Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಕ್ಕನಗುತ್ತಿ ಗ್ರಾಮದಲ್ಲಿ ರೂ.೨೪.೫೭ಕೋಟಿ ಅನುದಾನದಲ್ಲಿ ಶಾಲೆ ಮತ್ತು ವಸತಿ ನಿಲಯದ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಇದು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕಿನ ಹಿಕ್ಕನಗುತ್ತಿ ಗ್ರಾಮದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರೂ.೧೬ಕೋಟಿ ಹಾಗೂ ವಸತಿ ನಿಲಯ (ಜಿ+೪)ಕ್ಕೆ ರೂ.೮ ಕೋಟಿ ೫೭ಲಕ್ಷ ವೆಚ್ಚದ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಹಿಕ್ಕನಗುತ್ತಿ ಗ್ರಾಮ ವಿಶಾಲವಾದ ಭೂಪ್ರದೇಶದಲ್ಲಿ ಇಂತಹ ಭೂಮಿಯನ್ನು ಮಕ್ಕಳ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದಾರೆ. ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಶಿಕ್ಷಣಕ್ಕಾಗಿ ನಮ್ಮ ಕಾಂಗ್ರೆಸ್ ಸರಕಾರ ರೂ.೯ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದೆ. ಇವುಗಳ ಮಧ್ಯದಲ್ಲಿ ಕಾಂಗ್ರೆಸ್ ಸರಕಾರ ಸಿಂದಗಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳುತ್ತಿರುವ ಎಲ್ಲ ಗಣತಿದಾರರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಸೋಮವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ೨೦೨೫ ಅಂಗವಾಗಿ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಗಣತಿದಾರರ ಕಿಟ್ ವಿತರಿಸಿ ಮಾತನಾಡಿದರು. ಸಾರ್ವಜನಿಕರು ಗಣತಿದಾರರು ತಮ್ಮಲ್ಲಿಗೆ ಬಂದಾಗ ತಮ್ಮ ನೈಜ ಮಾಹಿತಿಯನ್ನು ಒದಗಿಸುವುದರ ಮೂಲಕ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಸಿಬ್ಬಂದಿ ನಾನಾಗೌಡ ಸಿದರೆಡ್ಡಿ, ಸೈಫನ್ ಮುಲ್ಲಾ ಮಾಂತಯ್ಯ ಮಠಪತಿ, ಪ್ರಭಾಕರ ಬಿರಾದಾರ ಮತ್ತು ನಂದಪ್ಪ ಅನಗೊಂಡ ಇವರ ನೇತೃತ್ವದಲ್ಲಿ ಗಣತಿದಾರರಿಗೆ ಕಿಟ್ಟುಗಳನ್ನು ವಿತರಿಸಿ ಸಮೀಕ್ಷೆಗೆ ಚಾಲನೆ ನೀಡಲಾಯಿತು.ಶಿರಸ್ತೇದಾರರುಗಳಾದ ಸುರೇಶ ಮ್ಯಾಗೇರಿ, ಡಿ.ಬಿ.ಭೋವಿ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಮ್.ವಾಲೀಕಾರ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ…
ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜಾಧ್ಯಕ್ಷ ಜಿ.ಹನುಮಂತಪ್ಪ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಿದ್ದೇಶ್ವರ ಹೈಸ್ಕೂಲ್ ನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಘಟಕ ರಚನೆ ಹಾಗೂ ಜಿಲ್ಲಾ ಸಭೆ ಕಾರ್ಯಕ್ರಮ ಜರುಗಿತು.ಸಭೆಯನ್ನು ರಾಜಾಧ್ಯಕ್ಷ ಜಿ.