Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪದೋನ್ನತಿ ಹೊಂದಿದ ಬೋಧಕ ಸಿಬ್ಬಂದಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಕೆಲಸವೆಂದರೆ ದೇವರ ಕೆಲಸವೆಂದು ನಂಬಿ ವಿದ್ಯಾರ್ಜನೆಗಾಗಿ ಬರುವ ಮಕ್ಕಳಲ್ಲಿ ಜ್ಞಾನಧಾರೆಯೆರೆಯುತ್ತಾ, ಅವರಲ್ಲಿ ಶಿಸ್ತು, ಸಂಯಮ, ನಡತೆ, ಆಚಾರ-ವಿಚಾರ, ಸಂಸ್ಕೃತಿ-ಸಂಸ್ಕಾರ ಮತ್ತು ಜೀವನ-ಮೌಲ್ಯಗಳಂತಹ ಒಳ್ಳೆಯ ಗುಣಗಳನ್ನು ಒಡಮೂಡಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದೊರೆತ ಸರ್ಕಾರಿ ಸೇವೆ ಸಲ್ಲಿಸುವ ಭಾಗ್ಯವೆಂದು ಅರಿತು ಅತ್ಯಂತ ಪ್ರಾಮಾಣಿಕತೆ, ಸಮಯ ಪ್ರಜ್ಞೆ, ವೃತ್ತಿ ಗೌರವ-ಬದ್ಧತೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಕೆಲಸ ಮಾಡುವ ಸಂಸ್ಥೆಯ ಏಳ್ಗೆಗಾಗಿ ದುಡಿಯುವ ಮನೋಭಾವನ್ನು ನಾವೆಲ್ಲರೂ ಬೆಳೆಸಿಕೊಂಡಾಗ ಮಾತ್ರ ಸಲ್ಲಿಸಿದ ಸೇವೆ ಸಾರ್ಥಕ ಭಾವ ನಮ್ಮದಾಗುತ್ತದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಸಹ ಪ್ರಾಧ್ಯಾಪಕರಾಗಿ ಪದೋನ್ನತಿ ಹೊಂದಿದ ಬೋಧಕ ಸಿಬ್ಬಂದಿಗಾಗಿ ಹಮ್ಮಿಕೊಂಡ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.ಪ್ರಾಂಶುಪಾಲ ಡಾ. ಎ.ಐ.ಹಂಜಗಿ ಮಾತನಾಡಿ, ನಾವು ಮಾಡುವ ಕೆಲಸದಲ್ಲಿಯೇ ಶ್ರದ್ಧೆ, ನಿಷ್ಠೆ, ನಿಸ್ವಾರ್ಥ…
ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಸರ್ವಧರ್ಮದ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತ ಉತ್ತಮ ಆಡಳಿತದೊಂದಿಗೆ ಹೆಜ್ಜೆ ಹಾಕುತ್ತಿರುವ ಕಾಂಗ್ರೇಸ್ ಪಕ್ಷದ ಸಾಧನೆ ಗುರುತಿಸಿ ಬಂಜಾರಾ ಸಮುದಾಯದ ಹಿರಿಯರು ಯುವಕರು ಬಿಜೆಪಿ ತೊರೆದು ನಮ್ಮ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು,ಗ್ರಾಮದಲ್ಲಿ ಹಮ್ಮಿಕೊಂಡ ಬಂಜಾರ ಸಮುದಾಯದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಅವರು ಮಾತನಾಡಿದರು.ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನರಿಗೆ ನಮ್ಮ ಪಕ್ಷ ನೀಡಿದ ಎಲ್ಲ ಭರವಸೆಗಳನ್ನು ಉಸಿ ಹೋಗದಂತೆ ಇಡೇರಿಸುತ್ತ ಬಂದಿದೆ, ಪಂಚ ಗ್ಯಾರಂಟಿ ಮದ್ಯದಲ್ಲಿ ನಮ್ಮ ಸರ್ಕಾರ ಎಲ್ಲ ಕ್ಷೇತ್ರದ ಅಭಿವೃದ್ದಿಗೂ ಕೂಡಾ ಅನುದಾನವನ್ನು ನೀಡುತ್ತಿದೆ, ಮುಂದೆ ಉಳಿದ ಅಧಿಕಾರದ ಅವಧಿಯಲ್ಲಿಯೂ ಉತ್ತಮ ಆಡಳಿತ ನೀಡಲಿದೆ ಎನ್ನುವ ಭರವಸೆ ಕೂಡಾ ಇದೆ. ನೂತನವಾಗಿ ಪಕ್ಷದಲ್ಲಿ ಸೇರ್ಪಡೆಗೊಂಡ ಕಾರ್ಯಕರ್ತರು ಪಕ್ಷದ ಸಿದ್ದಾಂತ ತಿಳಿದುಕೊಂಡು ಕೆಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು. ಪಕ್ಷಕ್ಕಾಗಿ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ರೈತರಿಗೆ ಹಾಗೂ ವ್ಯಾಪಾರಸ್ತರಿಗೆ ಸಮರ್ಪಕ ಸೇವೆಗಳನ್ನು ನೀಡುವ ಮೂಲಕ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಲಾಭದಲ್ಲಿ ಪ್ರಗತಿ ಹೊಂದುತಿದ್ದು ಇದಕ್ಕೆ ಸದಸ್ಯರು ಹಾಗೂ ಸಿಬ್ಬಂದಿಗಳ ಸಹಕಾರವೇ ಕಾರಣವೆಂದು ಪಿಕೆಪಿಎಸ್ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಹೇಳಿದರು.ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಪ್ರಸಕ್ತ ಸಾಲಿನಲ್ಲಿ ಪಿಕೆಪಿಎಸ್ ೮೫.೪೫ ಲಕ್ಷ ಲಾಭಗಳಿಸಿದ್ದು ಸಂಘದ ಸದಸ್ಯರಿಗೆ ಶೇ, ೧೫ ಲಾಭಾಂಶ ನೀಡಲಾಗುವುದು. ಸಹಕಾರಿ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಲ ತೆಗೆದುಕೊಳ್ಳುವುದಷ್ಟೆ ಅಲ್ಲ, ಠೇವಣಿ ಇಡುವ ಮೂಲಕ ಅಭಿವೃದ್ಧಿಗೆ, ಪ್ರಗತಿಗೆ ಸಂಘದ ಸದಸ್ಯರು ಆಲೋಚಿಸಬೇಕು. ಶೀಘ್ರದಲ್ಲಿಯೇ ಬಿಡಿಸಿಸಿ ಬ್ಯಾಂಕ್ ಶಾಖೆ ಗ್ರಾಮದಲ್ಲಿಯೇ ಆರಂಭವಾಗಲಿದ್ದು ಇದರಿಂದ ಸದಸ್ಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ಗ್ರಾ.ಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಬಾಂವಿ, ಗುರಲಿಂಗಪ್ಪ ಪೂಜಾರಿ, ನಿಂಗಣ್ಣ ಪೂಜಾರಿ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಸಂಘದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನವರಾತ್ರಿ ಮಹೋತ್ಸವದ ಅಂಗವಾಗಿ ನಾಡದೇವಿಯನ್ನು ಶ್ರದ್ಧಾ ಭಕ್ತಿಯ ಮೂಲಕ ಅದ್ದೂರಿಯಾಗಿ ಪ್ರತಿಷ್ಠಾಪಿಸಲಾಯಿತು.