Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು, ಮದ್ದೂರು ಹಾಗೂ ಮಂಡ್ಯದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭವಾಗಿದೆ. ಇದಕ್ಕೆ ಸಾವಿರಾರು ಸಂಖ್ಯೆಗಳಲ್ಲಿ ಸೇರಿದ್ದ ಕಾರ್ಯಕರ್ತರೇ ಸಾಕ್ಷಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ಯದುವಂಶದ ಅರಸರ ಆಳ್ವಿಕೆಯಿಂದ ಸಮೃದ್ಧವಾಗಿರುವ ಆ ಭಾಗದಲ್ಲಿ ಹಿಂದೂ ಆಚರಣೆಗಳಲ್ಲಿ, ಹಬ್ಬಗಳಲ್ಲಿ ಕಲ್ಲು ತೂರುವುದು, ಅಶಾಂತಿ ಸೃಷ್ಟಿಸುವುದು ಕಳೆದ ಎರಡು ವರ್ಷಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಆಳುವ ಸರ್ಕಾರದ ಅಲ್ಪ ಸಂಖ್ಯಾತ ಓಲೈಕೆ ನೀತಿಯೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದಕ್ಷ ಆಡಳಿತ, ಸರ್.ಎಂ.ವಿಶ್ವೇಶರಯ್ಯರಂಥ ಅಪ್ರತಿಮ ಚಿಂತಕರು, ಅಭಿಯಂತರರಿಂದ ಬೆಳಗಿರುವ, ಅಭ್ಯುದಯ ಕಂಡಿರುವ ಈ ನಾಡಿನಲ್ಲಿ ಸಮಾಜ ಘಾತುಕ, ವಿಚ್ಛಿದ್ರಕಾರಿ ಮನಸ್ಥಿತಿಯ ವ್ಯಕ್ತಿಗಳು ಹಾಗೂ ಧರ್ಮದವರು ಅಶಾಂತಿ ಸೃಷ್ಟಿಸುತ್ತಿದ್ದಾರೆ. ಆದರೆ, ಅಲ್ಲಿನ ಸ್ವಾಭಿಮಾನಿ ಹಿಂದೂಗಳು ಈ ರೀತಿಯಾದ ಯಾವುದೇ ಕಷ್ಟ ಬಂದರೂ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ತೋರಿಸಿದ್ದಾರೆ.ಅಂದು ಸ್ವಾತಂತ್ರ್ಯ ಪಡೆಯಲು ಲೋಕಮಾನ್ಯ ಬಾಲಗಂಗಾಧರ ತಿಲಕರು ಗಣೇಶೋತ್ಸವವನ್ನು ಸಾರ್ವಜನಿಕ ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವಂತೆ ಪರಿವರ್ತಿಸಿದರು.…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆದಿಂದ 2025-26 ನೇ ಸಾಲಿನ ಜೂನ ತಿಂಗಳಿನಿಂದ ಇದುವರೆಗೂ ಸುರಿದಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ನಷ್ಟಗೊಂಡ ರೈತರ ಬೆಳೆಗಳಿಗೆ ಸರ್ಕಾರ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮೂಲಕ ಮನವಿ ಸಲ್ಲಿಸಲಾಯಿತು.