Author: editor.udayarashmi@gmail.com

ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಅಶೋಕ ಮನಗೂಳಿ ಮತ್ತು ಜಿಲ್ಲಾಧಿಕಾರಿ, ಜಿಪಂ ಸಿಇಓ ಭೇಟಿ ಪರಿಶೀಲನೆ | ಸಂತ್ರಸ್ಥರ ಸಮಸ್ಯೆ ಆಲಿಸಿ ಭರವಸೆ ನೀಡಿದ ಶಾಸಕರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ ಕಾರ್ಯವನ್ನು ಪ್ರಥಮಾದ್ಯತೆ ಮೇಲೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅವರು ತಿಳಿಸಿದರು.ಈ ಸಂದರ್ಭದಲ್ಲಿ ವಿವಿಧ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಭರವಸೆ ನೀಡಿದರು.ತಾಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ…

Read More

ವಿಶ್ವ ಪ್ರವಾಸೋದ್ಯಮ ದಿನ ಆಚರಣೆಯಲ್ಲಿ ಶಾಸಕ ವಿಠ್ಠಲ ಕಟಕದೊಂಡ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರಗಾಲ ಜಿಲ್ಲೆ ಎಂದು ಪ್ರಸಿದ್ದಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೊಳಿಸುತ್ತಿದೆ, ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ಕೈಗೊಂಡ ಹಲವು ನೀರಾವರಿ ಯೋಜನೆ, ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳಿಂದ ಇಂದು ಹಸಿರಿನಿಂದ ಕಂಗೊಳಿಸುತ್ತಿದೆ. ಇದರೊಂದಿಗೆ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಈ ನಿಟ್ಟಿನಲ್ಲಿ ಇದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ, ರಸ್ತೆ ಸಂಪರ್ಕವೂ ಇದೆ. ಕುಡಿಯುವ ನೀರಿನ ಸಮಸ್ಯೆ ಇಲ್ಲ.ನಗರದ ಐತಿಹಾಸಿಕ ಭಾವಿ ಸ್ವಚ್ಛಗೊಳಿಸಿ, ಅನ್ಯ…

Read More

ಬೆಂಗಳೂರಿನಲ್ಲಿ ಹಿರಿಯ ಸಾಹಿತಿ ಪ್ರೊ:ಎಸ್.ಜಿ.ಸಿದ್ಧರಾಮಯ್ಯ ಅಬಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಹಾಗೂ ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಬೆಂಗಳೂರಿನ ಜಯನಗರದ ೯ ನೇ ಬಡಾವಣೆಯಲ್ಲಿರುವ ಜೆ ಜಿ ಐ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಹಲಸಂಗಿ ಗೆಳಯರ ಬದುಕು ಮತ್ತು ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜರುಗಿತು.ಈ ಕಾರ್ಯಕ್ರಮವನ್ನು ನಾಡಿನ ಹಿರಿಯ ಸಾಹಿತಿ ಪ್ರೊ.