Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಐವತ್ತಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ತೇರದಾಳ ಶಾಸಕ ಸಿದ್ದು ಸವದಿಯವರ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಇಲ್ಲಿನ ಎಂ.ಎಂ. ಹಟ್ಟಿಯವರ ಮನೆಯ ಆವರಣದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರಮುಖರು ಗ್ರಾ.ಪಂ. ಮಾಜಿ ಸದಸ್ಯರಾದ ಮಲ್ಲಪ್ಪ ಮುಂದಿನಮನಿ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿರಸಾಬ ನದಾಫ, ರಮೇಶ ಶಿರೋಳ, ಶೌಕತ್ ಮಿರ್ಜಿ, ಪ್ರಭಾಕರ ಚಲವಾದಿಯವರ ಮುಂದಾಳತ್ವದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಜನ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು.ಶಾಸಕ ಸಿದ್ದು ಸವದಿ ಎಲ್ಲರನ್ನು ಶಾಲುಹೊದಿಸಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಗುರಲಿಂಗಪ್ಪ ಪೂಜಾರಿ, ಬೀರಪ್ಪ ಹಳೇಮನಿ, ನಿಂಗಣ್ಣ ಪೂಜಾರಿ, ಪರಪ್ಪ ನೇಸೂರ, ಬಸವರಾಜ ಕುಂಚನೂರ, ಪ್ರಭು ಮೂಧೋಳ, ಪ್ರಕಾಶ ಪಾಟೀಲ, ಚನ್ನಪ್ಪ ತೇಲಿ, ಮಹಾಂತೇಶ ಜಾಲಿಕಟ್ಟಿ, ಅವ್ವನಪ್ಪ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಗದ್ದಿಗೆ: ಸೇವೆ ಎನ್ನುವ ಪದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯಂತ ಮಹತ್ವವನ್ನು ಪಡೆದಿದೆ. ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ. ಸೇವಾ ಚಟುವಟಿಕೆ ನಮ್ಮ ಜೀವನದ ಅವಿಭಾಜ್ಯ ಭಾಗ ಹಾಗೂ ಸ್ವಭಾವವಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಟೇಗೌಡ ಅಭಿಪ್ರಾಯಪಟ್ಟರು.ಹುಣಸೂರು ತಾಲೂಕಿನ ಗದ್ದಿಗೆ ಶ್ರೀ ಕೆಂಡಗಣೇಶ್ವರ ದೇವಸ್ಥಾನ ಆವರಣದಲ್ಲಿ ಜೆಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ರಾಷ್ಟ್ರೀಯ ಸೇವಾ ಯೋಜನೆಯ ಬಗ್ಗೆ ಕೆಲವರಲ್ಲಿ ತಪ್ಪು ತಿಳುವಳಿಕೆ ಇದೆ. ಯಾವುದೋ ಒಂದು ಕಡೆ ಹೋಗಿ ಕಸ ಸಂಗ್ರಹ ಮಾಡುವುದು, ಚರಂಡಿ ಸ್ವಚ್ಛ ಮಾಡಿಸಿ, ಒಂದು ಫೋಟೋ ತೆಗೆದು ಹಾಕ್ತಾರೆ ಎಂಬ ಭಾವನೆ ಬಹುತೇಕ ಜನರಲ್ಲಿ ಇದೆ. ಆದರೆ ರಾಷ್ಟ್ರೀಯ…
ದಾನಿಗಳ ನೆರವು, ಗುಣಮಟ್ಟ ಶಿಕ್ಷಣ, ಸ್ಮಾರ್ಟ್ ಕ್ಲಾಸ್ ಗೆ ಆದ್ಯತೆ ಉದಯರಶ್ಮಿ ದಿನಪತ್ರಿಕೆ ವರದಿ: ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ: ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಗೊಳಗಾಗುತ್ತಿವೆ ಎಂಬ ಅಪವಾದ ಇದೆ. ಶಾಲೆಗಳ ಸುಧಾರಣೆಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡರೂ ಸರ್ಕಾರಿ ಶಾಲೆಗಳು ಏಳಿಗೆ ಕಾಣುತ್ತಿಲ್ಲ. ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿದೆ. ಆದರೆ ಇದೆಲ್ಲದಕ್ಕೂ ಅಪವಾದ ಎಂಬಂತೆ ಇಲ್ಲೊಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುಣಮಟ್ಟ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟು, ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದ ಮಕ್ಕಳನ್ನೇ ತನ್ನೆಡೆಗೆ ಸೆಳೆಯುತ್ತಿದೆ.ಹೆಚ್ ಡಿ ಕೋಟೆ ತಾಲೂಕಿನ ಯಲಮತ್ತೂರು ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುಣಮಟ್ಟದ ಶಿಕ್ಷಣ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುತ್ತಿದೆ. ಗುಣಮಟ್ಟದ ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಬಲವಾಗಿ ನಂಬಿರುವ ಇಲ್ಲಿನ ಶಿಕ್ಷಕರು ಕ್ರಿಯಾ ಯೋಜನೆ ರೂಪಿಸಿ ಮಕ್ಕಳ ಬುದ್ದಿ ಮಟ್ಟಕ್ಕೆ ತಕ್ಕಂತೆ ಬೋಧನೆ ಮಾಡುತ್ತಿದ್ದಾರೆ. ಎಲ್ಲಕ್ಕಿಂತ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಈ ಭಾಗದ ಹೆಚ್ಚು ಪ್ರದೇಶದಲ್ಲಿ ಉಳ್ಳಾಗಡ್ಡಿ ಬೆಳೆ ಬೆಳೆದಿದ್ದಾರೆ ನೀರು ಹೆಚ್ಚು ಬೇಕು. ರೈತರ ಬೆಳೆಗಳಿಗೆ ಮುಳವಾಡ 1 ನೇ ಹಂತದ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸಬೇಕು. ಕೆನಾಲ್ ಮೇಲಿನ ಪಕ್ಕದ ರಸ್ತೆಗಳು ಹದಗೆಟ್ಟು ಹೋಗಿದ್ದು ಅವುಗಳನ್ನು ಈ ಭಾಗದ ಶಾಸಕ ಸಚಿವ ಶಿವಾನಂದ ಪಾಟೀಲ ಅವರು ವಿಶೇಷ ಅನುದಾನ ತಂದು ಸುಧಾರಣೆ ಮಾಡಿಸುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹೇಳಿದರು.ತಾಲೂಕಿನ ಮಟ್ಟಿಹಾಳ ಕ್ರಾಸ ಬಳಿ ಇರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಮುಳವಾಡ ಏತ ನೀರಾವರಿ ವಿಭಾಗ-ನಂ.1ರ ಕಾರ್ಯನಿರ್ವಾಹಕ ಅಭಿಯಂತರ ರವರ ಕಛೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.ಈ ಭಾಗದ ರೈತರ ಜಮೀನುಗಳಲ್ಲಿ ಕಾಲುವೆ ಹಾಯ್ದು ಹೋಗಿವೆ ಅದರಿಂದ ರೈತರು ಜಮೀನು ಕಳೆದುಕೊಂಡಿದ್ದಾರೆ.…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾತೃ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದೊಂದಿಗೆ ರಾಜ್ಯವ್ಯಾಪಿಯಾಗಿ ಶ್ರದ್ಧಾ ಕೇಂದ್ರಗಳ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.“ನಮ್ಮೂರು – ನಮ್ಮ ಶ್ರದ್ಧಾ ಕೇಂದ್ರ” ಎಂಬ ಧ್ಯೇಯವಾಕ್ಯದೊಂದಿಗೆ ಸ್ವಯಂಸೇವಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸ್ಥಳೀಯರು ಕೈಜೋಡಿಸಿ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛತೆಗೊಳಿಸಿದರು.ಮಕರ ಸಂಕ್ರಾಂತಿ, ಅಂದರೆ ಉತ್ತರಾಯಣ ಪುಣ್ಯಕಾಲದ ಅಂಗವಾಗಿ ಜನವರಿ 14ರಂದು ಪೂಜಾಮಂದಿರಗಳು ಸ್ವಚ್ಛತೆ ಮತ್ತು ಪವಿತ್ರತೆಯಿಂದ ಕೂಡಿರಬೇಕು ಎಂಬುದು ಪೂಜ್ಯ ವೀರೇಂದ್ರ ಹೆಗ್ಗಡೆಯವರ ಆಶಯವಾಗಿದ್ದು, ಅದರಂತೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಯಿತು.ಚಡಚಣ ವಲಯದಲ್ಲಿ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮಿ ದೇವಸ್ಥಾನ, ಶ್ರೀ ಎಲ್ಲಮ್ಮ ದೇವಸ್ಥಾನ, ಶ್ರೀ ಶಂಕರಲಿಂಗ ದೇವಸ್ಥಾನ, ಶ್ರೀ ಪರಮಾನಂದ ದೇವಸ್ಥಾನ, ಶ್ರೀ ಮಾತಾಂಗಿ ದೇವಸ್ಥಾನ, ಶ್ರೀ ಮಹಾದೇವ ಮಂದಿರ, ನಿವರಗಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಹತ್ತಳ್ಳಿಯ ಶ್ರೀ ಜಕ್ಕರಾಯ ದೇವಸ್ಥಾನಗಳಲ್ಲಿ ಸ್ವಚ್ಛತಾ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆಶೇಂಗಾ ಮತ್ತು ಸೋಯಾಬೀನ್ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.ಈ ಎಲ್ಲ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಬಿರಿ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ ಪುಂಡಲಿಂಗ ಶ್ರೀಗಳು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ಗೊಳಸಾರ ಮಠದ ಜನಹಿತದ ಕಾರ್ಯಗಳು ಅನನ್ಯ. ಪ್ರತಿ ವರ್ಷ ಸದ್ಗುರು ಶ್ರೀ ಪುಂಡಲಿಂಗೇಶ್ವರ ಮತ್ತು ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ವರ್ಷದಲ್ಲಿ ಎರಡು ಸಲ ಬಿ.ಎಲ್.ಡಿ.ಇ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ ನಡೆಸಲು ಅವಕಾಶ ನೀಡುತ್ತಾರೆ. ಭಕ್ತರ ಆರೋಗ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ. ಪುಣೆಕರ್ ಅವರ ನಿಧನಕ್ಕೆ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತೀವ್ರ ಕಂಬನಿ ಮಿಡಿದಿದ್ದಾರೆ.ಈ ಕುರಿತು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಸರ್ಕಾರಿ ಉದ್ಯೋಗವನ್ನು ತ್ಯಜಿಸಿ, ಗುಣಮಟ್ಟದ ಹಾಗೂ ಕಡಿಮೆ ವೆಚ್ಚದ ಶಿಕ್ಷಣವನ್ನು ಸಮಾಜದ ಅಂಚಿನವರಿಗೂ, ವಿಶೇಷವಾಗಿ ಮಹಿಳೆಯರಿಗೆ ತಲುಪಿಸುವ ಧ್ಯೇಯದಿಂದ ತಮ್ಮ ಬದುಕನ್ನೇ ಅರ್ಪಿಸಿದರು.1969ರಲ್ಲಿ ಒಂದು ಬಾಡಿಗೆ ಮನೆಯಲ್ಲಿ ಕೆಲವೇ ವಿದ್ಯಾರ್ಥಿಗಳೊಂದಿಗೆ ಸಿಕ್ಯಾಬ್ (Socio Economic Cultural Association of Bijapura – SECAB) ಸಂಸ್ಥೆಯನ್ನು ಸ್ಥಾಪಿಸಿದರು.ನಂತರದ ದಿನಗಳಲ್ಲಿ ಮಹಿಳೆಯರಿಗಾಗಿ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳನ್ನು ಆರಂಭಿಸಿ, ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಮೊದಲ ಮಹಿಳಾ ಕಾಲೇಜು ಸ್ಥಾಪಿಸಿದ ಗೌರವಕ್ಕೆ ಪಾತ್ರರಾದರು.