Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಬ್ಬಡ್ಡಿಯು ೪೦೦೦ ವರ್ಷಗಳಷ್ಟು ಪುರಾತನವಾದ ಮತ್ತು ನಮ್ಮ ದೇಶದ ಗ್ರಾಮೀಣ ಕ್ರೀಡೆಯಾಗಿದೆ. ಇದು ಎರಡು ತಂಡಗಳ ನಡುವಿನ ಸಂಪರ್ಕದ ಕ್ರೀಡೆಯಾಗಿದೆ. ಈ ಕ್ರೀಡೆಯು ನಮ್ಮ ದೇಶಕ್ಕೆ ಹೆಗ್ಗಳಿಕೆಯನ್ನು ತಂದು ಕೊಟ್ಟಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಕ್ರೀಡಾಸಕ್ತಿ ಮತ್ತು ಸ್ಪೂರ್ತಿಯೊಂದಿಗೆ ಆಟವಾಡಬೇಕು ಎಂದು ಡಾ.ರವಿ ಗೋಲಾ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎರಡನೇಯ ವಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಕಬ್ಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ದೈಹಿಕ ಸಾಮರ್ಥ್ಯವಿದ್ದರೆ ಮಾತ್ರ ಬೌದ್ಧಿಕತೆ ಬೆಳೆಯುವುದು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದಾಗ ಮಾತ್ರ ವ್ಯಕ್ತಿತ್ವದ ಸರ್ವಾಂಗೀಣ ವಿಕಸನಗೊಳಿಸುತ್ತದೆ. ಆದ್ದರಿಂದ ಸದೃಢ ಆರೋಗ್ಯಕ್ಕಾಗಿ ಯಾವುದಾದರೊಂದು ಆಟವನ್ನು ಸದಾ ಆಡಲೇಬೇಕು. ಅದರಲ್ಲೂ ನಮ್ಮ ಗ್ರಾಮೀಣ ಮತ್ತು ಗಂಡು ಮೆಟ್ಟಿನ ನಾಡಿನ ಪ್ರಬಲ ಆಟವಾದ ಕಬ್ಬಡ್ಡಿಯನ್ನು ಆಡುತ್ತಾ, ಮುಂದಿನ ಯುವ ಜನಾಂಗಕ್ಕಾಗಿ ಉಳಿಸಿ-ಬೆಳೆಸುವ ಕಾರ್ಯ ಮಾಡಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದರು.ಇನ್ನೊರ್ವ ಅತಿಥಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಮಾಜ ಸುಧಾರಕರಾಗಿ ಡಾ.ಬಾಬು ಜಗಜೀವನ ರಾಮ ದೇಶದ ಇತಿಹಾಸದಲ್ಲಿ ಅಮೂಲ್ಯವಾದ ಸ್ಥಾನವನ್ನು ಹೊಂದಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಅವರು ಹೋರಾಡಿ ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದರು ಎಂದು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸುನಂದಾ ಎಸ್. ಶಿರೂರ ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಾಬು ಜಗಜೀವನ ರಾಮ ಇವರ ಜನ್ಮ ದಿನದ ಪ್ರಯುಕ್ತ ಸಮತಾ ದಿನವನ್ನು ಆಚರಿಸಿ, ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಬಾಬು ಜಗಜೀವನ ರಾಮ ಅವರ ಜೀವನವು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಈ ಕಾರಣದಿಂದಲೇ ಅವರ ಜನ್ಮ ದಿನವನ್ನು ಸಮತಾ ದಿನವೆಂದು ಆಚರಿಸಲಾಗುತ್ತದೆ ಎಂದು ವಿವರಿಸಿದರು.ಆರ್. ಎಸ್. ಜಾಧವ ಅವರು ಮಾತನಾಡಿ, ಭಾರತದ ರಾಜಕೀಯ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ವಿವಿಧ ಕೇಂದ್ರ ಸಚಿವ ಸ್ಥಾನಗಳನ್ನು…

