Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗದಗ ನಗರದ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಸಮಾಜದ ಸಂಚಾಲಕ ದೇವೇಂದ್ರ ಅಂಬಿಗೇರ ಇವರು ಇದೇ ೧೨ನೇ ಆಕ್ಟೋಬರ್ ೨೦೨೫ರ ರವಿವಾರ ರಂದು ವಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.ವಧು-ವರ ಸಮಾವೇಶವು ಗದಗ ನಗರದ ಹುಬ್ಬಳ್ಳಿ ರಸ್ತೆಯ ಮಾರ್ಗದಲ್ಲಿರುವ ಮುಳಗುಂದ ನಾಕಾ ಹತ್ತಿರದ ಹೊಟೆಲ್ ಕ್ಲಾರ್ಕ್ಇನ್ ಸ್ಟಾರ್ ಹೊಟೆಲ್‌ನಲ್ಲಿ ನಡೆಸಲಾಗುತ್ತಿದೆ.ಸಮಾವೇಶದಲ್ಲಿ ವಧು-ವರರ ಫೋಟೊ ಮೂಲಕ ಇಮೇಜ್ ಹಾಗೂ ವೀಡಿಯೋ ಮೂಲಕ ಪ್ರದರ್ಶನ ಮಾಡಲಾಗುವುದು. ೨೦೨೫ನೇ ಆಕ್ಟೋಬರ ೧ರ ವರೆಗೆ ವಧು-ವರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಯುವಕ-ಯುವತಿಯರ, ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಸಂಚಾಲಕರಾದ ದೇವೇಂದ್ರಅಂಬಿಗೇರ ಇವರ ವಾಟ್ಸ್ಆಪ್ ನಂಬರ ೯೮೮೦೬೩೮೩೭೯ಗೆ ತಮ್ಮ ಇತ್ತೀಚಿನ ಫೋಟೊ ಹಾಗೂ ಬಯೋಡಾಟಾವನ್ನು ಕಳುಹಿಸಿಕೊಡುವಂತೆ ಕೋರಿರುವುರು. ಸಮಾವೇಶದಲ್ಲಿ ವಧು-ವರರ ಜೊತೆಗೆ ಪಾಲಕರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯಿಂದ ವಧು-ವರರು ಹಾಗೂ ಅವರೊಂದಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಜಯಪುರ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಎಮ್ ಗಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಚಿತ್ರಕಲಾ ಶಿಬಿರಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವು ಆದಿಕಾಲದಲ್ಲಿ ಗಿಡ ಮರಗಳ ಅಡಿಯಲ್ಲಿ ವಿವಿಧ ಪ್ರಕಾರಗಳ ವೈವಿದ್ಯಮಯ ಆಟ ಪಾಟ, ವಿದ್ಯಾಭ್ಯಾಸದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಳ್ಳುವ ಪ್ರಸಂಗ ಇಂದು ಮರಳಿ ನೆನಪಿಸುವಂತಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಧಾರವಾಡ ವೃತ್ತದ ಅಧೀಕ್ಷಕ ಪುರಾತತ್ವವೀಧರರಾದ ರಮೇಶ ಮೂಲಿಮನಿ ಹೇಳಿದರು.ನಗರದ ಗೋಳಗುಮ್ಮಟ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜೈನ್ ವಿಶ್ವವಿದ್ಯಾಲಯ ಬೆಂಗಳೂರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ ಬೆಂಗಳೂರು ಹಾಗೂ ಕ್ಯಾನವಾಸ್ ಆರ್ಟ್ ಫೌಂಡೇಶನ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬೆಂಗಳೂರಿನ ಚಿಂತಾಮಣಿ ಕಲಾಕೇಂದ್ರದ ಜೈನ್(ಡೀಮ್-ಟು ಬಿ) ವಿಶ್ವವಿದ್ಯಾಲಯ ಡೀನ್ ಡಾ. ಅವಿನಾಶ ಕಾಟೆ ಅವರು ಮಾತನಾಡಿ, ಇಂದು ಹಲವಾರು ಚಿತ್ರಕಲಾ ವಿದ್ಯಾಲಯಗಳು ಮುಚ್ಚುವ ಸ್ಥಿತಿಯಲ್ಲಿವೆ. ಈ ಚಿತ್ರಕಲೆಯನ್ನು ಸಂರಕ್ಷಿಸಿ ಬೆಳೆಸುವ ಅವಶ್ಯಕತೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ೩೫೦೦ ಶೇರು ಸದಸ್ಯರನ್ನು ಹೊಂದಿರುವ ಬರಡೋಲ ಪ್ರಾಥಮಿಕ ಕೃಷಿ ಪತ್ತಿನ ಸಂಘವು ಈ ವರ್ಷ ರೂ ೩೧ ಲಕ್ಷ ಲಾಭಗಳಿಸಿದೆ. ಈ ಲಾಭಾಂಶದಲ್ಲಿ ಶೇ.೩ ರಷ್ಟನ್ನು ಸದಸ್ಯರಿಗೆ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ವಿಶ್ವನಾಥ ಬಿರಾದಾರ ಹೇಳಿದರು.ಬರಡೋಲ ಗ್ರಾಮದಲ್ಲಿ ಗುರುವಾರ ಜರುಗಿದ ಕೃಷಿ ಪತ್ತಿನ ಸಂಘದ ೭೮ ನೇ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ಶೇರುದಾರರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಅಂತ್ಯಕ್ರಿಯೆಗೆ ಸಂಘದ ವತಿಯಿಂದ ಈ ಹಿಂದೆ ರೂ.೫,೦೦೦ಗಳನ್ನು ನೀಡಲಾಗುತ್ತಿತ್ತು. ಈಗ ಅದನ್ನು ೭,೦೦೦ ಕ್ಕೆ ಹೆಚ್ಚಿಸಿದೆ ಎಂದರು.ಸಂಘದ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿಂದಗಿ ಅಢಾವೆ ಪತ್ರಿಕೆ ಕುರಿತು ವಿವರಿಸಿದರು.ಸಂಘದ ನಿರ್ದೇಶಕ ಎಸ್ ಎಲ್ ಮೇತ್ರಿ , ಸದಸ್ಯ ಮಹೇಶ ಕುಲಕರ್ಣಿ ರೈತರ ಸಮಸ್ಯೆಗಳ ಕುರಿತು , ನಿರ್ದೇಶಕ ಗೋಪಾಲ ಗುಮಾಸ್ತೆ ಸಂಘದ ಅಭಿವೃದ್ಧಿ ಕುರಿತು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಪುರಾಯ ಬಿರಾದಾರ , ಮಾಜಿ ತಾ.ಪಂ ಸದಸ್ಯ ರಾಜು ಝಳಕಿ ,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಕನ್ನಡ ವಿಭಾಗದ ಅಡಿಯಲ್ಲಿ ಶಬ್ದಮಣಿದರ್ಪಣ ಪ್ರಾತ್ಯಕ್ಷಿಕೆ ವಿಷಯದ ಕುರಿತು ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಆಶಯ ನುಡಿ ಪ್ರಸ್ತುತ ಪಡಿಸಿದ ಯೋಜನಾ ನಿರ್ದೇಶಕರು ಕನ್ನಡ ಶಾಸ್ತ್ರೀಯ ಅತ್ಯುನ್ನತ ಅಧ್ಯಯನ ಕೇಂದ್ರ ಮೈಸೂರ, ಡಾ. ನೀಲಗಿರಿ ತಳವಾರ್ ಅವರು, ಶಬ್ದಮಣಿದರ್ಪಣ ಇದು ಕನ್ನಡದಲ್ಲಿ ದೊರಕಿದ ಮೊದಲ ಸಮಗ್ರ ವ್ಯಾಕರಣಗ್ರಂಥ. ಈ ಗ್ರಂಥವನ್ನು ಅವರು ಕಂದ ಪದ್ಯದಲ್ಲಿ ಬರೆದಿದ್ದಾರೆ. ಕೃತಿಯಲ್ಲಿ ಪ್ರತಿ ಸೂತ್ರಕ್ಕೆ ವೃತ್ತಿ (ವಿವರಣೆ) ಮತ್ತು ಪ್ರಯೋಗ (ಉದಾಹರಣೆ)ಗಳನ್ನು ಸೇರಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ವ್ಯಾಕರಣವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಿದೆ ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಡಾ ಕೆ ತಿಮ್ಮಯ್ಯ ಮಾತನಾಡಿ, ಕೇಶಿರಾಜನ ಪರಿಚಯ, ಅವನು ಬರೆದ ವ್ಯಾಕರಣ ಕೃತಿಯಾದ ಶಬ್ದಮಣಿದರ್ಪಣದ ಮಹತ್ವವನ್ನು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ .ಎಸ್ ಎಸ್ ಚೋರಗಿ ಮಾತನಾಡಿ, ಕನ್ನಡ ಸಾಹಿತ್ಯ ಕೇವಲ ಕಾವ್ಯಗಳಿಂದ ಕೂಡಿಲ್ಲ. ಶಾಸ್ತ್ರಗ್ರಂಥ, ಲಕ್ಷಣಗ್ರಂಥ, ಛಂದಸ್ಸು ಮತ್ತು ವ್ಯಾಕರಣ ಕೃತಿಗಳನ್ನು ಹೊಂದುವುದರ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ನಗರದ ಕು.ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ.ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ಮಯನ್ಮಾರ್ ರಾಷ್ಟ್ರಪತಿ, ಅರ್ಮೇನಿಯಾ ಪ್ರಧಾನಿ, ಇತೋಫಿಯಾ ಪ್ರಧಾನಮಂತ್ರಿ, ಬೇಲಾರೂಸ್ ಪ್ರಧಾನಿ, ಸೇರಿದಂತೆ ಅನೇಕ ರಾಷ್ಟ್ರಗಳ ಪ್ರಧಾನಮಂತ್ರಿಗಳು, ರಾಷ್ಟ್ರಾಧ್ಯಕ್ಷರು, ಉಜ್ಬೇಕಿಸ್ತಾನ್, ಅರಬ್ ಗಣರಾಜ್ಯ, ಇರಾನ್, ಈಜಿಪ್ತ್ ಹಾಗೂ ನೈಜಿರೀಯಾ ಸೇರಿದಂತೆ ವಿವಿಧ ದೇಶಗಳ ವಿದೇಶಾಂಗ ಸಚಿವರು, ರಾಯಭಾರಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ಶಿಫಾ ಸಮರ್ಥವಾಗಿ ವಿಶ್ವ ಶಾಂತಿ ಕುರಿತಾದ ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸಿ ವಿಶ್ವ ಶಾಂತಿಯ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟರು.ಭಾರತೀಯ ಸಂಸ್ಕೃತಿ, ಸಹೋದರತೆಯ ಪ್ರತಿಬಿಂಬವಾಗಿರುವ `ವಸುಧೈವ ಕುಟುಂಬಕಂ’ (ಇಡೀ ಜಗತ್ತೇ ಒಂದು ಕುಟುಂಬ) ಎಂಬ ನೆಲೆಗಟ್ಟಿನ ಆಧರಿಸಿ ಸಮರ್ಥವಾಗಿ ತಮ್ಮ ವಿಚಾರಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಸಮರ್ಪಣೆ ಮತ್ತು ನಾವೀನ್ಯತೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಶ್ರೀಶರಣಬಸವೇಶ್ವರ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ಶಿವಕುಮಾರ ಕಿವಿಮಾತು ಹೇಳಿದರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ವರ್ಷದ ಬಿ.ಫಾರ್ಮಸಿ ಮತ್ತು ಡಿ.ಫಾರ್ಮಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ಸಂಸ್ಥೆ ತಮ್ಮಲ್ಲಿ ಓದಲು ಬರುವ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅಗತ್ಯ ಇರುವ ಸೌಲಭ್ಯ, ಸಂಪನ್ಮೂಲ ಕಲ್ಪಿಸಿ, ವಿದ್ಯಾರ್ಥಿಗಳ ಉನ್ನತಿಗೆ ಶ್ರಮಿಸುತ್ತದೆ ಎಂದರು.ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್.ಕೆ. ಪಾಟೀಲ, ಮುಖ್ಯ ಆಡಳಿತಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ಡಾ. ಶಿರಾಜ ಅವಟಿ, ನಿವೃತ್ತ ಕರ್ನಲ್ ಫಿರೋಜ್ ಕರ್ಲೇಕರ ಮಾತನಾಡಿದರು.ಎಸ್. ಎಸ್.ಬಿ. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಪ್ರೊ. ಈರಣ್ಣ ಶೀರಾಳಶೆಟ್ಟಿ, ಪಿಯು ಕಾಲೇಜಿನ ಪ್ರಾಚಾರ್ಯ ಪ್ರಜ್ವಲ್ ವೇದಿಕೆ ಮೇಲೆ ಉಪಸ್ಥಿತರಿದ್ದರು.ಓರಿಯಂಟೇಶನ್‌ ಕಾರ್ಯಕ್ರಮದಲ್ಲಿ ಪಠ್ಯಕ್ರಮ, ಪರೀಕ್ಷಾ ವ್ಯವಸ್ಥೆ, ಕಾಲೇಜು ಒದಗಿಸುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ಆಕ್ಟೋಬರ್ 3 ರಂದು ನಗರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.2004 ರಿಂದ ಸಚಿವರಾದ ಶಿವಾನಂದ ಪಾಟೀಲ ಅವರು ನಗರದಲ್ಲಿರುವ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯದೊಂದಿ ವಿಜಯ ದಶಮಿ ಹಬ್ಬದ ಶುಭಾಶಯ ಸಮಾರಂಭ ಆಯೋಜಿಸುತ್ತಾ ಬರುತ್ತಿದ್ದಾರೆ.ಈ ಬಾರಿ ಆಕ್ಟೋಬರ್ 3 ರಂದು ಬೆಳಿಗ್ಗೆಯಿಂದ ವಿಜಯಪುರ ನಗರದ ರಿಂಗ್ ರಸ್ತೆಯ ಬಬಲೇಶ್ವರ ಮಾರ್ಗದ ತೋಟದ ಮನೆಯಲ್ಲಿ ಬನ್ನಿ ವಿನಿಮಯ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಲೇಖನ ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಪ್ರೀತಿಯ ಪ್ರೀತಿ,ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ ಕೈಗಳಲ್ಲಿ ಘಲ್ ಘಲ್ ಎಂದು ಸದ್ದು ಮಾಡುವ ಹಸಿರು ಬಳೆ ಫಳ ಫಳ ಹೊಳೆಯುವ ಬೆಳ್ಳನೆಯ ಅಂದದ ದುಂಡಾದ ಮುಖ ಪುಟ್ಟ ಜೋಡಿ ಪ್ರಣತೆಯಂತಹ ತೇಜಯುಕ್ತ ಕಂಗಳು ಉದ್ದನೆಯ ನಾಗರ ಜಡೆಗೆ ಮಲ್ಲಿಗೆ ಮಾಲೆ. ಕೊರಳಗೊಪ್ಪುವ ನಾಜೂಕಾದ ಬಂಗಾರದ ಚೈನಿನ ಎಳೆ. ಸಾಮಾನ್ಯ ಗ್ರಾಮೀಣ ಹೆಣ್ಣುಮಗಳಿಗಿಂತ ಏನೋ ವಿಶೇಷವಾದ ಸೆಳೆತ ಇತ್ತು. ಮೊನಲಿಸಾನಂಥ ನಗುವಿನಿಂದ ಸೂಜಿಗಲ್ಲಿನಂತೆ ಹಳ್ಳಿ ಹೈಕಳೆನ್ನಲ್ಲ ಸೆಳೆದೆ. ನಗುವಿಗೆ ಕಿರೀಟವಿಟ್ಟಂತೆ ನಿನ್ನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ, ಉದ್ಯಮಶೀಲತೆಯ ಕೌಶಲ್ಯಗಳನ್ನು ಪಡೆಯುವುದು ಅಗತ್ಯ ಎಂದು ವಿಜಯಪುರ ಐಶ್ವರ್ಯ ಜ್ಯೂಟ್ ಹೌಸ್, ಉದ್ಯಮಿ ಯಶೋಧ ಗುಜ್ಜರ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಅಭಿಯಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ಅಡಿಯಲ್ಲಿ ‘ವೃತ್ತಿ ಹಾಗೂ ವೈಯಕ್ತಿಕ ಜೀವನ ಸಮತೋಲನ’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರು ಉದ್ಯಮವನ್ನು ಆರಂಭಿಸುವಾಗ ಹಲವು ಸವಾಲುಗಳು ಎದುರಾಗುತ್ತವೆ. ನಮ್ಮ ಉದ್ಯಮದಲ್ಲಿ ಯಶಸ್ವಿಯಾಗಬೇಕಾದರೆ ಅಂತಹ ಸವಾಲುಗಳನ್ನು ಮೆಟ್ಟಿನಿಂತು, ಮುನ್ನಡೆಯಬೇಕು ಎಂದರು.ಇದೇ ಸಂದರ್ಭದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಸಿಕ್ಯಾಬ್ ಕಾಲೇಜು ಮತ್ತು ಇಂಜಿನಿಯರಿAಗ್ ಟೆಕ್ನಾಲಜಿನ ಸಹಾಯಕ ಪ್ರಾಧ್ಯಾಪಕ ಅಸಿಫ್ ಇಕ್ಬಾಲ್ ಎಂ. ದೊಡ್ಡಮಣಿ ಮಾತನಾಡಿ, ವೃತ್ತಿ ಜೀವನ ಮತ್ತು ಕೌಟುಂಬಿಕ ಜೀವನದಲ್ಲಿ ಸಮತೋಲನ ಸಾಧಿಸುವುದು ಅಗತ್ಯ, ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕಾದರೆ, ಪರಿಶ್ರಮ, ಸಮಯ ಪಾಲನೆ, ಸ್ವ-ಆರೈಕೆ,…

Read More

ಉಮರಜದಲ್ಲಿ ರಾಷ್ಟ್ರಗೀತೆಯೊಂದಿಗೆ ನಾಡದೇವಿ ಪ್ರಭಾತಪೇರಿ ೬೯ರ ಸಂಭ್ರಮ ಉದಯರಶ್ಮಿ ದಿನಪತ್ರಿಕೆ ಚಡಚಣ: ಗಡಿಗ್ರಾಮ ಉಮರಜದಲ್ಲಿ ನವರಾತ್ರಿ ಉತ್ಸವ ಅತ್ಯಂತ ವಿಶಿಷ್ಟವಾದದ್ದು, ಇಲ್ಲಿ ನಾಡಹಬ್ಬವನ್ನು ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತದೆ. ಕಳೆದ ೬೯ ವರ್ಷಗಳಿಂದಲೂ ಈ ಕಾರ್ಯ ಅತ್ಯಂತ ವೈಭವದಿಂದ ಸದ್ದಿಲ್ಲದೇ ನಡೆಯುತ್ತಿದೆ.ಹಬ್ಬದ ಸಂದರ್ಭದಲ್ಲಿ ನಡೆಯುವ ಪ್ರಭಾತಪೇರಿ ಗಡಿ ಭಾಗದಲ್ಲಿ ಕನ್ನಡ ಭಾಷಾಭಿಮಾನ ಮೂಡಿಸುವ ‘ವೇದಿಕೆ’ಯಾಗಿದೆ. ನವರಾತ್ರಿಯ ಒಂಭತ್ತೂ ದಿನಗಳಲ್ಲಿ ಉಮರಜ ಗ್ರಾಮದಲ್ಲಿ ನಾಡು-ನುಡಿಯ ಹಬ್ಬದ ಸಂಭ್ರಮ ಮನೆ ಮಾಡಿರುತ್ತದೆ.೧೯೫೬ರಿಂದ ಪ್ರತಿವರ್ಷ ಈ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ರಾಷ್ಟçಧ್ವಜ, ಭಾರತಮಾತೆಯ ಭಾವಚಿತ್ರದೊಂದಿಗೆ ಗ್ರಾಮಸ್ಥರು, ಮಕ್ಕಳೆಲ್ಲರೂ ಸೇರಿ ಹೆಜ್ಜೆ ಹಾಕುತ್ತಾರೆ. ದೇಶಾಭಿಮಾನ, ಧಾರ್ಮಿಕ ಮನೋಭಾವ ಮೂಡಿಸುವ ದೃಷ್ಟಿಯಿಂದ ನಡೆದುಕೊಂಡು ಬರುತ್ತಿರುವ ಈ ಪ್ರಭಾತಪೇರಿಯ ಸಂಪ್ರಯದಾಯವನ್ನು ಜನತೆ ಈಗಲೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.ಇಲ್ಲಿ ಒಂಬತ್ತು ದಿನಗಳ ಕಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾಡದೇವಿಯ ಪ್ರಭಾತ ಪೇರಿ ನಡೆಯುತ್ತದೆ. ಅದರಂತೆ ಈ ವರ್ಷವೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳಗಿನ ಜಾವ ನಾಡದೇವಿಯ ಭಾವಚಿತ್ರದೊಂದಿಗೆ ಪ್ರಭಾತಪೇರಿ ನಡೆಯಿತು. ಮಕ್ಕಳು…

Read More