Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ,ಪಟ್ಟಣ ಹಾಗೂ ನಗರವನ್ನು ಸ್ವಚ್ಛವಾಗಿರಿಸಿ ಸುಂದರವಾಗಿಸುವಲ್ಲಿ ಪೌರಕಾರ್ಮಿಕರ ಕಾರ್ಯ ಮಹತ್ವದ್ದಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ ಹೇಳಿದರು.ಅವರು ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಇವರ ಸಹಯೋಗದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಗರದ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತೆ ಹೇಳಿದ ಅವರು ಸರ್ಕಾರ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಸುಂದರ ಜೀವನ ರೂಪಿಸಿಕೊಳ್ಳುವಂತೆ ತಿಳಿಸಿದರು.ಉಪಮಹಾಪೌರರಾದ ಸುಮಿತ್ರಾ ಜಾಧವ ಅವರು ಮಾತನಾಡಿ,ಪೌರಕಾರ್ಮಿಕರು ತಮ್ಮ ಕಾರ್ಯದೊಂದಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ತಮ್ಮ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲು ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.ಸದಸ್ಯರಾದ ಆರತಿ ಶಹಾಪುರ ಮಾತನಾಡಿ, ನಗರ ಸ್ವಚ್ಛ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಸ್ದಳೀಯ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮೀಕರನ್ನು ಗೌರವ ಪೂರ್ವಕವಾಗಿ ಸತ್ಕರಿಸಲಾಯಿತು.ಈ ಸಮಯದಲ್ಲಿ ಸರಕಾರದಿಂದ ಪೌರಕಾರ್ಮೀಕರಿಗೆ ಕೊಡಮಾಡಿದ ಕಿಟ್ ಮತ್ತು ಧನ ಸಹಾಯವನ್ನು ಒದಗಿಸಲಾಯಿತು.ಒಂದು ಊರು ಪಟ್ಟಣ ನಗರ ಮಹಾನಗರ ಪಾಲಿಕೆಗಳು ಸ್ವಚ್ಛಂದ ಸುಂದರವಾಗಿ ಕಾಣಲು ಬೆಳಗಿನ ಜಾವ ಎದ್ದು ನಿತ್ಯ ಕಾಯಕವಾದ ಕಸಗುಡಿಸುವದು ಮನೆಗಳಲ್ಲಿ ಅಂಗಡಿಗಳಲ್ಲಿ ಇನ್ನಿತರ ಕಡೆ ಹಾಕುವ ಕಸವನ್ನು ದೂರದಲ್ಲಿ ಸಾಗಿಸಿ ಊರಿನಲ್ಲಿ ಸ್ವಚ್ಚತೆ ಕಾಪಾಡುವ ಶ್ರಮಜೀವಿಗಳೇ ಪೌರಕಾರ್ಮೀಕರು ಎಂದು ಮುಖ್ಯಾಧಿಕಾರಿ ವಿರೇಶ ಹಟ್ಟಿ ಹೇಳಿದರು.ಪಟ್ಟಣ ಪಂಚಾಯತ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧಿಕಾರಿ ವಿರೇಶ ಹಟ್ಟಿ ಹಾಗೂ ಸಿಬ್ಬಂದಿ ವರ್ಗ, ಸದಸ್ಯರಾದ ನಿಂಗಪ್ಪ ಗಣಿ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ತೌಸೀಪ್ ಗಿರಗಾಂವಿ, ದಸಗೀರಸಾಬ ಕಲಾದಗಿ, ಅಪ್ಪಶಿ ಮಟ್ಟಿಹಾಳ, ಬಾಬು ಭಜಂತ್ರಿ, ಮುಖಂಡರಾದ ದಶರಥ ಈಟಿ, ಮಲ್ಲು ಹೆರಕಲ, ಎಮ್.ಆರ್. ಕಲಾದಗಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೇಂದ್ರ ಸರ್ಕಾರ ೩೫೦ ಕ್ಕೂ ಅಧಿಕ ವಸ್ತುಗಳ ಮೇಲಿನ ಜಿ.