ಹನುಮಂತಪ್ಪ ಉದ್ಘಾಟಿಸಿ ಮಾತನಾಡಿ, ಒಂದು ಸಂಘ ಬಲವರ್ಧನೆ ಆಗಬೇಕಾದರೆ ನೌಕರರ ಒಗ್ಗಟ್ಟು ಬಹಳ ಮುಖ್ಯ. ಹಾಗಾಗಿ ಸಂಘಟಿತರಾಗಿ ನಮ್ಮ ಹಕ್ಕುಗಳಿಗೆ ಹೋರಾಟ ಮಾಡಬೇಕಾಗಿದೆ. ಕಳೆದ ಹತ್ತಾರು ವರ್ಷಗಳಿಂದ ನಮ್ಮ ಬೇಡಿಕೆಗಳಿಗಾಗಿ ಎಲ್ಲಾ ಸಂಘಟನೆಗಳು ಹೋರಾಟ ಮಾಡುತ್ತಾ ಬಂದಿವೆ. ಆದರೆ ವಿವಿಧ ಸಂಘಟನೆಗಳಲ್ಲಿ ಹರಿದು ಹಂಚಿ ಹೋಗಿರುವ ನಮ್ಮ ನೌಕರರನ್ನು ಒಟ್ಟುಗೂಡಿಸಿ ಅನುದಾನಿತ ಪ್ರಾಥಮಿಕದಿಂದ ಹಿಡಿದು ಪದವಿ ಕಾಲೇಜಿನವರೆಗೂ ಒಂದೇ ಸಂಘದ ಅಡಿ ತಂದು ಗಟ್ಟಿಯಾದ ಸಂಘಟನೆ ಮಾಡುವುದು ಅವಶ್ಯಕತೆ ಇದೆ. ಹಾಗಾಗಿ ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕ್ರಿಯಾಶೀಲ ವಾಗಿ ರಚನೆ ಮಾಡಿದ್ದೇವೆ. ವಿಜಯಪುರ ಜಿಲ್ಲೆಯ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ರೈತ ಹಾಗೂ ಯುವ ಧುರಿಣ ಯುನುಸ್ಅಲಿ ಶೇರ್ಅಲಿ ಮಕಾನದಾರ ಅವರನ್ನು ಗುರುತಿಸಿ ಅವರ ಅಪಾರ ಅನುಭವ ಹಾಗೂ ಸಾರ್ವಜನಿಕರೊಂದಿಗಿನ ಒಡನಾಟ ಮತ್ತು ಸಹಕಾರ, ಪರಿಗಣಿಸಿ ಇಂಡಿ ಶಾಖೆಯ ಶ್ರೀ ಭೀಮಾಶಂಕರ, ಸೌಹಾರ್ದ ಸಹಕಾರಿ ಸಂಘ ನಿಯಮಿತ ಚಡಚಣ ಶಾಖೆಯ ಸಲಹಾ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಅಧ್ಯಕ್ಷರು ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಇಂಡಿಯ ಶ್ರೀ ಭೀಮಾಶಂಕರ, ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಯುನುಸ್ಅಲಿ ಮಕಾನದಾರ ಅವರು, ತಾಲೂಕಿನಲ್ಲಿ ಜನರ ಅಭಿವೃಧ್ದಿಯ ಜೊತೆಗೆ ಶಾಖೆಯನ್ನು ಅಭಿವೃಧ್ದಿ ಪಥದತ್ತ ಕೊಂಡೊಯ್ಯುತ್ತೇನೆ ಎಂದರು.ಈ ಸಂದರ್ಭದಲ್ಲಿ ಶ್ರೀ ಭೀಮಾಶಂಕರ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸದಸ್ಯರು, ರಾಜಶೇಖರ ಡೋಣಗಾಂವ, ೪ ಬ್ರ್ಯಾಂಚಿನ ಸಿಬ್ಬಂದಿ ಇದ್ದರು.
ವಿಜಯಪುರ ಜಿಲ್ಲೆಗೆ ನನ್ನ ಕೊಡುಗೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿದೆ ಸಾಕ್ಷಿ | ರೂ.100 ಕೋಟಿ ಅನುದಾನ ಕೊಡಿ ಸಾಕು | ಸಚಿವ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದಿರುವ ಸರ್ಕಾರ ಘೋಷಿಸಿರುವ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆದಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಸಚಿವರು, ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಬಂಥನಾಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದ್ರಾಕ್ಷಿ ಬೆಳೆಗಾರರು ಪ್ರಸಕ್ತ ವರ್ಷ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಕೆಜಿ ಒಣದ್ರಾಕ್ಷಿಗೆ 4-5 ನೂರು ದರ ಪಡೆದು ಸಂತಸದಲ್ಲೀರಿ. ಆದರೆ ಈಗ ದರ ಇಳಿಮುಖವಾಗಿದ್ದು, ಮತ್ತೆ 100-150 ರೂ. ಗೆ ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ದ್ರಾಕ್ಷಿ ಬೆಳೆಯುವುದು ಅಂದುಕೊಂಡಷ್ಟು ಸುಲಭವಲ್ಲ ಎಂದು ವಿವರಿಸಿದರು.