Read More

ಕಸದ ಕೊಂಪೆಯಾದ ಹೊರ್ತಿ ಯ ಐತಿಹಾಸಿಕ ಶಿವ ದೇವಸ್ಥಾನ | ಎಗ್ಗಿಲ್ಲದೆ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳು | ಗಾನಯೋಗಿ ಸಂಘದಿಂದ ಪುನಃ ಸ್ವಚ್ಚತಾ ಕಾರ್ಯ ಉದಯರಶ್ಮಿ ದಿನಪತ್ರಿಕೆ ವರದಿ: ರಾಜು ಕೆರುಟಗಿವಿಜಯಪುರ: ಅದೊಂದು ಕಾಲದಲ್ಲಿ ಕಾಲಕಾಲಕ್ಕೆ ಪೂಜೆ-ಪುನಸ್ಕಾರಗಳೊಂದಿಗೆ ಸಹಸ್ರಾರು ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಿದ್ದ ದೇವಸ್ಥಾನವೊಂದು ಇದೀಗ ಕುಡುಕರ, ದುರ್ವ್ಯಸನಿಗಳ ಅಡ್ಡೆಯಾಗಿ ಮಾರ್ಪಟ್ಟು ನಮ್ಮ ಪರಂಪರೆಯನ್ನು ಅಣಕಿಸುವಂತಾಗಿದೆ.ಜಿಲ್ಲೆಯ ಇಂಡಿ ತಾಲೂಕಿನ ಹೋರ್ತಿ ಗ್ರಾಮದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲಕ್ಕೆ ಸೇರಿದ ಅಪರೂಪದ ನಕ್ಷತ್ರಾಕಾರದ ಶಿವ ದೇವಸ್ಥಾನವೊಂದಿದೆ. ಈ ದೇವಸ್ಥಾನದ ಇಂದಿನ ಪರಿಸ್ಥಿತಿ ಅತ್ಯಂತ ದಯನೀಯ ಮತ್ತು ವಿಷಾದಕರವಾಗಿದೆ.ಈ ದೇವಸ್ಥಾನದ ಉನ್ನತ ಪರಂಪರೆ, ಇತಿಹಾಸ ಅರಿತವರು ಯಾರೇ ಆಗಿದ್ದರೂ ದೇಗುಲದ ಇಂದಿನ ದುಸ್ಥಿತಿ ಕಂಡು ಮರುಗದೇ ಇರರು.ದೇವಸ್ಥಾನದ ಹೊರ ಮತ್ತು ಒಳ ಆವರಣದಲ್ಲೆಲ್ಲ ಬೀಯರ್ ಬಾಟಲಿಗಳು, ವ್ಹಿಸ್ಕಿ ಪ್ಯಾಕೆಟ್ಗಳು, ಪ್ಲಾಸ್ಟಿಕ್ ಗ್ಲಾಸ್‌ಗಳು, ನೀರಿನ ಖಾಲಿ ಬಾಟಲಿಗಳು ಮತ್ತು ಗುಟ್ಕಾ ಕಲೆಗಳು ಎಲ್ಲೆಡೆ ರಾರಾಜಿಸುತ್ತವೆ. ಕಸದ ರಾಶಿ ಕಣ್ಣಿಗೆ ರಾಚುತ್ತ ದೇವಸ್ಥಾನವು ತಿಪ್ಪೆಗುಂಡಿಯಂತಾಗಿ, ಅನೈತಿಕ ಚಟುವಟಿಕೆಗಳ ತಾಣವಾಗಿ…

