Author: editor.udayarashmi@gmail.com

ಏ.9 ರಂದು ನಡೆಯಲಿರುವ ಉಪಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶ | ವಿಪಕ್ಷ ನಾಯಕ ಆರ್.ಅಶೋಕ ಹೇಳಿಕೆ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್‌ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸ್ಪರ್ಧೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದ್ದು, ರಾಜ್ಯದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರನ್ನು ಗೆಲ್ಲಿಸಿ’ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಬಿಜೆಪಿ ಬಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ದಾವಣಗೆರೆಯಲ್ಲಿ ಬಿಜೆಪಿ ಸಾಮಾನ್ಯ ವ್ಯಕ್ತಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ ಪ್ರಬಲ ಮತ್ತು ಪ್ರಭಾವಿಗಳಿಗೆ ಟಿಕೆಟ್ ನೀಡಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದು ತಿಳಿಸಿದರು.ಕಾಂಗ್ರೆಸ್ ಎರಡೂ ಕಡೆ ವಂಶಾಡಳಿತ ರಾಜಕಾರಣಕ್ಕೆ ಅವಕಾಶ ನೀಡಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಪ್ರಬಲ ಅವಕಾಶವಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್…

Read More

ಲೇಖಕರುಶ್ರೀ ಹರಿಹರ ಶಿವಕುಮಾರಪ್ರಕಾಶಕರು, ಹರಿವು ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರುಬೆಲೆ 180 ರೂಪಾಯಿವರ್ಷ 2026 ಉದಯರಶ್ಮಿ ದಿನಪತ್ರಿಕೆ ನಾಡಿನ ಹಿರಿಯ ಅನುಭಾವಿ ಚಿಂತಕರು ಸಾಹಿತಿಗಳೂ ಆದ ಹರಿಹರ ಶಿವಕುಮಾರ ಬೆಂಗಳೂರು ಇವರು ಹರಿವು ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಪ್ರಕಾಶಕರ ಮೂಲಕ ಅನನ್ಯ ಅಲ್ಲಮ ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಿದ್ದು ವಚನ ಸಾಹಿತ್ಯದ ಮೌಲ್ಯವನ್ನು ಪಸರಿಸುವ ವೈಚಾರಿಕ ನೆಲೆಯಲ್ಲಿ ರೂಪಗೊಂಡ ಸಿದ್ಧಾಂತಗಳ ಚರ್ಚೆಗೆ ಅವಕಾಶ ಮಾಡಿಕೊಡುವ ಸಂಗ್ರಹಕ್ಕೆ ಯೋಗ್ಯವಾದ ಒಂದು ಸುಂದರ ಆಕರ ಗ್ರಂಥ.ಹರಿಹರ ಶಿವಕುಮಾರ ಬೆಂಗಳೂರು ಇವರು ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನವರು.ವಚನ ಸಾಹಿತ್ಯದ ಬಗ್ಗೆ ಆಳವಾದ ಅಧ್ಯಯನ ಮಾಡಿದ ಅಪರೂಪದ ಪ್ರಬುದ್ಧ ಪ್ರಾಮಾಣಿಕ ವ್ಯಕ್ತಿ.ಅನನ್ಯ ಅಲ್ಲಮ ಎಂಬ ಕೃತಿಯಲ್ಲಿ ಇವರು ಅಲ್ಲಮ ಪ್ರಭುಗಳ 75 ಸರಳ ಸ್ಥಲ ಕಟ್ಟಿನ ವಚನಗಳನ್ನು ಆಯ್ಕೆ ಮಾಡಿದ್ದಾರೆ.ಅಲ್ಲಮರ ವಚನ ವಿಶ್ಲೇಷಣೆ ಚಿಂತನೆ ನಿಜಕ್ಕೂ ಕಬ್ಬಿಣದ ಕಡಲೆ ಇದ್ದ ಹಾಗೆ. ಲೇಖಕರಿಗೂ ಅಲ್ಲಮರ ವಚನ ವಿಶ್ಲೇಷಣೆ ಒಂದು ಕಠಿಣ ಪರಿಶ್ರಮವೆಂದು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದ ಹಿರಿಯ ವ್ಯಕ್ತಿಯನ್ನು ಗುರುತಿಸಿ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಸರಕಾರಕ್ಕೆ ಮತ್ತು ಸಿಂದಗಿ ಶಾಸಕರಿಗೆ ಅಭಿನಂದನೆಗಳು ಎಂದು ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಶಿವಾಜಿ ಮೇಟಗಾರ ಹೇಳಿದರು.