ಪ್ರತಿಭಟನಕಾರರು ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಮೆರವಣಿಗೆ ಆರಂಭಿಸಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರೈತರು ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆಗಳು ಸಂಪೂರ್ಣ ನಷ್ಟಗೊಂಡಿವೆ. ಜೊತೆಗೆ ಜಿಲ್ಲೆಯ ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ಬೆಳೆ ನಷ್ಟಗೊಂಡಿವೆ. ಜಿಲ್ಲಾಡಳಿತಕ್ಕೂ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿ ಕೂಡಲೇ ಪರಿಹಾರ ಮತ್ತು ಫಸಲ್ ಭೀಮಾ ಯೀಜನೆಯಡಿ ವಿಮೆ ನೀಡಬೇಕು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಜಿಲ್ಲೆಯ 13 ತಾಲೂಕಿನಲ್ಲಿ ಯಾವುದೇ ಸಮೀಕ್ಷೆ ಹೆಸರಲ್ಲಿ ವಿಳಂಬ ಮಾಡದೇ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ಪಟ್ಟಣದ ಪಲ್ಲ್ಯೆಕಟ್ಟೆ, ಇಕ್ಬಾಲ ನಗರ, ಬಸವ ನಗರ, ಯಾತ್ರಿ ನಿವಾಸದ ಹತ್ತಿರ ಸೇರಿದಂತೆ ವಿವಿಧೆಡೆ ಸೋಮವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರು ಭೇಟಿ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರು ಸಮೀಕ್ಷದಾರರ ಭೇಟಿ ಮಾಡಿ ಯಾವುದೇ ಕುಟುಂಬ, ವ್ಯಕ್ತಿ ಉಳಿಯದಂತೆ ಸಮೀಕ್ಷೆದಾರರು ಸಮೀಕ್ಷೆ ಮಾಡಬೇಕು. ಪುರಸಭೆ ವ್ಯಾಪ್ತಿಯಲ್ಲಿ ಬರುವ ಯಾವುದೇ ಕುಟುಂಬ, ವ್ಯಕ್ತಿಯ ಸಮೀಕ್ಷೆ ಆಗದೇ ಹೋಗಿದ್ದರೆ ಅಂತಹವರು ಪುರಸಭೆಯ ಕಾರ್ಯಾಲಯದಲ್ಲಿರುವ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ನೀಡಿದರೆ ಅಂತಹ ಮನೆಗೆ ತೆರಳಿ ಸಮೀಕ್ಷಾದಾರರು ತೆರಳಿ ಸಮೀಕ್ಷೆ ಮಾಡುತ್ತಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಮೊ-9620121146 ಕರೆ ಜನರು ಕರೆ ಮಾಡಿ ಸದುಪಯೋಗ ಪಡೆದುಕೊಳ್ಳಬಹುದು. ಜನರು ತಮ್ಮ ಮಾಹಿತಿಯನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ಸಹ ಅವಕಾಶವಿದೆ ಎಂದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಾಧಿಕಾರಿ ಸುನೀಲ ರಾಠೋಡ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ರಾಜೇಸಾಬ್ ನದಾಫ್ (ಪಿಂಜಾರ್) ಇವರನ್ನು ಬಸವನ ಬಾಗೇವಾಡಿ ತಾಲೂಕಿನ ಕರ್ನಾಟಕ ಕನ್ನಡ ದೀಕ್ಷಾಬದ್ಧ ಸಂಘಟನೆಯಾದ ಕದಂಬ ಸೈನ್ಯ ಸಂಘಟನೆಯ ತಾಲೂಕು ಅಧ್ಯಕ್ಷರನ್ನಾಗಿ ರಾಜ್ಯ ಉಪಾಧ್ಯಕ್ಷ ನಿಂಬಣ್ಣ (ಸಾಗರ್ )ಕಾಂಬಳೆ ಹಾಗೂ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ವಿನಾಯಕ್ ಸೊಂಡೂರ್ ಅವರ ವಿನಂತಿ ಮೇರಿಗೆ ರಾಜ್ಯಾಧ್ಯಕ್ಷ ಆಯುಷ್ಮಾನ್ ಬೇಕ್ರಿ ರಮೇಶ್ ಅವರು ಆಯ್ಕೆ ಮಾಡಿ ಆದೇಶಿಸಿದ್ದಾರೆ.ಬಸವಣ್ಣನ ಜನ್ಮಭೂಮಿಯಲ್ಲಿ ಕನ್ನಡದ ನಾಡು ನುಡಿ ನೆಲಜಲದ ರಕ್ಷಣೆಗೆ ಪ್ರತಿಭದ್ಧರಾಗಿ ಕನ್ನಡತನವನ್ನು ಉಳಿಸಿಕೊಂಡು ಬೆಳೆಸಿಕೊಂಡು ಸಂಘಟನೆಯನ್ನು ಬಲಪಡಿಸಬೇಕೆಂದು ತಮ್ಮ ಆದೇಶದ ಮುಖಾಂತರ ಸೂಚಿಸಿದ್ದಾರೆ ಎಂದು ರಾಜ್ಯ ಕಾರ್ಯದರ್ಶಿ ವಿನಾಯಕ್ ಸೊಂಡುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖನ- ಡಾ.ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಎಂ ಎನ್ ರಾಯ್ ಅವರು ಭಾರತ ದೇಶವು ಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ.ಮನಬೇಂದ್ರ ನಾಥ್ ರಾಯ್ (21 ಮಾರ್ಚ್ 1887 – 25 ಜನವರಿ 1954),ನರೇಂದ್ರ ನಾಥ್ ಭಟ್ಟಾಚಾರ್ಯ, ಒಬ್ಬ ಭಾರತೀಯ ಕ್ರಾಂತಿಕಾರಿ, ತೀವ್ರಗಾಮಿ ಕಾರ್ಯಕರ್ತ ಮತ್ತು ರಾಜಕೀಯ ಸಿದ್ಧಾಂತಿ. ರಾಯ್ ಮೆಕ್ಸಿಕನ್ ಕಮ್ಯುನಿಸ್ಟ್ ಪಕ್ಷ ಮತ್ತು ಭಾರತದ ಕಮ್ಯುನಿಸ್ಟ್ ಪಕ್ಷದ ಸ್ಥಾಪಕರಾಗಿದ್ದರು. ಅವರು ಕಮ್ಯುನಿಸ್ಟ್ ಇಂಟರ್ನ್ಯಾಷನಲ್ನ ಕಾಂಗ್ರೆಸ್ಗಳಿಗೆ ಪ್ರತಿನಿಧಿಯಾಗಿದ್ದರು ಮತ್ತು ಚೀನಾಕ್ಕೆ ರಷ್ಯಾದ ಸಹಾಯಕರಾಗಿದ್ದರು. ಜೋಸೆಫ್ ಸ್ಟಾಲಿನ್ ಅವರ ಉದಯದ ನಂತರ, ರಾಯ್ ಸ್ವತಂತ್ರ ತೀವ್ರಗಾಮಿ ರಾಜಕೀಯವನ್ನು ಅನುಸರಿಸಲು ಮುಖ್ಯ ಕಮ್ಯುನಿಸ್ಟ್ ಚಳುವಳಿಯನ್ನು ತೊರೆದರು. 1940 ರಲ್ಲಿ ರಾಯ್ ರಾಡಿಕಲ್ ಡೆಮಾಕ್ರಟಿಕ್ ಪಕ್ಷದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು, ಈ ಸಂಘಟನೆಯಲ್ಲಿ ಅವರು 1940 ರ ದಶಕದ ದಶಕದಲ್ಲಿ ಹೆಚ್ಚಿನ ಕಾಲ ಪ್ರಮುಖ ಪಾತ್ರ ವಹಿಸಿದ್ದರು. ನಂತರ ರಾಯ್ ಮಾರ್ಕ್ಸ ವಾದದಿಂದ ದೂರ ಸರಿದು ತೀವ್ರಗಾಮಿ ಮಾನವತಾವಾದದ ತತ್ತ್ವಶಾಸ್ತ್ರದ ಪ್ರತಿಪಾದಕರಾದರು.