Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಮೇ ಸಾಹಿತ್ಯ ಮೇಳ ಬಳಗದಿಂದ ಸುದ್ದಿಗೋಷ್ಠಿ | ಲಡಾಯಿ ಪ್ರಕಾಶನದ ಮುಖ್ಯಸ್ಥ ಬಸವರಾಜ ಸೂಳೀಭಾವಿ ವಿವರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಇದೇ ದಿ.೧೦ ರಿಂದ ಐದು ದಿನಗಳ ಕಾಲ ಬುದ್ಧ, ಬಸವ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳವನ್ನು ಪ್ರಥಮ ಬಾರಿಗೆ ವಿಜಯಪುರದಲ್ಲಿ ಆಯೋಜಿಸಲಾಗಿದ್ದು, ಮೇಳಕ್ಕೆ ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ ಎಂದುಲಡಾಯಿ ಪ್ರಕಾಶನದ ಮುಖ್ಯಸ್ಥ, ಪ್ರಗತಿಪರ ಚಿಂತಕ ಬಸವರಾಜ ಸೂಳಿಭಾವಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗ ಸಹಯೋಗದಲ್ಲಿ ಈ ಮೇಳ ಆಯೋಜಿಸಲಾಗಿದ್ದು, ಸ್ವರಚಿತ ಪುಸ್ತಕಗಳೊಂದಿಗೆ ಸಾಹಿತಿಗಳ ಜಾಥಾ ಅಪೂರ್ವ ರೀತಿಯಲ್ಲಿ ನಡೆಯಲಿದ್ದು, ಸಾಹಿತಿಗಳೇ ಈ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.ಏ.೧೦ ರಂದು ಮಧ್ಯಾಹ್ನ ೧೨ ಕ್ಕೆ ಡಿಎಸ್ಎಸ್ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ ಪುಸ್ತಕ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅಧ್ಯಕ್ಷತೆ ವಹಿಸಲಿದ್ದಾರೆ, ಮುಂಬೈನ…
ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಆಶಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಸಿ ೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ನಡೆಸುವಂತೆ ಸಿಇಓ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಹೇಳಿದರು.ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿರುವ ೬ ವರ್ಷದ ಮಕ್ಕಳ ಸಂಖ್ಯೆ ಇದೆ, ಆದರೆ ಶಾಲೆಯಿಂದ ಅನೇಕ ಮಕ್ಕಳು ಹೊರಗುಳಿದಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ರಾಜ್ಯದಲ್ಲಿರುವ ಆರು ವರ್ಷದ ಮಕ್ಕಳ ಸಂಖ್ಯೆ ದತ್ತಾಂಶಗಳ ಸಂಗ್ರಹಣೆಯೇ ಇಲ್ಲ, ಕಳೆದ ಒಂದು ವರ್ಷದಿಂದ ಈ ನಿಖರವಾದ ದತ್ತಾಂಶ ಸಂಗ್ರಹಣೆ ಪ್ರಯತ್ನ ನಡೆಸಲಾಗುತ್ತಿದೆ, ೧೦೦ ಮಕ್ಕಳು ೬ ವರ್ಷದವರು ಇದ್ದರೆ ಅದರಲ್ಲಿ ಶಾಲೆಗೆ ಸೇರಿದ ಮಕ್ಕಳ ಸಂಖ್ಯೆ ೮೦ ಇರಬಹುದು, ಶಾಲೆಯಲ್ಲಿರುವ ಮಕ್ಕಳು ಹೊರತುಪಡಿಸಿ ೬ ವರ್ಷದ ಮಕ್ಕಳ ಸಂಖ್ಯೆ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸೈದ್ದಾಂತಿಕ ನೆಲೆಗಟ್ಟಿನ ಮೇಲೆ ಭಾರತೀಯ ಜನತಾ ಪಕ್ಷವನ್ನು ಕಟ್ಟಿದ ಹಿರಿಯರ ಮಾರ್ಗದರ್ಶನದಲ್ಲಿ ನಾವುಗಳು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ೪೬ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮಾಜ ಸೇವೆಯ ಗುರಿಯನ್ನು ಹೊಂದಿಕೊಂಡು ಜನರ ಅಭ್ಯುದಯಕ್ಕಾಗಿ, ನಾಡು-ದೇಶದ ಹಿತಕ್ಕಾಗಿ ಹಗಲಿರುಳು ಶ್ರಮಿಸುವ ಹಿರಿಯರು ಹಾಗೂ ಯುವಕರ ಸಮ್ಮಿಲನದಿಂದ ಕೂಡಿದ ಕಾರ್ಯಕರ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ ಎಂದು