ಎಸ್ ಜಿ ಸಿದ್ದರಾಮಯ್ಯನವರು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ ಬಳಗವು ಕನ್ನಡ ನವೋದಯ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇಯಾದ ವಿಶೇಷ ಕೊಡುಗೆ ನೀಡಿದ್ದು, ಜನಪದ ಸಾಹಿತ್ಯ ಮತ್ತು ದೇಸಿ ಸಾಹಿತ್ಯದ ಪ್ರಭಾವಕ್ಕೆ ಒಳಗಾದ ಹಲಸಂಗಿ ಗೆಳೆಯರು ಅದರಲ್ಲೇ ಸಾಹಿತ್ಯ ಕೃಷಿ ಮಾಡಿದವರು. ಇನ್ನು ಗೆಳೆಯರ ಬಳಗದ ಅತ್ಯದ್ಭುತ ಕೆಲಸವೆಂದರೇ ಅದು ಜನಪದ ಗೀತೆಗಳ ಸಂಗ್ರಹ.ಅದರಲ್ಲೂ ಗರತಿಯ ಹಾಡುಗಳು ಅದ್ವಿತೀಯ ಸಂಗ್ರಹವಾಗಿದೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನಾದ್ಯಂತ ಕಳೆದ ಎರಡು ತಿಂಗಳಿಂದ ಸುರಿಯುತ್ತಿರುವ ಮಳೆಗೆ ವಿವಿಧ ಗ್ರಾಮಗಳಲ್ಲಿ ಸುಮಾರು ೭೫ ಕ್ಕೂ ಹೆಚ್ಚು ಮನೆಗಳು ಹಾಗೂ ಪುರಾತನ ಹುಡೇ ಬಿದ್ದು ಹಾನಿಗೀಡಾಗಿವೆ.ತಾಲ್ಲೂಕಿನ ಪಟ್ಟಣ ಸಹಿತ ಹಂಚಲಿ, ದೇವೂರ, ಕಡಕೋಳ, ಕೊಂಡಗೂಳಿ, ಪಡಗಾನೂರ, ಕೋರವಾರ, ಮುಳಸಾವಳಗಿ, ಕಡ್ಲೇವಾಡ ಪಿಸಿಎಚ್, ಕೆರೂಟಗಿ, ಆಲಗೂರ, ಚಿಕ್ಕರೂಗಿ, ಕಡಕೋಳ, ಯಾಳವಾರ, ಭೈರವಾಡಗಿ, ಮಾರ್ಕಬ್ಬಿನಹಳ್ಳಿ, ಜಾಲವಾದ ಗ್ರಾಮಗಳಲ್ಲಿ ಮಣ್ಣಿನ ಮನೆಗಳು ಸತತ ಮಳೆಯಿಂದ ನೆನೆದು ಕುಸಿತಗೊಂಡಿವೆ. ಇನ್ನೂ ಶನಿವಾರ ಮಣ್ಣೂರ ಗ್ರಾಮದ ಪುರಾತನ ಹುಡೇ ಕುಸಿದು ನೆಲಕ್ಕೊರಗಿದೆ. ಆದರೆ ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲದಿರುವುದು ನೆಮ್ಮದಿ ಪಡುವಂತಾಗಿದೆ.ತಾಲ್ಲೂಕಿನ ಗ್ರಾಮಗಳ ಬಿದ್ದ ಮನೆಗಳಿಗೆ ಈಗಾಗಲೇ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಆಯಾ ಗ್ರಾಮಗಳ ಗ್ರಾಮಾಡಳಿತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ಸಲ್ಲಿಸಿದ್ದಾರೆ.ಬಿದ್ದ ಮನೆಗಳು ಹಾಗೂ ಪುರಾತನ ಹುಡೇ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲು ಮಣ್ಣೂರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಂಬಣ್ಣ ಆನೆಗುಂದಿ, ಸದಸ್ಯರಾದ ಅಬ್ಬಾಸಲಿ ಬಾಗವಾನ, ವಸಂತ ರಾಠೋಡ, ಬಸವರಾಜ ವಾಲಿ,…

Read More