Read More

ಪ್ರಶಸ್ತಿ ಪುರಸ್ಕೃತ ಕಂಪೂನವರ ಗೆ “ಉದಯರಶ್ಮಿ” ಸಂಪಾದಕ ಇಂದುಶೇಖರ ಮಣೂರ & ಪತ್ರಿಕಾ ಬಳಗದಿಂದ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಡಿಯಲ್ಲಿ ಲಿಂಗಸುಗೂರು ಸಿದ್ರಾಮಪ್ಪ ಹೆಸರಿನಲ್ಲಿ ಅವರ ಪುತ್ರ ಶಿವರಾಜ ಕೆಂಭಾವಿಯವರು ಹೊಸದಾಗಿ ಸ್ಥಾಪನೆ ಮಾಡಿರುವ ಲಿಂಗಸುಗೂರು ಸಿದ್ರಾಮಪ್ಪ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಏಷ್ಯಾನೆಟ್ ಸುವರ್ಣ ನ್ಯೂಸ್ ಟಿವಿ ಜಿಲ್ಲಾ ಹಿರಿಯ ವರದಿಗಾರ ಷಡಕ್ಷರಿ ಬಸವರಾಜು ಕಂಪೂನವರ ಅವರು ಆಯ್ಕೆಯಾಗಿದ್ದಾರೆ.ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹಿರಿಯ ವರದಿಗಾರ ಷಡಕ್ಷರಿ ಬಸವರಾಜು ಕಂಪೂನವರ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾನಿಪ ರಾಜ್ಯ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಷಡಕ್ಷರಿ ಕಂಪೂನವರ ಅವರನ್ನು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಪದಾಧಿಕಾರಿಗಳು…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮ ಕರ್ನಾಟಕದ ಗಡಿ ಭಾಗಗಳಾದ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಭಾಷೆಗಳನ್ನು ಕಲಿಯಬೇಕು, ಅಲ್ಲಿಯ ಸಾಹಿತ್ಯವನ್ನು ಓದಬೇಕು ಚಲನಚಿತ್ರಗಳನ್ನು ನೋಡಬೇಕು, ಸಾಂಸ್ಕೃತಿಕ ವೈವಿಧ್ಯವನ್ನು ಅರಿಯಬೇಕು ಎಂಬುದು ನನ್ನ ಹಲವಾರು ವರ್ಷಗಳ ಕನಸು ಆದರೆ ಇಂದಿಗೂ ಕೂಡ ಅದು ನನಸಾಗಿಲ್ಲ. ಮರಾಠಿ ಭಾಷೆಯ ಚಲನ ಚಿತ್ರಗಳು, ಕಥೆಗಳು, ಪುಸ್ತಕಗಳು ಅಲ್ಲಿಯ ಸಂತರ ಕೀರ್ತನೆಗಳು, ಅವರ ಬದುಕಿನ ಕಥೆಗಳು ನಮಗೆ ಅತ್ಯಂತ ಅಪ್ಯಾಯಮಾನವಾದದ್ದು. ಬಹುಷ್ಯ ಒಂದೊಮ್ಮೆ ಕರ್ನಾಟಕದ ಭಾಗವೇ ಆಗಿದ್ದ ಅಲ್ಲಿ ನಮ್ಮದೇ ಜನರ ಮೂಲ ಬೇರುಗಳು ಇರುವುದು ಇದಕ್ಕೆ ಕಾರಣವಿರಬಹುದು ಅಥವಾ ಮರಾಠಿ ಭಾಷೆಯ ಜನರು ಇಂದಿಗೂ ಕೂಡ ತಮ್ಮ ಭಾಷೆ ಹಾಗೂ ಸಂಸ್ಕೃತಿಯ ಕುರಿತಾದ ಅಭಿಮಾನ ನಮ್ಮಲ್ಲಿ ಆ ಭಾವನೆಯನ್ನು ಮೂಡಿಸಬಹುದು. ಇನ್ನು ಕೆಲವು ತಮಿಳು ಚಲನಚಿತ್ರಗಳು ಅಲ್ಲಿಯ ಲೇಖಕರ ಅನುವಾದಿತ ಕೃತಿಗಳು ಕಾದಂಬರಿಗಳು ನಮ್ಮಲ್ಲಿ ಆ ಭಾಷೆಯ ಕುರಿತು ಕಲಿಯಬೇಕು ಎಂಬ ಆಶಯವನ್ನು ಹುಟ್ಟಿಸಿರಬಹುದು.ಈ ಮಾತನ್ನು ಇಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಅಖಂಡ ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವ ಬಹುದಿನಗಳ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಕಾಂಪ್ಲೆಕ್ಸ್‌ನಲ್ಲಿ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ “ಕೊಲ್ಹಾರ ಕೇನ್ಸ್ ಲಿಮಿಟೆಡ್, ಅಂಗಡಗೇರಿ” ಸಂಸ್ಥೆಯ ಸಕ್ಕರೆ ಅಭಿವೃದ್ದಿ ಕಚೇರಿ ಉದ್ಘಾಟಿಸಿ, ಶೇರು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಈ ಭಾಗದ ರೈತರು ಬೆಳೆದ ಕಬ್ಬನ್ನು ದೂರದ ಕಾರ್ಖಾನೆಗಳಿಗೆ ಸಾಗಿಸಲು ಬಹಳ ಕಷ್ಟಪಡುವ ಸ್ಥಿತಿ ಇತ್ತು. ಇದನ್ನು ಮನಗಂಡು ಬಸವನ ಬಾಗೇವಾಡಿ, ಮುದ್ದೆಬಿಹಾಳ, ನಿಡಗುಂದಿ, ಕೊಲ್ಹಾರ ಹಾಗೂ ಬಬಲೇಶ್ವರ ತಾಲೂಕಿನ ರೈತರ ಅನುಕೂಲಕ್ಕಾಗಿ ಮಧ್ಯ ಭಾಗದಲ್ಲೇ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.ಒಂದು ಶೇರುಗೆ ₹25,000 ನಿಗದಿಪಡಿಸಲಾಗಿದ್ದು, ರೈತರು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಶೇರುಗಳನ್ನು ಪಡೆದು ಕಾರ್ಖಾನೆಯ ಅಭಿವೃದ್ಧಿಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಶೋಷಿತ ವರ್ಗಗಳ ಆಶಾದೀಪವಾಗಿದ್ದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ ಮತ್ತು ಅನುಪಮ ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹೇಳಿದರು.ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರು ಕೇಂದ್ರ ಸರ್ಕಾರದಲ್ಲಿ ನಾಲ್ಕು ದಶಕಗಳ ಕಾಲ ಮಂತ್ರಿಯಾಗಿ ಸೇವೆ ಸಲ್ಲಿಸಿ ವಿಶಿಷ್ಟ ದಾಖಲೆ ನಿರ್ಮಿಸಿದ ಮಹಾನ್ ರಾಜಕೀಯ ಮುತ್ಸದ್ದಿ ಎಂದು ಹೇಳಿದರು.ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ತಳ ಸಮುದಾಯಗಳ ಉದ್ಧಾರಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಅವರು, ಕಾರ್ಮಿಕ, ಆಹಾರ, ರೈಲ್ವೆ, ರಕ್ಷಣಾ, ಕೃಷಿ, ಸಾರಿಗೆ ಮತ್ತು ಸಂಪರ್ಕ ಸೇರಿದಂತೆ ವಿವಿಧ ಪ್ರಮುಖ ಖಾತೆಗಳಲ್ಲಿ ಸಚಿವರಾಗಿ ಹಾಗೂ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಧುನಿಕತೆಯ ದಾರಿಗೆ ತಂದ ಮಹನೀಯರೆಂದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ…