ಹೇಳಿದರು. ಸಮಗ್ರ ದೃಷ್ಟಿಕೋನವನ್ನು ಮನಗಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕಾರ್ಯನಿರ್ವಹಿಸಿ, ರಾಜಕೀಯ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಪಕ್ಷವನ್ನು ಕಟ್ಟಿದ ಹಿರಿಯರನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ ದೇವರಮನಿ, ಜಗದೀಶ ಸುನಗದ, ಚಂದ್ರಶೇಖರಯ್ಯ ಗಣಕುಮಾರ, ಚಂದ್ರಶೇಖರ ಬೆಳ್ಳುಬ್ಬಿ, ಪಟ್ಟಣ ಪಂಚಾಯತ್ ಸದಸ್ಯ ಬಾಬು ಭಜಂತ್ರಿ, ಅಮೀನಪ್ಪ ತೆಗ್ಗಿ, ವಿಜಯಕುಮಾರ ಕೊಟ್ಟಗಿ, ಡೋಂಗ್ರಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಅಮಾಯಕ ಸರಾಫ ವರ್ತಕರಿಗೆ ಇತ್ತೀಚಿನ ದಿನಗಳಲ್ಲಿ ಪೊಲೀಸರ ಕಿರುಕುಳ ಹೆಚ್ಚಾಗಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರಾಫ್ ವರ್ತಕರ ಸಂಘದ ಸದಸ್ಯರು ಚಡಚಣ ಉಪತಹಶೀಲದಾರ ಹುಸನಪ್ಪ ಹೊಸಮನಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಸೋಮಶೇಖರ ಕಂಬಾರ ಮಾತನಾಡಿ, ಪಟ್ಟಣವು ಮಹಾರಾಷ್ಟ್ರದ ಗಡಿ ಭಾಗದಲ್ಲಿ ಇದ್ದು, ಆ ರಾಜ್ಯದ ಕಳ್ಳರು ಯಾವುದೋ ಸ್ಥಳದಲ್ಲಿ ಬಂಗಾರವನ್ನು ಕಳವು ಮಾಡಿ ಅದನ್ನು ಎಲ್ಲಿ ಮಾರಾಟ ಮಾಡಿರುತ್ತಾರೆ ಎಂಬುದು ನಮಗೆ ಗೊತ್ತಿರುವದಿಲ್ಲ. ಆದರೆ, ಯಾವುದೇ ಪೊಲೀಸರು ಕಳ್ಳರೊಂದಿಗೆ ಏಕಾ ಏಕಿ ಬಂದು ಕಳ್ಳರು ತೋರಿಸಿದ ಅಂಗಡಿಗೆ ನುಗ್ಗಿ ಅಂಗಡಿ ಮಾಲಿಕರನ್ನು ದರೋಡೆಕೋರರ ತರಹ ನೀನು ಅಂಗಡಿಯನ್ನು ಬಂದ ಮಾಡಿ ನಮ್ಮ ಜೊತೆ ಠಾಣೆಗೆ ಬಾ ಎಂದು ಕಳ್ಳನ ಜೊತೆಗೆ ಅಪರಾಧಿ ತರಹ ಅವರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಿ, ಪೊಲೀಸ್ ಠಾಣೆಯಲ್ಲಿ ಕಳ್ಳನು ಎಷ್ಟು ಬಂಗಾರ ಹೇಳುತ್ತಾನೋ ಅಷ್ಟನ್ನು ಸರಾಫ ವರ್ತಕರಿಗೆ ಬಲವಂತವಾಗಿ ಒಪ್ಪಿಸಿ ಅಷ್ಟು…
ಆರೋಪಿಗಳ ಬಂಧನಕ್ಕೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫೋಟೋಗ್ರಾಫರ್ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ವಿವಿಧ ಛಾಯಾಚಿತ್ರಗ್ರಾಹಕರ ಸಂಘಗಳು ಖಂಡನೆ ವ್ಯಕ್ತಪಡಿಸಿವೆ.ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ (ರಿ.) ಕೂಡ ಈ ಘಟನೆಯನ್ನು ಖಂಡಿಸಿ, ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.ಫೋಟೋಗ್ರಾಫರ್ಗಳು ತಮ್ಮ ಜೀವನೋಪಾಯಕ್ಕಾಗಿ ದುಡಿದುಕೊಂಡು ಜೀವನಸಾಗಿಸುತ್ತಿರುವ ಈ ಸಂದರ್ಭದಲ್ಲಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಅಸಹ್ಯಕರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಫೋಟೋಗ್ರಾಫರ್ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಂಘ ಒತ್ತಾಯಿಸಿದೆ. ಮತ್ತು ದುಷ್ಕರ್ಮಿಗಳಿಂದ ಹಾನಿಗೋಳಗಾದ ಕ್ಯಾಮರಾ ಸೇರಿದಂತೆ ಇನ್ನಿತರ ಪೀಠೋಪಕರಣಗಳು ದುಷ್ಕರ್ಮಿಗಳಿಂದ ಮರಳಿ ಕೊಡಿಸುವಂತೆ ಆಗ್ರಹಿಸಿದ್ದಾರೆ.