Author: editor.udayarashmi@gmail.com

ಹಾಲುಮತ ಸಮುದಾಯದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ವಿರುದ್ಧ ಗಂಭೀರ ಆರೋಪ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ದಲಿತ ಸಮುದಾಯದ ರವಿಚಂದ್ರ ಮಾದರ ಈತನನ್ನು ಬ.ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿಯ ಎನ್.ಎಸ್. ಪೂಜಾರಿ ಕಂಪನಿ ಪ್ಲಾಂಟ್ ಎದುರು ಪೂರ್ವನಿಯೋಜಿತ ಭೀಕರ ಹತ್ಯೆಗೈದ ಅಪರಾಧಿಗಳನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ವಿವಿಧ ದಲಿತಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತದೇಹವನ್ನಿಟ್ಟು ರಸ್ತಾ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.ಈ ವೇಳೆ ಡಿಎಸ್‌ಎಸ್ ಮುಖಂಡ ಹರೀಶ್ ನಾಟೆಕಾರ ಮಾತನಾಡಿ, ೪ವರ್ಷಗಳ ಕಾಲ ದುಡಿಸಿಕೊಂಡು ಮರ್ಮಾಂಗವೇ ಇಲ್ಲದಂತೆ ಕ್ರೂರವಾಗಿ ಹತ್ಯೆ ಮಾಡಿರುವದು ಹೇಯ ಕೃತ್ಯ. ಸಮಾಜದ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಮದರಿ ಅವರು ಇಂತಹ ಕೃತ್ಯ ಮಾಡುತ್ತಿರುವದು ಇದು ಎರಡನೇ ಬಾರಿ. ಘಟನೆಯ ಬಳಿಕ ನಾನು ಸಿಎಂ ನ ಆಪ್ತ, ನೀವು ದಲಿತರು ನನಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಗರ್ವದಿಂದ ಹೇಳಿದ ಇವರಿಗೆ ನಾವು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನೋಂದಣಿ ಇಲಾಖೆ ಪೇಪರ್‌ಲೆಸ್ ನೋಂದಣಿ ವ್ಯವಸ್ಥೆ ಜಾರಿಗೆ ತಂದಿರುವದನ್ನ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬುಧವಾರ ರಾಜ್ಯದಾದ್ಯಂತ ದಸ್ತು ಬರಹಗಾರರ ಚಾರಿಟೇಬಲ್ ಟ್ರಸ್ಟ್ ನಡೆಸಿದ ಮುಷ್ಕರಕ್ಕೆ ಇಲ್ಲಿನ ತಾಲೂಕು ಘಟಕ ಬೆಂಬಲ ಸೂಚಿಸಿತು.ಬೆಳಿಗ್ಗೆಯಿಂದಲೇ ಸಾಂಕೇತಿಕ ಲೇಕನಿ ಬಂದ್ ಮಾಡಿ ತಾಲೂಕು ಘಟಕದದಿಂದ ಸಭೆ ನಡೆಸಿದರು. ಬಳಿಕ ಸಿ.ಎಂ ಸಿದ್ಧರಾಮಯ್ಯನವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಕೀರ್ತಿ ಚಾಲಕ ಅವರಿಗೆ ನೀಡಿದರು.ಈ ವೇಳೆ ಟ್ರಸ್ಟ್ ನ ತಾಲೂಕು ಅಧ್ಯಕ್ಷ ಎಚ್.ಆರ್.ಬಾಗವಾನ ಮಾಧ್ಯದವರೊಂದಿಗೆ ಮಾತನಾಡಿ ಸರ್ಕಾರದಿಂದ ಪರವಾನಿಗೆ ಪಡೆದು ದಶಕಗಳಿಂದ ದಸ್ತಾವೇಜು ಬರಹಗಾರರು ಸಾರ್ವಜನಿಕರ ಆಸ್ತಿ ನೋಂದಣಿ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಇಲಾಖೆಯ ನಿಯಮಾವಳಿಗಳ ಪ್ರಕಾರ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕಾವೇರಿ ೨.೦ ತಂತ್ರಾಂಶದ ಬಳಿಕ ಇದೀಗ ಕಾವೇರಿ ೩ ಮೂಲಕ “ಪೇಪರ್ ಲೆಸ್ ನೋಂದಣಿ” ವ್ಯವಸ್ಥೆಯನ್ನು ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದರಿಂದ ಸಾರ್ವಜನಿಕರು ಮತ್ತು ದಸ್ತುಬರಹಗಾರರ ನಡುವೆ ಅನೇಕ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರ ಭೂಮಿ,…