Read More

ಉದಯ ರಶ್ಮಿ ದಿನಪತ್ರಿಕೆ ಅಥಣಿ: “ಬಾಬು ಜಗಜೀವನ ರಾಮ್ ಅವರು ಕೇವಲ ಒಬ್ಬ ನಾಯಕರಲ್ಲ, ಅವರು ದೇಶದ ಹಸಿರು ಕ್ರಾಂತಿಯ ಹರಿಕಾರರು. ಅವರ ತತ್ತ್ವಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಸ್ಥಳೀಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು ಗಾಂಧೀಜಿ, ಅಂಬೇಡ್ಕರ್ ಹಾಗೂ ಜಗಜೀವನ ರಾಮ್ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರು. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಅವರು ತೋರಿದ ದಕ್ಷತೆ ಇಂದಿನ ಆಡಳಿತಗಾರರಿಗೆ ಮಾದರಿ. ಕೃಷಿ ಕ್ಷೇತ್ರದಲ್ಲಿ ಅವರು ತಂದ ಕ್ರಾಂತಿಕಾರಿ ಬದಲಾವಣೆಗಳಿಂದಾಗಿ ದೇಶ ಆಹಾರ ಭದ್ರತೆ ಪಡೆಯಲು ಸಾಧ್ಯವಾಯಿತು” ಎಂದರುಈ ವೇಳೆ ಉಪನ್ಯಾಸವನ್ನು ಟಿ ಎಸ್ ವಂಟಗೂಡಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಡಾ.ಬಾಬು ಜಗಜೀವನ ರಾಂ ಅವರು ಒಬ್ಬ ಹಸಿರು ಕ್ರಾಂತಿಯ ಹರಿಕಾರ ಎಂದು ತಹಶೀಲದಾರ ಸಂಜಯ ಇಂಗಳೆ ಹೇಳಿದರು.ತಹಶೀಲದಾರ ಕಛೇರಿಯ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಡಾ|| ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದಲಿತ ಕುಟುಂಬದಲ್ಲಿ ಜನಿಸಿದ ಡಾ|| ಬಾಬು ಜಗಜೀವನ ರಾಂ ಅವರು, ಅಂದಿನ ಕಾಲದಲ್ಲಿ ದಲಿತ ವರ್ಗಗಳ ಮೇಲೆ ಆಗುತ್ತಿರುವ ಅನ್ಯಾಯ, ಶೋಷಣೆಗಳನ್ನು ಎದುರಿಸಿ ಮೆಟ್ಟಿ ನಿಂತ ಅವರು, ಒಬ್ಬ ವಿದ್ಯಾವಂತನಾಗಿ ಹೊರಹೊಮ್ಮಿ, ದೇಶದ ವಿವಿಧ ಮಂತ್ರಿ ಸ್ಥಾನಗಳನ್ನು ಅಲಂಕರಿಸಿ ದೇಶದ ಉನ್ನತ ಹುದ್ದೆಯಾದ ಉಪಪ್ರಧಾನಿಯಾಗುವಲ್ಲಿ ಯಶಸ್ವಿಯಾದರು. ಸತತ ದೀರ್ಘ 30 ವರ್ಷಗಳ ವರೆಗೆ ಸಂಸದರಾಗಿ ದಾಖಲೆಯನ್ನು ಮಾಡಿದರು. 1974ರಲ್ಲಿ ದೇಶ ಭೀಕರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವಾಗ ಕೇಂದ್ರದ ಕೃಷಿ ಸಚಿವರಾಗಿದ್ದ ಅವರು, ಹೆಚ್ಚು ಉತ್ಪಾದನೆ ಕೊಡುವ ಬೀಜಗಳ ಬಳಕೆಯನ್ನು ಉತ್ತೇಜಿಸಿ, ರೈತರಿಗೆ ರಸಗೊಬ್ಬರ, ನೀರಾವರಿ ಸೌಲಭ್ಯಗಳನ್ನು ಒದಗಿಸಲು ಸರಕಾರದ ಯೋಜನೆಗಳನ್ನು ಬಲಪಡಿಸಿ, ಭಾರತದಲ್ಲಿ ಹಸಿರು ಕ್ರಾಂತಿ ಮತ್ತು ಭಾರತೀಯ ಕೃಷಿಯನ್ನು…

