Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪೂರ್ವತಯಾರಿ ಇಲ್ಲದ, ಗೊಂದಲದ ಸಮೀಕ್ಷೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಆರೋಪ ಬೆಂಗಳೂರು: ರಾಜಕೀಯ ಒತ್ತಡಕ್ಕೆ ಮಣಿದು ಪೂರ್ವ ಸಿದ್ಧತೆಗಳಿಲ್ಲದೆ ಹಿಂದುಳಿದ ವರ್ಗಗಳ ಆಯೋಗವು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಗೊಂದಲದಿಂದ ಕೂಡಿದ್ದು, ಅಪ್ರಸ್ತುತ ಪ್ರಶ್ನೆಗಳನ್ನು ಪ್ರಶ್ನಾವಳಿಯಲ್ಲಿ ಸೇರಿಸಲಾಗಿದೆ ಎಂದು ಕಿಡಿಕಾರಿದರು.ಸರಕಾರ ದಿನಕ್ಕೊಂದು ಬದಲಾವಣೆ ಹೇಳುತ್ತಿದೆ. ಆಯೋಗವು ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ, ಯಾರದೋ ಒತ್ತಡಕ್ಕೆ ಮಣಿದು ಗಣತಿ ಮಾಡುತ್ತಿದೆ. 60 ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಸ್ವತಃ ಡಿಸಿಎಂ ಕೂಡ ಉತ್ತರಿಸಲು ಸಾಧ್ಯವಾಗಿಲ್ಲ, ಇನ್ನು ಒಬ್ಬ ಸಾಮಾನ್ಯ ವ್ಯಕ್ತಿ ಆ ಪ್ರಶ್ನೆಗಳಿಗೆ ಹೇಗೆ ಉತ್ತರಿಸುತ್ತಾನೆ? ಇದು ಅವೈಜ್ಞಾನಿಕವಾಗಿದೆ. ಪ್ರಶ್ನಾವಳಿಯಲ್ಲಿ ಹಲವು ಅಪ್ರಸ್ತುತ ಪ್ರಶ್ನೆಗಳಿವೆ. ಇದರಿಂದ ಶಿಕ್ಷಕರು ಕೂಡ ಅನಾನುಕೂಲಗಳನ್ನು ಎದುರಿಸುತ್ತಿದ್ದಾರೆ.ಅವರಿಗೂ ಕುಟುಂಬ, ಎಲ್ಲವೂ ಇರುತ್ತದೆ. ವಿಕಲಚೇತನರನ್ನೂ ಬಳಸಿಕೊಂಡಿದ್ದು ಸಾಕಷ್ಟು ಟೀಕೆಗಳು ಬಂದಿವೆ. ಹಾಸನದ ಬೇಲೂರಿನಲ್ಲಿ…
ಲೇಖನ- ಸಂತೋಷ್ ರಾವ್ ಪೆರ್ಮುಡಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆಫೋ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮನುಷ್ಯರಾದ ನಾವು ಜೀವನೋಪಾಯಕ್ಕಾಗಿ ಯಾವುದೇ ಉದ್ಯೋಗವನ್ನು ಕೈಗೊಂಡರೂ ಅದರ ಹಿಂದಿರುವ ನಗ್ನ ಸತ್ಯ ಅದು ‘ಹೊಟ್ಟೆಗಾಗಿ ಮತ್ತು ಗೇಣು ಬಟ್ಟೆಗಾಗಿ’ಯೇ ಎಂದು ದಾಸರುಗಳು ಹೇಳಿದ್ದಾರೆ. ಆ ಮಾತು ಸಾರ್ವತ್ರಿಕ ಸತ್ಯವೂ ಹೌದೆನ್ನಬಹುದು. ಮನುಷ್ಯ ತಾನು ದುಡಿದದ್ದೆಲ್ಲ ತನ್ನ ಗೇಣುದ್ದದ ಹೊಟ್ಟೆಗಾಗಿ ಎಂದು