Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹೃದಯಾಘಾತದಿಂದ ನಿಧನರಾದ ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರವನ್ನು ಅಭಿಮಾನಿಗಳ ಅಂತಿಮ ದರ್ಶನಕ್ಕೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿರುವ ಅವರ ತೋಟದ ಮನೆಯ ರಂಗಾಶ್ರಯ ಸಭಾಭವನದಲ್ಲಿ ಮಂಗಳವಾರ ವ್ಯವಸ್ಥೆ ಮಾಡಲಾಗಿತ್ತು.ಉತ್ತರ ಕರ್ನಾಟಕದ ಹಾಸ್ಯ ಲೋಕದ ದಿಗ್ಗಜ ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಶಾಶ್ವತವಾಗಿ ತಮ್ಮ ನಗುವನ್ನು ನಿಲ್ಲಿಸಿದ್ದಾರೆ. ಕಲಿಯುಗದ ಕುಡುಕ ಖ್ಯಾತಿಯ ರಂಗ ಕಲಾವಿದನ ಅಗಲಿಕೆ ಕನ್ನಡ ರಂಗಭೂಮಿಗೆ ತುಂಬಲಾಗದ ನಷ್ಟ.ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರಕ್ಕೆ ಸಚಿವ ಶಿವಾನಂದ ಪಾಟೀಲ, ಹಿರಿಯ ನಟಿ ಉಮಾಶ್ರೀ, ಸಿಂದಗಿ ಶಾಸಕ ಅಶೋಕ ಮನಗೂಳಿ, ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ, ಮಾಜಿ ಶಾಸಕ ರಮೇಶ ಭೂಸನೂರ, ಎ.ಎಸ್.ಪಾಟೀಲ ನಡಹಳ್ಳಿ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ, ರಾಜಶೇಖರ ಕೂಚಬಾಳ, ಬಾಲ್ಯ ಸ್ನೇಹಿತ ಸಿದ್ದಣ್ಣ, ಬೆಂಗಳೂರು ರಂಗ ಸಮಾಜದ ಶ್ರೀಧರ ಹೆಗಡೆ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮುಂಗಾರು ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ ಹಾಗಾಗಿ ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ ಐವತ್ತು ಸಾವಿರ (೫೦,೦೦೦) ರೂಪಾಯಿ ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ (೧೦೦೦೦೦) ರೂಪಾಯಿ, ಬಹು ವಾರ್ಷಿಕ ಬೆಳೆಗಳಿಗೆ ಎರಡು ಲಕ್ಷ (೨೦೦೦೦೦) ರೂಪಾಯಿ ರೈತರಿಗೆ ಪರಿಹಾರ ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಆಗ್ರಹ ಮಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಚಡಚಣ ತಾಲೂಕ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮಂಗಳವಾರದಂದು ಮನವಿ ಸಲ್ಲಿಸಿ ಅವರು ಮಾತನಾಡಿದರು.ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸಲು ಪ್ರಮುಖ ಪಾತ್ರವಹಿಸುತ್ತವೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.ತಾಲೂಕಿನ ಮಸೂತಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಆವರಣದಲ್ಲಿ ಜರುಗಿದ ತಾಲೂಕು ಖೋ ಖೋ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ನಿರ್ಣಾಯಕರು ಎಲ್ಲ ಮಕ್ಕಳಿಗೂ ಸಮ ದೃಷ್ಟಿಯಿಂದ ಪ್ರಾಮಾಣಿಕ ನಿರ್ಣಯ ನೀಡಿ, ನಿಜವಾದ ಪ್ರತಿಭಾವಂತರನ್ನು ಗುರುತಿಸಬೇಕು,” ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಕ್ರೀಡಾ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ್ ಕಾಗಲ್ ನೆರವೇರಿಸಿದರು. ಕೆ.