ನಾನು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದಿಂದ ಸಿದ್ಧಾರೂಢರ ಮೂರ್ತಿ ಮೆರವಣೆಗೆಯನ್ನು ತೆರದ ವಾಹನದಲ್ಲಿ ಕುಂಭ ಹೊತ್ತ ಸಾವಿರಾರು ಜನ ಸುಮಂಗಲೆಯ ಮಹಿಳೆಯರು, ಯುವಕರು ಹೆಜ್ಜೆಹಾಕಿದರು. ೫೫ಜೋಡಿ ಎತ್ತಿನ ಗಾಡಿಗಳು, ಡೋಲು, ಪುರುಷರು ಮತ್ತು ಮಹಿಳೆಯರ ಡೊಳ್ಳು, ವೀರಗಾಸೆ, ಪುರವಂತರ ತಂಡ, ಚೆಟ್ಟಿ ಮೇಳ, ಬೃಹತ್ ಗೊಂಬೆಗಳಲ್ಲದೇ, ಬ್ಯಾಂಡ್, ಜಾಂಜ್ ಮೆರವಣಿಗೆ, ಸಕಲ ವಾದ್ಯಗಳೊಂದಿಗೆ ಸಿದ್ಧಾರೂಢರ ಮೂರ್ತಿಯ ಮೆರವಣೆಗೆ ಪ್ರಮುಖ ಬೀದಿಗಳಲ್ಲಿ ಶನಿವಾರ ನಡೆಯಿತು.ನೆರೆದ ಭಕ್ತಸಮೂಹವು ಮೆರವಣಿಗೆಯ ಮೇಲೆ ಪುಷ್ಪವೃಷ್ಟಿಗೈದರು. ಸುಡುಬಿಸಿಲನ್ನು ಲೆಕ್ಕಿಸದೇ ಕುಂಭ ಹೊತ್ತ, ಗ್ರಂಥ ತಲೆಯಲ್ಲಿ ಇಟ್ಟುಕೊಂಡಿದ್ದ ಭಕ್ತ ಹೆಜ್ಜೆ ಹಾಕುತ್ತಿದ್ದರೆ, ಓಂ ನಮಃ ಶಿವಾಯ ಎಂಬ ಪಂಚಾಕ್ಷರಿ ಮಂತ್ರ ಅವರಲ್ಲಿ ಅಂತಃಶಕ್ತಿಯನ್ನು ಹೊರಹೊಮ್ಮಿಸುತ್ತಿತ್ತು. ಅಜ್ಜನ ಭಜನೆಗಳು ಆಯಾಸವನ್ನು ಮರೆಸುತ್ತಿದ್ದವು. ಬರೋಬ್ಬರಿ ೪ ಗಂಟೆಗೂ ಅಧಿಕ ಕಾಲ ಮೆರವಣಿಗೆ ಸಾಗಿತು.ಪಟ್ಟಣದ ಸಿದ್ಧಲಿಂಗ ದ್ವಾರ ಬಾಗಿಲದವರಿಗೆ ಮೆರವಣೆಗೆ ಬಂದು ತಲಿಪಿತ್ತು. ನಂತರ ಆಳೂರ ಗ್ರಾಮಕ್ಕೆ ಕುಂಭ ಮೆರವಣೆಗೊಂದಿಗೆ ಶ್ರೀ ಸಿದ್ಧಾರೂಢರ ಮಠಕ್ಕೆ ಮೆರವಣೆಗೆ ತಲುಪಿತ್ತು.ಇದೇ ಸಂದರ್ಭದಲ್ಲಿ ಆಳೂರ ಮಠದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಣ್ಣುಮಕ್ಕಳ ಮಾಸಿಕಚಕ್ರದ ಅವಧಿಯ ದೈಹಿಕ-ಮಾನಸಿಕ ವೇದನೆಗಳನ್ನು ಸಹನೀಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಋತುಚಕ್ರ ರಜೆ ನೀತಿ -2025’ ಜಾರಿಗೊಳಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕಾಂಗ್ರೆಸ್ ಡಾಕ್ಟರ್ ಸೆಲ್ ಆಲಮೇಲ ಬ್ಲಾಕ್ ಅಧ್ಯಕ್ಷ ಡಾ ಸಮೀರ ಹಾದಿಮನಿ ಪ್ರತಿಕ್ರಿಯಿಸಿದರು.ಸಾಮಾನ್ಯವಾಗಿ ಮುಟ್ಟಿನ ಅವಧಿಯಲ್ಲಿ ಬಹುತೇಕ ಹೆಣ್ಣುಮಕ್ಕಳು ತೀವ್ರತರದ ಕಿಬ್ಬೊಟ್ಟೆ-ಸೊಂಟನೋವು, ವಾಕರಿಕೆ, ಆಯಾಸದ ಜೊತೆಗೆ ಮಾನಸಿಕವಾಗಿಯೂ ಜರ್ಜರಿತವಾಗುವರು. ಹಾರ್ಮೋನ್ ಗಳ ಅಸಮತೋಲನದಿಂದ ಈ ಲಕ್ಷಣಗಳು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿ ಅಧಿಕ ರಕ್ತಸ್ರಾವದೊಂದಿಗೆ ತೀವ್ರ ರೂಪ ಪಡೆಯುವವು.