ಎಸ್.ಟಿ ಯನ್ನು ಕಡಿತಗೊಳಿಸಿ ಜನ ಸಾಮಾನ್ಯರಿಗೆ ನೆರವಾಗಿದೆ. ಕ್ಯಾನ್ಸರ್ ರೋಗಿಗಳ ಔಷಧಿಗಳನ್ನ ತೆರಿಗೆ ಇಲ್ಲದೆ ಖರೀದಿಸಬಹು. ಹಾಗೆ ಶಿಕ್ಷಣದ ವಸ್ತುಗಳಿಗೂ ರಿಯಾಯಿತಿ ನೀಡಿ ಶೈಕ್ಷಣಿಕ ಬೆಳವಣಿಗೆಗೆ ಆದ್ಯತೆ ನೀಡಿದ್ದು ಜನ ಸಾಮಾನ್ಯರಿಗೆ ವರದಾನ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಸೋಮವಾರ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜಿ ಎಸ್ ಟಿ 2 ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಎಲ್ಲಾ ಸರ್ಕಾರಗಳು ಒಮ್ಮೆ ತೆರಿಗೆ ಏರಿಸಿದ ನಂತರ ಮುಂದಕ್ಕೆ ಹೆಚ್ಚಿಗೆ ಮಾಡಿಕೊಂಡೇ ಹೋಗುತ್ತವೆ. ಆದರೆ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ದಾಖಲೆ ಬರೆದಿದೆ ಎಂದರು.ಈ ಸಂದರ್ಭದಲ್ಲಿ ಸ್ಥಳೀಯ ವರ್ತಕರ ಸಂಘದ ಸದಸ್ಯರಾದ ಶಿವಾನಂದ ಶೀಲವಂತ, ಕಲ್ಲಬಸಪ್ಪ ಶಾವಿಗೊಂಡ, ಈರಯ್ಯ ಮಠಪತಿ, ಚಿನ್ನಪ್ಪ ಗಿಡ್ಡಪಗೋಳ, ಬಸಪ್ಪ ಉಪ್ಪಲದಿನ್ನಿ, ಮಲ್ಲಿಕಾರ್ಜುನ ಬೆಳ್ಳುಬ್ಬಿ, ಜಗದೀಶ ಸುನಗದ, ಮಂಜುನಾಥ ತುಂಬರಮಟ್ಟಿ, ಸವಿತಾ ಬೆಳ್ಳುಬ್ಬಿ, ಶಾಂತಾಬಾಯಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ. ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಈ ಸಂದರ್ಭದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ.ಅನುರಾಧಾ ಜೋಶಿ ಸಲಹೆ ನೀಡಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಪಿಎಂ–ಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ “ಮಹಿಳೆಯರ ಋತುಚಕ್ರ ರ‍್ಯೋಗ’ದ ಕುರಿತು ಮಮದಾಪುರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮುಟ್ಟಿನ ದಿನಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳದಿದ್ದರೆ ಹಲವಾರು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯೆತಗಳಿವೆ ಎಂದರು.ಮಹಿಳೆಯರ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ವೋನ್‌ಗಳಲ್ಲಿ ಕಂಡು ಬರುವ ಬದಲಾವಣೆಗಳು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಸಕರ ಅಭಿವೃದ್ಧಿಪರ ಕಾರ್ಯಗಳು ವಿರೋಧ ಪಕ್ಷದವರಿಗೆ ತಮ್ಮ ಮುಂದಿನ ಭವಿಷ್ಯದ ಆಸ್ತಿತ್ವ ಬಗ್ಗೆ ಭಯ ಮೂಡಿಸುತ್ತಿವೆ. ಅದೇ ಕಾರಣಕ್ಕಾಗಿ ತಾವು ಅಭಿವೃದ್ಧಿಯನ್ನು ಸಹಿಸದೇ ಕೊಂಕು ಮಾತುಗಳನ್ನಾಡುತ್ತಿದ್ದೀರಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಗುಡುಗಿದರು.ಸಿಂದಗಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸರ್ವೇ ನಂ.೮೪೨ರ ಪಲಾನುಭವಿಗಳಿಗೆ ಶಾಸಕರು ಮನಗೂಳಿ ಪ್ರತಿಷ್ಠಾನದ ವತಿಯಿಂದ ೩೦ಲಕ್ಷ ರೂ.ಗಳನ್ನು ನೀಡಿದ್ದಾರೆ. ಆ ಪಲಾನುಭವಿಗಳಿಗೆ ನಿಮ್ಮಿಂದಾದ ಕೊಡುಗೆ ಏನು ಎಂದು ವಿರೋಧ ಪಕ್ಷದ ನಾಯಕರಿಗೆ ಪ್ರಶ್ನಿಸಿದರು. ಸದ್ಯ ಸಿಂದಗಿ ಕೊಡಂಗಲ್ ರಸ್ತೆ ಹಲವು ತಿಂಗಳುಗಳಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ. ಇದಕ್ಕಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮುಖ್ಯ ಯೋಜನಾಧಿಕಾರಿ ಇವರಿಗೆ ಸೆ.೦೯.೨೦೨೫ರಂದು ೫ನೆಯ ಹಂತದ ಘಟ್ಟ-೨ರಲ್ಲಿ ಅನುದಾನ ಬಿಡುಗಡೆ ಮಾಡವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಸಚಿವರು ಸ್ಪಂದಿಸಿದ್ದಾರೆ. ೨೪.೮.೨೦೨೫ರಂದು ಲೋಕೋಪಯೋಗಿ ಸಚಿವರು ಕಲಬುರಗಿಯಿಂದ ಸಿಂದಗಿಗೆ ಬರಬೇಕಾದರೆ ಶಾಸಕರು ಸಚಿವರನ್ನು ಗೋಲಗೇರಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮಹಾರಾಷ್ಟçದ ಉಜನಿ, ವೀರ, ಶೀನಾ ಜಲಾಶಯಗಳಿಂದ ಮತ್ತೆ ಹೆಚ್ಚಿನ ಪ್ರಮಾಣದ ನೀರು ಬೀಮಾ ನದಿಗೆ ಹರಿಬಿಟ್ಟಿರುವ ಪರಿಣಾಮ ನಾಳೆ. ದಿನಾಂಕ ೨೪ ರ ಸಾಯಂಕಾಲದ ತನಕ ೨ ಲಕ್ಷ ೬೦ ಸಾವಿರ ಕ್ಯೂಸೇಕ್ಸ್ ನೀರು ಭೀಮಾ ನದಿಗೆ ಬರಲಿದೆ ಎಂದು ಅಫಜಲಪುರದ ಕೆಎನ್‌ಎನ್‌ಎಲ್ ಎಇಇ ಸಂತೋಷಕುಮಾರ ಸಜ್ಜನ್ ತಿಳಿಸಿದ್ದಾರೆ.ಅವರು ಈ ಕುರಿತು ಮಾತನಾಡಿ, ಮಹಾರಾಷ್ಟ್ರದ ಶೀನಾ ನದಿಯಿಂದ ೧ ಲಕ್ಷ ೫೦ ಸಾವಿರ ಕ್ಯೂಸೇಕ್ಸ್, ಉಜನಿ ಜಲಾಶಯದಿಂದ ೫೦ ಸಾವಿರ, ಭೋರಿ ಹಳ್ಳ ಹಾಗೂ ಕರ್ನಾಟಕದ ಭೀಮಾನದಿ ಪಾತ್ರದಲ್ಲಿ ಬಿದ್ದ ಮಳೆಯಿಂದ ೫೦ ಸಾವಿರ ಕ್ಯೂಸೇಕ್ಸ್ ನಷ್ಟು ನೀರು ಭೀಮಾ ನದಿ ಸೇರಲಿದೆ. ಎಲ್ಲಾ ಸೇರಿ ಬುಧವಾರ ದಿವಸ ಸುಮಾರು ೨ ಲಕ್ಷ ೬೦ ಸಾವಿರ ಕ್ಯೂಸೇಕ್ಸ್ ನೀರು ಒಳ ಮತ್ತು ಹೊರ ಹರಿವು ಇರಲಿದೆ.ಮಂಗಳವಾರ ಸೊನ್ನ ಭೀಮಾ ಬ್ಯಾರೇಜ್‌ನಿಂದ ೨ ಲಕ್ಷ ೪೦ ಸಾವಿರ ಕ್ಯೂಸೇಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ನಾಳೆ ಬುಧವಾರ ೨ ಲಕ್ಷ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ಸೀನಾ ನದಿ ಪಾತ್ರದಿಂದ ಒಂದು ಲಕ್ಷ ಐವತ್ತು ಸಾವಿರ ಉಜನಿ ಜಲಾಶಯದಿಂದ ೫೫ ಸಾವಿರ ಮತ್ತು ನದಿ ಪಾತ್ರದ ಇತರೆ ಮೂಲಗಳಿಂದ ೪೫ ಸಾವಿರ ಒಟ್ಟು ಎರಡು ಲಕ್ಷ ಐವತ್ತು ಸಾವಿರ ನೀರು ಬಿಡಲಾಗಿದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ತಿಳಿಸಿದ್ದಾರೆ.