ವಿ. ಕುಲಕರ್ಣಿ ಹಾಗೂ ಸಿ.ಪಿ. ಪಾಟೀಲ ಕ್ರೀಡಾ ಜ್ಯೋತಿಗೆ ಬೆಳಕು ನೀಡಿದರು.ಪಂದ್ಯಾವಳಿಯನ್ನು ವಿವಿಧೋದ್ದೇಶ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಸಾಲಹಳ್ಳಿ ಉದ್ಘಾಟಿಸಿದರು. ರಾಷ್ಟ್ರೀಯ ಖೋ ಖೋ ಕ್ರೀಡಾಪಟು ಶ್ರಾವಣಿ ಸಾಲಳ್ಳಿ ಹಾಗೂ ಕ್ರೀಡಾಪಟುಗಳು ತಂದ ಕ್ರೀಡಾ ಜ್ಯೋತಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದಕಣ್ಙ ಹರಿಜನ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಹಾಗೂ ಗಣ್ಯರು ಗೌರವಪೂರ್ವಕವಾಗಿ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಸಂತೋಷ ಚನಗೊಂಡ, ಎಸ್.ಎಸ್. ಗೌರಿಮಠ,…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಮುಳವಾಡ ಮಲ್ಲಿಕಾರ್ಜುನ ಪ್ರೌಢಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ದೂರದರ್ಶಕ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಟೆಲೆಸ್ಕೋಪ ತಯಾರಿಸಿ ವರ್ಲ್ಡ ಬುಕ್ ಆಪ್ ರೆಕಾರ್ಡ್, ಏಷ್ಯ ಬುಕ್ ಆಫ್ ರೆಕಾರ್ಡ ಹಾಗೂ ಇಂಡಿಯ ಬುಕ್ ಆಫ್ ರೆಕಾರ್ಡ್ ಗಳಲ್ಲಿ ಸ್ಥಾನ ಪಡೆದಿದ್ದಾನೆ.ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತಿನ ಅಡಿಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಮಕ್ಕಳ ಟೆಲೆಸ್ಕೋಪ ತರಬೇತಿ ಸಿಬಿರ ಯಶಸ್ವಿಯಾಗಿ ಜರುಗಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 250 ಕ್ಕೂ ಹೆಚ್ಚು ಬಾಲವಿಜ್ಞಾನಿಗಳು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಹೆಸರನ್ನು ಎತ್ತಿ ಹಿಡಿದಿದ್ದಾರೆ.ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ ಅವರು , ಇಸ್ರೋದ ಶ್ರೇಷ್ಠ ವಿಜ್ಞಾನಿಗಳಾದ ಕಿರಣಕುಮಾರರು ಹಾಗೂ ಪರಿಷತ್ ಅಧ್ಯಕ್ಷರಾದ ಹುಲಿಕಲ್ಲ ನಟರಾಜ ಸೇರಿ ಕುಮಾರ ಕೃಷ್ಣ ಕುಂಬಾರನಿಗೆ “ನಾನೂ ವಿಜ್ಞಾನಿ-2025” ಪ್ರಶಸ್ತಿಯನ್ನು ಹಾಗೂ ಮುಳವಾಡ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಾದ ಡಿ.ಎಸ್.ಖಿಲಾರಿ ಅವರಿಗೂ ವರ್ಲ್ಡ ಆಫ್ ರೆಕಾರ್ಡ ಪ್ರಶಸ್ತಿಯಯನ್ನು ನೀಡಿ ಗೌರವಿಸಿದರು.ಸಾಧನೆಗೈದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಜಿಲ್ಲಾ ಶರಣ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಬಸ್ ನಿಲ್ದಾಣ 1 ರಲ್ಲಿ ಡಾಂಬರೀಕರಣ ಹಾಗೂ ಬಣ್ಣ ಹಚ್ಚುವ ಕಾರ್ಯ ಪ್ರಾರಂಭಿಸಲು ಕೊಲ್ಹಾರ ಅಭಿವೃದ್ಧಿ ಸಮೀತಿ ತಾಲ್ಲೂಕು ದಂಡಾಧಿಕಾರಿ ಗಳಿಗೆ ಸೋಮವಾರ ಮನವಿ ಸಲ್ಲಿಸಿದರು.ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣವು ತಾಲ್ಲೂಕಿನ ಪ್ರಮುಖ ನಿಲ್ದಾಣವಾಗಿದ್ದು, ಪ್ರತಿ ದಿನ 300ಕ್ಕೂ ಹೆಚ್ಚು ಬಸ್ಗಳು ಇಲ್ಲಿ ಸಂಚರಿಸುತ್ತವೆ. ಸುಮಾರು 15 ವರ್ಷಗಳ ಹಿಂದೆ ಬಸ್ ನಿಲ್ದಾಣ 1ರಲ್ಲಿ ಡಾಂಬರೀಕರಣ ಕಾರ್ಯ ನಡೆದಿದ್ದು ಆ ಬಳಿಕ ಯಾವುದೇ ರೀತಿ ದುರಸ್ತಿ ಅಥವಾ ಡಾಂಬರೀಕರಣ ನಡೆದಿಲ್ಲ ಹೀಗಾಗಿ ಬಸ್ ನಿಲ್ದಾಣದ ನೆಲವು ಸಂಪೂರ್ಣ ಹಾಳಾಗಿದ್ದು, ಬಸ್ ಹಾಗೂ ಖಾಸಗಿ ವಾಹನಗಳು ಸಂಚರಿಸುವ ವೇಳೆಯಲ್ಲಿ ಭಾರೀ ಪ್ರಮಾಣದ ಧೂಳಿನ ಮಬ್ಬು ಉಂಟಾಗಿ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತದೆ.ಈ ಧೂಳಿನಿಂದ ಕ್ಯಾಂಟೀನ್, ಅಂಗಡಿಗಳು ಮತ್ತು ಪಕ್ಕದಲ್ಲಿರುವ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ತೀರ್ವ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳು ಬಸ್ಗಾಗಿ ಕಾಯುವ ವೇಳೆ ಧೂಳಿನ ಪರಿಣಾಪುದಿಂದ ಅಲರ್ಜಿ, ಉಸಿರಾಟದ ತೊಂದರೆ ಮತ್ತು ಅನಾರೋಗ್ಯ ಉಂಟಾಗುತ್ತಿದೆ. ಬಸ್ ನಿಲ್ದಾಣದ ಸಿಬ್ಬಂದಿಗಳು ಸಹ…
ಬಿ. ಎಲ್. ಡಿ. ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯ ತಿಕೋಟಾದಲ್ಲಿ ಸಂಗೊಳ್ಳಿ ರಾಯಣ್ಣ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ರಾಷ್ಟ್ರದ ಅಪ್ರತಿಮ ದೇಶಭಕ್ತ ಸಂಗೊಳ್ಳಿ ರಾಯಣ್ಣ ಬ್ರಿಟಿಷರೊಂದಿಗೆ ಅಧಿಕಾರಕ್ಕಾಗಿ ಹೋರಾಡಲಿಲ್ಲ. ಆತ ಮಾತೃಭೂಮಿಯ ಸ್ವಾತಂತ್ರ್ಯಕ್ಕಾಗಿ, ತಾಯ್ನೆಲದ ರಕ್ಷಣೆಗಾಗಿ ಹೋರಾಟ ಮಾಡಿರುವುದನ್ನು ನಾವೆಲ್ಲ ಅರಿತುಕೊಳ್ಳಬೇಕು ಎಂದು ಚಡಚಣದ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಎಸ್. ಮಾಗಣಿಗೇರಿ ಅವರು ಹೇಳಿದರು.ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಸರಣಿ ಉಪನ್ಯಾಸ ಮಾಲಿಕೆಯ ಮೊದಲ ಉಪನ್ಯಾಸ ಬಿ. ಎಲ್. ಡಿ. ಇ ಸಂಸ್ಥೆಯ ತಿಕೋಟಾ ಪಟ್ಟಣದಲ್ಲಿನ ನೂತನ ಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಥಮ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ಕೇವಲ 32 ವರ್ಷ ಕಾಲ ಜೀವಿಸಿದರೂ ಆತನ ಜೀವನ ಸಾಧನೆ ನೂರಾರು ವರ್ಷಗಳ ನಂತರವೂ ಸ್ಮರಣೆ ಮಾಡುತ್ತಿರುವುದು ರಾಯಣ್ಣನ ಅಪ್ರತಿಮ ರಾಷ್ಟ್ರಪ್ರೇಮಕ್ಕೆ ನಿದರ್ಶನವಾಗಿದೆ. ರಾಯಣ್ಣನಿಗೆ ತನ್ನ ತಂದೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೈಲಾ ಸುಳೆಭಾವಿ ಅವರು ಸಲ್ಲಿಸಿದ್ದ “ವುಮೆನ್ ಲಿವಿಂಗ್ ವಿತ್ ಹೆಚ್ಐವಿ/ಎಡ್ಸ್ ಆಂಡ್ ಇಂಪ್ಲಿಕೇಶನ್ ಆನ್ ಫ್ಯಾಮಿಲಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.ಶೈಲಾ ಸುಳೆಭಾವಿ ಅವರು ಕುಲಪತಿಯಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೈಲಾ ಸುಳೆಭಾವಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ನಾನು ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ ಎಂದ ಡಿಕೆಶಿ | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಡಿ.ಕೆ ಶಿವಕುಮಾರ್ ಕೌಂಟರ್! ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾರ ತೀರ್ಮಾನ ನಿರ್ಣಾಯಕ ಎಂಬ ವಿಷಯದ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಕೌಂಟರ್ ನೀಡಿದ್ದಾರೆ. ಮುಖ್ಯಮಂತ್ರಿಯಾಗಲು ಶಾಸಕರ ಬಲ ಮುಖ್ಯವಲ್ಲ. ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಅಭಿಪ್ರಾಯಪಟ್ಟಿದ್ದಾರೆ.ಸುದ್ದಿವಾಹಿನಿಗೆ ಇತ್ತೀಚೆಗೆ ಸಂದರ್ಶನ ನೀಡಿದ್ದ ಶಿವಕುಮಾರ್, ಶಾಸಕರ ಬಲಾಬಲದ ಮೇಲೆ ಮುಖ್ಯಮಂತ್ರಿ ಸ್ಥಾನ ನಿರ್ಧಾರ ಆಗುವುದಿಲ್ಲ. ಹೈಕಮಾಂಡ್ ಮಾತೇ ಅಂತಿಮ. ವರಿಷ್ಠರು ಹೇಳಿದ್ದನ್ನು ಕೇಳಬೇಕು. ಹೈಕಮಾಂಡ್ನವರು ಏನು ಕೆಲಸ ಕೊಡುತ್ತಾರೊ ಅದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದಿದ್ದರು. ನವೆಂಬರ್ನಲ್ಲಿ ಯಾವುದೇ ಕ್ರಾಂತಿಯಿಲ್ಲ.ಅದೆಲ್ಲವೂ ಸೃಷ್ಟಿಯಷ್ಟೆ. ಕಾಂಗ್ರೆಸ್ ಪಕ್ಷದಲ್ಲಿ ನಿರ್ಧಾರಗಳು ಹೈಕಮಾಂಡ್ ಮಟ್ಟದಲ್ಲಿಯೇ ಆಗುತ್ತವೆ. ಸಂಖ್ಯಾಬಲದಿಂದ ಯಾವುದೂ ನಿರ್ಧಾರವಾಗುವುದಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ. ಯಾರನ್ನು ಎಲ್ಲಿಡಬೇಕು, ಯಾವಾಗ ಸ್ಥಾನಮಾನ ನೀಡಬೇಕು,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಹಾಗೆ ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂಡಿ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಮಾನವ ಹಕ್ಕುಗಳ ತನಿಖಾ ಸಮಿತಿಯ ಇಂಡಿ ತಾಲೂಕ ಅಧ್ಯಕ್ಷರಾಗಿ ಶಿವಾನಂದ ಕಾಮಗೊಂಡ, ಗೌರವಾಧ್ಯಕ್ಷರಾಗಿ ಉಮೇಶ ಬಳಬಟ್ಟಿ, ಉಪಾಧ್ಯಕ್ಷರಾಗಿ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿಯಾಗಿ ಶ್ರೀಶೈಲ ಬೀಳಗಿ, ಪ್ರಧಾನ ಕಾರ್ಯದರ್ಶಿಯಾಗಿ ಸನ್ಮತಿ ಹಳ್ಳಿ, ಕಾನೂನು ಸಲಹೆಗಾರರನ್ನಾಗಿ ಪ್ರಸನ್ನಕುಮಾರ ನಾಡಗೌಡ, ಸದಸ್ಯರನ್ನಾಗಿ ಶ್ರೀಮಂತ ಬಿರಾದಾರ್ ಅವರನ್ನು ನೇಮಕ ಮಾಡಲಾಗಿದೆ. ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಸಂಸ್ಥಾಪಕ ಸಂತೋಷ್.ಕೆ ಹಾಗೂ ವಿಜಯಪುರ ಜಿಲ್ಲಾ ಅಧ್ಯಕ್ಷ ಪೂರ್ಣಾನಂದ ಎಸ್.ಎನ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎಲ್ಲ ಪದಾಧಿಕಾರಿಗಳು ತಮಗೆ ನೀಡಿದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ, ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಹೋರಾಟ ಹಮ್ಮಿಕೊಂಡು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳುವಳಿಕೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