ಈ ಪ್ರಕರಣದ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ ಹಾಗೂ ಎಲ್ಲ ಪದಾಧಿಕಾರಿಗಳು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.8 ಬುಧವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆ.12.30ಗಂ. ವಿಜಯಪುರ ಜಿಲ್ಲಾ ಪಂಚಾಯತ ಕಾರ್ಯಾಲಯ ಆವರಣದಲ್ಲಿ ಪವರ ಗ್ರೀಡ್ ಸಿ.ಎಸ್.ಆರ್ ಅನುದಾನಡಿ ಆರೋಗ್ಯ ಇಲಾಖೆ ಸಲಕರಣೆಗಳು, ಶಿಕ್ಷಣ ಇಲಾಖೆಗೆ 2500 ಮೇಜುಗಳ ವಿತರಿಸಲಿದ್ದಾರೆ. ನಂತರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಲೈಟಿಂಗ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್.ಸಿ.ಪಿ/ಟಿ..ಎಸ್.ಪಿ ಯೋಜನೆಯಡಿ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟಿನ್, ಜಿಲ್ಲಾ ಪಂಚಾಯಿತಿಯ ನಿರ್ಬಂಧಿತ ಅನುದಾನದಡಿ ಮೀಸಲಿಟ್ಟ 33ಲಕ್ಷ ರೂ. ಅನುದಾನದಲ್ಲಿ ವಿಕಲಚೇತನರಿಗಾಗಿ ಸಾಧನ ಸಲಕರಣೆ ಹಾಗೂ ಶಿಕ್ಷಣ ಇಲಾಖೆಯ ಅಗತ್ಯ ಸಾಮಗ್ರಿ ಖರೀದಿ ಅನುದಾನದಡಿ ರೂಪಾಯಿ 40 ಲಕ್ಷ ರೂ. ಅನುದಾನದಲ್ಲಿ 20 ಹೈಸ್ಕೂಲ್ ಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ವಿತರಿಸಲಿದ್ದಾರೆ.ನಂತರ ಮ. 1.30ಗಂ. ಧನರ್ಗಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಶಾದಿಮಹಲ್ ಕಟ್ಟಡ ಉದ್ಥಾಟಿಸಲಿದ್ದಾರೆ ಎಂದು ಸಚಿವ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಬಿಸ್ವಾಗರ ಹತ್ತು ವರ್ಷ ಸೇವೆ ಹಾಗೂ ಶ್ರೀಮತಿ ದೀಪಾ ಹೊಸಮಠ ಅವರ ಹದಿನೆಂಟು ವರ್ಷಗಳ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಪುಲೆ ಅನುಪಮಾ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಇತ್ತೀಚಿಗೆ ಅಥಣಿ ಪಟ್ಟಣದ ರಾಯಲ್ ಫಂಕ್ಷನ್ ಹಾಲನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಹಾಗೂ ಚಿಕ್ಕೋಡಿ ಜಿಲ್ಲೆ ಅಥಣಿ ಘಟಕದ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿಬಾಯಿ ಪುಲೆಯವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಅಥಣಿ: ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಗೌರವಯುತವಾಗಿ ಆಚರಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಅಧಿಕಾರಿ ರವೀಂದ್ರ ಮುರಗಾಲಿ ಅವರ ಧೋರಣೆಯನ್ನು ಖಂಡಿಸಿ, ಸೋಮವಾರ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಶಿವಾನಂದ ಸೌದಾಗರ ತಿಳಿಸಿದ್ದಾರೆ.ಮಾಧ್ಯಮದವರ ಮುಂದೆ ಮಾತನಾಡಿದ ಶಿವಾನಂದ ಸೌದಾಗರ, ಅಧಿಕಾರಿಗಳ ಬೇಜವಾಬ್ದಾರಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ಜಯಂತಿಯ ದಿನದಂದು ಕಚೇರಿಯಲ್ಲಿ ಯಾವುದೇ ಪೂಜೆ ಪುನಸ್ಕಾರ ಮಾಡಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ದಲಿತ ಮುಖಂಡರು ಒತ್ತಾಯಿಸಿದ ನಂತರ ಮಧ್ಯಾಹ್ನ 2 ಗಂಟೆಗೆ ಪೂಜೆ ಮಾಡಲು ಸಂತೋಷ್ ಚೌವ್ಹಾಣ್ ಎಂಬ ಸಿಬ್ಬಂದಿಯನ್ನು ಕಳುಹಿಸಲಾಗಿತ್ತು. ಆದರೆ, ಆ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಚೇರಿಗೆ ಬಂದು ಪೂಜೆ ಮಾಡಲು ಮುಂದಾಗಿದ್ದಾನೆ. ಇದನ್ನು ಸಾರ್ವಜನಿಕರು ಪ್ರಶ್ನಿಸಿದಾಗ ಕಚೇರಿಯನ್ನು ತೆರೆದಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ತದನಂತರ ಸಂಜೆ 3:50ರ ಸುಮಾರಿಗೆ ಇಲಾಖೆಯ ಸಿಪಾಯಿ ಬಂದು ಕಾಟಾಚಾರಕ್ಕೆ ಪೂಜೆ ಮುಗಿಸಿದ್ದಾರೆ”…
ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ಮಾದಿಗ ಸಮುದಾಯದಿಂದ ಉಗ್ರ ಹೋರಾಟದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಹೊರಬಂದರು.ಒಳಮೀಸಲಾತಿ ಜಾರಿ ಮಾಡದ ಹೊರತು ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯದ ಮುಖಂಡರು ಪಾಲ್ಗೊಳ್ಳುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಮೊದಲ ಎಚ್ಚರಿಕೆ. ಉಪಚುನಾವಣೆ ಮುಗಿದ ಬಳಿಕವೂ ಕುಂಟು ನೆಪವೊಡ್ಡಿ ಒಳಮೀಸಲಾತಿ ಜಾರಿ ಮಾಡದೇ ಹೋದರೆ ರಾಜ್ಯದಂತ ಉಗ್ರಹೋರಾಟ ಮಾಡಲಾಗುವುದು ಎಂದು ಮಾದಿಗ ಸಮುದಾಯದ ಮುಖಂಡರು ಕಠೋರವಾಗಿಯೇ ಎಚ್ಚರಿಕೆ ನೀಡಿದರು.ಪಟ್ಟಣದ ಆಡಳಿತ ಸೌಧದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಜೊತೆಗೂಡಿ ಡಾ.ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿದ ನಂತರ ಮಾದಿಗ ಸಮುದಾಯದ ಮುಖಂಡರು, ಒಳಮೀಸಲಾತಿ ಹೋರಾಟಕ್ಕೆ ಒಳ್ಳೆಯದಾಗಲಿ,…
ಶ್ರೀ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ್ ಮಹದೇವಸ್ವಾಮಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸರಗೂರು: ಹಿಂದೂ ಸನಾತನ ಪರಂಪರೆಯು ಜಗತ್ತಿನ ಅತಿ ಹಳೆಯ ಮತ್ತು ದಾರ್ಶನಿಕ ಸಂಸ್ಕೃತಿಯಾಗಿದ್ದು, ಇದನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಿದೆ. ಎಂದು ಶ್ರೀ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ್ ಶಾಂತಿಪುರ ಮಹದೇವಸ್ವಾಮಿ ಹೇಳಿದರು.ಪಟ್ಟಣದ ಜೈನಭವನದಲ್ಲಿ ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕು ಶಿವಾರ್ಚಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶೈವಾಗಮ ರೀತ್ಯಾ ಅರ್ಚಕರ ಪೂಜಾ ತರಬೇತಿ ಹಾಗೂ ಪಂಚಾಂಗ ಪರಿಚಯ, ದೀಕ್ಷಾ ಉಪನಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ವಿದ್ವಾನ್ ಮಲ್ಲಣ್ಣನವರ ನೇತೃತ್ವದಲ್ಲಿ ಸರ್ಕಾರಿ ಸಂಸ್ಕೃತ ಪಾಠ ಶಾಲೆಯ ನಿವೃತ್ತ ಪ್ರಾಧ್ಯಾಪಕರಿಂದ ಶಿಬಿರಾರ್ಥಿಗಳಿಗೆ ಪೂಜಾ ವಿಧಿವಿಧಾನಗಳು, ಮಂತ್ರೋಚ್ಛಾರಣೆ, ಶ್ಲೋಕಗಳು, ಮತ್ತು ದೇವಸ್ಥಾನದ ಆಚರಣೆಗಳ ಬಗ್ಗೆ ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಶಿಬಿರಾರ್ಥಿಗಳುಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು, ಇಡೀ ದೇಶಕ್ಕೆ ಮಾದರಿಯಾಗುವಂತಹ ಪರಿಪೂರ್ಣ ಜ್ಞಾನ ಹೊಂದಿರಬೇಕು ಎಂಬುದಷ್ಟೇ ದೀಕ್ಷಾ ಉಪನಯನ ಉದ್ದೇಶವಾಗಿದೆ. ಎಪ್ರಿಲ್ 22ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತೆ ಎಂದು ಪಾರುಪತ್ತೇದಾರ್…