ತನ್ನ ದುಡಿತದ ಅವಧಿಯಲ್ಲಿ ದುಡಿದ ಮೊತ್ತವನ್ನೆಲ್ಲಾ ಸಂಪೂರ್ಣವಾಗಿ ಖರ್ಚು ಮಾಡುತ್ತಾ ಹೋದರೆ ಪರಿಸ್ಥಿತಿ ಹೇಗಿರಬಹುದು ಎಂದು ಒಂದು ಕ್ಷಣ ಯೋಚಿಸುವುದು ಉತ್ತಮ. ದುಡಿಮೆ ಮಾಡದೇ ಇರುವವರು ಯಾರೂ ಇರಲಾರರೆಂದು ಹೇಳಬಹುದಾಗಿದ್ದು, ಆದರೆ ದುಡಿದು ಆದಾಯ ಗಳಿಸುವ ವಿಧಾನಗಳು ಮಾತ್ರ ಬೇರೆ ಬೇರೆ ಇರಬಹುದಷ್ಟೇ. ಸಾಮಾನ್ಯವಾಗಿ ಮನುಷ್ಯನ ದೇಹ ಮತ್ತು ಮನಸ್ಸು ನಿರಂತರವಾಗಿ ಎಲ್ಲಾ ವಯಸ್ಸಿನಲ್ಲಿಯೂ ದುಡಿಯಲು ಏಕ ಪ್ರಕಾರವಾಗಿ ಸಹಕರಿಸುವುದಿಲ್ಲ. ಹಾಗಾಗಿ ಯೌವನದಲ್ಲಿ ದುಡಿದ ಮೊತ್ತದ ಒಂದು ಪಾಲನ್ನು ಮುಪ್ಪಿನಲ್ಲಿ ಬಳಸಿಕೊಳ್ಳುವಂತಾಗಬೇಕೆಂದರೆ ದುಡಿಯುತ್ತಿರುವಾಗಲೇ ನಿರಂತರವಾಗಿ ನಿರ್ದಿಷ್ಟ ಮೊತ್ತದ ಉಳಿತಾಯವನ್ನು ಪ್ರಾರಂಭಿಸಲೇಬೇಕು. ಇಲ್ಲವೆಂದಾದಲ್ಲಿ ‘ಯುದ್ಧಕಾಲೇ…
ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್ ಮೂಲಕ ಹೊಸ ಬದುಕು ನೀಡುತ್ತಿರುವ ಆಸ್ಪತ್ರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವದರ್ಜೆಯ ಚಿಕಿತ್ಸೆ ಒದಗಿಸುವ ಅತ್ಯಂತ ಪ್ರತಿಷ್ಠಿತ ಆಸ್ಪತ್ರೆ ಆಗಿರುವ ನಾರಾಯಣ ಹೆಲ್ತ್ ಸಿಟಿಯು ಗಂಭೀರವಾದ ರಕ್ತ ಮತ್ತು ರೋಗನಿರೋಧಕ ಸಮಸ್ಯೆಗಳಿಂದ ಬಳಲುತ್ತಿರುವ ಮಕ್ಕಳಿಗೆ ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್ ಮೂಲಕ ಚಿಕಿತ್ಸೆ ನೀಡಿ ಅತ್ಯುತ್ತಮ ಸಾಧನೆ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ.ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯ ಹೆಮಟೋ-ಆಂಕಾಲಜಿ ಮತ್ತು ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್, ಪೀಡಿಯಾಟ್ರಿಕ್ ಆಂಕಾಲಜಿ ಕನ್ಸಲ್ಟೆಂಟ್ ಡಾ. ಶೋಭಾ ಬಡಿಗೇರ್ ಅವರು ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಮಕ್ಕಳಿಗೆ ಯಶಸ್ವಿಯಾಗಿ ಈ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆಗಳನ್ನು ನಡೆಸಿದ್ದಾರೆ ಮತ್ತು ಆ ಮೂಲಕ ಅದೆಷ್ಟೋ ಕುಟುಂಬಗಳ ಮನೆಗೆ ಆಶಾಕಿರಣವಾಗಿ ಮೂಡಿಬಂದಿದ್ದಾರೆ.