ತೋಟಗಾರಿಕೆ ಬೆಳೆಯಲ್ಲಿ ದ್ರಾಕ್ಷಿ ಮಾತ್ರವಲ್ಲದೆ ಸಪೋಟಾ, ಡ್ರ್ಯಾಗನ್ ಫ್ರೂಟ್, ಪೇರಲದಂತ ಮಿಶ್ತ ಬೆಳೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಾ ಮಟ್ಟದ ಕ್ರೀಡಾಕೂಟವು ಕೇವಲ ಕ್ರೀಡೆಯ ಕಾರ್ಯಕ್ರಮವಲ್ಲ, ಅದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ ಅದಕ್ಕೆ ವಿಚಲಿತರಾಗದೇ ತಮ್ಮಲ್ಲಿರುವ ಪ್ರತಿಭೆ ಹೊರತಂದು ಸಾಧನೆಗೆ ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಕೆ. ಬಸಣ್ಣವರ ಹೇಳಿದರು.ನಗರದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ 14 ವಯೋಮಿತಿ ಹಾಗೂ 17 ವಯೋಮಿತಿಯೊಳಗಿನ ಮಕ್ಕಳ ಗುಂಪು ಆಟಗಳ ತಾಲ್ಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕ್ರೀಡೆ ಮಾನವನ ಜೀವನದಲ್ಲಿ ಅತ್ಯಂತ ಪ್ರಮುಖ ಅಂಶವಾಗಿದೆ. ಕ್ರೀಡೆಗಳಿಂದ ದೈಹಿಕ, ಮಾನಸಿಕ ಗೃಂಥಿಗಳು ಬೆಳೆಯುತ್ತವೆ. ಶಿಸ್ತಿನ ಜೀವನಕ್ಕಾಗಿ ಕ್ರೀಡೆ ಪೂರಕವಾಗಿದೆ ಎಂದರು.ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ. ಬಾಗೆನ್ನವರ ಮಾತನಾಡಿ, ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವದರಿಂದ ನಾಯಕತ್ವದ ಗುಣಗಳು ಬೆಳೆಯುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಆತ್ಮವಿಶ್ವಾಸ ಹೆಚ್ಚಿಸಲಿದೆ ಎಂದರು.ನಗರದ ಪ್ರಾಧಿಕಾರ ಅಧ್ಯಕ್ಷ ಅನ್ವರ ಮೋಮಿನ ಕ್ರೀಡಾ ಧ್ವಜಾರೋಹಣ ನೇರವೆರಿಸಿದರು. ಇದೆ ಸಂದರ್ಭದಲ್ಲಿ ತಾಲೂಕಿನ ಐದು ಜನ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚೆಗೆ ಸೆ.೧೩ ಮತ್ತು ೧೪ ರಂದು ಬೆಳಗಾವಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ೨೦೨೫-೨೬ ದಸರಾ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಭಾರ ಎತ್ತುವ (ವೆಟ್ ಲಿಪ್ಟಿಂಗ್) ಸ್ಪರ್ಧೆಯಲ್ಲಿ ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ವಿದ್ಯಾರ್ಥಿ ಅಶೋಕ ರಂಗು ರಾಠೋಡ ಭಾಗವಹಿಸಿ ವೆಟ್ ಲಿಪ್ಟಿಂಗ್ ದ್ವೀತಿಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಯ ಈ ಸಾಧನೆಗೆ ಚಡಚಣ ಶ್ರೀ ಸಮಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಗೌರವ ಕಾರ್ಯದರ್ಶಿ, ನಿರ್ದೇಶಕ, ಆಡಳಿತ ಅಧಿಕಾರಿ, ಪ್ರಾಚಾರ್ಯ ಡಾ.ಎಸ್.ಬಿ. ರಾಠೋಡ, ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್. ಅವಟಿ, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಶುಭ ಕೋರಿದ್ದಾರೆ.
