Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಯಮಾವಳಿ ಪರಿಷ್ಕರಣೆ ಮಾಡಬೇಕು, ಇಲ್ಲವಾದರೆ ಸ್ಪಿನ್ನಿಂಗ್ ಮಿಲ್ ಮಾದರಿಯಲ್ಲಿ ಸಕ್ಕರೆ ಕಾರ್ಖಾನೆಗಳು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಅದರಲ್ಲೂ ಸಹಕಾರ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಬೆಳಕು ಚೆಲ್ಲಿದ ಅವರು, ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ಹಿತ ಎರಡು ಮುಖ್ಯ, ಆದರೆ ಕೇಂದ್ರ ಸರ್ಕಾರ ನೀತಿಗಳಿಂದ ಸಹಕಾರ ವಲಯದ ಸಕ್ಕರೆ ಕಾರ್ಖಾನೆಗಳಿಗೆ ದೊಡ್ಡ ಆತಂಕ ಎದುರಾಗಿದೆ.ಇಳುವರಿ ಆಧರಿಸಿ ಎಫ್.ಆರ್.ಪಿ. ನಿಗದಿಯಾಗುತ್ತದೆ, ಭೀಮಾತೀರದಲ್ಲಿ ಕಬ್ಭಿನ ರಿಕವರಿ ಪ್ರಮಾಣ ಕಡಿಮೆ, ಹೀಗಾಗಿ ಎಫ್.ಆರ್.ಪಿ ನಿಗದಿಗೊಳಿಸಲು ಏಕರೂಫದ ಮಾನದಂಡ ವಿಧಿಸುತ್ತಿರುವುದು ಸರಿಯಲ್ಲ, ಭೌಗೋಳಿಕವಾಗಿ ಭಿನ್ನವಾದ ಪರಿಸ್ಥಿತಿ ಇದೆ, ಹೀಗಾಗಿ ಎಂ.ಎಸ್.ಪಿ. ಘೋಷಣೆ ಮಾಡಬೇಕು, ಇಲ್ಲವಾದರೆ ಸಕ್ಕರೆ ಕಾರ್ಖಾನೆಗಳು ಸ್ಪಿನ್ನಿಂಗ್ ಮಿಲ್ ಮಾದರಿಯಲ್ಲಿ ನಶಿಸಿ ಹೋಗುವ ದಿನ ದೂರವಿಲ್ಲ ಎಂದರು.ಸಕ್ಕರೆ ಕಾರ್ಖಾನೆಗಳಿಗೆ…
ಆಲಮೇಲದಲ್ಲಿ ಗಾಲಿಸಾಬ್ ಜಾತ್ರಾ ನಿಮಿತ್ಯ ಶಾಂತಿ ಸಭೆ | ನಾಗರೀಕ ವೇದಿಕೆ ಅಧ್ಯಕ್ಷ ರಮೇಶ ಬಂಟನೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಪೊಲೀಸ್ ಸ್ಟೇಷನ್ ಆವರಣದಲ್ಲಿ ಗ್ರಾಮ ದೇವರಾದ ಹಜರತ್ ಪೀರ್ ಗಾಲಿಸಾಬ್ ಜಾತ್ರೆಯು ಅತಿ ವಿಜ್ರಂಣೆಯಿಂದ ಊರಿನ ದೇಶಮುಖ ಮನೆತನದಿಂದ ಗಂಧದೊಂದಿಗೆ ಜಾತ್ರೆ ಪ್ರಾರಂಭಗೊಳ್ಳುವುದು. ಈ ಜಾತ್ರೆಯ ವಿಶೇಷತೆ ಎಂದರೆ ಹಿಂದೂ -ಮುಸ್ಲಿಂ ಭೇದ ಭಾವವಿಲ್ಲದೆ ಏಕತೆ ಹೊಂದಿದ್ದಾರೆ ಹಾಗೂ ಕಮಿಟಿಯ ಅಧ್ಯಕ್ಷರು ಹಿಂದೂ ಬಾಂಧವರು ಪ್ರತಿ ವರ್ಷ ಇದನ್ನು ಅನುಸರಿಸಿಕೊಂಡು ಬಂದಿದ್ದು ವಿಶೇಷವಾಗಿದೆ ಎಂದು ಆಲಮೇಲ ನಾಗರೀಕ ವೇದಿಕೆ ಅಧ್ಯಕ್ಷರಮೇಶ ಬಂಟನೂರ ಹೇಳಿದರು.ಆಲಮೇಲ ತಾಲೂಕಿಗೆ ಇದು ಒಂದು ದೊಡ್ಡ ಜಾತ್ರೆ ಇರುವುದರಿಂದ ಸುಮಾರು 43 ಹಳ್ಳಿಗಳು ಒಳಗೊಂಡಿರತಕ್ಕಂಥ ಈ ಜಾತ್ರೆಯು ಶಾಂತಿ ಕಾಪಾಡುವುದು ಈ ಆಲಮೇಲ ಊರಿನ ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿರುತ್ತದೆ. 29ರಂದು ಗಂಧ ಇರುವದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ನೀಡಬೇಕು ಎಂದು ಪ್ರಭು ವಾಲಿಕಾರ ಹೇಳಿದರು.ಹಳ್ಳಿಯಿಂದ ಬಂದಿರತಕ್ಕಂತ ನಾಗರಿಕರು ತಮ್ಮ ಬೈಕುಗಳು ಮತ್ತು ಫೋರ್…
ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ | ಪಕ್ಷ ನೋಟಿಸ್ ಕೊಟ್ಟರೆ ಉತ್ತರ ಕೊಡುವೆ | ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ಮೈಸೂರು: ತಮ್ಮ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ‘ನವೆಂಬರ್ ಕ್ರಾಂತಿ’ ಕೇವಲ ಊಹಾಪೋಹ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದರು.ನಿಮ್ಮ ತಂದೆ ಐದು ವರ್ಷ ಪೂರ್ಣಗೊಳಿಸುತ್ತಾರೆಯೇ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಪುತ್ರ, “ಪ್ರಸ್ತುತ ಪರಿಸ್ಥಿತಿಯಲ್ಲಿ, ಅವರು ಐದು ವರ್ಷಗಳ ಅವಧಿ ಪೂರ್ಣಗೊಳಿಸುತ್ತಾರೆ” ಎಂದು ಹೇಳಿದರು.ಇದೇ ವೇಳೆ ಸಿದ್ದರಾಮಯ್ಯ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಅರ್ಥದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದಿದ್ದಾರೆ.ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.ಇನ್ನು ಪಕ್ಷದಿಂದ ನನಗೆ…
ಬಿಜ್ಜರಗಿ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿಗಳ ಜಯಂತ್ಯೋತ್ಸವ | ರಕ್ತದಾನ ಶಿಬಿರ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಜ್ಞಾನಯೋಗಿ ಸಂತ ಶ್ರೀ ಸಿದ್ದೇಶ್ವರ ಸ್ವಾಮಿಗಳ ೮೫ನೆ ಜಯಂತ್ಯೋತ್ಸ ಆಚರಣೆ ಶ್ರೀಗಳ ಹುಟ್ಟೂರಾದ ಬಿಜ್ಜರಗಿ ಗ್ರಾಮದಲ್ಲಿ ಮಾಡುತ್ತಿರುವದು ಸನ್ಮಾರ್ಗದ ದಾರಿ ಸುಲಭ ಕಾಣುವಂತೆ ಮಾಡಲಾಗಿದೆ ಎಂದು ಬೀಳೂರ ವೀರಕ್ತಮಠದ ಚನ್ನಬಸವ ಗುರುಬಸವ ಮಹಾ ಸ್ವಾಮೀಜಿ ಹೇಳಿದ್ದಾರೆ.ಬಿಜ್ಜರಗಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ ಚನ್ನಮಲ್ಲಿಕಾರ್ಜುನ ಮಹಾ ಸ್ವಾಮಿಗಳ ಹಾಗೂ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಸ್ಪನಮನ ಸಲ್ಲಿಸಿ ಮಾತನಾಡಿದ ಅವರು, ಶ್ರೀಗಳು ಹುಟ್ಟಿ ಬೆಳೆದು ಕನ್ನಡ ಶಾಲೆಯಲ್ಲಿ ವ್ಯಾಸಾಂಗ ಮಾಡಿ ವಿಜಯಪುರ ಜ್ಞಾನ ಯೋಗಾಶ್ರಮದ ಮಲ್ಲಿಕಾರ್ಜುನ ಮಹಾ ಸ್ವಾಮಿಗಳ ಶಿಷ್ಯರಾಗಿ ಬೆಳೆದು ಈ ನಾಡಿಗೆ ಜ್ಞಾನ ಭಂಡಾರ ಬಿತ್ತಿದರು. ನಾಡಿನ ಉದ್ದಗಲಕ್ಕೂ, ದೇಶ ವಿದೇಶಗಲ್ಲಿ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ಕಡೆಗೆ ಮಾರ್ಗದರ್ಶನ ನೀಡಿದವರು. ಅವರ ಪ್ರವಚನ ಎಲ್ಲೆಯಿದ್ದರೂ ಲಕ್ಷಲಕ್ಷ ಭಕ್ತರು ಸೇರುತ್ತಿದ್ದರು. ಶ್ರೀಗಳು