Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ಕೆವ್ಹಿ ಆಹೇರಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಸಿಂದಗಿ ನಗರ-೦೧ರ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಕೆಹೆಚ್ಬಿ ಕಾಲೋನಿ, ಬಂದಾಳ ಕ್ರಾಸ್, ವಿವೇಕಾನಂದ ವೃತ್ತ ಬಜಾರ್ ಏರಿಯಾ, ಕನಕದಾಸ ವೃತ್ತ, ಸಂಗಮೇಶ್ವರ ಕಾಲೋನಿ ಹಾಗೂ ಆದರ್ಶ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.೧೦ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ದೇವಣಗಾಂವ ಬ್ರಿಜ್ ದುರಸ್ತಿಗಾಗಿ 3 ಕೋಟಿ ಮಂಜೂರು ಮಾಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಶಾಸಕ ಅಶೋಕ ಮನಗೂಳಿ ಅವರಿಗೆ ಆಲಮೇಲ ದೇವಣಗಾಂವ ಭಾಗದ ಜನರ ಪರವಾಗಿ ಅಭಿನಂದಿಸುತ್ತೆೇವೆ ಎಂದು ಪ.ಪಂ. ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸಾದೀಕ ಸುಂಬಡ ಹೇಳಿದರು.ಗುರುವಾರ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತ ಹೆಳಿದ ಅವರು. ಇತ್ತಿಚೆಗೆ ಸುರಿದ ಮಳೆ ಮತ್ರು ಪ್ರವಾಹ ಸಂದರ್ಭದಲ್ಲಿ ದೇವಣಗಾಂವ ಬ್ರಿಜ್ ಮೇಲಿನ ದುಸ್ಥಿತಿಯನ್ನು ಕಂಡು ಶಾಸಕ ಅಶೋಕ ಮನಗೂಳಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿ ತಿಂಗಳಲ್ಲೆ ಅನುದಾನ ಮಂಜೂರು ಮಾಡಿಸಿದ್ದಾರೆ. ಆಲಮೇಲ ಮಾರ್ಗವಾಗಿ ವಿಜಯಪುರ ಕಲಬುರಗಿ ಜಿಲ್ಲೆಗೆ ಸಂಪರ್ಕ ಕಲ್ಪಿಸಿರುವ ಸದಾಶಿವಗಡ ಔರಾದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರವ ದೇವಣಗಾಂವ ಹತ್ತಿರ ಬೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಜ್ ಮೇಲೆ ರಸ್ತೆ ಸಂಪೂರ್ಣ ತಗ್ಗು ಗುಂಡಿ ಬಿದ್ದು ಹಾಳಾಗಿದ್ದು ಅದರ ದುರಸ್ತಿ ಮತ್ತು ಬ್ರಿಜ್ ಮೇಲೆ ರಸ್ತೆ ನಿರ್ಮಾಣಕ್ಕಾಗಿ 3 ಕೋಟಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಥಿಲಗೊಂಡ ತಾಲೂಕಿನ ದೇವಣಗಾಂವ ಸೇತುವೆಗೆ ಶೀಘ್ರದಲ್ಲೇ ದುರಸ್ತಿ ಕಾಮಗಾರಿ ಕೈಗೊಳ್ಳಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹಾಗೂ ಸಿಂದಗಿ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿದ್ದರು. ದೇವಣಗಾಂವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಸಂಪರ್ಕ ಕಷ್ಟವಾಗಿದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸೇತುವೆ ಸಬಲೀಕರಣಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಲು ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಅಪಾರ ಪ್ರಮಾಣದಲ್ಲಿ ಇತ್ತಿಚೆಗೆ ಸುರಿದ ಮಳೆಯಿಂದಾಗಿ ಸಿಂದಗಿ ಮತಕ್ಷೇತ್ರದ ಔರಾದ ಸದಾಶಿವಗಡ್ ರಾಜ್ಯ ಹೆದ್ದಾರಿ ೩೪ರಲ್ಲಿ ಬರುವ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಇದರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ರೂ.೩ ಕೋಟಿ ಅನುದಾನ ಬಿಡುಗಡೆಗೊಳಿಸಲು ಮುಂದಾಗಿದೆ. ಸೇತುವೆ ದುರಸ್ತಿ ಬಗ್ಗೆ ಸಚಿವರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕ್ರೀಡೆಗಳು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡಾಭಿಮಾನಿಗಳ ಬಳಗ ಹಾಗೂ ಸ್ನೇಹಿತರಿಂದ ಆರ್ಥಿಕ ಸಹಾಯ ಮತ್ತು ತಾಲೂಕು ಆಡಳಿತ ವತಿಯಿಂದ ತನು,ಮನ, ಧನದಿಂದ ಸಹಾಯ-ಸಹಕಾರ ನೀಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಹೊರವಲಯ ಕಲಕೇರಿ ರಸ್ತೆಯಲ್ಲಿರುವ ಎಲೈಟ್ ಪಪೂ ಕಾಲೇಜಿನಲ್ಲಿ ಶಾಲಾ ಶಿಕ್ಷಣ(ಪದವಿಪೂರ್ವ) ಇಲಾಖೆ ಹಮ್ಮಿಕೊಂಡ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ನಗರದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಜರಗುತ್ತಿರುವುದು ಹೆಮ್ಮೆಯ ಸಂಗತಿ. ಪಂದ್ಯಾವಳಿ ಯಶಸ್ಸಿಗಾಗಿ ಸಹಕಾರ ನೀಡುತ್ತೇನೆ. ನಮ್ಮ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ವತಿಯಿಂದ ಕುಸ್ತಿ ಪಟುಗಳು ಸೇರಿದಂತೆ ಎಲ್ಲರಿಗೂ ಮೂರು ದಿನಗಳ ಕಾಲ ಉಪಹಾರ, ಊಟದ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕ ಭರವಸೆ ನೀಡಿದರು.ಈ ವೇಳೆ ವಿಜಯಪುರ ಜಿಲ್ಲಾ ದೈಹಿಕ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶಾಂತು ದುರ್ಗಿ ಪ್ರಾಸ್ತಾವಿಕ ಮಾತನಾಡಿ, ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪದವಿ-ಪೂರ್ವ ಕಾಲೇಜುಗಳಿಂದ ೯೦೦ ಕುಸ್ತಿಪಟುಗಳು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾರಾಷ್ಟçದ ಜತ್ ತಾಲೂಕಿನ ಹುಲಜಂತಿ ಗ್ರಾಮದಲ್ಲಿ ಅಕ್ಟೋಬರ್ ೧೭ ರಿಂದ ೨೩ರವರೆಗೆ ಜರುಗುವ ಶ್ರೀ ಮಾಳಿಂಗರಾಯ ದೇವರ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಚಡಚಣ, ಸಿಂದಗಿ, ಮುದ್ದೇಬಿಹಾಳ, ತಾಳಿಕೊಟೆ ಹಾಗೂ ಬಸವನಬಾಗೇವಾಡಿ ಬಸ್ ನಿಲ್ದಾಣದಿಂದ ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುವುದು.ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ-೧: ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನ ಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂ: ೦೮೩೫೨-೨೫೧೩೪೪ ಹಾಗೂ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನವಾಗಿದ್ದು, ಞsbಜb.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೆಲ್ ಉದ್ಯಮ, ಟ್ಯಾಕ್ಸಿ ಕೈಗೊಳ್ಳಲು ೧ ಲಕ್ಷ ರೂ ಗಳಿಂದ ೨ ಲಕ್ಷ ರೂ. ವರೆಗೂ ಸಾಲ ಸೌಲಭ್ಯ ಒದಗಿಸಲಾಗುವುದು.ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮಹಿಳೆಯರಿಗೆ ಶೇ.೩೩ರಷ್ಟು ಹಾಗೂ ವಿಶೇಷಚೇತನರಿಗೆ ಶೇ ೫ರಷ್ಟು ಮೀಸಲಾತಿ ನೀಡಲಾಗುವುದು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಹಾಗೂ ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೮೭೬೨೨೪೯೨೩೦ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿಯ ಸಂದೇಶ ಸಾರಿದ ವಿಜಯಪುರದ ಹೆಮ್ಮೆಯ ಕುಮಾರಿ ಶಿಫಾ ಜಮಾದಾರ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ. ಆನಂದ, ವಿಜಯಪುರದಲ್ಲಿ ಅನೇಕ ದಿನಗಳಿಂದಲೂ ತಮ್ಮ ಸಾಮಾಜಿಕ ಸೇವೆಗಳ ಮೂಲಕ ಹೆಸರು ಮಾಡಿದ್ದ ಶಿಫಾ ಅವರು ಯುವತಿಯರ ಆರೋಗ್ಯ, ಸ್ವಚ್ಚತೆ ಜಾಗೃತಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು, ಈಗ ರಷ್ಯಾದಲ್ಲಿ ನಡೆದ ಸಮಾರಂಭದಲ್ಲಿ ವಿಶ್ವ ಶಾಂತಿಯ ವಿಷಯವಾಗಿ, ಭಾರತೀಯ ಸಂಸ್ಕೃತಿಯ ಬೆಳಕಿನಲ್ಲಿ ವಿಶ್ವಶಾಂತಿಯ ಸಂದೇಶವನ್ನು ನೀಡುವ ಮೂಲಕ ವಿಜಯಪುರದ ಕೀರ್ತಿ ಹೆಚ್ಚಿಸಿರುವುದು ಸಂತೋಷ ತರಿಸಿದೆ ಎಂದರು.ಜಿಲ್ಲಾ ಪಂಚಾಯತ ಸಿಇಓ ರಿಷಿ ಆನಂದ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ಎ-ಐ ತಂತ್ರಜ್ಞಾನ…
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಡಚಣ ಬ್ಯಾಂಕ್ ದರೋಡೆ ಪ್ರಕರಣ | ವಿಜಯಪುರ ಪೋಲಿಸರಿಂದ ಭರ್ಜರಿ ಕಾರ್ಯಾಚರಣೆ | ಹೊರ ರಾಜ್ಯದ ನಾಲ್ವರ ಬಂಧನ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಎಸ್ಬಿಐ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾದ ಮಹಾರಾಷ್ಟ್ರ-ಬಿಹಾರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಡಿಜಿಪಿ (ಕಾ.ಸು) ಆರ್.ಹಿತೇಂದ್ರ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ಬೇಧಿಸುವಲ್ಲಿ ವಿಜಯಪುರ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳಾದ ಬಿಹಾರದ ಸಮಸ್ತಿಪುರ ನಿವಾಸಿಗಳಾದ ರಾಕೇಶ ಕುಮಾರ ಶಿವಾಜಿ ಸಹಾನಿ (೨೨), ರಾಜಕುಮಾರ ರಾಮಲಾಲ್ ಪಾಸ್ವಾನ (೨೧) ಹಾಗೂ ರಕ್ಷಕುಮಾರ ಮದನ ಮಾತೋ (೨೧) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಮೂಲದ ಆರೋಪಿಯ ಹೆಸರು ಪೊಲೀಸರು ತನಿಖೆಯ ದೃಷ್ಟಿಯಿಂದ ಆತನ ಹೆಸರು ಬಹಿರಂಗೊಳಿಸಲು ಸಧ್ಯ ಆಗದು ಎಂದರು.ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಒಟ್ಟಾರೆಯಾಗಿ ೯.೦೧ ಕೆಜಿ ಬಂಗಾರ ಹಾಗೂ ೮೬,೩೧,೨೨ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ, ನಗದು…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಪ್ರಕಟಿಸಿರುವ ಡಾ.ಲಕ್ಷ್ಮಣ ವಿ.ಎ ಅವರ ಕಾಯುನ್ ಬೂತ್ ಕವನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ೨೦೨೩ ನೇ ಸಾಲಿನ ಕಾವ್ಯ ಪ್ರಕಾರದ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಹರ್ಷ ತಂದಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಪಡೆಯುತ್ತಿರುವುದು ಇದು ೨ನೇ ಬಾರಿ, ಕಳೆದ ಸಲವೂ ವಿಮರ್ಶಾ ಪ್ರಕಾರದಲ್ಲಿ ಪ್ರಶಸ್ತಿ ಪಡೆದುಕೊಂಡಿತ್ತು ಎಂದು ಅವರು ತಿಳಿಸಿದ್ದಾರೆ.ಪ್ರಕಾಶನವು ಕಳೆದ ಎಂಟು ವರ್ಷಗಳಲ್ಲಿ ನಾಡಿನ ಎಲ್ಲ ಭಾಗದ ಲೇಖಕರ ೧೭೦ ಕೃತಿಗಳನ್ನು ಪ್ರಕಟಿಸಿದ್ದು ಪ್ರಶಂಸನಾರ್ಹ, ಈ ಭಾಗದ ಸಾಂಸ್ಕೃತಿಕ ಲೋಕಕ್ಕೆ ಬಹು ದೊಡ್ಡ ಕೊಡುಗೆ ಬೆರಗು ಪ್ರಕಾಶನ ನೀಡಿದೆ
ಇಂದು (ಅಕ್ಟೋಬರ-೧೦, ಶುಕ್ರವಾರ) ವಿಶ್ವ ಮಾನಸಿಕ ಆರೋಗ್ಯ ದಿನದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಗೌತುಮ ಬುದ್ಧ ಅವರು, “ಮನುಷ್ಯನಿಗೆ ಆರೋಗ್ಯವೇ ಶ್ರೇಷ್ಠ ಉಡುಗೊರೆ. ಸಂತೃಪ್ತಿಯೇ ಶ್ರೇಷ್ಠ ಸಂಪತ್ತು. ವಿಶ್ವಾಸಾರ್ಹತೆಯೇ ಶ್ರೇಷ್ಠ ಸಂಬಂಧ” ಎಂದು ಹೇಳಿದ್ದಾರೆ. ಮಾನಸಿಕ ಆರೋಗ್ಯ ಎಂದರೆ ಮನಸ್ಸಿನ ಆರೋಗ್ಯ, ಮನಸ್ಸು ಆರೋಗ್ಯದಿಂದಿರುವುದು ದು ಹೇಳಬಹುದು. ಒಬ್ಬ ವ್ಯಕ್ತಿ ತನ್ನೊಂದಿಗೆ ಮತ್ತು ಸುತ್ತಮುತ್ತಲಿನ ಪರಿಸರದೊಂದಿಗೆ ಹೊಂದಾಣಿಕೆಯ ಮನೋಭಾವವನ್ನು ಹೊಂದಿರುವ ಸ್ಥಿತಿಯೇ ಮಾನಸಿಕ ಆರೋಗ್ಯವಾಗಿದೆ.ಖ್ಯಾತ್ ಮನಃಶಾಸ್ತ್ರಜ್ಞ ಸಿಗ್ಮಂಡ್ ಫ್ರೀಡ್ ಅವರು, “ಸಾವನ್ನು ಪಡೆಯಲು ಸಾವಿರ ದಾರಿಗಳಿವೆ, ಆದರೆ ಬದುಕನ್ನು ಕಂಡುಕೊಳ್ಳಲು ದಾರಿ ಒಂದೇ ಅದುವೇ ಆತ್ಮವಿಶ್ವಾಸ” ಎಂದು ಹೇಳಿದ್ದಾರೆ. ಪ್ರತಿ ವರ್ಷ ಅಕ್ಟೋಬರ ೧೦ ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವು ಪ್ರಮುಖ ಕಾರಣವಾಗಿದೆ. ಶಾಲೆೆ-ಕಾಲೇಜು ಮತ್ತು ಸಾರ್ವಜನಿಕವಾಗಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ಆರೋಗ್ಯ ಶಿಕ್ಷಣ…