ಈ ಮಕ್ಕಳ ಪೈಕಿ ಕೆಲವರು ಗಂಭೀರವಾದ ಥಲಸ್ಸೇಮಿಯಾ ಮೇಜರ್ (ಇದು ಹುಟ್ಟಿನಿಂದಲೇ ಬರುವ ಗಂಭೀರ ರಕ್ತ ಸಮಸ್ಯೆಯಾಗಿದ್ದು,…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಕಾಡಿನಲ್ಲಿ ಬೇಟೆಗೆ ಹೋದಾಗ ನಾರದ ಮುನಿಗಳ ದರ್ಶನ ಹಾಗೂ ಅವರ ಉಪದೇಶದಿಂದ ಜೀವನ ಬದಲಾಯಿಸಿಕೊಂಡು, ಸರ್ವಶ್ರೇಷ್ಠವಾದ ರಾಮಾಯಣ ಗ್ರಂಥ ರಚಿಸಿ ಜಗತ್ತಿಗೆ ನೀಡಿದರು. ಅಂತಹ ಮಹಾನುಭವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.ಮಂಗಳವಾರ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಸರ್ಕಾರದಿಂದ ಅನೇಕ ಮಹಾಪುರುಷರ ಜಯಂತ್ಯೋತ್ಸವಗಳನ್ನು ಆಚರಿಸಲಾಗುತ್ತದೆ. ಎಲ್ಲ ಜನಾಂಗಕ್ಕೆ ಬೇಕಾಗಿರುವ ಮಹಾಪುರುಷರ ಕಾರ್ಯಕ್ರಮಗಳಲ್ಲಿ ಆಯಾ ಸಮಾಜದವರು ಮಾತ್ರ ಭಾಗವಹಿಸುವ ಸಂಪ್ರದಾಯ ಬಿಡಬೇಕು. ಎಲ್ಲ ಸಮಾಜದವರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲ ಗಣ್ಯರಿಗೆ ಗೌರವ ಸಲ್ಲಿಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು. ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ, ಸದಸ್ಯರಾದ ದಿಲಾವರ ಶಿರೋಳ, ಸುನೀಲ ಸಿಂಧೆ, ಮುಖಂಡರಾದ ರಾಮಣ್ಣ ಚಿನಗುಂಡಿ, ಗಂಗಾಧರ ಮಾರ್ದನಿ, ಪುಟ್ಟು ಪಾನಿ, ರಾಜು…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಶ್ರೀಗುರು ವೀರಘಂಟೈ ಮಡಿವಾಳೇಶ್ವರ ದೇವಸ್ಥಾನದ ಮುಂದಿನ ಆವರಣದಲ್ಲಿ ವಾಲ್ಮೀಕಿ ಸಮಾಜ ಬಾಂಧವರು ಹಾಗೂ ಗ್ರಾಮದ ವಿವಿಧ ಪ್ರಗತಿಪರ ಚಿಂತಕರು ಮತ್ತು ಸಾರ್ವಜನಿಕರಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಗುರುಮರುಳಾರಾಧ್ಯ ಹಿರೇಮಠದ ಸಿದ್ಧರಾಮ ಶಿವಾಚಾರ್ಯರ ನೇತೃತ್ವದಲ್ಲಿ ಮಹಾಕಾವ್ಯ ಶ್ರೀ ರಾಮಾಯಣವನ್ನು ಬರೆದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸೇರಿದ ಯುವಕರು ಮತ್ತು ಗ್ರಾಮಸ್ಥರು ಅವರ ಸ್ಮರಣೆ ಮಾಡಿಕೊಳ್ಳುವುದರ ಜೊತೆಗೆ ತತ್ವಾದರ್ಶಗಳನ್ನು ಮೌಲಿಕ ವಿಚಾರಗಳನ್ನು ಮೆಲುಕು ಹಾಕಿದರು.