ಕೋಟ್ಟಂತಹ ಜ್ಞಾನ ಭಂಡಾರ ಅಜರಾಮರವಾಗಿ ಉಳಿಯುವದು ಮತ್ತು ಶ್ರೀಗಳು…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ವಿಶ್ವಕ್ಕೆ ಆಧ್ಯಾತ್ಮದ ಮೂಲಕ ಜ್ಞಾನದ ಬೆಳಕನ್ನು ಹರಡಿಸಿದ ಪೂಜ್ಯ ಸಿದ್ದೇಶ್ವರ ಶ್ರೀಗಳ ಜನ್ಮ ಸ್ಥಳ ಬಿಜ್ಜರಗಿ ಗ್ರಾಮವು ದುಶ್ಚಟಗಳಿಂದ ದೂರವಿರಬೇಕು ಎಂದು ಬೀಳೂರ ವಿರಕ್ತಮಠದ ಚನ್ನಬಸವ ಗುರುಬಸವ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಬುಧವಾರ ಸಂಜೆ ನಡೆದ ಸಿದ್ದೇಶ್ವರ ಶ್ರೀಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮವು ಸಾರಾಯಿ ಮತ್ತು ಮಾಂಸ ಮುಕ್ತವಾಗಬೇಕೆಂದು ಆಶಯ ವ್ಯಕ್ತಪಡಿಸಿದರು.ಸಿದ್ಧೇಶ್ವರ ಶ್ರೀಗಳ ಜಯಂತ್ಯುತ್ಸವದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಕನಮಡಿ, ಜ್ಞಾನಯೋಗ ಲಯನ್ಸ್ ಕ್ಲಬ್ ಬೆಂಗಳೂರು ಮತ್ತು ಶಿವಾನುಭವ ಸೇವಾ ಸಮಿತಿ ಬಿಜ್ಜರಗಿ ಇವರ ಸಹಯೋಗದೊಂದಿಗೆ ಉಚಿತ ರಕ್ತದಾನ ಮತ್ತುಶ್ರ ತಪಾಸಣಾ ಶಿಬಿರವು ಮುಗಳಖೋಡ ಶ್ರೀಗಳಿಂದ ಉದ್ಘಾಟನೆಗೊಂಡಿತು.ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳವರ ಹಾಗೂ ಪೂಜ್ಯ ಸಿದ್ಧೇಶ್ವರ ಶ್ರೀಗಳ ಭಾವಚಿತ್ರಗಳನ್ನು ಹೊತ್ತ ಎತ್ತಿನ ಬಂಡಿಗಳ ಮೆರವಣಿಗೆ ಸಕಲ ವಾದ್ಯಮೇಳ ಹಾಗೂ ಸದ್ಭಕ್ತರೊಂದಿಗೆ ಪೂಜ್ಯ ಸಿದ್ಧೇಶ್ವರ ಶ್ರೀಗಳ ಪೂರ್ವಾಶ್ರಮದ ಮನೆಯಿಂದ ಹೊರಟು ಊರಿನ ಪ್ರಮುಖ…
ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಶಿಸಿ ಹೊಗುತ್ತಿರುವ ದೇಶಿ ಕ್ರೀಡೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದು ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ೩ ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಸಿಂದಗಿ ನಗರದಲ್ಲಿ ಶಾಸಕ ಅಶೋಕ ಮನಗೂಳಿ ಅವರು ಒಬ್ಬ ಕ್ರೀಡಾಪಟುವಾಗಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಿರುವ ಕಾರ್ಯ ಶ್ಲಾಘನೀಯವಾಗಿದೆ. ಇಂದಿನ ಯುವಜನಾಂಗ ಗ್ರಾಮೀಣ ಮಟ್ಟದ ಕ್ರೀಡೆಗಳ ಕಡೆಗೆ ಒಲವು ಕಡಿಮೆಯಾಗುತ್ತಿದೆ. ಇಂದರಿಂದ ಅವುಗಳ ಅಸ್ಥಿತ್ವ ನಸಿಸಿ ಹೋಗುತ್ತದೆ. ಮೋಬೈಲ್ಗೀಳನ್ನು ಬಿಡಬೇಕು ಇಂತಹ ಕ್ರೀಡೆಗಳ ಕಡೆ ಹೆಚ್ಚು ಆಸಕ್ತಿ ತೋರಬೇಕು ಎಂದರು.