ಸಿಂದಗಿಯಲ್ಲಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹಾದೇವಪ್ಪ ಪೂಜಾರಿ (ಹರಿಜನ) ಕೊಲೆಗೆ ಸಂಬಂಧಿಸಿದಂತೆ ಆರೋಪಿ ಯಾರೆ ಆಗಿರಲಿ, ಎಷ್ಟೇ ಪ್ರಭಾವಿಯಾಗಿರಲಿ ತೀವ್ರ ಗತಿಯಲ್ಲಿ ಬಂಧಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭರವಸೆ ನೀಡಿದರು.ಸಿಂದಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ವ್ಯಕ್ತಿಯ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ಪ್ರಕರಣವು ತನಿಖೆಯ ಹಂತದಲ್ಲಿದೆ. ಹೋರಾಟಗಾರರು ಆರೋಪಿಸುತ್ತಿರುವಂತೆ ಇಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೇ ನ್ಯಾಯ ಸಮ್ಮತವಾದ ತನಿಖೆ ನಡೆಸಲಾಗುತ್ತಿದೆ. ಮೃತ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ದೊರಕಿದಾಗ ವೈಜ್ಞಾನಿಕ ಪರೀಕ್ಷೆಗೊಳಪಡಿಸಿದಾಗ ತಲೆಗೆ ಬಲವಾದ ಗಾಯ ಹಾಗೂ ಶರೀರದ ಮೇಲೂ ಗಾಯವಾಗಿರುವುದು ಗಮನಕ್ಕೆ ಬಂದಾಗ ಇದೊಂದು ಕೊಲೆ ಪ್ರಕರಣವೆಂದು ದಾಖಲಿಸಿಕೊಳ್ಳಲಾಯಿತು.ಎಲ್ಲ ಕೊಲೆ ಪ್ರಕರಣಗಳು…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಹಳೆ ತಾರಾಪುರ ಗ್ರಾಮಕ್ಕೆ ಭೀಮ ನದಿಯ ಪ್ರವಾಹದ ನೀರು ಸುತ್ತುವರೆದಿದ್ದು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿದೆ ಅಂತಹ ನೀರಿನಲ್ಲಿ ತೆವಳುತ್ತ ಸಾಗಿ ಪ್ರವಾಹ ಸಂತ್ರಸ್ತರನ್ನು ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ಮಾಡಿದರು.ಭೀಮಾ ನದಿಯ ಪ್ರವಾಹಕ್ಕೆ ಒಳಗಾಗಿರುವ ಹಳೆಯ ತಾರಾಪುರ ಗ್ರಾಮದಲ್ಲಿ ಇನ್ನೂ ಹಲವಾರು ಕುಟುಂಬಗಳು ವಾಸವಿದ್ದು ಅವರಿಗೆ ಮೊಳಕಾಲಕ್ಕಿಂತ ಮೇಲೆ ಇರುವ ಪ್ರವಾಹದ ನೀರಿನಲ್ಲಿ ತೆರಳಿ ಅವರಿಗೆ ಧೈರ್ಯ ತುಂಬುವ ಜೊತೆಗೆ ತಾವುಗಳು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಮೊದಲು ಎಲ್ಲರೂ ಸುರಕ್ಷಿತವಾಗಿರಬೇಕು, ತಮ್ಮ ಕಷ್ಟ ಸುಖಗಳಿಗೆ ನಾನು ಸದಾ ಭಾಗಿಯಾಗಿರುತ್ತೇನೆ. ಸರ್ಕಾರದ ಮೇಲೆ ಒತ್ತಡ ಹೇರಿ ತಮಗೆ ದೊರೆಯಬೇಕಾಗಿರುವ ಎಲ್ಲ ಸವಲತ್ತುಗಳನ್ನು ದೊರಕಿಸಿ ಕೊಡಲು ತಮ್ಮೊಂದಿಗೆ ನಾನು ಸದಾ ಕೈ ಜೋಡಿಸುತ್ತೇನೆ. ಹಳೆ ತಾರಾಪುರದಲ್ಲಿರುವ ಕುಟುಂಬಗಳನ್ನು ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.ಪ್ರವಾಹದ ಸಂದರ್ಭದಲ್ಲಿ ಹಗೆ (ಹಿಂದಿನ ಕಾಲದ ಧಾನ್ಯ ಸಂಗ್ರಹಿಸುವ ಸ್ಥಳ)ದಲ್ಲಿ ಸಿಲುಕಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕಳೆದ 8-10 ದಿನಗಳಿಂದ ಏರುತಲೇ ಸಾಗಿದ್ದ, ನೆರೆ ಪ್ರವಾಹ ಪರಿಸ್ಥಿತಿ ಉಂಟುಮಾಡಿದ್ದ ಭೀಮಾನದಿಯಲ್ಲಿ ಇಂದು ಪಂಚೆ ಇಳಿಮುಖ ಕಂಡಿದ್ದು ಜನರಲ್ಲಿ ಆತಂಕ ದೂರು ಮಾಡುವಂತೆ ಆಗಿದೆ. ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಜನರನ್ನು ಮತ್ತೆ ಆತಂಕ ಈಡಾಗುವಂತೆ ಮಾಡಿದೆ.ಶುಕ್ರವಾರ ದಿವಸ 3 ಲಕ್ಷ 55 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿತ್ತು ಶನಿವಾರ ಭಿಮಾನದಿಯಲ್ಲಿ 3 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದ್ದು ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು ಆದರೆ ಈಗಲೂ ಕೂಡ ಇನ್ನೂ ಹಲವಾರು ಮನೆಗಳಲ್ಲಿ ದೇವಸ್ಥಾನಗಳಲ್ಲಿ ನೀರು ಇದೆ ಇನ್ನೂ ಕಡಿಮೆಯಾದರೆ ಮಾತ್ರ ಜನರು ನಿರಾಳರಾಗಬಹುದು.ಶನಿವಾರ ದಿವಸ 3 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದ್ದು ರವಿವಾರ ಸ್ವಲ್ಪ ಕಡಿಮೆಯಾಗಬಹುದೆಂದು ಅಂದಾಜು ಇದ್ದು ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಮತ್ತೆ ಮಳೆ ಸುರಿಯಲು ಆರಂಭಿಸಿದ್ದು ಉಜನಿ ಜಲಾಶಯದಿಂದ ಒಂದು ಲಕ್ಷ, ಸೀನಾ ನದಿಯಿಂದ ರೂ.1 ಲಕ್ಷ 50 ಸಾವಿರ ಕ್ಯೂಸೆಕ್ಸ್ ಹಾಗೂ ಕರ್ನಾಟಕದ ಮಹಾರಾಷ್ಟ್ರದ ನದಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಶಂಬೆವಾಡ ಗ್ರಾಮದ ಹಳೆ ಗ್ರಾಮದಲ್ಲಿದ್ದ ಮೂರು ಜನ ಗರ್ಭಿಣಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.ದೇವಣಗಾಂವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ದೊಡಮನಿ, ಗ್ರಾಮ ಲೆಕ್ಕಾಧಿಕಾರಿ ಎಂ ಕೆ ಪೂಜಾರಿ ಅವರ ನೇತೃತ್ವದ ತಂಡ ಇಂದು ಶಂಭೇವಾಡ ಗ್ರಾಮಕ್ಕೆ ತೆರಳಿಹೆರಿಗೆಗಾಗಿ ತವರು ಮನೆಗೆ ಆಗಮಿಸಿದ 9 ತಿಂಗಳ ತುಂಬು ಗರ್ಭಿಣಿಯರಾದ ಸಂತೋಷಿ ನಾಗೇಶ ಕೋಳಿ, ಸವಿತಾ ಚಂದ್ರಕಾಂತ ಕೋಳಿ, ಸುನಂದಾ ಆಕಾಶ ತಳವಾರ ಅವರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿಕೊಡಲಾಗಿದೆಪ್ರವಾಹ ಪೀಡಿತ ಗ್ರಾಮದಲ್ಲಿ ರುವುದನ್ನು ಮನಗಂಡು ಅವರಿಗೆ ಮನವೊಲಿಸಿ ಇಂಥ ಪರಿಸ್ಥಿತಿಯಲ್ಲಿ ತಾವುಗಳು ಸುರಕ್ಷಿತ ತಳದಲ್ಲಿರಬೇಕು, ಹೆರಿಗೆ ನೋವು ಕಾಣಿಸಿಕೊಂಡರೆ ತಮಗೆ ಹೋಗುವುದಕ್ಕೆ ದಾರಿಯ ಅನಾನುಕೂಲತೆ ಇದೆ ಆದ ಕಾರಣ ಈಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಮನವೊಲಿಸಿ ಅವರನ್ನು