Read More

ಬಬಲೇಶ್ವರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರೀತಿ ಗಡೇದ ಕರೆ ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಪಟ್ಟಣದ ಸ್ವಚ್ಛತೆಗೆ ಮತ್ತು ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಹೊಸದಾಗಿ ಜಾರಿಗೆ ತಂದಿದೆ. ಕಾರಣ ಬಬಲೇಶ್ವರ ಪಟ್ಟಣವನ್ನು ತ್ಯಾಜ್ಯ ಮುಕ್ತ ಸುಂದರ ಪಟ್ಟಣವನ್ನಾಗಿ ಮಾಡಲು ಪಟ್ಟಣ ಪಂಚಾಯತಿಯೊಂದಿಗೆ ಸಾರ್ವಜನಿಕರು ಹಾಗೂ ಉದ್ದಿಮೆದಾರರೊಳಗೊಂಡು ಪ್ರತಿಯೊಬ್ಬ ನಾಗರಿಕರು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರೀತಿ ಗಡೇದ ಹೇಳಿದರು.ಪಟ್ಟಣದಲ್ಲಿ ಬುಧವಾರ ಘನತ್ಯಾಜ್ಯ ನಿಯಮ ೨೦೨೬ ರ ಅನುಷ್ಠಾನಕ್ಕೆ ಸಹಕರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಸ್ವಚ್ಛತೆ ಎನ್ನುವುದು ಕೇವಲ ಯಾರೋ ಒಬ್ಬರ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಮತ್ತು ಸ್ವಚ್ಛ ಸಮಾಜವೇ ಪ್ರಗತಿಪರ ದೇಶದ ಅಡಿಪಾಯ. ಆದ್ದರಿಂದ ಇಂದಿನಿಂದಲೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯವಂತ ಭಾರತ ನಿರ್ಮಿಸೋಣ ಎಂದರು.ತ್ಯಾಜ್ಯದ ಮೂಲ ವರ್ಗಿಕರಣ ನಿಮ್ಮ ಮನೆಯ ತ್ಯಾಜ್ಯವನ್ನು ಪಟ್ಟಣ ಪಂಚಾಯತ ವಾಹನಕ್ಕೆ ನೀಡುವಾಗಲೇ ನಾಲ್ಕು ಭಾಗಗಳ ಕಸವನ್ನಾಗಿ ವಿಂಗಡಿಸಿ ನೀಡಬೇಕು. ಹಸಿ ತ್ಯಾಜ್ಯ: ಅಡುಗೆ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಹೆಮ್ಮೆಯ ಪುತ್ರ ಅಡಿವೆಪ್ಪ ದೊಡಮನಿ ಅವರು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.ಅರಣ್ಯ ಇಲಾಖೆಯಲ್ಲಿ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ ದೊಡಮನಿ ಅವರ ಪದೋನ್ನತಿಯು ಇಡೀ ಗ್ರಾಮಕ್ಕೆ ಹೆಮ್ಮೆ ತಂದಿದೆ. ಸದ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದರು. ಹಾಗೂ ಮುಂದಿನ ಸೇವಾವಧಿ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ನೂತನ ವಲಯ ಅರಣ್ಯಾಧಿಕಾರಿ ಅಡಿವೆಪ್ಪ ದೊಡಮನಿ, ನನ್ನ ಈ ಸಾಧನೆಗೆ ಗ್ರಾಮಸ್ಥರ ಆಶೀರ್ವಾದ ಹಿರಿಯರ ಮಾರ್ಗದರ್ಶನ ಮತ್ತು ಸ್ನೇಹಿತರ ಸಹಕಾರವೇ ಕಾರಣ ಅರಣ್ಯ ಸಂರಕ್ಷಣೆ ನನ್ನ ಮೊದಲ ಆದ್ಯತೆಯಾಗಿದ್ದು ಜನರ ಸಹಕಾರದೊಂದಿಗೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.ಈ ವೇಳೆ ಪತ್ರಕರ್ತರಾದ ವಿಲಾಸ ಕಾಂಬಳೆ, ಗೀರೆಪ್ಪಾ ಕಾಂಬಳೆ,…