ಈ ವೇಳೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ವಿಜಯಪುರ ಅಕ್ಟೋಬರ್ 25/2025 ಶನಿವಾರ ಮಧ್ಯಾಹ್ನ 3 ಗಂಟೆವರೆಗೆ ವಿವಿಧ 25 ಸ್ಥಾನಗಳಿಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿದ್ದು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎರಡು, ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಒಂದು, ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ನಾಲ್ಕು ಹೀಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿವೆ ಎಂದು ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಮಧ್ಯಾಹ್ನ 3 ಗಂಟೆವರಿಗೆ ಮಾತ್ರ ಕಾಲಾವಕಾಶ, 28 ರಂದು ನಾಮಪತ್ರ ಪರಿಶೀಲನೆ 30/10/2025 ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ಇದೆ. ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರಿಗೆ ಮತದಾನ ಅಂದೆ ಮಧ್ಯಾಹ್ನ 3/30 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ರಾಜ ಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಡಾ.ಪುರುಷೋತ್ತಮಾನಂದಪುರಿ ಶ್ರೀ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಎಂ. ಬಿ. ಪಾಟೀಲರ ಕೆಲಸ ಕಾರ್ಯಗಳು ಸದಾ ಶ್ಲಾಘನೀಯವಾಗಿದ್ದು, ಜಲಸಂಪನ್ಮೂಲ ಸಚಿವರಾಗಿ ಅವರು ಮಾಡಿದ ಕೆಲಸಗಳಿಂದಾಗಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿದ್ಯಾನಗರ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಉಪ್ಪಾರ ಸಮಾಜ ಸೇವಾ ಸಂಘ ಆಯೋಜಿಸಿದ್ದ ಶ್ರೀ ರಾಜ ಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ಬಸವಾದಿ ಶರಣರ ಆಶಯವಾಗಿತ್ತು. ಅನುಭವ ಮಂಟಪದ ಮೂಲಕ ಸಮಾನತೆಗೆ ಅವಕಾಶ ಕಲ್ಪಿಸಲಾಗಿತ್ತು. ಸಚಿವರು ಈ ತತ್ಚಗಳಡಿ ಕಾಯಕ ಮಾಡುತ್ತಿದ್ದಾರೆ. ಅವರು ಇನ್ನೂ ಉನ್ನತ ಸ್ಥಾನಕ್ಕೇರಿ ಚುಕ್ಕಾಣಿ ಹಿಡಿಯಲಿ ಎಂದು ಆಶೀರ್ವದಿಸಿದರುಬಸವನಾಡಿನಲ್ಲಿ ಜನರು ಜಾತಿಯ ಬದಲು ನೀತಿಯನ್ನು ನೋಡುತ್ತಾರೆ. ಸ್ವಾಮೀಜಿಗಳಿಂದ ಜ್ಞಾನ ಸವಿಯುತ್ತಾರೆ. ಫಲಾಪೇಕ್ಷೆಯಿಲ್ಲದೇ ಗುರುಗಳನ್ನು ಗೌರವಿಸುತ್ತಾರೆ.…