ಬೋಟ್ ಗಳಲ್ಲಿ ಪ್ರವಾಹದ ನೀರನ್ನು ದಾಟಿಸಿ ನಂತರ ದೇವಣಗಾವದ ಆರೋಗ್ಯ ಉಪ ಕೇಂದ್ರಕ್ಕೆ ಆರೋಗ್ಯ ತಪಾಸಣೆ ಮಾಡಿಸಿ ತಾಲೂಕ ಆಸ್ಪತ್ರೆಗೆ ಸ್ಥಳಾಂತರಿಸುವುದಾಗಿ ಹೇಳಿದಾಗ ಗರ್ಭಿಣಿಯರು ಮತ್ತು ಅವರ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬೆಂಗಳೂರಿನ ಭಾರತ ಸ್ಕೌಟ್ಸ ಆಂಡ ಗೈಟ್ಸöನ್ ಕೊಂಡೊಜ್ಜಿ ಬಸಪ್ಪ ಭವನದಲ್ಲಿ ನಡೆದ ಸಮಾರಂಭದಲ್ಲಿ ತಾಲೂಕಿನ ರತ್ನಾಪೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಲೋಚನಾ ಲ ಹೊನ್ನುಟಗಿ ಅವರು ಅತ್ಯುತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾದರು.ಪ್ರಭಾರಿ ಮುಖ್ಯ ಗುರುಮಾತೆ ಸುಲೋಚನಾ ಅವರು ಪ್ರಶಸ್ತಿಗೆ ಭಾಜನರಾಗಿ ರತ್ನಾಪೂರ ಗ್ರಾಮದ ಶಾಲೆಗೆ ಗೌರವ ತಂದಿದ್ದಾರೆ ಎಂದು ಎಸ್ಡಿಎಮ್ಸಿ ಅದ್ಯಕ್ಷ ಮಹೇಶ ಕರ್ಚೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.ಇದೆ ಸಂದರ್ಭದಲ್ಲಿ ತಾಜಪೂರ ಕ್ಲಸ್ಟರ ಸಿಆರಪಿ ಬಸವರಾಜ ತೇಲಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಲ್ಲಿಕಾರ್ಜುನ ಭೂಸಗೊಂಡ, ಮತ್ತು ಜಿಲ್ಲಾದ್ಯಕ್ಷ ಕಣಕಾಲಮಠ, ನಿವೃತ್ತ ಮುಖ್ಯ ಶಿಕ್ಷಕ ಆರ ಜಿ ಕೋಟ್ನಾಳ, ಕನ್ನಡ ಸಾಹಿತ್ಯ ಪರಿಷತ್ತಿನ ತಿಕೋಟಾ ತಾಲೂಕಾದ್ಯಕ್ಷ ಜಗದೀಶ ಬೋಳಸುರ, ರಾಜ್ಯ ನೌಕರರ ಸಂಘದ ತಿಕೋಟಾ ತಾಲೂಕಾದ್ಯಕ್ಷ ಚನ್ನಯ್ಯಾ ಮಠಪತಿ ಅಭಿನಂದಿಸಿ ಶುಭ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಅಂಬಾಭವಾನಿ ದೇವಸ್ಥಾನ, ಅಂಬಾಭವಾನಿ ತರುಣ ಮಂಡಳಿ ಚಾವಡಿ ಓಣಿ, ಭುವನೇಶ್ವರಿ ತರುಣ ಮಂಡಳಿ ಕುಂಬಾರ ಓಣಿ, ದುರ್ಗಾ ಪರಮೇಶ್ವರಿ ತರುಣ ಮಂಡಳಿ ಭೀರಪ್ಪ ನಗರ ದಲ್ಲಿ ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.ಮಹಿಳೆಯರಿಗೆ ಎಲೆ, ಅಡಿಕೆ, ಕುಪ್ಪಸ, ಬಾಳೆಹಣ್ಣು, ಅಕ್ಕಿ ಮತ್ತು ಸಿಹಿ ಪದಾರ್ಥ ಕೊಟ್ಟು ಉಡಿ ತುಂಬಿದರು.ಕುಂಬಾರ ಓಣಿಯಲ್ಲಿ ರೇಣುಕಾ ಯಲ್ಲಮ್ಮಾ ಮಹಾತ್ಮೆ ನಾಟಕ ಪ್ರದರ್ಶನಗೊಂಡಿತು.ಜಮಖಂಡಿ ಹುಣಚ್ಯಾಳ ಗ್ರಾಮದ ಮತ್ತು ರಬಕವಿ ಬನಹಟ್ಟಿಯವರಿಂದ ಚೌಡಕಿ ಪದಗಳು ಭರಾಟೆ ನಡೆಯಿತು.ಪ್ರತಿದಿನ ಎಲ್ಲ ಕಡೆ ಪೂಜೆ ಅಭಿಷೇಕ ದೇವಿಗೆ ಅಲಂಕಾರ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯುತ್ತಿವೆ.

Read More