ಸಿಂದಗಿ ನಗರದ ಮರಗಮ್ಮ ಲಕ್ಕಮ್ಮ ದೇವಸ್ಥಾನದಲ್ಲಿ ನೂತನವಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಹಣಮಂತ ಸುಣಗಾರ ಅವರಿಗೆ ತಳವಾರ ಸಮಾಜದ ವತಿಯಿಂದ ಹಮ್ಮಿಕೊಂಡ ಸನ್ಮಾನಿಸಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಧನೆ ಮಾಡಿದ ಸಾಧಕರಿಗೆ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ಸನ್ಮಾನವನ್ನು ಸ್ವೀಕರಿಸಿದ ನೂತನ ಅಧ್ಯಕ್ಷ ಹಣಮಂತ ಸುಣಗಾರ ಮಾತನಾಡಿ, ಪಕ್ಷ ಹಾಗೂ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪಕ್ಷದ ಹಿರಿಯರು, ಸಿಎಂ, ಡಿಸಿಎಂ ಹಾಗೂ ಸಚಿವರು ನನ್ನನ್ನು ಈ ಹುದ್ದೆಗೆ ನೇಮಕವಾಗಲು ಸಹಕರಿಸಿದ್ದಾರೆ. ಹಿರಿಯರು ಹಾಗೂ ಸಾರ್ವಜನಿಕರು ಇಟ್ಟಿರುವ ಭರವಸೆಗೆ ಚ್ಯುತಿ ಬಾರದಂತೆ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.ಈ ವೇಳೆ ಎಸ್.ಎಂ.ಬಿರಾದಾರ, ಭೀಮರಾಯ ಯಾತನೂರ, ಪರಶುರಾಮ…

Read More

ಲೇಖನ- ಜ್ಯೋತಿ ಎಸ್ಪತ್ರಿಕೋದ್ಯಮ ವಿದ್ಯಾರ್ಥಿನಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಭರತನಾಟ್ಯದ ನಾದವೇ ಜೀವನದ ಸ್ಪಂದನೆ ಎಂದು ನಂಬಿಕೊಂಡು, ಹೆಜ್ಜೆಗೆ ಗೆಜ್ಜೆ ಕಟ್ಟಿದ ಕ್ಷಣದಿಂದಲೇ ಕಲೆಯ ಮಾರ್ಗದಲ್ಲಿ ನಿಶ್ಚಲವಾಗಿ ಸಾಗುತ್ತಿರುವ ಯುವ ನೃತ್ಯ ಸಾಧಕಿ ಕುಮಾರಿ ಪ್ರಣಾಂಜಲಿ, ಇಂದಿನ ತಲೆಮಾರಿನಲ್ಲೇ ವಿಶಿಷ್ಟ ಸಾಂಸ್ಕೃತಿಕ ಚೈತನ್ಯವನ್ನು ಹೊತ್ತಿರುವ ಕಲಾವಿದೆ.ಭರತನಾಟ್ಯದ ಮಧುರ ಲಯಕ್ಕೆ ಬಾಲ್ಯದಲ್ಲೇ ಮನಸೋತು, ಎಂಟರ ಎಳೆವಯಸ್ಸಿನಲ್ಲೇ ಗೆಜ್ಜೆ ಕಟ್ಟಿದ ಪ್ರತಿಭಾವಂತ ನೃತ್ಯಗಾರ್ತಿ ಕುಮಾರಿ ಪ್ರಣಾಂಜಲಿ, ಇಂದು ತನ್ನ ಕಲೆ ಮೂಲಕ ಸಂಸ್ಕೃತಿಯ ಸೌಂದರ್ಯವನ್ನು ಹರಡುತ್ತಿರುವ ಯುವ ಕಲಾವಿದೆ. ಭರತನಾಟ್ಯದ ಲಯ ಲಾಸ್ಯಕ್ಕೆ ಮನಸೊಪ್ಪಿದ ಅವಳು, ಧಾರವಾಡದ ಸಂಸ್ಕೃತಿಯ ಸುವಾಸನೆಯಲ್ಲಿ ವಿದುಷಿ ಶ್ರೀಮತಿ ಕುಮುದಿನಿ ರಾವ್ ಅವರಲ್ಲಿ ಪಂದನಲ್ಲೂರು ಶೈಲಿಯ ಶಿಸ್ತಿನ ಅಭ್ಯಾಸವನ್ನು ಆರಂಭಿಸಿದಳು. ಅದೇ ಸಮಯದಲ್ಲಿ ಕಥಕ್‌ನ ಸೊಗಡನ್ನೂ ಅರ್ಥೈಸಿಕೊಂಡು ತನ್ನ ಕಲಾ ವಿಸ್ತಾರವನ್ನು ಹೆಚ್ಚಿಸಿಕೊಂಡಳು. ನಂತರ ಬೆಂಗಳೂರಿನ ಕಲಾಭೂಮಿಯಲ್ಲಿ ವಳವೂರು ಶೈಲಿಯ ನುಡಿಮುತ್ತುಗಳನ್ನು ವಿದುಷಿ ಬಿ. ಭಾನುಮತಿ ಅವರಿಂದ ಕಲಿತು, ಅವರ ಆಶೀರ್ವಾದದಲ್ಲಿ ರಂಗಪ್ರವೇಶದ ಮಹತ್ವದ ಹೆಜ್ಜೆಯನ್ನು ಇಟ್ಟಳು. ವಿದುಷಿ ವಂದನಾ ಭಾರಧ್ವಾಜ್…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮.ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಹಳ್ಳಿಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ ಹರೀಶನು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ಉದ್ದೇಶದಿಂದ ತನ್ನ ಹೆಂಡತಿ ಜೊತೆಗೆ ಪಟ್ಟಣಕ್ಕೆ ಉದ್ಯೋಗಕ್ಕೆಂದು ಬಂದನು. ಪಟ್ಟಣದಲ್ಲಿ ಈ ದಂಪತಿಗಳಿಬ್ಬರು ಬಾಡಿಗೆಯ ಮನೆಯೊಂದರಲ್ಲಿ ವಾಸವಾಗಿದ್ದರು. ಒಂದು ದಿನ ಹರೀಶನ ಹೆಂಡತಿ ಮಂಜುಳಾ ತನ್ನ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬಳು ತನ್ನ ದೈನಂದಿನ ಬಟ್ಟೆಗಳನ್ನು ಒಗೆದು ಒಣಗಲು ಹಾಕಿರುವುದನ್ನು ಕಿಟಕಿಯ ಮೂಲಕ ನೋಡಿದಳು. ಕಿಟಕಿಯ ಮೂಲಕ ಹೊರಗೆ ನೋಡಿದಾಗ ಆಕೆಯು ಒಗೆದು ಒಣಗಲು ಹಾಕಿದ್ದ ಬಟ್ಟೆಗಳು ಸ್ವಚ್ಛವಾಗಿರದೇ, ತೀರಾ ಕೊಳೆಯಾಗಿ ಇರುವುದು ಕಂಡುಬಂತು.ಬಹುಶಃ ಆಕೆಗೆ ಈಗಷ್ಟೇ ಮದುವೆ ಆಗಿರಬೇಕು, ಹಾಗಾಗಿ ಸ್ವಚ್ಛವಾಗಿ ಬಟ್ಟೆ ಒಗೆಯುವುದನ್ನು ಆಕೆಯಿನ್ನೂ ಕಲಿತಿರಲಿಕ್ಕಿಲ್ಲ, ಅಥವಾ ಬಟ್ಟೆ ಸ್ವಚ್ಛವಾಗಿ ಒಗೆಯಲು ಅಗತ್ಯವಿರುವ ಸಾಬೂನು ಮತ್ತು ಬಟ್ಟೆ ಒಗೆಯುವ ಪುಡಿ ಆಕೆಯಲ್ಲಿ ಇಲ್ಲದಿರಬಹುದು ಎಂದು ವ್ಯಂಗ್ಯವಾಗಿ ಮಂಜುಳಾ ತನ್ನ ಗಂಡನಿಗೆ ಹೇಳಿದಳು. ಪ್ರತಿದಿನವೂ ಆಕೆಯು ಒಗೆದು ಹಾಕುತ್ತಿದ್ದ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಸೇರಿದ್ದ ಜನಸ್ತೋಮ ಕಂಡು ದಿಗಿಲುಗೊಂಡಿರುವ ಕಾಂಗ್ರೆಸ್ ನಾಯಕರು, ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಅವರನ್ನು ವೈಯಕ್ತಿಕವಾಗಿ ನಿಂದಿಸುವುದನ್ನು ಬಿಡಬೇಕು. ಇಲ್ಲವೇ ಶಾಸಕರ ಕಾರ್ಯವೈಖರಿ ಕುರಿತು ಬಹಿರಂಗ ಚರ್ಚೆಗೆ ಬರಬೇಕು ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ರಾಜೇಂದ್ರ ಸವಾಲು ಹಾಕಿದ್ದಾರೆ.ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮಕ್ಕೆ ಜಾಗ ಕೊಡುವಂತೆ ಅರ್ಜಿಯನ್ನೇ ಹಾಕಿರಲಿಲ್ಲ ಎಂಬ ಬಿ.ವಿ.ಬಸವರಾಜು ಆರೋಪ ಸತ್ಯಕ್ಕೆ ದೂರವಾದದ್ದು. ಅರ್ಜಿ ಹಾಕಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಅರ್ಜಿ ತೋರಿಸಿದರು.ಸತತ ಎರಡು ಬಾರಿ ಗೆದ್ದಿರುವ ಶಾಸಕ ಅನಿಲ್ ಚಿಕ್ಕಮಾದು ಹೆಚ್ ಡಿ ಕೋಟೆ ಕೋಟೆ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಈಗಲೂ ಅವರ ಸಾಧನೆ ಶೂನ್ಯ, ಈ ಕುರಿತು ನಾನು ಚರ್ಚೆಗೆ ರೆಡಿ ಇದ್ದೇನೆ ಎಂದು ಗುಡುಗಿದರು.ಶಾಸಕ ಅನಿಲ್ ಚಿಕ್ಕಮಾದು ಕೆಲವರ ಕೈಗೊಂಬೆ ಆಗಿದ್ದಾರೆ. ಬಿ.ವಿ ಬಸವರಾಜುಈಗ ಜಿಲ್ಲಾ ಪಂಚಾಯತ್ ಚುನಾವಣೆ ಟಿಕೆಟ್ ಗಾಗಿ ಶಾಸಕರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಸಿರು ಕ್ರಾಂತಿಯನ್ನು ಯಶಸ್ವಿಗೊಳಿಸುವ ಮೂಲಕ ಆಹಾರ ಭದ್ರತೆಗೆ ಬುನಾದಿ ಹಾಕಿದವರು ಬಾಬು ಜಗಜೀವನರಾಮ ಎಂದು ಶ್ರೀ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸತ್ಯಣ್ಣ ಹಡಪದ ಹೇಳಿದರು.