ಇಂತಹ ಸಮಯದ ವೇತನ ಸಹಿತ ರಜೆ ನೀಡುವ ಕ್ರಮದಿಂದ ಆ ಮಹತ್ವದ ಒಂದು ದಿನ ಋತುಚಕ್ರದ ನೋವಿನಿಂದ ಚೇತರಿಸಿಕೊಳ್ಳಲು ಉಪಕಾರಿಯಾಗಿದೆ.ಗ್ರಾಮೀಣ ಭಾಗದ ಖಾಸಗಿ ಕಂಪನಿ-ಸಂಸ್ಥೆಗಳಲ್ಲಿಯೂ ಈ ನೀತಿಯ ಕಟ್ಟುನಿಟ್ಟಿನ ಅನುಷ್ಠಾನವಾಗಲಿ. ಈ ಕುರಿತು ವಿಶೇಷ ತಜ್ಞರ ವರದಿ ಸಿದ್ಧಪಡಿಸಿದ ಕಾರ್ಮಿಕ ಇಲಾಖೆಯ ಸಚಿವರಿಗೂ ಧನ್ಯವಾದಗಳು ಸಲ್ಲಿಸಿದ ಡಾ ಸಮೀರ ಹಾದಿಮನಿ, ಸರಕಾರದ ನೀತಿ ಇತರ ರಾಜ್ಯಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಲೇಖನ- ಮಲ್ಲಪ್ಪ ಖೊದ್ನಾಪೂರ(ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಪರ್ಶಿಯಾದ ಒಂದು ಗಾದೆಯಂತೆ “ ಚಿಕ್ಕದು ಎನ್ನುವ ಕೆಲಸಗಳನ್ನು ಈಗಲೇ ಚೆನ್ನಾಗಿ ಮಾಡು. ಆಗ ದೊಡ್ಡ ಕೆಲಸ-ಕಾರ್ಯಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ” ಎಂಬ ಉಲ್ಲೇಖವಿದೆ. ಅದನ್ನೇ ೧೨ ನೇಯ ಶತಮಾನದಲ್ಲಿ ಬಸವಣ್ಣವರು “ಕಾಯಕವೇ ಕೈಲಾಸ” “ಕೈ ಕೆಸರಾದರೆ ಬಾಯಿ ಮೊಸರು” ಎಂದು ಹೇಳಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತುತ್ತಿನ ಚೀಲ ತುಂಬಿಕೊಳ್ಳಲು ಮತ್ತು ಜೀವನ ನಿರ್ವಹಣೆಗಾಗಿ ದುಡಿಮೆ ಮಾಡಲೇಬೇಕು. ಹಾಗೆಂದ ಮಾತ್ರಕ್ಕೆ ಬೇಕಾ ಬಿಟ್ಟಿಯಾಗಿ ಅಥವಾ ಮನಸ್ಸಿಲ್ಲದೆ, ಉದಾಸೀನತೆಯಿಂದ ಕೆಲಸ ಮಾಡುವುದು ಸರಿಯಲ್ಲ. ನಾವು ಮಾಡುವ ಪ್ರತಿ ಕೆಲಸ-ಕಾರ್ಯವು ಯಾವುದೇ ಆಗಿರಬಹುದು. ಅದನ್ನು ಸರಿಯಾಗಿ ಶ್ರದ್ಧೆ, ನಿಷ್ಠೆ, ಕಾರ್ಯತತ್ಪರತೆ, ಕಾರ್ಯದಕ್ಷತೆ ಹಾಗೂ ಮನಸ್ಸಿಗೆ ತೃಪ್ತಿದಾಯಕವಾಗಿ ಹಾಗೂ ಎಷ್ಟು ಚೆನ್ನಾಗಿ ಮಾಡುತ್ತೇವೆ ಎನ್ನುವದು ಅತಿ ಮುಖ್ಯವಾಗಿದೆ. ನಾವು ಎಂತಹ ಜೀವನ ನಡೆಸುತ್ತೇವೆಂಬುದನ್ನು ನಮ್ಮ ಕೆಲಸವೇ ತಿಳಿಸುತ್ತದೆ. ಆದ್ದರಿಂದ ನಾವು ಮಾಡುವ ಕೆಲಸ ಚಿಕ್ಕದು, ದೊಡ್ಡದು ಅಥವಾ ಯಾವುದೇ ಕೆಲಸವಾಗಿರಲಿ ಅದನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಆಧುನಿಕತೆ, ಜೀವನ ಶೈಲಿ, ಆಹಾರ ಪದ್ಧತಿ-ಕ್ರಮ ಮತ್ತು ಊಟೋಪಚಾರದ ವ್ಯವಸ್ಥೆಯಲ್ಲಾಗುತ್ತಿರುವ ಬದಲಾವಣೆಯ ಪರಿಣಾಮದಿಂದಾಗಿ ನಮ್ಮ ಆರೋಗ್ಯದಲ್ಲಿ ಏರುಪೇರುಗಳಾಗುತ್ತಿವೆ. ಅದರಲ್ಲೂ ಮಕ್ಕಳು, ಯುವಕರು ಮತ್ತು ಮಹಿಳೆಯರು ನಮ್ಮ ಆಹಾರ ಪದ್ಧತಿಯನ್ನು ಬಿಟ್ಟು ಫಾಸ್ಟ ಫುಡ್, ಫಿಜ್ಜಾ, ಬರ್ಗರ್, ಡೋನಟ್, ಜಂಕ್ ಫುಡ್ ಮತ್ತು ಸಂಸ್ಕರಿತ ಆಹಾರ ಪದಾರ್ಥಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅನಿಮೀಯಾ, ಮಧುಮೇಹ ಮತ್ತು ಹೃದಯ ಸಂಬಂಧಿ ರೋಗಗಳಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ, ಎನ್.ಎಸ್.ಎಸ್ ಘಟಕ ಮತ್ತು ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಡಿಯಲ್ಲಿ ಜರುಗಿದ ರಕ್ತ ತಪಾಸಣೆ ಮತ್ತು ಅನಿಮೀಯಾ ತಡೆಗಟ್ಟುವ ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ವಿಶೇಷವಾಗಿ ಮಕ್ಕಳಲ್ಲಿ ಪೌಷ್ಟಿಕ ಮತ್ತು ಪೋಷಕಾಂಶಗಳ ಕೊರತೆಯಿಂದ ರಕ್ತಹೀನತೆಯಂತಹ ತೊಂದರೆಗಳು ಉಂಟಾಗಿ ಆರೋಗ್ಯದಲ್ಲಿ ಸಮಸ್ಯೆಯಾಗುತ್ತಿದೆ. ಆದ್ದರಿಂದ ಉತ್ತಮ ಆರೋಗ್ಯಕ್ಕಾಗಿ ಹಾಲು, ತರಕಾರಿ, ಕಾಳು-ಧಾನ್ಯ ಮತ್ತು ಪೌಷ್ಟಿಕ ಆಹಾರ…
*ಉದಯರಶ್ಮಿ ದಿನಪತ್ರಿಕೆ* ತಿಕೋಟಾ: ಪಟ್ಟಣದ ಮಲ್ಲಿಕಾರ್ಜುನ ದೇವಸ್ತಾನದ ಹೊಸ ಕಟ್ಟಡ ನಿರ್ಮಿಸಲು ರಾಜು ಬನಪ್ಪ ಮೇತ್ರಿ ಅವರು ಕುಟುಂಬಸ್ತರು ಕುಡಿಕೊಂಡು ಒಂದು ಲಕ್ಷ ಒಂದು ರೂ ತಮ್ಮ ಮನೆಯಲ್ಲಿ ದೇವಸ್ತಾನದ ಕಾರ್ಯದರ್ಶಿ ಬಸವರಾಜ ಬಂಡಿ ಅವರಿಗೆ ನೀಡಿದರು. ದೇವಸ್ತಾನ ಅಭಿವೃದ್ದಿ ಕುರಿತು ಮಾತನಾಡಿದ ತಿಕೋಟಾ ಹಿರೆಮಠದ ಶಿವಬಸವ ಶಿವಾಚಾರ್ಯರು ದೇವಸ್ತಾನ ಅಭಿವೃದ್ದಿ ಆಗಬೇಕಾದರೆ ಭಕ್ತರ ಕಾಣಿಕೆಯಿಂದ ಮಾತ್ರ ಸಾದ್ಯವಾಗುತ್ತದೆ. ಭಕ್ತರು ತಮ್ಮ ತಮ್ಮ ಶಕ್ತ್ಯಾನುಸಾರ ಕಾಣಿಕೆ ಸಲ್ಲಿಸಿದರೆ ದೇವಸ್ತಾನ ಸಂಪೂರ್ಣ ಅಭಿವೃದ್ದಿಯಾಗುತ್ತದೆ ಎಂದು ಹೇಳಿದರು.ಇದೆ ಸಂದರ್ಭದಲ್ಲಿ ಎಸ ಎಸ ಸಾಲಿಮಠ, ಆರ ಬಿ ದೇಸಾಯಿ, ರಾವತ ಕಂಭಾರ, ರಾಜು ಕಡಿಬಾಗಿಲ, ಮುರಘೇಶ ಗಣಿ, ಅಪ್ಪು ತೇಲಿ, ಶನ್ಮುಖಯ್ಯಾ ಮಠಪತಿ ಚಿದಾನಂದ ಮಠಪತಿ, ಶಿವಾನಂದ ಚೌಧರಿ, ಬಾಬು ಪರೀಟ, ಸಂತೋಷ ಮಾಳಿ, ಸುನಿಲ ಪರಮಾಜ, ಮಲ್ಲು ಮೇತ್ರಿ, ಪ್ರಕಾಶ ಮೇತ್ರಿ, ಡಾ ಆನಂದ ರಾ ಮೇತ್ರಿ, ಶಿವಪ್ಪ ಕೋಳ್ಳಿ, ಕಲ್ಲಪ್ಪ ಕೋರಿ, ಮತ್ತು ಇತರರಿದ್ದರು.