ಪಟ್ಟಣದಲ್ಲಿ ಸೋಮವಾರ ಬೇವಿನಕಟ್ಟಿ ಗೌಡರ ಓಣಿಯ ನಾಡದೇವಿ ಉತ್ಸವ ಕಮೀಟಿಯಿಂದ ಪ್ರತಿಷ್ಠಾಪನೆಗೊಳ್ಳುತ್ತಿರುವ ನಾಡದೇವಿಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಮೂರ್ತಿಯನ್ನು ಹೊತ್ತು ಬೆಳಗ್ಗೆ ೧೧ ಗಂಟೆಗೆ ಪ್ರಾರಂಭವಾದ ಭವ್ಯ ಮೆರವಣಿಗೆ ಇಂಡಿ ರಸ್ತೆಯಿಂದ ಆರಂಭಗೊಂಡು ಪಂಚಾಚಾರ್ಯ ಕಲ್ಯಾಣಮಂಟಪ, ಅಂಬೇಡ್ಕರ ವೃತ್ತ, ರಾಷ್ಟೀಯ ಹೆದ್ದಾರಿ ೨೧೮ರ ಮೂಲಕ ಮೊಹರೆ ಹಣಮಂತ್ರಾಯ ವೃತ್ತ, ಮೇನ್ ಬಜಾರ ಮಾರ್ಗವಾಗಿ ಸಾಗುತ್ತಿರುವಂತೆ ಸಾಯಂಕಾಲ ೪ ಗಂಟೆಯ ಸಮಯಕ್ಕೆ ಮಳೆ ಆರಂಭಗೊಂಡಿತು. ನಂತರ ರಭಸವಾಗಿ ಸುರಿಯುತ್ತಿರುವ ಮಳೆಯ ನಡುವೆಯೇ ಪ್ರತಿಷ್ಠಾಪನಾ ಸ್ಥಳಕ್ಕೆ ತಂದು ದೇವಿಯನ್ನು ಪ್ರತಿಷ್ಠಾಪಿಸಲಾಯಿತು.ಮೆರವಣಿಗೆಯಲ್ಲಿ ಕೇರಳದ ಚತುರ್ಮುಖ ತಂಡ, ತಮಿಳುನಾಡಿನ ವೀರಗಾಸೆ, ಸಾರವಾಡದ ಗೊಂಬೆಯಾಟ, ನಾಸೀಕದ ಡೋಲು, ಪುನಾದ ಜಂಗ್, ಜೋಗುತಿಯರ ತಂಡ, ಕೊಪ್ಪಳದ ವೇಷಗಾರರ ತಂಡ ಸಹಿತ ಹಲವಾರು ಗ್ರಾಮಗಳ ಹಲಗೆ, ಡೊಳ್ಳು ಸೇರಿದಂತೆ ಸುಮಾರು ೧೦ಕ್ಕೂ ಹೆಚ್ಚು ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯುದ್ದಕ್ಕೂ ಗಮನ ಸೆಳೆದರೆ, ಪಟ್ಟಣದ ಪೂರ್ಣ ಕುಂಭ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಬೀರಪ್ಪ ನಗರದ ದುರ್ಗಾ ಪರಮೇಶ್ವರಿ ಮಿತ್ರ ಮಂಡಳಿ, ಭುವನೇಶ್ವರಿ ತರುಣ ಮಂಡಳಿ ಕುಂಬಾರ ಓಣಿ, ಶ್ರೀ ಅಂಬಾ ಭವಾನಿ ನವ ತರುಣ ಮಂಡಳಿ ಚವಡಿ ಓಣಿ ಇವರಿಂದ ನಗರದ ಪ್ರಮುಖ ಬೀದಿಗಳಲ್ಲಿ ಅಂಬಾಭವಾನಿ ದೇವಿ ಭವ್ಯ ಮೆರವಣೆಗೆ ನಡೆಯಿತು.ಭಕ್ತಾದಿಗಳು ತಮ್ಮ ಮನೆಯ ಮುಂದೆ ಮೆರವಣೆಗೆ ಬಂದಾಗ ದೇವಿ ವಾಹನಕ್ಕೆ ನೀರು ಹಾಕಿಪೂಜೆ ಮಾಡುವದು ಸಾಮಾನ್ಯವಾಗಿತ್ತು.ದೇವಿಯನ್ನು ಟ್ರ್ಯಾಕ್ಟರಗಳಲ್ಲಿ ಸಿಂಗರಿಸಿ ಡೊಳ್ಳು ಕುಣಿತ, ಬಾಂಜೋ ಸೇರಿದಂತೆ ಬಾಜಾ ಬಜಂತ್ರಿಯೊಂದಿಗೆ ಆಕರ್ಷಕ ಮೆರವಣೆಗೆ ನಡೆಯಿತು.ಮಹಿಳೆಯರು ಆರತಿ ಹಿಡಿದು ಪಾಲ್ಗೊಂಡಿದ್ದರು.ತುಳಜಾಪುರ ತಾಯಿಗೆ ಉಧೋ ಉಧೋ , ಅಂಬಾಭವಾನಿ ಉಧೋ ಉಧೋ ಜೈ ಭವಾನಿ ಜೈ ಶಿವಾಜಿ ಘೋಷಣೆಗಳು ಮೊಳಗಿದವು.ಮೆರವಣೆಗೆ ನಂತರ ಅನ್ನ ಸಂತರ್ಪಣೆ ನಡೆಯಿತು.ಇದಕ್ಕೂ ಮೊದಲು ಬೆಳಿಗ್ಗೆ ತುಳಜಾಪುರದಿಂದ ತಂದ ದೀಪವನ್ನು ಮೆರವಣಿಗೆ ಮೂಲಕ ತಂದು ದೀಪ ಹಚ್ಚಲಾಯಿತು.