ನಗರದ ಬಾಬು ಜಗಜೀವನರಾಮ ಸಬಾಭವನದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಬು ಜಗಜೀವನರಾಮರವರ ೧೧೯ ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಜನಮಾನಸದಲ್ಲಿ ಬಾಬೂಜಿ ಎಂದೇ ಜನಪ್ರಿಯರಾಗಿರುವ ಬಾಬು ಜಗಜೀವನರಾಮ ಅವರು ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ. ದೇಶದ ಅತ್ಯುನ್ನತ ಸಂಸದೀಯ ಪಟುಗಳಲ್ಲಿ ಒಬ್ಬರಾಗಿದ್ದರು. ದಲಿತ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡಿ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದರು.ಮುಖಂಡ ಸುರೇಶ ನಡಗಡ್ಡಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ಶರಣಪ್ಪ ಚಾಳಿಕಾರ ಮಾತನಾಡಿದರು.ವೇದಿಕೆಯ ಮೇಲೆ ನಗರಸಭೆ ಆಯುಕ್ತ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ತಾಪಂ ಯೋಜನಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿ ಪ್ರವೇಶ ಪತ್ರಗಳನ್ನು ಬಿಡುಗೊಳಿಸಲಾಗಿದೆ.‌ಏ.12 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪತ್ರಗಳನ್ನು ಅಲ್ಪಸಂಖ್ಯಾತರ : Website :https://erp.dom.karnataka.gov.in/adm/Admission/studentHallticket ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.ಪ್ರತಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೂ ಕೂಡಾ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಮೌಲಾನಾ ಆಜಾದ ಭವನ, ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-586109, ದೂರವಾಣಿ ಸಂಖ್ಯೆ :08352-295523 ಸಂಪರ್ಕಿಸಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ‌ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿಯಲ್ಲಿ 750 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ನೀಡಲಾಗುತ್ತಿದೆ.ಅದೇ ಮಾದರಿಯಲ್ಲಿ‌ ಮುದ್ದೇಬಿಹಾಳ ತಾಲೂಕಿನ ಯರಝರಿ ಹಾಗೂ ಸಿಂದಗಿ‌ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ತಲಾ ಒಂದೊಂದು‌ ಗ್ರಾಮ್ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರು ಏ.15 ರೊಳಗಾಗಿ ಅರ್ಜಿ‌ ಸಲ್ಲಿಸಬಹುದಾಗಿದೆ.ಅರ್ಜಿಯನ್ನು https://sevasindhuservices.karnataka.gov.in ಮೂಲಕ ಸಲ್ಲಿಸಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ಕೇಳಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More