Read More

ಇಂದು (ಏಪ್ರೀಲ್ ೭, ಮಂಗಳವಾರ) “ವಿಶ್ವ ಆರೋಗ್ಯ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಜಾಯ್ಸ್ ಮೇಯರ್ ಅವರು, “ I beಟieve ಣhe besಣ giಜಿಣ ಥಿou ಛಿಚಿಟಿ give ಥಿouಡಿ ಜಿಚಿmiಟಥಿ ಚಿಟಿಜ ಣhe ತಿoಡಿಟಜ, is ಚಿ ಊeಚಿಟಣhಥಿ ಙou” ಎಂದು ಹೇಳಿದ್ದಾರೆ. ಇಂದಿನ ಒತ್ತಡಮಯ ಮತ್ತು ಸಂಘರ್ಷಯುಕ್ತ ಬದುಕಿನಲ್ಲಿ ಮಾನವ ತನ್ನ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾನೆ. ಸಂಪತ್ತು ಗಳಿಕೆ, ಆದಾಯ ಸಂಪಾದನೆ ಮತ್ತು ವ್ಯವಹಾರಿಕ ಜೀವನದಲ್ಲಿ ಆರೋಗ್ಯದ ಕಡೆಗೆ ಕಿಂಚಿತ್ತೂ ಲಕ್ಷ್ಯ ಕೊಡುತ್ತಿಲ್ಲ. ಅದಕ್ಕಾಗಿ ಆರೋಗ್ಯವೇ ಭಾಗ್ಯ ಎಂಬುದನ್ನು ಮನಗಂಡು ಆರೋಗ್ಯವು ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಚೆನ್ನಾಗಿ ಇಟ್ಟುಕೊಳ್ಳಲೇ ಬೇಕಾಗಿರುವುದು ಅಗತ್ಯವಾಗಿದೆ. ಉತ್ತಮ ಆರೋಗ್ಯಕ್ಕಾಗಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಧ್ಯಾನ, ಯೋಗ, ನಿಯಮಿತ ನಿದ್ರೆ ಮತ್ತು ಒತ್ತಡ-ಮುಕ್ತ ಜೀವನ ಶೈಲಿ ಹೊಂದುವುದು ಅತಿ ಅವಶ್ಯಕ. ಆರೋಗ್ಯವಂತ ವ್ಯಕ್ತಿ ಪ್ರತಿ…

Read More