ಕಾಲಕ್ರಮೇಣ ಡಿಪ್ಲೊಮ ಸೇರಿದಂತೆ 26ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳ ಮಹಾ ವೃಕ್ಷವನ್ನೇ ಬೆಳೆಸಿದರು. ಅಹಂಕಾರವಿಲ್ಲದ ವ್ಯಕ್ತಿತ್ವ, ಧರ್ಮನಿರಪೇಕ್ಷ ಚಿಂತನೆ ಮತ್ತು ಖ್ಯಾತಿಗಿಂತ ಕಾರ್ಯಕ್ಕೆ ಮಹತ್ವ ನೀಡಿದ…
ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್ಕಾಮ್ಸ್ ಇವರ ಸಹಯೋಗದೊಂದಿಗೆ ಇದೇ ಜನವರಿ ೧೩ರಿಂದ ೧೫ರವರೆಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಸ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ ಕಲಾಕೃತಿಗಳು ಜನಾಕರ್ಷಣೆಯವಾಗಿವೆ. ಒಂದಕ್ಕಿಂತ ಒಂದು ವಿಭಿನ್ನ ಆಲೋಚನೆ, ಸೃಜನಶೀಲತೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಸೃಷ್ಟಿಸುವ ಸನ್ನಿವೇಶ ಈ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ.ಪ್ರದರ್ಶನದಲ್ಲಿ ಹೂವಿನಲ್ಲಿ ಅರಳಿದ ಗೋಲಗುಮ್ಮಟ, ಗಿಡದಲ್ಲಿ ಕುಳಿತ ನಾಟ್ಯ ಮಯೂರಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಹೂವಿನಲ್ಲಿ ಮೂಡಿಬಂದ ಡಾಲ್ಫಿನ್, ಪುಷ್ಪ ಮಾರಾಟಕ್ಕೆ ಬಂದ ಪುಷ್ಪಲತಾ ಚಿತ್ರ, ನೀರಿನಿಂದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಾಹಿತ್ಯ ಮತ್ತು ಗ್ರಂಥಗಳ ಅಧ್ಯಯನ ಮಾಡುವುದರಿಂದ ಒಬ್ಬ ಸಾಮಾನ್ಯ ಮನುಷ್ಯ ಅಸಾಮಾನ್ಯ ಸಾಧನೆ ಮಾಡಬಲ್ಲ ಎಂದು ಯುವಾ ಬ್ರಿಗೇಡ್ ವಿಭಾಗ ಸಂಚಾಲಕ ರಾಜು ಪಾಟೀಲ ಹೇಳಿದರು.ಸಿಂದಗಿ ಮತಕ್ಷೇತ್ರದ ಕಡಣಿ ಗ್ರಾಮದ ಶ್ರೀ ಪರಮಾನಂದ ಭೊಗಲಿಂಗೇಶ್ವರ ಪಪೂ ಕಾಲೇಜಿನಲ್ಲಿ ಯುವಾ ಬ್ರಿಗೇಡ್ ವತಿಯಿಂದ ವಿವೇಕಾನಂದ ಜಯಂತಿ ನಿಮಿತ್ತ ಹಮ್ಮಿಕೊಂಡ ಅರಿವೇ ಗುರು ಕಾರ್ಯಕ್ರಮದಲ್ಲಿ ಕಾಲೇಜಿಗೆ ೨೦೦ ಪುಸ್ತಕ ಹಾಗೂ ಒಂದು ಟ್ರೇಜರಿ (ಖಜಾನೆ) ಯನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.ಈ ವೇಳೆ ಆಲಮೇಲ ತಾಲೂಕ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಲಕ್ಷ್ಮಿಪುತ್ರ ಕಿರಣಳ್ಳಿ, ಯುವಾ ಬ್ರಿಗೇಡ್ ವಿಭಾಗ ಸಹ ಸಂಚಾಲಕರು ಶಿವಮೂರ್ತಿ ಕಾಟಕರ ಪ್ರಸ್ತಾವಿಕ ಮಾತನಾಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಲಾಳಸಂಗಿ, ಪ್ರಾಚಾರ್ಯರು ರಮೇಶ ಗಂಗನಳ್ಳಿ, ಮುಖ್ಯ ಗುರುಗಳು ಗಂಗನಳ್ಳಿ, ಜಿಲ್ಲಾ ಸಂಚಾಲಕ ಮಡಿವಾಳ ವಾಲಿಕಾರ, ಪರಶುರಾಮ ಭಜಂತ್ರಿ, ಶಿವರಾಜ ಜೋಗೂರ, ಪ್ರಭಾಕರ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