ಈ ವೇಳೆ ಸಹಕಾರಿ ಸಂಘಗಳ ಇಲಾಖೆಯ ಕನಕರಾಜ ವಡ್ಡರ, ಯುವ ಮುಖಂಡರಾದ ಹಣಮಂತ ವಡ್ಡರ, ಗ್ರಾಪಂ ಸದಸ್ಯರಾದ ಸುಧಾಕರ ಅಡಕಿ ಮತ್ತು ಜೆಡಿಎಸ್ ಮುಖಂಡರಾದ ರಮೇಶ ಹೆಂಡಿ ಮಾತನಾಡಿದರು.ಈ ವೇಳೆ ಸಣ್ಣಶರಭಯ್ಯ ಗದ್ದಗಿಮಠ, ಬಾಲಪ್ಪ ದೊರೆಗೋಳ, ಶರಣಪ್ಪ ಮೋಪಗಾರ, ಶಿವರಾಜ ದೊರೆಗೋಳ, ಪ್ರವೀಣ ಜಗಶೆಟ್ಟಿ, ಪರಶುರಾಮ ದೊರೆಗೋಳ, ಗ್ರಾಪಂ ಸದಸ್ಯರಾದ ಭೀಮಣ್ಣ ವಡ್ಡರ, ವಿಶ್ವನಾಥ ರಾಠೋಡ, ಜೆ.ಬಿ.ಕುಲಕರ್ಣಿ, ಪ್ರಕಾಶ ಯರನಾಳ, ಪ್ರಶಾಂತ ಬಡಿಗೇರ, ಶಿವಯ್ಯ…
ಕಲಕೇರಿಯ ಆದರ್ಶ ಪದವಿ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಆದಿಕವಿ ಮಹಾಋಷಿ ವಾಲ್ಮೀಕಿಯು ಬರೆದ ಮಹಾಕಾವ್ಯ ರಾಮಾಯಣವು ಭಾರತೀಯರಿಗೆ ಒಂದು ಪವಿತ್ರ ಗ್ರಂಥವಾಗಿದ್ದು, ನೀತಿ, ಧರ್ಮ, ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್.ಎಮ್.ಸಜ್ಜನ ಹೇಳಿದರು.ಗ್ರಾಮದ ಆದರ್ಶ ಪ್ರಥಮದರ್ಜೆ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ವೇಳೆ ಉಪನ್ಯಾಸಕಿ ಶ್ರೀದೇವಿ ಹೂಲಿ ಅವರು ಮಾತನಾಡಿ, ಪ್ರತಿಯೊಬ್ಬರೂ ವಾಲ್ಮೀಕಿ ರಾಮಾಯಣವನ್ನು ಓದಬೇಕು ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ತಿಳಿ ಹೇಳಬೇಕು ಅದು ಪ್ರಗತಿಪರ ಸಮಾಜಕ್ಕೆ ಸನ್ಮಾರ್ಗವನ್ನು ತೋರುತ್ತದೆ ಎಂದು ಹೇಳಿದರು.ಕಾರ್ಯಕ್ರಮದ ಪ್ರಾರಂಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವ ಸಮರ್ಪಣೆ ಮಾಡಲಾಯಿತು. ಈ ವೇಳೆ ಉಪನ್ಯಾಸಕರಾದ ಆಬಿದಅಲಿ ಸಾಲೋಡಗಿ, ಎಮ್.ಬಿ.