Read More

ಚಾಮರಾಜನಗರ ಜಿಲ್ಲೆಯ ಯಳಂದೂರಿನ ಹಿರಿಯ ಪತ್ರಕರ್ತ ನಾಗರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ’ಉದಯರಶ್ಮಿ’ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಈಚೆಗೆ ’ಬಸವ ಸೇವಾ ಪ್ರಶಸ್ತಿ’ ಗೌರವಕ್ಕೆ ಭಾಜನರಾದ ಪ್ರಯುಕ್ತ ಚಾಮರಾಜನಗರ ಜಿಲ್ಲೆಯ ಯಳಂದೂರಿನ ಹಿರಿಯ ಪತ್ರಕರ್ತ ನಾಗರಾಜ ಅವರು ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಪತ್ರಕರ್ತ ನಾಗರಾಜ ಅವರು, ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಯ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಸನ್ಮಿತ್ರ ಇಂದುಶೇಖರ ಅವರ ಶ್ರಮ ಮತ್ತು ಬದ್ಧತೆಯನ್ನು ಗೌರವಿಸಲು ಮಾನವೀಯತೆ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ವಿಶ್ವಗುರು ಬಸವಣ್ಣನವರ ಹೆಸರಿನ ಪ್ರಶಸ್ತಿ ಅವರಿಗೆ ಸಂದಿರುವುದು ಅವರ ಸೇವೆಗೆ ಸಂದ ಗೌರವ ಎಂದು ಅಭಿಪ್ರಾಯಿಸಿದರು.ಸನ್ಮಾನಕ್ಕೆ ಪ್ರತಿಯಾಗಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಎಲ್ಲಿಯ ವಿಜಯಪುರ, ಎಲ್ಲಿಯ ಚಾಮರಾಜನಗರ.. ನಾಗರಾಜ ಅವರೊಂದಿಗಿನ ಸ್ನೇಹತಂತು ದಾರಿ ದೂರವಿದ್ದರೂ ಭಾವಗಳು ಸದಾ ಜೊತೆಯಾಗಿ ಸಾಗಿವೆ. ಅವರ…

Read More

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’ | ವಿದಾಯ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗಗಕ್ಕೆ ಕೊನೆಗೂ ಕ್ಲೈಮ್ಯಾಕ್ಸ್ ದೊರೆತಿದೆ.ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಸಿದ್ದರಾಮಯ್ಯ ಹೈಕಮಾಂಡ್ ಮೊನ್ನೆ ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹಾಗಾಗಿ, ಇವತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜ್ಯಪಾಲರು ಬಂದ ಮೇಲೆ ನನ್ನ ರಾಜೀನಾಮೆ ಅಂಗೀಕಾರ ಮಾಡುತ್ತಾರೆ ಎಂದು ಹೇಳಿದ್ದಾರೆ.ಈ ವೇಳೆ ನಾಡಿನ ಜನತೆಯನ್ನು ಉದ್ದೇಶಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ…

Read More

ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ:‌ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್ ಲಭಿಸಿದೆ.ನ್ಯಾಷನಲ್ ಟೈಮ್ಸ್ ಎಂಜಿನಿಯರಿಂಗ್ ರ‍್ಯಾಂಕಿಂಗ್ ನಡೆಸಿದ ಸಮೀಕ್ಷೆಯಲ್ಲಿ ಈ ಸ್ಥಾನ ಸಿಕ್ಕಿದೆ. ಈ ಸಂಸ್ಥೆ ದೇಶದ ನಾನಾ ಎಂಜಿನಿಯರಿಂಗ್ ಕಾಲೇಜುಗಳ ಸಮೀಕ್ಷೆ ನಡೆಸಿದ್ದು, ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜು ನಾನಾ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದೆ.ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ವ್ಯವಸ್ಥೆ ಮಾಡುವಲ್ಲಿ ದೇಶದ ಉನ್ನತ 70 ಖಾಸಗಿ ಕಾಲೇಜುಗಳ ಪೈಕಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ 43ನೇ ರ‍್ಯಾಂಕ್ ಬಂದಿದೆ.ಅದೇ ರೀತಿ ದೇಶದ 125 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 27ನೇ ರ‌್ಯಾಂಕ್ ಬಂದಿದ್ದರೆದಕ್ಷಿಣ ಭಾರತದ ಅತ್ಯುತ್ತಮ 25 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 15ನೇ ಸ್ಥಾನ ಲಭಿಸಿದೆ.ಕಾಲೇಜಿನ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ…

