ಮೇಲೆ ಮಾತ್ರ ಬಿಳುತ್ತದೆ. ಈ ಘಟನೆಯು ಕಣಮನ ಸೆಳೆಯುವ ನೀರಾಟವು ಸಂಕೇತಿಸುತ್ತದೆ. ಗಂಗಾಬಿಕೆಯನ್ನು ಸಂಕೇತಿಸುವ ಗಂಗಮ್ಮನ ಬಿಂದಿಗೆಗೆ ಶ್ರೀಗಂಧ ಛಡಿಗಳಿಂದ ಭದ್ರಪಡಿಸಲಾಗಿರುತ್ತದೆ. ಮದುವೆ ಮಂಟಪದಂತಿರುವ ಕಲ್ಲು ಮಂಟಪಕ್ಕೆ ಸಮೀಪ ಗುಡಿಯ ಮುಂದೆ ಬಾವಿ ಇದೆ. ಇದನ್ನು ಗಂಗಮ್ಮನ ಬಾವಿ ಎಂದು ಕರೆಯುತ್ತಾರೆ. ಭಕ್ತರು ಮಧ್ಯರಾತ್ರಿಯಿಂದ ನಸುಕಿನ ವರೆಗೆ ಈ ಬಾವಿಯಿಂದ ನೀರು ತಂದು ಪಂಚರು ಹೊತ್ತ ಗಂಗಮ್ಮನ ಬಿಂದಿಗೆಯ ಮೇಲೆ ಶಿವಯೋಗೀಶ್ವರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಮೂಹಿಕ ಮದುವೆಗಳು ಅರ್ಥಿಕ ಹೊರೆಯನ್ನು ಕಡಿಮೆ ಮಾಡುವದರ ಜತೆಗೆ ಕುಟುಂಬಗಳನ್ನು ಸಂಕಷ್ಟದಿಂದ ಪಾರು ಮಾಡುತ್ತವೆ. ನಾಡಿನ ಸಂತರ ಶರಣರ ಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು ಪುಣ್ಯವಂತರು ಎಂದು ಯರನಾಳದ ಶ್ರೀ ಸಂಗನಬಸವ ಶ್ರೀಗಳು ಹೇಳಿದರು.ತಾಲೂಕಿನ ಲಚ್ಯಾಣದ ಶ್ರೀ ಸಿದ್ದಲಿಂಗ ಮಹಾರಾಜರ ಮಠದಲ್ಲಿ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವ ನಿಮಿತ್ಯ ನಡೆದ ಧರ್ಮಸಭೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾಮೂಹಿಕ ವಿವಾಹದಿಂದ ದುಂದು ವೆಚ್ಚ ಕಡಿವಾಣ ಹಾಕುವದರ ಜತೆಗೆ ಸಮಾಜದಲ್ಲಿ ಸಾಮರಸ್ಯ ವೃದ್ದಿಸುತ್ತದೆ ಎಂದರು.ತುಂಗಳದ ಅನುಸುಯ ಅಮ್ಮನವರು ಮಾತನಾಡಿ ಸಾಮೂಹಿಕ ವಿವಾಹದಿಂದ ಸಮಾಜದಲ್ಲಿ ಸಾಮರಸ್ಯ ಸಹಬಾಳ್ವೆ ಮತ್ತು ಸೌಹಾರ್ಧತೆ ಹೆಚ್ಚಿಸುತ್ತದೆ. ಸರಳ ವಿವಾಹಕ್ಕೆ ಮಾದರಿಯಾಗುವ ಮೂಲಕ ದೇಶದ ಪ್ರಗತಿಗೂ ಸಹಕಾರಿಯಾಗಿ ಎಂದರು.ಮಂಜುನಾಥ ವಂದಾಲ, ಧರ್ಮರಾಜ ಮುಜಗೊಂಡ, ಸಿದ್ದಾರ್ಥ ಬೈಚಬಾಳ, ಎಂ.ಎಲ್ ಮುಜಗೊಂಡ, ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ ಮುರಲೀಧರ ಬಜಂತ್ರಿ ಮಾತನಾಡಿದರು.ವೇದಿಕೆಯ ಮೇಲೆ ಲಚ್ಯಾಣದ ಪೀಠಾಧಿಪತಿ ಡಾ. ವೃಷಭಲಿಂಗೇಶ್ವರ ಶ್ರೀಗಳು, ಸಿದ್ದಲಿಂಗ ದೇವರು ಜಕನೂರ, ಶಿವಾನಂದ ಶ್ರೀಗಳು…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ವಿಶ್ವ ಆರೋಗ್ಯ ದಿನದ ಉದ್ದೇಶ ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯದ ಮಾಹಿತಿಯನ್ನು ನೀಡುವುದು, ಮತ್ತು ಜನರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಗೋಪಿನಾಥ್ ತಿಳಿಸಿದರು.ಹಾರ್ಟ್ ಸಂಸ್ಥೆ ಮೈಸೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನದ ಕುರಿತು ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಮತ್ತು ತಾಲೂಕು ನೋಡಲ್ ಅಧಿಕಾರಿ ಡಾ. ಬೃಂದಾ ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಜ್ಞಾನದ ಸಹಕಾರವನ್ನು ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ವಿಶ್ವ ಸಂಸ್ಥೆ ಒಂದೊಂದು ಘೋಷವಾಕ್ಯವನ್ನು ಇಟ್ಟುಕೊಂಡು ಆಚರಣೆ ಮಾಡಲಾಗುತ್ತದೆ. ಇವಾಗ ನಾವು ಬೇಸಿಗೆ ಕಾಲದಲ್ಲಿ ಇದ್ದೇವೆ. ಈ ಸಮಯದಲ್ಲಿ ತುಂಬಾ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇದರ ಬಗ್ಗೆ ಸದಾ ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ಗುರುವೀರಸಿದ್ಧ ಶಿವಯೋಗಿಗಳ 76 ನೇ ಜಾತ್ರಾಮಹೋತ್ಸವ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿಯವರ ಚತುರ್ಥ ಪುಣ್ಯಾರಾಧನೆಯಂಗವಾಗಿ ಸೋಮವಾರ ಪ್ರಥಮ ಬಾರಿಗೆ ಗ್ರಾಮದ ಸೈನಿಕ ಬಳಗದ ಸಹಯೋಗದಲ್ಲಿ ಐದು ಕಿಲೋ ಮೀಟರ್ ಮೆಗಾ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ಜರುಗಿತು.ಓಟದ ಸ್ಪರ್ಧೆಗೆ ನಂದಿಮಠದ ವೀರಸಿದ್ಧ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿದ ಅವರು ಶ್ರೀಮಠದ ಜಾತ್ರಾ ಮಹೋತ್ಸವದಂಗವಾಗಿ ಸೈನಿಕ ಬಾಂಧವರು ಪ್ರಥಮ ಬಾರಿಗೆ ಯುವಕರ ನಡೆ ಕ್ರೀಡೆಯೆಡೆಗೆ ಧ್ಯೇಯದೊಂದಿಗೆ ಇಂತಹ ಓಟದ ಸ್ಪರ್ಧೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ಯುವಜನಾಂಗವು ಅಧ್ಯಯನದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡುವಂತಾಗಲೆಂದು ಆಶಯ ವ್ಯಕ್ತಪಡಿಸಿದರು.ಮಾಜಿ ಸೈನಿಕ ಭೀಮನಗೌಡ ಪಾಟೀಲ ಮಾತನಾಡಿ, ಯುವಜನಾಂಗಕ್ಕೆ ದೇಶ ಪ್ರೇಮ, ಸೇವೆ ಸಲ್ಲಿಸಲು ಪ್ರೇರಣೆ ನೀಡುವ ಸದುದ್ದೇಶದಿಂದ ಇಂತಹ ಓಟದ ಸ್ಪರ್ಧೆಯನ್ನು ಆಯೋಜನೆ ಮಾಡಿರುವದು ಒಳ್ಳೆಯದು. ಯುವಜನಾಂಗವು ಸೈನಿಕರಾಗಲು ಉತ್ತಮ ದೈಹಿಕ ಸಾಮರ್ಥ್ಯ ಹೊಂದುವ ಜೊತೆಗೆ ಉತ್ತಮ ನಡುವಳಿಕೆ ಹೊಂದಬೇಕು. ಸೈನ್ಯಕ್ಕೆ ಸೇರಲು ಬೇಕಾದ ಅರ್ಹತೆ ಕುರಿತು…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಜನಗಣತಿ ಕಾರ್ಯ ಒಂದು ಹಬ್ಬವಿದ್ದಂತೆ. ಡಿಜಿಟಲ್ ಮಾದರಿ ಜನಗಣತಿ ಕಾರ್ಯ ಮಾಡುವ ಮೂಲಕ ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಹಬ್ಬದಂತೆ ಯಶಸ್ವಿಗೊಳಿಸಬೇಕು ಎಂದು ತಹಶಿಲ್ದಾರ ಸುರೇಶ ಚವಲರ ಹೇಳಿದರು.ಪಟ್ಟಣದ ಎ.ಬಿ.ಜತ್ತಿ ಪದವಿಪೂರ್ವ ಮಹಾವಿಧ್ಯಾಲಯದಲ್ಲಿ ತಾಲ್ಲೂಕ ಆಡಳಿತ ಹಾಗೂ ಪಟ್ಟಣ ಪಂಚಾಯತಿ ಸಹಯೋಗದಲ್ಲಿ ಭಾರತದ ಜನಗಣತಿ 2027 ನಿಮಿತ್ಯ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮಂಗಳವಾರ ನಡೆದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸತ್ತಾರೆ ಎಂಬ ವಿಶ್ವಾಸವಿದೆ. ನಿಗದಿಪಡಿಸಿದ ನಕ್ಷೆಯನ್ನು ತಯಾರಿಸಿಕೊಂಡರೆ ಮೊದಲ ಹಂತದ ಮನೆಗಳ ಪಟ್ಟಿ ಕಾರ್ಯ ಮಾಡಲು ಸುಲಭವಾಗುತ್ತದೆ. ಭಾರತದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿ ತಿಳಿಯಲು ಜನಗಣತಿಯೇ ಮೂಲ ಆಧಾರವಾಗಿರುತ್ತದೆ. ಆದ್ದರಿಂದ ಪರಿಪೂರ್ಣ ಮಾಹಿತಿಯೊಂದಿಗೆ ಕರ್ತವ್ಯ ನಿರ್ವಹಿಸಿ ಗಣತಿ ಕಾರ್ಯ ಯಶಸ್ವಿಯಾಗಿಸಬೇಕು ಎಂದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಘು ನಡುವಿನಮನಿ, ಉಪತಹಶಿಲ್ದಾರ ಎಚ್.ಎನ್.ಬಡಿಗೇರ, ಎಸ್.ಬಿ.ಬಿರಾದರ, ಅನೀಲ ಕೊಟ್ಯಾಳ, ಪ್ರವೀಣ ಬಸರಕೋಡ, ಸಂತೋಷ ಹೆಗಡೆ, ರಮೇಶ ಚವ್ಹಾಣ ಇದ್ದರು.