ಸಜ್ಜನ, ಸದ್ದಾಮ ಬಡೇಘರ, ಅಬ್ದುಲ್ ಮುಶ್ರಿಫ್, ವಿನೋದ ನಂದಿಮಠ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಒಬ್ಬ ವ್ಯಕ್ತಿ ಪರಿವರ್ತನೆಯಾದರೆ, ಸಮಾಜದ ರೂಪವೇ ಬದಲಾಗಬಹುದು ಎಂಬುದನ್ನು ಮಹರ್ಷಿ ವಾಲ್ಮೀಕಿ ತೋರಿಸಿಕೊಟ್ಟಿದ್ದಾರೆ. ಅವರು ಕೇವಲ ಮಹಾಕವಿ ಮಾತ್ರವಲ್ಲ, ಪರಿವರ್ತನೆಯ ಹರಿಕಾರರಾಗಿದ್ದಾರೆ,” ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಾಲ್ಮೀಕಿ ರಾಮಾಯಣವು ಕೇವಲ ಸಾಹಿತ್ಯ ಕೃತಿ ಅಲ್ಲ, ಅದು ಆದರ್ಶ ಜೀವನದ ದಾರಿದೀಪ. ಅದರಲ್ಲಿ ಕಾಣುವ ಪಾತ್ರಗಳು ಸಮಾಜಕ್ಕೆ ಅಗತ್ಯವಾದ ಮೌಲ್ಯಗಳನ್ನು ಸಾರುತ್ತವೆ. ಆ ಮೌಲ್ಯಗಳನ್ನು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಮಹರ್ಷಿ ವಾಲ್ಮೀಕಿಯವರು ರಾಮಾಯಣ ರಚಿಸುವ ಮೊದಲು ಸಮಾಜದ ಓರೆಕೋರೆಗಳು, ಮಾನವ ಜೀವನದ ವಿವಿಧ ಆಯಾಮಗಳು ಹಾಗೂ ನೈತಿಕ ಮೌಲ್ಯಗಳ ಕುರಿತು ಸುದೀರ್ಘ ಅಧ್ಯಯನ…
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಸರಕಾರಿ ಗೋಮಾಳ ಖಾಸಗೀ ವ್ಯಕ್ತಿಗಳ ಹೆಸರಿಗೆ ಪರಭಾರೆಯಾಗಿದ್ದನ್ನು ವಿರೋಧಿಸಿ ಗ್ರಾಮದ ಪ್ರಮುಖರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಪ್ರಯುಕ್ತ ೧೯.೨೩ ಎಕರೆ ಜಮೀನು ಸರಕಾರಕ್ಕೆ ಮರಳಿದೆ.ಗ್ರಾಮದ ವ್ಯಾಪ್ತಿಯಲ್ಲಿರುವ ಸರ್ವೆ ನಂ. ೫೯/೧ ರಲ್ಲಿನ ಸುಮಾರು ೧೯ ಎಕರೆ ೨೩ ಗುಂಟೆ ಜಮೀನು ಸರಕಾರ ಜಾನುವಾರುಗಳನ್ನು ಮೇಯಿಸಲು (ಗೋಮಾಳ) ಮೀಸಲಿರಿಸಿತ್ತು ಅದಕ್ಕೆ ಧಾಖಲೆಗಳಲ್ಲಿ ಗುರುಚರಣ (ಸರಕಾರಿ ಜಮೀನು) ಎಂದು ನೊಂದನಿಯಾಗಿರುತ್ತದೆ ಈ ಭಾಗದಲ್ಲಿ ಬಹುತೇಕ ಗೋಮಾಳ ಜಾಗೆಗಳಿಗೆ ಗುರುಚರಣ ಎಂದೇ ದಾಖಲಾಗಿರುತ್ತವೆ ಇದನ್ನೇ ದುರುಪಯೋಗ ಪಡೆದುಕೊಂಡ ಶಿವಮೊಗ್ಗದ ಶ್ರೀ ಗುರುಚರಣ ಬಿನ್ ಮುರುಳಪ್ಪ ಎನ್ನುವ ವ್ಯಕ್ತಿ ದಿನಾಂಕ ೧೪-೮-೨೦೨೫ರಂದು ಶಿವಮೊಗ್ಗದ ಉಪನೊಂದನಾಧಿಕಾರಿ ಕಛೇರಿಯಲ್ಲಿ ತಮ್ಮ ಹೆಸರಿಗೆ ಮುಕ್ತ್ಯಾರ ಪತ್ರ (ಜಿಪಿಎ) ಮಾಡಿಕೊಂಡಿದ್ದಾರೆ, ನಂತರ ದಿನಾಂಕ ೨೬-೮-೨೦೨೫ರಂದು ಒಟ್ಟು ಮುಕ್ತ್ಯಾರ ಪತ್ರದನ್ವಯ ಮುಧೋಳ ಉಪನೊಂದಣಾಧಿಕಾರಿ ಕಛೇರಿಯಲ್ಲಿ ಮುಧೋಳ…