Read More

ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿಯಾದ ಆಮ್ಲೀಯತೆ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಹೇಳಿದ್ದಾರೆ.ಮಂಗಳವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಆಯೋಜಿಸಿದ್ದ ಜಠರದ ಕ್ಯಾನ್ಸರ್ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.40 ವರ್ಷ ದಾಟಿದ ವಯಸ್ಕರು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿರ್ಲಕ್ಷಿಸಬಾರದರು. ಔಷಧ ಅಂಗಡಿಗಳಲ್ಲಿ ಸ್ವಚಿಕಿತ್ಸೆಯನ್ನು ಪಡೆಯದೆ ಉದರದರ್ಶಕ ಯಂತ್ರದ (ಎಂಡೊಸ್ಕೋಪಿ) ತಪಾಸಣೆ ಮಾಡಿಸಿಕೊಂಡರೆ ಜಠರದ ಕ್ಯಾನ್ಸರ್ ನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ ಎಂದು ಅವರು ಹೇಳಿದರು.ಜಠರದ ಕ್ಯಾನ್ಸರ್ ರೋಗದ ನಾನಾ ಗುಣಲಕ್ಷಣಗಳು ಮತ್ತು ತಪಾಸಣೆ ವಿಧಾನಗಳು ಹಾಗೂ ಲಭ್ಯವಿರುವ ಚಿಕಿತ್ಸೆ ಕ್ರಮಗಳನ್ನು ಅವರು ಪ್ರಾತ್ಯಕ್ಷಿಕೆ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅಮೇರಿಕದ ಯುನಿವರ್ಸಿಟಿ ಆಫ್ ಇಲಿನಾಯಿಸ್ ಚಿಕ್ಯಾಗೊ ನಡುವೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.ಕಳೆದ ಮಾರ್ಚ್ ತಿಂಗಳಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೇರಿಕಕ್ಕೆ ತೆರಳಿದ್ದರು. ಅಲ್ಲಿ ಇಲಿನಾಯಿಸ ವಿಶ್ವವಿದ್ಯಾಲಯ, ಚಿಕ್ಯಾಗೊ ಅಂತರಾಷ್ಟೀಯ ಆರೋಗ್ಯ ವಿಭಾಗದ ಅಸೋಶಿಯೇಟ ಡೀನ ಡಾ. ಪ್ರಭಾಕರ ಬೆಳ್ಳೂರ ಅವರೊಂದಿಗೆ ಈ ಒಡಂಬಡಿಕೆ ಕುರಿತು ಚರ್ಚಿಸಿದ್ದರು. ಈಗ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಒಡಂಬಡಿಕೆಯಿಂದಾಗಿ ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಲಿವೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ, ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಹಾಗೂ ವೈದ್ಯಕೀಯ ಮಹವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಅವರ ಮಾರ್ಗದರ್ಶನದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಈ ಒಡಂಬಡಿಕೆ ಜಾರಿಗೆ ಬಂದಿದೆ. ಅದರಂತೆ ಬಿ. ಎಲ್. ಡಿ. ಇ. ಸಂಸ್ಥೆಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಸೂಚನೆ ಅನ್ವಯ, ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣಾ ಸಮಿತಿಗೆ ಸಿಂಧಗಿಯ ಶಿಕ್ಷಕರಾದ ಶ್ರೀ ಸಿದ್ಧಲಿಂಗ ಚೌಧರಿ ಅವರನ್ನು ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ.ಸರ್ಕಾರದ ಆದೇಶ ಸಂಖ್ಯೆ: ಇಪಿ 11 ಎಎಲ್‌ಬಿ 2025, ದಿನಾಂಕ: 21.02.2025 ರ ಅನ್ವಯ ಈ ಸಮಿತಿಯನ್ನು ರಚಿಸಲಾಗಿದ್ದು, ತಾಲ್ಲೂಕು ಮಟ್ಟದಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ, ಕಲಿಕೆ, ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದ ಪ್ರಮುಖ ಅಂಶಗಳ ಕುರಿತು ಕಾರ್ಯನಿರ್ವಹಿಸಲು ಒಟ್ಟು 18 ಜನರ ಸಮಿತಿ ರಚಿಸಲಾಗಿದೆ.ಈ ಸಮಿತಿಗೆ ಸಿಂಧಗಿ ಕ್ಷೇತ್ರದ ಶಾಸಕರಾದ ಅಶೋಕ ಎಮ್ ಮನಗೂಳಿ ಅವರು ಅಧ್ಯಕ್ಷರಾಗಿದ್ದು, ಸರ್ಕಾರಿ ಪ್ರೌಢಶಾಲೆ ಬಂಕಲಗಿಯ ಶಿಕ್ಷಕರಾದ ಸಿದ್ಧಲಿಂಗ ಚೌಧರಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಸಿದ್ಧಲಿಂಗ ಚೌಧರಿ ಅವರ ಆಯ್ಕೆಗೆ ಶಿಕ್ಷಕ…

Read More