ಈ ನೀರು ಸೋಮವಾರ ರಾತ್ರಿ ೧೦ ಗಂಟೆಗೆ ಬಿಟ್ಟಿದ್ದು ಈಗಾಗಲೇ ಕರ್ನಾಟಕದ ನದಿ ಪಾತ್ರ ತಲುಪಿದ್ದು ಎಲ್ಲ ಗ್ರಾಮಗಳು ಸುರಕ್ಷಿತ ಇವೆ. ಯಾವದೇ ಪ್ರದೇಶದಲ್ಲಿ ನೀರು ಹೋದ ವರದಿ ಇಲ್ಲ. ನಾನು ಖುದ್ದಾಗಿ ಭ್ಯೂಯ್ಯಾರ ಹಲವಾರು ಗ್ರಾಮಗಳಿಗೆ ಭೇಟಿ ನಿಡಿದ್ದೇನೆ.ಮತ್ತು ತಹಸೀಲ್ದಾರರು ಸೇರಿದಂತೆ ಇತರೆ ತಂಡ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ವರದಿ ಸಂಗ್ರಹಿಸಲಾಗುತ್ತಿದೆ.ಎಲ್ಲ ಪಿಡಿಓಗಳನ್ನು ಗ್ರಾಮದಲ್ಲಿಯೇ ಠಿಕಾಣಿ ಹೂಡಲು ತಿಳಿಸಲಾಗಿದೆ. ಗ್ರಾಮಸ್ಥರು ಪಿಡಿಓ ಇಲ್ಲ ಎಂದು ತಿಳಿಸಿದರೆ ಅಂತಹ ಪಿಡಿಒಗಳ ಮೇಲೆ ಕ್ರಮ ಜರುಗಿಸಲಾಗುವದು ಎಂದರು.ಜನರು ಜಾಗೃತಿ ಯಿಂದ ಇದ್ದು ಪರಿಸ್ಥಿತಿ ಎದುರಿಸುವ ಅವಶ್ಯಕತೆ ಇದೆ. ತಮ್ಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಅಡಾಪ್ಟ ಎ ಮೊನೊಮೆಂಟ್ ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನುWorld Monument Fund India Associations Mumbai ಸಂಸ್ಥೆ ಅವರು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶಿ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಿ ಹಮ್ಮಿಕೊಂಡಿರುತ್ತಾರೆ.ತಾಜಬಾವಡಿ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸಲು ಡಿಸಿ ಸೂಚಿಸಿದರು.ಕಲುಷಿತ ನೀರು ಬಾವಡಿ ಸೇರದಂತೆ ಅಗತ್ಯ ಕ್ರಮವಹಿಸುವುದು. ಡಿಸೆಂಬರ ಮಾಹೆಯೊಳಗೆ ನೀರನ್ನು ಸಾರ್ವಜನಿಕ ಬಳಕೆಗೆ ಉಪಯೋಗಿಸಲು ಒದಗಿಸಬೇಕು. ತಾಜಬಾವಡಿಯ ಆವರಣದಲ್ಲಿರುವ ವಿದ್ಯುತ್ ಪರಿವರ್ತಕ ಬೇರೆಡೆ ಸ್ಥಳಾಂತರಕ್ಕೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿದರು.ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ, World Monument…

Read More

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಹೌದು ಹಿಂದಿನ ದಿನಗಳ ಮತ್ತು ಇಂದಿನ ದಿನಗಳ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ.ಹೆಣ್ಣುಮಕ್ಕಳು 11 -12 ವರ್ಷಕ್ಕೇನೆ ಋತುಮತಿಯಾಗುವುದು, ಡೆಲಿವರಿ ದಿನಾಂಕಕ್ಕೆ 15- 20 ದಿನಗಳ ಮುಂಚೆಯೇ ಮಗು ಆಗುವುದು, ಮೆನೋಪಾಸ್ ಗೆ 10-12 ವರ್ಷಗಳ ಮುಂಚೆಯೇ ಋತುಸ್ರಾವ(ಮುಟ್ಟು) ನಿಲ್ಲುವುದು, ಇನ್ನು ಹುಡುಗರ ವಿಷಯಕ್ಕೆ ಬಂದರೆ, ಡಿಗ್ರಿಗೆ ಬರಬೇಕಾಗಿದ್ದ ಗಡ್ಡ – ಮೀಸೆ, ಇನ್ನೂ ಹೈಸ್ಕೂಲು ಪಿಯುಸಿಗೇನೆ ಬಂದುಬಿಡುವುದು, 4-5 ವರ್ಷಕ್ಕೇನೇ ಬಿಪಿ, ಶುಗರ್, ಹಾರ್ಟ್ ಅಟ್ಯಾಕ್ ಇವೆಲ್ಲವೂ ಇವಾಗಿನ ಆಹಾರದಿಂದ ಮತ್ತು ಜೀವನ ಕ್ರಮದಿಂದಾದ ಬದಲಾವಣೆಗಳು ಎಂದಿಟ್ಟುಕೊಳ್ಳೋಣ.ಆದರೆ ಮಕ್ಕಳೆಂದರೆ ಮುಗ್ದರು, ಅವರು ದೇವರಿಗೆ ಸಮಾನ, ಅವರು ಸತ್ಯವನ್ನು ಬಿಟ್ಟು ಬೇರೇನನ್ನೂ ಹೇಳುವುದಿಲ್ಲ, ಹೇಳುವುದಕ್ಕೆ ತಿಳಿಯುವುದೂ ಇಲ್ಲ. ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವು ಮಕ್ಕಳ ಉದ್ಧಟತನದ ಮಾತುಗಳನ್ನೂ ವರ್ತನೆಗಳನ್ನೂ ನೋಡಿದಾಗ ಆಶ್ಚರ್ಯವಾಗುತ್ತದೆ. ‘ಅರೇ ಹೀಗೂ ಹೇಳಬಹುದೆ? ದೊಡ್ಡವರಾದ ನಾವೇ ಇಷ್ಟು ಹದ್ದುಮೀರಿ ಮಾತನಾಡುವುದಿಲ್ಲವಲ್ಲ’ ಎನಿಸುತ್ತದೆ. ಅದ್ಯಾರಿಂದ ಇವರು ಹೀಗೆ…

Read More

ಲೇಖನ- ಡಾ.ಭವ್ಯ ಅಶೋಕ್ ಸಂಪಗಾರ್ಕ್ಷಯ ರೋಗ ವೈದ್ಯಾಧಿಕಾರಿಜಿಲ್ಲಾಸ್ಪತ್ರೆ, ಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಹೂಗಾರರೆಂದರೆ ಹೂವು-ಪತ್ರೆಗಳ ವ್ಯಾಪಾರ-ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದ ಸಮಾಜವೆಂದು ಅರ್ಥೈಸಿಕೊಳ್ಳಬಹುದು. ಈ ಸಮಾಜದ ಬಗ್ಗೆ ಚಾಲುಕ್ಯ ಮಹಾರಾಜ ಮಂಗಲೇಶನ ಶಾಸನದಲ್ಲಿ ಲಿಖಿತ ವರದಿಗಳಿವೆ. ಹೆಚ್ಚಿನ ಭಾಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹರಡಿರುವ ಹೂವಿನ ಮನಸ್ಸಿನವರಾದ ಇವರು ದೇಶದ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಇತಿಹಾಸದ ಪ್ರಕಾರ ‘ಪುಷ್ಪದ ಸೋಮಯ್ಯ’, ‘ಬಾಹೂರು ಬೊಮ್ಮಯ್ಯ’, ‘ಹೂವಿನ ಅಲ್ಲಮ’, ‘ಬಿಲ್ವಪತ್ರೆಯ ವೀರಣ್ಣ’, ‘ಗುಂಡುಕತ್ತರಿಯ ನಾಚಯ್ಯ’ ಮುಂತಾದ ಹೂಗಾರ ಸಮಾಜಕ್ಕೆ ಸೇರಿದ ಪ್ರಮುಖರ ವಿವರಣೆಗಳಿವೆ. ಹರಿಹರ ಮಹಾಕವಿಯ ನಂಬಿಯಣ್ಣನ ರಗಳೆಯಲ್ಲಿ ‘ಪುಷ್ಪದತ್ತ’ನೆಂಬ ಪಾತ್ರವಿದೆ. ಇವನನ್ನು ಹೂಗಾರರ ಮೊದಲ ಪ್ರತಿನಿಧಿಯಾಗಿ ಕಾಣಬಹುದು.ಈ ಸಮಾಜದ ಆದಿಪುರುಷನೆಂದು ಶರಣ ‘ಹೂಗಾರ ಮಾದಯ್ಯ’ನವರನ್ನು ಗೌರವಿಸಲಾಗುತ್ತದೆ.ಭವ್ಯ ಭಾರತ ದೇಶದ ಸಂಸ್ಕೃತಿಯು ಐದು ಸಾವಿರ ವರ್ಷಗಳಿಗಿಂತಲೂ ಹಳೆಯದಾಗಿದೆ. ‘ಜೀವ ಮತ್ತು ಪರಮಾತ್ಮ’, ‘ಸೃಷ್ಟಿ-ಅಂತ್ಯ’ ಮುಂತಾದ ವಿಷಯಗಳ ಕುರಿತು ಇಲ್ಲಿ ನಡೆದಿರುವಷ್ಟು ಆಳವಾದ ಅಧ್ಯಯನ ಪ್ರಪಂಚದ ಮತ್ತೆಲ್ಲಿಯೂ ನಡೆದಿಲ್ಲ. ಇಲ್ಲಿ ಸಾರ್ಥಕ ಬದುಕನ್ನು ನಡೆಸುವ ಕುರಿತು…

Read More