ಚಡಚಣ ಎಸ್ಬಿಆಯ್ ಬ್ಯಾಂಕ್ ದರೋಡೆ ಪ್ರಕರಣ | ಗ್ರಾಹಕರಿಗೆ ಬ್ಯಾಂಕ್ ಅಧಿಕಾರಿಗಳ ಅಭಯ *ಉದಯರಶ್ಮಿ ದಿನಪತ್ರಿಕೆ* ಚಡಚಣ: ಇತ್ತೀಚೆಗೆ ನಡೆದ ಪಟ್ಟಣದ ಎಸ್ಬಿಐ ಬ್ಯಾಂಕ್ ದರೋಡೆಯಾದ ಹಿನ್ನಲೆಯಲ್ಲಿ ಬ್ಯಾಂಕ್ನಲ್ಲಿ ಠೇವಣಿ ಹಾಗೂ ಚಿನ್ನ ಅಡವಿಟ್ಟ ಗ್ರಾಹಕರು ಆಘಾತಕ್ಕೋಳಗಾಗಿದ್ದು, ಗ್ರಾಹಕರಲ್ಲಿ ಮೂಡಿದ ಆತಂಕವನ್ನು ದೂರ ಮಾಡಲು ಗ್ರಾಹಕರಿಗೆ ಎಸ್.ಬಿ.ಐ. ಬ್ಯಾಂಕ್ ವತಿಯಿಂದ ಸ್ಥಳೀಯ ಖಾಸಗಿ ಹೊಟೆಲ್ನಲ್ಲಿ ಶುಕ್ರವಾರ ಸಭೆಯನ್ನು ನಡೆಸಿ ಗ್ರಾಹಕರಿಗೆ ಧೈರ್ಯವನ್ನು ತುಂಬಲಾಯಿತು. ಸಭೆಯಲ್ಲಿ ಎಸ್ಬಿಐ ಬ್ಯಾಂಕಿನ ಡಿಜಿಎಂ, ಆರ್.ಎಂ. ಎಜಿಎಂ ಮಟ್ಟದ ಅಧಿಕಾರಿಗಳು ಭಾಗವಹಿಸಿ ಬ್ಯಾಂಕ್ ದರೋಡೆಯಲ್ಲಿ ಹಣ ಕಳೆದುಕೊಂಡ ಗ್ರಾಹಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು ಗ್ರಾಹಕರು ಯಾವುದೆ ಸಂದರ್ಭದಲ್ಲೂ ಭಯಪಡುವ ಅವಶ್ಯಕತೆ ಇಲ್ಲ, ಗ್ರಾಹಕರ ಎಲ್ಲ ಬಂಗಾರ ಮತ್ತು ಹಣದ ಜವಾಬ್ದಾರಿಯನ್ನು ಬ್ಯಾಂಕ್ ಹೊರಲಿದೆ. ಎಲ್ಲ ಸಂದರ್ಭಗಳಲ್ಲಿ ಬ್ಯಾಂಕ ಗ್ರಾಹಕರೊಂದಿಗೆ ಇರಲಿದೆ. ಗ್ರಾಹಕರು ದಯವಿಟ್ಟು ಬ್ಯಾಂಕಿನೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ವಿನಂತಿಸಿದರು. ಈ ಸಂಧರ್ಭದಲ್ಲಿ ಗ್ರಾಹಕರು ಅನೇಕ ಪ್ರಶ್ನೆಗಳನ್ನು ಕೇಳಿದರು. ಬಂಗಾರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸಮಾಜಸೇವೆ,ರಾಷ್ಟ್ರಪ್ರೇಮ ಹಾಗೂ ಸೇವಾ ಮನೋಭಾವ ಮೂಡಿಸಲು ಎನ್.ಎಸ್.ಎಸ್ ಸಹಕಾರಿಯಾಗಿದೆ ಎಂದು ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಚಂದ್ರಶೇಖರ್ ಖೇಡಗಿ ಹೇಳಿದರು.ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ಅರವಿಂದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಎನ್ ಎಸ್ ಎಸ್ ಯೋಜನಾ ಅಧಿಕಾರಿ ಸಿ ಎ ಬಗಲಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್ ಒಂದು ಸರಕಾರದ ಯೋಜನೆ. ಗಾಂಧೀಜಿಯವರ ಸರ್ವೋದಯ ತತ್ವದ ಮೇಲೆ ಈ ಯೋಜನೆ ಕಾರ್ಯ ನಿರ್ವಹಿಸುತ್ತಿದ. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯೊಂದಿಗೆ ರಾಷ್ಟ್ರ ನಿರ್ಮಾಣ ಹಾಗೂ ಶಿಸ್ತು ಮೂಡಿಸಲು ಸಹಕಾರಿಯಾಗುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರಾಮಣ್ಣ ರಗಟಿ ಮಾತನಾಡಿದರು.ವೇದಿಕೆಯ ಮೇಲೆ ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಮಹಾದೇವ ಖೇಡಗಿ ನಿರ್ದೇಶಕರುಗಳಾದ ಬಾಬುರಾವ್ ಮನಮಿ, ಪ್ರಕಾಶ್ ಮನಮಿ, ಪ್ರಾಚಾರ್ಯ ಡಿ ಬಿ ತಿಕೋಟಿ, ಉಪನ್ಯಾಸಕ…