ಬಿಎಲ್ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿಜಯಪುರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಉಪಪ್ರಾಚಾರ್ಯ ಡಾ.ಅನೀಲ್ .ಭೀ ನಾಯಕ,ಡಾ.ಮಹೇಶಕುಮಾರ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ವಿದ್ಯಾ ಪಾಟೀಲ.ಪ್ರೊ.ಶ್ರೀಧರ್ ಜೋಶಿ,ಡಾ.ಎಸ್.ಎನ್ ಉಂಕಿ,ಅಕ್ಷಯ ಜನಾಯ್ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕಾಂಗ್ರೇಸ್ ಸರ್ಕಾರದಲ್ಲಿ ಹಣ ಸಂಪೂರ್ಣವಾಗಿ ಖಾಲಿಯಾಗಿ,ಕೋಮಾ ಸ್ಥಿತಿ ತಲುಪಿದೆ. ಕಾಂಗ್ರೇಸ್ ಶಾಸಕರಿಗೆ ಹಣ ನೀಡುತ್ತಿಲ್ಲ. ತಮ್ಮ ಸರ್ಕಾರದ ವಿರುದ್ಧವೇ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ನಡೆಸುವುದಕ್ಕಿಂತ ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಾಶಿನಾಥ ಚನವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಯುವ ಕಾಂಗ್ರೇಸ್ ವತಿಯಿಂದ ಶಾಸಕ ಜಗದೀಶ ಗುಡಗುಂಟಿ ವಿರುದ್ಧ ಪ್ರತಿಭಟನೆ ಮಾಡುವದನ್ನು ಬಿಟ್ಟು ತಮ್ಮ ಸರ್ಕಾರದ ವಿರುದ್ಧ ವಿಧಾನಸಭೆ ಮುಂದೆ ಪ್ರತಿಭಟನೆ ಮಾಡಿ ಕೋಮಾದಲ್ಲಿರುವ ಸರ್ಕಾರವನ್ನು ಎಚ್ಚರಿಸಬೇಕು, ಸರ್ಕಾರದಲ್ಲಿ ನಯಾಪೈಸೆ ಹಣವಿಲ್ಲ ಆರ್ಥಿಕತೆಯಲ್ಲಿ ಮುಗ್ಗರಿಸಿ ಅಭಿವೃದ್ಧಿ ಶೂನ್ಯವಾಗಿದೆ ಎಂದರು.ಪಕ್ಕದ ಮುಧೋಳ, ಬೀಳಗಿ, ಬಾಗಲಕೋಟೆಯಲ್ಲಿ ಹೋಗಿ ರಸ್ತೆಯನ್ನು ನೋಡಿದರೆ ಇಲ್ಲಿನ ಕಾಂಗ್ರೇಸನವರಿಗೆ ಗೊತ್ತಾಗುತ್ತದೆ. ಬೆಂಗಳೂರು ಹಿಡಿದು ರಾಜ್ಯದ ಎಲ್ಲ ನಗರ, ಪಟ್ಟಣಗಳ ಹಾಗೂ ಹಳ್ಳಿಗಳ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟಿದ್ದು, ವಾಹನಗಳು ಓಡಾಡುವದು ಬೀಡಿ ಅಲ್ಲಿ ನಡೆದುಕೊಂಡು ಹೋಗಲು ಅಸಾಧ್ಯವಾಗಿದೆ ಎಂದರು. ಈ ಹಿಂದೆ ಗುತ್ತಿಗೆದಾರರು ಮಾಡಿರುವ ಕಾಮಗಾರಿಗಳಿಗೆ…