ಕ್ಷಮೆ ಕೋರಿದರೆ ಕನೇರಿ ಶ್ರೀಗಳು ದೊಡ್ಡವರಾಗುತ್ತಿದ್ದರು | ಶ್ರೀಗಳ ಪ್ರವೇಶ ನಿಷೇಧದ ಹಿಂದೆ ನನ್ನ ಯಾವ ಪಾತ್ರವೂ ಇಲ್ಲ | ಸಚಿವ ಡಾ.ಎಂ.ಬಿ. ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳು ತಾವು ಆಡಿರುವ ಮಾತಿಗೆ ಕ್ಷಮೆ ಕೋರಿದರೆ ನಾನೇ ಅವರ ಪಾದ ಮುಟ್ಟಿ ವಿಜಯಪುರಕ್ಕೆ ಕರೆ ತರುವೆ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷಮೆ ಕೋರಿದರೆ ಕನೇರಿ ಶ್ರೀಗಳು ದೊಡ್ಡವರಾಗುತ್ತಿದ್ದರು, ಈಗಲೂ ಅವರು ಕ್ಷಮೆ ಕೋರಿದರೆ ನಾನೇ ಅವರಿಗೆ ನಮಸ್ಕರಿಸಿ ಪಾದ ಮುಟ್ಟಿ ಅವರನ್ನು ವಿಜಯಪುರಕ್ಕೆ ಕರೆ ತರುವೆ, ಕನೇರಿ ಶ್ರೀಗಳು ನನಗೂ ಆತ್ಮೀಯರು, ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಶಿಷ್ಯರು, ನಾನು ಸಹ ಶ್ರೀಗಳ ಶಿಷ್ಯನೇ ಎಂದರು.ಆಡುಮಾತಿನಲ್ಲಿ ಅವರು ಪದಪ್ರಯೋಗ ಮಾಡಿದ್ದಾರೆ ಎನ್ನುವ ವಾದರಲ್ಲಿ ಹುರುಳಿಲ್ಲ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅನೇಕ ದಶಕಗಳಿಂದ ಆಡುಭಾಷೆಯಲ್ಲಿಯೇ ಪ್ರವಚನ ಮಾಡಿದವರು, ಅವರು ಎಂದೂ ಈ ರೀತಿಯ ಪದ ಪ್ರಯೋಗ ಒಂದೆಡೆ ಇರಲಿ ಅದರ…
ಬಿಜೆಪಿ ನಾಯಕರಿಗೆ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಸವಾಲು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಪಕ್ಷ ಹಿಂದೂ ಧರ್ಮವನ್ನು ಒಡೆದಿದೆ ಎಂದು ಬಾಯಿಗೆ ಬಂದoತೆ ಮಾತನಾಡುತ್ತಿರುವ ಬಿಜೆಪಿ ನಾಯಕರು ಇದನ್ನು ಸಾಬೀತುಪಡಿಸಲಿ ನೋಡೋಣ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಸವಾಲು ಹಾಕಿದರು.ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಸಂಸದ ರಮೇಶ ಜಿಗಜಿಣಗಿ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಧರ್ಮ ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ, ಕಾಂಗ್ರೆಸ್ ನಾಯಕರು ಹಿಂದು ಧರ್ಮ ಎಲ್ಲಿ ಹೇಗೆ ಒಡೆಯುತ್ತಿದ್ದಾರೆ ಎಂದು ಸಾಬೀತುಪಡಿಸಿ ಎಂದು ಸವಾಲು ಹಾಕಿದರು.ಕಾಂಗ್ರೆಸ್ ಸರ್ಕಾರ ಬ್ರಿಟಿಷ್ ಮಾದರಿ ಆಡಳಿತ ಅಳವಡಿಸಿಕೊಂಡಿದೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಸಂವಿಧಾನದ ಮೇಲೆ ನಂಬಿಕೆ ಇರಿಸಿದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಸರ್ಕಾರ ನಡೆಸುತ್ತಿದೆ. ಮನುವಾದಿ ಪ್ರಕಾರ ರಾಷ್ಟ್ರ ನಡೆಯಬೇಕೆಂಬ ಬಿಜೆಪಿಗರ ಉದ್ದೇಶ ನಡೆಯಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯ ಇರಿಸಿಕೊಂಡು ಕಾಂಗ್ರೆಸ್ ನಡೆಸುತ್ತಿದೆ, ಮನುವಾದಿ ಆಧರಿಸಿ ಸರ್ಕಾರ ನಡೆಸಬೇಕು ಎಂಬುದು ಬಿಜೆಪಿಗರ ನಿಲುವು, ಈ…