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಿಸಿ, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ರಾಷ್ಟ್ರೀಯ ಪೋಷಣ ಅಭಿಯಾನದ ಉದ್ದೇಶವನ್ನು ಅರಿತು, ಅಪೌಷ್ಠಿಕತೆ ಯ ಜಾಗೃತಿ ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ನಿಡಗುಂದಿ ತಹಶೀಲ್ದಾರ್ ಎ.ಡಿ. ಅಮರಾವದಗಿ ಹೇಳಿದರು.ಸಮೀಪದ ಗೋನಾಳ ಗ್ರಾಮದಲ್ಲಿ ವಂದಾಲ ವಲಯದ ಜರುಗಿದ ರಾಷ್ಟ್ರೀಯ ಪೋಷಣ ಅಭಿಯಾನ, ಗರ್ಭಿಣಿಯರಿಗೆ ಸೀಮಂತ ಕಾರ್ಯ, ಬೇಟಿ ಪಢಾವೋ, ಬೇಟಿ ಬಚಾವೋ ಹಾಗೂ ಮಾತೃವಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವನಬಾಗೇವಾಡಿ ಸಿಡಿಪಿಓ ಶಿಲ್ಪಾ ಹಿರೇಮಠ ಮಾತನಾಡಿ, ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದರು. ಮಹಿಳೆಯರು ಪೋಷಣಾ ಅಭಿಯಾನದಡಿ ದೊರೆಯುವ ಹಲವು ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿರೇಶ ಗಣಾಚಾರಿ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಮಕ್ಕಳು “ಹಳ್ಳಿಯ ಮನೆ’ ಎಂಬ ವಿಶೇಷ ಪ್ರದರ್ಶನ ಜರುಗಿತು. ಪೌಷ್ಠಿಕ ಆಹಾರಗಳ ಪ್ರದರ್ಶನ, ಗರ್ಭೀಣಿಯರ ಸೀಮಂತ ಕಾರ್ಯಕ್ರಮ ಜರುಗಿತು. ಹೆಣ್ಣು ಮಗುವಿನ ಹುಟ್ಟುಹಬ್ಬ ಆಚರಿಸಿ…
ವಿಜಯಪುರದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು. ನಿಮ್ಮ ಹಂತದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ತಹಶೀಲ್ದಾರರು ಖುದ್ದಾಗಿ ನಿಗಾ ವಹಿಸಬೇಕು. ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಸಮಗ್ರ ಹಾಗೂ ಸಂಪೂರ್ಣ ಸಮೀಕ್ಷಾ ವರದಿ ಸಿದ್ಧಪಡಿಸಬೇಕು. ಸಿದ್ಧಪಡಿಸಿದ ಸಮೀಕ್ಷೆ ಮಾಹಿತಿಯನ್ನು ಆಯಾ ಗ್ರಾಮ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಸದರಿ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ೦೪-೧೦-೨೦೨೫ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ, ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು.ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.೨೨ ರಿಂದ ಅ.೭ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ ಭೇಟಿ ನೀಡಿ ಸುಮಾರು ೬೦ ಪ್ರಶ್ನೆಗಳುಳ್ಳ ಮಾಹಿತಿಯನ್ನು ದಾಖಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥರು-ಸದಸ್ಯರ ಪಡಿತರ ಚೀಟಿ, ಆಧಾರ ಕಾರ್ಡ ಸಂಖ್ಯೆ, ವಿಕಲಚೇತನರಾಗಿದ್ದಲ್ಲಿ ಅಂಗವಿಕಲರ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ದವಿಟ್ಟುಕೊಂಡು, ಸಮೀಕ್ಷಾದಾರಿಗೆ ಕುಟುಂಬದ ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ್ಯ ತರಬೇತಿ ಅಗತ್ಯತೆ, ಆದಾಯ, ಸ್ಥಿರ ಮತ್ತು ಚರಾಸ್ತಿ ವಿವರ, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸಬು ಸೇರಿದಂತೆ ಎಲ್ಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ಮತ್ತು ರಾಷ್ಟ್ಟ್ರೀಕೃತ ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಭದ್ರತೆ ವ್ಯವಸ್ಥೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಬ್ಯಾಂಕ್ ಸುರಕ್ಷತೆ ಹಾಗೂ ಭದ್ರತಾ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಇತ್ತೀಚೆಗೆ ಜನರು ತಮ್ಮ ಹಣ, ಆಭಣರಗಳನ್ನು ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿನಲ್ಲಿಟ್ಟಿರುತ್ತಾರೆ. ಅವರ ವಸ್ತುಗಳ ಸುರಕ್ಷತೆ ಬ್ಯಾಂಕಿನ್ ಜವಾಬ್ದಾರಿಯಾಗಿರುತ್ತದೆ. ಆರ್ಬಿಐ ನಿಯಮದನ್ವಯ ಗ್ರಾಹಕರ ವಸ್ತುಗಳ ಸುರಕ್ಷತೆ ಒದಗಿಸುವುದು ಅತ್ಯವಶ್ಯಕ ಹಾಗೂ ಸುರಕ್ಷತೆ ಪ್ರಮುಖವಾಗಿದೆ. ಜನರ ವಿಶ್ವಾಸ, ನಂಬಿಕೆ ಉಳಿಸಿಕೊಳ್ಳಲು ಭದ್ರತಾ ವ್ಯವಸ್ಥೆ ಕುರಿತಂತೆ ನಿರ್ಲಕ್ಷ್ಯ ವಹಿಸದೆ ಎಸ್ಓಪಿ ಹಾಗೂ ಆರ್ಬಿಐ ನಿರ್ದೇಶನಗಳನ್ನು ಪಾಲಿಸಬೇಕು. ಜನರ ಹಣ-ಆಭರಣಗಳ ಸುರಕ್ಷತೆ ನಿಮ್ಮ ಜವಾಬ್ದಾರಿಯಾಗಿದ್ದು, ಬ್ಯಾಂಕ್ ವ್ಯವಸ್ಥಾಪಕರು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.ಇತ್ತೀಚೆಗೆ ಕಳ್ಳತನ, ದರೋಡೆಯಂತಹ ಪ್ರಕರಣಗಳು ನಡೆದಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ…
